ಭಾರತೀಯ ಸೇನೆಯನ್ನು ಗೇಲಿ ಮಾಡಿದ್ದ ರಿಚಾ ಚಡ್ಡಾಗೆ ಪ್ರಕಾಶ್‌ ರೈ ಬೆಂಬಲ; ವಿರೋಧಿಸಿದ್ದ ಅಕ್ಷಯ್​ ಕುಮಾರ್​​ಗೆ ತರಾಟೆ - Vistara News

ಬಾಲಿವುಡ್

ಭಾರತೀಯ ಸೇನೆಯನ್ನು ಗೇಲಿ ಮಾಡಿದ್ದ ರಿಚಾ ಚಡ್ಡಾಗೆ ಪ್ರಕಾಶ್‌ ರೈ ಬೆಂಬಲ; ವಿರೋಧಿಸಿದ್ದ ಅಕ್ಷಯ್​ ಕುಮಾರ್​​ಗೆ ತರಾಟೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಬೇಕು ಎಂದು ಆದೇಶ ಬಂದರೆ, ಅದನ್ನು ಪಾಲಿಸಿ ಕಾರ್ಯಗತಗೊಳಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಭಾರತೀಯ ಸೇನೆಯ ಉತ್ತರ ವಲಯದ ಲೆಫ್ಟಿನೆಂಟ್​ ಕಮಾಂಡರ್​ ಜನರಲ್​ ಉಪೇಂದ್ರ ದ್ವಿವೇದಿ ಹೇಳಿದ್ದರು. ಅದಕ್ಕೆ ಪ್ರತಿಯಾಗಿ ರಿಚಾ ಚಡ್ಡಾ ಟ್ವೀಟ್ ಮಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

VISTARANEWS.COM


on

Prakash Raj hits out at Actor Akshay Kumar Over Richa Chadha Comment On Army
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 2020ರಲ್ಲಿ ಗಲ್ವಾನ್​ ಕಣಿವೆಯಲ್ಲಿ ನಡೆದ ಭಾರತ-ಚೀನಾ ಸಂಘರ್ಷದ ಬಗ್ಗೆ ಅಪಹಾಸ್ಯ ಮಾಡಿ ಟ್ವೀಟ್ ಮಾಡಿದ್ದ ಬಾಲಿವುಡ್​ ನಟಿ ರಿಚಾ ಚಡ್ಡಾ ವಿರುದ್ಧ ಅಪಾರ ವಿರೋಧ ವ್ಯಕ್ತವಾಗಿತ್ತು. ರಿಚಾ ಚಡ್ಡಾ ಟ್ವೀಟ್​ಗೆ ವಿರೋಧ ಮಾಡಿದ್ದವರಲ್ಲಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಕೂಡ ಒಬ್ಬರು. ‘ಗಲ್ವಾನ್ ಹಾಯ್​ ಎನ್ನುತ್ತಿದೆ’ ಎಂದು ರಿಚಾ ಮಾಡಿದ್ದ ಟ್ವೀಟ್​ನ್ನು ರೀಟ್ವೀಟ್​ ಮಾಡಿಕೊಂಡಿದ್ದ ಅಕ್ಷಯ್​ ಕುಮಾರ್​, ‘ಇಂಥ ವಾಕ್ಯಗಳನ್ನು ಓದಲು ನೋವಾಗುತ್ತದೆ. ನಮ್ಮ ಸಶಸ್ತ್ರ ಪಡೆಗಳಿಗೆ ನಾವು ಯಾವತ್ತೂ ಕೃತಘ್ನರಾಗಬಾರದು. ಅವರು ಅಲ್ಲಿ ಇರುವುದರಿಂದಲೇ, ನಾವಿಲ್ಲಿ ಜೀವಂತವಾಗಿ ಇದ್ದೇವೆ’ ಎಂದು ಹೇಳಿದ್ದರು.

ಹೀಗೆ ರಿಚಾ ಚಡ್ಡಾ ಟ್ವೀಟ್​ಗೆ ವಿರೋಧ ವ್ಯಕ್ತಪಡಿಸಿದ ನಟ ಅಕ್ಷಯ್​ ಕುಮಾರ್​​ರನ್ನು ಹಿರಿಯ ನಟ ಪ್ರಕಾಶ್​ ರೈ (ಪ್ರಕಾಶ್‌ ರಾಜ್‌) ರಾಟೆಗೆ ತೆಗೆದುಕೊಂಡಿದ್ದಾರೆ. ಅಕ್ಷಯ್​ ಕುಮಾರ್ ಟ್ವೀಟ್​ನ್ನು ರೀಟ್ವೀಟ್​ ಮಾಡಿರುವ ಪ್ರಕಾಶ್​ ರೈ​ ‘ಅಕ್ಷಯ್​ ಕುಮಾರ್ ಅವರೇ, ನಿಮ್ಮಿಂದ ಇಂಥ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ. ನೆನಪಿಡಿ, ನಿಮಗಿಂತಲೂ ರಿಚಾ ಚಡ್ಡಾ ಅವರೇ ಈ ದೇಶಕ್ಕೆ ಅತ್ಯಂತ ಹೆಚ್ಚು ಅವಶ್ಯಕ ಇದ್ದಾರೆ’ ಎಂದು ಹೇಳಿದ್ದಾರೆ. ಅದಕ್ಕೂ ಮೊದಲು ರಿಚಾ ಚಡ್ಡಾ ಟ್ವೀಟ್​ಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಪ್ರಕಾಶ್​ ರೈ, ‘ರಿಚಾ ಚಡ್ಡಾ ಅವರೇ ನೀವು ಯಾವ ಅರ್ಥದಲ್ಲಿ ಈ ಟ್ವೀಟ್ ಮಾಡಿದ್ದೀರಿ ಎಂಬ ಬಗ್ಗೆ ನಮಗೆ ಅರಿವಾಗಿದೆ. ನಿಮ್ಮ ಮಾತಿಗೆ ನನ್ನ ಬೆಂಬಲ ಇದೆ’ ಎಂದು ಹೇಳಿದ್ದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಬೇಕು ಎಂದು ಆದೇಶ ಬಂದರೆ, ಅದನ್ನು ಪಾಲಿಸಿ ಕಾರ್ಯಗತಗೊಳಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಭಾರತೀಯ ಸೇನೆಯ ಉತ್ತರ ವಲಯದ ಲೆಫ್ಟಿನೆಂಟ್​ ಕಮಾಂಡರ್​ ಜನರಲ್​ ಉಪೇಂದ್ರ ದ್ವಿವೇದಿ ಮಂಗಳವಾರ ಹೇಳಿದ್ದರು. ಉಪೇಂದ್ರ ದ್ವಿವೇದಿ ಮಾತಿನ ಬೆನ್ನಲ್ಲೇ ರಿಚಾ ಚಡ್ಡಾ ಅವರು ತಮ್ಮ ಟ್ವಿಟರ್​ನಲ್ಲಿ ‘ಗಲ್ವಾನ್​ ಹಾಯ್​ ಎನ್ನುತ್ತಿದೆ (Galwan says hi)’ ಎಂದು ಬರೆದುಕೊಂಡಿದ್ದರು. 2020ರ ಗಲ್ವಾನ್​ ಸಂಘರ್ಷದ ಪ್ರತೀಕಾರವನ್ನೇ ಇನ್ನೂ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ, ಹಾಗಿರುವಾಗ ಪಾಕ್​ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಿಚಾ ವ್ಯಂಗ್ಯ ಮಾಡಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದರು. ಈ ಟ್ವೀಟ್​ ದೊಡ್ಡ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಹಲವು ಗಣ್ಯರೂ ರಿಚಾ ವಿರುದ್ಧ ತಿರುಗಿಬಿದ್ದಿದ್ದಾರೆ. ದಿ ಕಾಶ್ಮೀರಿ ಫೈಲ್ಸ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಕೂಡ ರಿಚಾ ಟ್ವೀಟ್​​ನ್ನು ಖಂಡಿಸಿದ್ದಾರೆ.

ಕ್ಷಮೆ ಕೇಳಿದ್ದ ರಿಚಾ
ಯಾವಾಗ ತಾವು ಮಾಡಿದ ಟ್ವೀಟ್​ಗೆ ದೊಡ್ಡಮಟ್ಟದ ವಿರೋಧ ವ್ಯಕ್ತವಾಯಿತೋ ಆಗ ರಿಚಾ ಚಡ್ಡಾ ಎಚ್ಚೆತ್ತುಕೊಂಡು ಕ್ಷಮೆ ಕೇಳಿ ಪೋಸ್ಟ್ ಹಾಕಿದ್ದರು. ‘ಸೇನೆಯನ್ನು ಅಪಹಾಸ್ಯ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ಆದರೂ ನನ್ನ ಈ ಮೂರು ಶಬ್ದಗಳ ಟ್ವೀಟ್​ನಿಂದ ಯಾರಿಗೆಲ್ಲ ನೋವಾಗಿದೆಯೋ ಅವರ ಬಳಿ ಕ್ಷಮೆ ಕೇಳುತ್ತೇನೆ. ನನಗೆ ಸೇನೆ ಎಂದರೆ ಏನು ಗೊತ್ತು. ನನ್ನ ಸ್ವಂತ ನಾನಾಜಿ ಅವರು ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್​ ಆಗಿದ್ದರು. 1960 ಇಂಡೋ-ಚೀನಾ ಯುದ್ಧದಲ್ಲಿ ಅವರ ಕಾಲಿಗೆ ಬುಲೆಟ್​ ಬಿದ್ದಿತ್ತು. ಇನ್ನು ನನ್ನ ಮಾಮಾಜಿ ಕೂಡ ಪ್ಯಾರಾಟ್ರೂಪರ್ ಆಗಿದ್ದರು. ನಾನೆಂದಿಗೂ ಸೇನೆಗೆ ಅವಮಾನ ಮಾಡುವುದಿಲ್ಲ’ ಎಂದು ರಿಚಾ ಹೇಳಿದ್ದರು.

ಇದನ್ನೂ ಓದಿ: ಪಾಕ್​ ಆಕ್ರಮಿತ ಕಾಶ್ಮೀರ ವಶಕ್ಕೆ ಸಿದ್ಧ ಎಂದಿದ್ದ ಸೇನಾ ಜನರಲ್​ರನ್ನು ಅಪಹಾಸ್ಯ ಮಾಡಿದ ಬಾಲಿವುಡ್​ ನಟಿ ರಿಚಾ ಚಡ್ಡಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Munawar Faruqui:  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ ಎರಡನೇ ಪತ್ನಿ ಸಿಂಗಲ್‌ ಪೇರೆಂಟ್‌!

Munawar Faruqui: ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

VISTARANEWS.COM


on

Munawar Faruqui second wife Mehzabeen Coatwala single mom and makeup artist
Koo

ಬೆಂಗಳೂರು: ಬಿಗ್ ಬಾಸ್ 17 ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಮಿಡಿಯನ್ಮು ಮುನಾವರ್ ಫಾರೂಕಿ (Munawar Faruqui) ಎರಡನೇ ಬಾರಿಗೆ ವಿವಾಹವಾದರು ಎಂದು ವರದಿಯಾಗಿತ್ತು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದು, ಜೋಡಿಯ ಫೋಟೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ

ಮೆಹಜಬೀನ್ ಮೇಕಪ್ ಕಲಾವಿದೆ. ಆರ್ ಮಾಧವನ್, ವರುಣ್ ಧವನ್, ಯುಜ್ವೇಂದ್ರ ಚಾಹಲ್ ನಂತಹ ನಟರುಗಳ ಪತ್ನಿಯರಿಗೆ, ನೃತ್ಯಗಾರ್ತಿ ಧನಶ್ರೀ ವರ್ಮಾ ಅವರಂತಹ ಅನೇಕ ಗಣ್ಯ ವ್ಯಕ್ಯಿಗಳಿಗೆ ಮೇಕಪ್‌ ಮಾಡಿದ್ದಾರೆ. ಸಾಕಷು ಫ್ಯಾನ್ಸ್‌ ಫಾಲೋವರ್ಸ್‌ ಕೂಡ ಹೊಂದಿದ್ದಾರೆ. ವರದಿಯ ಪ್ರಕಾರ, ಮುನಾವರ್‌ನಂತೆ, ಮೆಹಜಬೀನ್ ಅವರಿಗೆ ಕೂಡ ಇದು ಎರಡನೇ ಮದುವೆ. ಮುನಾವರ್ ಅವರಿಗೆ ಈಗಾಗಲೇ ಒಬ್ಬ ಮಗನೂ ಇದ್ದಾನೆ. ಮೊದಲ ಹೆಂಡತಿ ಜತೆ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ ಮುನಾವರ್‌.

ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

ಮುನಾವರ್ ಫಾರೂಕಿ ಈ ತಿಂಗಳ ಆರಂಭದಲ್ಲಿ ಮೆಹಜಬೀನ್ ಕೋಟ್ವಾಲಾ (Mehzabeen Coatwala) ಅವರನ್ನು ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದರು ಎನ್ನಲಾಗಿದೆ.ಮೂಲಗಳ ಪ್ರಕಾರ ಮುನಾವರ್ ಮದುವೆಯಲ್ಲಿ ಅವರ ಆತ್ಮೀಯರು ಮಾತ್ರ ಹಾಜರಿದ್ದರು. ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಮುಂಬೈನ ಐಟಿಸಿ ಗ್ರ್ಯಾಂಡ್ ಮರಾಠಾದಲ್ಲಿ ಆರತಕ್ಷತೆಯನ್ನು ಕೂಡ ಆಯೋಜಿಸಿದ್ದರು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಮುನಾವರ್ ಅವರ ಸ್ನೇಹಿತ-ನಟ ಹಿನಾ ಖಾನ್ ಈ ಸಮಾರಂಭಕ್ಕೆ ಆಹ್ವಾನಿತರಾದವರಲ್ಲಿ ಒಬ್ಬರು. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಿನಾ ಸಮಾರಂಭದ ಫೋಟೊಗಳನ್ನು ಹಂಚಿಕೊಂಡಿದ್ದರು.

2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

Continue Reading

ಬಾಲಿವುಡ್

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Madhu Chopra: ಮಧು ಚೋಪ್ರಾ ಮಾತನಾಡಿ ʻʻವಯಸ್ಸಿನ ಅಂತರವಿದೆ. ಹೌದು. ಹುಡುಗ ಒಳ್ಳೆಯವನು. ಅದೇ ರೀತಿ ನನ್ನ ಮಗಳು ಒಳ್ಳೆಯವಳು. ಒಬ್ಬರಿಗೊಬ್ಬರು ಕಾಳಜಿ ವಹಿಸುತ್ತಾರೆ. ಅವರಿಬ್ಬರನ್ನು ನೋಡಿ ನನಗೆ ಸಂತೋಷವಾಗಿದೆ. ಜನರು ಹಾಗೇ ಏನು ಬೇಕಾದರೂ ಮಾತನಾಡುತ್ತಾರೆ. ನಿಕ್‌ ಭಾರತಕ್ಕೆ ಬಂದು ನನ್ನನ್ನು ಭೇಟಿಯಾದಾಗ, ಪ್ರಿಯಾಂಕಾ ಇಲ್ಲದಿದ್ದಾಗ ನನ್ನನ್ನು ಊಟಕ್ಕೆ ಕರೆದೊಯ್ದರು. ಪ್ರಿಯಾಂಕಾಗೆ ಯಾವ ರೀತಿಯ ಹುಡುಗ ಬೇಕು ಎಂದು ಬಯಸುತ್ತೀರಿ ಎಂದು ನಿಕ್ ಕೇಳಿದರು. ಆ ಗುಣಗಳು ನಿಕ್‌ನಲ್ಲಿತ್ತು ಎಂದರು.

VISTARANEWS.COM


on

Madhu Chopra on Priyanka Chopra-Nick Jonas' age gap
Koo

ಬೆಂಗಳೂರು: ಪ್ರಿಯಾಂಕಾ (Priyanka Chopra) ಮತ್ತು ನಿಕ್ ಜೋನಾಸ್ 2018ರ ಡಿಸೆಂಬರ್ 1ರಂದು ಮದುವೆಯಾದರು. ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು. ಕೆಲವು ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಪ್ರಿಯಾಂಕಾ ಚೋಪ್ರಾ (Madhu Chopra) ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದರು. ಪ್ರಿಯಾಂಕಾ ಚೋಪ್ರಾ ಅವರ ತಾಯಿ ಮಧು ಚೋಪ್ರಾ ಇತ್ತೀಚೆಗೆ ತಮ್ಮ ಮಗಳು ಮತ್ತು ನಿಕ್ ಜೋನಾಸ್ ಅವರ ಸಂಬಂಧವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಗಳು ಮತ್ತು ಅಳಿಯನಿಗೆ ಇರುವ 10 ವರ್ಷ ವಯಸ್ಸಿನ ಅಂತರ ಬಗ್ಗೆ ಮಾತನಾಡಿದ್ದಾರೆ.

ಮಧು ಚೋಪ್ರಾ ಮಾತನಾಡಿ ʻʻವಯಸ್ಸಿನ ಅಂತರವಿದೆ. ಹೌದು. ಹುಡುಗ ಒಳ್ಳೆಯವನು. ಅದೇ ರೀತಿ ನನ್ನ ಮಗಳು ಒಳ್ಳೆಯವಳು. ಒಬ್ಬರಿಗೊಬ್ಬರು ಕಾಳಜಿ ವಹಿಸುತ್ತಾರೆ. ಅವರಿಬ್ಬರನ್ನು ನೋಡಿ ನನಗೆ ಸಂತೋಷವಾಗಿದೆ. ಜನರು ಹಾಗೇ ಏನು ಬೇಕಾದರೂ ಮಾತನಾಡುತ್ತಾರೆ. ನಿಕ್‌ ಭಾರತಕ್ಕೆ ಬಂದು ನನ್ನನ್ನು ಭೇಟಿಯಾದಾಗ, ಪ್ರಿಯಾಂಕಾ ಇಲ್ಲದಿದ್ದಾಗ ನನ್ನನ್ನು ಊಟಕ್ಕೆ ಕರೆದೊಯ್ದರು. ಪ್ರಿಯಾಂಕಾಗೆ ಯಾವ ರೀತಿಯ ಹುಡುಗ ಬೇಕು ಎಂದು ಬಯಸುತ್ತೀರಿ ಎಂದು ನಿಕ್ ಕೇಳಿದರು. ಆ ಗುಣಗಳು ನಿಕ್‌ನಲ್ಲಿತ್ತು ಎಂದರು.

ಇದನ್ನೂ ಓದಿ: Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

2018ರಲ್ಲಿ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಾಸ್​ 2022ರ ಜನವರಿಯಲ್ಲಿ ತಮಗೆ ಹೆಣ್ಣುಮಗು ಹುಟ್ಟಿದ್ದಾಗಿ ತಿಳಿಸಿದ್ದರು. ಹಾಗೇ, ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದಾಗಿಯೂ ಹೇಳಿದ್ದರು. ಈ ಒಂದು ವರ್ಷದಲ್ಲಿ ಪ್ರಿಯಾಂಕಾ ಚೋಪ್ರಾ ಮಗುವನ್ನು ಎತ್ತಿಕೊಂಡಿರುವ ಫೋಟೊಗಳು ವೈರಲ್​ ಆಗಿದ್ದರೂ ಕೂಡ ಮಗುವಿನ ಮುಖ ಬಹಿರಂಗವಾಗಿರಲಿಲ್ಲ. ಬಳಿಕ ಪ್ರಿಯಾಂಕಾ ಮಗುವಿನ ಮುಖವನ್ನು ರಿವೀಲ್‌ ಮಾಡಿದರು.

ಕೆಲವು ದಿನಗಳ ಹಿಂದೆ ಪ್ರಿಯಾಂಕ ಚೋಪ್ರಾ (Priyanka Chopra) ತಮ್ಮ ಸಹೋದರ ಸಿದ್ಧಾರ್ಥ ಅವರ ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ಭಾಗಿಯಾಗಿದ್ದರು.ಸಿದ್ಧಾರ್ಥ ಹಾಗೂ ನೀಲಂ ಎಂಗೇಜ್ ಮೆಂಟ್ ನಲ್ಲಿ ಕುಟುಂಬದ ಸದಸ್ಯರು ಹಾಗೂ ಒಂದಷ್ಟು ಆತ್ಮೀಯ ಸ್ನೇಹಿತರು ಪಾಲ್ಗೊಂಡಿದ್ದರು. ಸಿದ್ದಾರ್ಥ ಹಾಗೂ ನೀಲಂ ಜೋಡಿಯ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇನ್ನು ಈ ಸಂದರ್ಭದಲ್ಲಿ ಪ್ರಿಯಾಂಕ ದಂಪತಿಗಳ ಜೊತೆ ತಾಯಿ ಮಧು ಚೋಪ್ರಾ, ಸೋದರ ಸಂಬಂಧಿ ಮನ್ನಾರ್ ಚೋಪ್ರಾ, ಆತ್ಮೀಯ ಸ್ನೇಹಿತೆ ತಮನ್ನಾ ದತ್ ಪಾಲ್ಗೊಂಡಿದ್ದರು. ಇನ್ನು ಸಾಂಪ್ರಾಯಿಕ ಉಡುಗೆಯಲ್ಲಿ ಕಂಗೊಳಿಸಿದ ಪ್ರಿಯಾಂಕ ಕುಟುಂಬದ ಫೋಟೊ ಸಖತ್ ಮೆಚ್ಚುಗೆಯನ್ನು ಪಡೆದುಕೊಂಡಿತ್ತು.

Continue Reading

ಸಿನಿಮಾ

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

India Highest Paid Item Girl : ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ. ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ.

VISTARANEWS.COM


on

India Highest Paid Item Girl not Malaika Nora, Katrina, Sunny
Koo

ಬೆಂಗಳೂರು: ಮಲೈಕಾದಿಂದ ಹಿಡಿದು ಸನ್ನಿ ಲಿಯೋನ್‌ವರೆಗೆ (India Highest Paid Item Girl ) ಅನೇಕ ನಟಿಯರು ಚಿತ್ರಗಳಲ್ಲಿ ಐಟಂ ಹಾಡುಗಳನ್ನು ಮಾಡಿದ್ದಾರೆ. 4ರಿಂದ 5 ನಿಮಿಷದ ಹಾಡಿಗೆ ಹೆಜ್ಜೆ ಹಾಕುವುದಕ್ಕೆ ಕೋಟಿಗಟ್ಟಲೆ ಸಂಭಾವನೆ ಪಡೆದ ಅನೇಕ ಹೀರೋಯಿನ್​ಗಳು ಇದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಐಟಂ ಸಾಂಗ್‌ಗಳು ಸಿನಿಮಾದಲ್ಲಿ ವಿಶೇಷ ಸ್ಥಾನ ಪಡೆದುಕೊಳ್ಳುತ್ತಿವೆ. ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ.

ಐಟಂ ಸಾಂಗ್‌ಗೆ ಹೆಜ್ಜೆ ಹಾಕುವವರ ಸಂಭಾವನೆ ಗಗನಕ್ಕೇರಿದೆ. ಈ ಒಬ್ಬ ‘ಐಟಂ ಗರ್ಲ್’ ಈಗ ಅನೇಕ ನಾಯಕ ನಟಿಯರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಪುಷ್ಪಾ ದಿ ರೈಸ್‌ ಸಿನಿಮಾದ ಊ ಅಂಟವಾ ಹಾಡಿಗೆ ಚಿತ್ರದಲ್ಲಿ ಐದು ನಿಮಿಷಗಳ ಕಾಲ ಕಾಣಿಸಿಕೊಂಡಿದ್ದಕ್ಕಾಗಿ ದಕ್ಷಿಣದ ಸೂಪರ್‌ಸ್ಟಾರ್ ಸಮಂತಾ ರುತ್ ಪ್ರಭು 5 ಕೋಟಿ ರೂ. ಸಂಭಾವನೆ ಪಡೆದುಕೊಂಡರು. ಭಾರತೀಯ ಚಿತ್ರರಂಗದ ಯಾವ ನಟಿಯರೂ ಈ ರೀತಿ ಹಣ ಗಳಿಕೆ ಮಾಡಿಲ್ಲ. ಐಟಂ ಸಾಂಗ್‌ಗಳಿಗಾಗಿ ಹೆಚ್ಚು ಸಂಭಾವನೆ ಪಡೆಯುವ ಇತರ ನಟಿಯರೆಂದರೆ ನೋರಾ ಫತೇಹಿ ಮತ್ತು ಸನ್ನಿ ಲಿಯೋನ್. ಇಬ್ಬರೂ ಪ್ರತಿ ಹಾಡಿಗೆ 2 ಕೋಟಿ ರೂ ಪಡೆದುಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್ ಐಟಂ ಸಾಂಗ್‌ಗಳ ರಾಣಿ ಮಲೈಕಾ ಅರೋರಾ ಇಂದು 50 ಲಕ್ಷದಿಂದ 1 ಕೋಟಿ ರೂ. ಚಾರ್ಚ್‌ ಮಾಡುತ್ತಾರೆ.

ವಿಚಿತ್ರವೆಂದರೆ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರು ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಕಡಿಮೆ ಸಂಭಾವನೆ ಪಡೆದುಕೊಂಡಿದ್ದಾರೆ. ಪುಷ್ಪಾ ದಿ ರೈಸ್ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರಕ್ಕಾಗಿ ರಶ್ಮಿಕಾ ಕೇವಲ 2 ಕೋಟಿ ರೂ. ಸಂಭಾವನೆ ಪಡೆದರೆ, ಜಾನ್ವಿ ಕಪೂರ್, ತಮನ್ನಾ ಭಾಟಿಯಾ ಮತ್ತು ಪೂಜಾ ಹೆಗ್ಡೆಯಂತಹ ಇತರ ಜನಪ್ರಿಯ ನಟಿಯರೆಲ್ಲರೂ ಪ್ರತಿ ಚಿತ್ರಕ್ಕೆ 5 ಕೋಟಿ ರೂ.ಗಿಂತ ಕಡಿಮೆ ಸಂಭಾವನೆ ಪಡೆಯುತ್ತಾರೆ ಕೇವಲ ಒಂದು ಹಾಡಿಗೆ ಸಮಂತಾ ಗಳಿಸಿದ ಗಳಿಸಿದ್ದು ಬರೋಬ್ಬರಿ 5 ಕೋಟಿ ರೂ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ. ಸಮಂತಾ ಆರಂಭದಲ್ಲಿ ಐಟಂ ಸಾಂಗ್‌ ಮಾಡಲು ಹಿಂಜರಿದಿದ್ದರು. ನಂತರ ಒಪ್ಪಿ ಖುಷಿಯಿಂದ ಡ್ಯಾನ್ಸ್ ಮಾಡಿದರು ಎಂದು ವರದಿಯಾಗಿದೆ.

Continue Reading

ಸಿನಿಮಾ

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

ಬಾಲಿವುಡ್ ನ ಆದರ್ಶ ಜೋಡಿಯಲ್ಲಿ ಶಾರುಖ್ ಮತ್ತು ಗೌರಿ ಅವರೂ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ 33 ವರ್ಷಗಳಾಗಿದ್ದು ಮೂವರು ಮಕ್ಕಳ ಪೋಷಕರಾಗಿದ್ದರೆ. ಧರ್ಮದ ವಿಚಾರದಲ್ಲಿ ಗೌರಿ (Gauri Khan) ಈಗಲೂ ಹಿಂದುವಾಗಿಯೇ ಉಳಿದಿದ್ದಾರೆ. ಇದಕ್ಕೆ ಕಾರಣ ಏನೆಂಬುದನ್ನು ಅವರೇ ಹೇಳಿದ್ದಾರೆ.

VISTARANEWS.COM


on

By

Gauri Khan
Koo

ಬಾಲಿವುಡ್ ನ (bollywood) ಆದರ್ಶ ದಂಪತಿಗಳ ಸಾಲಿನಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan), ಗೌರಿ ಖಾನ್ (Gauri Khan) ದಂಪತಿಯೂ ಇದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರಿಬ್ಬರ ನಡುವಿನ ಪ್ರೀತಿ ಮತ್ತು ಹೊಂದಾಣಿಕೆ. ಇದು ಅವರ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಂತೆ ಮಾಡಿದೆ.

ಅಭಿಮಾನಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಾಣುವ ಈ ದಂಪತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಾನು ನಿಮ್ಮೊಂದಿಗೆ ಬೆಳೆಯಲು ಬಯಸುತ್ತೇನೆ ಎಂದು ಹೇಳಿ ಮತ್ತೆ ಎಲ್ಲರ ಮನ ಗೆದ್ದಿದ್ದಾರೆ.

ಗೌರಿ ಮತ್ತು ಶಾರುಖ್ ಖಾನ್ ಅವರ ಧರ್ಮ ಬೇರೆಬೇರೆಯಾದರೂ ಇದು ಅವರಿಬ್ಬರ ನಡುವಿನ ಪ್ರೀತಿಗೆ ಅಡ್ಡಿಯಾಗಲಿಲ್ಲ. ಮದುವೆಯ ಮೊದಲು ಕೆಲವು ತೊಂದರೆಗಳು ಎದುರಾದರೂ ಮದುವೆಯ ಬಳಿಕ ದಂಪತಿ ಎಂದರೆ ಹೀಗಿರಬೇಕು ಎನ್ನುವಷ್ಟು ಇವರಿಬ್ಬರೂ ಮಾದರಿಯಾಗಿದ್ದಾರೆ.

ಕಿಂಗ್ ಖಾನ್ ಮೊದಲಿನಿಂದಲೂ ತನ್ನ ರಾಣಿಗೆ ಆದರ್ಶ ಪತಿ. ಶಾರುಖ್ ಖಾನ್ ಮುಸ್ಲಿಂ ಆಗಿರುವುದರಿಂದ ಮದುವೆಯಾದ ಬಳಿಕ ಗೌರಿ ಮುಸ್ಲಿಂ ಆಗಿ ಮತಾಂತರವಾಗುತ್ತಾರೆ ಎನ್ನುವ ಹೇಳಿಕೆಗಳು ಜೋರಾಗಿ ಕೇಳಿ ಬಂದಿತ್ತು. ಹೀಗಾಗಿ ಅವರಿಗೂ ಪದೇಪದೇ ತಾವು ಮುಸ್ಲಿಂ ಆಗಿ ಮತಾಂತರಗೊಳ್ಳುವುದಿಲ್ಲ ಎಂದು ಹೇಳಬೇಕಾದ ಸಂದರ್ಭಗಳು ಎದುರಾಗಿತ್ತು.

ಇತ್ತೀಚೆಗೆ ಕರಣ್ ಜೋಹರ್ ಅವರ ಕಾರ್ಯಕ್ರಮ ಕಾಫಿ ವಿತ್ ಕರಣ್‌ನಲ್ಲಿಹೃತಿಕ್ ರೋಷನ್ ಅವರ ಪತ್ನಿ ಸುಸ್ಸಾನ್ನೆ ಖಾನ್ ಅವರೊಂದಿಗೆ ಗೌರಿ ಆಗಮಿಸಿದ್ದರು. ಅಲ್ಲಿ ಗೌರಿ ಮುಸ್ಲಿಂ ಆಗಿ ಮತಾಂತರಗೊಳ್ಳದಿರುವ ಕುರಿತು ಚರ್ಚೆ
ನಡೆದಿತ್ತು.

ಯಾಕೆ ಮತಾಂತರವಾಗಲಿಲ್ಲ?

ಶಾರುಖ್ ಖಾನ್ ಅವರ ಧರ್ಮಕ್ಕೆ ನಾನು ಮತಾಂತರವಾಗುವುದಿಲ್ಲ ಎಂದು ಗೌರಿ ಖಾನ್ ಹೇಳಿರುವ ಹಳೆಯ ವಿಡಿಯೋ ಈಗ ಮತ್ತೆ ಸದ್ದು ಮಾಡಿದೆ. ಇದರಲ್ಲಿ ಅವರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗದೇ ಉಳಿಯಲು ಕಾರಣವನ್ನೂ ಕೊಟ್ಟಿದ್ದಾರೆ.

ನಮ್ಮಿಬ್ಬರ ಮಧ್ಯೆ ಸಮತೋಲನವಿದೆ. ನಾನು ಶಾರುಖ್ ಅವರ ಧರ್ಮವನ್ನು ಗೌರವಿಸುತ್ತೇನೆ. ಮತ್ತು ಅವರೂ ನನ್ನ ಧರ್ಮವನ್ನು ಗೌರವಿಸುತ್ತಾರೆ. ಹೀಗಾಗಿ ನಾನು ಮತಾಂತರಗೊಂಡು ಮುಸ್ಲಿಂ ಆಗಬೇಕು ಈ ಎನ್ನುವುದರಲ್ಲಿ ಅರ್ಥವಿಲ್ಲ. ಪರಸ್ಪರ ಜೊತೆಯಾಗಿ ಬಾಳಲು ಅದು ಅನಿವಾರ್ಯ ಎಂಬುದನ್ನು ನಾನು ನಂಬುವುದಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಅವರ ಧರ್ಮವನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?


ಶಾರುಖ್‌ನಂತೆ ನನ್ನ ಧರ್ಮವನ್ನು ಯಾವತ್ತೂ ಅಗೌರವಗೊಳಿಸುವುದಿಲ್ಲ. ಮಗ ಆರ್ಯನ್ ತನ್ನ ತಂದೆಯ ಧರ್ಮವನ್ನು ಅನುಸರಿಸುತ್ತಾನೆ. ಆರ್ಯನ್ ಗೆ ಶಾರುಖ್‌ ಎಂದರೆ ತುಂಬಾ ಇಷ್ಟ.ಹೀಗಾಗಿ ಆತ ಅವರ ಧರ್ಮವನ್ನು ಅನುಸರಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಮುಸ್ಲಿಂ ಎಂದು ಅವರಿಬ್ಬರು ಯಾವಾಗಲೂ ಹೇಳುತ್ತಿರುತ್ತಾರೆ. ಅದನ್ನು ನಾನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ ಗೌರಿ ಖಾನ್.

ಶಾರುಖ್ ಖಾನ್ ಹಾಗೂ ಗೌರಿ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 33 ವರ್ಷಗಳಾಗಿವೆ. ಬಾಲಿವುಡ್‌ನ ಈ ಸುವರ್ಣ ದಂಪತಿಗೆ ಆರ್ಯನ್ ಖಾನ್, ಸುಹಾನಾ ಖಾನ್ ಮತ್ತು ಅಬ್ರಾಮ್ ಖಾನ್ ಎಂಬ ಮೂರು ಮಕ್ಕಳಿದ್ದಾರೆ.

Continue Reading
Advertisement
Assault Case in Shivamogga
ಕ್ರೈಂ7 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್8 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್14 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202414 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ16 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ26 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್37 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ57 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ7 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌