Sunday read | ಹೊಸ ಪುಸ್ತಕ | ಕಪಿನಪ್ಪನ ಮನೆಯಲ್ಲಿ ಜೋಹಾನ್‌ ಗ್ರೆಗರ್‌ ಮೆಂಡಲ್ - Vistara News

ಕಲೆ/ಸಾಹಿತ್ಯ

Sunday read | ಹೊಸ ಪುಸ್ತಕ | ಕಪಿನಪ್ಪನ ಮನೆಯಲ್ಲಿ ಜೋಹಾನ್‌ ಗ್ರೆಗರ್‌ ಮೆಂಡಲ್

ಕಥೆಗಾರ ಮಿರ್ಜಾ ಬಷೀರ್‌ ಅವರ ಪಶುವೈದ್ಯಕೀಯ ವೃತ್ತಿ ಬದುಕಿನ ಅನುಭವಗಳು ʼಗಂಗೆ ಬಾರೆ ಗೌರಿ ಬಾರೆʼ ಕೃತಿಯಲ್ಲಿ ಸೊಗಸಾಗಿ ಮೂಡಿಬಂದಿವೆ. ನೈಜ ಅನುಭವಗಳು ಹಾಗೂ ಸೊಗಸಾದ ನಿರೂಪಣೆಗಳೆರಡೂ ಸೇರಿರುವ ಈ ಕೃತಿಯ ಒಂದು ಆಯ್ದ ಭಾಗ ಇಲ್ಲಿದೆ.

VISTARANEWS.COM


on

gange bare gowri bare
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಶುಚಿಕಿತ್ಸಾಲಯದ ಕೆಲಸ ಮುಗಿಸಿಕೊಂಡು‌ ಮನೆಗೆ ಹಿಂತಿರುಗುತ್ತಿದ್ದ ನನ್ನನ್ನು ಕಪಿನಪ್ಪ ತಡೆದು ನಿಲ್ಲಿಸಿಕೊಂಡು ತನ್ನ ಮನೆಗೆ ಬರಬೇಕೆಂದು ತೊದಲುತ್ತ ಜೋಲಿ ಹೊಡೆದಾಗ ಸಂಜೆ ಇಳಿಹೊತ್ತಾಗಿತ್ತು. ದಿನದ ಬೆಳಕು ಇರುಳ ಕತ್ತಲೆಗೆ ಶರಣಾಗುತ್ತಿತ್ತು. ಪಶುಪಕ್ಷಿಗಳು ತಮ್ಮ ಗೂಡುಗಳತ್ತ ಮುಖ ಮಾಡಿದ್ದವು. ರೈತರು ಹೊಲಗದ್ದೆ ತೋಟಗಳಿಂದ ಹಿಂತಿರುಗುತ್ತಿದ್ದರು. ದಿನವಿಡೀ ಪಶುಚಿಕಿತ್ಸಾಲಯದ ಕೆಲಸಗಳಿಂದ ಹಣ್ಣುಹಣ್ಣಾಗಿದ್ದೆ. ಮನೆ ಸೇರಿದರೆ ಸಾಕೆಂದು ಮನಸ್ಸು ಹಾತೊರೆಯುತ್ತಿತ್ತು, ಆಸ್ಪತ್ರೆಯಿದ್ದ ತಂಡಗ ಗ್ರಾಮದಿಂದ ಮನೆಯದ್ದ ನೊಣವಿನಕೆರೆಗೆ ಹೋಗುತ್ತಿದ್ದೆ. ಅರ್ಧ ದಾರಿ ಬಂದಿದ್ದೆ. ಆಗ ಕಪಿನಪ್ಪ ಎದುರಾದದ್ದು, ಆಲೂರು ಏರಿಯ ಬಳಿ, ರಸ್ತೆಯಲ್ಲಿ ಹೋಗಿಬರುತ್ತಿದ್ದ ರೈತರು ನಮಸ್ಕರಿಸುತ್ತ ಸಾಗುತ್ತಿದ್ದರು.

“ಮನೆಗಾ ಸಾರ್?”

“ಎಲಾ ಕಪಿನಿ! ಬೆಳಗ್ಗೆಯಿಂದ ಕುಡಿಯಾದ್ ಬಿಟ್ಟು ತೋರ್ಸಕಾಯ್ತರಲಿಲ್ಲವೇನ್ಲ ಎಮ್ಮೆನ? ಮೊಲ ಎದ್ದಾಗ ನಾಯಿ ಉಚ್ಚೆ ಹೊಯ್ಯಕೋಯ್ತಂತೆ” “ಡಾಕ್ಟರ ಕುಲಕರ್ಮ ಬುಡುಸ್ತಿರಿ ಕಲಾ” ಇತ್ಯಾದಿ ಮಾತುಗಳನ್ನು ಎಸೆದು ಮನೆಕಡೆ ದೌಡಾಯಿಸುತ್ತಿದ್ದರು.

ಕಪಿನಪ್ಪ ನನಗೆ ಪರಿಚಿತವಿದ್ದ ವ್ಯಕ್ತಿಯೇ ಆಗಿದ್ದ. ಮುಖ್ಯ ರಸ್ತೆಯ ಪಕ್ಕದಲ್ಲಿ ಅವರ ಮನೆಯಿತ್ತು. ಮನೆ ಹಿಂದೆ ತೋಟ, ಪ್ರತಿದಿನ ಬೆಳಗ್ಗೆ ಸಂಜೆ ಅವನ ಮನೆ ಮುಂದೆ ನಾನು ಬೈಕಿನಲ್ಲಿ ಅಡ್ಡಾಡುತ್ತಿದ್ದೆ. ಕಪಿನಪ್ಪ ಯಾವತ್ತೂ ಅವನಾಗಿ ಮಾತನಾಡಿಸಿದವನಲ್ಲ. ವಿಪರೀತ ಸಂಕೋಚದ ವ್ಯಕ್ತಿ, ಅದೂ ಅಲ್ಲದೆ ಯಾವಾಗಲೂ ಕುಡಿದಿರುತ್ತಿದ್ದ. ಮೊದಲಿಗೆ ಶ್ರೀಮಂತನಾಗಿದ್ದವ. ದಿನಗಳೆದಂತೆ ನಾನಾ ಕಾರಣಗಳಿಂದ ಅವನ ಸಿರಿತನ ಸವೆದುಹೋಗಿತ್ತು. ಅವನ ಮನೆ ಮುಂದೆ ನಾನು ಹೋಗುವಾಗ ಬರುವಾಗ ಮುಖ ತಪ್ಪಿಸಿ ಓಡಾಡುತ್ತಿದ್ದ. ಎಷ್ಟು ಕುಡಿದರೂ ಬೇರೆಯವರೊಡನೆ ಜಗಳವಾಡಿದವನಲ್ಲ. ಬಹಳ ವಿನಯವಂತ ಮತ್ತು ಸೌಮ್ಯ ಸ್ವಭಾವದವನಾಗಿದ್ದ. ಇಂಥ ಕಪಿನಪ್ಪ ತಾನಾಗಿ ಬೈಕು ತಡೆದು ನನ್ನೊಡನೆ, “ಎಮ್ಮೆಗುಷಾರಿಲ್ಲ ಬರ್ಲೇಬೇಕುʼ’ ಎಂದು ಜೋರಾಗಿ ಜೋಲಿ ಹೊಡೆದ. ವಾಲಾಡದೆ ನೇರ ನಿಲ್ಲಲು, ತೊದಲದೆ ಮಾತಾಡಲು ಅವನ ದೇಹ ಸೇರಿದ್ದ ‘ಪರಮಾತ್ಮ’ ಬಿಡುತ್ತಿರಲಿಲ್ಲ.

ಸುಮಾರು ಐವತ್ತು ವರ್ಷದ ಕಪಿನಪ್ಪನ ಜೊತೆ ಐದಾರು ವರ್ಷದ ಹುಡುಗನಿದ್ದ. ಕಪಿನಪ್ಪ ಹುಡುಗನನ್ನು ಹಿಡಿದುಕೊಂಡಿರದೆ ಹುಡುಗನೇ ಕಪಿನಪ್ಪನ ಕೈ ಹಿಡಿದುಕೊಂಡಿದ್ದ. ಕಪಿನಪ್ಪ ಎಡಕ್ಕೆ ಜೋಲಿ ಹೊಡೆದರೆ ಬಲಕ್ಕೆ ಓಡುತ್ತ ಮತ್ತು ಬಲಕ್ಕೆ ಜೋಲಿ ಹೊಡೆದರೆ ಎಡಕ್ಕೆ ಓಡುತ್ತ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತಿದ್ದ ಆ ಹುಡುಗ, ಬಲು ಚೂಟಿಯಾಗಿದ್ದ. ಹುಡುಗನ ಬಾಯಿಂದ ಮಾತುಗಳು ಪಟಾಕಿಯಂತೆ ಸಿಡಿಯುತ್ತಿದ್ದವು. ಅವನು ಕಪಿನಪ್ಪನ ಮಗ ಎಂದು ಆಮೇಲೆ ತಿಳಿಯಿತು.

ಕಪಿನಪ್ಪನಿಂದ ಯಾವ ಮಾಹಿತಿಯನ್ನೂ ಪಡೆಯಲಾಗುತ್ತಿರಲಿಲ್ಲವಾದ್ದರಿಂದ ಬೈಕ್ ನಿಲ್ಲಿಸಿ ಅವನ ಮನೆ ಕಡೆ ಹೆಜ್ಜೆ ಹಾಕಿದೆ. ಸಕಲೆಂಟು ದಿಕ್ಕಿನಲ್ಲಿ ವಾಲಾಡುತ್ತಿದ್ದ ಕಪಿನಪ್ಪ ಎಮ್ಮೆಯ ಗುಣಗಾನ ಮಾಡುತ್ತ ಇದ್ದಕ್ಕಿದ್ದಂತೆ ಅಳತೊಡಗಿದ. ಇದೇನೋ ಬಹಳ ʻಸೀರಿಯಸ್ ಕೇಸ್’ ಇರಬೇಕೆಂದುಕೊಂಡೆ. ಔಷಧದ ಬ್ಯಾಗನ್ನು ಹಿಡಿದುಕೊಳ್ಳಲು ಬಹಳ ಒತ್ತಾಯ ಮಾಡಿದ ಕಪಿನಪ್ಪನಿಗೆ ಗದರಿಸಿ ನಾನೇ ಹಿಡಿದುಕೊಂಡು ಮುನ್ನಡೆದೆ. ಕಪಿನಪ್ಪ ತೂರಾಡುತ್ತ ಬ್ಯಾಗನ್ನು ಎತ್ತಾಕಿ ಅದರಲ್ಲಿರುವ ಎಲ್ಲ ಔಷಧದ ಬಾಟಲುಗಳನ್ನು ನುಣ್ಣಗೆ ಒಡೆದು ಹಾಕಿದರೆ ಗತಿ?

ಅಳುತ್ತಿದ್ದ ಕಪಿನಪ್ಪನನ್ನು ಪಕ್ಕಕ್ಕೆ ಸರಿಸಿ ಎಮ್ಮೆಗೇನಾಗಿರಬಹುದೋ ಎಂದು ಹೆದರುತ್ತ ನೋಡಿದರೆ ಕೊಟ್ಟಿಗೆಯ ಕುರುಡುಗತ್ತಲಿನಲ್ಲಿ ಒಂದು ಭಾರೀ ಎಮ್ಮೆ ಮೆಲುಕು ಹಾಕುತ್ತ ನಿಂತಿತ್ತು. ಕೊಟ್ಟಿಗೆಯ ನೆಲವೆಲ್ಲ ಬರಿ ಗುಂಡಿಗೊಟರುಗಳಿಂದ ಕೂಡಿದ್ದು, ಕತ್ತಲಿನಲ್ಲಿ ಒಳಗೆ ಹೆಜ್ಜೆ ಇಡುವುದೇ ಅಪಾಯಕಾರಿಯಾಗಿತ್ತು. ಎಮ್ಮೆಯನ್ನು ಕೊಟ್ಟಿಗೆಯಿಂದ ಹೊರಕ್ಕೆ ತರಿಸಿದೆ. ಎಮ್ಮೆ ಕುಂಟುತ್ತ ಹಿತ್ತಲಿಗೆ ಬಂತು. ಪರೀಕ್ಷಿಸಿ ನೋಡಿದರೆ, ಎಮ್ಮೆಯ ಹಿಂದಿನ ಎಡಗಾಲಿನ ತೊಡೆಯ ಒಳಭಾಗದಲ್ಲಿ ದೊಡ್ಡ ಗಾಯವಿತ್ತು. ಮನೆಯ ಜನರ ಹೇಳಿಕೆ ಪ್ರಕಾರ ಎಮ್ಮೆಗೆ ಗಾಯವಾಗಿ ವಾರದ ಮೇಲಾಗಿತ್ತು. ಒಂದು ಸಣ್ಣ ಗಾಯವು ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ನಂಜಾಗಿ ಊದಿಕೊಂಡು, ನೊಣ ಕೂತು, ಮೊಟ್ಟೆ ಇಟ್ಟು, ಮೊಟ್ಟೆ ಒಡೆದು ಹುಳುಗಳಾಗಿ ಮತ್ತಷ್ಟು ಊದಿಕೊಂಡು, ಒಂದಷ್ಟು ಭಾಗ ಕೊಳೆತು, ವಿಪರೀತ ನೋವಾಗಿ ಎಮ್ಮೆ ಕುಂಟುತ್ತ ನಡೆಯುತ್ತಿತ್ತು. ಗಾಯ ಎಷ್ಟು ಗಬ್ಬು ವಾಸನೆ ಹೊಡೆಯುತ್ತಿತ್ತೆಂದರೆ ಕಪಿನಪ್ಪ ಸಹ ಟವಲ್ಲಿನಿಂದ ಮೂಗು ಮುಚ್ಚಿಕೊಂಡಿದ್ದ.

ಅಸಹಾಯಕ ಎಮ್ಮೆ ಇಡೀ ಜಗತ್ತನ್ನು ಕ್ಷಮಿಸಿ, ಬ್ರಹ್ಮಾಂಡ ನೋವನ್ನು ಸದ್ದಿಲ್ಲದೆ ಅನುಭವಿಸುತ್ತ ನನ್ನೆದುರು ನಿಂತಿತ್ತು. ಹೊತ್ತಲ್ಲದ ಹೊತ್ತಲ್ಲಿ ಅತ್ತಿಂದಿತ್ತ ಎಳೆದಾಡುತ್ತಿದ್ದ ನಮ್ಮಿಂದಾಗಿ ಗಾಬರಿ ಮತ್ತು ಸಿಟ್ಟಿನಿಂದ ಬುಸುಗುಡುತ್ತಿತ್ತು. ಹಿತ್ತಲಲ್ಲಿ ಕತ್ತಲಾಗಿದ್ದುದರಿಂದ ʻಬೆಳಕು ತನ್ನಿ’ ಎಂದೆ. ಮಕ್ಕಳೆಲ್ಲ ಮನೆಯ ಮೂಲೆಮೂಲೆ ಹುಡುಕಿ ಒಂದು ಎಡವಟ್ಟು ಬ್ಯಾಟರಿ ತಂದರು. ಅದು ಹತ್ತಿಸಿದರೆ ಆರಿಹೋಗುತ್ತಿತ್ತು ಮತ್ತು ಆರಿಸಿದರೆ ಹತ್ತುತ್ತಿತ್ತು. ಕಣ್ಣಲ್ಲಿ ಕಣ್ಣಿಟ್ಟು ನೋಡಿದರೆ ಮಾತ್ರ ಅದು ಹತ್ತಿದೆಯೋ ಇಲ್ಲವೋ ಎಂಬುದು ತಿಳಿಯುತ್ತಿತ್ತು. ಅದು ಅಷ್ಟು ಪ್ರಕಾಶಮಾನವಾಗಿತ್ತು! ಆ ಬ್ಯಾಟರಿಯಲ್ಲಿ ನಾವು ಗತಿ ಮುಟ್ಟುವುದಿಲ್ಲವೆಂದು ಯಾರೋ ಲಾಟೀನು ತಂದರು. ಲಾಟೀನಿನ ಮಂದ ಬೆಳಕಿನಲ್ಲಿ ನಮ್ಮ ಕೆಲಸ ಸಾಗುವುದಿಲ್ಲವೆಂದು ಬೇಗನೆ ಅರಿವಿಗೆ ಬಂತು. ಗಾಬರಿ ಮತ್ತು ಸಿಟ್ಟಿನಿಂದ ಕುಣಿಯುತ್ತಿದ್ದ ಎಮ್ಮೆ ಹಿಡಿಯಲು ಎಂಟತ್ತು ಜನ ಹಿತ್ತಲಲ್ಲಿ ತುಂಬಿಕೊಂಡಿದ್ದರು. ಅವರೆಲ್ಲ ಸುತ್ತಮುತ್ತಲ ತೋಟದವರಾಗಿದ್ದರು. ಅವರಲ್ಲೊಬ್ಬ ಓಡಿ ಹೋಗಿ ಚೆನ್ನಾಗಿರುವ ಬ್ಯಾಟರಿ ತಂದು ನಾನು ಹೇಳಿದ ಕಡೆ ಬೆಳಕು ಬಿಡುತ್ತಾ ನಿಂತ. ಕಪಿನಪ್ಪ ಕ್ವಾಟು ಸೀಸೆಯಲ್ಲಿ ಮಾಡಿದ ಸೀಮೆ ಎಣ್ಣೆ ದೀಪಗಳೆರಡನ್ನು ತಂದಿಟ್ಟ.

ಇದನ್ನೂ ಓದಿ | Sunday Read | ಹೊಸ ಪುಸ್ತಕ | ಬೊಂಬಾಯ್‌ ಮಿಠಾಯಿ ಮಾಮ

ಇದೇ ಸಮಯದಲ್ಲಿ ಇದೇ ಆಗಸದ ಕೆಳಗೆ ಜಗತ್ತಿನ ಯಾವ ಮೂಲೆಯಲ್ಲಿ ಯಾವ ಮಂತ್ರಿಯ, ಯಾವ ನೊಬೆಲ್ ವಿಜ್ಞಾನಿಯ, ಯಾವ ಶತಕೋಟಿ ಶ್ರೀಮಂತನ, ಯಾವ ಒಲಂಪಿಕ್ ಕ್ರೀಡಾಪಟುವಿನ, ಎಂಥ ಉನ್ನತ ತಂತ್ರಜ್ಞಾನದ ಚಿಕಿತ್ಸೆ ನಡೆಯುತ್ತಿತ್ತೋ ಗೊತ್ತಿಲ್ಲ. ಆದರಿಲ್ಲಿ ಕಪಿನಪ್ಪ ಎಂಬ ಬಡ ರೈತನ ನಿಷ್ಪಾಪಿ ಎಮ್ಮೆಯ ಕನಿಷ್ಠ ಸೌಕರ್ಯ ಬಳಸಿ ಮಬ್ಬುಗತ್ತಲಿನಲ್ಲಿ ನಡೆಯುತ್ತಿದ್ದ ಚಿಕಿತ್ಸೆ ಯಾವ ರೀತಿಯಲ್ಲಿಯೂ ಅದಕ್ಕಿಂತ ಕಡಿಮೆಯದ್ದೇನಾಗಿರಲಿಲ್ಲ.

ಹಿತ್ತಲಿನಲ್ಲಿ ಒಂದು ದೊಡ್ಡ ‘ಸೀನ್’ ಅನಾವರಣಗೊಳ್ಳತೊಡಗಿತು. ಹಿತ್ತಲು ವಿಶಾಲವಾಗಿದ್ದು ಸುತ್ತಲೂ ಅಲ್ಲಲ್ಲಿ ಬಿದ್ದು ಹೋಗಿದ್ದ ಗೋಡೆ ಇತ್ತು. ಎಂಟತ್ತು ಜನರ ಗುಂಪು ಎಮ್ಮೆಯ ಬಳಿಸಾರಿದ ಕೂಡಲೆ ಎಮ್ಮೆ ಹಿತ್ತಲು ತುಂಬ ನೋವಿಗೆ
ಕೇರು ಮಾಡದೆ ಕುಣಿದಾಡತೊಡಗಿತು. ಎಲ್ಲರಿಂದಲೂ ತಪ್ಪಿಸಿಕೊಳ್ಳುತ್ತ ಮಾಯಾಮೃಗದಂತೆ ವರ್ತಿಸಲಾರಂಭಿಸಿತು. ಎಮ್ಮೆ ಹಿಡಿಯುವ ಭರದಲ್ಲಿ ಮಾಯಣ್ಣ ಎಂಬುವವನಂತೂ ಬಿದ್ದು ಚೆಲ್ಲಾಡಿ ಹೋದ ಅವನ ಮಂಡಿ ಮತ್ತು ತೊಡೆಗಳೆಲ್ಲ ತರಿದು ಹೋದವು. ಎರಡು ಮೂರು ಹಗ್ಗ ಹಾಕಿ ಎಮ್ಮೆಯನ್ನು ಕೆಡವಿ ಕಾಲುಗಳನ್ನು ಕಟ್ಟಿ ಹಾಕಿದ ನಂತರ ಚಿಕಿತ್ಸೆ ಪ್ರಾರಂಭವಾಯಿತು.

ಇಬ್ಬರು ಕಾಲುಗಳನ್ನು ಕಟ್ಟಿದ್ದ ಹಗ್ಗ ಹಿಡಿದಿದ್ದರು. ಇಬ್ಬರು ತಲೆ ಮತ್ತು ಕೊಂಬುಗಳನ್ನು ಹಿಡಿದಿದ್ದರು. ಒಬ್ಬ ಪಕ್ಕೆಯ ಮೇಲೆ ಹಗುರವಾಗಿ ಕುಳಿತಿದ್ದ. ಒಬ್ಬ ಬಾಲವನ್ನು ಹಿಡಿದು ಕೂತಿದ್ದ. ಒಂದಿಬ್ಬರು ಈ ಎಲ್ಲದರ ಮೇಲುಸ್ತುವಾರಿ ವಹಿಸಿದ್ದರು. ಎಲ್ಲರ ಗಮನವೂ ನನ್ನ ಚಲನವಲನಗಳ ಮೇಲೆ ಕೇಂದ್ರೀಕೃತವಾಗಿತ್ತು. ದೂರಕ್ಕೆ ಎಮ್ಮೆಯ ಮೇಲೆ ಮುಗಿಬಿದ್ದವರ ತರ ಕಾಣುತ್ತಿದ್ದೆವು.

ಒಳತೊಡೆಯ ಅಗಲಕ್ಕೂ ಹಬ್ಬಿಕೊಂಡಿದ್ದ ಗಾಯವನ್ನು ಒಂದು ಬಕೆಟ್ ಪೊಟಾಸಿಯಂ ಪರ್ಮಾಂಗನೇಟ್ ದ್ರಾವಣದಿಂದ ಚೆನ್ನಾಗಿ ತೊಳೆದು ಒಣ ಬಟ್ಟೆಯಿಂದ ಒರೆಸಿ, ಗಾಯದಲ್ಲಿದ್ದ ಅಸಂಖ್ಯಾತ ಹುಳುಗಳನ್ನು ಇಕ್ಕಳದಲ್ಲಿ ಬಗೆದು ತೆಗೆದು ಹಾಕಿದೆ. ಹುಳುಗಳನ್ನು ತೆಗೆತೆಗೆದಂತೆ ಸುತ್ತ ನೆರೆತಿದ್ದ ಜನರು ನಾನಾತರದ ಉದ್ಗಾರಗಳನ್ನು ತೆಗೆಯುತ್ತ ಬೆರಗನ್ನು ವ್ಯಕ್ತಪಡಿಸಿದರು. ನಾನು ಆ ಗಾಯದ ಕುಳಿಯಲ್ಲಿ ನುಸಿಉಂಡೆಯ (Naphthalene balls) ಪುಡಿಯನ್ನು ತುಂಬಿದೆ. ಗಾಯದಿಂದ ಹೊರಬಿದ್ದ ಹುಳುಗಳು ಅಲ್ಲೆಲ್ಲ ಹರಿದಾಡತೊಡಗಿದವು. ಗಾಯ, ರಕ್ತ, ಹುಳುಗಳು, ಎಮ್ಮೆ ಕುಣಿತ, ಬಿದ್ದು ಚೆಲ್ಲಾಡಿದ್ದ ಮಾಯಣ್ಣನ ಮೈ ಕೈ ಮೇಲಾಗಿದ್ದ ಗಾಯಗಳು ಎಲ್ಲ ನೋಡಿ ಅಂಗಡಿ ಕೃಷ್ಣ ಎಂಬಾತ ತಲೆ ತಿರುಗಿ ಕಣ್ಣು ಬೆಳ್ಳಗೆ ಮಾಡಿಕೊಂಡು ನಿಂತ ಜಾಗದಲ್ಲಿ ದಬ್ ಎಂದು ಬಿದ್ದುಬಿಟ್ಟ, ಚಿಕಿತ್ಸೆ ಮಾಡುತ್ತಿದ್ದುದನ್ನು ನೋಡುವುದರಲ್ಲಿ ಮುಳುಗಿ ಹೋಗಿದ್ದ ಜನರೆಲ್ಲ ಈ ಲೋಕಕ್ಕೆ ಬಂದು, ಒಳಗಿನಿಂದ ನೀರು ತಂದು ಕೃಷ್ಣನ ಮುಖಕ್ಕೆ ಚಿಮುಕಿಸಿ, ಕಟ್ಟೆಯ ಮೇಲೆ ಎಳೆದು ಮಲಗಿಸಿದರು. ಐದು ನಿಮಿಷದಲ್ಲಿ ಸುಧಾರಿಸಿಕೊಂಡ ಕೃಷ್ಣ ಸುತ್ತಮುತ್ತಲಿನವರೆಲ್ಲ ಕೆಮ್ಮುವಂತೆ ಬೀಡಿ ಸೇದತೊಡಗಿದ.

ಇದನ್ನೂ ಓದಿ | ಹೊಸ ಪುಸ್ತಕ | ಕಥೆಗಳು ಇರುತ್ತವೆ ಕಾಣಬೇಕಷ್ಟೆ

ನಾನು ಮತ್ತೆ ಚಿಕಿತ್ಸೆಯನ್ನು ಮುಂದುವರಿಸಿ ಗಾಯಕ್ಕೆ ಔಷಧ ಮತ್ತು ಬೇವಿನ ಎಣ್ಣೆಯನ್ನು ಸುರಿದೆ. ಅವಶ್ಯವಿದ್ದ ಇಂಜೆಕ್ಷನ್‌ಗಳನ್ನು ಮಾಡಿದ ನಂತರ ಎಮ್ಮೆಯ ಕಾಲು ಬಿಚ್ಚಿದೆವು. ಎಮ್ಮೆಯನ್ನು ಬೀಳಿಸಲು ಹೋಗಿ ತಾನೇ ಬಿದ್ದು ಮಂಡಿ ಮತ್ತು ತೊಡೆಗಳಲ್ಲಿ ತರಚು ಗಾಯಗಳಾಗಿದ್ದ ಮಾಯಣ್ಣ ನನ್ನ ಬ್ಯಾಗಿನಲ್ಲಿದ್ದ ಟಿಂಚರನ್ನೆ ಹಚ್ಚಿಕೊಂಡು ಸ್ವಯಂವೈದ್ಯ ಮಾಡಿಕೊಳ್ಳತೊಡಗಿದ. ಟಿಂಚರ್ ಗಾಯಕ್ಕೆ ಬಿದ್ದ ಕೂಡಲೆ ಉರಿಗೆ ʻಯವ್ವಯಪ್ಪ’ ಎನ್ನತೊಡಗಿದ. ಇದನ್ನು ನೋಡಿ ಕಪಿನಪ್ಪ ‘ಈ ಲೌಡಿ ಮಗನಿಗೆ ಎಮ್ಮೆವೆ ಎಲ್ಡು ಇಂಜೆಕ್ಷನ್ ದಳೀರಿ ಸಾರ್’ ಎಂದ. ಆಗ ಹಿತ್ತಲಿನಲ್ಲಿ ದೊಡ್ಡ ನಗೆಯೊಂದು ಸ್ಪೋಟಗೊಂಡು ಸುತ್ತ ಕವಿದಿದ್ದ ಕತ್ತಲೆಯ ಮೌನದಲ್ಲಿ ಕರಗಿಹೋಯಿತು.

ಹಿತ್ತಲಲ್ಲಿ ನೆರೆದಿದ್ದ ಎಲ್ಲರೂ ಒಬ್ಬೊಬ್ಬರೇ ಹೊರಟರು. ಹೋಗುವಾಗ ಕೆಲವರು ನನ್ನ ಕಡೆ ತಿರುಗಿ ʻಬಾಳ ಪುಣ್ಯದ ಕೆಲಸ ಸಾರ್ ನಿಮ್ಮದು’ ʻಬರ್ರಿ ಸಾರ್, ನಮ್ಮನೆಗೆ ಊಟಕ್ಕೋಗಣ’ ಇತ್ಯಾದಿ ಹೇಳುತ್ತ ಮರೆಯಾದರು. ಮೂರ್ನಾಲ್ಕು ಸಲ ಸೋಪು ಹಾಕಿಕೊಂಡು ಕೈಕಾಲು ಮುಖ ತೊಳೆದುಕೊಂಡೆ. ಚಳಿಯಲ್ಲಿ ಬಿಸಿನೀರಿನ ಸ್ಪರ್ಶ ಆಹ್ಲಾದಕರವಾಗಿತ್ತು. ಚಿಕಿತ್ಸೆ ಪ್ರಾರಂಭಿಸಿದಾಗ ಸಿಟ್ಟೇರಿದ್ದ ನನಗೆ ನಿಧಾನಕ್ಕೆ ಶಾಂತಿ ಸಮಾಧಾನಗಳು ಎಲ್ಲಿಂದಲೋ ಅಂತರಾಳಕ್ಕಿಳಿದಿದ್ದವು. ಕ್ಷುದ್ರತೆ ಕರಗಿ ನಿರುಮ್ಮಳತೆ ತುಂಬಿ ಹಗುರಾಗಿದ್ದೆ. ʻಬನ್ನಿ ಸಾರ್’ ಎಂದು ಕಪಿನಪ್ಪ ನನ್ನ ಕೈ ಹಿಡಿದುಕೊಂಡು ಮನೆಯೊಳಗೆ ಕರೆತಂದಾಗ ಎಂಟು ಗಂಟೆಯಾಗಿತ್ತು. ಜಾಸ್ತಿ ಸಕ್ಕರೆ ಹಾಕಿ ಕಾಫಿ ಮಾಡಲು ಹೆಂಡತಿಗೆ ಆದೇಶಿಸಿದ. ಕಪಿನಪ್ಪನ ವಾಲಾಟ ಮತ್ತು ತೊದಲು ಹತ್ತು ಪರ್ಸೆಂಟು ಮಾತ್ರ ಕಡಿಮೆಯಾಗಿದ್ದವು.

ಕಪಿನಪ್ಪ ಅಲ್ಲೆ ಇದ್ದ ತನ್ನ ಮಕ್ಕಳನ್ನು ತೋರಿಸಿ ಪರಿಚಯಿಸಿದ. ಒಬ್ಬ ಮಗ ಮತ್ತು ಮಗಳು ತುರುವೇಕೆರೆಯಲ್ಲಿ ಬಿಎ ಓದುತ್ತಿರುವುದು ಗೊತ್ತಾಯಿತು. ಗಂಡು ಹೆಣ್ಣು ಎಲ್ಲ ಸೇರಿ ಕಪಿನಪ್ಪನಿಗೆ ಆರು ಜನ ಮಕ್ಕಳಿದ್ದರು. ಕಪಿನಪ್ಪನ ಕೈಹಿಡಿದುಕೊಂಡು ಪಟಾಕಿ ಸಿಡಿದಂತೆ ಮಾತಾಡುತ್ತಿದ್ದ ಹುಡುಗ ಕಪಿನಪ್ಪನ ಕೊನೆಯ ಮಗನಾಗಿದ್ದ. ಪದವಿ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಮಕ್ಕಳ ಜೊತೆ ಇಷ್ಟು ಸಣ್ಣ ಮಗನಿರುವ ಬಗ್ಗೆ ಸೋಜಿಗಪಡುತ್ತ ಕುಳಿತೆ. ಮಕ್ಕಳೆಲ್ಲ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದರೂ ಸಹ ಮನೆಯ ಯಜಮಾನ ಎಲ್ಲರೆದುರು ವಾಲಾಡುತ್ತಿದ್ದುದರಿಂದ ಮುಜುಗರ ಹಾಗೂ ಸಂಕೋಚಕ್ಕೊಳಗಾಗಿ ಮುಖ ಕೊಟ್ಟು ಮಾತಾಡುತ್ತಿರಲಿಲ್ಲ. ಮನೆಯ ಒಟ್ಟೂ ವಾತಾವರಣ ಖಾಲಿಖಾಲಿಯಾಗಿದ್ದು ಆರ್ಥಿಕ ಸ್ಥಿತಿ ಎಕ್ಕುಟ್ಟು ಹೋಗಿರುವುದು ಗೋಚರಿಸುತ್ತಿತ್ತು.

ಅಷ್ಟು ಹೊತ್ತಿಗೆ ಕಪಿನಪ್ಪನ ಹೆಂಡತಿ ಕಾಫಿ ಹಿಡಿದು ಬಂದಳು. ವಯಸ್ಸಿನಲ್ಲಿ ಕಪಿನಪ್ಪನಿಗೂ ಅವನ ಹೆಂಡತಿಗೂ ತಾಳಮೇಳ ಇರದಷ್ಟು ಚಿಕ್ಕವಳಾಗಿದ್ದಳು. ಈ ವಯಸ್ಸಿಗೆ ಈಕೆಗೆ ಇಷ್ಟು ದೊಡ್ಡ ಮಕ್ಕಳಿರುವುದು ಸಾಧ್ಯವೇ ಎಂದು ಅಚ್ಚರಿಯಾಯಿತು. “ಇವಳು ನನ್ನ ಎರಡನೇ ಹೆಂಡತಿ ಸಾರ್” ಎಂದು ಕಪಿನಪ್ಪ ಮಾತಿಗೆ ಸುರು ಹಚ್ಚಿಕೊಂಡ. ಪಾಪ! ಆಕೆ ಒಂದು ಕ್ಷಣವೂ ಅಲ್ಲಿ ನಿಲ್ಲದೆ ಒಳಕ್ಕೆ ಓಡಿದಳು. ಇಷ್ಟು ಸಣ್ಣ ವಯಸ್ಸಿನವಳನ್ನು ಕಪಿನಪ್ಪ ಯಾಕೆ ಮದುವೆಯಾದನೋ ಅನಿಸಿತು. ನಾನು ಬಾಯ್ಬಿಟ್ಟು ಏನೂ ಹೇಳಲಿಲ್ಲ. ದೊಡ್ಡ ಮಕ್ಕಳು ಮೊದಲ ಹೆಂಡತಿಯ ಮಕ್ಕಳು ಹಾಗೂ ಚಿಕ್ಕವು ಎರಡನೆ ಹೆಂಡತಿಯ ಮಕ್ಕಳಿರಬಹುದೆಂದುಕೊಂಡೆ.

‘ನನ್ನಜ್ಜ ಎರಡು ಮದುವೆ ಆಗಿದ್ದ ಸಾರ್’ ಎಂದ ಕಪಿನಪ್ಪ. ನಾನು ಸುಮ್ಮನಿದ್ದೆ.

‘ನಮ್ಮಪ್ಪನೂ ಅಷ್ಟೆ, ಎರಡು ಮದುವೆ ಮಾಡ್ಕಂಡಿದ್ದ’ ಎಂದ. ನಾನು ಉತ್ತರಿಸುವುದೇನೂ ಇರಲಿಲ್ಲ.

‘ನಮಣ್ಣನೂ ಎರಡು ಮದುವೆ ಮಾಡ್ಕಂಡಿದಾನೆ ಸಾರ್, ಪಕ್ಕದ್ಮನೇಲವನೆ, ಬೇಕಿದ್ರೆ ನೋಡ್ಕಂಡು ಬನ್ನಿ, ಕುಡುದ್ಮೇಲೆ ನಾನು ಸುಳ್ಳೇಳಕಿಲ್ಲ ಸಾರ್’ ಎಂದ. ನಾನು ಸುಮ್ಮನಿದ್ದೆ. ಇದೆಲ್ಲ ಯಾಕೆ ಹೇಳುತ್ತಿದ್ದಾನೋ ಎಂಬುದು ಗೊತ್ತಾಗಲಿಲ್ಲ.

ಕಪಿನಪ್ಪ ಮುಂದುವರಿದು, “ನಾನೆರಡು ಮದುವೆ ಆಗಿದಿನಿ ಅಂತ ಬೈಯ್ಕೊಬೇಡಿ. ನಂದೇನು ತಪ್ಪಿಲ್ಲ ಸಾರ್, ಅದ್ಯಾರೋ ಮೆಂಡ್ಲ ಎಂಬ ಇಜ್ಞಾನಿ ಎಲ್ಲ ಹೇಳವುನಂತಲ್ಲ, ಗುಣಗಳು ಅಪ್ನಿಂದ ಮಕ್ಕಿಗೆ ಬರ್ತವೆ ಮಕ್ಕಿಂದ ಮೊಮ್ಮಕ್ಕಿಗೆ ಬರ್ತವೆ ಅಂತ. ಹೆರ್ಡಿಟಿ ಸಾರ್, ಹೆರ್ಡಿಟಿ ಬಾಳ ಡೇಂಜರ್ ಸಾರ್, ಅದಕ್ಕೆ ನನಗೆ ಎರಡು ಮದುವೆ,” ಬಹಳ ಗಂಭೀರವಾಗಿ ನುಡಿದು ಅರ್ಧ ಬೀಡಿ ಸುಟ್ಟುಹೋಗುವಂತೆ ಸುದೀರ್ಘವಾದ ಧಮ್ ಎಳೆದು ಹೊಗೆ ಬಿಟ್ಟ.

ನಾನು ಥಂಡಾ ಹೊಡೆದು ಹೊದೆ. ʻಜಾನ್ ಗ್ರೆಗರ್ ಮೆಂಡಲ್’ ಕಪಿನಪ್ಪನ ಬಾಯಲ್ಲಿ ‘ಮೆಂಡ್ಲ’ ಎಂಬುದಾಗಿ ಪ್ರತ್ಯಕ್ಷನಾಗಿದ್ದ, ಮೆಂಡಲನ ಅನುವಂಶೀಯತೆಯ ನಿಯಮಗಳಿಗೆ ಬರಬಾರದ ಸ್ಥಿತಿ ಬಂದಿತ್ತು. ಪದವಿ ತರಗತಿಯಲ್ಲಿ ಓದುತ್ತಿದ್ದ ಕಪಿನಪ್ಪನ ಮಕ್ಕಳು ಬಿಟ್ಟ ಬಾಯಿ ಬಿಟ್ಟಂತೆ ಒಬ್ಬರ ಮುಖವನ್ನೊಬ್ಬರು ನೋಡಿಕೊಂಡರು. ಜಗತ್ತಿನಲ್ಲಿ ಯಾರಾದರೂ ಮೆಂಡಲ್‌ನನ್ನು ಈ ರೀತಿ ಅರ್ಥೈಸಿಕೊಂಡಿರಬಹುದೇ ಎಂದು ಯೋಚಿಸುತ್ತ ಮೆಟ್ಟಿಲಿಳಿದು ಬೈಕಿನ ಬಳಿ ಬಂದೆ.

ಹಿಂದಿಂದೆ ಕಪಿನಪ್ಪನೂ ಬಂದ. ʻಬೇಜಾರಾಗಬೇಡಿ ಸಾರ್ ಬಾಳಾ ಕುಡ್ದಿದೀನಿ’ ಎಂದ. ಇನ್ನೂ ವಾಲಾಟ ಮತ್ತು ತೊದಲು ಹೋಗಿರಲಿಲ್ಲ. ಕಪಿನಪ್ಪ ಇದ್ದಕ್ಕಿದ್ದಂತೆ ಭಾವುಕನಾಗಿಬಿಟ್ಟ. ಕಪಿನಪ್ಪನ ಕಣ್ಣು ತುಂಬಿ ಬಂದವು. ʻಇರ್ಲಿ ಬಿಡು ಕಪಿನಪ್ಪ, ಪರ್ವಾಗಿಲ್ಲ’ ಎಂದು ಕಪಿನಪ್ಪನ ಹೆಗಲ ಮೇಲೆ ಕೈಯಿಟ್ಟು ಹೇಳಿದೆ. ಸ್ವಲ್ಪ ಸುಧಾರಿಸಿಕೊಳ್ಳಲಿ ಎಂದು ಒಂದೆರಡು ನಿಮಿಷ ಸುಮ್ಮನೆ ನಿಂತೆ. ಕಪಿನಪ್ಪ ಮಕ್ಕಳ ತರ ಅಂಗಿಯ ತೋಳಿನಲ್ಲಿ ಕಣ್ಣೀರು ಒರೆಸಿಕೊಂಡ. “ನಾನು ಕುಡಿತ ಬಿಟ್ಬಿಡೋಕೆ ಬಹಳ ಪ್ರಯತ್ನಪಟ್ಟೆ ಸಾರ್. ನಮ್ಮ ವಂಶದಲ್ಲಿ ಕುಡೀದೆ ಇರೋವು ಒಬ್ನೂ ಇಲ್ಲ. ಬಿಡಕಾಯ್ತಿಲ್ಲ. ಹೆರ್ಡಿಟಿ ಕಾಟ ಸಾರ್,” ಎಂದು ನಿಟ್ಟುಸಿರುಬಿಟ್ಟ.

ನನಗೆ ಏನು ಹೇಳಲೂ ತೋಚಲಿಲ್ಲ. ಫುಲ್ ಚಾರ್ಜಾಗಿದ್ದ ಕಪಿನಪ್ಪನಿಗೆ ಏನು ಹೇಳಿದರೂ ಪ್ರಯೋಜನವಿರಲಿಲ್ಲ. “ನಾನಿನ್ನು ಬರ್ತೀನಿ ಕಪಿನಪ್ಪ, ಈಗಾಗ್ಲೆ ಲೇಟಾಗಿದೆ. ಮತ್ತೆ ಸಿಗ್ತಿನಿ,” ಎಂದು ಹೇಳುತ್ತ ಬೈಕ್ ಹತ್ತಿದೆ. ಕಪಿನಪ್ಪನ ಕಣ್ಣೀರಿಗೆ ಕಾರಣಗಳು ಸರಳ ಎಂದು ನನಗನ್ನಿಸಲಿಲ್ಲ.

ದೀಪಗಳು ಮತ್ತು ಮೇಲೆ ಶುಭ್ರ ಆಕಾಶದಲ್ಲಿ ಮಿನುಗುತ್ತಿದ್ದ ನಕ್ಷತ್ರಗಳು ಆಲ್ಲೂರು ಕೆರೆಯೇರಿಯ ಮೇಲೆ ಹೋಗುತ್ತ ಸುದೂರದಲ್ಲಿ ಊರಿನ ಮಾಯಾಲೋಕವನ್ನು ಸೃಷ್ಟಿಸಿದ್ದವು. ಆ ಮಾಯಾಲೋಕದಲ್ಲಿ ಬೈಕು ಓಡುತ್ತಿತ್ತು. ನನ್ನ ಮನಸ್ಸು ಕಪಿನಪ್ಪ ಮತ್ತು ಅವನ ಹೆಂಡತಿ ಮಕ್ಕಳ ಬಗ್ಗೆ ಕಸಿವಿಸಿಯಿಂದ ಕೂಡಿತ್ತು.

ಕೃತಿ: ಗಂಗೆ ಬಾರೆ ಗೌರಿ ಬಾರೆ (ಇದು ಪಶುವೈದ್ಯನ ಮನಕಲಕುವ ದಿನಚರಿ)
ಲೇಖಕ: ಮಿರ್ಜಾ ಬಷೀರ್‌
ಪ್ರಕಾಶಕರು: ಬಹುರೂಪಿ ಪ್ರಕಾಶನ
ಬೆಲೆ: 300 ರೂ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Bengaluru News: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ.ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

7 books release programme on May 19 in Bengaluru
Koo

ಬೆಂಗಳೂರು: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ (Bengaluru News) ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ.

ಇದನ್ನೂ ಓದಿ: SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ. ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

ವೀರಕಪುತ್ರ ಆಶಯನುಡಿಗಳನ್ನಾಡಲಿದ್ದಾರೆ. ಶೋಭಾ ರಾವ್‌ ಮತ್ತು ಅನಂತ ಕುಣಿಗಲ್‌ ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.

ಇದನ್ನೂ ಓದಿ: Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಲೋಕಾರ್ಪಣೆಗೊಳ್ಳಲಿರುವ ಕೃತಿಗಳು ಹಾಗೂ ಕೃತಿಕಾರರ ವಿವರ

ಡಾ. ಲಕ್ಷ್ಮಣಕೌಂಟೆ ಅವರ ಮಹಾವಿನಾಶ (ಕಾದಂಬರಿ), ಕೌಂಡಿನ್ಯ ಅವರ ಬೆಳವಡಿ ಮಲ್ಲಮ್ಮ (ಕಾದಂಬರಿ), ರಾಘವೇಂದ್ರ ಪ್ರಭು ಎಂ. ಅವರ ಬಹುತ್ವ ಭಾರತ ಕಟ್ಟಿದವರು (ಬದುಕು ಬರಹಗಳು), ವಿ. ಗೋಪಕುಮಾರ್‌ ಅವರ ಕಗ್ಗಕ್ಕೊಂದು ನ್ಯಾನೋ ಕಥೆ (ನ್ಯಾನೋ ಕತೆಗಳು), ಗೀತಾ ದೊಡ್ಮನೆ ಅವರ ನೀಲಿ ಶಾಯಿಯ ಕಡಲು (ಕವಿತೆಗಳು), ಮೇದಿನಿ ಕೆಸವಿನಮನೆ ಅವರ ಮಿಸ್ಸಿನ ಡೈರಿ (ಅನುಭವ ಕಥನ), ಪಾರ್ವತಿ ಪಿಟಗಿ ಅವರ ಪುನರುತ್ಥಾನ (ಕಾದಂಬರಿ) ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಕಲೆ/ಸಾಹಿತ್ಯ

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

ಸಂಸ್ಕೃತಿಗಳ ಗಮನಾರ್ಹ ಸಮ್ಮಿಲನದ ಕುರಿತಾಗಿ ಇಟಾಲಿಯನ್- ಬ್ರಿಟಿಷ್ ಪ್ರಜೆ ಗಿನೋ ಡಿ ಕ್ಲೆಮೆಂಟೆ ಅವರು ಸಂಪಾದಿಸಿ ಬರೆದಿರುವ ಕೃತಿಯನ್ನು ಕೇರಳದ ಎರ್ನಾಕುಲಂನಲ್ಲಿರುವ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು (Konkani Book Release ) ಬಿಡುಗಡೆಗೊಳಿಸಿದರು. ಕರಾವಳಿಯಲ್ಲಿ ಕೊಂಕಣಿ ಮಾತನಾಡುವ ಜಿಎಸ್‌ಬಿ ಸಮುದಾಯದವರು ಸಾಕಷ್ಟು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಇದೊಂದು ಅಪೂರ್ವ ಕೃತಿಯಾಗಿದೆ.

VISTARANEWS.COM


on

By

Konkani Book Release
Koo

ಮಂಗಳೂರು: ಇಟಾಲಿಯನ್- ಬ್ರಿಟಿಷ್ ಲೇಖಕ (Italian-born British citizen) ಗಿನೋ ಡಿ’ಕ್ಲೆಮೆಂಟೆ ಅವರು ಸಂಪಾದಿಸಿದ ಕೃತಿ ”ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ’ ಕೃತಿಯನ್ನು (Konkani Book Release) ಕೇರಳದ (kerala) ಎರ್ನಾಕುಲಂನಲ್ಲಿರುವ (Ernakulam) ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು (Samyameendra Thirtha Swamiji ) ಬಿಡುಗಡೆಗೊಳಿಸಿದರು.

ಸಂಸ್ಕೃತಿಗಳ ಗಮನಾರ್ಹ ಸಮ್ಮಿಲನದ ಕುರಿತಾಗಿ ಇಟಾಲಿಯನ್-ಬ್ರಿಟಿಷ್ ಪ್ರಜೆ ಗಿನೋ ಡಿ ಕ್ಲೆಮೆಂಟೆ ಅವರು ಸಂಪಾದಿಸಿ ಬರೆದಿರುವ ಸಂವಾದಾತ್ಮಕ ಜಿಎಸ್‌ಬಿ (ಗೌಡ ಸಾರಸ್ವತ ಬ್ರಾಹ್ಮಣ) ಕೊಂಕಣಿ ಕೃತಿಯನ್ನು ಆಳವಾಗಿ ಅಧ್ಯಯನ ನಡೆಸಿ ರಚಿಸಿದ್ದಾರೆ.

ಕೇರಳದ ಎರ್ನಾಕುಲಂನಲ್ಲಿರುವ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಪ್ರತಿಷ್ಠಿತ ದಿಗ್ವಿಜಯ್ ಮಹೋತ್ಸವದಲ್ಲಿ ಅನಾವರಣಗೊಂಡ ಈ ಮಾರ್ಗದರ್ಶಿ ಕೃತಿ ಶ್ರೀಮಂತ ಭಾರತೀಯ ಭಾಷೆಯ ಸಂರಕ್ಷಣೆ ಮತ್ತು ಪ್ರಚಾರದಲ್ಲಿ ಮಹತ್ವದ ಮೈಲುಗಲ್ಲನ್ನು ಗುರುತಿಸುತ್ತದೆ.


Gino’s Guide for Conversational GSB Konkani ಕೃತಿಯು ಜಿ ಎಸ್ ಬಿ ಸಮುದಾಯದ ಪರಂಪರೆಯನ್ನು ಪೋಷಿಸುವ ಸಮರ್ಪಿತ ಸಂಸ್ಥೆಯಾದ ಜಿಎಸ್ ಬಿ ವರ್ಲ್ಡ್‌ವೈಡ್‌ನ ಯುವಜನರಿಂದ ಸುಗಮಗೊಳಿಸಲ್ಪಟ್ಟ ಅಡ್ಡ-ಸಾಂಸ್ಕೃತಿಕ ತಿಳುವಳಿಕೆ ಮತ್ತು ಭಾಷಾ ಸಂರಕ್ಷಣೆಗೆ ಅಸಾಧಾರಣ ಬದ್ಧತೆಯನ್ನು ಪ್ರತಿನಿಧಿಸುತ್ತದೆ.

ಕೃತಿಯ ಕುರಿತು ಮಾತನಾಡಿದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ, ಇದು ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಸಮುದಾಯಗಳ ಮೇಲೆ ಬೀರುವ ಮಹತ್ವದ ಪರಿಣಾಮವನ್ನು ಒತ್ತಿ ಹೇಳುತ್ತದೆ ಎಂದರು.

ಗಿನೋ ಡಿ ಕ್ಲೆಮೆಂಟೆ ಅವರ ಕೆಲಸವು ಸಮರ್ಪಣಾ ಶಕ್ತಿ ಮತ್ತು ಸಾಂಸ್ಕೃತಿಕ ಮೆಚ್ಚುಗೆಗೆ ಸಾಕ್ಷಿಯಾಗಿದೆ. ನಮ್ಮ ಸಮುದಾಯದ ಹೊರಗಿನವರಿಂದ ಅಂತಹ ಆಳವಾದ ತೊಡಗಿಸಿಕೊಳ್ಳುವಿಕೆಯನ್ನು ನೋಡುವುದು ಅಪರೂಪ. ಈ ಮಾರ್ಗದರ್ಶಿ ನಮ್ಮ ಭಾಷಾ ಸಂರಕ್ಷಣೆಯ ಪ್ರಯತ್ನಗಳಲ್ಲಿ ಒಂದು ಸ್ಮಾರಕ ಸಾಧನೆಯಾಗಿದೆ ಎಂದು ಹೇಳಿದರು.

ಮಾರ್ಗದರ್ಶಿಯು ದೈನಂದಿನ ಸಂಭಾಷಣೆಗಳಿಗೆ ಪ್ರಾಯೋಗಿಕ ನುಡಿಗಟ್ಟುಗಳು ಮತ್ತು ಉದಾಹರಣೆಗಳೊಂದಿಗೆ ಉಚ್ಚಾರಣೆ, ವ್ಯಾಕರಣ ಮತ್ತು ಶಬ್ದಕೋಶದ ವಿವರವಾದ ಅವಲೋಕನವನ್ನು ನೀಡುತ್ತದೆ. ಇದು ಆರಂಭಿಕ ಮತ್ತು ಮುಂದುವರಿದ ಕಲಿಯುವವರಿಬ್ಬರನ್ನೂ ಪೂರೈಸುತ್ತದೆ, ಜಿಎಸ್ ಬಿ ಕೊಂಕಣಿಯನ್ನು ಕರಗತ ಮಾಡಿಕೊಳ್ಳಲು ಉತ್ಸುಕರಾಗಿರುವ ಯಾರಿಗಾದರೂ ಇದೊಂದು ಬಹುಮುಖ್ಯ ಸಂಪನ್ಮೂಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ಲೇಖಕರ ಹಿನ್ನೆಲೆ ಏನು?

ಜಿನೋ ಡಿ ಕ್ಲೆಮೆಂಟೆ ಮೂಲತಃ ಇಟಲಿಯವರಾಗಿದ್ದು, ಈಗ ಬ್ರಿಟಿಷ್ ಪ್ರಜೆಯಾಗಿದ್ದಾರೆ. ಮದುವೆಯ ಮೂಲಕ ಜಿ ಎಸ್ ಬಿ ಸಂಸ್ಕೃತಿಗೆ ಆಳವಾದ ವೈಯಕ್ತಿಕ ಸಂಪರ್ಕವನ್ನು ಹೊಂದಿದ್ದಾರೆ. ಅವರ ಸಂಗಾತಿಯು ಕರ್ನಾಟಕದ ಕಾರ್ಕಳ ತಾಲೂಕಿನ ಮೂಲದವರಾಗಿದ್ದಾರೆ. ಈ ಕೌಟುಂಬಿಕ ಬಂಧವು ಜಿನೋ ಅವರ ಜಿಎಸ್‌ಬಿ ಕೊಂಕಣಿಯ ತಲ್ಲೀನಗೊಳಿಸುವ ಅಧ್ಯಯನಕ್ಕೆ ಪ್ರೇರೇಪಿಸಿತು. ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅವರ ಉತ್ಸಾಹವು ಈ ಸಮಗ್ರ ಮಾರ್ಗದರ್ಶಿಯಲ್ಲಿ ಉತ್ತುಂಗಕ್ಕೇರಿತು. ಭಾರತೀಯ ಭಾಷೆಗಳ ದಾಖಲೀಕರಣ ಮತ್ತು ಪ್ರಚಾರಕ್ಕೆ ಮಹತ್ವದ ಕೊಡುಗೆಯನ್ನು ನೀಡಿದೆ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

ಧವಳ ಧಾರಿಣಿ ಅಂಕಣ: ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು.

VISTARANEWS.COM


on

king dasharatha dhavala dharini
Koo

ಕರ್ಮಫಲವನ್ನು ತಾನೇ ಅರಿತು ಅನುಭವಿಸಿದ ಸೂರ್ಯವಂಶದ ಮಹಾನ್ ಚಕ್ರವರ್ತಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕವೆನ್ನುವುದು ದಶರಥನಿಗೆ ಮಹಾನ್ ಸಂಕಲ್ಪವಾಗಿತ್ತು. ಅದಕ್ಕಾಗಿಯೇ ಆತ ಏನೆಲ್ಲ ಕಸರತ್ತನ್ನು ಮಾಡಿದ್ದ ಎನ್ನುವುದನ್ನು ನೋಡಿದ್ದೇವೆ.

ಕೈಕೇಯಿ ಮಂಥರೆಯ ದುರ್ಬೋಧನೆಯಿಂದ ಎಷ್ಟರಮಟ್ಟಿಗೆ ಪ್ರಭಾವಿತಳಾಗಿದ್ದಳೆಂದರೆ ಅರಸನ ಯಾವ ಒದ್ದಾಟವೂ ಅವಳನ್ನು ಕರಗಿಸಲಿಲ್ಲ. ರಾಮನನ್ನು ಬಿಟ್ಟರೆ ತಾನು ಬದುಕಿರಲಾರೆ ಎನ್ನುವ ಮಾತುಗಳು ಕಾದ ಮರಳಲ್ಲಿ ಬಿದ್ದ ನೀರಿನಂತೆಯೇ ಇಂಗಿಹೋಯಿತು. ಕೈಕೇಯಿ ತಿರುಗಿ ರಾಜನಿಗೆ ಧರ್ಮೋಪದೇಶ ಮಾಡುತ್ತಾಳೆ. ಶೈಭ್ಯ, ಅಲರ್ಕ ಮೊದಲಾದ ರಾಜರ್ಷಿಗಳು ಪ್ರತಿಜ್ಞಾಬದ್ಧರಾಗಿ ತಮ್ಮ ತಮ್ಮ ಜೀವವನ್ನೇ ಒತ್ತೆಯಾಗಿರಿಸಿದ ಸಂಗತಿಯನ್ನು ಹೇಳುತ್ತಾ ಪರೋಕ್ಷವಾಗಿ ದೊರೆಯ ಸಾವಿನ ಕುರಿತು ತಾನು ಅಂಜುವವಳಲ್ಲ ಎನ್ನುತ್ತಾಳೆ. ಅವಳಿಗೆ ತನ್ನ ಮಗ ಭರತ ಪಟ್ಟಕ್ಕೇರಲೇ ಬೇಕಾಗಿದೆ. ಆಕೆ ಕೌಸಲ್ಯೆಯನ್ನು ಎಷ್ಟರಮಟ್ಟಿಗೆ ದ್ವೇಷಿಸುತ್ತಿದಳೆಂದರೆ “ರಾಮ ಪಟ್ಟಾಭಿಷೇಕವಾದೊಡನೆಯೇ ರಾಜಮಾತೆಯಾಗಿ ಸಕಲಪ್ರಜೆಗಳಿಂದ ಗೌರವವನ್ನು ಸ್ವೀಕರಿಸುವ ಕೌಸಲ್ಯೆಯನ್ನು ತಾನು ಒಂದು ದಿನವೂ ನೋಡಿಸಹಿಸಲಾರೆ ಎನ್ನುತ್ತಾಳೆ. ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿ ಕೌಸಲ್ಯೆಯೊಂದಿಗೆ ನಿತ್ಯವೂ ರಮಿಸಲು ಇಚ್ಛಿಸುವ ನಿನ್ನ ಹುನ್ನಾರ ತನಗೆ ಗೊತ್ತು ಎಂದು ಜರಿಯುತ್ತಾಳೆ.

ದಶರಥನಿಗೆ ಮಾತು ಬಾರದಾಗಿದೆ. ಆತ ರಾಮನನ್ನು ಕಾಡಿಗೆ ಕಳುಹಿಸುವುದು ಬೇಡವೆಂದು ಬಗೆಬಗೆಯಲ್ಲಿ ಗೋಳಾಡುತ್ತಾನೆ. ಸ್ತ್ರೀಸುಖಕ್ಕೊಸ್ಕರವಾಗಿ ತನ್ನ ಪ್ರಿಯಸುತನನ್ನೇ ಅರಣ್ಯಕ್ಕೆ ಕಳುಹಿಸಿದ ತನ್ನನ್ನು ಅತಿಕಾಮಿಯೆಂದು ಪುರಜನರು ಆಡಿಕೊಳ್ಳುವರು, ಆ ಅಪವಾದ ಬರುತ್ತದೆಯೆಂದು ಗೋಗೆರೆಯುತ್ತಾನೆ. “ಹೆಂಗಸರೆಲ್ಲ ಮೋಸಗಾರರು, ಸ್ವಾರ್ಥಪರಾಯಣರು ಎಂದು ಉದ್ವೇಗದಿಂದ ಕೂಗಾಡುತ್ತಾನೆ. ಬಹುಶಃ ಆಗ ಆತನಿಗೆ ತನ್ನ ಹಿರಿಯ ಹೆಂಡತಿಯರಾದ ಕೌಸಲ್ಯೆ ಮತ್ತು ಸುಮಿತ್ರೆಯರ ನೆನಪಾಗಿರಬೇಕು. ಇಲ್ಲ, ಪ್ರಪಂಚದಲ್ಲಿ ಎಲ್ಲಾ ಹೆಂಗಸರೂ ಹಾಗಿಲ್ಲ’ ಕೇವಲ ಭರತನ ತಾಯಿಗೆ ಮಾತ್ರ ತನ್ನ ಮಾತು ಅನ್ವಯಿಸುತ್ತದೆ ಎಂದು ಕೂಗಾಡುತ್ತಾನೆ. ರಾಮನನ್ನು ಅರಣ್ಯಕ್ಕೆ ಕಳುಹಿಸುವ ಒಂದು ಮಾತನ್ನು ಬಿಟ್ಟು ಬೇರೆ ಏನನ್ನಾದರೂ ಕೇಳು ಎನ್ನುವ ಮಾತುಗಳು ಕೈಕೇಯಿಯ ಮೇಲೆ ಪರಿಣಾಮ ಬೀರದಿದ್ದಾಗ ಕೊನೆಯ ಅಸ್ತ್ರವೆನ್ನುವಂತೆ ದಶರಥ ಲೋಕಮರ್ಯಾದೆಯನ್ನು ಮೀರಿ ಅನಾಥನಂತೆ ಗೋಳಾಡುತ್ತಾ ಆಕೆಯ ಕಾಲಿಗೆ ನಮಸ್ಕರಿಸಲು ಹೋಗುತ್ತಾನೆ. ಆಗ ಕೈಕೇಯಿ ತಿರಸ್ಕಾರದಿಂದ ತನ್ನ ಕಾಲನ್ನು ದೂರಕ್ಕೆ ಚಾಚಿದುದರಿಂದ ಅವೂ ಆತನಿಗೆ ಸಿಕ್ಕದೇ ರೋಗಿಯೊಬ್ಬ ತತ್ತರಿಸಿ ಬೀಳುವಂತೆ ನೆಲದಮೇಲೆ ಬೀಳುತ್ತಾನೆ. ಅವನ ಈ ಸ್ಥಿತಿಯನ್ನು ನೋಡಿದ ರಾಮಾಯಣದ ಕವಿ ವಾಲ್ಮೀಕಿಗೂ ದಶರಥನ ಮೇಲೆ ಹೇಸಿಗೆಯುಂತಾಗುತ್ತದೆ. ಚಕ್ರವರ್ತಿ ತನ್ನ ಘನತೆಯನ್ನು ಮರೆತು ಹೀಗೆ ಮಾಡಬಾರದಿತ್ತು ಎಂದು ಅಸಮಾಧಾನವನ್ನು ವ್ಯಕ್ತಪಡಿಸುತ್ತಾನೆ.

ಅತದರ್ಹಂ ಮಹಾರಾಜಂ ಶಯಾನಮತಥೋಚಿತಮ್.
ಯಯಾತಿಮಿವ ಪುಣ್ಯಾನ್ತೇ ದೇವಲೋಕಾತ್ಪರಿಚ್ಯುತಮ್৷৷ಅಯೋ. .13.1৷৷

ರಾಜಾಧಿರಾಜನಾದಂತಹ ದಶರಥನು ಕೈಕೇಯಿಯ ಪಾದಗಳ ಮೇಲೆ ಬೀಳಲು ಹೋಗಬಾರದಿತ್ತು(ಅತದರ್ಹಂ) ಎಂದು ಬಹಿರಂಗವಾಗಿಯೇ ಸಿಡಿಮಿಡಿಗೊಳ್ಳುತ್ತಾನೆ. ರಾಮಾಯಣದ ಈ ಸನ್ನಿವೇಶ ವಾಲ್ಮೀಕಿಯ ಕಣ್ಣಿಗೆ ಅಂಗೈಯಲ್ಲಿನ ನೆಲ್ಲಿಕಾಯಿಯಂತೆ ಸ್ಪಷ್ಟವಾಗಿ ಕಾಣುತ್ತಿದೆ. ನಿರುಧ್ವಿಘ್ನವಾಗಿ ಕಥೆಯನ್ನು ಹೇಳುತ್ತಾಹೋಗಬೇಕಾದ ಕವಿ ಸೀತೆಗೆ ತೊಂದರೆಯಾದ ಉತ್ಕಟಕ್ಷಣಗಳಲ್ಲಿ ರಸಭಾವವನ್ನು ಹತ್ತಿಕ್ಕಲಾರದೇ ತಾನೇ ಕಥೆಯೊಳಗೆ ಪ್ರವೇಶಿಸುವುದುಂಟು. ಆದರೆ ಇಲ್ಲಿ ಮಾತ್ರ ಆತನಿಗೆ ದಶರಥನ ಒಟ್ಟಾರೆಯ ವ್ಯವಹಾರವೇ ರೇಜಿಗೆ ಹುಟ್ಟಿಸಿದೆ. ಕೈಕೇಯಿಯನ್ನು ಇಕ್ಷಾಕುವಂಶಕ್ಕೇ ಅನರ್ಥಕಾರಿಣಿಯೆಂದು ತಿರಸ್ಕಾರದಿಂದ ಕವಿಹೇಳುತ್ತಾನೆ. ಸೂರ್ಯವಂಶದ ಪುಣ್ಯದ ಕಾರಣದಿಂದ ದಶರಥನಿಗೆ ಕೈಕೇಯಿಯ ಪಾದಗಳು ಸಿಗಲಿಲ್ಲ. ಎನ್ನುತ್ತಾನೆ. ಈ ಭಾಗವನ್ನು ದಶರಥವಿಲಾಪವೆನ್ನುವ ಹೆಸರಿನಿಂದ ಕರೆದರೂ ಇಲ್ಲಿ ಕಾಳಿದಾಸನ ಪ್ರಸಿದ್ಧಕಾವ್ಯ ರಘುವಂಶದ ಅಜವಿಲಾಪ ನೆನಪಿಗೆ ಬರುತ್ತದೆ. ರಘುವಂಶದಲ್ಲಿ ಅಜ ಮತ್ತು ಇಂದುಮತಿ ದಂಪತಿಗಳ ಪ್ರೇಮದ ವಿಷಯ ಪ್ರಸಿದ್ಧ. ದಿವ್ಯಪುಷ್ಪಮಾಲೆಯೊಂದು ಅಜನ ಪತ್ನಿ ಇಂದುಮತಿಯಮೇಲೆ ಬಿದ್ದಾಗ ಅವಳು ಮೃತಳಾಗುತ್ತಾಳೆ. ಆಗ ಅಜ ತನ್ನ ಪತ್ನಿಗಾಗಿ ಮಾಡುವ ದುಃಖವು ಅಜವಿಲಾಪವೆಂದೇ ಪ್ರಸಿದ್ಧಿಯಾಗಿದೆ. ಪತ್ನಿಯ ವಿರಹವನ್ನು ತಾಳಲಾರದೇ ಕುಗ್ಗಿ ಕುಗ್ಗಿ ಸಾಯುವ ಅಜನೂ ಸ್ತ್ರೀ ಕಾರಣದಿಂದ ಸಾಯುತ್ತಾನಾದರೂ ಅದು ಪ್ರೇಮಕಾವ್ಯದ ಉತ್ತುಂಗಗಳಲ್ಲೊಂದೆಂದು ಪರಿಗಳಿಸಲ್ಪಟ್ಟಿದೆ. ಅದರ ವಿರುದ್ಧವಾಗಿ ಅಜನ ಮಗನಾದ ದಶರಥನ ಒದ್ದಾಟವಿದೆ. ಅವನ ವಿಲಾಪಕ್ಕೆ ಸಹಾನುಭೂತಿಯನ್ನು ವ್ಯಕ್ತಪಡಿಸಲು ಯಾರೂ ಬರುವುದಿಲ್ಲ. ಅವನ ವಿಲಾಪಕ್ಕೆ ರಾತ್ರಿಯೇ ಹೆದರಿ ಓಡಿಹೋಯಿತು.

ಬೆಳಗಾದರೂ ದೊರೆ ಗೋಳಾಡುವುದನ್ನು ಬಿಟ್ಟು ರಾಮನನ್ನು ಪಟ್ಟಗಟ್ಟುವ ಯಾವ ಸೂಚನೆಯನ್ನೂ ನೀಡುವುದಿಲ್ಲ. ಎಲ್ಲಿಯಾದರೂ ಬೇರೆಯವರಿಗೆ ತಿಳಿದರೆ ತನ್ನ ಕೆಲಸ ಕೆಟ್ಟಿತೆನ್ನುವ ಚಿಂತೆ ಕೈಕೇಯಿಯಲ್ಲುಂಟಾಯಿತು. ರಾಜನನ್ನು ಧರ್ಮಪರಿಪಾಲನೆಯೆನ್ನುವ ಹಗ್ಗದಲ್ಲಿ ಕಟ್ಟಿಹಾಕಿದ್ದಳು.

ಸತ್ಯಮೇಕಪದಂ ಬ್ರಹ್ಮ ಸತೇ ಧರ್ಮಃ ಪ್ರತಿಷ್ಠಿತಃ
ಸತ್ಯಮೇವಾಕ್ಷಯಾ ವೇದಾಃ ಸತ್ಯೇನೈವಾಪ್ಯತೇ ಪರಮ್ II ಅಯೋ.14-7II

ಸತ್ಯವೆನ್ನುವುದೇ ಬ್ರಹ್ಮವಾಚಕವಾದ ಪ್ರಣವಸ್ವರೂಪವು. ಸತ್ಯದಲ್ಲಿಯೇ ಸಮಸ್ತ ಧರ್ಮಗಳೂ ಅಡಗಿರುವವು. ಕ್ಷಯವೃದ್ಧಿಗಳಿಲ್ಲದ ವೇದಗಳು ಸತ್ಯದ ಸ್ವರೂಪಗಳೇ ಆಗಿವೆ. ಪರಮೋತ್ಕ್ರಷ್ಟವಾದ ಲೋಕಗಳೂ ಸತ್ಯದ ಅವಲಂಬನೆಯಿಂದಲೇ ಲಭಿಸುತ್ತವೆ.

ಸಮಗ್ರವಾದ ಉಪನಿಷತ್ತಿನ ಸಾರವನ್ನು ಸಾರುವ ಈ ಮಾತು ಕೈಕೇಯಿಯಿಂದ ಬೇರೆ ಯಾವ ಸಂದರ್ಭದಲ್ಲಿಯಾದರೂ ಬಂದಿದ್ದರೆ ಆಕೆಯನ್ನು ಗಾರ್ಗಿ, ಲೋಪಾಮುದ್ರಾ ಮೊದಲಾದವರಸಾಲಿಗೆ ಸೇರಿಸಿಬಿಡುತ್ತಿದ್ದರೇನೋ. ಆಕೆಯ ತಂದೆ ಅಶ್ವಪತಿ ವೈಶ್ವಾನರ ವಿದ್ಯೆಯನ್ನು ಉದ್ಧಾಲಕನಿಗೆ ಕಲಿಸಿದ ಕುರಿತು “ಛಾಂದೋಗ್ಯ ಉಪನಿಷತ್ತಿನಲ್ಲಿ ಬರುತ್ತದೆ”. ರಾವಣನೂ ಸಹ ಎಲ್ಲಾ ವೇದಗಳನ್ನು ಓದಿಕೊಂಡಿದ್ದ. ಮೂಲತಃ ಸ್ವಭಾವದಲ್ಲಿ ಸಾತ್ವಿಕ ಗುಣಗಳಿಲ್ಲದಿದ್ದರೆ ಅವೆಲ್ಲವೂ ವ್ಯರ್ಥವಾಗುತ್ತದೆ. ಕೈಕೇಯಿಗಾಗಿರುವುದೂ ಅದೇ. ತನಗೆ ತಿಳಿದಿರುವ ಧರ್ಮಸೂತ್ರಗಳನ್ನು ತನ್ನ ಸ್ವಾಥಕ್ಕಾಗಿ ಬಳಸಿಕೊಳ್ಳುತ್ತಿದ್ದಾಳೆ. ಗಂಗಾನದಿಯೇ ಆದರೂ, ಬಚ್ಚಲುಮನೆಯಿಂದ ಹೊರಬಂದರೆ ಅದನ್ನು ಯಾರೂ ತೀರ್ಥವೆಂದು ಪರಿಗಣಿಸುವುದಿಲ್ಲ. ರಾಜನನ್ನು ಕರೆದೊಯ್ಯಲು ಸುಮಂತ್ರ ಕೈಕೇಯಿಯ ಅರಮನೆಗೆ ಬಂದಾಗ ಎಲ್ಲದರಲ್ಲಿಯೂ ಸೋತ ರಾಜನೇ “ರಾಮನನ್ನು ನೋಡಬೇಕೆಂದಿದ್ದೇನೆ, ಅವನನ್ನಿಲ್ಲಿಗೆ ಕರೆದುಕೊಂಡು ಬಾ” ಎನ್ನುತ್ತಾನೆ. ಆಗಲೆಂದು ಹೊರಟ ಸುಮಂತ್ರನಿಗೆ ಮನಸ್ಸಿನಲ್ಲಿ ಏನೋ ಒಂಡು ಸಂಶಯಕಾಡಿತು. ಸಭೆಗೆಬಂದವ ಅದಾಗಲೇ ಬಂದುಸೇರಿದ್ದ ಅರಸರ ವಿಷಯಗಳನ್ನು ತಿಳಿಸುವ ನೆವಮಾಡಿ ಮತ್ತೊಮ್ಮೆ ಕೈಕೇಯಿಯ ಅಂತಃಪುರಕ್ಕೆ ಬಂದ. ಕೈಕೇಯಿಗೆ ರಾಮನನ್ನು ಗುಪ್ತವಾಗಿ ಅರಣ್ಯಕ್ಕೆ ಕಳುಹಿಸಿ ಭರತನನ್ನು ಪಟ್ಟಾಭಿಷೇಕಕ್ಕೆ ಏರಿಸಬೇಕಿತ್ತು. ಚಾಣಾಕ್ಷಳಾಗಿದ್ದ ಆಕೆಗೆ ಈ ವಿಷಯ ಬಹಿರಂಗಕ್ಕೆ ಬಂದರೆ ಸಾಮಂತರೆಲ್ಲರೂ ತಿರುಗಿಬೀಳುವರು ಎನ್ನುವುದರ ಅರಿವಿತ್ತು. ಅದಕ್ಕಾಗಿಯೇ ಅವಳು ರಾಮ ತನ್ನ ಮನೆಗೇ ಬರಲಿ ಎಂದು ರಾಜನನ್ನು ಒತ್ತಾಯಿಸಿದಳು. ಎರಡನೆಯ ಸಾರಿ ಸುಮಂತ ಬಂದಾಗ ಸ್ವಲ್ಪ ಸಿಟ್ಟಿನಿಂದಲೇ ರಾಮನನ್ನು ಇಲ್ಲಿಗೆ ಕರೆತರಬೇಕು. ಇದು ತನ್ನ ಆಜ್ಞೆ ಎಂದು ಕಠೋರವಾಗಿಯೇ ಹೇಳುತ್ತಾನೆ. “ದಶರಥನ ಮಾತು ಸೋತ ಹೊತ್ತು ಅದು”. ದೊರೆ ಅಸಹಾಯಕನಾಗಿದ್ದ. ತನ್ನೆದುರೇ ತನ್ನ ಪರವಾಗಿ ಕೈಕೇಯಿ ರಾಮನಲ್ಲಿ ತನ್ನ ವರದ ಕುರಿತು ಒಡಂಬರಿಸುತ್ತಿರುವಾಗ ಮೌನವಾಗಿದ್ದ. ನಾಲಿಗೆ ಮಾತನ್ನು ಆಡುವುದು ಬುದ್ಧಿಯಬಲದಿಂದ. ದಶರಥನ ಬುದ್ಧಿಯನ್ನು ಸಂಪೂರ್ಣವಾಗಿ ಕೈಕೇಯಿ ಆಕ್ರಮಿಸಿಕೊಂಡಿದ್ದಳು. ರಾಮನ ಪ್ರಿಯಮಾತೆ ಕೈಕೇಯಿ ರಾಜನ ಪರವಾಗಿ ಆಡುವ ಮಾತಾಗಿದ್ದಳು. ಸಮಯ ಸರಿದಷ್ಟೂ ತನಗೇ ಅಪಾಯವೆಂದು ಅವಳಿಗೆ ಅರಿವಾಗತೊಡಗಿತು. ತಂದೆಯ ನೋಡಲು ಬಂದ ರಾಮ ಆತನ ಚಿಂತೆಗೆ ಕಾರಣವನ್ನು ಕೇಳೆದರೆ ಆತನಲ್ಲಿ ದೊರೆಯ ಮನಸ್ಸಿನಲ್ಲಿರುವುದು ಭರತನು ರಾಜನಾಗುವ ಮತ್ತು ರಾಮನ ಅರಣ್ಯಗಮನದ ವರಗಳನ್ನು ಹೇಳುತ್ತಾಳೆ. ಅಷ್ಟೇ ಅಲ್ಲ,’ “ಎಲ್ಲಿಯವರೆಗೆ ನೀನು ಈ ಅಯೋಧ್ಯೆಯನ್ನು ಬಿಟ್ಟು ಅರಣ್ಯಕ್ಕೆ ಹೋಗುವುದಿಲ್ಲವೋ ಅಲ್ಲಿಯವರೆಗೆ ರಾಜನು ಸ್ನಾನವನ್ನೂ ಮಾಡುವುದಿಲ್ಲ, ಊಟವನ್ನೂ ಮಾಡುವುದಿಲ್ಲ” ಎನ್ನುವ ಮಾತನ್ನು ಹೇಳಿದಾಗ ರಾಮ ಇನ್ನು ತಡಮಾಡುವುದು ಸರಿಯಲ್ಲವೆಂದು ಅರಣ್ಯಕ್ಕೆ ಹೊರಟಕಥೆ ಎಲ್ಲರಿಗೂ ಚಿರಪರಿಚಿತ.

dhavala dharini king dasharatha

ದಶರಥನಿಗೆ ರಾಮನ ಅಗಲುವಿಕೆಯ ದುಃಖಕ್ಕಿಂತ ಆತ ಸುಮಂತ್ರನ ಹತ್ತಿರ ತನ್ನ ತಂದೆ ಮತ್ತು ತಾಯಿಗೆ ಹೇಳುವ ಸಂದೇಶ ಇನ್ನಷ್ಟು ಶೋಕವನ್ನು ಕೊಡುತ್ತದೆ. ರಾಮ ತನ್ನ ತಾಯಿಗೆ ತಾಳ್ಮೆಯಿಂದ ಇರಲು ಹೇಳಿಕಳುಹಿಸುತ್ತಾನೆ. ಹದಿನಾಲ್ಕುವರ್ಷಗಳ ತನಕ ಹೇಗೋ ಭರತನ ಜೊತೆ ಹೊಂದಿಕೊಂಡು ಹೋಗು ಎಂದಿದ್ದ. ಭರತನಿಗೂ ಕೈಕೇಯಿಯಂತೇ ತನ್ನ ತಾಯಯಿಂದರನ್ನು ನೋಡಿಕೊಳ್ಳುವಂತೆ ಕಾಠಿಣ್ಯದಿಂದ ತುಂಬಿದ ಎಚ್ಚರಿಕೆಯ ಸಂದೇಶನ್ನು ಕಳಿಹಿಸುತ್ತಾನೆ. ಕೌಸಲ್ಯಯ ಕುರಿತು ಹೇಳುವಾಗ ರಾಮನ ಕಣ್ಣಲ್ಲಿ ನೀರು ಹರಿಯುತ್ತಿರುವುದನ್ನು ಕಂಡ ಲಕ್ಷ್ಮಣ ಕ್ರುದ್ಧನಾಗಿರುವ ವಿಷಯವನ್ನು ಹೇಳುವಾಗ ಅರಸನಿಗೆ ಕಾಮಮೋಹಿತನಾಗಿದ್ದ ತಾನೇ ಅವಸರದಿಂದ ಕೈಕೇಯಿಯನ್ನು ಓಲೈಸಲು ಹೋದೆ ಅನಿಸುತ್ತದೆ. ರಾಜ ಯಾವ ನಿರ್ಣಯಗಳನ್ನು ಕೈಗೊಳ್ಳುವಾಲೂ ಮೊದಲು ಅಮಾತ್ಯರೊಡನೆ ಸಮಾಲೋಚಿಸಿ ಅವರ ಸಲಹೆಪಡೆದು, ಅದು ಧರ್ಮಸಮ್ಮತವಾಗಿದ್ದರೆ ತನಗೆ ಯುಕ್ತವಾದ ನಿರ್ಣಯವನ್ನು ಕೈಗೊಳ್ಳಬೇಕು. ಇಲ್ಲಿ ಅದೇನನ್ನೂ ಮಾಡದೇ ಇರುವ ಅಪರಾಧೀ ಭಾವ ಕಾಡುತ್ತದೆ. ವನವಾಸಕ್ಕೆ ಹೊರಟ ರಾಮ, ಸೀತಾ ಲಕ್ಷ್ಮಣರು ನಗುತ್ತಲೇ ಹೊರಟರು, ಗುಹನಲ್ಲಿ ಆಲದ ಹಾಲನ್ನು ತರಿಸಿ ತಪಸ್ವಿಗಳಂತೆ ಜಟಾಧಾರಿಯಾದ ವಿಷಯವನ್ನು ಕೇಳಿದ ಕೌಸಲ್ಯೆಯ ಮಾತ್ರಭಾವಕ್ಕೆ ಬಲವಾದ ನೋವನ್ನು ಕೊಡುತ್ತದೆ. ಅನೇಕವರ್ಷಗಳಕಾಲ ಧಶರಥನಿಂದ ಅಲಕ್ಷಕ್ಕೆ ಒಳಗಾದರೂ ಆಕೆ ಅದನ್ನೆಲ್ಲ ಸಹಿಸಿಕೊಂಡು ಮೌನಿಯಾಗಿದ್ದವಳು ಬಲುತೀಕ್ಷ್ಣವಾದ ಮಾತುಗಳಿಂದ ಗಂಡನನ್ನು ನಿಂದಿಸುತ್ತಾಳೆ. ಕೊನೆಯದಾಗಿ “ಮಹರಾಜಾ! ನಿನ್ನ ಈ ದುಶ್ಚರ್ಯೆಯಿಂದಾಗಿ ನಾನು ಮತ್ತು ನನ್ನ ಮಗನು ಮಾತ್ರ ವಿನಾಶ ಹೊಂದಲಿಲ್ಲ. ರಾಮನನ್ನು ಕಾಡಿಗಟ್ಟಿ ರಾಷ್ಟ್ರಸಹಿತವಾದ ರಾಜ್ಯವನ್ನು ಹಾಳುಮಾಡಿದೆ. (ಹತಂ ತ್ವಯಾ ರಾಜ್ಯಮಿದಂ ಸರಾಷ್ಟ್ರಂ ಹತಸ್ತಥಾತ್ಮಾ ಸಹ ಮಂನ್ತ್ರಿಭಿಶ್ಚ) ಮಂತ್ರಿಗಳೊಡನೇ ನೀನೂ ಹಾಳಾದೆ” ಎನ್ನುವ ಕಠೋರಮಾತುಗಳನ್ನಾಡುತ್ತಾಳೆ.

ಅದುತನಕ ಅದುಮಿಟ್ಟುಕೊಂಡ ಅವಮಾನ, ತಿರಸ್ಕಾರಗಳೆಲ್ಲವೂ ಸ್ಪೋಟಗೊಂಡಹೊತ್ತು ಅದು. ಆಕೆಯ ಮಾತುಗಳು ಎಷ್ಟು ತೀಕ್ಷ್ಣವಾಗಿತ್ತೆಂದರೆ ದಶರಥ ಅದನ್ನು ಕೇಳಿದವನೇ ಮೂರ್ಛಿತನಾದ. ಆತನನ್ನು ಉಪಚರಿಸಿದ ಕೌಸಲ್ಯೆ ತಾನು ಹಾಗೇ ಮಾತಾಡಬಾರದಾಗಿತ್ತೆಂದು ದುಃಖಪಡುತ್ತಾಳೆ. ದಶರಥನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸು ಎಂದು ಕೇಳಿಕೊಳ್ಳುತ್ತಾಳೆ. ಕೌಸಲ್ಯಾ ಮತ್ತು ಸುಮಿತ್ರಾ ಇಬ್ಬರೂ ಸೇರಿ ಗಂಡನ ಶುಶ್ರೂಷೇ ಮಾಡುತ್ತಾ ತಾವೇ ದುಃಖಿಸುತ್ತಲೂ ಇರುತ್ತಾರೆ. ದಶರಥನಿಗೆ ತಾನು ಇಷ್ಟೆಲ್ಲಾ ಒಳ್ಳೆಯ ಕಾರ್ಯವನ್ನು ಮಾಡಿದರೂ ತನಗೆ ಏಕೆ ಹೀಗೆ ಆಯಿತು ಎಂದು ಚಿಂತಿಸುತ್ತಾ ಯಾವುದೋ ಒಂದು ವಿಷಯವನ್ನು ಹೇಳಲೋ ಬೇಡವೋ ಎನ್ನುವಂತೆ ಇದ್ದ. ಆರನೆಯದಿನದ ಅರ್ಧರಾತ್ರಿಯಲ್ಲಿ ಇದ್ದಕ್ಕಿದ್ದಂತೆ ತನ್ನ ಪುತ್ರವಿಯೋಗಕ್ಕೆ ಕಾರಣವಾದ ತನ್ನ ಕರ್ಮಫಲದ ಕುರಿತು ಹೇಳಲು ನಿಶ್ಚಯಿಸಿದ. ಅದು ಎಲ್ಲರಿಗೂ ತಿಳಿದ ಕಥೆಯಾದ ಶ್ರವಣಕುಮಾರನ ಕಥೆ, ರಾಮಾಯಣದಲ್ಲಿ ಶ್ರವಣಕುಮಾರ ಎನ್ನುವ ಹೆಸರಿಲ್ಲ. ಕರಣ ಎಂದು ಆತನ ಹೆಸರು. ಆತನ ತಂದೆ ಓರ್ವ ಋಷಿಯಾಗಿದ್ದ. ಈ ಕಥೆ ಒಂದೇ ರೀತಿಯದಾದರೂ ಕಾಲಾಂತರದಲ್ಲಿ ಬೇರೆ ಬೇರೆ ರಾಮಾಯಣಗಳಲ್ಲಿ ಶ್ರವಣಕುಮಾರ ಎನ್ನುವ ಹೆಸರು ಬಂತು.

ಈ ಘಟನೆ ನಡೆಯುವಾಗ ದಶರಥನಿಗೆ ಪ್ರಾಯದ ಕಾಲ. ಆತ ಶಬ್ದವೇಧಿ ವಿದ್ಯೆಯಲ್ಲಿ ಮಹಾಚತುರ ಎನ್ನುವ ಕೀರ್ತಿ ಹಬ್ಬಿತ್ತು. ಅದನ್ನು ಪ್ರಯೋಗಿಸುವ ಹವ್ಯಾಸ ದೊರೆಗೆ. ಹಾಗಾಗಿ ಕಾಡಿಗೆ ಹೋಗಿ ಬೇಟೆಯಾಡುವ ವ್ಯಸನವನ್ನು ಹಚ್ಚಿಕೊಂಡಿದ್ದ. ಯುವರಾಜನಾಗಿದ್ದ ಆತನಿಗೆ ಆಗಿನ್ನೂ ಮದುವೆಯಾಗಿರಲಿಲ್ಲ (ದೇವ್ಯನೂಢಾ ತ್ವಮಭವೋ ಯುವರಾಜೋ ಭವಾಮ್ಯಹಮ್). ಮಳೆಗಾಲದ ಒಂದು ದಿನ ಬೇಟೆಗೆ ಹೋದಾಗ ಅನೆ ನೀರು ಕುಡಿಯುತ್ತಿರುವ ಸದ್ದು ಕೇಳಿಬಂತು. ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು. ಆತನೇ ಕುರುಡರಾದ ತನ್ನ ತಂದೆಯ ವಿಷಯವನ್ನು ಹೇಳಿ ಅವರಿಗೆ ನೀರನ್ನು ತೆಗೆದುಕೊಂಡು ಹೋಗು ಎಂದು ಕೇಳಿದ. ದಶರಥ ಯೌವನ ಮದದಿಂದ ಅಪರಾಧವನ್ನು ಮಾಡಿದರೂ ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಕುರುಡ ದಂಪತಿಗಳ ಬಳಿಗೆ ಬಂದು ಪ್ರಾಮಾಣಿಕವಾಗಿ ನಡೆದ ಸಂಗತಿಯನ್ನು ಹೇಳಿದ. ಬಾಲಕನ ಶವ ಸಂಸ್ಕಾರವನ್ನು ಅವರ ಹತ್ತಿರವೇ ಮಾಡಿಸಿದ. ಉದ್ಧೇಶಪೂರ್ವಕವಾಗಿ ತನ್ನ ಮಗನನ್ನು ಕೊಲ್ಲದ ಕಾರಣ ದೊರೆಗೆ ಬ್ರಹ್ಮಹತ್ಯಾ ಶಾಪವು ತಟ್ಟದು ಎಂದು ಹೇಳಿದರು. ಸಾಯುವ ಕಾಲದಲ್ಲಿ ತಮಗೆ ಆದ ರೀತಿಯಲ್ಲಿಯೇ ನಿನಗೂ ಪುತ್ರವಿಯೋಗವುಂಟಾಗಲಿ ಎಂದು ಶಾಪವನ್ನಿತ್ತು ಮಗನ ಚಿತೆಯನ್ನು ಏರಿ ದಿವ್ಯ ಶರೀರವನ್ನು ಧರಿಸಿ ಸ್ವರ್ಗಕ್ಕೆ ಹೋದರು.

king dasharatha kaikeyi dhavala dharini column

ರಾಜ ಕಾಲಾಂತರದಲ್ಲಿ ಅದನ್ನೆಲ್ಲ ಮರೆತಿದ್ದ. ಈಗ ರಾಮನ ಅಗಲುವಿಕೆಯೆನ್ನುವದು ಆತನಲ್ಲಿ ಅಪರಾಧೀ ಭಾವವನ್ನು ಮೂಡಿಸಿದೆ. ತನ್ನ ಕೊನೆಯ ದಿನಗಳು ಹತ್ತಿರ ಬಂತು ಎಂದು ದೊರೆಗೆ ಅನಿಸಲು ಸುರುವಾಯಿತು. ಸತ್ಯವಂತನಾದ, ಧರ್ಮಮಾರ್ಗದಲ್ಲಿ ನಡೆದ ತನಗೆ ಈ ಗತಿ ಏಕೆ ಬಂತು ಎಂದು ಚಿಂತಾಮಗ್ನನಾಗಿರುವಾಗ ಅವನಿಗೆ ತಾನೆಸಗಿದ ಈ ದುಷೃತ್ಯ ನೆನಪಿಗೆ ಬಂತು. ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಮುನಿಯ ಶಾಪ ಫಲಿಸುವ ಕಾಲ ಬಂತು ಎಂದು ಕೌಸಲ್ಯೆಗೆ ಹೇಳಿ ಇದಕ್ಕೆ ಕಾರಣ ತನ್ನ ಕರ್ಮಫಲ ಎನ್ನುತ್ತಾನೆ. ಮಾಡಿದ್ದಕ್ಕೆ ತಕ್ಕ ಕರ್ಮಫಲವನ್ನು ಅನುಭವಿಸುತ್ತಾರೆ ಎನ್ನುವ ನಂಬಿಕೆ ಪುನರ್ಜನ್ಮದಷ್ಟೇ ಪ್ರಾಚೀನವಾದುದು. ತಾನು ಬದುಕಬೇಕೆಮ್ದರೆ ರಾಮ ಬಂದು ತನ್ನನ್ನು ಒಂದು ಬಾರಿ ಸ್ಪರ್ಶಿಸಿದರೆ ಸಾಕು, ತಾನು ಬದುಕುವೆ ರಾಘವನ ವಿಷಯದಲ್ಲಿ ಘನತೆಯಿಂದ ತಾನು ನಡೆದುಕೊಳ್ಳಲಿಲ್ಲ ವೆಂದು ನಿರಂತರವಾಗಿ ಶೋಕಿಸುತ್ತಾನೆ. ಇಷ್ಟಾದರೂ ಪಾಯಸದ ಮಹಿಮೆಯಿಂದ ಜನಿಸಿದ ಮಕ್ಕಳು ಎನ್ನುವ ವಿಷಯವೇ ಮರೆತುಹೋಗಿದೆ. ಋಷಿಮುನಿಗಳಿಗೆ ಕಂಡ ರಾಮನ ನಿಜರೂಪದ ಅರಿವು ದಶರಥನಿಗೆ ಆಗಲೇ ಇಲ್ಲ. ಅತನನ್ನು ಸಮಾಧಾನ ಮಾಡುತ್ತಾ ಕೌಸಲ್ಯೆ ಮತ್ತು ಸುಮಿತ್ರೆಯರು ತಮ್ಮ ನಡುವೆ ಮಲಗಿಸಿಕೊಂಡಿದ್ದರು ಆರುದಿನಗಳಿಂದಲೂ ಬಾರದ ನಿದ್ರೆ ಇಬ್ಬರೂ ರಾಣಿಯರಿಗೂ ತಡರಾತ್ರಿ ಬಂತು. ರಾಘವನ ನೆನಪು ಮಾಡುತ್ತಲೇ ಇದ್ದ ರಾಜನನ್ನು ಚಿರನಿದ್ರೆ ಸೆಳೆದುಬಿಟ್ಟಿತು.

ರಘುವಂಶದ ಘನತೆಯ ಚಕ್ರವರ್ತಿಯೆಂದು ಹೆಸರು ಮಾಡಿದ ಯಶೋವಂತನಾದ ದೊರೆ ತನ್ನ ಕರ್ಮ ಫಲವನ್ನು ಅನುಭವಿಸಿ ಕೊನೆಗಾಲವನ್ನು ಕಂಡ. ಯಾವಾತ ತನ್ನ ಕರ್ಮಫಲವನ್ನು ಜೀವಿತಾವಧಿಯಲ್ಲಿ ಅನುಭವಿಸುತ್ತಾನೆಯೋ, ಆ ಕಾರಣದಿಂದ ಅವರು ಪಶ್ಚಾತ್ತಾಪ ಪಡುತ್ತಾರೆಯೋ ಅಂತವರು ಸತ್ತಮೇಲೆ ನರಕದಲ್ಲಿ ಆ ಶಿಕ್ಷೆ ಅನುಭವಿಸುವುದಿಲ್ಲ. ಈ ಎಲ್ಲಾ ಅವಸ್ಥೆಯನ್ನು ಅನುಭವಿಸಿದ ಸೂರ್ಯವಂಶದ ಯಶೋವಂತ ಅರಸನೂ ಸಹ ಸ್ವರ್ಗಕ್ಕೆ ನಡೆದ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Continue Reading

ಬೆಂಗಳೂರು

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Award Ceremony: 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ಡಾ. ಬಿ. ಎಸ್. ಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

VISTARANEWS.COM


on

Award Ceremony
Koo

ಬೆಂಗಳೂರು: ಅ. ನ. ಕೃ. ಪ್ರತಿಷ್ಠಾನ ವತಿಯಿಂದ ಕಾದಂಬರಿ ಸಾರ್ವಭೌಮ ಅ. ನ. ಕೃ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್. ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ಡಾ. ಬಿ. ಎಸ್. ಸ್ವಾಮಿ ಅವರಿಗೆ ಪ್ರದಾನ (Award Ceremony) ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಅವರು ರಾಷ್ಟೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕರಾಗಿದ್ದು, ಡಾ. ಬಿ. ಎಸ್. ಸ್ವಾಮಿ ಅವರು ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್, ಲೇಖಕ, ಉಪನ್ಯಾಸಕ ಡಾ. ಬಂಡ್ಲಹಳ್ಳಿ ವಿಜಯಕುಮಾ‌ರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ಡಾ. ಕೆ.ಆರ್. ಸಂಧ್ಯಾರೆಡ್ಡಿ, ಶಾ.ಮಂ. ಕೃಷ್ಣರಾವ್, ಎಂ. ವೆಂಕಟೇಶ್ ಅವರು ಉಪಸ್ಥಿತರಿರಲಿದ್ದು, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅ. ನ. ಕೃ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಗೌತಮ್ ಅ. ನ. ಕೃ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರಲಿದ್ದಾರೆ.

2022ರ ಪ್ರಶಸ್ತಿ ಪುರಸ್ಕೃತರು: ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ

ಆರೂವರೆ ದಶಕಗಳ ಕಾಲ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಮಾಜಕಾರ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್. ಆರ್. ರಾಮಸ್ವಾಮಿ ಅವರು (ಜನನ: 29-10-1937) ಕಳೆದ 45 ವರ್ಷಗಳಿಂದ ‘ಉತ್ಥಾನ’ ಮಾಸಪತ್ರಿಕೆ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಮಗ್ರ ಜೀವನಚರಿತ್ರೆ ‘ಕೋಲ್ಮಿಂಚು’ ಜಯಪ್ರಕಾಶ್ ನಾರಾಯಣ್ ವಲ್ಲಭಭಾಯಿ ಪಟೇಲ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಸ್ವಾಮಿ ವಿವೇಕಾನಂದ, ಭಗಿನಿ ನಿವೇದಿತಾ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಜೀವನಚರಿತ್ರೆಗಳೂ ಸೇರಿ ಸುಮಾರು 60 ಗ್ರಂಥಗಳನ್ನು ಬರೆದಿದ್ದಾರೆ. ‘ಭಾರತದಲ್ಲಿ ಸಮಾಜಕಾರ್ಯ’, ‘ಸ್ವಾತಂತ್ರ್ಯೋದಯದ ಮೈಲಿಗಲ್ಲುಗಳು’ ಮೊದಲಾದ ಹಲವಾರು ಪ್ರತಿಷ್ಠಿತ ಕೃತಿಗಳಿಗೆ ವಿಸ್ತತ ಸ್ವತಂತ್ರ ಅವಲೋಕನ ಪ್ರಬಂಧಗಳನ್ನು ಬರೆದು ಸಂಪಾದನ ಮಾಡಿದ್ದಾರೆ.

ಅಭ್ಯುದಯ ಅರ್ಥಶಾಸ್ತ್ರದಲ್ಲಿ ಆಳವಾದ ಪರಿಶ್ರಮ ಮಾಡಿರುವ ಇವರು ಜಾಗತೀಕರಣದ ಹಿನ್ನೆಲೆಯಲ್ಲಿ ಬರೆದ ‘ಆರ್ಥಿಕತೆಯ ಎರಡು ಧ್ರುವ’ ಅರ್ಥಶಾಸ್ತ್ರ ಕ್ಷೇತ್ರದ ಒಂದು ಉನ್ನತ ಕೃತಿಯೆಂದು ಪರಿಗಣಿತವಾಗಿದೆ. ಸ್ವಾತಂತ್ರ್ಯೋತ್ತರ ಭಾರತದ ಅರ್ಥಿಕ ಯೋಜನೆಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿರುವ ರಾಮಸ್ವಾಮಿಯವರ ‘ಶತಮಾನದ ತಿರುವಿನಲ್ಲಿ ಭಾರತ’ ಸಮಾಜವಿಜ್ಞಾನ ಕ್ಷೇತ್ರದ ಆ ವರ್ಷದ ಶ್ರೇಷ್ಠ ಕೃತಿಯೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಪಡೆದಿದೆ. ಬ್ರಿಟಿಷ್-ಪೂರ್ವ ಭಾರತದ ಉನ್ನತ ಸ್ಥಿತಿ ಕುರಿತ ಖ್ಯಾತ ಸಂಶೋಧಕ ಧರ್ಮಪಾಲ್ ಅವರ ಕೃತಿಗಳನ್ನು ಇವರು ಕನ್ನಡಕ್ಕೆ ಪರಿಚಯಿಸಿದ್ದಾರೆ. ಸ್ವದೇಶೀ ಚಿಂತನೆಯ ಪ್ರತಿಪಾದಕಗಳಾದ ಇವರ ಹಲವಾರು ಕೃತಿಗಳು ಪಥದರ್ಶಕವೆನಿಸಿವೆ.

ಅನೇಕ ಹಿರಿಯ ಸಾಹಿತಿಗಳ ಒಡನಾಟದಲ್ಲಿದ್ದ ರಾಮಸ್ವಾಮಿಯವರು, ಡಿ.ವಿ.ಗುಂಡಪ್ಪ, ಸೀತಾರಾಮಯ್ಯ, ರಾಕ್ಲಪಲ್ಲಿ ಅನಂತಕೃಷ್ಣಶರ್ಮ, ವೀರಕೇಸರಿ ಸೀತಾರಾಮಶಾಸ್ತ್ರಿ, ತಿ. ತಾ. ಶರ್ಮ, ಪಿ. ಕೋದಂಡರಾವ್, ತೋಟಗಾರಿಕೆ ಋಷಿ ಎಂ. ಎಚ್. ಮರಿಗೌಡ ಮೊದಲಾದ ಧೀಮಂತರನ್ನು ಕುರಿತು ಬರೆದ ‘ದೀವಟಿಗೆಗಳು’, ‘ದೀಪ್ತಿಮಂತರು’ ಮತ್ತು ‘ದೀಪ್ತಶೃಂಗಗಳು’ – ಇವು ಅನುಪಮ ವ್ಯಕ್ತಿಚಿತ್ರಮಾಲಿಕೆಗಳಾಗಿವೆ. ಈಗಿನ ಜಗದ್‌ವ್ಯಾಪಿ ತುಮುಲಗಳ ಬೇರುಗಳಿರುವುದು ಎರಡು ಭಿನ್ನ ಜೀವನದೃಷ್ಟಿಗಳಲ್ಲಿ – ಎಂದು ಅವರ ‘ನಾಗರಿಕತೆಗಳ ಸಂಘರ್ಷ’ ಕೃತಿ ಪ್ರತಿಪಾದಿಸಿದೆ. ಅವರ ‘ಕೆಲವು ಇತಿಹಾಸ-ಪರ್ವಗಳು’ ಮತ್ತು ‘ಮರೆಯಬಾರದ ಇತಿಹಾಸಾಧ್ಯಾಯಗಳು’ ಮೈಲಿಗಲ್ಲುಗಳೆಂದು ಅಂಕಿತಗೊಂಡಿರುವ ಕೆಲವು ಇತಿಹಾಸ ಘಟನಾಸರಣಿಗಳ ಪರಾಮರ್ಶನೆಯಾಗಿವೆ. ಭಾರತದ ಈಚಿನ ಇತಿಹಾಸಕ್ಕೆ ನಿರ್ಣಾಯಕ ತಿರುವನ್ನಿತ್ತ ರಾಜಾ ರಾಮಮೋಹನರಾಯ್ ಅವರಿಂದ ಜಯಪ್ರಕಾಶ ನಾರಾಯಣ್ ವರೆಗಿನ ಹತ್ತಾರು ಮಹನೀಯರ ಜೀವಿತಕಥನಗಳು `ನವೋತ್ಥಾನದ ಅಧ್ವರ್ಯುಗಳು’ ಮತ್ತು ‘ಹಲವರು ರಾಷ್ಟ್ರಾರಾಧಕರು’. ರಾಮಸ್ವಾಮಿಯವರ ‘ಕವಳಿಗೆ’ ಮತ್ತು ‘ಸಾಹಿತ್ಯ ಸಾನ್ನಿಹಿತ್ಯ ಉನ್ನತಮಟ್ಟದ ಸಾಹಿತ್ಯ ಪರಾಮರ್ಶಕ ಕೃತಿಗಳಾಗಿವೆ. ರಾಮಸ್ವಾಮಿಯವರು ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ 2000ಕ್ಕೂ ಹೆಚ್ಚು ಅಧ್ಯಯನಪೂರ್ಣ ಲೇಖನಗಳನ್ನು ಬರೆದಿದ್ದಾರೆ.

ಪತ್ರಿಕೋದ್ಯಮ ಸೇವೆಗಾಗಿ 2006ರಲ್ಲಿ ಇವರಿಗೆ ‘ಆರ್ಯಭಟ ಪ್ರಶಸ್ತಿ’ ದೊರೆತಿದೆ. ಸಾಹಿತ್ಯಸೇವೆಗಾಗಿ 2008ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಇವರಿಗೆ ದೊರೆತಿದೆ. 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇವರ ಸುದೀರ್ಘ ಸಾಹಿತ್ಯಸೇವೆಗಾಗಿ ಗೌರವಾರ್ಥ ಡಾಕ್ಟರೇಟ್ ನೀಡಿದೆ. ದೀರ್ಘ ಪತ್ರಿಕೋದ್ಯಮ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದ ಶ್ರೇಷ್ಠ ವ್ಯಕ್ತಿ’ ಸಮ್ಮಾನ ದೊರೆತಿದೆ (2012). ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳ ಜೀವಮಾನ ಸಾಧನೆಗಾಗಿ 2015ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪದವಿಯನ್ನು ಇವರಿಗೆ ನೀಡಲಾಗಿದೆ. ಕರ್ನಾಟಕ ಸರಕಾರವು 2022-23ರ ‘ಪಂಪಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

2023ರ ಪ್ರಶಸ್ತಿ ಪುರಸ್ಕೃತರು : ಡಾ. ಬಿ. ಎಸ್. ಸ್ವಾಮಿ

ಬಿ. ಸಿದ್ಧಲಿಂಗ ಸ್ವಾಮಿಯವರು ಮೂಲತಃ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯವರು. ವಿ. ಬಸವಲಿಂಗಪ್ಪ – ಶಿವನಾಗಮ್ಮ ದಂಪತಿಯ ಸುಪುತ್ರರಾದ ಇವರು ಎಂ. ಎ., ಪಿಎಚ್. ಡಿ. ಪದವೀಧರರು. ಐದು ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಬೆಂಗಳೂರು ಆಕಾಶವಾಣಿಯಲ್ಲಿ ಇಪ್ಪತ್ತು ವರ್ಷ ಕಾರ್ಯನಿರ್ವಹಿಸಿ ಅನಂತರ ಗುಲ್ಬರ್ಗ, ಬೆಂಗಳೂರು, ಮಂಗಳೂರು ಬಾನುಲಿಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಹದಿನಾಲ್ಕು ವರ್ಷ ದುಡಿದು ನಿವೃತ್ತರಾದರು.

ಬಾನುಲಿಯ ಸುದೀರ್ಘ ಸೇವೆಯಲ್ಲಿ ಇವರು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಪ್ರತಿಭಾವಂತರನ್ನು ಹುಡುಕಿ ಅವರನ್ನು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಜನಾನುರಾಗಿಯಾದರು.
1967ರಲ್ಲಿ ಇವರ ಮೊದಲ ಕವನಸಂಗ್ರಹ ‘ಅಮೃತ’ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಆರು ದಶಕ ಲೇಖನಿಯನ್ನು ಕೆಳಗಿಡದೆ ಒಂದೇ ಸಮನೆ ಬರೆಯುತ್ತ ಸುಮಾರು ನಾಲ್ಕುನೂರು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ‘ಕಲಿ ಭಾರತ’, ‘ಅಲ್ಲಮಪ್ರಭು’, ‘ಅಕ್ಕಮಹಾದೇವಿ’, ‘ಬಸವಣ್ಣ’ ಮಹಾಕಾವ್ಯಗಳೂ, ‘ಬೆಂಕಿಯಲ್ಲಿ ಅರಳಿದ ಹೂವು’ ನಂತಹ ಆತ್ಮಕಥನವೂ ಸೇರಿದೆ.

ಇವರ ಸಾಹಿತ್ಯಸೃಷ್ಟಿಗೆ ಯಾವ ಸರಹದ್ದುಗಳೂ ಇಲ್ಲ. ಕಥೆ, ಕಾದಂಬರಿ, ಕವನ, ನಾಟಕ, ರೂಪಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಸಂಪಾದನೆ, ವೈಚಾಲಕ, ಹಾಸ್ಯ, ಜಾನಪದ, ಪ್ರವಾಸಕಥನ, ಜೀವನ ಚರಿತ್ರೆ, ವಚನಸಾಹಿತ್ಯ, ದಾಸಸಾಹಿತ್ಯ, ಮಕ್ಕಳ ಸಾಹಿತ್ಯ, ಬಿಡಿ ಬರೆಹಗಳು – ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೈಯಾಡಿಸಿದ್ದಾರೆ. ಅನೇಕ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳನ್ನು ಬರೆದ ಕೈಗಳಿಂದಲೇ ಜಾನಪದ ಸಾಹಿತ್ಯಚರಿತ್ರೆಯ ಹದಿನೈದು ಸಂಪುಟಗಳು, ಮಲೆ ಮಾದೇಶ್ವರ ಕಾವ್ಯ ಸಂಪಾದನೆ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕ್ಷೇತ್ರಕಾರ್ಯ, ಸಂಪಾದನೆ, ವಿಶ್ಲೇಷಣ, ಸಂಗ್ರಹ ಮಾಡಿದ್ದಾರೆ. ಶಿಷ್ಟಸಾಹಿತ್ಯದಲ್ಲಿ ಡಾ. ಸ್ವಾಮಿಯವರ ಕೊಡುಗೆ ಸಣ್ಣದಲ್ಲ. ಕಾಳಿದಾಸನ ಸಾಹಿತ್ಯದ ಕುರಿತು ಬರೆಯಬಲ್ಲ ಡಾ. ಸ್ವಾಮಿಯವರು ಸೂರದಾಸನ ಸಾಹಿತ್ಯದ ಬಗೆಗೂ ಬರೆಯಬಲ್ಲರು. ಹರಿದಾಸ ಪರಂಪರೆಯ ಕುರಿತು ಹಲವು ವರ್ಷ ಸಂಶೋಧನೆ ಮಾಡಿ ಒಂದು ಬೃಹತ್ ಗ್ರಂಥ ಪ್ರಕಟಿಸಿದ್ದಾರೆ. ಅದಕ್ಕಾಗಿ ಅವರು ಊರೂರು ಅಲೆದು ಹಲಕಥಾಕಾರರನ್ನು ಸಂದರ್ಶಿಸಿ, ವಾಚನಾಲಯಗಳಲ್ಲಿ ತಿಂಗಳುಗಟ್ಟಲೆ ಕುಳಿತು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಇವರ ಸಾಹಿತ್ಯಸೇವೆಯನ್ನು ಗಮನಿಸಿ ಕನ್ನಡಿಗರು ಅವರಿಗೆ ‘ಮಧುವೃತ’ ಎಂಬ ಗೌರವಗ್ರಂಥ ಅರ್ಪಿಸಿದ್ದಾರೆ.
ಇವರ ‘ಕವಿಚಕ್ರೇಶ್ವರ’ ಕಾದಂಬರಿಗೆ ದೇವರಾಜ ಬಹದ್ದೂರ್ ಪ್ರಶಸ್ತಿ(1974), ‘ಜಾನಪದ ಕಥಾಸಂಗಮ’ಕ್ಕೆ ಕರ್ನಾಟಕ ಜಾನಪದ-ಯಕ್ಷಗಾನ ಅಕಾಡೆಮಿಯ ಬಹುಮಾನ(1987), ‘ಮಹಾಜ್ಯೋತಿ ಮಾದೇಶ್ವರ’ ಕೃತಿಗೆ ಮುದ್ದಣ- ರತ್ನಾಕರವರ್ಣಿ ಪ್ರಶಸ್ತಿ, ‘ಜಾನಪದ ಸೌರಭ’, ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ (1996), ‘ತುಳುನಾಡ ಐಸಿರಿ’ಗೆ ಗೊರೂರು ಪ್ರತಿಷ್ಠಾನದ ಪ್ರಶಸ್ತಿ (1997), ಕದಂಬೋತ್ಸವದಲ್ಲಿ ಅಭಿನಂದನೆ(1998), ‘ಸಮಗ್ರ ನಾಟಕಗಳು’ಗೆ ಆರ್ಯಭಟ ಪ್ರಶಸ್ತಿ, ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ(2002), ‘ನಾಟಕ ರೂಪಕ’ ಕೃತಿಗೆ ಅತ್ತಿಮಬ್ಬೆ ಸಾಹಿತ್ಯಪ್ರತಿಷ್ಠಾನದ ಪ್ರಶಸ್ತಿ, ‘ಜಾನಪದಶ್ರೀ’ಗೆ ಕರ್ನಾಟಕ ಜಾನಪದ ಅಕಾಡೆಮಿ ಬಹುಮಾನ, ಇಂಥ ಅನೇಕ ಸಂಘಸಂಸ್ಥೆಗಳ ಬಹುಮಾನಗಳು, ಪ್ರಶಸ್ತಿಗಳು ಇವರಿಗೆ ಸಂದಿವೆ.

Continue Reading
Advertisement
naturals ic cream raghunandan kamath
ಶ್ರದ್ಧಾಂಜಲಿ7 mins ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ11 mins ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್30 mins ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ32 mins ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ32 mins ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ33 mins ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Gurucharan Singh returns home after almost a month
ಕಿರುತೆರೆ53 mins ago

Gurucharan Singh: ಕಾಣೆಯಾಗಿದ್ದ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ ಮತ್ತೆ ಮನೆಗೆ ವಾಪಸ್‌!

Pavithra Jayaram Last Instagram post to chandrakanth
South Cinema1 hour ago

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Aiden Markram
ಪ್ರಮುಖ ಸುದ್ದಿ1 hour ago

Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

Fire Accident
ದೇಶ1 hour ago

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 10 ಮಂದಿ ಭಕ್ತರ ಸಜೀವ ದಹನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ14 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌