Dhayn Chand Khel Ratna | ಕ್ರೀಡಾ ಕ್ಷೇತ್ರದ ಅತ್ಯುನ್ನತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಸ್ವೀಕರಿಸಿದ ಶರತ್‌ ಕಮಾಲ್‌ - Vistara News

Latest

Dhayn Chand Khel Ratna | ಕ್ರೀಡಾ ಕ್ಷೇತ್ರದ ಅತ್ಯುನ್ನತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಸ್ವೀಕರಿಸಿದ ಶರತ್‌ ಕಮಾಲ್‌

ಟೇಬಲ್‌ ಟೆನಿಸ್‌ ಪಟು ಅಚಂತ ಶರತ್‌ ಕಮಾಲ್‌ ಅವರು ಬುಧವಾರ ಪ್ರತಿಷ್ಠಿತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ (Dhayn Chand Khel Ratna) ಭಾಜನರಾದರು.

VISTARANEWS.COM


on

achanta sharath kamal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಹಿರಿಯ ಟೇಬಲ್‌ ಟೆನಿಸ್‌ ಪಟು ಅಚಂತ ಶರತ್‌ ಕಮಾಲ್‌ ಅವರು ೨೦೨೨ನೇ ಸಾಲಿನ ಪ್ರತಿಷ್ಠಿತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ (Dhayn Chand Khel Ratna) ಭಾಜನರಾದರು. ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ತಮಿಳುನಾಡು ಮೂಲದ ಶರತ್‌ ಕಮಾಲ್‌ ಅವರು ಬರ್ಮಿಂಗ್ಹಮ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಮೂರು ಚಿನ್ನ ಸೇರಿದಂತೆ ಒಟ್ಟಾರೆ ನಾಲ್ಕು ಪದಕಗಳನ್ನು ಗೆದ್ದಿದ್ದರು. ಜತೆಗೆ ಟಿಟಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದರು. ಹೀಗಾಗಿ ಅವರನ್ನು ದೇಶದ ಅತ್ಯನ್ನತ ಕ್ರೀಡಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉಳಿದಂತೆ ಲಾಂಗ್‌ಜಂಪ್‌ ಪಟು ಎಲ್ದೋಸ್‌ ಪೌಲ್‌, ಸ್ಟೀಪಲ್‌ಚೇಸ್‌ ಸ್ಪರ್ಧಿ ಅವಿನಾಶ್‌ ಸಬ್ಲೆ, ಬ್ಯಾಡ್ಮಿಂಟನ್‌ ಪಟು ಲಕ್ಷ್ಯ ಸೇನ್‌, ಬಾಕ್ಸರ್‌ ನಿಖತ್‌ ಜರೀನ್‌ ಸೇರಿದಂತೆ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಸಾಧನೆ ಮಾಡಿದ್ದ ಹಲವರು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.

ಅತ್ಯುನ್ನತ ಕ್ರೀಡಾ ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಗಿನಂತಿವೆ.

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಅಚಂತ ಶರತ್​ ಕಮಾಲ್​ಟೆಬಲ್​ ಟೆನಿಸ್​

ಅರ್ಜುನ ಪ್ರಶಸ್ತಿ ಪಡೆದವರ ಪಟ್ಟಿ

ಸೀಮಾ ಪುನಿಯಾಅಥ್ಲೆಟಿಕ್ಸ್
ಎಲ್ದೋಸ್ ಪಾಲ್ಅಥ್ಲೆಟಿಕ್ಸ್
ಅವಿನಾಶ್ ಮುಕುಂದ್ ಸಬ್ಲೆಅಥ್ಲೆಟಿಕ್ಸ್
ಲಕ್ಷ್ಯ ಸೇನ್ಬ್ಯಾಡ್ಮಿಂಟನ್​
ಎಚ್​.ಎಸ್​ ಪ್ರಣಯ್ಬ್ಯಾಡ್ಮಿಂಟನ್
ಅಮಿತ್​ ಪಂಗಾಲ್​ಬಾಕ್ಸಿಂಗ್
ನಿಖತ್ ಜರೀನ್ಬಾಕ್ಸಿಂಗ್
ಪ್ರದೀಪ್ ಕುಲಕರ್ಣಿಚೆಸ್
ಆರ್. ಪ್ರಜ್ಞಾನಂದಚೆಸ್
ದೀಪ್​ ಗ್ರೇಸ್ ಎಕ್ಕಾಹಾಕಿ
ಸುಶೀಲಾ ದೇವಿಜೂಡೋ
ಸಾಕ್ಷಿ ಕುಮಾರಿಕಬಡ್ಡಿ
ನಯನ್ ಮೋನಿ ಸೈಕಿಯಾಲಾನ್ ಬೌಲ್ಸ್‌
ಸಾಗರ್ ಕೈಲಾಸ್ ಓವಲ್ಕರ್ಮಲ್ಲಕಂಬ
ಎಲವೆನಿಲ್ ವಲರಿವನ್ಶೂಟಿಂಗ್​
ಓಂಪ್ರಕಾಶ್ ಮಿಥರ್ವಾಲ್ಶೂಟಿಂಗ್​
ಶ್ರೀಜಾ ಅಕುಲ್​ಟೇಬಲ್​ ಟೆನಿಸ್​
ವಿಕಾಸ್ ಠಾಕೂರ್ವೇಟ್​ಲಿಫ್ಟಿಂಗ್​
ಅಂಶುಕುಸ್ತಿ
ಸರಿತಾಕುಸ್ತಿ
ಪರ್ವೀನ್ವುಶು
ಮಾನಸಿ ಜೋಶಿಪ್ಯಾರಾ ಬ್ಯಾಡ್ಮಿಂಟನ್
ತರುಣ್ ಧಿಲ್ಲೋನ್ಪ್ಯಾರಾ ಬ್ಯಾಡ್ಮಿಂಟನ್
ಸ್ವಪ್ನಿಲ್ ಸಂಜಯ್ ಪಾಟೀಲ್ಪ್ಯಾರಾ ಸ್ವಿಮ್ಮಿಂಗ್
ಜೆರ್ಲಿನ್ ಅನಿಕಾ ಜೆಡೆಫ್ ಬ್ಯಾಡ್ಮಿಂಟನ್

ದ್ರೋಣಾಚಾರ್ಯ ಪ್ರಶಸ್ತಿ ಪಟ್ಟಿ

ಜೀವನ್ಜೋತ್ ಸಿಂಗ್ ತೇಜಾಆರ್ಚರಿ
ಮೊಹಮ್ಮದ್ ಅಲಿ ಕಮರ್ಬಾಕ್ಸಿಂಗ್​
ಸುಮಾ ಸಿದ್ಧಾರ್ಥ್ ಶಿರೂರ್ಪ್ಯಾರಾ ಶೂಟಿಂಗ್
ಸುಜೀತ್ ಮಾನ್ಕುಸ್ತಿ

ಜೀವಮಾನ ಪ್ರಶಸ್ತಿ ಪಟ್ಟಿ

ದಿನೇಶ್ ಜವಾಹರ್ ಲಾಡ್ಕ್ರಿಕೆಟ್​
ಬಿಮಲ್ ಪ್ರಫುಲ್ಲ ಘೋಷ್ಫುಟ್ಬಾಲ್
ರಾಜ್ ಸಿಂಗ್ಕುಸ್ತಿ

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ

ಅಶ್ವಿನಿ ಅಕ್ಕುಂಜೆಅಥ್ಲೆಟಿಕ್ಸ್
ಧರಂವೀರ್ ಸಿಂಗ್ಹಾಕಿ
ಬಿ ಸಿ ಸುರೇಶ್ಕಬಡ್ಡಿ
ನಿರ್ ಬಹದ್ದೂರ್ ಗುರುಂಗ್ಪ್ಯಾರಾ ಅಥ್ಲೆಟಿಕ್ಸ್

ಇದನ್ನೂ ಓದಿ | IND VS NZ | ಮಳೆಯಿಂದ ಅಂತಿಮ ಪಂದ್ಯ ರದ್ದು; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

18ನೇ ಲೋಕಸಭೆಗೆ (Lok Sabha Election 2024) ಈ ಬಾರಿ 74 ಮಹಿಳೆಯರು ಸಂಸದರಾಗಿ ಪ್ರವೇಶ ಪಡೆದಿದ್ದರೆ. ಇದರಲ್ಲಿ ಬಹುಪಾಲು ಬಿಜೆಪಿಯದ್ದಾಗಿದ್ದು, ಬಳಿಕ ಕಾಂಗ್ರೆಸ್ ನವರದ್ದಾಗಿದೆ. ಬಿಜೆಪಿ 31, ಕಾಂಗ್ರೆಸ್ 13, ಟಿಎಂಸಿ 11 ಮಹಿಳಾ ಸಂಸದರು ಸೇರಿದಂತೆ ಒಟ್ಟು 74 ಮಹಿಳೆಯರು ಲೋಕಸಭೆಯಲ್ಲಿ ತಮ್ಮ ಪಕ್ಷಗಳನ್ನು ಪ್ರತಿನಿಧಿಸಲಿದ್ದಾರೆ.

VISTARANEWS.COM


on

By

Lok Sabha Election 2024
Koo

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಈ ಬಾರಿ 74 ಮಹಿಳೆಯರು ಸಂಸದರಾಗಿ (Women MPs) ಆಯ್ಕೆಯಾಗಿದ್ದಾರೆ. ಈ ಸಂಖ್ಯೆಯು 2019ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. 2019ರಲ್ಲಿ ಒಟ್ಟು 78 ಮಹಿಳೆಯರು ಸಂಸದರಾಗಿದ್ದರು. 1952ರ ಚುನಾವಣೆಗೆ (election) ಹೋಲಿಸಿದರೆ ಮಹಿಳಾ ಸಂಸದರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ (Women’s reservation) ಮಸೂದೆ ಅಂಗೀಕಾರವಾದ ಅನಂತರ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮೊದಲ ಚುನಾವಣೆ ಇದಾಗಿದೆ. ಈ ಕಾನೂನು ಇನ್ನೂ ಜಾರಿಗೆ ಬರಬೇಕಿದೆ.

ಮಹಿಳಾ ಸಂಸದರು ಸಂಖ್ಯೆ ಒಟ್ಟು ಚುನಾಯಿತ ಸದಸ್ಯರಲ್ಲಿ ಕೇವಲ ಶೇ. 13.63ರಷ್ಟಿದೆ. ಇದು ಮಹಿಳೆಯರಿಗೆ ಪ್ರಸ್ತಾಪಿಸಲಾಗಿರುವ ಶೇ. 33 ಮೀಸಲಾತಿಗಿಂತ ಕಡಿಮೆಯಾಗಿದೆ. ದೇಶಾದ್ಯಂತ ಕೆಳಮನೆಗೆ ಆಯ್ಕೆಯಾಗಿರುವ ಒಟ್ಟು ಮಹಿಳಾ ಸಂಸದರ ಪೈಕಿ 11 ಮಂದಿ ಪಶ್ಚಿಮ ಬಂಗಾಳದವರಾಗಿರುವುದು ವಿಶೇಷ.

ಯಾವ ಪಕ್ಷದಿಂದ ಎಷ್ಟು?

ಈ ಬಾರಿ ಲೋಕಸಭೆಯಲ್ಲಿ 14 ರಾಜಕೀಯ ಪಕ್ಷಗಳ ಮಹಿಳಾ ಸಂಸದರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಲಿದ್ದಾರೆ. ಇದರಲ್ಲಿ ಬಿಜೆಪಿ 31 ಮಹಿಳಾ ಸಂಸದರನ್ನು ಹೊಂದಿದ್ದು, ಕಾಂಗ್ರೆಸ್ 13, ತೃಣಮೂಲ ಕಾಂಗ್ರೆಸ್ (ಟಿಎಂಸಿ) 11, ಸಮಾಜವಾದಿ ಪಕ್ಷ (ಎಸ್‌ಪಿ) 5, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 3 ಮಹಿಳಾ ಸಂಸದರನ್ನು ಹೊಂದಿದೆ.

ಮೊದಲ ಬಾರಿ ಸಂಸದರಾದವರು

74 ಮಹಿಳಾ ಸಂಸದರಲ್ಲಿ 43 ಮಂದಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜನತಾ ದಳದಿಂದ (ಆರ್‌ಜೆಡಿ) ಆಯ್ಕೆಯಾಗಿರುವ ಮಿಸಾ ಭಾರತಿ ಚೊಚ್ಚಲ ಲೋಕಸಭಾ ಸಂಸದರಾಗಿದ್ದಾರೆ.

ಕಣದಲ್ಲಿ ಇದದ್ದು ಎಷ್ಟು ಮಂದಿ ?

ಒಟ್ಟು 797 ಮಹಿಳಾ ಅಭ್ಯರ್ಥಿಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಬಿಜೆಪಿ ಗರಿಷ್ಠ 69 ಮತ್ತು ಕಾಂಗ್ರೆಸ್ 41 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಪಿಆರ್ ಎಸ್ ನ ವಿಶ್ಲೇಷಣೆಯ ಪ್ರಕಾರ ಮಹಿಳಾ ಸಂಸದರಲ್ಲಿ ಶೇ. 16ರಷ್ಟು ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಶೇ. 41ರಷ್ಟು ಮಂದಿ ಈ ಹಿಂದೆ ಲೋಕಸಭೆಯ ಸದಸ್ಯರಾಗಿದ್ದರು. ಉಳಿದವರಲ್ಲಿ ಒಬ್ಬ ಸಂಸದರು ಮಾತ್ರ ರಾಜ್ಯಸಭಾ ಸದಸ್ಯರಾಗಿದ್ದರು.

ಕಿರಿಯ ಮಹಿಳಾ ಸಂಸದರು

ಸಮಾಜವಾದಿ ಪಕ್ಷದ ಮಚ್ಲಿಶಹರ್‌ನ 25 ವರ್ಷದ ಪ್ರಿಯಾ ಸರೋಜ್ ಮತ್ತು ಕೈರಾನಾ ಕ್ಷೇತ್ರದ 29 ವರ್ಷದ ಇಕ್ರಾ ಚೌಧರಿ ಗೆಲುವು ಸಾಧಿಸಿದ ಅತ್ಯಂತ ಕಿರಿಯ ಸಂಸದರಾಗಿದ್ದಾರೆ.

ಇದನ್ನೂ ಓದಿ: Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

ಮಹಿಳಾ ಮೀಸಲಾತಿ ಎಷ್ಟು?

ಗಮನಾರ್ಹ ಸಂಗತಿ ಎಂದರೆ ನಾಮ್ ತಮಿಲರ್ ಕಚ್ಚಿಯಂತಹ ಪಕ್ಷಗಳು ಶೇ. 50ರಷ್ಟು ಮಹಿಳಾ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಿತ್ತು. ಮಹಿಳಾ ಪ್ರಾತಿನಿಧ್ಯವನ್ನು ಹೊಂದಿರುವ ಇತರ ಪಕ್ಷಗಳಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಕೂಡ ಸೇರಿದೆ. ಈ ಎರಡೂ ಪಕ್ಷಗಳು ಶೇ. 40ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಹೊಂದಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಬಿಜು ಜನತಾ ದಳ (ಬಿಜೆಡಿ) ಶೇ. 33 ರಷ್ಟು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶೇ.29, ಸಮಾಜವಾದಿ ಪಕ್ಷವು ಶೇ. 20 ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶೇ. 25ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಹೊಂದಿತ್ತು.

Continue Reading

ವೈರಲ್ ನ್ಯೂಸ್

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ ನಲ್ಲಿ ವೈರಲ್ (Viral Video) ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದು ಹೊಡೆದಾಟಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ದೆಹಲಿ ಮೆಟ್ರೋ (delhi metro) ಎಲ್ಲರಿಗೂ ಈಗ ಹಾಸ್ಯದ ಕೇಂದ್ರವಾಗಿದೆ ಎನ್ನಬಹುದು. ಯಾಕೆಂದರೆ ಒಂದಲ್ಲ ಒಂದು ಕಾರಣಕ್ಕೆ ದೆಹಲಿ (delhi) ಮೆಟ್ರೋ ನಿರಂತರ ಸುದ್ದಿಯಾಗುತ್ತಲೇ ಇದೆ. ಇದೀಗ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಹೊಡೆದಾಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ. ದೆಹಲಿ ಮೆಟ್ರೋ ಬಗ್ಗೆ ಎಲ್ಲರೂ ಮತ್ತೊಮ್ಮೆ ತಮಾಷೆ ಮಾಡುವಂತಾಗಿದೆ.

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ (x) ನಲ್ಲಿ ವೈರಲ್ ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೊಡೆದಾಟಕ್ಕೆ ಕಾರಣವಾಗಿದೆ. ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದುಕೊಂಡು ಹೊಡೆದಾಡುತ್ತಿದ್ದರೆ ಉಳಿದವರು ನೋಡಿ ನಗುತ್ತಾ ವಿಡಿಯೋ ಮಾಡುತ್ತಿದ್ದರು.

ಎಕ್ಸ್ ನಲ್ಲಿ ಈ ವಿಡಿಯೋವನ್ನು ರಾಹುಲ್ ಶೈನಿ ಎಂಬವರು ಹಂಚಿಕೊಂಡಿದ್ದು, “ದಯೆಯುಳ್ಳ ಜನರ ದೆಹಲಿ ಎಂದಾದರೂ ಸುಧಾರಿಸುತ್ತದೆಯೇ? ಅದೇ ಪ್ರಸಿದ್ಧ ಸ್ಥಳವಾದ ಮೆಟ್ರೋದಲ್ಲಿ ಮತ್ತೆ ಮಹಿಳೆಯರ ನಡುವೆ ಜಗಳವಾಯಿತು…!! ನಂತರ ಪರಸ್ಪರ ಕಪಾಳ ಮೋಕ್ಷ ಮತ್ತು ಜಗಳ ನಡೆಯಿತು. ಜಗಳದ ನಂತರ ಇಬ್ಬರು ಮಹಿಳೆಯರು.” ಎಂಬ ಶೀರ್ಷಿಕೆ ನೀಡಲಾಗಿದೆ.


ವೈರಲ್ ಆದ ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅನೇಕರು ದೆಹಲಿ ಮೆಟ್ರೋಗೆ ಇಂತಹ ಘಟನೆಗಳನ್ನು “ಸಾಮಾನ್ಯ” ಎಂದು ಹೇಳಿದ್ದಾರೆ. ಕೆಲವರು ಇದನ್ನು ಹಾಸ್ಯ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

ಇದಕ್ಕೆ ಪ್ರತಿಕ್ರಿಯಿಸಿರುವ ಒಬ್ಬ ಬಳಕೆದಾರ, ಮೆಟ್ರೋ ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ದೆಹಲಿ ಮೆಟ್ರೋ ಮತ್ತೊಂದು ಹಾಸ್ಯ ಕುಚ್ ಭೀ ಹೋಥಾ ಕಭಿ ಭಿ (ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು)” ಎಂದು ಸೇರಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ, “ಅಸ್ಲಿ ರೆಸ್ಲಿಂಗ್ ಟು ಮೆಟ್ರೋ ಮತ್ತು ಇಂಡಿಯನ್ ರೈಲ್ವೇ ಮೈ ಹೋತಿ ಹೈ (ನಿಜವಾದ ಕುಸ್ತಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತದೆ)” ಎಂದು ಸೇರಿಸಿದ್ದಾರೆ. ಮತ್ತೊಬ್ಬರು, ಈ ಸಮಸ್ಯೆಯು ಇಂದು ಚಿಕ್ಕದಾಗಿ ಕಾಣಿಸಬಹುದು, ಆದರೆ ನಾಳೆ ಇದು ಬಹಳ ಮಹತ್ವದ್ದಾಗಬಹುದು. ದೆಹಲಿ ಮೆಟ್ರೋ ನಲ್ಲಿ ಹೊಡೆದಾಡುವ ಜನರಿಗೆ ದಂಡ ವಿಧಿಸಬೇಕು. ಎಂದು ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

ಪಾದಚಾರಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನ ಚಕ್ರವೊಂದು ಬಂದು ಅವರ ತಲೆಗೆ ಬಡಿದಿದೆ. ಅಪಘಾತದ ತೀವ್ರತೆಗೆ ಪಾದಚಾರಿ ಮಹಿಳೆ ನೆಲಕ್ಕೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಅಪಘಾತ (accident) ಯಾವಾಗ, ಎಲ್ಲಿ, ಹೇಗೆ ನಡೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ನಾವು ಎಲ್ಲೇ ಇದ್ದರೂ ಬಹಳ ಎಚ್ಚರಿಕೆಯಿಂದ ಇರಬೇಕು. ಎಷ್ಟೋ ಬಾರಿ ವಾಹನ (vehicle rider) ಸವಾರರ ಅಜಾಗರೂಕತೆಯಿಂದ ರಸ್ತೆ ಬದಿಯಲ್ಲಿ (Pedestrian) ನಡೆದುಕೊಂಡು ಹೋಗುವವರು ಅಪಘಾತಕ್ಕೆ ಈಡಾಗುವುದು ಇದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋವೊಂದು (Viral Video) ಹರಿದಾಡುತ್ತಿದೆ.

ಪಾದಚಾರಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನ ಚಕ್ರವೊಂದು ಬಂದು ಅವರ ತಲೆಗೆ ಬಡಿದಿದೆ. ಅಪಘಾತದ ತೀವ್ರತೆಗೆ ಪಾದಚಾರಿ ಮಹಿಳೆ ನೆಲಕ್ಕೆ ಬಿದ್ದಿರುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ.

ಏನಿದೆ ವಿಡಿಯೋದಲ್ಲಿ?

ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಕಾರಿನ ಟೈರ್ ವೊಂದು ಅವರ ಬದಿಯಲ್ಲೇ ಹಾದು ಹೋಗುತ್ತದೆ. ಇನ್ನೇನು ತಾನು ಬಚಾವಾದೆ ಎನ್ನುವಷ್ಟರಲ್ಲಿ ಆ ಚಕ್ರ ಹಿಂದಿನ ಗೋಡೆಗೆ ಬಡಿದು ಮರಳಿ ಅವರ ತಲೆಯ ಹಿಂಭಾಗಕ್ಕೆ ಬಡಿಯುತ್ತದೆ. ಪರಿಣಾಮವಾಗಿ ಮಹಿಳೆ ನೆಲಕ್ಕೆ ಉರುಳಿ ಬಿದ್ದಿದ್ದಾರೆ. ಮುಂದೇನಾಯಿತು ಎಂಬುದು ವಿಡಿಯೋದಲ್ಲಿ ಸೆರೆಯಾಗದೇ ಇದ್ದರೂ ಅಪಘಾತದ ತೀವ್ರತೆಗೆ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಸಾಧ್ಯತೆ ಇದೆ.


ಸಿಸಿಟಿವಿ ಕೆಮರಾದಲ್ಲಿ ರೆಕಾರ್ಡ್ ಆಗಿರುವ ಈ ದೃಶ್ಯಾವಳಿಯು ಅನಿರೀಕ್ಷಿತ ಅಪಾಯಗಳ ಬಗ್ಗೆ ಹೇಳುತ್ತದೆ. ಇಂತಹ ಅವಘಡದಿಂದ ಹಲವಾರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಕೆಲವರು ತಮ್ಮ ಪ್ರಾಣವನ್ನೂ ಕಳೆದುಕೊಂಡಿದ್ದಾರೆ.

ಹೀಗಾಗಿ ರಸ್ತೆ ಬದಿ ನಡೆದುಕೊಂಡು ಹೋಗುವಾಗಲೂ ಅನಿರೀಕ್ಷಿತ ಘಟನೆಗಳ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕು.
ಈ ಕುರಿತು ವೈರಲ್ ಆಗಿರುವ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದು, ಅಪಾಯದಿಂದ ಪಾರಾಗಲು ಅವಕಾಶವಿತ್ತು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

ದರೋಡೆ ಮಾಡಲು ಬಂದು ನಿದ್ದೆ ಮಾಡಿದ ಕಳ್ಳ

ಸರ್ಕಾರಿ ನೌಕರನೊಬ್ಬನ ಮನೆಗೆ ದರೋಡೆ ಮಾಡಲು ಬಂದ ಕಳ್ಳನೊಬ್ಬ ನಿದ್ದೆಗೆ ಜಾರಿದ ಘಟನೆ ಲಕ್ನೋದಲ್ಲಿ ನಡೆದಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಇದಾಗಿದೆ. ಕೈಗೆ ಸಿಕ್ಕಿದ್ದನ್ನೆಲ್ಲಾ ದರೋಡೆ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ ಆರಾಮ ಮತ್ತು ತಂಪಾಗಿಸುವ ಎಸಿ ಗಾಳಿಯ ಅಡಿಯಲ್ಲಿ ನಿದ್ದೆಗೆ ಜಾರಿದನು. ಆತನ ಸಹಚರರು ಆತನನ್ನು ಎಬ್ಬಿಸಲು ಪ್ರಯತ್ನಿಸಿ ಸುಸ್ತಾಗಿ ಆತನನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ.

ಬೆಳಗ್ಗೆ ಮನೆಯ ಗೇಟ್ ತೆರೆದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಪಾಸಣೆಗೆ ಬಂದ ಪೊಲೀಸರು ಮನೆಯೊಳಗೇ ಆರಾಮವಾಗಿ ಮಲಗಿರುವ ಕಳ್ಳನನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ಕಳ್ಳರು ಮನೆಯಿಂದ ಬಹಳಷ್ಟು ವಸ್ತುಗಳನ್ನು ಕದ್ದೊಯ್ದಿರುವುದು ತಿಳಿದುಬಂದಿದೆ. ಕಳ್ಳ ಎಚ್ಚರಗೊಂಡಾಗ ಅವನ ಮುಂದೆ ಪೊಲೀಸರು ಕುಳಿತಿರುವುದನ್ನು ಕಂಡು ಆತ ಗಾಬರಿಯಾಗಿದ್ದಾನೆ. ಬಳಿಕ ಆತ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ವಿವರಿಸಿದ್ದು, ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

ಧಾರ್ಮಿಕ

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

ಗೋಡೆಗಳ ಮೇಲೆ ತೂಗು ಹಾಕುವ ಚಿತ್ರಗಳಿಗೂ ಪ್ರಮುಖ ನಿಯಮಗಳು ಮತ್ತು ಸಲಹೆಗಳನ್ನು ವಾಸ್ತು ಶಾಸ್ತ್ರದಲ್ಲಿ (Vastu Tips) ನೀಡಲಾಗಿದೆ. ಇವುಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು ಮತ್ತು ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಪ್ರತಿಯೊಂದು ವಸ್ತುವನ್ನು ಇಡಲೂ ವಾಸ್ತು (Vastu Tips) ನಿಯಮವಿದೆ. ಯಾಕೆಂದರೆ ಮನೆಯೊಳಗಿರುವ ಪ್ರತಿಯೊಂದು ವಸ್ತುವಿನಲ್ಲೂ ಜೀವಕಳೆ ತುಂಬುತ್ತದೆ ಮತ್ತು ಶಕ್ತಿಯ ಕೇಂದ್ರವಾಗಿಸುತ್ತದೆ. ಗೋಡೆಯಲ್ಲಿ (wall) ತೂಗು ಹಾಕುವ ಚಿತ್ರಗಳನ್ನು (Picture) ಇಡುವಾಗಲೂ ವಾಸ್ತು ನಿಯಮವನ್ನು ಪಾಲಿಸಬೇಕು. ಯಾಕೆಂದರೆ ಗೋಡೆಗಳ ಮೇಲೆ ಇಡುವ ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಕೇವಲ ಮನೆಯ ಸೌಂದರ್ಯವನ್ನು ಮಾತ್ರ ಹೆಚ್ಚಿಸುವುದಿಲ್ಲ ಸಕಾರಾತ್ಮಕ ಶಕ್ತಿಯನ್ನು ಮನೆಯೊಳಗೆ ಪ್ರವಹಿಸುವಂತೆ ಮಾಡುತ್ತದೆ. ಎಲ್ಲೆಂದರಲ್ಲಿ ಅಳವಡಿಸಿದರೆ ನಕಾರಾತ್ಮಕತೆ ಹೆಚ್ಚುತ್ತದೆ.

ಮನೆಯ ಗೋಡೆಗಳ ಮೇಲೆ ತೂಗು ಹಾಕುವ ಚಿತ್ರ, ಸರಿಯಾದ ದಿಕ್ಕು ಮತ್ತು ನಿರ್ದಿಷ್ ಬಣ್ಣದದ್ದರೆ ಮಾತ್ರ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಉಳಿಯುತ್ತದೆ ಎನ್ನುತ್ತದೆ ವಾಸ್ತು.

ಉತ್ತರ ದಿಕ್ಕು

ಸಂಪತ್ತಿನ ದೇವರು ಕುಬೇರ ಈ ದಿಕ್ಕಿನಲ್ಲಿ ವಾಸಿಸುತ್ತಾನೆ. ಹಚ್ಚ ಹಸಿರಿನ ಮರಗಳು, ಸಸ್ಯವರ್ಗ ಮತ್ತು ನೀರಿನ ಮೂಲಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತವೆ.

ಪೂರ್ವ ದಿಕ್ಕು

ಈ ದಿಕ್ಕನ್ನು ಉದಯಿಸುತ್ತಿರುವ ಸೂರ್ಯನ ದಿಕ್ಕು ಎಂದು ಪರಿಗಣಿಸಲಾಗಿದೆ. ಭಗವಾನ್ ಸೂರ್ಯ, ಸಂತರು ಅಥವಾ ಸೂರ್ಯೋದಯದ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಪ್ರಯೋಜನಕಾರಿ. ಈ ಚಿತ್ರಗಳು ಮನೆಯಲ್ಲಿ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತರುತ್ತವೆ.

ದಕ್ಷಿಣ ದಿಕ್ಕು

ಪೂರ್ವಜರು ಮತ್ತು ಧರ್ಮಗ್ರಂಥಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇರಿಸಬಹುದು. ದೆವ್ವ, ಆತ್ಮ ಅಥವಾ ನಕಾರಾತ್ಮಕ ಶಕ್ತಿಯ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡಬಾರದು. ಕೆಂಪು, ಚಿನ್ನದ ಅಥವಾ ಕಿತ್ತಳೆ ಬಣ್ಣದ ಚಿತ್ರಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಪಶ್ಚಿಮ ದಿಕ್ಕು

ಈ ದಿಕ್ಕು ನೀರಿನ ಅಂಶದಿಂದ ಪ್ರಭಾವಿತವಾಗಿರುತ್ತದೆ. ಈ ದಿಕ್ಕಿನಲ್ಲಿ ನೀರು, ಸಮುದ್ರ, ನದಿ ಅಥವಾ ಕಾರಂಜಿ ಚಿತ್ರಗಳನ್ನು ಹಾಕುವುದು ಮಾನಸಿಕ ಶಾಂತಿ ಮತ್ತು ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.


ಫೋಟೋಗಳು ಹೇಗಿರಬೇಕು?

ದೇವರು, ದೇವತೆಗಳು ಮತ್ತು ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಮನೆಯಲ್ಲಿ ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಕುಟುಂಬದಲ್ಲಿ ಶಾಂತಿ ಮತ್ತು ಭಕ್ತಿಯನ್ನು ಉತ್ತೇಜಿಸುತ್ತವೆ.

ಹಚ್ಚ ಹಸಿರಿನ ಮರ, ಹೂವುಗಳು, ಪರ್ವತ, ನದಿಗಳು ಮುಂತಾದ ಸುಂದರವಾದ ನೈಸರ್ಗಿಕ ದೃಶ್ಯಗಳ ಚಿತ್ರಗಳನ್ನು ಹಾಕುವುದು ಮನಸ್ಸಿನಲ್ಲಿ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಕುಟುಂಬ ಸದಸ್ಯರ ಗುಂಪು ಫೋಟೋಗಳನ್ನು ಅಥವಾ ಸಂತೋಷದ ಕುಟುಂಬ ಕ್ಷಣಗಳ ಚಿತ್ರಗಳನ್ನು ಹಾಕುವುದು ಕುಟುಂಬದಲ್ಲಿ ಪ್ರೀತಿ ಮತ್ತು ಏಕತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಏರುತ್ತಿರುವ ಸೂರ್ಯ, ಚಾಲನೆಯಲ್ಲಿರುವ ಕುದುರೆಗಳು, ಹಾರುವ ಪಕ್ಷಿಗಳು ಮುಂತಾದ ಶಕ್ತಿಯುತ ಮತ್ತು ಸ್ಪೂರ್ತಿದಾಯಕ ಚಿತ್ರಗಳನ್ನು ಇಡುವುದರಿಂದ ಮನೆಯವರಲ್ಲಿ ಶಕ್ತಿ ಮತ್ತು ಸ್ಫೂರ್ತಿ ನೀಡುತ್ತದೆ.

ಯಾವ ಎತ್ತರದಲ್ಲಿ ಇಡಬೇಕು?

ಚಿತ್ರಗಳನ್ನು ಸುಲಭವಾಗಿ ಗೋಚರಿಸುವಂತಹ ಎತ್ತರದಲ್ಲಿ ಗೋಡೆಯ ಮೇಲೆ ಇಡಬೇಕು ಮತ್ತು ಅವುಗಳನ್ನು ನೋಡುವಲ್ಲಿ ಯಾರೂ ಅನಾನುಕೂಲವಾಗಬಾರದು. ಚಿತ್ರಗಳನ್ನು ಮುಖ್ಯ ಬಾಗಿಲಿನ ಮುಂದೆ ಅಥವಾ ನೇರವಾಗಿ ಹಾಸಿಗೆಯ ಮುಂದೆ ಇಡುವುದನ್ನು ತಪ್ಪಿಸಬೇಕು. ಧಾರ್ಮಿಕ ಅಥವಾ ಕುಟುಂಬದ ಚಿತ್ರಗಳನ್ನು ಅಡುಗೆಮನೆ ಮತ್ತು ಸ್ನಾನಗೃಹದಲ್ಲಿ ಇಡಬಾರದು.

ಇದನ್ನೂ ಓದಿ: Vastu Tips: ವೈವಾಹಿಕ ಜೀವನ ಸುಖಮಯವಾಗಿರಲು ಈ ವಾಸ್ತು ನಿಯಮ ಅನುಸರಿಸಿ

ಫೋಟೋಗಳ ಬಣ್ಣ ಏನು?

ವರ್ಣಚಿತ್ರಗಳಲ್ಲಿ ಬಳಸುವ ಬಣ್ಣಗಳಿಗೆ ಗಮನ ಕೊಡುವುದು ಸಹ ಮುಖ್ಯವಾಗಿದೆ. ನೀಲಿ, ಹಸಿರು, ಹಳದಿ ಮುಂತಾದ ಬೆಳಕು ಮತ್ತು ಹಿತವಾದ ಬಣ್ಣಗಳು ಮಾನಸಿಕ ಶಾಂತಿ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುತ್ತವೆ. ಕೆಂಪು, ಕಪ್ಪು ಮತ್ತು ಕಂದು ಬಣ್ಣಗಳಂತಹ ಗಾಢ ಮತ್ತು ಹೆಚ್ಚು ಉತ್ತೇಜಕ ಬಣ್ಣಗಳನ್ನು ಮಿತವಾಗಿ ಬಳಸಬೇಕು.

ಫೋಟೋಗಳನ್ನು ಹೇಗೆ ಇರಿಸಬೇಕು?

ಚಿತ್ರಗಳನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಉತ್ತಮ ಸ್ಥಿತಿಯಲ್ಲಿಡಬೇಕು. ಧೂಳು, ಕೊಳಕು ಮತ್ತು ಹಾನಿಗೊಳಗಾದ ಚಿತ್ರಗಳು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು.

Continue Reading
Advertisement
ಸೈಬರ್‌ ಸೇಫ್ಟಿ ಅಂಕಣ cyber safety column 2
ಅಂಕಣ21 mins ago

ಸೈಬರ್‌ ಸೇಫ್ಟಿ ಅಂಕಣ: ಭಾರತದ ಭವಿಷ್ಯಕ್ಕೆ ಬ್ಲಾಕ್‌ಚೈನ್‌ನ ಬೆನ್ನೆಲುಬು

Modi 3.0 Cabinet
Lok Sabha Election 202423 mins ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಇವರಿಗೆಲ್ಲ ಸಚಿವ ಸ್ಥಾನ ಫಿಕ್ಸ್?‌

Pawan Kalyan Thammudu Re release
ಟಾಲಿವುಡ್33 mins ago

Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

IND vs PAK
ಕ್ರೀಡೆ38 mins ago

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

Modi 3.0 Cabinet
ದೇಶ39 mins ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ?

ರಾಜಮಾರ್ಗ ಅಂಕಣ ramoji rao
ಅಂಕಣ39 mins ago

ರಾಜಮಾರ್ಗ ಅಂಕಣ: ಮನರಂಜನೆಯ ಮಹಾ ದೊರೆ, ಕನಸುಗಾರನ ನಿರ್ಗಮನ

WI vs UGA
ಕ್ರೀಡೆ1 hour ago

WI vs UGA: ಉಗಾಂಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

Modi 3.0 Cabinet
Lok Sabha Election 20241 hour ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Israel-Hamas Conflict
ವಿದೇಶ1 hour ago

Israel-Hamas Conflict: ಹಮಾಸ್‌ ಉಗ್ರರ ಸೆರೆಯಲ್ಲಿದ್ದ ನಾಲ್ವರ ರಕ್ಷಣೆ; 265 ದಿನಗಳ ನರಕಯಾತನೆ ಬಳಿಕ ತಾಯ್ನಾಡಿಗೆ ವಾಪಾಸ್‌

Uttarakaanda Movie in bhavana menon
ಸ್ಯಾಂಡಲ್ ವುಡ್2 hours ago

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌