Bhaskardas Ekkaru | ರಾಷ್ಟ್ರಮಟ್ಟದಲ್ಲಿ ಅಲೆಮಾರಿಗಳಿಗೆ ಭಾಸ್ಕರದಾಸ್ ಎಕ್ಕಾರು ಧ್ವನಿಯಾಗಿದ್ದರು: ನಳಿನ್‌ ಕುಮಾರ್ ಕಟೀಲ್ - Vistara News

ಬೆಂಗಳೂರು

Bhaskardas Ekkaru | ರಾಷ್ಟ್ರಮಟ್ಟದಲ್ಲಿ ಅಲೆಮಾರಿಗಳಿಗೆ ಭಾಸ್ಕರದಾಸ್ ಎಕ್ಕಾರು ಧ್ವನಿಯಾಗಿದ್ದರು: ನಳಿನ್‌ ಕುಮಾರ್ ಕಟೀಲ್

ಬೆಂಗಳೂರಿನಲ್ಲಿ ಅಪರೂಪದ ಹೋರಾಟಗಾರ ‘ಭಾಸ್ಕರದಾಸ್ ಎಕ್ಕಾರು ನೆನಪಿನ ಯಾತ್ರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಭಾಸಕರದಾಸ್‌ ಎಕ್ಕಾರು ಅವರೊಂದಿಗಿನ ಒಡನಾಟವನ್ನು ನಳಿನ್‌ ಕುಮಾರ್‌ ಕಟೀಲ್‌ ಸ್ಮರಿಸಿದ್ದಾರೆ.

VISTARANEWS.COM


on

Bhaskardas Ekkaru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಅಲೆಮಾರಿಗಳಿಗೆ ಧ್ವನಿ ಕೊಟ್ಟಿದ್ದ ಭಾಸ್ಕರದಾಸ್ ಎಕ್ಕಾರು ಅವರು ಶ್ರಮಜೀವಿ, ಸ್ವಾಭಿಮಾನಿಯಾಗಿದ್ದರು. ಧರ್ಮನಿಷ್ಠರಾಗಿದ್ದ ಅವರು ವಿಚಾರವಾದಿ. ಜಾತ್ಯತೀತರಾಗಿ ವಿಶಿಷ್ಟ ವ್ಯಕ್ತಿತ್ವ ಹೊಂದಿದ್ದರು. ಅಲೆಮಾರಿ ಸಮುದಾಯದ ಕಣ್ಣೀರು ಒರೆಸುವ ಕೆಲಸವನ್ನು ಮಾಡುವ ಜತೆಗೆ ಪಕ್ಷದ ಬಲ ವರ್ಧಿಸಿದ್ದ ಅವರು ನನ್ನ ವ್ಯಕ್ತಿತ್ವ ರೂಪುಗೊಳ್ಳುವಲ್ಲಿ ಪ್ರಮುಖರು ಎಂದು ರಾಜ್ಯ ಬಿಜೆಪಿ‌ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾಗಿ ಮಾತನಾಡಿದರು.

ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಚೆನ್ನದಾಸರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಮಿಥಿಕ್ ಸೊಸೈಟಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಲೆಮಾರಿ ಸಮುದಾಯದ ನಡುವಿನ ಅಪರೂಪದ ಹೋರಾಟಗಾರ ‘ಭಾಸ್ಕರದಾಸ್ ಎಕ್ಕಾರು ನೆನಪಿನ ಯಾತ್ರೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ | Voter Data | ಅಲ್ಪಸಂಖ್ಯಾತ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿಲ್ಲ: ಸಿಎಂ ಬೊಮ್ಮಾಯಿ

ಕ್ಷೇತ್ರದಲ್ಲಿ ಬಿಜೆಪಿಯನ್ನು ಎಕ್ಕಾರು ತಳಮಟ್ಟದಿಂದ ಕಟ್ಟಿದ್ದರು. ಗ್ರಾಮ ಪಂಚಾಯಿತಿ ಮಟ್ಟದಿಂದ 12 ಸದಸ್ಯರನ್ನು ಗೆಲ್ಲಿಸುವುದರಿಂದ ಆರಂಭವಾಗಿ ಕೊನೆಯವರೆಗೂ ಬಿಜೆಪಿ ತತ್ವಗಳಿಗೆ ಬದ್ಧರಾಗಿದ್ದರು. ಅಲೆಮಾರಿ ಜನಾಂಗದವರು ಮತಾಂತರ ಆಗುವ ಆತಂಕ ಅವರಲ್ಲಿ ಇತ್ತು. ಅಲೆಮಾರಿಗಳ ಅಭಿವೃದ್ಧಿ ಜತೆಗೆ ಧರ್ಮರಕ್ಷಣೆ ಕಾರ್ಯವನ್ನು ಮಾಡಿದ್ದರು ಎಂದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಶೀಘ್ರವೇ ಆಯೋಗ ರಚಿಸಲಾಗುವುದು ಎಂದು ಭರವಸೆ ನೀಡಿದರು.

ಅಲೆಮಾರಿಗಳ ಅಭಿವೃದ್ಧಿಗಾಗಿ ಆಯೋಗ ರಚನೆ ಭಾಸ್ಕರದಾಸ್ ಎಕ್ಕಾರು ಅವರ ಕನಸು. ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಕೇಂದ್ರದಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ಲಭ್ಯವಾಗುತ್ತದೆ. ಇದರಿಂದ ಅಲೆಮಾರಿ ಜಾತಿಗಳ ವರ್ಗೀಕರಣ, ಅಭಿವೃದ್ಧಿಗೆ ಅನುದಾನ ಸಿಗಲಿದೆ. ಹೀಗಾಗಿ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ಶೀಘ್ರವೇ ಆಯೋಗ ರಚನೆ ಬಗ್ಗೆ ತೀರ್ಮಾನಿಸಲಾಗುವುದು. ಇನ್ನು, ಅಲೆಮಾರಿಗಳಿಗೆ ವಸತಿ ಯೋಜನೆಯಡಿ ಮುಂದಿನ ಹದಿನೈದು ದಿನಗಳಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 10 ಸಾವಿರ ಮನೆಗಳನ್ನು ವಿತರಣೆ ಮಾಡಲಿದ್ದೇವೆ ಎಂದರು.

ಅಲೆಮಾರಿ ಸಮುದಾಯಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಭೀಕೂ ರಾಮಜಿ ಇದಾತೆ ಮಾತನಾಡಿ, ತೀರಾ ಸರಳವಾಗಿ ಬದುಕಿ ಬಾಳಿದ ಎಕ್ಕಾರು ಅವರದು ಸಂವೇದನಾಶೀಲ ವ್ಯಕ್ತಿತ್ವ. ಅವರ ಜೀವನ ಮುಂದಿನ ಪೀಳಿಗೆಗೆ ಮಾರ್ಗದರ್ಶಿ ಆಗಬೇಕು. ಅವರ ಹೆಸರಿನಲ್ಲಿ ಪುರಸ್ಕಾರ ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಂದೊಳ್ಳು ಮಾತನಾಡಿ, ಭಾಸ್ಕರದಾಸ್ ಅವರು ಕೊನೆಯವರೆಗೂ ಅಲೆಮಾರಿ ಸಮುದಾಯದ ಪರವಾಗಿ ಶ್ರಮಿಸಿದರು. ಸಮಾಜದ ವಿಕಾಸದ ಹಾದಿಯಲ್ಲಿ ನಂಬಿಕೆ ಇಟ್ಟಿದ್ದರು. ಅವರ ಕಾರ್ಯವನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಬೇಕು. ಅವರ ಹೆಸರಿನಲ್ಲಿ ಪುರಸ್ಕಾರ ನೀಡುವಂತಾಗಬೇಕು. ಸರ್ಕಾರ ಆದಷ್ಟು ಬೇಗ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ನಿಗಮ ರಚಿಸಲಿ ಎಂದು ಒತ್ತಾಯಿಸಿದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅನೀಲ ಪಾಡ್, ಹಿರಿಯ ಮುಖಂಡ ಕುಪ್ಪೆ ನಾಗರಾಜ್, ಚಾವಡೆ ಕೆ. ಲೋಕೇಶ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | ಡಿ.ಕೆ.ಶಿವಕುಮಾರ್ ಯಾರ ಶಿಷ್ಯ, ಎಲ್ಲಿಂದ ಬಂದದ್ದು ಗೊತ್ತಿದೆ: ನಳಿನ್‍ಕುಮಾರ್ ಕಟೀಲ್ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

Dr C N Manjunath: ಬಿಜೆಪಿ ಅಭ್ಯರ್ಥಿಗೆ (Dr C N Manjunath) ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ ಕೆ ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

VISTARANEWS.COM


on

Dr C N Manjunath
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ (Bangalore Rural Election Result 2024) ಮೂರು ಬಾರಿ ಸಂಸದರಾಗಿ ಭಾರಿ ಅಂತರದಿಂದ ಆಯ್ಕೆಯಾಗಿದ್ದ ಡಿ.ಕೆ. ಸುರೇಶ್‌ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ (Dr C N Manjunath) ಅವರ ವಿರುದ್ಧ ಭಾರಿ ಅಂತರದಿಂದ ಸೋತಿದ್ದಾರೆ. ವಿಶೇಷ ಅಂದರೆ ಡಿ.ಕೆ. ಸುರೇಶ್‌ ಅವರಿಗೆ ಅವರ ಹುಟ್ಟೂರು ಕನಕಪುರದಲ್ಲಿ ಮಾತ್ರ 25,677 ಮತಗಳ ಲೀಡ್‌ ಸಿಕ್ಕಿದೆ. ರಾಮನಗರದಲ್ಲಿ ಸಿಕ್ಕಿರುವುದು ಕೇವಲ 145 ಮತಗಳ ಮುನ್ನಡೆ.‌ ಇವೆರಡು ಕ್ಷೇತ್ರಗಳನ್ನು ಬಿಟ್ಟರೆ ಉಳಿದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಡಾ. ಸಿ ಎನ್‌ ಮಂಜುನಾಥ್‌ ಅವರಿಗೇ ಲೀಡ್‌ ಸಿಕ್ಕಿದೆ.

ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ.ಕೆ. ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ. ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ | Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

ಬೆಂಗಳೂರು ಹೊರಗಿನ ಮಾಗಡಿ, ಚನ್ನಪಟ್ಟಣ, ಕುಣಿಗಲ್‌, ಆನೇಕಲ್‌ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಡಾ.ಸಿ. ಎನ್‌. ಮಂಜುನಾಥ್‌ ಅವರೇ 25 ರಿಂದ 35 ಸಾವಿರದ ತನಕ ಮುನ್ನಡೆ ಸಾಧಿಸಿದ್ದಾರೆ. ಆದರೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್‌ ಅವರಿಗೆ ಭಾರೀ ಹಿನ್ನಡೆಯಾಗಿದೆ. ಡಾ.ಸಿ. ಎನ್‌. ಮಂಜುನಾಥ್‌ ಅವರಿಗೆ ರಾಜರಾಜೇಶ್ವರಿ ನಗರದಲ್ಲಿ 98,997 ಮತಗಳ ಭಾರಿ ಲೀಡ್‌ ಸಿಕ್ಕಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 97,129 ಮತಗಳ ಮುನ್ನಡೆ ಸಿಕ್ಕಿದೆ. ಹೀಗೆ ಬೆಂಗಳೂರು ನಗರದಲ್ಲೇ ಬಿಜೆಪಿ ಅಭ್ಯರ್ಥಿಗೆ ಸುಮಾರು 2 ಲಕ್ಷ ಮತಗಳ ಮುನ್ನಡೆ ಸಿಕ್ಕಂತಾಗಿದೆ. ಇದರ ಪರಿಣಾಮವಾಗಿ ಡಿ.ಕೆ. ಸುರೇಶ್‌ ಅವರು ಭಾರಿ ಅಂತರದಿಂದ ಸೋತಿದ್ದಾರೆ. ಡಾ. ಮಂಜುನಾಥ್‌ ಅವರಿಗೆ ಶೇ.56.2ರಷ್ಟು ಮತಗಳು ಸಿಕ್ಕಿದ್ದರೆ, ಡಿ ಕೆ ಸುರೇಶ್‌ ಅವರಿಗೆ ಶೇ.42.2ರಷ್ಟು ಮತಗಳು ಲಭಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಳ ವಿಧಾನಸಭೆ ಕ್ಷೇತ್ರವಾರು ಪಟ್ಟಿ ಈ ಕೆಳಗಿನಂತಿದೆ.

ಒಟ್ಟು ಮತ ಗಳಿಕೆ
ಡಾ. ಮಂಜುನಾಥ್: 1078914
ಡಿ.ಕೆ.ಸುರೇಶ್: 809324
ಗೆಲುವಿನ ಅಂತರ: 2,69,590

ರಾಮನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 91,945
ಡಿ.ಕೆ.ಸುರೇಶ್: 92,090
ಕ್ಷೇತ್ರದ ಲೀಡ್: 145 (ಕಾಂಗ್ರೆಸ್)

ಮಾಗಡಿ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,13,911
ಡಿ.ಕೆ.ಸುರೇಶ್: 83,938
ಕ್ಷೇತ್ರದ ಲೀಡ್: 29973(ಬಿಜೆಪಿ)

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್:106971
ಡಿ.ಕೆ.ಸುರೇಶ್: 85357
ಕ್ಷೇತ್ರದ ಲೀಡ್: 21,614 (ಬಿಜೆಪಿ)

ಕನಕಪುರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 83,303
ಡಿ.ಕೆ.ಸುರೇಶ್: 1,08,980
ಕ್ಷೇತ್ರದ ಲೀಡ್: 25677 (ಕಾಂಗ್ರೆಸ್)

ಕುಣಿಗಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 97,248
ಡಿ.ಕೆ.ಸುರೇಶ್: 73,410
ಕ್ಷೇತ್ರದ ಲೀಡ್: 23,838 (ಬಿಜೆಪಿ)

ಅನೇಕಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,37,693
ಡಿ.ಕೆ.ಸುರೇಶ್: 1,15,328
ಕ್ಷೇತ್ರದ ಲೀಡ್: 22,365 (ಬಿಜೆಪಿ)

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 2,55,756
ಡಿ.ಕೆ.ಸುರೇಶ್: 1,58,627
ಕ್ಷೇತ್ರದ ಲೀಡ್: 97,129 (ಬಿಜೆಪಿ)

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,88,726
ಡಿ.ಕೆ.ಸುರೇಶ್: 89,729
ಕ್ಷೇತ್ರದ ಲೀಡ್: 98,997 (ಬಿಜೆಪಿ)

ಇದನ್ನೂ ಓದಿ | ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Continue Reading

ಕರ್ನಾಟಕ

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Water Supply Cut: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜೂನ್‌ 6 ಮತ್ತು 7ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Water Supply Cut
Koo

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ (Cauvery water) 5ನೇ ಹಂತದ ಅನುಷ್ಠಾನದ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ವಿವಿಧ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ನಗರದ ಬಹುತೇಕ ಕಡೆ ಜೂನ್‌ 6 ಮತ್ತು 7ರಂದು ಕಾವೇರಿ ನೀರಿನ (Water Supply Cut) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿ ಸುತ್ತೋಲೆ ಹೊರಡಿಸಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2 ಮತ್ತು 3 ನೇ ಹಂತಗಳ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹಾಗೂ ಕಾವೇರಿ ನಾಲ್ಕನೇ ಹಂತ, 1 ಮತ್ತು 2ನೇ ಹಂತ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ 6 ಮತ್ತು ಜೂನ್ 7ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ನಗರದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಈ ಮೊದಲು ಜೂನ್ 4 ರಂದು ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು, ಆದರೆ ಕಾರಣಾಂತರಗಳಿಂದ ಇದನ್ನು ಜೂನ್ 6ಕ್ಕೆ ಮುಂದೂಡಲಾಗಿದೆ. ಹೀಗಾಗಿ ಜೂನ್ 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಜಲಮಂಡಳಿ ಮಂಡಳಿ ಕೋರಿದೆ.

ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

Train services

ಬೆಂಗಳೂರು: ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳ ಮಾರ್ಗ ಬದಲಾವಣೆ (Train services) ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ಜೂನ್ 05, 06 ಮತ್ತು 13 ರಂದು ಎರ್ನಾಕುಲಂನಿಂದ ಹೊರಡುವ ರೈಲು (ರೈಲು ಸಂಖ್ಯೆ 12678) ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಇನ್ನೂ ಜೂನ್ 05, 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಜೂನ್ 05, 12 ಮತ್ತು 19 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 20 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ರೈಲುಗಳ ಮರು ವೇಳಾಪಟ್ಟಿ:

ಕನ ಸೊಲಿಮ್ – ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ರೈಲುಗಳನ್ನು ಮರು ನಿಗದಿಪಡಿಸಲಾಗುವುದು.

1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದೀನ್ ಎಕ್‌ಪ್ರೆಸ್‌ ಜೂನ್ 10ರಂದು ವಾಸ್ಕೋ-ಡ-ಗಾಮಾದಿಂದ 2 ಗಂಟೆ (120 ನಿಮಿಷ) ತಡವಾಗಿ ಹೊರಡಲಿದೆ.

2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 1 ಗಂಟೆ 30 ನಿಮಿಷ (90 ನಿಮಿಷಗಳ) ತಡವಾಗಿ ಹೊರಡಲಿದೆ. ಜತೆಗೆ ಮಾರ್ಗದಲ್ಲಿ 1 ಗಂಟೆ 45 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Kannada New Movie: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Operation London Cafe movie will be released very soon
Koo

ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇದನ್ನೂ ಓದಿ: R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕರ್ನಾಟಕ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Toyota: ವಿಶ್ವ ಪರಿಸರ ದಿನದ ಅಂಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಬೆಳೆಸಲು, ಹಸಿರು, ಸುಸ್ಥಿರ ಭವಿಷ್ಯವನ್ನು ಪ್ರತಿಪಾದಿಸಲು ಈ ವರ್ಷದ ಜೂನ್ ತಿಂಗಳನ್ನು ಟೊಯೊಟಾ ಪರಿಸರ ಮಾಸಾಚರಣೆ ಆರಂಭಿಸಿದೆ. ಪರಿಸರ ನಿರ್ವಹಣೆಯ ಕುರಿತು ಜಾಗೃತಿ ಮತ್ತು ಕಾರ್ಯಕ್ರಮಗಳನ್ನು ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ.

VISTARANEWS.COM


on

Environment Month celebration by Toyota Kirloskar Motor
Koo

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ)ನಿಂದ ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಬೆಳೆಸುವುದು ಮತ್ತು ಹಸಿರು, ಸುಸ್ಥಿರ ಭವಿಷ್ಯವನ್ನು ಪ್ರತಿಪಾದಿಸಲು ಜೂನ್ 2024ಅನ್ನು ಟೊಯೊಟಾ (Toyota Kirloskar Motor) ಪರಿಸರ ಮಾಸಾಚರಣೆ ಪ್ರಾರಂಭಿಸಲಾಗಿದೆ.

ಟೊಯೊಟಾ ಎನ್ವಿರಾನ್‌ಮೆಂಟ್ ಚಾಲೆಂಜ್ 2050 (ಟಿಇಸಿ 2050) ಮತ್ತು ಈ ವರ್ಷದ ಥೀಮ್ “ಜಾಗತಿಕ ನಂ.1 ಆಗಲು ಜವಾಬ್ದಾರಿಯುತ ಸಂಪನ್ಮೂಲ ಬಳಕೆಗಾಗಿ ಒಗ್ಗೂಡಿ” ಎಂಬ ಧ್ಯೇಯ ವಾಕ್ಯದೊಂದಿಗೆ ತನ್ನ ದೀರ್ಘಕಾಲೀನ ದೃಷ್ಟಿಕೋನದ ಕಾರ್ಯಕ್ರಮಗಳ ಮೂಲಕ ಕಂಪನಿಯು ನೀರಿನ ನಿರ್ವಹಣೆ ಮತ್ತು ಅರಣ್ಯೀಕರಣದ ಮೂಲಕ ನೈಸರ್ಗಿಕ ಪರಿಸರ ವ್ಯವಸ್ಥೆಯ ಪುನರುಜ್ಜೀವನದ ಮೇಲೆ ಪ್ರಮುಖ ಗಮನ ಹರಿಸಿದೆ.

ಪರಿಸರ ನಿರ್ವಹಣೆಯ ಕುರಿತು ಜಾಗೃತಿ ಮತ್ತು ಕಾರ್ಯಕ್ರಮಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದು “ನಮ್ಮ ಭೂಮಿ, ನಮ್ಮ ಭವಿಷ್ಯ” ಎಂಬ ಘೋಷಣೆ ಸುತ್ತುವರೆದಿರುವ ಭೂ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವದ ನಿರ್ಣಾಯಕ ಸಮಸ್ಯೆಗಳನ್ನು ಒತ್ತಿ ಹೇಳುತ್ತದೆ.

ಇದನ್ನೂ ಓದಿ: Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

ಹಲವು ವರ್ಷಗಳಿಂದ ಟಿಕೆಎಂ ಪ್ರಜ್ಞಾಪೂರ್ವಕವಾಗಿ ಸುಸ್ಥಿರ ವ್ಯವಹಾರ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಕಾರು ತಯಾರಕರಿಂದ ಚಲನಶೀಲತೆ ಕಂಪನಿಯಾಗಿ ರೂಪಾಂತರಗೊಂಡಿದೆ. ಭೂ ಗ್ರಹವನ್ನು ಗೌರವಿಸುವ ತತ್ವವನ್ನು ಗಮನದಲ್ಲಿಟ್ಟುಕೊಂಡು, ಟೊಯೊಟಾ ಜಾಗತಿಕವಾಗಿ ಅಕ್ಟೋಬರ್ 2015 ರಲ್ಲಿ ‘ಟೊಯೊಟಾ ಎನ್ವಿರಾನ್‌ಮೆಂಟ್ ಚಾಲೆಂಜ್ 2050’ (ಟಿಇಸಿ 2050) ಅನ್ನು ಘೋಷಿಸಿತು. ಇದು ಆರು ಪರಿಸರ ಸವಾಲುಗಳನ್ನು ಒಳಗೊಂಡಿದೆ. ಮೊದಲ ಮೂರು ಸವಾಲುಗಳು – ನಮ್ಮ ಉತ್ಪನ್ನಗಳಿಂದ ಇಂಗಾಲದ ತಟಸ್ಥತೆಯನ್ನು ಸಾಧಿಸುವುದರ ಮೇಲೆ ಕೇಂದ್ರೀಕರಿಸುತ್ತದೆ, ಮತ್ತು ಉತ್ಪಾದನಾ ಚಟುವಟಿಕೆಗಳು ಸೇರಿದಂತೆ ಅದರ ಸಂಪೂರ್ಣ ಮೌಲ್ಯ ಸರಪಳಿಯನ್ನು ಒಳಗೊಂಡಿದೆ.

ನಂತರದ 3 ಸವಾಲುಗಳು ನೀರಿನ ಬಳಕೆಯನ್ನು ಕಡಿಮೆ ಮಾಡುವ ಮತ್ತು ಉತ್ತಮಗೊಳಿಸುವ ಮೂಲಕ, ಮರುಬಳಕೆ ಆಧಾರಿತ ಸಮಾಜವನ್ನು ಸಕ್ರಿಯಗೊಳಿಸುವುದು ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯ’ದಲ್ಲಿ ಭವಿಷ್ಯದ ಸಮಾಜವನ್ನು ಸ್ಥಾಪಿಸುವ ಮೂಲಕ ಸಕಾರಾತ್ಮಕ ಪರಿಣಾಮವನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ.

ನಮ್ಮ ಸಂಪನ್ಮೂಲಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಗುರಿಯೊಂದಿಗೆ, ಟಿಕೆಎಂ ಸಮಗ್ರ ವಿಧಾನವನ್ನು ಅಳವಡಿಸಿಕೊಂಡಿದೆ. ಉತ್ಪಾದನೆಗೆ ಅಗತ್ಯವಿರುವ 95% ನೀರನ್ನು ಮರುಬಳಕೆ ಮತ್ತು ಮಳೆನೀರು ಕೊಯ್ಲು ಮೂಲಕ ಪೂರೈಸಲಾಗುತ್ತದೆ. ಇದಲ್ಲದೆ, ಟಿಕೆಎಂ ತ್ಯಾಜ್ಯದ ಮರುಬಳಕೆಯನ್ನು 96% ವರೆಗೆ ಹೆಚ್ಚಿಸುವುದರೊಂದಿಗೆ ಮರುಬಳಕೆ ಆಧಾರಿತ ಸಮಾಜವನ್ನು ಉತ್ತೇಜಿಸುತ್ತಿದೆ.

ಇದನ್ನೂ ಓದಿ: India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಪರಿಸರದ ಮೇಲ್ವಿಚಾರಕರಾಗಿ ಕಂಪನಿಯು ಪ್ರಕೃತಿ ಸಂರಕ್ಷಣೆಯಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹಲವು ವರ್ಷಗಳಿಂದ ಟಿಕೆಎಂ ಮಿಯಾವಾಕಿ ಪರಿಕಲ್ಪನೆಯನ್ನು ಬಳಸಿಕೊಂಡು ತನ್ನ ಕಾರ್ಖಾನೆ ಆವರಣದಲ್ಲಿ 112 ಎಕರೆಗಳಲ್ಲಿ 328,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟಿದೆ. ಇದು “ಸಂಭಾವ್ಯ ನೈಸರ್ಗಿಕ ಸಸ್ಯವರ್ಗ” ಪರಿಕಲ್ಪನೆಯ ಆಧಾರದ ಮೇಲೆ ಕಾಡುಗಳನ್ನು ಪುನಃಸ್ಥಾಪಿಸುವ ಮತ್ತು ಪುನರ್ನಿರ್ಮಿಸುವತ್ತ ಗಮನ ಹರಿಸುತ್ತದೆ.

ಸ್ಥಳೀಯ ಜೀವವೈವಿಧ್ಯತೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಲು ಟಿಕೆಎಂ ಅತ್ಯಾಧುನಿಕ ‘ಪರಿಸರ ವಲಯ’ ಎಂಬ ಪ್ರಾಯೋಗಿಕ ಕಲಿಕಾ ಕೇಂದ್ರವನ್ನು ಸ್ಥಾಪಿಸಿದೆ. ಇದು ಟಿಕೆಎಂನ ಸ್ಥಾವರದಲ್ಲಿ 17 ಥೀಮ್ ಪಾರ್ಕ್‌ಗಳನ್ನು ಹೊಂದಿದೆ. ಹವಾಮಾನ ಬದಲಾವಣೆ, ಕಸದಿಂದ-ರಸ, ಪರಿಸರ ಸಮತೋಲನ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಪ್ರಕೃತಿ ಸಂರಕ್ಷಣೆಯ ವಿವಿಧ ಅಂಶಗಳ ಬಗ್ಗೆ ಜ್ಞಾನ ಹಂಚಿಕೆಯ ಮೂಲಕ ಕೊಡುಗೆ ನೀಡುತ್ತಲೇ ಇದೆ.

ಬಿಡದಿ ಮತ್ತು ರಾಮನಗರ ಪ್ರದೇಶಗಳಲ್ಲಿನ ಉದ್ಯೋಗಿಗಳು ಮತ್ತು ಅವರ ಕುಟುಂಬಗಳು, ವ್ಯವಹಾರ ಸಹವರ್ತಿಗಳು, ಟೊಯೋಟಾ ಗ್ರೂಪ್ ಕಂಪನಿಗಳ ಸದಸ್ಯರು, ಶಾಲಾ ಮಕ್ಕಳು ಮತ್ತು ಸಮುದಾಯದ ಸದಸ್ಯರು ಸೇರಿದಂತೆ ಮಧ್ಯಸ್ಥಗಾರರಲ್ಲಿ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸಲು “ಟೊಯೊಟಾ ಸ್ವಚ್ಛ ಅಭಿಯಾನ, “ರಾರ್” (ಜವಾಬ್ದಾರಿಯಾಗಿ ಮರುಬಳಕೆ / ಉದಾ. ಕಚೇರಿ ಸಮವಸ್ತ್ರ ಮರುಬಳಕೆ), ಟೊಯೊಟಾ ಇಕೋ ಕ್ಲಬ್, ಇಕೋ ಫ್ಯಾಮಿಲಿ ವಾಕ್ (ಪರಿಸರ ವಲಯ) ಮುಂತಾದ ಚಟುವಟಿಕೆಗಳನ್ನು ಇಡೀ ತಿಂಗಳು ಆಯೋಜಿಸಲಾಗಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಉತ್ಪಾದನಾ ನಿರ್ದೇಶಕ ಬಿ.ಪದ್ಮನಾಭ ಟಿಕೆಎಂನ ಪರಿಸರ ಮಾಸಾಚರಣೆ ಕುರಿತು ಮಾತನಾಡಿ, “ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಲ್ಲಿ ಆರ್ಥಿಕ ಪ್ರಗತಿಯಷ್ಟೇ ಅಲ್ಲದೆ, ಪರಿಸರ ಮತ್ತು ಸಾಮಾಜಿಕ ಸುಸ್ಥಿರತೆಯೂ ನಿರ್ಣಾಯಕವಾಗಿದೆ ಎಂದು ನಾವು ಗುರುತಿಸುತ್ತೇವೆ. ಟೊಯೊಟಾ ಜಾಗತಿಕವಾಗಿ ಪರಿಹರಿಸಲು ಪ್ರಯತ್ನಿಸುತ್ತಿರುವ ಆರು ಪರಿಸರ ಸವಾಲುಗಳಿಗೆ ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಹಿಂದೆ ಟಿಕೆಎಂ ತನ್ನ ಪರಿಸರ ಬದ್ಧತೆಗಾಗಿ ಆಯಾ ವಿಭಾಗಗಳಲ್ಲಿ ವಿವಿಧ ಪ್ರಶಂಸೆಗಳು / ಮಾನ್ಯತೆಗಳನ್ನು ಪಡೆದಿದೆ. ಟೆರಿ ವಾಟರ್ ಸಸ್ಟೈನಬಿಲಿಟಿ ಪ್ರಶಸ್ತಿ, ಜೀವವೈವಿಧ್ಯತೆಗಾಗಿ ಸಿಐಐ ಸುಸ್ಥಿರತೆ ಪ್ರಶಸ್ತಿ, ನೀರು ಮತ್ತು ಅಪಾಯಕಾರಿ ತ್ಯಾಜ್ಯ ನಿರ್ವಹಣೆಗಾಗಿ ಸಿಐಐ ಪ್ರಶಸ್ತಿ, ನೀರಿನ ನಿರ್ವಹಣೆಯಲ್ಲಿ ಸಿಐಐ-ಎಸ್ಆರ್ ಇಎಚ್ಎಸ್ ಎಕ್ಸಲೆನ್ಸ್ ಪ್ರಶಸ್ತಿ, ಸಿಐಐ ಗ್ರೀನ್ ಕೋ ಪ್ಲಾಟಿನಂ ಕಂಪನಿ ಪರಿಸರ ಶ್ರೇಷ್ಠತೆ ಮತ್ತು ಸುಸ್ಥಿರ ನಾಯಕತ್ವಕ್ಕಾಗಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದೆ.

Continue Reading
Advertisement
Karnataka Weather
ಪ್ರಮುಖ ಸುದ್ದಿ2 mins ago

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Whitening Toothpaste
ಆರೋಗ್ಯ17 mins ago

Whitening Toothpaste: ವೈಟ್ನಿಂಗ್‌ ಪೇಸ್ಟ್‌ಗಳಿಂದ ಹಲ್ಲುಗಳಿಗೆ ಹಾನಿ ಆಗುತ್ತಾ?

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Odisha
ದೇಶ6 hours ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ7 hours ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ7 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ8 hours ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ8 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ8 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ8 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌