Navy Day| ಇಂದು ನೌಕಾಪಡೆ ದಿನ; ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ನಡೆಯುತ್ತಿಲ್ಲ ಆಚರಣೆ - Vistara News

ದೇಶ

Navy Day| ಇಂದು ನೌಕಾಪಡೆ ದಿನ; ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ನಡೆಯುತ್ತಿಲ್ಲ ಆಚರಣೆ

ಇಂದು ನೌಕಾಪಡೆ ದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್​ ಶುಭಕೋರಿದ್ದಾರೆ. ನೌಕಾದಳಕ್ಕೆ ಸಂಬಂಧಪಟ್ಟ ವಿಡಿಯೊವೊಂದನ್ನು ಶೇರ್​ ಮಾಡಿಕೊಂಡು ಧ್ವನಿ ಸಂದೇಶವನ್ನೂ ಕೊಟ್ಟಿದ್ದಾರೆ.

VISTARANEWS.COM


on

Navy Day celebrations in Visakhapatnam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರತಿವರ್ಷ ಡಿಸೆಂಬರ್​ 4ರಂದು ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ. 1971ರಲ್ಲಿ ಇಂಡೋ-ಪಾಕ್​ ಯುದ್ಧ ನಡೆದ ಸಂದರ್ಭದಲ್ಲಿ ಭಾರತೀಯ ಸೇನೆ ನಡೆಸಿದ ‘ಆಪರೇಶನ್​ ಟ್ರೈಡೆಂಟ್​’ ಸ್ಮರಣಾರ್ಥವಾಗಿ ಪ್ರತಿವರ್ಷ ಡಿ.4ರಂದು ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ. 1971ರ ಡಿಸೆಂಬರ್​ 4 ಮತ್ತು 5ರಂದು ಭಾರತೀಯ ನೌಕಾಪಡೆ ಈ ಆಪರೇಶನ್​ ಟ್ರೈಡೆಂಟ್​​ ಪ್ರಾರಂಭಿಸಿತ್ತು. ಕರಾಚಿ ಬಂದರಿನ ರಕ್ಷಣೆಗಾಗಿ ಪಾಕಿಸ್ತಾನ ನಿಯೋಜಿಸಿಟ್ಟಿದ್ದ ರಕ್ಷಣಾ ಹಡಗುಗಳನ್ನು ಭಾರತೀಯ ನೌಕಾಪಡೆ ಕ್ಷಿಪಣಿಗಳು ಧ್ವಂಸಗೊಳಿಸಿದ್ದವು. ಭಾರತೀಯ ನೌಕೆಗಳು ಯಾವುದೇ ಹಾನಿಗೂ ಒಳಗಾಗದೆ ಸುರಕ್ಷಿತವಾಗಿ ವಾಪಸ್​ ಬಂದಿದ್ದವು. ಅಂತಿಮವಾಗಿ ಜಯ ಭಾರತಕ್ಕೆ ಲಭಿಸಿತ್ತು. ಅಂದು ನೌಕಾಪಡೆ ನಡೆಸಿದ್ದ ಆಪರೇಶನ್​ ಟ್ರೈಡೆಂಟ್ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಭಾಗವಾಗಿದೆ. ಹಾಗಾಗಿಯೇ ಪ್ರತಿವರ್ಷವೂ ಡಿ.4ರಂದು ಅದನ್ನು ಸ್ಮರಿಸಲಾಗುತ್ತದೆ.

ಪ್ರತಿವರ್ಷವೂ ನೌಕಾಪಡೆ ದಿನವನ್ನು ರಾಷ್ಟ್ರರಾಜಧಾನಿ ದೆಹಲಿಯಲ್ಲೇ ಆಚರಣೆ ಮಾಡಲಾಗುತ್ತಿತ್ತು. ಇದರಲ್ಲಿ ರಾಷ್ಟ್ರಪತಿ ಸೇರಿ ವಿವಿಧ ಗಣ್ಯರು ಪಾಲ್ಗೊಳ್ಳುತ್ತಿದ್ದರು. ಆದರೆ ಈ ಸಲ ಮೊದಲ ಬಾರಿಗೆ ಭಾರತೀಯ ನೌಕಾಪಡೆ ದಿನವನ್ನು ವಿಶಾಖಪಟ್ಟಣಂನಲ್ಲಿ ಆಚರಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ತಿಳಿಸಿದೆ. ಭಾರತವೀಗ ಸ್ವಾತಂತ್ರ್ಯ ಬಂದು 75ನೇ ವರ್ಷದ ‘ಅಮೃತ ಕಾಲ’ದಲ್ಲಿದೆ. ಈ ಹೊತ್ತಲ್ಲಿ ಭಾರತೀಯ ನೌಕಾಪಡೆ ತನ್ನ ಯುದ್ಧ ಸಾಮರ್ಥ್ಯವನ್ನು ದೇಶಕ್ಕೆ ಪರಿಚಯ ಮಾಡಿಕೊಡಲು ನಿರ್ಧಾರ ಮಾಡಿದೆ. ಇಂದು ನೌಕಾಪಡೆ ದಿನದ ನಿಮಿತ್ತ ವಿಶಾಖಪಟ್ಟಣಂನಲ್ಲಿ ‘ಆಪರೇಶನಲ್​ ಡೆಮಾನ್​ ಸ್ಟ್ರೇಶನ್​’ ಮೂಲಕ ಯುದ್ಧ ಪಟ್ಟುಗಳ ಪ್ರದರ್ಶನ ನಡೆಸಲಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶುಭ ಕೋರಿದ ಪ್ರಧಾನಿ ಮೋದಿ
ಇಂದು ನೌಕಾಪಡೆ ದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್​ ಶುಭಕೋರಿದ್ದಾರೆ. ನೌಕಾದಳಕ್ಕೆ ಸಂಬಂಧಪಟ್ಟ ವಿಡಿಯೊವೊಂದನ್ನು ಶೇರ್​ ಮಾಡಿಕೊಂಡು ಧ್ವನಿ ಸಂದೇಶವನ್ನೂ ಕೊಟ್ಟಿದ್ದಾರೆ. ‘ನೌಕಾ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ನೌಕಾಪಡೆ ದಿನದ ಹಾರ್ದಿಕ ಶುಭಾಶಯಗಳು. ಭಾರತೀಯ ನೌಕಾಪಡೆ ಭಾರತದ ರಕ್ಷಣೆಗಾಗಿ ಸದೃಢವಾಗಿ ನಿಂತಿದೆ. ದೇಶದೊಳಗೆ ಪ್ರಾಕೃತಿಕ ವಿಪತ್ತು, ಮತ್ತಿತರ ಸವಾಲುಗಳು ಎದುರಾದಾಗ ಮಾನವಿಯತೆಯೊಂದಿಗೆ ಅದನ್ನು ಎದುರಿಸಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕೀಯ: ನೌಕಾಪಡೆಗೆ ಮಹಿಳಾ ಬಲ, ಅಗ್ನಿವೀರರ ಸೇರ್ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ರೈಲಿಯಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Viral News: ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಆಕೆಗೆ ಛೀಮಾರಿ ಹಾಕುತ್ತಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕುʼʼ ಎಂದು ಬಹುತೇಕರು ಆಗ್ರಹಿಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಮಾಡುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಇದು ಯಾವ ಮಟ್ಟಿಗೆ ಅತಿರೇಕಕ್ಕೆ ಹೋಗಿದೆ ಎಂದರೆ ಸಾರ್ವಜನಿಕ ಸ್ಥಳಗಳಲ್ಲಿಯೂ ವಿಡಿಯೊ ಮಾಡಲು ಮುಂದಾಗುತ್ತಿದ್ದಾರೆ. ಇತರರಿಗೆ ತೊಂದರೆಯಾಗುತ್ತದೆ, ಕಿರಿಕಿರಿ ಅನುಭವಿಸುತ್ತಾರೆ ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದೆ ರೀಲ್ಸ್‌ಗೆ ಹೆಜ್ಜೆ ಹಾಕುತ್ತಿರುವ ಪ್ರವೃತ್ತಿಗೆ ಬ್ರೇಕ್‌ ಬೀಳುತ್ತಿಲ್ಲ. ರೈಲು, ಮೆಟ್ರೋ, ವಿಮಾನ ಹೀಗೆ ಎಲ್ಲೆಂದರಲ್ಲಿ ಮೈ ಕುಣಿಸಿ ಜನಪ್ರಿಯತೆ ಪಡೆದುಕೊಳ್ಳಲು ಮುಂದಾಗುವವರು ಅಧಿಕ ಸಂಖ್ಯೆಯಲ್ಲಿ ಕಾಣ ಸಿಗುತ್ತಾರೆ. ಮೈ ಚಳಿ ಬಿಟ್ಟು ಅಶ್ಲೀಲವಾಗಿ ಕುಣಿಯುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಇದೀಗ ಅಂತಹದ್ದೇ ಘಟನೆ ವರದಿಯಾಗಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ (Viral News).

ಅಧಿಕಾರಿಗಳು ಎಷ್ಟೇ ಎಚ್ಚರಿಸಿದರೂ, ಕ್ರಮ ಕೈಗೊಂಡರೂ ಚಲಿಸುತ್ತಿರುವ ರೈಲು, ಫ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್‌ ಮಾಡುವುದನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಈ ವಿಡಿಯೊದಲ್ಲಿ ಚಲಿಸುತ್ತಿರುವ ಮುಂಬೈ ಲೋಕಲ್‌ ರೈಲು ಮತ್ತು ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ (CSMT)ನಲ್ಲಿ ಮಹಿಳೆಯೊಬ್ಬಳು ತುಂಡು ಬಟ್ಟೆ ತೊಟ್ಟು ಭೋಜ್‌ಪುರಿ ಹಾಡಿಗೆ ಅಶ್ಲೀಲವಾಗಿ ನರ್ತಿಸುತ್ತಿರುವುದು ಕಂಡು ಬಂದಿದೆ. ನೆಟ್ಟಿಗರು ಈ ವಿಡಿಯೊ ನೋಡಿ ಮಹಿಳೆಗೆ ಛೀಮಾರಿ ಹಾಕುತ್ತಿದ್ದಾರೆ.

ಮಹಿಳೆ ರೈಲಿನ ಬೋಗಿಯ ಒಳಗೆ ಮತ್ತು ಪ್ಲಾಟ್‌ಫಾರ್ಮ್‌ನಲ್ಲಿ ಪ್ರಚೋದನಕಾರಿಯಾಗಿ ನೃತ್ಯ ಮಾಡಿ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ʼ’ಮುಂಬೈ ರೈಲಿನಲ್ಲಿ ಭಿಕ್ಷುಕರು ಮತ್ತು ರೀಲ್ಸ್ ಮಾಡುವವರ ಕಾಟವಿಲ್ಲದೆ ಶಾಂತಿಯುತವಾಗಿ ಪ್ರಯಾಣಿಸಲು ಸಾಧ್ಯವಿಲ್ಲʼʼ ಎಂದು ಕ್ಯಾಪ್ಶನ್‌ ನೀಡಿ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ಮುಂಬೈ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಲಾಗಿದೆ.

ನೆಟ್ಟಿಗರು ಏನಂದ್ರು?

ʼʼಈ ಮಹಿಳೆ ಎಲ್ಲ ಕಡೆ ಡ್ಯಾನ್ಸ್‌ ಮಾಡಿ ಕಿರಿಕಿರಿ ಉಂಟು ಮಾಡುತ್ತಿದ್ದಾಳೆ. ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆಕೆಯನ್ನು ಬಂಧಿಸಿ ಮುಂಬೈಯಿಂದ ಗಡಿಪಾರು ಮಾಡಬೇಕುʼʼ ಎಂದು ಒಬ್ಬರು ಆಗ್ರಹಿಸಿದ್ದಾರೆ. ʼʼಇಂತಹ ಪ್ರವೃತ್ತಿಗೆ ಕೂಡಲೇ ಕಡಿವಾಣ ಹಾಕಬೇಕುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪ್ರಯಾಣಿಕರು ಜವಾಬ್ದಾರಿಯುತ ನಾಗರಿಕರಾಗಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು’ʼ ಎಂದು ಮಗದೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿರಿಕಿರಿ ಉಂಟು ಮಾಡುವವರನ್ನು ಬಂಧಿಸಬೇಕು ಎಂದು ಬಹುತೇಕರು ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

ಸದ್ಯ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮುಂಬೈ ಸೆಂಟ್ರಲ್ ಡಿಆರ್‌ಎಂನ ಅಧಿಕೃತ ಎಕ್ಸ್ ಹ್ಯಾಂಡಲ್, ಘಟನೆಯ ತನಿಖೆ ನಡೆಸಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಮುಂಬೈ ವಿಭಾಗದ ಭದ್ರತಾ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. ʼʼಮಾಹಿತಿಗಾಗಿ ಧನ್ಯವಾದಗಳು. ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ʼ ಎಂದು ಹೇಳಿದೆ.

ಇದನ್ನೂ ಓದಿ: Viral Video: ಅರೆಬರೆ ಬಟ್ಟೆಯಲ್ಲೇ ರೈಲಿನಲ್ಲಿ ಡ್ಯಾನ್ಸ್‌ ಮಾಡಿದ ಯುವತಿ; ಛೀಮಾರಿ ಹಾಕಿದ ಜನ

Continue Reading

ದೇಶ

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Rahul Gandhi:ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

VISTARANEWS.COM


on

Rahul Gandhi
Koo

ಉತ್ತರಪ್ರದೇಶ: ಉತ್ತರಭಾರತದಲ್ಲಿ ಬಿಸಿಲ ಬೇಗೆ ದಿನೇ ದಿನೇ ಹಚ್ಚಾಗುತ್ತಿದೆ. ಜನ ಅಂತೂ ಸೆಖೆಗೆ ಬಳಲಿ ಬೆಂಡಾಗಿದ್ದಾರೆ. ಇದೀಗ ಬಿಸಿಲಿನ ಶಾಖ ಕಾಂಗ್ರೆಸ್‌ ನಾಯಕ(Congress Leader) ರಾಹುಲ್‌ ಗಾಂಧಿ(Rahul Gandhi) ಅವರಿಗೂ ತಟ್ಟಿದೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ನಾಯಕ ಎಂದರೆ ಅದು ರಾಹುಲ್‌ ಗಾಂಧಿ. ಅವರು ಎಲ್ಲೇ ಹೋದರೂ ಚಿತ್ರ ವಿಚಿತ್ರ ಕೆಲಸ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌(Viral Video) ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಹುಲ್‌ ಗಾಂಧಿ ಭಾಗಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವೇದಿಕೆ ಕುಸಿದ ಘಟನೆ ವರದಿಯಾಗಿತ್ತು. ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದರು. ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಅವರು ಪಾರಾಗಿದ್ದರು.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


Continue Reading

ಪ್ರಮುಖ ಸುದ್ದಿ

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

DK Shivakumar: ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು.

VISTARANEWS.COM


on

dk shivakumar jagdeep dhankar
Koo

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ (Vice President Jagdeep Dhankar) ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.

ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.

ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ದೆಹಲಿಗೆ ಬರುತ್ತಿದ್ದಂತೆ ರಣದೀಪ್‌ ಸುರ್ಜೆವಾಲಾ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕರ್ನಾಟಕ ಭವನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದರು. ರಾತ್ರಿ 10 ಗಂಟೆಗೆ ಕೆ.ಸಿ ವೇಣುಗೋಪಾಲ್ ಜೊತೆ ಸಭೆ ನಡೆಸಿ ಸಿಎಂ ಹಾಗೂ ಡಿಸಿಎಂ ನಾಳೆ ಬೆಳಿಗ್ಗೆ ಖರ್ಗೆ ಜೊತೆಗೆ ಅಂತಿಮ ಸಭೆ ನಡೆಸಲಿದ್ದಾರೆ. ನಿರೀಕ್ಷೆಗೂ ಮೀರಿ ಆಕಾಂಕ್ಷಿಗಳ ಹೆಸರು ಪಟ್ಟಿಯಲ್ಲಿರುವುದರಿಂದ ಅಭ್ಯರ್ಥಿ ಆಯ್ಕೆ ಸಂಬಂಧ ಕಗ್ಗಂಟು ಬಗೆಹರಿಯದಾಗಿದೆ.

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಭೆಯಲ್ಲಿ ಮಾತನಾಡುತ್ತ ಡಿಕೆಶಿ, ತಾವು ಮುಂದಿನ ಸಿಎಂ (Next CM) ಆಗುವ ಬಗ್ಗೆ ಸುಳಿವನ್ನು ನೀಡಿದ್ದರು. “ಏನು ಆಗಬೇಕೆಂದಿದೆಯೋ ಅದು ದೆಹಲಿಯಲ್ಲಿ ತೀರ್ಮಾನ ಆಗಿದೆ. ಅಲ್ಲದೆ, ಸ್ವಲ್ಪ ದಿನ ಕಾಯಿರಿ” ಎಂದು ಹೇಳಿದ್ದರು. ಆ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Continue Reading

ದೇಶ

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Arvind Kejriwal: ಜೂ.1 ರಂದು ಮುಗಿಯಲಿರುವ ಜಾಮೀನು ಅವಧಿಯನ್ನು ಮತ್ತೆ 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಕೆ.ವಿ ವಿಶ್ವನಾಥನ್‌ ಇದ್ದ ನ್ಯಾಯಪೀಠ, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಮುಂದಿನ ದಿನಗಳಲ್ಲಿ ನಡೆಸಲಿದ್ದಾರೆ ಎಂದು ಹೇಳಿತ್ತು. ಅಲ್ಲದೇ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಹಸ್ತಾಂತರಿಸಿತ್ತು. ಆದರೆ ಇದೀಗ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರ್‌ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ ಅವರ ಅರ್ಜಿ ವಿಚಾರಣೆ ನಡೆಸುವುದಿಲ್ಲ. ಹೀಗಾಗಿ ಜಾಮೀನು ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಕೇಜ್ರಿವಾಲ್‌ ಜೂ.2ರಂದು ತಿಹಾರ್‌ ಜೈಲಿಗೆ ಮರಳಬೇಕಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೆ ಭಾರೀ ಹಿನ್ನಡೆಯಾಗಿದೆ. ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ನಿನ್ನೆಯಷ್ಟೇ ಈ ಅರ್ಜಿಯನ್ನು ತುರ್ತು ವಿಚಾರಕ್ಕೆ ಕೇಜ್ರಿವಾಲ್‌ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ನಿರಾಕರಿಸಿತ್ತು.

ಜೂ.1 ರಂದು ಮುಗಿಯಲಿರುವ ಜಾಮೀನು ಅವಧಿಯನ್ನು ಮತ್ತೆ 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಕೆ.ವಿ ವಿಶ್ವನಾಥನ್‌ ಇದ್ದ ನ್ಯಾಯಪೀಠ, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಮುಂದಿನ ದಿನಗಳಲ್ಲಿ ನಡೆಸಲಿದ್ದಾರೆ ಎಂದು ಹೇಳಿತ್ತು. ಅಲ್ಲದೇ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಹಸ್ತಾಂತರಿಸಿತ್ತು. ಆದರೆ ಇದೀಗ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರ್‌ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ ಅವರ ಅರ್ಜಿ ವಿಚಾರಣೆ ನಡೆಸುವುದಿಲ್ಲ. ಹೀಗಾಗಿ ಜಾಮೀನು ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಕೇಜ್ರಿವಾಲ್‌ ಜೂ.2ರಂದು ತಿಹಾರ್‌ ಜೈಲಿಗೆ ಮರಳಬೇಕಾಗಿದೆ.

ಎರಡೂ ದಿನಗಳ ಹಿಂದೆಯಷ್ಟೇ ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ಮಾಹಿತಿಯೊಂದನ್ನು ನೀಡಿದ್ದು, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿಸಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿತ್ತು.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದರು.

ಏನಿದು ಅಬಕಾರಿ ನೀತಿ ಹಗರಣ?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

Continue Reading
Advertisement
Viral News
ವೈರಲ್ ನ್ಯೂಸ್16 mins ago

Viral News: ರೈಲಿಯಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ18 mins ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ21 mins ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್23 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ24 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್47 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ47 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ1 hour ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ1 hour ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ1 hour ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌