Hanuman sankirtan yatra | ಜಾಮಿಯಾ ಮಸೀದಿ ಜಾಗ ನಮ್ಮದು ಎಂದು ನುಗ್ಗಲು ಮಾಲಾಧಾರಿಗಳ ಯತ್ನ; ಶ್ರೀರಂಗಪಟ್ಟಣ ಉದ್ವಿಗ್ನ - Vistara News

ಕರ್ನಾಟಕ

Hanuman sankirtan yatra | ಜಾಮಿಯಾ ಮಸೀದಿ ಜಾಗ ನಮ್ಮದು ಎಂದು ನುಗ್ಗಲು ಮಾಲಾಧಾರಿಗಳ ಯತ್ನ; ಶ್ರೀರಂಗಪಟ್ಟಣ ಉದ್ವಿಗ್ನ

Hanuman sankirtan yatra | ಹನುಮ ಜಯಂತಿ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹನುಮ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಮುಸ್ಲಿಮರೊಬ್ಬರ ಮನೆಯ ಮೇಲಿನ ಹಸಿರು ಧ್ವಜ ತೆಗೆದು ಕೇಸರಿ ಧ್ವಜ ಕಟ್ಟಿರುವುದು ಕಂಡುಬಂದಿದೆ.

VISTARANEWS.COM


on

Hanuman sankirtan yatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಎದುರು ಸಾವಿರಾರು ಹನುಮ ಮಾಲಾಧಾರಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ, ಮಸೀದಿ ನಿರ್ಮಾಣವಾಗಿರುವ ಜಾಗ ನಮ್ಮದು, ಸ್ಥಳದಲ್ಲಿ ಹನುಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದರಿಂದ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಹನುಮ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹನುಮ ಸಂಕೀರ್ತನಾ ಯಾತ್ರೆ (Hanuman sankirtan yatra) ವೇಳೆ ಹನುಮ ಮಾಲಾಧಾರಿಗಳು ಮಸೀದಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಅಲ್ಲದೆ, ಒಂದು ಕಡೆ ಮನೆಯೊಂದರ ಮೇಲೆ ಮುಸ್ಲಿಂ ಬಾವುಟವನ್ನು ಕಿತ್ತುಹಾಕಿ ಕೇಸರಿ ಧ್ವಜವನ್ನು ಸ್ಥಾಪನೆ ಮಾಡಿರುವುದು ಸಹ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.

ಗಂಜಾಂ ಬಳಿಯ ನಿಮಿಷಾಂಭ ದೇವಾಲಯದ ಬಳಿಯ ಆಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಹನುಮ ಸಂಕೀರ್ತನಾ ಯಾತ್ರೆ ಆರಂಭವಾಯಿತು. ಕೇಸರಿ ಧ್ವಜಗಳೊಂದಿಗೆ ಸಾವಿರಾರು ಹನುಮ ಮಾಲಾಧಾರಿಗಳು ಜೈ ಶ್ರೀರಾಮ್‌, ಜೈ ಹನುಮಾನ್‌ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದರು. ಆದರೆ, ಯಾತ್ರೆ ಜಾಮಿಯಾ ಮಸೀದಿ ಬಳಿಗೆ ಬಂದಾಗ ಹನುಮ ಮಾಲಾಧಾರಿಗಳು, ರಸ್ತೆಯಲ್ಲಿ ಕುಳಿತು ಮಸೀದಿ ಜಾಗ ನಮ್ಮದು, ಮಂದಿರ ಕಟ್ಟುತ್ತೇವೆ. ಆಂಜನೇಯ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ನಮಗೆ ನ್ಯಾಯ ಬೇಕು ಎಂದು ಪಟ್ಟುಹಿಡಿದರು.

ಬಳಿಕ ಬೇಕೆ ಬೇಕು ನ್ಯಾಯಬೇಕು ಎಂದು ಘೋಷಣೆಗಳನ್ನು ಕೂಗುತ್ತಾ ಮಾಲಾಧಾರಿಗಳು, ಮಸೀದಿಯತ್ತ ನುಗ್ಗಲು ಯತ್ನಿಸಿದರು. ಇದಕ್ಕೆ ಪೊಲೀಸರು ಅಡ್ಡಿಪಡಿಸಲು ಯತ್ನಿಸಿದಾಗ ಹನುಮ ಭಕ್ತರು ಹಾಗೂ ಪೊಲೀಸರ ನಡುವೆ ನೂಕು ನುಗ್ಗಲು ಉಂಟಾಯಿತು. ಈ ವೇಳೆ ಧಿಕ್ಕಾರ ಘೋಷಣೆಗಳನ್ನು ಕೂಗಿ ಹನುಮ ಮಾಲಾಧಾರಿಗಳು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Karnataka Election 2023 | ಶಿವಮೊಗ್ಗ ಜಿಲ್ಲೆಯಲ್ಲಿ ಕಮಲ ಆಪರೇಷನ್‌: ಇಬ್ಬರು ಖ್ಯಾತ ವ್ಯಕ್ತಿಗಳು ಬಿಜೆಪಿ ಸೇರ್ಪಡೆ

ಹಿಂದು ಜಾಗರಣಾ ವೇದಿಕೆ ಮುಖಂಡ ಉಲ್ಲಾಸ್ ಮಾತನಾಡಿ, ಜಾಮಿಯಾ ಮಸೀದಿಯನ್ನು ಕೈಯಲ್ಲಿ ಮುಟ್ಟಿದರೂ ಅದು ಹಿಂದು ದೇವಾಲಯವೆಂದು ಗೊತ್ತಾಗುತ್ತದೆ. ಮೇಲುಕೋಟೆಯ ದೇವಾಲಯದ 7 ಅರ್ಚಕರನ್ನು ಕೊಂದಿರುವ ಟಿಪ್ಪು ಸುಲ್ತಾನ್‌, ಬೆಂಗಳೂರು-ಮೈಸೂರು ರಸ್ತೆಯ ಬದಿಯಲ್ಲಿದ್ದ ಮೂಡಲಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಾಣ ಮಾಡಿದ್ದಾನೆ ಎಂದು ಕಿಡಿಕಾರಿದರು.

ಮಸೀದಿ ಜಾಗ ಹನುಮ ದೇವಾಲಯಕ್ಕೆ ಸೇರಿದ್ದಾಗಿದೆ. ಮೂಡಲಬಾಗಿಲು ಆಂಜನೇಯ ದೇವಾಲಯ ನಿರ್ಮಾಣ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಹೀಗಾಗಿ ಹನುಮ ಮಾಲಾಧಾರಿಗಳು ಹಳ್ಳಿ ಹಳ್ಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಅದರ ಪರಿಣಾಮ ಆರಂಭದಲ್ಲಿ ನೂರು ಇನ್ನೂರು ಸಂಖ್ಯೆಯಲ್ಲಿ ಯಾತ್ರೆಗೆ ಬರುತ್ತಿದ್ದ ಹನುಮ ಮಾಲಾಧಾರಿಗಳು ಇಂದು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದಾರೆ ಎಂದು ಹೇಳಿದರು.

ಹಿಂದು ಜಾಗರಣ ವೇದಿಕೆ ಲೋಹಿತ್ ಅರಸ್ ಮಾತನಾಡಿ, ಟಿಪ್ಪು, ಹೈದರಾಲಿ ಮೆರೆದ ಕ್ರೌರ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ. ಇವರು ಹಿಂದು ಸಮಾಜಕ್ಕೆ ದ್ರೋಹ ಬಗೆದಿದ್ದಾರೆ. ಜನರಿಗೆ ಇದನ್ನು ತಿಳಿಸುವ ಕೆಲಸವನ್ನು ಹಿಂದು ಜಾಗರಣ ವೇದಿಕೆ ಮಾಡುತ್ತಿದೆ. ಮಸೀದಿಯನ್ನು ಕೆಡವಿ ಹನುಮ‌ ಮಂದಿರ ಕಟ್ಟಬೇಕು. ಮಂದಿರ ಕಟ್ಟುವವರೆಗೂ ಈ ಹೋರಾಟ ನಡೆಯುತ್ತದೆ ಎಂದು ಹೇಳಿದ್ದಾರೆ.

ಹೈದರಾಲಿ ಮತ್ತು ಟಿಪ್ಪು ಹೇಡಿ ಮತ್ತು ಕೇಡಿಗಳಾಗಿದ್ದಾರೆ. ಟಿಪ್ಪು ಮೈಸೂರು ಹುಲಿಯಲ್ಲ. ಡಾಗ್ ಆಫ್ ಶ್ರೀರಂಗಪಟ್ಟಣ ಆಗಿದ್ದಾನೆ. ಶಸ್ತ್ರ ಇಲ್ಲದ ಅರ್ಚಕರನ್ನು ಕೊಲೆ ಮಾಡಿದ ಟಿಪ್ಪು, ಹುಲಿ ಅಲ್ಲ ನಾಯಿ. ಮುಸ್ಲಿಮರಿಗೆ ಮಸೀದಿ ಮಂದಿರ ಎಂದು ಗೊತ್ತಿದೆ. ಹೀಗಾಗಿ ನಮ್ಮ‌ ಮಂದಿರವನ್ನು ಬಿಟ್ಟುಕೊಡಬೇಕು ಎಂದು ಒತ್ತಾಯಿಸಿದರು.

ಹಸಿರು ಧ್ವಜ ತೆಗೆದು ಕೇಸರಿ ಧ್ವಜ ಕಟ್ಟಿದ ಮಾಲಾಧಾರಿ

ಹನುಮ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಜಾಂನಲ್ಲಿ ಹಮ್ಮಿಕೊಂಡಿದ್ದ ಸಂಕೀರ್ತನಾ ಯಾತ್ರೆ ಮೆರವಣಿಗೆಯಲ್ಲಿ ಹನುಮ ಮಾಲಾಧಾರಿಯೊಬ್ಬ, ಮುಸ್ಲಿಮರ ಮನೆಯ ಮೇಲಿದ್ದ ಹಸಿರು ಧ್ವಜ ತೆಗೆದು, ಕೇಸರಿ ಧ್ವಜ ನೆಟ್ಟಿರುವುದು ಕಂಡುಬಂದಿದೆ.

ಗಂಜಾಂ ಗ್ರಾಮದಲ್ಲಿ ನೂರಾರು ಮಾಲಾಧಾರಿಗಳ ಸಮ್ಮುಖದಲ್ಲಿ ಸಂಕೀರ್ತನಾ ಯಾತ್ರೆ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಮಾಲಾಧಾರಿ ಏಕಾಏಕಿ ಮುಸ್ಲಿಮರ ಮನೆ ಮೇಲೆ ಹತ್ತಿ, ಹಸಿರು ಧ್ವಜ ಕಿತ್ತೆಸೆದು ಕೇಸರಿ ಧ್ವಜ ಪ್ರತಿಷ್ಠಾಪನೆ ಮಾಡಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ, ಕೆಳಗಿಳಿದು ಬಾ ಎಂದು ಸೂಚಿಸಿದ್ದಾರೆ. ಆದರೆ ಮಾಲಾಧಾರಿಯು ಮನೆಯ ಮೇಲಿಂದ ಹಸಿರು ಧ್ವಜ ಕೆಳಗೆಸೆದು ಮತ್ತೆ ಮೆರವಣಿಗೆಯಲ್ಲಿ ಸೇರ್ಪಡೆಯಾದ. ನಂತರ ಪೊಲೀಸರು ಹಿಡಿಯಲು ಯತ್ನಿಸಿದಾಗ ಮಾಲಾಧಾರಿ ಎಸ್ಕೇಪ್‌ ಆಗಿದ್ದಾನೆ.

ಇದನ್ನೂ ಓದಿ | Panchamasali Reservation | ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾರ್ಥದ್ದು, ಒಕ್ಕಲಿಗರಿಗೆ ನನ್ನ ಬೆಂಬಲ: ಚೇತನ್‌ ಅಹಿಂಸಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka: ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Modi in Karnataka Congress snatches Rs 4000 under Kisan Samman says PM Narendra Modi
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ರೈತರಿಗೆ ಯಾವ ರೀತಿಯ ಮೋಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರವೇ ಸಾಕ್ಷಿ. ನಾವು ರೈತರ ಬಗ್ಗೆ ಕಳಕಳಿಯಿಂದ ಯೋಜನೆಯಿಂದ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಈ ಹಿಂದಿನ ಸರ್ಕಾರವು ಕೇಂದ್ರ ಸರ್ಕಾರ ಕೊಡುತ್ತಿದ್ದ 6 ಸಾವಿರ ರೂಪಾಯಿ ಜತೆಗೆ 4 ಸಾವಿರ ರೂಪಾಯಿಯನ್ನು ಕೊಡುತ್ತಲಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಹೀಗಾಗಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಮತಯಾಚಿಸಿದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 150 ಅಮೃತ ಸರೋವರ ಯೋಜನೆ ಮಾಡಲಾಗಿದೆ. 2.70 ಲಕ್ಷ ಕುಟುಂಬಕ್ಕೆ ಕುಡಿಯುವ ನೀರನ್ನು ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. 1,300 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಶಿಡ್ಲಘಟ್ಟದಲ್ಲಿ ರೇಷ್ಮೆ ಉದ್ಯಮಕ್ಕೆ ಸಹಾಯ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ

ಸಂತ ಕೈವಾರ ತಾತಯ್ಯ, ಸರ್.ಎಂ ವಿಶ್ವೇಶ್ವರಯ್ಯ, ಈ ಮಣ್ಣಿನಲ್ಲಿ ಜನರ ದರ್ಶನ ನನ್ನ ಸೌಭಾಗ್ಯ ಎಂದು ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣುತ್ತಿದೆ. ಯುವಕರಿಗೆ ಪ್ರೇರಣೆ ಸಿಗಲಿದೆ. ನನಗೆ ಭಾಷೆ ಅರ್ಥ ಆಗಲ್ಲ. ಆದರೆ, ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನನ್ನ ಹೃದಯದಿಂದ ಅಭಾರಿಯಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ದೇವೇಗೌಡರು ಇಂಡಿ ಮೈತ್ರಿ ಬಗ್ಗೆ ಹೇಳಿದ್ದಾರೆ. ಇಂಡಿ ಮೈತ್ರಿಯಲ್ಲಿ ನಾಯಕರಿಲ್ಲ, ಭವಿಷ್ಯದ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲ. ಅವರ ಇತಿಹಾಸ ಕೇವಲ ಹಗರಣ ಮಾತ್ರ ಎಂದು ಗುಡುಗಿದರು.

ದೇಶದ ಬಗ್ಗೆ 24×7 ಕೆಲಸ

ದೇಶದ ಜನತೆಗೆ ನನ್ನ ಕೆಲಸದ ಬಗ್ಗೆ ತಿಳಿಸಿದ್ದೇನೆ. ನಾನು ನಿಮ್ಮ ನಡುವೆ ನಮ್ಮ ರಿಪೋರ್ಟ್‌ ಕಾರ್ಡ್ ಹಿಡಿದು ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಎಲ್ಲರನ್ನೂ ಪರಿವಾರ ಅಂತ ತಿಳಿದಿದ್ದೇನೆ. ನಿಮ್ಮ ಕನಸು, ಮೋದಿಯ ಸಂಕಲ್ಪವಾಗಿದೆ. ಪ್ರತಿ ಕ್ಷಣದಲ್ಲೂ ನಿಮ್ಮ ಹಾಗೂ ದೇಶದ ಬಗ್ಗೆ 24×7 ಕೆಲಸ ಮಾಡಲು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ

ಮೋದಿ ಸರ್ಕಾರದ ಯೋಜನೆ ಮೂಲಕ ಕೋಟ್ಯಂತರ ಮಂದಿ ಲಾಭ ಪಡೆದಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಕುಟುಂಬದವರಿಗೆ ಭರಪೂರ ಯೋಜನೆ ನೀಡಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕೊಳಗೇರಿಯಲ್ಲಿ ವಾಸ ಮಾಡುವಂತಾಗಿತ್ತು. ವಿದ್ಯುತ್, ನೀರು ಕೂಡ ಸಿಗುತ್ತಿರಲಿಲ್ಲ. ಜನರೂ ಹಿಂದಿನ ಸರ್ಕಾರದ ಮೇಲೆ ಭರವಸೆ ಕೂಡ ಬಿಟ್ಟುಬಿಟ್ಟಿದ್ದರು. ಆದರೆ, ನಿಮ್ಮ ಭರವಸೆಯನ್ನು ಮೋದಿ ಗ್ಯಾರಂಟಿ ನಿಜ ಮಾಡಿದೆ. 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇನ್ನೈದು ವರ್ಷದಲ್ಲಿ ಸೂರಿಲ್ಲದವರಿಗೆ ಮನೆ

ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಿದೆ. ಯಾರಿಗೆ ಈವರೆಗೆ ಮನೆ ಸಿಕ್ಕಿಲ್ಲವೋ ಅವರಿಗೆ ಮುಂದಿನ ಐದು ವರ್ಷಗಳಲ್ಲಿ ಖಂಡಿತವಾಗಿಯೂ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡಿದ್ದು ಎನ್‌ಡಿಎ

2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಬಳಿಕ ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡುವ ಮೂಲಕ ಮೊದಲ ಪ್ರಜೆಯನ್ನು ಆಯ್ಕೆ ಮಾಡಿತು. ಹಿಂದುಳಿದ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಎನ್‌ಡಿಎ ಸರ್ಕಾರ ಕೈಗೊಂಡ ಕ್ರಮಗಳು, ನಿರ್ಧಾರಗಳ ಬಗ್ಗೆ ಪ್ರಧಾನಿ ಮೋದಿ ವಿವರಿಸಿದರು.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮೂಲಕ ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಹೆಚ್ಚಾಗಿದೆ. ಗ್ಯಾರಂಟಿ ಇಲ್ಲದೆ, ಮುದ್ರಾ ಲೋನ್ ಮೂಲಕ ಸಾಲ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ಮಾಡಿದ್ದೇವೆ

ಇಂದು ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿದ್ದಾರೆ. ನಿಮ್ಮ ಕಷ್ಟವನ್ನು ಮೋದಿ ನೋಡಿದ್ದಾರೆ. ದೇಶದ ಅನೇಕರು ಮೋದಿಯನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನ ಮಾಡಿದ್ದಾರೆ. ಆದರೆ, ತಾಯಂದಿರ ಆಶೀರ್ವಾದ ಇದೆ. ನಿಮ್ಮೆಲ್ಲರ ಆಶೀರ್ವಾದಿಂದ ನಾನು ಎದುರಿಸುತ್ತೇನೆ. ಪ್ರತಿ ತಾಯಂದಿರ ಸೇವೆ ಮಾಡುವುದು ಮೋದಿ ಗ್ಯಾರಂಟಿಯಾಗಿದೆ. ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ತಯಾರು ಮಾಡಲಾಗಿದೆ. ಮೂರು ಕೋಟಿ ಮಹಿಳೆಯರ ವಾರ್ಷಿಕ ಆದಾಯ ಲಕ್ಷ‌ ರೂಪಾಯಿ ಮೀರಲಿದೆ. ಎನ್‌ಡಿಎ ಸರ್ಕಾರದಿಂದ ಡ್ರೋನ್ ಪೈಲೆಟ್ ಟ್ರೈನಿಂಗ್ ಕೊಡಲಾಗುತ್ತಿದೆ. ಯುವತಿಯರು ಡ್ರೋನ್ ಮೂಲಕ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಈ ನೆಲದಲ್ಲಿ ಮಾವು, ಪಶುಪಾಲನೆ ನಡೆಯುತ್ತಿದೆ. ಎನ್‌ಡಿಎ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದೆ. ನಮ್ಮ ಜತೆ ದೇವೇಗೌಡರಂತಹ ಹಿರಿಯ ರಾಜಕಾರಣಿ ಇದ್ದಾರೆ. ಅಂಥವರ ಮಾರ್ಗದರ್ಶನ ನಮಗಿದೆ. ಪಶು ಪಾಲನೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಲಾರ ಸಂಸದ ಮುನಿಸ್ವಾಮಿ, ಯಲಹಂಕ ಶಾಸಕರಾದ ವಿಶ್ವನಾಥ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ವೈ. ಸಂಪಂಗಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Continue Reading

ಚಾಮರಾಜನಗರ

Tiger Attack : ಮರಿಯಾನೆ ಕೊಂದ ಹುಲಿ; ಶವ ಬಿಟ್ಟು ಕದಲದ ತಾಯಿ ಆನೆ ರೋಧನೆ

Tiger Attack : ಹುಲಿಯೊಂದು ಮರಿಯಾನೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಇತ್ತ ಮರಿಯಾನೆ ಬಿಟ್ಟು ಕದಲದ ತಾಯಿ ಆನೆಯು ರೋಧನೆ ಅನುಭವಿಸುತ್ತಿದ್ದು, ರಸ್ತೆಯಲ್ಲಿ ಬಿಡುಬಿಟ್ಟಿತ್ತು. ಇದರಿಂದಾಗಿ ವಾಹನ ಸವಾರರು ಕಿ.ಮೀ ಗಟ್ಟಲೇ ನಿಂತಲ್ಲೇ ನಿಲ್ಲುವಾಯಿತು.

VISTARANEWS.COM


on

By

tiger attack
Koo

ಚಾಮರಾಜನಗರ: ಮರಿಯಾನೆ ಮೇಲೆ ಹುಲಿಯೊಂದು ದಾಳಿ (Tiger Attack) ಮಾಡಿದೆ. ಹುಲಿಯ ದಾಳಿಗೆ ತುತ್ತಾದ ಮರಿ ಆನೆಯು (Elephant death) ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ (Bandipura Road) ನಡೆದಿದೆ.

ರಸ್ತೆ ಪಕ್ಕದಲ್ಲೇ ಮರಿಯಾನೆ ಮೃತಪಟ್ಟ ಕಾರಣದಿಂದಾಗಿ ತಾಯಿ ಆನೆಯು ಮರಿಯನ್ನು ಬಿಟ್ಟು ಕದಲದೇ ನಿಂತಿತ್ತು. ಮರಿಯಾನೆಯ ಶವವನ್ನು ಮುಟ್ಟುತ್ತಾ ಎಬ್ಬಿಸಲು ಪ್ರಯತ್ನಿಸುತ್ತಿತ್ತು. ಮರಿಯಾನೆ ಮುಂದೆ ಆನೆ ರೋಧನೆಯು ಎಂತಹವರಿಗೂ ಕರುಳು ಚುರುಕ್‌ ಎನ್ನುವಂತೆ ಮಾಡಿತ್ತು.

ರಸ್ತೆ ಪಕ್ಕದಲ್ಲೇ ಆನೆ ನಿಂತಿದ್ದರಿಂದ ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿತ್ತು. ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು- ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆನೆಯನ್ನು ದಾಟಿ ವಾಹನಗಳು ಮುಂದೆ ಹೋಗಲು ಆಗದೆ ನಿಂತಲ್ಲೇ ನಿಲ್ಲುವಂತಾಗಿತ್ತು.

ಇದನ್ನೂ ಓದಿ: Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

ಕೊಡಗು: ಹುಲಿ ದಾಳಿಗೆ (Wild Animals Attack) ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ರಾಜಪುರ ರಸ್ತೆ ಸಮೀಪ ಗುರುವಾರ ಸಂಜೆ ಈ ಘಟನೆ ನಡೆದಿದೆ.

ಅಸ್ಸಾಂ ಮೂಲದ ಮೊಹಿಸೂರು ರೆಹಮಾನ್ (51) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಹಸುವಿನ ಮೇಲೆ ದಾಳಿ ಮಾಡಲು ಬಂದಂತಹ ಹುಲಿ, ಅಲ್ಲೇ ಇದ್ದ ಅಸ್ಸಾಂ ಮೂಲದ ಕಾರ್ಮಿಕ ಮೊಹಿಸೂರು ರೆಹಮಾನ್ ಮೇಲೆ ಎಗರಿ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಘಟನೆಯ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ಹುಲಿ ದಾಳಿಯಿಂದ ದಕ್ಷಿಣ ಕೊಡಗಿನ ಜನತೆ ಭಯ ಭೀತರಾಗಿದ್ದು, ಒಬ್ಬೋಬ್ಬರೆ ಓಡಾಡಲು ಹಾಗೂ ಕಾಫಿ ತೋಟದಲ್ಲಿ ಕೆಲಸ ಮಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಪೊನ್ನಂಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕರಡಿ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವೃದ್ಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕರಡಿ ದಾಳಿ ಹಿನ್ನಲೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು.

ಚೆನ್ನಪ್ಪ (74) ಮೃತಪಟ್ಟ ವೃದ್ಧ. ರಾಂಪುರ ಗ್ರಾಮದ ಹೊರವಲಯದ ಕೆರೆ ಬಳಿ ಇರುವ ಆಂಜನೇಯ ದೇವಸ್ಥಾನದ ಬಳಿ ದುರ್ಘಟನೆ ನಡೆದಿದೆ.

ಘಟನೆಯ ಹಿನ್ನೆಲೆ

ದೇವಸ್ಥಾನದಲ್ಲಿದ್ದ ಕರಡಿಯನ್ನು ಗಮನಿಸಿದ್ದ ಗ್ರಾಮಸ್ಥರು ಅದನ್ನು ಕೂಡಿಹಾಕಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದ ಕರಡಿಯು ವೃದ್ಧ ಚೆನ್ನಪ್ಪನ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ವೃದ್ಧನನ್ನು ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಚೆನ್ನಪ್ಪ ಸಾವನ್ನಪ್ಪಿದ್ದಾನೆ.

ಘಟನೆಯ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು. ಕರಡಿಯನ್ನು ಸೆರೆ ಹಿಡಿಯಲು ಬೇಕಾದ ಬೋನು ಮತ್ತು ಇತರೆ ಪರಿಕರಗಳನ್ನು ತರದೇ ಹಾಗೆ ಬರೀಗೈಯ್ಯಲ್ಲಿ ಬಂದಿದ್ದ ಅಧಿಕಾರಿ, ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರಡಿ ಉಪಟಳವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Forest Bathing: ಬೆಂಗಳೂರಿನಲ್ಲಿ ಕಂಪನಿಯೊಂದು ಕೊಟ್ಟ ಆಫರ್‌ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ನೆಟ್ಟಿಗರ ಬ್ಯಾಕ್‌ ಟು ಬ್ಯಾಕ್‌ ಕಾಮೆಂಟ್‌ಗಳ ಸುರಿಮಳೆಯೇ ಸುರಿಯುತ್ತಿದೆ . ಇಷ್ಟಕ್ಕೂ ಕಂಪನಿ ಕೊಟ್ಟ ಆಫರ್‌ ಏನು ಅಂತೀರಾ ಇಲ್ಲಿದೆ ನೋಡಿ ಡಿಟೈಲ್ಸ್‌.

VISTARANEWS.COM


on

By

Forest bathing activity begins at Cubbon Park
Koo

ಬೆಂಗಳೂರು : ಬೆಂಗಳೂರಿಗರ ನೆಚ್ಚಿನ ಉದ್ಯಾನವನದಲ್ಲಿ ಕಬ್ಬನ್‌ಪಾರ್ಕ್‌ (Cubbon park) ಕೂಡ ಒಂದು. ಜನರ ನೆಚ್ಚಿನ ತಾಣವಾದ ಕಬ್ಬನ್‌ ಪಾರ್ಕ್‌ನಲ್ಲಿ ಮರ ತಬ್ಬಿಕೊಳ್ಳಲು 1500 ರೂ. ಶುಲ್ಕ ಕೊಡಬೇಕು. ಅರೇ ಸರ್ಕಾರ ಯಾವಾಗ ಈ ರೂಲ್ಸ್‌ ತಂದಿದೆ ಅಂತ ಅಂದುಕೊಂಡ್ರಾ? ಖಂಡಿತ ಇಲ್ಲ, ಇದು ಕಂಪೆನಿಯೊಂದು ಶುರು ಮಾಡಿರುವ (Forest Bathing) ಫಾರೆಸ್ಟ್‌ ಬಾಥಿಂಗ್‌.. ಟ್ರೋವ್ ಹೆಸರಿನ ಸಂಸ್ಥೆಯೊಂದು (Trove Experinces) ಫಾರೆಸ್ಟ್‌ ಬಾಥಿಂಗ್‌ ಚಟುವಟಿಕೆಯನ್ನು ಆಯೋಜಿಸಿದೆ. ಇದೇ ಏಪ್ರಿಲ್ 28ರಂದು ನಡೆಯಲಿರುವ ಈವೆಂಟ್‌ಗೆ ಎಂಟ್ರಿ ಫೀಸ್‌ ಕೂಡ ಇದೆ. ಈ ಫಾರೆಸ್ಟ್‌ ಬಾಥಿಂಗ್‌ ಅನುಭವ ಪಡೆಯಲು ಬರೋಬ್ಬರಿ 1,500 ರೂ. ಟಿಕೆಟ್‌ ಬೆಲೆಯನ್ನು ನಿಗಧಿ ಮಾಡಲಾಗಿದೆ.

ಜೋಳದ ರೊಟ್ಟಿ (Jolad rotti) ಎಂಬ ಎಕ್ಸ್‌ ಅಕೌಂಟ್‌ನಲ್ಲಿ ಅಜಯ್‌ (Ajayawhy) ಎಂಬುವವರು ಫಾರೆಸ್ಟ್‌ ಬಾಥಿಂಗ್‌ ಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊ ಅಡಿಬರಹದಲ್ಲಿ ಮಾರ್ಕೆಟ್‌ನಲ್ಲಿ ಹೊಸ ಸ್ಕ್ಯಾಮ್‌ ಬಂದಿದೆ ನೋಡಿ ಎಂದು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್‌ಗಳು ಪಾಸ್‌ ಆಗುತ್ತಿದ್ದು, ಬಹುತೇಕರು ಕಬ್ಬನ್‌ ಪಾರ್ಕ್‌ನಲ್ಲಿ ಉಚಿತವಾಗಿಯೇ ಮರಗಳನ್ನು ಒಪ್ಪಿಕೊಳ್ಳಬಹುದು, ಈ ಚಟುವಟಿಕೆಗೆ ಹಣ ಕೊಡುವ ಅಗತ್ಯ ಏನಿದೆ. ಇದೆಲ್ಲ ಹಣ ಮಾಡುವ ಹೊಸ ಸ್ಕ್ಯಾಮ್‌ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಹೈಕೋರ್ಟ್‌ ಹಿಂಭಾಗದಲ್ಲಿರುವ ಕಬ್ಬನ್‌ ಪಾರ್ಕ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ದಿ ಹೀಲಿಂಗ್‌ ಪವರ್‌ ಆಫ್‌ ಫಾರೆಸ್ಟ್‌ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಫಾರೆಸ್ಟ್‌ ಬಾಥಿಂಗ್‌ ಅನುಭವವನ್ನು ಪಡೆದು ಒತ್ತಡವನ್ನು ದೂರ ಮಾಡಿ ಎಂದು ಪೋಸ್ಟ್‌ ಹಾಕಲಾಗಿದೆ.

ಇದನ್ನೂ ಓದಿ: Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

ಇನ್ನೂ ನೆಟ್ಟಿಗರಿಂದ ಪರ-ವಿರೋಧದದ ಪ್ರತಿಕ್ರಿಯೆಗಳು ಬಂದಿವೆ. ದೈನಂದಿನ ಜೀವನದಲ್ಲಿ ಮನೆ- ಕಚೇರಿಗೆ ಸೀಮಿತವಾಗಿದ್ದರೆ, ಕಬ್ಬನ್ ಪಾರ್ಕ್ ಖಂಡಿತವಾಗಿಯೂ ಕಾಡಿನಂತೆ ಭಾಸವಾಗುತ್ತದೆ ಎಂದು ಕಾಮೆಂಟ್‌ ಮಾಡಿದ್ದಾರೆ. ಮತ್ತೊಂದಿಷ್ಟು ಜನ ಫಾರೆಸ್ಟ್‌ ಬಾಥಿಂಗ್‌ ಅಂದರೇನು ಎಂದು ಪ್ರಶ್ನೆ ಕೇಳಿದ್ದು ಮಾತ್ರವಲ್ಲದೇ ಕಬ್ಬನ್‌ಪಾರ್ಕ್‌ಗೆ ಹೋಗಲು ಸಾವಿರಾರು ರೂಪಾಯಿ ಕೊಡಬೇಕಾ ಎಂದು ಕಾಲೆಳೆದಿದ್ದಾರೆ.

Forest Bathing

ಅರಣ್ಯ ಸ್ನಾನದ ಕಲ್ಪನೆಗೆ ನನ್ನ ವಿರೋಧವಿಲ್ಲ. ಇದು ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಎಂದು ನನಗೆ ಖಾತ್ರಿಯಿದೆ. ಆದರೆ ಸ್ಥಳ ಮತ್ತು ಶುಲ್ಕ 18% ಜಿಎಸ್‌ಟಿ ಬಗ್ಗೆ ನನ್ನ ತಕಾರರು ಇದೆ. ಕಬ್ಬನ್‌ ಪಾರ್ಕ್‌ ಒಳಗೆ ಹೋಗಲು ಓಡಾಡಲು ಈ ದುಬಾರಿ ಶುಲ್ಕ ಯಾಕೆ ಎಂದಿದ್ದಾರೆ. ಕಬ್ಬನ್‌ ಪಾರ್ಕ್‌ ಕಾಡಲ್ಲ, ಮತ್ಯಾಕೆ ಫಾರೆಸ್ಟ್‌ ಬಾಥಿಂಗ್‌ ಹೆಸರಿನಲ್ಲಿ ಮೋಸ ಎಂದು ಕಿಡಿಕಾರಿದ್ದಾರೆ.

https://x.com/AJayAWhy/status/1780167988504625242

ಏನಿದು ಫಾರೆಸ್ಟ್‌ ಬಾಥಿಂಗ್‌?

ಅಂದಹಾಗೇ ಫಾರೆಸ್ಟ್‌ ಬಾಥಿಂಗ್‌ ಎಂಬ ಪರಿಕಲ್ಪನೆಯು ನಮ್ಮ ದೇಶದಲ್ಲ, ಬದಲಿಗೆ ಜಪಾನಿನಲ್ಲಿ ಹೆಚ್ಚು ಸಕ್ರಿಯವಾಗಿದೆ. ಜಪಾನಿನಲ್ಲಿ ಶಿನ್ರಿನ್-ಯೋಕು (shinrin-yoku) ಎಂದೂ ಕರೆಯಲ್ಪಡುವ ಈ ಫಾರೆಸ್ಟ್‌ ಬಾಥಿಂಗ್‌ ಅಥವಾ ಅರಣ್ಯ ಸ್ನಾನವು ಪ್ರಕೃತಿ ಜತೆಗಿನ ಒಡನಾಟದೊಂದಿಗೆ ಒತ್ತಡವನ್ನು ದೂರ ಮಾಡಲು ಥೆರಪಿಯಂತೆ ಬಳಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka: ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2014ರಲ್ಲಿ ಬರಿ ಚೆಂಬನ್ನು ಕೊಡುತ್ತಾರೆ. ಆ ಖಾಲಿ ಚೆಂಬನ್ನು ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಿಂದ ಅಕ್ಷಯ ಪಾತ್ರೆಯನ್ನು ಮಾಡಿದರು. ಈ ದೇಶದ ಬಡವರು, ಹಿಂದುಳಿದ ವರ್ಗದವರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಸಮಾಜದವರನ್ನು ಮೇಲಕ್ಕೆ ಎತ್ತುವ ಕೆಲಸವನ್ನು ಮಾಡಿದ ಮಹಾನ್‌ ಭಾವ ಯಾರೆಂದರೆ ಅದು ನರೇಂದ್ರ ಮೋದಿ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.

VISTARANEWS.COM


on

Modi in Karnataka HD Deve Gowda attack on Congess
Koo

ಚಿಕ್ಕಬಳ್ಳಾಪುರ: ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತವನ್ನು ನಡೆಸಿ ಸಂಪತ್ತನ್ನು ಲೂಟಿ ಮಾಡಿ 2014ರಲ್ಲಿ ಖಾಲಿ ಚೆಂಬನ್ನು ನರೇಂದ್ರ ಮೋದಿ ಅವರಿಗೆ ಕೊಟ್ಟಿದ್ದು ಇದೇ ಕಾಂಗ್ರೆಸ್‌ ಆಗಿದೆ. ಆದರೆ, ಆ ಖಾಲಿ ಚೆಂಬನ್ನು ಅಕ್ಷಯ ಪಾತ್ರೆ ಮಾಡಿದವರು ಪ್ರಧಾನಿ ಮೋದಿ (PM Narendra Modi) ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ (HD Devegowda) ಗುಡುಗಿದರು. ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜತೆ ವೇದಿಕೆ ಹಂಚಿಕೊಂಡು ಮಾತನಾಡಿದ ಎಚ್.ಡಿ. ದೇವೇಗೌಡ, ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಕೋಲ್, 2ಜಿ ಸ್ಪೆಕ್ಟ್ರಂ ಸೇರಿದಂತೆ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ನಾಡಿನ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಆ ಬರಿಯ ಚೆಂಬನ್ನು ಯಾರ ಕೈಗೆ ಕೊಟ್ಟಿದ್ದಾರೆ? ಈ ಕಾಂಗ್ರೆಸ್‌ನವರು ಯಾರಿಗೆ ಕೊಟ್ಟರು? ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2014ರಲ್ಲಿ ಬರಿ ಚೆಂಬನ್ನು ಕೊಡುತ್ತಾರೆ. ಆ ಖಾಲಿ ಚೆಂಬನ್ನು ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಿಂದ ಅಕ್ಷಯ ಪಾತ್ರೆಯನ್ನು ಮಾಡಿದರು. ಈ ದೇಶದ ಬಡವರು, ಹಿಂದುಳಿದ ವರ್ಗದವರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಸಮಾಜದವರನ್ನು ಮೇಲಕ್ಕೆ ಎತ್ತುವ ಕೆಲಸವನ್ನು ಮಾಡಿದ ಮಹಾನ್‌ ಭಾವ ಯಾರೆಂದರೆ ಅದು ನರೇಂದ್ರ ಮೋದಿ ಎಂದು ಎಚ್.ಡಿ. ದೇವೇಗೌಡ ಹೇಳಿದರು.

ಇಂಥ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುತ್ತೀರಾ? ಇದು ಕ್ಷುಲ್ಲಕ ರಾಜಕಾರಣ ಅಲ್ಲವೇ? ನಾಚಿಕೆಯಾಗಬೇಕು ನಿಮಗೆ. ಈ ದೇಶಕ್ಕೆ ಸುಮಾರು 34 ಪ್ರೋಗ್ರಾಂಗಳನ್ನು ಕೊಟ್ಟಿದ್ದಾರೆ. ಬಡವರಿಗೋಸ್ಕರ, ನಿರೋದ್ಯೋಗವನ್ನು ಬಗೆಹರಿಸಲು ಸೇರಿದಂತೆ ಎಷ್ಟು ಕಾರ್ಯಕ್ರಮಗಳು ಇವೆ? ಸಿಎಂ ಸಿದ್ದರಾಮಯ್ಯ ಮತ್ತು ಅವರ ಭಾಷಣದಲ್ಲಿ ಏನು ಹೇಳುತ್ತಾರೆ? ಅವರ ಬಗ್ಗೆ, ಅವರ ಭಾಷಣದ ಬಗ್ಗೆ ವ್ಯಾಖ್ಯಾನ ಮಾಡಲು ನಾನು ಹೋಗುವುದಿಲ್ಲ ಎಚ್.ಡಿ. ದೇವೇಗೌಡ ಹೇಳಿದರು.

ಮೋದಿ ಕಾರ್ಯಕ್ರಮದ ಲೈವ್‌ ಅಪ್ಡೇಟ್‌ ಇಲ್ಲಿದೆ

ಚಿಕ್ಕಬಳ್ಳಾಪುರದಲ್ಲಿ ನನ್ನ ನಿಜವಾದ ಕಾರ್ಯಕರ್ತರು ಇದ್ದರೆ ನಿಮ್ಮ ವೋಟನ್ನು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಅವರಿಗೆ ನೀಡಿ. ನಾವು ನಮ್ಮ ಗುರಿಯನ್ನು ಮುಟ್ಟಲು, ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಲು, ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲು ನಮ್ಮ ಕಾಣಿಕೆ ಇದಾಗಬೇಕು ಎಂದು ಎಚ್.ಡಿ. ದೇವೇಗೌಡ ಮನವಿ ಮಾಡಿದರು.

ಇದನ್ನೂ ಓದಿ: ‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

ಈಗ 25 ಗ್ಯಾರಂಟಿಯನ್ನು ಕೊಡುತ್ತೇನೆ ಎಂದು ಹೇಳುತ್ತಿದ್ದಾರೆ.

ಈ ದೇಶದಲ್ಲಿ 60 ವರ್ಷ ಆಡಳಿತ ನಡೆಸಿ, ಈ ಹತ್ತು ವರ್ಷದಲ್ಲಿ ವಿರೋಧಿ ಪಕ್ಷದ ಸ್ಥಾನವನ್ನು ಪಡೆಯಲು ಯೋಗ್ಯತೆ ಇಲ್ಲದ ಈ ಕಾಂಗ್ರೆಸ್‌ ಪಕ್ಷವು 400 ಸೀಟುಗಳನ್ನು ಗೆಲ್ಲುತ್ತದೆಯಾ? ಈಗ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಈ ಇಬ್ಬರು (ಡಾ. ಕೆ. ಸುಧಾಕರ್‌ ಮತ್ತು ಮಲ್ಲೇಶ್‌ ಬಾಬು) ಅಭ್ಯರ್ಥಿಗಳನ್ನು ಗೆಲ್ಲಿಸಿ. 28 ಕ್ಷೇತ್ರಗಳನ್ನು ಗೆದ್ದುಕೊಂಡು ನಾವೆಲ್ಲರೂ ಹೋಗಿ ಕಾವೇರಿ ನೀರು ಸೇರಿದಂತೆ ರಾಜ್ಯದ ಇನ್ನಿತರ ಸಮಸ್ಯೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಹೋಗಿ ಕೇಳಲು ಅನುವು ಮಾಡಿಕೊಡಬೇಕು ಎಂದು ಎಚ್.ಡಿ. ದೇವೇಗೌಡ ಮನವಿ ಮಾಡಿದರು.

Continue Reading
Advertisement
Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ10 seconds ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

tiger attack
ಚಾಮರಾಜನಗರ12 seconds ago

Tiger Attack : ಮರಿಯಾನೆ ಕೊಂದ ಹುಲಿ; ಶವ ಬಿಟ್ಟು ಕದಲದ ತಾಯಿ ಆನೆ ರೋಧನೆ

PBKS vs GT
ಕ್ರೀಡೆ20 mins ago

PBKS vs GT: ಗುಜರಾತ್​ ವಿರುದ್ಧವಾದರೂ ಪಂಜಾಬ್​ಗೆ ಒಲಿದೀತೇ ಗೆಲುವಿನ ಅದೃಷ್ಟ?

CJI Chandrachud
ದೇಶ32 mins ago

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

Forest bathing activity begins at Cubbon Park
ಬೆಂಗಳೂರು34 mins ago

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Modi in Karnataka HD Deve Gowda attack on Congess
Lok Sabha Election 202434 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Lok Sabha Election 2024
ಕರ್ನಾಟಕ38 mins ago

Lok Sabha Election 2024: ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Job Alert
ಉದ್ಯೋಗ40 mins ago

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Viral Video
ವೈರಲ್ ನ್ಯೂಸ್44 mins ago

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Vinay Gowda Lunch With Kichcha Sudeep
ಸಿನಿಮಾ47 mins ago

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ11 seconds ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 202434 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ4 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ5 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌