RRR Movie | ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಆರ್‌ಆರ್‌ಆರ್‌ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗುತ್ತಾ? - Vistara News

ಟಾಲಿವುಡ್

RRR Movie | ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಆರ್‌ಆರ್‌ಆರ್‌ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗುತ್ತಾ?

‘ಆರ್​ಆರ್​ಆರ್’ ಚಿತ್ರ (RRR Movie) ಭಾರಿ ಯಶಸ್ಸಿನ ಹೊರತಾಗಿಯೂ ಆಸ್ಕರ್​ 2023ಕ್ಕೆ ಆಯ್ಕೆ ಮಾಡಲಾಗಿಲ್ಲ. ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಆರ್‌ಆರ್‌ಆರ್ ಆಸ್ಕರ್ ಪ್ರಶಸ್ತಿ ಪಡೆಯಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

RRR Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಎಸ್‌ ಎಸ್‌ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ (RRR Movie) ಸಿನಿಮಾ ಮಾರ್ಚ್ 25 ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ವರ್ಷದ ಅತ್ಯುತ್ತಮ ಚಲನಚಿತ್ರ ಎಂದು ಖ್ಯಾತಿ ಪಡೆದಿತ್ತು. ‘ಆರ್​ಆರ್​ಆರ್’ ಚಿತ್ರ ಭಾರಿ ಯಶಸ್ಸಿನ ಹೊರತಾಗಿಯೂ ಆಸ್ಕರ್​ 2023ಕ್ಕೆ ಆಯ್ಕೆ ಮಾಡಲಾಗಿಲ್ಲ. ಇದೀಗ ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಆರ್‌ಆರ್‌ಆರ್ ಆಸ್ಕರ್ ಪ್ರಶಸ್ತಿ ಪಡೆಯಲಿದೆ ಎಂದು ಜನಪ್ರಿಯ ನಿಯತಕಾಲಿಕೆ ಒಂದು ಭವಿಷ್ಯ ನುಡಿದಿದೆ.

ಎಸ್‌ ಎಸ್ ರಾಜಮೌಳಿ ಅವರು ಆರ್‌ಆರ್‌ಆರ್‌ಗಾಗಿ ಆಸ್ಕರ್ ನಾಮನಿರ್ದೇಶನವನ್ನು ಪಡೆಯಲು ಪ್ರಚಾರ ಮಾಡುತ್ತಿದ್ದಾರೆ. ಅವರು ಇತ್ತೀಚೆಗೆ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದರು. ಇದು ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತು. ಇತ್ತೀಚಿನ ವರದಿ ಪ್ರಕಾರ ಆರ್‌ಆರ್‌ಆರ್‌ ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ ಎಂದು ಜನಪ್ರಿಯ ಮ್ಯಾಗಜಿನ್‌ ಒಂದು ಭವಿಷ್ಯ ನುಡಿದಿದೆ. ಅದರಲ್ಲಿಯೂ ʻಟಾಪ್ ಗನ್ 2ʼ, ‘ಅವತಾರ್ 2’, ‘ಬ್ಲ್ಯಾಕ್ ಪ್ಯಾಂಥರ್ 2’ ಮತ್ತು ‘ದಿ ಬ್ಯಾಟ್‌ಮ್ಯಾನ್’ ಸಿನಿಮಾಗಳು ಕೂಡ ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ನಾಮನಿರ್ದೇಶನಗೊಂಡಿವೆ ಎಂದು ವರದಿ ಆಗಿದೆ.

ಇದನ್ನೂ ಓದಿ | ʻಆರ್‌ಆರ್‌ಆರ್‌ʼಗೆ ಸಿಕ್ತು ಸೆನ್ಸಾರ್ ಸರ್ಟಿಫಿಕೇಟ್‌.. ʻಬಾಹುಬಲಿ-2ʼ ಚಿತ್ರವನ್ನೇ ಮೀರಿಸುತ್ತೆ ಈ ಸಿನಿಮಾ..!

RRR ಸಿನಿಮಾ ವಿದೇಶಿ ಮಾರುಕಟ್ಟೆಗಳಲ್ಲಿ ಸಖತ್‌ ಸೌಂಡ್‌ ಮಾಡಿತ್ತು. ನಟ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಪೋಷಕ ನಟಿ ಮತ್ತು ಅನೇಕ ಪ್ರಶಸ್ತಿಗಳನ್ನು ಪಡೆದಿದೆ.

‘ಆರ್​ಆರ್​ಆರ್’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಜೂನಿಯರ್ ಎನ್​ಟಿಆರ್​, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್​ ಮತ್ತು ಇತರೆ ಸಹಕಲಾವಿದರು ನಟಿಸಿದ್ದಾರೆ. ಮಾರ್ಚ್ 2022ರಲ್ಲಿ ಬಿಡುಗಡೆಯಾದ ‘RRR’ ಚಿತ್ರ ಇಬ್ಬರು ತೆಲುಗು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರ ಪಾತ್ರಗಳನಿಟ್ಟುಕೊಂಡು ಮಾಡಿದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ.

ವಿಶ್ವಾದ್ಯಂತ 1200 ಕೋಟಿ ರೂ. ಹೆಚ್ಚು ಗಳಿಕೆ ಕಂಡು ಭಾರತದಲ್ಲಿ ಅತ್ಯಂತ ಯಶಸ್ವಿ ಚಲನಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿತು. ಭಾರತೀಯ ಚಲನಚಿತ್ರ ವಿಮರ್ಶಕರಿಂದ ಪ್ರಶಂಸೆಯನ್ನು ಪಡೆಯಿತು.

ಇದನ್ನೂ ಓದಿ | Rajamouli | ರಾಜಮೌಳಿ ಕಿರೀಟಕ್ಕೆ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಗರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಕ್ಷೀಣಿಸುತ್ತಿರುವ ಬಾಕ್ಸ್ ಆಫೀಸ್ ಆದಾಯದ ನಡುವೆ, ಐಪಿಎಲ್ ಮತ್ತು ಸಾರ್ವತ್ರಿಕ ಚುನಾವಣೆಗಳಿಂದ ಟಾಲಿವುಡ್ ನಲ್ಲಿ ಯಾವುದೇ ಚಲನಚಿತ್ರ ತೆರೆಗೆ ಬಂದಿಲ್ಲ. ಹೀಗಾಗಿ ನಷ್ಟದ ಹಾದಿಯನ್ನು ಸರಿಪಡಿಸಿಕೊಳ್ಳಲು ತೆಲಂಗಾಣದಲ್ಲಿ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು (Single Screen Theaters) ಹತ್ತು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ.

VISTARANEWS.COM


on

By

Single Screen Theaters
Koo

ಪ್ರಮುಖ ಚಲನಚಿತ್ರಗಳ ಬಿಡುಗಡೆ (movie releases) ಕೊರತೆಯಿಂದಾಗಿ ತೆಲಂಗಾಣದಾದ್ಯಂತ (Telangana) ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು (Single Screen Theaters) 10 ದಿನಗಳ ಕಾಲ ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ ಇಲ್ಲದಿರುವ ಪರಿಣಾಮ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಯಾವುದೇ ದೊಡ್ಡ ಬಜೆಟ್ ನ ಚಿತ್ರಗಳು ಬಾರದೇ ಇರುವುದರಿಂದ ಥಿಯೇಟರ್ ಗಳನ್ನು ಮುಚ್ಚುತ್ತಿರುವುದಾಗಿ ಥಿಯೇಟರ್ ಮಾಲೀಕರು ಉಲ್ಲೇಖಿಸಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸಲು ಯಾವುದೇ ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಚಲನಚಿತ್ರ ಪ್ರದರ್ಶನ ಕಾರ್ಯಾಚರಣೆಯ ವೆಚ್ಚ ಮತ್ತು ಕಡಿಮೆಯಾದ ಆದಾಯ ಸೇರಿದಂತೆ ಹಣಕಾಸಿನ ಸವಾಲುಗಳ ನಡುವೆ 2024ರ ಸಂಕ್ರಾಂತಿ ನಂತರ ಯಾವುದೇ ದೊಡ್ಡ ಚಿತ್ರಗಳು ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಲಿಲ್ಲ.

ಏನು ಕಾರಣ?

ಕಳೆದ ಕೆಲವು ವಾರಗಳಲ್ಲಿ ತೆಲಂಗಾಣದಲ್ಲಿ ಚಲನಚಿತ್ರ ವ್ಯಾಪಾರಿಗಳು ಮೇ 17ರಿಂದ ಥಿಯೇಟರ್ ಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡರು. ಒಂದೆಡೆ ಲೋಕ ಸಭಾ ಚುನಾವಣೆ, ಇನ್ನೊಂದೆಡೆ ದೊಡ್ಡ ಚಿತ್ರಗಳ ಬಿಡುಗಡೆಗಳ ಕೊರತೆ, ಇಂಡಿಯನ್ ಪ್ರೀಮಿಯರ್ ಲೀಗ್ ಗಳು ತೆಲಂಗಾಣ ಮತ್ತು ಆಂಧ್ರಪ್ರದೇಶದಾದ್ಯಂತ ಥಿಯೇಟರ್‌ಗಳ ಮೇಲೆ ಭಾರಿ ಪ್ರಭಾವವನ್ನು ಬೀರಿದೆ.

ಮತ್ತೆ ತೆರೆಯುವ ನಿರೀಕ್ಷೆ

ಮೇ 31 ರಂದು ವಿಶ್ವಕ್ ಸೇನ್ ಅವರ ‘ಗ್ಯಾಂಗ್ಸ್ ಆಫ್ ಗೋದಾವರಿ’ಗಾಗಿ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಮತ್ತೆ ತೆರೆಯಲ್ಪಡುತ್ತವೆ. ಅಲ್ಲದೆ ಅನೇಕ ಥಿಯೇಟರ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ‘ಕಲ್ಕಿ’ಯಂತಹ ದೊಡ್ಡ-ಬಜೆಟ್ ಚಿತ್ರಗಳ ಮೇಲೆ ಭರವಸೆ ಇಡುತ್ತಿವೆ. 2898 AD’, ‘ಪುಷ್ಪ: ದಿ ರೂಲ್’, ‘ಗೇಮ್ ಚೇಂಜರ್’, ‘ವಿಶ್ವಂಭರ’ ಮತ್ತು ‘ಇಂಡಿಯನ್ 2’ ಸೇರಿದಂತೆ ಈ ಬಾರಿ ಹಲವು ಚಿತ್ರಗಳು ತೆರೆಗೆ ಬರುವ ನಿರೀಕ್ಷೆಯಲ್ಲಿದೆ.

ಹತ್ತು ದಿನ ಬಂದ್

ತೆಲಂಗಾಣದಲ್ಲಿ ಚಲನಚಿತ್ರ ವ್ಯವಹಾರವು ಕೆಲವು ಅಭೂತಪೂರ್ವ ಸವಾಲುಗಳನ್ನು ಎದುರಿಸುತ್ತಿದೆ. ಇದು ರಾಜ್ಯದ ಮನರಂಜನಾ ವಲಯದಾದ್ಯಂತ ತಲ್ಲಣ ಉಂಟು ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಆದಾಯ ಕಡಿಮೆಯಾಗುತ್ತಿರುವ ಕಾರಣ ತೆಲಂಗಾಣದಾದ್ಯಂತ ಹಲವಾರು ಏಕ-ಪರದೆಯ ಚಿತ್ರಮಂದಿರಗಳು ಮೇ 17ರಿಂದ ಮೇ 26ರವರೆಗೆ ಹತ್ತು ದಿನಗಳ ಕಾಲ ಬಾಗಿಲು ಮುಚ್ಚಲು ಯೋಜಿಸಿದೆ.

ಈ ಬಾರಿ ಬೇಸಿಗೆಯಲ್ಲಿ ಪ್ರಮುಖ ಚಲನಚಿತ್ರ ಬಿಡುಗಡೆಯಾಗಿಲ್ಲ. ಸಾಮಾನ್ಯವಾಗಿ ಈ ಸಂದರ್ಭದಲ್ಲಿ ದೊಡ್ಡ ಜನಸಮೂಹವನ್ನು ಸೆಳೆಯುವ ಬ್ಲಾಕ್‌ಬಸ್ಟರ್ ಹಿಟ್‌ ಚಿತ್ರಗಳು ತೆರೆಗೆ ಬರುತ್ತದೆ. ಆದರೆ ಈ ಬಾರಿ ಯಾವುದೇ ಅಂತಹ ಚಿತ್ರಗಳು ಬಂದಿಲ್ಲ. ಇದು ಸಿಂಗಲ್ ಸ್ಕ್ರೀನ್‌ಗಳ ಮೇಲೆ ಗಂಭೀರ ಪರಿಣಾಮವನ್ನೇ ಬೀರಿದೆ.

ಇದನ್ನೂ ಓದಿ: Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

ಥಿಯೇಟರ್‌ಗಳು ತಮ್ಮ ಆದಾಯವನ್ನು ಸಂಗ್ರಹಿಸಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತದೆ. ಚಲನಚಿತ್ರದ ವೇಳಾಪಟ್ಟಿ ಮತ್ತು ಪ್ರೇಕ್ಷಕರ ಸಂಖ್ಯೆಯಲ್ಲಿನ ಏರಿಳಿತಗಳಿಗೆ ಹೆಚ್ಚು ಗುರಿಯಾಗುತ್ತವೆ. ಕಳೆದ ಎರಡು ತಿಂಗಳುಗಳಲ್ಲಿ ಸಣ್ಣ ಮತ್ತು ಮಧ್ಯಮ-ಬಜೆಟ್ ಚಲನಚಿತ್ರಗಳ ಸರಣಿಯು ಛಾಪು ಮೂಡಿಸುವಲ್ಲಿ ವಿಫಲವಾಗಿದೆ. ಇದರಿಂದ ಚಿತ್ರೋದ್ಯಮ ವ್ಯಾಪಾರವನ್ನು ಮತ್ತಷ್ಟು ತಗ್ಗಿದೆ.

ನಷ್ಟ ತಡೆಗೆ ಕ್ರಮ

ತೆಲಂಗಾಣ ಥಿಯೇಟರ್ಸ್ ಅಸೋಸಿಯೇಷನ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತಷ್ಟು ನಷ್ಟವನ್ನು ತಡೆಯಲು ತಡೆಗಟ್ಟಲು ನಿರ್ಧರಿಸಿದೆ.

Continue Reading

ಟಾಲಿವುಡ್

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Ram Pothineni ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

VISTARANEWS.COM


on

Ram Pothineni Double iSmart teaser with Sanjay Dutt
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹಾಗೂ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ `ಡಬಲ್ ಇಸ್ಮಾರ್ಟ್‘ (Double iSmart) ಟೀಸರ್‌ ಬಿಡುಗಡೆಗೊಂಡಿದೆ. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡುವಂತಿದೆ. ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Sanjay Dutt: ‘ಡಬಲ್ ಇಸ್ಮಾರ್ಟ್’ಗೆ ʻಬಿಗ್ ಬುಲ್ʼ ಎಂಟ್ರಿ; ಸಂಜಯ್ ದತ್ ಬರ್ತ್‌ಡೇ ಸ್ಪೆಷಲ್‌!

ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್‌ದತ್‌ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಈ ಹಿಂದೆ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್‌ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಾಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

Continue Reading

ಟಾಲಿವುಡ್

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Rashmika Mandanna: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿದರು.

VISTARANEWS.COM


on

Rashmika Mandanna Reacts To India Decade of Growth Amid Lok Sabha Polls
Koo

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದಾರೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾಧ್ಯಮದ ಜತೆ ಮಾತನಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು.

ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದರು.

ಸದ್ಯ ದೇಶದಲ್ಲಿ 2024ರ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಯುವ ಪೀಳಿಗೆ ಜವಾಬ್ದಾರಿಯುತವಾಗಿ ಮತ ಚಲಾಯಿಸುವಂತೆ ರಶ್ಮಿಕಾ ಮನವಿ ಮಾಡಿದ್ದಾರೆ, “ಯುವ ಪೀಳಿಗೆ – ಯುವ ಭಾರತ – ಅಂತಹ ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ! ಯುವ ಭಾರತೀಯರು ಮತ ಚಲಾಯಿಸಬೇಕು. ಜನರು ನಿಜವಾಗಿಯೂ ನೋಡುತ್ತಿದ್ದಾರೆ, ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ. ಅದರ ಬಗ್ಗೆ ತುಂಬಾ ಸ್ಮಾರ್ಟ್ ಆಗಿದ್ದಾರೆ. ಅವರು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ರಶ್ಮಿಕಾ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟಿಗೆ ಕೆಲವರು ಮೊದಲು ನೀವು ವೋಟ್‌ ಹಾಕಿ ಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

Pushpa 2: ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

Pushpa 2 Allu Arjun fan recreates hook step on graduation day
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿತ್ತು. ‘ಪುಷ್ಪ 2’ ಚಿತ್ರದ ಮೊದಲ ಸಿಂಗಲ್ ‘ಪುಷ್ಪ ಪುಷ್ಪ’ ಬಿಡುಗಡೆ ಆದ ತಕ್ಷಣದಿಂದಲೇ ಟ್ರೆಂಡ್‌ ಆಗಿತ್ತು. ಅಲ್ಲು ಅರ್ಜುನ್‌ ಅವರ ಸ್ಟೈಲಿಶ್ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದರು. ಇದೀಗ ಈ ಸ್ಟೆಪ್ಸ್‌ವನ್ನು ಪದವಿ ವಿದ್ಯಾರ್ಥಿವೊಬ್ಬ ಪದವಿ ಪ್ರದಾನ ಮಾಡುವ ದಿನ ವೇದಿಕೆಯಲ್ಲಿ ‘ಪುಷ್ಪ ಪುಷ್ಪ’ ಸಾಂಗ್‌ ಸ್ಟೆಪ್ಸ್‌ ಹಾಕಿದ್ದಾನೆ. ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಇದನ್ನೂ ಓದಿ: Pushpa 2: ಬರೋಬ್ಬರಿ 60 ಕೋಟಿ ರೂ.ಗೆ ‘ಪುಷ್ಪ 2’ ಆಡಿಯೊ ಹಕ್ಕು ಮಾರಾಟ?

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading
Advertisement
Lady Constable
ದೇಶ35 mins ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 202452 mins ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ60 mins ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ2 hours ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ2 hours ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ2 hours ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್2 hours ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ2 hours ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ2 hours ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ8 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು11 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌