Prof. K S Rangappa | ಮೈಸೂರು ವಿಜ್ಞಾನಿ ಪ್ರೊ.ಕೆ.ಎಸ್‌. ರಂಗಪ್ಪಗೆ ವಿಜ್ಞಾನ ಕ್ಷೇತ್ರದ ಜಾಗತಿಕ ಫೆಲೋಶಿಪ್‌ - Vistara News

ಕರ್ನಾಟಕ

Prof. K S Rangappa | ಮೈಸೂರು ವಿಜ್ಞಾನಿ ಪ್ರೊ.ಕೆ.ಎಸ್‌. ರಂಗಪ್ಪಗೆ ವಿಜ್ಞಾನ ಕ್ಷೇತ್ರದ ಜಾಗತಿಕ ಫೆಲೋಶಿಪ್‌

ಕಳೆದ 40 ವರ್ಷದಿಂದ ವಿಜ್ಞಾನದಲ್ಲಿ ಸಂಶೋಧನೆ ನಡೆಸುತ್ತಿರುವ ಮೈಸೂರಿನ ಪ್ರೊ.ಕೆ.ಎಸ್‌.ರಂಗಪ್ಪ (Prof. K S Rangappa) ಅವರಿಗೆ ಜಾಗತಿಕ ಮಟ್ಟದ ಫೆಲೋಶಿಪ್‌ ದೊರೆತಿದೆ.

VISTARANEWS.COM


on

Prof KS Rangappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ, ಖ್ಯಾತ ವಿಜ್ಞಾನಿ ಪ್ರೊ.ಕೆ.ಎಸ್‌.ರಂಗಪ್ಪ ಅವರಿಗೆ ೨೦೨೨ನೇ ಸಾಲಿನ ವರ್ಲ್ಡ್‌ ಅಕಾಡೆಮಿ ಆಫ್‌ ಸೈನ್ಸಸ್‌ ಫೆಲೋಶಿಪ್‌ (Prof. K S Rangappa) ದೊರೆತಿದೆ. ಇದು ಜಾಗತಿಕ ಫೆಲೋಶಿಪ್‌ ಆಗಿರುವುದರಿಂದ ಪ್ರೊ.ಕೆ.ಎಸ್‌.ರಂಗಪ್ಪ ಅವರ ಸಾಧನೆಯು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ಇಂತಹ ಪ್ರತಿಷ್ಠಿತ ಫೆಲೋಶಿಪ್‌ಗೆ ಭಾಜನರಾದ ಮೊದಲ ಕನ್ನಡಿಗ ಎನಿಸಿದ್ದಾರೆ.

ಕೆ.ಎಸ್.ರಂಗಪ್ಪ ಅವರು ಕಳೆದ ೪೦ ವರ್ಷಗಳಿಂದ ವಿಜ್ಞಾನ ಕ್ಷೇತ್ರದ ಸಂಶೋಧನೆಯಲ್ಲಿ ತೊಡಗಿದ್ದು, ಹತ್ತಾರು ಆವಿಷ್ಕಾರಗಳ ಮೂಲಕ ಖ್ಯಾತಿ ಗಳಿಸಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆ, ಮಾಡಿದ ಸಾಧನೆ ಪರಿಗಣಿಸಿ ಫೆಲೋಶಿಪ್‌ ನೀಡಲಾಗಿದೆ. ಇದು ಯುವ ವಿಜ್ಞಾನಿಗಳಿಗೆ ಸ್ಫೂರ್ತಿದಾಯಕ ವಿಷಯ ಎಂದೇ ಹೇಳಲಾಗುತ್ತಿದೆ.

ದಿ ವರ್ಲ್ಡ್‌ ಅಕಾಡೆಮಿ ಆಫ್‌ ಸೈನ್ಸಸ್‌ (TWAS) ಜಾಗತಿಕ ಸಂಸ್ಥೆಯಾಗಿದ್ದು, ಇದನ್ನು ೧೯೮೩ರಲ್ಲಿ ಸ್ಥಾಪಿಸಲಾಗಿದೆ. ಇದರಲ್ಲಿ ನೂರಾರು ದೇಶಗಳ ಖ್ಯಾತ ವಿಜ್ಞಾನಿಗಳಿದ್ದು, 11 ನೊಬೆಲ್‌ ಪುರಸ್ಕೃತರೂ ಸದಸ್ಯರಾಗಿದ್ದಾರೆ. ಜಗತ್ತಿನಾದ್ಯಂತ ಒಟ್ಟು ೧,೨೯೬ ಸದಸ್ಯರಿದ್ದಾರೆ. ಹಾಗಾಗಿ ಇದು ಪ್ರತಿಷ್ಠಿತ ಫೆಲೋಶಿಪ್‌ ಎನಿಸಿದೆ.

ಇದನ್ನೂ ಓದಿ | Dailyhunt | #StoryForGlory | ಡೈಲಿ‌ಹಂಟ್‌, ಎಎಂಜಿ ಮೀಡಿಯಾ ಪ್ರತಿಭಾನ್ವೇಷಣೆಯ ಗ್ರ್ಯಾಂಡ್ ಫಿನಾಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್‌ ತೆರಯಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಕೊನೆಯ ದಿನಾಂಕ ಯಾವಾಗ? ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

NMMS scholarship
Koo

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎನ್‌ಎಂಎಂಎಸ್‌ (NMMS) ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆಯಲಾಗಿದೆ. ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ತಿಳಿಸಿದೆ.

NMMS ವಿದ್ಯಾರ್ಥಿ ವೇತನಕ್ಕಾಗಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್‌ನಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ.

ಕಾರ್ಯ ಚಟುವಟಿಕೆಯ ವಿವರ

ಪೋರ್ಟಲ್ ಆರಂಭ: ಜೂನ್‌ 30
ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ ದಿನಾಂಕ: ಆಗಸ್ಟ್‌ 31
ಶಾಲಾ/ ಕಾಲೇಜು ಹಂತದಲ್ಲಿ INOಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ: ಸೆಪ್ಟೆಂಬರ್‌ 15
ಜಿಲ್ಲಾ ಹಂತದಲ್ಲಿ DNOಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ: ಸೆಪ್ಟೆಂಬರ್‌ 30

ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಪ್ರಮುಖ ಅಂಶಗಳು

  • 2024-25ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration(OTR) ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
  • (OTR) is a unique 14-digit number issued based on the Aadhaar/Aadhaar Enrolment ID (EID)
  • One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು, ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.
  • NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೋಂದಾಯಿತ ಮೋಬೈಲ್ ಗೆ SMS ಮೂಲಕ Reference / OTR ಸಂಖ್ಯೆ ಕಳುಹಿಸಲಾಗುತ್ತದೆ.
  • Fresh ವಿದ್ಯಾರ್ಥಿಗಳಿಗೆ SMS ಮೂಲಕ Reference ID ಅಥವಾ OTR ಸಂಖ್ಯೆಯನ್ನು ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) National Scholarship Portal 2 Student Login ಲಭ್ಯವಿರುವ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರೆಫೆರನ್ಸ್ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗುತ್ತದೆ.
  • 2024-25 ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಅ) ಆಧಾ‌ರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು

  • ಸಕ್ರಿಯ ಮೊಬೈಲ್ ಸಂಖ್ಯೆ
  • ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ.
  • ವಿದ್ಯಾರ್ಥಿಯ ಆಧಾ‌ರ್ ಸಂಖ್ಯೆ.

ಆ) ಆಧಾ‌ರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು

  • ಸಕ್ರಿಯ ಮೊಬೈಲ್ ಸಂಖ್ಯೆ
  • ಪೋಷಕರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ
  • ವಿದ್ಯಾರ್ಥಿಯು ಆಧಾರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ.
  • ಪೋಷಕರ ಆಧಾರ್ ಸಂಖ್ಯೆ.

ವಿಶೇಷ ಸೂಚನೆ: ಪೋಷಕರ ಆಧಾರ್ ಸಂಖ್ಯೆ ನೀಡಿದ್ದರೂ ಕೂಡ ಉಳಿದ ಎಲ್ಲಾ ಮಾಹಿತಿಗಳು ಹಾಗೂ ಭಾವಚಿತ್ರ ವಿದ್ಯಾರ್ಥಿಯದ್ದೇ ಆಗಿರಬೇಕು. ವಿದ್ಯಾರ್ಥಿ ವೇತನವನ್ನು ಪಡೆಯಲು, ಕಾಲ ಮಿತಿಯೊಳಗೆ ವಿದ್ಯಾರ್ಥಿಯು ತನ್ನ ಆಧಾರ್ ಸಂಖ್ಯೆಯನ್ನು update ಮಾಡಿಸಬೇಕು.

ಇ) OTR (One Time Registration) ಸಂಖ್ಯೆ ಪಡೆದ ವಿದ್ಯಾರ್ಥಿಗಳಿಗೆ ಸೂಚನೆಗಳು

  • 2023-24ನೇ ಸಾಲಿನಲ್ಲಿ face authentication ಮಾಡಿದ ವಿದ್ಯಾರ್ಥಿಗಳಿಗೆ NSPಯ ಮೂಲಕ ಜೆನರೇಟ್ ಆದ One Time Registration(OTR) ಸಂಖ್ಯೆಯನ್ನು ಅರ್ಜಿದಾರರ ನೊಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಕಳುಹಿಸಿಕೊಡಲಾಗಿದೆ.
  • ಈಗಾಗಲೇ OTR ಸಂಖ್ಯೆಯನ್ನು ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ನೇರವಾಗಿ NSP ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು

ಈ) ರೆಫೆರೆನ್ಸ್‌ ಸಂಖ್ಯೆ ಪಡೆದಿರುವ ವಿದ್ಯಾರ್ಥಿಗಳು OTR ಪಡೆಯಲು ಅನುಸರಿಸಬೇಕಾದ ಕ್ರಮಗಳು (ರೆಫರನ್ಸ್ ಸಂಖ್ಯೆ ಉದಾ: R23-003101555)

  • 2023-24ನೇ ಸಾಲಿನಲ್ಲಿ OTP based eKYC ಯನ್ನು ಪೂರ್ಣಗೊಳಿಸಿದ್ದರೂ ಕೂಡ, face authentication ಅನ್ನು ಪೂರ್ಣಗೊಳಿಸದೇ ಇರುವ ವಿದ್ಯಾರ್ಥಿಗಳಿಗೆ MOE ಯಿಂದ ನೋಂದಾಯಿತ ಮೊಬೈಲ್‌ಗೆ ರೆಫೆರೆನ್ಸ್ ಸಂಖ್ಯೆಯನ್ನು ಕಳುಹಿಸಲಾಗಿರುತ್ತದೆ.
  • ರೆಫೆರೆನ್ಸ್ ಸಂಖ್ಯೆಯನ್ನು ಬಳಸಿಕೊಂಡು, ವಿದ್ಯಾರ್ಥಿಗಳು Face Authentication ಪೂರ್ಣಗೊಳಿಸುವ ಮೂಲಕ OTR ಸಂಖ್ಯೆಯನ್ನು ಪಡೆದುಕೊಳ್ಳುವುದು.
  • ಅದಕ್ಕಾಗಿ ಆಂಡ್ರಾಯ್ಡ್ ಮೊಬೈಲ್‌ನ google play store ನಿಂದ ಈ ಮುಂದೆ ಸೂಚಿಸಿರುವ ಎರಡೂ App ಗಳನ್ನು install ಮಾಡಿಕೊಳ್ಳುವುದು
  • AadhaarFaceRD App ನ್ನು install ಮಾಡಿಕೊಳ್ಳುವುದು.

(Link: https://play.google.com/store/apps/details?id=in.gov.uidai.facerd

  • NSP OTR App ಅನ್ನು install ಮಾಡುವುದು.

(link: https://play.google.com/store/apps/details?id=in.gov.scholarships.nspotr&pli=1)

ಉ) App ಗಳ ಮೂಲಕ OTR ಪಡೆಯುವ ಪ್ರಕ್ರಿಯೆ

  • Mobileನಲ್ಲಿ NSP OTR App ಅನ್ನು ತೆರೆದಾಗ ಕಾಣಿಸಿಕೊಳ್ಳುವ ಸ್ಕ್ರೀನ್‌ನಲ್ಲಿ ಕೆಂಪು ಬಣ್ಣದಲ್ಲಿ ಗುರುತು ಮಾಡಿರುವ “eKYC with FaceAuth” ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
  • ಈ screenನಲ್ಲಿ ವಿದ್ಯಾರ್ಥಿಯು ಪಡೆದಿರುವ Reference ID ನಮೂದಿಸುವುದು.
  • ನಂತರ ಮೊಬೈಲ್ ಗೆ ಬಂದಿರುವ OTP ಹಾಗೂ ಸ್ಕಿನ್‌ನಲ್ಲಿ ಸೂಚಿಸಿರುವ CAPTCHA ಸರಿಯಾಗಿ ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿ.
  • ವಿದ್ಯಾರ್ಥಿಯ ಆಧಾರ್‌ನಲ್ಲಿರುವಂತೆ ಮಾಹಿತಿಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ. ಮಾಹಿತಿಯನ್ನು ಖಚಿತಪಡಿಸಿಕೊಂಡು Proceed For Face Authentication ಮೇಲೆ ಕ್ಲಿಕ್ ಮಾಡಿ.
  • ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುವ ಸೂಚನೆಗಳನ್ನು ಓದಿಕೊಂಡು | Agree ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  • ಈಗ ವಿದ್ಯಾರ್ಥಿಯು Face authentication ಮಾಡಲು ಹೊಸ screen ಕಾಣಿಸಿಕೊಳ್ಳುತ್ತದೆ.
  • Screen check box ” Tick Mark” ಗುರ್ತಿಸಿ Proceed ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ Face authentication screen ಕಾಣಿಸಿಕೊಳ್ಳುತ್ತದೆ.
  • Screen ಮೇಲೆ ಕಾಣಿಸಿಕೊಳ್ಳುವ ವೃತ್ತಾಕಾರದೊಳಗೆ ವಿದ್ಯಾರ್ಥಿಯ ಮುಖ ಸ್ಪಷ್ಟವಾಗಿ ಗೋಚರಿಸುವಂತೆ ಇರಬೇಕು.
  • ನಂತರ Pls Blink to capture ಎಂಬ ಸೂಚನೆ ಕಾಣಿಸಿದಾಗ ವಿದ್ಯಾರ್ಥಿಯು ಕಣ್ಣು ರೆಪ್ಪೆ ಮುಚ್ಚಿ ತೆರೆದಾಗ Face Capture ಆಗುತ್ತದೆ. ( Error ಬಂದಲ್ಲಿ ಮತ್ತೆ ಪ್ರಯತ್ನಿಸಿ)
  • Face authentication successfully completed OTR ಜನರೇಟ್ ಆಗುತ್ತದೆ.
  • ಜನರೇಟ್ ಆದ OTR ಸಂಖ್ಯೆ ಹಾಗೂ Password ನೋಂದಾಯಿತ ಮೊಬೈಲ್ ಗೆ SMS ಬರುತ್ತದೆ.
  • ಈಗ login ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಕಾಣಿಸಿಕೊಳ್ಳುವ ಸ್ಕ್ರೀನ್‌ನಲ್ಲಿ OTR ಸಂಖ್ಯೆ ಹಾಗೂ Password ಹಾಗೂ CAPTCHA password ಸೃಜಿಸಿಕೊಳ್ಳವುದು. (ಕನಿಷ್ಠ ಒಂದು Upper case, Lower case, special character, numerical character ಒಳಗೊಂಡಂತೆ ಕನಿಷ್ಠ 8 character ಇರಬೇಕು)
  • ಕೆಳಗಿರುವ CAPTCHA ನಮೂದಿಸಿ Next ಎಂಬುದರ ಮೇಲೆ ಕ್ಲಿಕ್ ಮಾಡಿದಾಗ, Password successfully updated ಎಂಬ ಮಾಹಿತಿ ಲಭ್ಯವಾಗುತ್ತದೆ.
  • OTR a password w National Scholarship Portal F ಸಲ್ಲಿಸಲು ಕ್ರಮವಹಿಸುವುದು.

ಊ) Reference ID ಪಡೆಯದೇ ಇರುವ Fresh ವಿದ್ಯಾರ್ಥಿಗಳು ವಹಿಸಬೇಕಾದ ಕ್ರಮಗಳು

  • ವಿದ್ಯಾರ್ಥಿಗಳು NSP ನಲ್ಲಿ Login ಆಗುವುದು.
  • Apply for One Time Registration ಮೇಲೆ ಕ್ಲಿಕ್ ಮಾಡುವುದು.
  • ಕಾಣಿಸಿಕೊಳ್ಳುವ ಸ್ಕಿನ್ ನಲ್ಲಿ Register ಮೇಲೆ ಕ್ಲಿಕ್ ಮಾಡುವುದು.
  • ಸೂಚನೆಗಳನ್ನು ಓದಿಕೊಂಡು check box ನಲ್ಲಿ ” TICK MARK” ಗುರ್ತಿಸಿ Next ಮೇಲೆ ಕ್ಲಿಕ್ ಮಾಡುವುದು.
  • ಕಾಣಿಸಿಕೊಳ್ಳುವ ಸ್ಟೀನ್ ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿ OTP ಪಡೆಯುವುದು.
  • ಪಡೆದ OTP ಹಾಗೂ CAPTCHA ಅನ್ನು ನಮೂದಿಸಿ Verify ಆಯ್ಕೆಯ ಮೇಲೆ ಕ್ಲಿಕ್ ಮಾಡುವುದು.
  • ಕಾಣಿಸಿಕೊಳ್ಳುವ ಸ್ಕಿನ್ ನಲ್ಲಿ ಆಧಾರ್ ಸಂಖ್ಯೆ ಹಾಗೂ CAPCTHA ಅನ್ನು ನಮೂದಿಸಿ Submit ಮೇಲೆ ಕ್ಲಿಕ್ ಮಾಡುವುದು.
  • ಈಗ Reference ID ಜನರೇಟ್ ಆಗುತ್ತದೆ.
  • ಮೇಲೆ ಕಂಡಿಕೆ ಈ ಹಾಗೂ ಉ ನಲ್ಲಿ ತಿಳಿಸಿರುವ ಕ್ರಮಗಳನ್ನು ಅನುಸರಿಸಿ ನಂತರ National Scholarship Portal ನಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.

ಸುತ್ತೋಲೆಯ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಡಯಟ್ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಆಡಳಿತ)ರವರು, ತಮ್ಮ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳಿಗೆ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಮುಖಾಂತರ ಮಾಹಿತಿ ನೀಡಿ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ National Scholarship Portal ಮೂಲಕ ಸಲ್ಲಿಸಲು ಸೂಕ್ತ ಕ್ರಮವಹಿಸಿ, ಎಲ್ಲಾ ಫಲಾನುಭವಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕ್ರಮವಹಿಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚಿಸಿದೆ.

Continue Reading

ಪ್ರಮುಖ ಸುದ್ದಿ

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

CM Siddaramaiah: ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಭಾಗ್ಯ ದೊರೆತಿದ್ದು, ಸಿ ಹಾಗೂ ಡಿ ದರ್ಜೆಯ ನೌಕರರ ನೇಮಕಾತಿಯಲ್ಲಿ ಕನ್ನಡಿಗರ ನೇಮಕ ಕಡ್ಡಾಯವಾಗಲಿದೆ. ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರ ಕಡೆಗಣನೆ ಆಗುತ್ತಿದೆ ಎಂಬ ಆರೋಪಗಳಿವೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಒದಗಿಸುವ ವಿಧೇಯಕಕ್ಕೆ ಕ್ಯಾಬಿನೆಟ್‌ ಅಸ್ತು ಎಂದಿದೆ.

VISTARANEWS.COM


on

jobs for kannadigas cm siddaramaiah
Koo

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ (Jobs for Kannadigas) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ (Private industry) ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು (Kannadiga employees) ಕಡ್ಡಾಯಗೊಳಿಸುವ ವಿಧೇಯಕಕ್ಕೆ (Bill) ನಿನ್ನೆ ನಡೆದ ಸಚಿವ ಸಂಪುಟ ಸಭೆಯು (Cabinet meeting) ಒಪ್ಪಿಗೆ ನೀಡಿದೆ.

ʼಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆʼ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಈ ಮೂಲಕ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಭಾಗ್ಯ ದೊರೆತಿದ್ದು, ಸಿ ಹಾಗೂ ಡಿ ದರ್ಜೆಯ ನೌಕರರ ನೇಮಕಾತಿಯಲ್ಲಿ ಕನ್ನಡಿಗರ ನೇಮಕ ಕಡ್ಡಾಯವಾಗಲಿದೆ. ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರ ಕಡೆಗಣನೆ ಆಗುತ್ತಿದೆ ಎಂಬ ಆರೋಪಗಳಿವೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಒದಗಿಸುವ ವಿಧೇಯಕಕ್ಕೆ ಕ್ಯಾಬಿನೆಟ್‌ ಅಸ್ತು ಎಂದಿದೆ.

ಸ್ವಾಭಿಮಾನ ಎತ್ತಿಹಿಡಿಯುವ ಉದ್ದೇಶ: ಡಿಕೆಶಿ

ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಈ ಬಗ್ಗೆ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಉದ್ದೇಶದಿಂದ ಈ ತೀರ್ಮಾನ ಮಾಡಿದೆ ಎಂದಿದ್ದಾರೆ. ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ, ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಇವೆಲ್ಲವೂ ಕನ್ನಡದ ವಿಷಯ. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಇರಬೇಕು, ಇದರ ಬಗ್ಗೆ ತೀರ್ಮಾನ ನಾವು ಮಾಡಿದ್ದೇವೆ. ವಿಧೇಯಕ ತರ್ತಾ ಇದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಈ ಬಗ್ಗೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ವಿರೋಧದ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ʼತಾಂತ್ರಿಕ ಸಮಸ್ಯೆ ಇದ್ದ ಕಡೆ ಏನೂ ಮಾಡಲಾಗದು. ನಾವು ಕೂಡ ಅರ್ಥ ಮಾಡಿಕೊಳ್ಳುತ್ತೇವೆ. ಅವರು ಕೂಡ ರಾಜ್ಯದಿಂದಲೇ ಬೆಳೆದಿರುವವರು. ಟೆಕ್ನಿಕಲ್ ಬೇಕಾಗುವ ಕಡೆ ರಿಯಾಯಿತಿ ಕೊಡುತ್ತೇವೆ. ಸರ್ಕಾರದ ಗಮನಕ್ಕೆ ಅವರು ತರಬೇಕುʼ ಎಂದಿದ್ದಾರೆ.

ಇದೇ ಅಧಿವೇಶನದಲ್ಲಿ ಮಂಡನೆ: ಲಾಡ್

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad), ಇದೇ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಿ ಕಾನೂನು ತರುತ್ತೇವೆ ಎಂದು ತಿಳಿಸಿದ್ದಾರೆ. ಕೈಗಾರಿಕೆಗಳ ಮ್ಯಾನೇಜ್ಮೆಂಟ್ ಒಳಗೆ ಶೇಕಡಾ 50ರಷ್ಟು ಕನ್ನಡಿಗರು ಇರಬೇಕು. 70% ನಾನ್ ಮ್ಯಾನೇಜ್ಮೆಂಟ್ ಲೆವಲ್‌ನಲ್ಲಿ ಇರಬೇಕು. ನಮ್ಮಲ್ಲಿ ಎಲ್ಲ ರೀತಿಯ ಸ್ಕೀಲ್ ಇರುವವರು ಇದ್ದಾರೆ. ನಾವು ಹೊರ ರಾಜ್ಯಗಳು ಮತ್ತು ಹೊರ ದೇಶಕ್ಕೆ ಹೋಗಿ ಅಲ್ಲಿ ಕಂಪನಿ ಮಾಡಿದರೆ ಸ್ಥಳೀಯರಿಗೆ ನಾವು ಅವಕಾಶ ಕೊಡುತ್ತೇವೆ. ಅವರು ಸಹ ಇಲ್ಲಿ ಸ್ಥಳೀಯರಿಗೆ ಅವಕಾಶ ಕೊಡಲಿ ಎಂದು ಲಾಡ್‌ ಹೇಳಿದ್ದಾರೆ.

ಇದಕ್ಕೆ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಕಿರಣ್‌ ಮಜುಂದಾರ್ ನನಗೆ ವಾಟ್ಸ್ಯಾಪ್ ಮೇಸೆಜ್ ಮಾಡಿದ್ದಾರೆ. ನಾನು ಸಹ ವ್ಯವಹಾರದ ಕುಟುಂಬದಿಂದ ಬಂದವನು. ನನಗೂ ಅದರ ಬಗ್ಗೆ ಮಾಹಿತಿ ಇದೆ. ಕಂಪನಿಗಳಿಗೆ ಇದರಿಂದ ನಷ್ಟ ಆಗುತ್ತೆ ಅನ್ನೋದಾದ್ರೆ ನಮ್ಮ ಬಳಿ ಬಂದು ಅದನ್ನು ಹೇಳಲಿ. ಯಾವ ಈ ರೀತಿಯ ಸಮಸ್ಯೆ ಆಗುತ್ತೆ ಅಂತ ಹೇಳಲಿ. ಅದನ್ನು ಪರಿಶೀಲನೆ ಮಾಡೋಣ. ಇದನ್ನು ರಾತ್ರೋರಾತ್ರಿ ಮಾಡುವುದಿಲ್ಲ. ಕಂಪನಿಗಳ ಹಿತದೃಷ್ಟಿಯಿಂದಲೇ ಮಾಡುತ್ತೇವೆʼ ಎಂದು ಲಾಡ್‌ ಹೇಳಿದ್ದಾರೆ.

ನಾವು ಸರೋಜಿನಿ ಮಹಿಷಿ ವರದಿಯ ಆಧಾರದ ಮೇಲೆ ಇದನ್ನು ಮಾಡುತ್ತಿದ್ದೇವೆ. ಇಲ್ಲಿಯೇ ಹುಟ್ಟಿರಬೇಕು, ಇಲ್ಲವೇ ಹದಿನೈದು ವರ್ಷಗಳ ಕಾಲ ಇಲ್ಲೇ ಇದ್ದು ಕೆಲಸ ಮಾಡುತ್ತಿದ್ದರೆ ಆತ ಕರ್ನಾಟಕದ ವ್ಯಕ್ತಿ ಆಗ್ತಾನೆ. ಆತನನ್ನು ಸ್ಥಳೀಯ ಎಂದು ಕರೆಯುತ್ತೇವೆ. ಅಂಥಹವರು ಕನ್ನಡಿಗರ ಹೆಸರಿನಲ್ಲಿ ಉದ್ಯೋಗಕ್ಕೆ ಅರ್ಹರು ಎಂದು ಲಾಡ್‌ ಹೇಳಿದ್ದಾರೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

GT World Mall: ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದರು. ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಆ್ಯಂಡ್ ಟೀಂ ಪಂಚೆ ಧರಿಸಿ ಮಾಲ್‌ ಮುಂದೆ ಸೇರಿದ್ದು, ಪ್ರತಿಭಟನೆಗೆ ಮುಂದಾದರು. ಇಂದು ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

VISTARANEWS.COM


on

gt world mall 2
Koo

ಬೆಂಗಳೂರು: ಹಾವೇರಿ ಮೂಲದ ರೈತರನ್ನು ಪಂಚೆ ಉಟ್ಟಿದ್ದಾರೆ (Haveri Farmer wearing Dhoti) ಎಂಬ ಕಾರಣಕ್ಕಾಗಿ ಮಾಲ್‌ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ವಿಸ್ತಾರ ನ್ಯೂಸ್‌ ಹಾಗೂ ಸಾರ್ವಜನಿಕರ ಮುಂದೆ ಮಾಲ್‌ ಮಾಲಿಕರು ಕ್ಷಮೆ ಯಾಚಿಸಿದರು. ಮಾಲ್‌ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್‌ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (Karnataka state human rights commission) ಮುಂದಾಗಿದೆ.

ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದರು. ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಆ್ಯಂಡ್ ಟೀಂ ಪಂಚೆ ಧರಿಸಿ ಮಾಲ್‌ ಮುಂದೆ ಸೇರಿದ್ದು, ಪ್ರತಿಭಟನೆಗೆ ಮುಂದಾದರು. ಇಂದು ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಅರೆಬೆತ್ತಲೆ ಪ್ರತಿಭಟನೆ ಮಾಡುತ್ತೇವೆ: ಕುರುಬೂರು

ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರು ಈ ಘಟನೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಇಂಥ ಘಟನೆಯ ಮೂಲಕ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಖಂಡಿಸಿದ್ದಾರೆ. ಕೂಡಲೇ ಮಾಲ್‌ ಮಾಲಿಕರ ವಿರುದ್ಧ ಪೊಲೀಸರು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಾಲ್‌ ಮಾಲೀಕರು ಅನ್ನ ತಿನ್ನುವಂಥ ವ್ಯಕ್ತಿ ಆಗಿದ್ದರೆ ಇಂಥ ಕೆಲಸ ಮಾಡುತ್ತಿರಲಿಲ್ಲ. ಇಂದು ಪಂಚೆ ಉಟ್ಟವರನ್ನು ಒಳಬಿಟ್ಟಿಲ್ಲ. ಬೆಂಗಳೂರಿನಲ್ಲಿ ಇಂಥ ಘಟನೆಗಳು ಮರುಕಳಿಸುತ್ತಿವೆ. ಮಾಲ್‌ ಮಾಲಿಕರು ಕ್ಷಮೆ ಕೇಳಬೇಕು ಇಲ್ಲವಾದರೆ ರಾಜ್ಯದೆಲ್ಲೆಡೆಯಿಂದ ನೂರಾರು ರೈತರು ಆಗಮಿಸಿ ಅರೆಬೆತ್ತಲೆಯಾಗಿ ಮಾಲ್‌ ಒಳಗೆ ನುಗ್ಗುವ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್‌ ಆಗ್ರಹಿಸಿದ್ದಾರೆ.

ನಾಳೆ ಆಯೋಗ ನೋಟೀಸ್‌

ಪಂಚೆ ಉಟ್ಟ ವೃದ್ಧರಿಗೆ ಮಾಲ್ ಪ್ರವೇಶ ನಿರಾಕರಣೆ ವಿಚಾರದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಮಧ್ಯ ಪ್ರವೇಶಿಸಿದ್ದು, ಪಂಚೆ ಧರಿಸಿದವರಿಗೆ ಯಾಕೆ ಪ್ರವೇಶ ನೀಡಿಲ್ಲವೆಂದು ಸ್ಪಷ್ಟನೆ ಕೇಳಿ ನಾಳೆ ನೋಟೀಸ್ ಜಾರಿ ಮಾಡುವ ಸಾಧ್ಯತೆ ಇದೆ. ನಾಳೆ ಸುಮೋಟೋ ಕೇಸ್ ದಾಖಲಿಸಲು ತೀರ್ಮಾನಿಸಿದೆ ಎನ್ನಲಾಗಿದೆ.

ಕೈಮುಗಿದು ಒಳಗೆ ಬಿಟ್ಟ ಸೆಕ್ಯುರಿಟಿ

ನಿನ್ನೆ ಪಂಚೆ ಉಟ್ಟ ರೈತರನ್ನು ಒಳಗೆ ಬಿಡದ ಜಿಟಿ ಮಾಲ್ ಸೆಕ್ಯುರಿಟಿ ಸಿಬ್ಬಂದಿ ಇಂದು ಮೆತ್ತಗಾಗಿದ್ದಾರೆ. ನಿನ್ನೆಯ ಅವಾಂತರದ ನಂತರ ಎಚ್ಚೆತ್ತುಕೊಂಡ ಮಾಲ್ ಸಿಬ್ಬಂದಿ ಇಂದು ಪಂಚೆ ಉಟ್ಟವರನ್ನು ಒಳಗೆ ಬಿಡುತ್ತಿರುವುದಷ್ಟೇ ಅಲ್ಲ, ಪಂಚೆ ಉಟ್ಟವರಿಗೆ ಕೈಮುಗಿದು ಬರಮಾಡಿಕೊಳ್ಳುತ್ತಿದ್ದಾರೆ! ಇಂದು ಪ್ರತಿಭಟನೆಯ ಸಂದರ್ಭದಲ್ಲಿ ಲುಂಗಿ ಉಟ್ಟ ವೃದ್ಧರೊಬ್ಬರು ಒಳಗೆ ಹೋಗಿದ್ದು, ಸಿಬ್ಬಂದಿ ಅವರಿಗೆ ಕೈಮುಗಿದು ಸೆಕ್ಯುರಿಟಿ ಚೆಕ್‌ ಕೂಡ ಮಾಡದೆ ಒಳಬಿಟ್ಟಿದ್ದಾರೆ.

ಕ್ಷಮೆ ಕೇಳಿದ ಮಾಲ್‌ನ ಸೆಕ್ಯೂರಿಟಿ

ನಿನ್ನೆ ರೈತರನ್ನು ತಡೆದ ಸೆಕ್ಯುರಿಟಿ ಸಿಬ್ಬಂದಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಕೃತ್ಯಕ್ಕಾಗಿ ಕ್ಷಮೆ ಯಾಚಿಸಿದ್ದಾರೆ. “ನಿನ್ನೆ ಮಧ್ಯಾಹ್ನ ವ್ಯಕ್ತಿಯೊಬ್ಬರು ಪಂಚೆಯಲ್ಲಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಧರಿಸಿ ಅಸಭ್ಯವಾಗಿ ನಿಂತಿದ್ದರು. ಆಗ ಕೆಳಗಿನ ಫ್ಲೋರ್‌ನಲ್ಲಿ ಬರ್ತ್‌ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವೇಳೆ ಈ ವಿಚಾರವನ್ನು ಮ್ಯಾನೆಜ್‌ಮೆಂಟ್‌ ಗಮನಕ್ಕೆ ತಂದಿದ್ದರು. ಸಂಜೆ ಮತ್ತೆ ರೈತರೊಬ್ಬರು ಪಂಚೆ ಧರಿಸಿ ಬಂದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ‌. ಮ್ಯಾನೇಜ್‌ಮೆಂಟ್‌ನಿಂದ ಉತ್ತರ ಬರುವ ತನಕ ಕಾಯಿಸಿದೆವು ಅಷ್ಟೆ” ಎಂದು ಸೆಕ್ಯುರಿಟಿ ಅರುಣ್ ಹೇಳಿದ್ದಾರೆ.

ಪ್ರಕರಣವೇನು?

ಬೆಂಗಳೂರಿನ ವಿಜಯನಗರದ ನಿವಾಸಿಯಾದ ನಾಗರಾಜ್ ಎಂಬವರ ತಂದೆ ಮೂಲತಃ ರೈತರಾಗಿದ್ದು ಅವರು ಹಾವೇರಿಯಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜು. 16ರಂದು ತಮ್ಮ ವೃದ್ಧ ತಂದೆಯವರಿಗೆ ಸಿನಿಮಾ ತೋರಿಸಿ ಖುಷಿಪಡಿಸಲು ನಿರ್ಧರಿಸಿದ ನಾಗರಾಜ್, ತಂದೆಯನ್ನು ಜಿಟಿ ಮಾಲ್‌ಗೆ ಕರೆದೊಯ್ದಿದ್ದರು. ಸಾಮಾನ್ಯವಾಗಿ ಪಂಚೆ ಉಡುವ ಹವ್ಯಾಸವಿರುವ ಅವರು ಎಂದಿನಂತೆಯೇ ಪಂಚೆ ಉಟ್ಟು ಮಗನ ಜೊತೆಗೆ ಮಾಲ್‌ಗೆ ತೆರಳಿದ್ದರು. ಆದರೆ ಸೆಕ್ಯುರಿಟಿ ಒಳಗೆ ಬಿಟ್ಟಿರಲಿಲ್ಲ. ʼಪಂಚೆ ಉಟ್ಟವರನ್ನು ಒಳಗೆ ಬಿಡದಂತೆ ನಮಗೆ ಸೂಚನೆಯಿದೆʼ ಎಂದು ಹೇಳಿ ವಾಪಸ್‌ ಕಳಿಸಿದ್ದರು.

ಇದನ್ನೂ ಓದಿ: GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Continue Reading
Advertisement
Urfi Javed Steps Out Drunk For Third Time In A Month
ವೈರಲ್ ನ್ಯೂಸ್2 mins ago

Urfi Javed: ಮತ್ತೆ ಕುಡಿದು ತೇಲಾಡಿದ ಉರ್ಫಿ ಜಾವೇದ್; ವಿಡಿಯೊ ವೈರಲ್‌!

NMMS scholarship
ಕರ್ನಾಟಕ29 mins ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ30 mins ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ35 mins ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ39 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Niveditha Gowda new reels with brother
ಸ್ಯಾಂಡಲ್ ವುಡ್1 hour ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ1 hour ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ1 hour ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ2 hours ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌