ENGvsPAK | ಪಾಕಿಸ್ತಾನವನ್ನು ಹಣಿದ ಖುಷಿಯ ನಡುವೆ ಆಂಗ್ಲರ ಪಡೆಗೆ ಹಿನ್ನಡೆ; ಪ್ರಮುಖ ಆಲ್‌ರೌಂಡರ್‌ಗೆ ಗಾಯ - Vistara News

ಕ್ರಿಕೆಟ್

ENGvsPAK | ಪಾಕಿಸ್ತಾನವನ್ನು ಹಣಿದ ಖುಷಿಯ ನಡುವೆ ಆಂಗ್ಲರ ಪಡೆಗೆ ಹಿನ್ನಡೆ; ಪ್ರಮುಖ ಆಲ್‌ರೌಂಡರ್‌ಗೆ ಗಾಯ

ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ ಲಿಯಾಮ್‌ ಲಿವಿಂಗ್‌ಸ್ಟನ್‌ ಗಾಯಗೊಂಡಿದ್ದು ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ (ENGvsPAK) ಅಲಭ್ಯರಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾವಲ್ಪಿಂಡಿ : ಆತಿಥೇಯ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯ ((ENGvsPAK)) ಮೊದಲ ಪಂದ್ಯದಲ್ಲಿ ೭೪ ರನ್‌ಗಳ ವಿಜಯ ಸಾಧಿಸಿರುವ ಪ್ರವಾಸಿ ಇಂಗ್ಲೆಂಡ್‌ ತಂಡ ಖುಷಿಯಲ್ಲಿರುವ ಸಂದರ್ಭದಲ್ಲೇ ಗಾಯದ ಆತಂಕ ಎದುರಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್‌ ಲಿಯಾಮ್‌ ಲಿವಿಂಗ್‌ಸ್ಟನ್‌ ಅವರು ಮುಂದಿನೆರಡು ಪಂದ್ಯಗಳಿಗೆ ಲಭ್ಯರಿಲ್ಲ ಎಂಬುದಾಗಿ ಇಂಗ್ಲೆಂಡ್‌ ತಂಡ ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ೬೫೭ ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಅಂತೆಯೇ ಪಂದ್ಯದ ಎರಡನೇ ದಿನ ಪಾಕಿಸ್ತಾನ ತಂಡ ಬ್ಯಾಟಿಂಗ್ ಮಾಡುವಾಗ ಬೌಂಡರಿ ಲೈನ್‌ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಲಿಯಾಮ್‌ ಲಿವಿಂಗ್‌ಸ್ಟನ್‌ ಬಿದ್ದು ಮಂಡಿಗೆ ಗಾಯ ಮಾಡಿಕೊಂಡಿದ್ದರು. ತಕ್ಷಣ ಅವರು ಮೈದಾನ ತೊರೆದಿದ್ದರು. ಆದಾಗ್ಯೂ ಎರಡನೇ ಇನಿಂಗ್ಸ್‌ನಲ್ಲಿ ಅವರು ಬ್ಯಾಟ್‌ ಮಾಡಲು ಬಂದಿದ್ದರೂ ವಿಕೆಟ್‌ಗಳ ನಡುವಿನ ಓಡಾಟ ಮಾಡಲು ಅಡಚಣೆ ಎದುರಿಸಿದ್ದರು. ಬಳಿಕ ಅವರು ಕೊನೇ ದಿನವೂ ಫೀಲ್ಡಿಂಗ್ ಮಾಡಿರಲಿಲ್ಲ.

ಲಿವಿಂಗ್‌ಸ್ಟನ್‌ ಅವರಿಗೆ ಭಾನುವಾರ ಸ್ಕ್ಯಾನಿಂಗ್ ಮಾಡಲಾಗಿದ್ದು, ಮೂಳೆಗೂ ಗಾಯವಾಗಿರುವುದು ಗೊತ್ತಾಗಿದೆ. ಹೀಗಾಗಿ ಮುಂದಿನೆರಡು ಪಂದ್ಯಕ್ಕೆ ಅವರು ಇಲ್ಲ ಎಂಬುದಾಗಿ ತಂಡದ ಮೂಲಗಳು ಪ್ರಕಟಿಸಿವೆ. ದುರದೃಷ್ಟವೆಂದರೆ ಲಿಯಾಮ್‌ಗೆ ಇದು ಪದಾರ್ಪಣೆಯ ಟೆಸ್ಟ್‌ ಪಂದ್ಯ. ಆ ಪಂದ್ಯದ ಎರಡನೇ ದಿನವೇ ಅವರು ಗಾಯಗೊಂಡಿದ್ದಾರೆ. ಲಿಯಾಮ್‌ ಅವರ ಬದಲಿಗೆ ಯಾರು ಆಡಲಿದ್ದಾರೆ ಎಂಬುದನ್ನು ಇಂಗ್ಲೆಂಡ್‌ ತಂಡ ಇನ್ನೂ ಖಚಿತಪಡಿಸಿಲ್ಲ. ಆದರೆ, ಅವರ ಅಲಭ್ಯತೆಯಿಂದ ತಂಡಕ್ಕೆ ನಷ್ಟವಾಗಲಿದೆ. ಯಾಕೆಂದರೆ, ಸ್ಪಿನ್‌ ಬೌಲಿಂಗ್‌ ಮೂಲಕವೂ ಅವರು ತಂಡಕ್ಕೆ ನೆರವಾಗಬೇಕಾಗಿತ್ತು.

ಟೆಸ್ಟ್‌ ಸರಣಿಯ ಎರಡನೇ ಪಂದ್ಯ ಡಿಸೆಂಬರ್‌ ೯ರಂದು ಮುಲ್ತಾನ್‌ನಲ್ಲಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Mohammed Siraj : ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು,

VISTARANEWS.COM


on

Mohammed Siraj
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಜಯದ ಅಭಿಯಾನದ ನಂತರ ಟೀಮ್ ಇಂಡಿಯಾ ತಾರೆಯರಿಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಗುತ್ತಿದೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಮೋಘ ಬೆಂಬಲ ಪಡೆದುಕೊಂಡಿದ್ದ ಭಾರತ ತಂಡದ ಆಟಗಾರರು ಇದೀಗ ತಮ್ಮ ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ಅಲ್ಲಿಯೂ ದೊಡ್ಡ ಮಟ್ಟ ಶ್ಲಾಘನೆ ದೊರಕಿದೆ. ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ (Mohammed Siraj ) ಹೈದಾರಾದಬಾದ್​ನಲ್ಲಿ ಭರ್ಜರಿ ಸ್ವಾಗತ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್​ಗಳ ಭರ್ಜರಿ ಜಯ ಸಾಧಿಸಿದೆ. 11 ವರ್ಷಗಳ ಅಂತರದ ನಂತರ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಭಾರತದ ಹಲವು ವರ್ಷಗಳ ನೋವನ್ನು ಮರೆಯಿತು. ಮೆನ್ ಇನ್ ಬ್ಲೂ ತಂಡವು ಹಲವಾರು ಸಂದರ್ಭಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಸೋತಿತ್ತು. ಕೊನೆಗೂ ಅವರು ತಮ್ಮ ನಿರೀಕ್ಷೆಯನ್ನು ಮೀರಿದ್ದಾರೆ.

ತಂಡವು ಮಂಗಳವಾರ ಭಾರತಕ್ಕೆ ಇಳಿಯಬೇಕಿತ್ತು. ಬೆರಿಲ್ ಚಂಡಮಾರುತದಿಂದಾಗಿ ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​ನಿಂದ ಅವರ ನಿರ್ಗಮನವು ಎರಡು ದಿನ ವಿಳಂಬವಾಯಿತು. ಅಂತಿಮವಾಗಿ ಬುಧವಾರ ದ್ವೀಪವನ್ನು ಬಿಡುವಲ್ಲಿ ಯಶಸ್ವಿಯಾದರು. ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದರು. ಮುಂಬೈಗೆ ತೆರಳುವ ಮೊದಲು ತಂಡವು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಇದನ್ನೂ ಓದಿ: Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು, ಭಾರತ ತಂಡ ಮತ್ತು ಅಭಿಮಾನಿಗಳು ಒಟ್ಟಾಗಿ ಸ್ಮರಣೀಯ ವಿಜಯವನ್ನು ಆಚರಿಸಿದರು. ಬಿಸಿಸಿಐನಿಂದ ಸನ್ಮಾನಿಸಲ್ಪಡುವ ಮೊದಲು ಆಟಗಾರರು ಪ್ರೇಕ್ಷಕರೊಂದಿಗೆ ನೃತ್ಯ ಮಾಡಿದರು.

ಮೊಹಮ್ಮದ್ ಸಿರಾಜ್​​ಗೆ ಹೈದರಾಬಾದ್ ಸ್ವಾಗತ

ಗುರುವಾರ ಮುಂಬೈನಲ್ಲಿ ವಿಜಯೋತ್ಸವದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ ಸಂಜೆ ತಮ್ಮ ತವರು ಪಟ್ಟಣ ಹೈದರಾಬಾದ್​ಗೆ ಬಂದಿಳಿದರು. ನಿರೀಕ್ಷೆಯಂತೆ, ವಿಮಾನ ನಿಲ್ದಾಣದ ಹೊರಗೆ ಭಾರಿ ಜನಸಮೂಹ ಅವರಿಗಾಗಿ ಕಾಯುತ್ತಿತ್ತು. ಅಭಿಮಾನಿಗಳು ತಮ್ಮ ತವರು ಆಟಗಾರನನ್ನು ಸ್ವಾಗತಿಸುತ್ತಿದ್ದಂತೆ ಎಲ್ಲೆಡೆ ‘ಇಂಡಿಯಾ, ಇಂಡಿಯಅ ‘ ಘೋಷಣೆಗಳು ಮೊಳಗಿದವು.

ಮೊಹಮ್ಮದ್ ಸಿರಾಜ್ ಟಿ 20 ವಿಶ್ವಕಪ್​​ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಪಂದ್ಯಾವಳಿಯ ಯುಎಸ್ಎ ಲೆಗ್ ಮುಗಿದ ಕೂಡಲೇ ಕುಲ್ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ. ಕೆರಿಬಿಯನ್ ಪರಿಸ್ಥಿತಿಗಳು ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ, ಸಿರಾಜ್ ಬದಲಿಗೆ ಕುಲ್ದೀಪ್ ಅವರನ್ನು ತಂಡಕ್ಕೆ ಕರೆತಂದಿತು.

ಐದು ಪಂದ್ಯಗಳಲ್ಲಿ ಕುಲ್ದೀಪ್ 10 ವಿಕೆಟ್​ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 3 ಪಂದ್ಯಗಳಲ್ಲಿ 1 ವಿಕೆಟ್ ಪಡೆದಿದ್ದರು. .

Continue Reading

ಪ್ರಮುಖ ಸುದ್ದಿ

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Hardik Pandya : ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

VISTARANEWS.COM


on

Hardik Pandya
Koo

ಬೆಂಗಳೂರು: ಟಿ20 ವಿಶ್ವ ಕಪ್​​ ಗೆದ್ದು ಖುಷಿಯಲ್ಲಿರುವ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಐಪಿಎಲ್​ನಲ್ಲಿ ಅವರ ಮುಂಬಯಿ ಇಂಡಿಯನ್ಸ್ ಜತೆಗಾರ ಇಶಾನ್ ಕಿಶನ್ ಶುಕ್ರವಾರ ಭೇಟಿಯಾದರು. ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತದ ವಿಜಯ ಅಭಿಯಾನದಲ್ಲಿ ಅವರ ಪಾತ್ರಕ್ಕಾಗಿ ಅಭಿನಂದಿಸಿದರು. ಈ ವೇಳೆ ಅವರು ಎರಡೂ ಕೆನ್ನೆಗಳಿಗೆ ಮುತ್ತು ನೀಡಿ ಶುಭಾಶಯ ತಿಳಿಸಿದರು.

ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

ಟಿ20 ವಿಶ್ವಕಪ್ ಟೂರ್ನಿಯ 9ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿ ಚಾಂಪಿಯನ್ ಆಯಿತು. ಹಾರ್ದಿಕ್ ಪಾಂಡ್ಯ ಪಂದ್ಯಾವಳಿಯುದ್ದಕ್ಕೂ ಟೀಮ್ ಇಂಡಿಯಾಕ್ಕಾಗಿ ಉತ್ತಮ ಪ್ರದರ್ಶನ ನೀಡಿದ್ದರು ಮತ್ತು ಫೈನಲ್​​ನಲ್ಲಿಯೂ ಭಾರಿ ಪ್ರಭಾವ ಬೀರಿದ್ದರು. 177 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು.

ನಂತರ ಭಾರತದ ಉಪನಾಯಕ 17 ನೇ ಓವರ್​ನ ಮೊದಲ ಎಸೆತದಲ್ಲಿ ಅಪಾಯಕಾರಿಯಾಗಿದ್ದ ಹೆನ್ರಿಕ್ ಕ್ಲಾಸೆನ್ ಅವರನ್ನು 52 ರನ್​ಗಳಿಗೆ ಔಟ್ ಮಾಡುವ ಮೂಲಕ ಪಂದ್ಯವನ್ನು ಭಾರತ ಕಡೆಗೆ. ನಂತರ ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಔಟ್​ ಮಾಡಿದರು. ಪಾಂಡ್ಯ 48 ಸರಾಸರಿಯಲ್ಲಿ 144 ರನ್ ಗಳಿಸಿದ್ದಾರೆ ಮತ್ತು 17.36 ಸರಾಸರಿಯಲ್ಲಿ 11 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯಗೆ ಶುಭಾಶಯ ಸಲ್ಲಿಸಿದ ಇಶಾನ್ ಕಿಶನ್

ಶುಕ್ರವಾರ ಇಶಾನ್ ಕಿಶನ್ ತಮ್ಮ ಐಪಿಎಲ್​ ಸಹ ಆಟಗಾರನಿಗೆ ಶುಭಾಶಯವನ್ನು ಇನ್​​ಸ್ಟಾಗ್ರಾಮ್​ ಮೂಲಕ ಸಲ್ಲಿಸಿದರು. ಅದರಲ್ಲಿ ಅವರು ಪಾಂಡ್ಯ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಅವರ ಪ್ರದರ್ಶನಕ್ಕಾಗಿ ಅವರನ್ನು ಅಭಿನಂದಿಸಿದರು. ಕಿಶನ್ ಪಾಂಡ್ಯಗೆ ಮುತ್ತಿಡುವ ಮೊದಲು ಇಬ್ಬರೂ ಅಪ್ಪಿಕೊಂಡರು.

ಇದನ್ನೂ ಓದಿ: T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

ಕಿಶನ್ ತಮ್ಮ ವಿಶ್ವಕಪ್​ ವಿಚಾರದಲ್ಲಿ ಯಾವುದೂ ಪೂರಕವಾಗಿ ನಡೆಯದಿದ್ದ ಪಾಂಡ್ಯ ಹೇಗೆ ಶಾಂತವಾಗಿ ಮತ್ತು ಏಕಾಗ್ರತೆಯಿಂದ ಇರಲು ಸಾಧ್ಯವಾಯಿತು ಎಂಬುದನ್ನು ಎತ್ತಿ ತೋರಿಸಿದ್ದಾರೆ. ಏಸ್ ಆಲ್ರೌಂಡರ್ ಐಪಿಎಲ್ ಅಭಿಯಾನದುದ್ದಕ್ಕೂ ಅಭಿಮಾನಿಗಳಿಂದ ಟೀಕೆಗಳನ್ನು ಎದುರಿಸಿದ್ದರು. ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿದ ಬಗ್ಗೆ ಅಭಿಮಾನಿಗಳು ತಮ್ಮ ಕೋಪವನ್ನು ಹೊರಹಾಕಿದ್ದರು.

ಕಳೆದ ಕೆಲವು ತಿಂಗಳುಗಳಲ್ಲಿ ನೀವು ಅನೇಕ ಕಷ್ಟದ ದಿನಗಳನ್ನು ಎದುರಿಸಿದ್ದೀರಿ. ಆದರೂ ನೀವು ಶಾಂತವಾಗಿ ಮತ್ತು ಇಂದು ನೀವು ನಿಮ್ಮ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪ್ರಾಮಾಣಿಕತೆಯ ಫಲಿತಾಂಶವನ್ನು ಪಡೆದಿದ್ದೀರಿ. ಇನ್ನೂ ಹೆಚ್ಚಿನದನ್ನು ಸಾಧನೆ ಮಾಡಿದ್ದೀರಿ. ಅದನ್ನು ಹೇಳಲು ಆದರೆ ಪದಗಳು ಕಡಿಮೆಯಾಗುತ್ತವೆ ಎಂದು ಇಶಾನ್ ಕಿಶನ್ ಬರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

T20 World Cup : 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಐಸಿಸಿ ಟಿ20 ವಿಶ್ವಕಪ್ (T20 World Cup) ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಆಟಗಾರರು ಸಂಭ್ರಮದಲ್ಲಿದ್ದಾರೆ. ಬಾರ್ಬಡೋಸ್​​​ನ ಬ್ರಿಜ್​​ಟೌನ್​​ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​​ಗಳಿಂದ ಸೋಲಿಸಿ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಎರಡನೇ ಟಿ 20 ಪ್ರಶಸ್ತಿ ಗೆದ್ದುಕೊಂಡಿತು. 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂಬೈ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಮುಖ ಪಾತ್ರ ವಹಿಸಿದ್ದರು. ರೋಹಿತ್ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಮತ್ತು ದುಬೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

ರೋಹಿತ್ ಶರ್ಮಾ ಪ್ರಭಾವಿ ನಾಯಕತ್ವವನ್ನು ಪ್ರದರ್ಶಿಸಿದ್ದರು ಮತ್ತು ಅವರ ಅದ್ಭುತ ತಂತ್ರಗಾರಿಕೆ ತೋರಿದ್ದರು. ಭಾರತದ ನಾಯಕ ಅದ್ಭುತ ಬೌಲಿಂಗ್ ಬದಲಾವಣೆಗಳು ಮತ್ತು ಫೀಲ್ಡ್ ಪ್ಲೇಸ್​ಮೆಂಟ್​​ಗಳು ಟೂರ್ನಿಯುದ್ದಕ್ಕೂ ಗಮನ ಸೆಳೆಯಿತು. ಇದು ಪ್ರತಿಯೊಂದು ಪಂದ್ಯದಲ್ಲೂ ಫಲ ನೀಡಿತು. 2024 ರ ಟಿ 20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಹಾಯ ಮಾಡಿತು.

ಸೂರ್ಯಕುಮಾರ್ ಯಾದವ್ ಕೂಡ ಬ್ಯಾಟಿಂಗ್​ನಲ್ಲಿ ಉತ್ತಮ ಪಾತ್ರ ವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮತ್ತು ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮೂಲಕ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಅಲ್ಲಿ ಭಾರತವು ಮುಂದುವರಿಯಲು ಹೆಣಗಾಡಿತು. ಅವರು ತಂಡದ ಪ್ರಮುಖ ಪಂದ್ಯಗಳಲ್ಲಿ ನಿರ್ಣಾಯಕ ಅರ್ಧ ಶತಕಗಳನ್ನು ಗಳಿಸಿದ್ದರು.

ಸೂರ್ಯಕುಮಾರ್ ಎಂಟು ಪಂದ್ಯಗಳಲ್ಲಿ 28.42 ಸರಾಸರಿಯಲ್ಲಿ 199 ರನ್ ಗಳಿಸಿದ್ದರೆ, ಟಿ 20 ವಿಶ್ವಕಪ್​​ನ ಫೈನಲ್​​ನಲ್ಲಿ ರೋಚಕ ಕ್ಯಾಚ್ ಹಿಡಿದು ಡೇವಿಡ್​ ಮಿಲ್ಲರ್​ ಅವರನ್ನು ಔಟ್ ಮಾಡಿದ್ದರು. ಆ ಕ್ಯಾಚ್ ಭಾರತವನ್ನು ಗೆಲ್ಲಿಸಿತ್ತು.

ಶಿವಂ ದುಬೆ ಕೂಡ ಉತ್ತಮವಾಗಿ ಆಡಿದ್ದರು. ಆಲ್ರೌಂಡರ್ ಮಧ್ಯದಲ್ಲಿ ಬ್ಯಾಟರ್​ ಮತ್ತು ಅವರು ಪರಿಣಾಮಕಾರಿ ಇನ್ನಿಂಗ್ಸ್​ಗಳನ್ಉ ಆಡುವುದನ್ನು ಖಚಿತಪಡಿಸಿಕೊಂಡರು. ಅವರು 16 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಸೇರಿದಂತೆ 27 ರನ್ ಗಳಿಸಿದ್ದರು. 168 ಸ್ಟ್ರೈಕ್ ರೇಟ್​​ನಲ್ಲಿ ಇದು ಫೈನಲ್​ನಲ್ಲಿ ಭಾರತೀಯ ಬ್ಯಾಟರ್​​​ಗಳ ಪೈಕಿ ಅತ್ಯಧಿಕವಾಗಿದೆ.

11 ಕೋಟಿ ರೂ. ಬಹುಮಾನ ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

2024 ರ ಟಿ 20 ವಿಶ್ವಕಪ್​​ನಲ್ಲಿ ಮುಂಬೈ ಮೂಲದ ಆಟಗಾರರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದರಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ನಾಲ್ವರು ಆಟಗಾರರಿಗೆ ಬಹುಮಾನದ ಮೊತ್ತವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

ಮುಂಬೈ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರದಿಂದ 11 ಕೋಟಿ ರೂಪಾಯಿ ಹಾಗೂ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಉಡುಗೊರೆಯಾಗಿ ನೀಡಿದರು.

2024 ರ ಟಿ 20 ವಿಶ್ವಕಪ್ ನಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ನಂತರ, ರೋಹಿತ್ ಶರ್ಮಾ ಟಿ 20ಯಿಂದ ನಿವೃತ್ತಿ ಘೋಷಿಸಿದರು. ಅವರು 4231 ರನ್​ಗಳೊಂದಿಗೆ ಸಾರ್ವಕಾಲಿಕ ಅತ್ಯಧಿಕ ರನ್ ಸ್ಕೋರರ್ ಆಗಿ ತಮ್ಮ ವೃತ್ತಿಜೀವನ ಕೊನೆಗೊಳಿಸಿದರು. ನಾಯಕ ಐದು ಶತಕಗಳನ್ನು ಗಳಿಸಿದ್ದಾರೆ. ಇದು ಟಿ 20 ಐ ಕ್ರಿಕೆಟ್​​ನಲ್ಲಿ ಬ್ಯಾಟರ್​ ಗಳಿಸಿದ ಗರಿಷ್ಠ ಮೊತ್ತವಾಗಿದೆ. ಅವರು 32 ಅರ್ಧಶತಕ ಬಾರಿಸಿದ್ದರೆ ವೃತ್ತಿಜೀವನದ ಸ್ಟ್ರೈಕ್ ರೇಟ್ 140 ಆಗಿದೆ.

Continue Reading

ಪ್ರಮುಖ ಸುದ್ದಿ

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Virat kohli : ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು.

VISTARANEWS.COM


on

Virat kohli
Koo

ಬೆಂಗಳೂರು: ಸ್ಟಾರ್​ ಬ್ಯಾಟರ್ ವಿರಾಟ್​ ಕೊಹ್ಲಿಯ (Virat Kohli) ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಪ್ರಸ್ತುತ ತಮ್ಮ ಇಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜತೆ ಲಂಡನ್​​ನಲ್ಲಿದ್ದಾರೆ. ಬಾರ್ಬಡೋಸ್​​ನಿಂದ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ ತಕ್ಷಣವೇ ಲಂಡನ್​ಗೆ ಹೋಗಿದ್ದಾರೆ. ಜೂನ್ 29ರಂದು ಟೀಮ್ ಇಂಡಿಯಾ ಟಿ 20 ವಿಶ್ವಕಪ್ ಗೆದ್ದ ತಕ್ಷಣವೇ ಕೊಹ್ಲಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಲಂಡನ್​ಗೆ ತೆರಳಿರುವ ಅವರು ಭವಿಷ್ಯದಲ್ಲಿ ಕಾಯಂ ಅಲ್ಲೇ ನೆಲೆಗೊಳ್ಳಲಿದ್ದರೆ ಎಂಬುದಾಗಿ ಹೇಳಲಾಗಿದೆ.

ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು. ಅಕಾಯ್ ಅವರ ಜನನವನ್ನು ಘೋಷಿಸಿದ ಕೆಲವು ದಿನಗಳ ನಂತರ ವಿರಾಟ್ ಲಂಡನ್​ನ ರೆಸ್ಟೋರೆಂಟ್​​ನಲ್ಲಿ ವಮಿಕಾ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

ಅನುಷ್ಕಾ ಶರ್ಮಾ ತನ್ನ ಗರ್ಭಧಾರಣೆಯ ಹಲವಾರು ತಿಂಗಳುಗಳನ್ನು ಲಂಡನ್​ನಲ್ಲಿ ಕಳೆದರು ಎಂದು ವರದಿಯಾಗಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಐದು ದಿನಗಳ ನಂತರ ಘೋಷಿಸಿದ್ದರು. ಅಲ್ಲಿಯವರೆಗೆ ಅಭಿಮಾನಿಗಳಿಗೆ ಅಕಾಯ್ ಜನನದ ಬಗ್ಗೆ ಯಾವುದೇ ಸುಳಿವು ಇರಲಿಲ್ಲ . ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ತಮ್ಮ ಎರಡನೇ ಮಗುವಿನ ಜನನಕ್ಕಾಗಿ ಇಂಗ್ಲೆಂಡ್​​ ಪ್ರಯಾಣಿಸಿದ್ದಾರೆ ಎಂದು ವರದಿಗಳು ಹೇಳಿದವು.

ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದ ಅನುಷ್ಕಾ ಶರ್ಮಾ ಅನುಪಸ್ಥಿತಿಯೂ ಈ ಊಹಾಪೋಹಗಳಿಗೆ ಕಾರಣವಾಯಿತು. ಕಳೆದ ವರ್ಷ ನಟಿ ಇನ್ನು ಮುಂದೆ ಹೆಚ್ಚು ಚಲನಚಿತ್ರಗಳನ್ನು ಮಾಡಲು ಬಯಸುವುದಿಲ್ಲ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುವೆ ಎಂದಿದ್ದರು. “ನನಗೆ ನಟನೆ ಇಷ್ಟ. ನಾನು ಮೊದಲು ಮಾಡಿದಷ್ಟು ಹೆಚ್ಚು ಚಲನಚಿತ್ರಗಳನ್ನು ಮಾಡಲು ಇಷ್ಟಪಡುವುದಿಲ್ಲ . ನಾನು ವರ್ಷಕ್ಕೆ ಒಂದು ಚಿತ್ರ ಮಾಡಲು ಬಯಸುತ್ತೇನೆ. ಹೆಚ್ಚಾಗಿ ಕುಟುಂಬಕ್ಕೆ ಸಮಯ ನೀಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ವಿರಾಟ್ ಕೊಹ್ಲಿ ಕೂಡ ಲಂಡನ್​​ನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಾರೆ ಎಂದು ಆಗಾಗ್ಗೆ ವ್ಯಕ್ತಪಡಿಸಿದ್ದರು. “ಕುಟುಂಬದೊಂದಿಗೆ ಸಮಯ ಕಳೆಯಲು ಸಿಗುವ ಅವಕಾಶಕ್ಕಾಗಿ ದೇವರಿಗೆ ಕೃತಜ್ಞತೆ ಹೇಳುವೆ. ಸಾಮಾನ್ಯ ವ್ಯಕ್ತಿಯಾಗಿ ಅಲ್ಲಿರುವುದು ಖುಷಿ ” ಎಂದು ವಿರಾಟ್ ಕೊಹ್ಲಿ ಹೇಳಿದ್ದರು.

ಸ್ಟಾರ್ ಕ್ರಿಕೆಟಿಗ ಕೊಹ್ಲಿ ಮೇ ತಮ್ಮ ಅಭಿಪ್ರಾಯ ಹೇಳಿದ್ದರು. “ನಾನು ಕ್ರಿಕೆಟ್​​ ಮುಗಿದ ನಂತರ ಕುಟುಂಬದ ಜತೆ ಹೋಗುತ್ತೇನೆ. ನೀವು ಸ್ವಲ್ಪ ಸಮಯದವರೆಗೆ ನೋಡಲು ಆಗುವುದಿಲ್ಲ. ಆದ್ದರಿಂದ ನಾನು ಆಡುವ ಸಮಯದವರೆಗೆ ನನ್ನಲ್ಲಿರುವ ಎಲ್ಲವನ್ನೂ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದರು

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

Continue Reading
Advertisement
ರಾಜಮಾರ್ಗ ಅಂಕಣ captain pranjal shaurya award
ಅಂಕಣ12 mins ago

ರಾಜಮಾರ್ಗ ಅಂಕಣ: ಕ್ಯಾಪ್ಟನ್ ಪ್ರಾಂಜಲ್ ಪರಾಕ್ರಮಕ್ಕೆ ಒಲಿದ ಶೌರ್ಯ ಚಕ್ರ

road accident bike
ಬೆಂಗಳೂರು26 mins ago

Road Accident: ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋದ ಬೈಕ್‌ ಸವಾರ

Lok Sabha Election 2024
Lok Sabha Election 202449 mins ago

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ 7 ಸಂಸದರಿಗೆ ಸಿಕ್ಕಿದ್ದು ಶೇ. 70ಕ್ಕಿಂತ ಹೆಚ್ಚು ಮತ; ಯಾರಿವರು?

A high level delegation of the state led by Minister MB Patil
ಕರ್ನಾಟಕ49 mins ago

Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

Janaspandana programme in Kottur
ವಿಜಯನಗರ55 mins ago

Vijayanagara News: ಕೊಟ್ಟೂರಿನಲ್ಲಿ ಜನಸ್ಪಂದನ ಕಾರ್ಯಕ್ರಮ; ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ

Superfoods
ಆರೋಗ್ಯ56 mins ago

Superfoods: ಮಾರುಕಟ್ಟೆಯಲ್ಲಿ ಸೂಪರ್‌ಫುಡ್‌ಗಳೆನ್ನುವ ಈ ಆಹಾರಗಳು ನಿಜಕ್ಕೂ ಸೂಪರ್‌ಫುಡ್‌ಗಳೇ?

Latest57 mins ago

Branded Company: ಬ್ರಾಂಡೆಡ್‌ ಬ್ಯಾಗ್‌ ಕಂಪನಿಗಳ ಲೂಟಿ; ಸಾವಿರಕ್ಕೆ ಖರೀದಿಸಿ ಲಕ್ಷಕ್ಕೆ ಸೇಲ್‌!

karnataka Weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Cheating Case
ಪ್ರಮುಖ ಸುದ್ದಿ8 hours ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ14 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ15 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ16 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ18 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ19 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು21 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು21 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌