Viral Video| ಹಳೇ ಬಜಾಜ್​ ಸ್ಕೂಟರ್​​ನ್ನು ಹೀಗೂ ಬಳಸಿಕೊಳ್ಳಬಹುದಾ? ಕಟ್ಟಡ ನಿರ್ಮಾಣ ಕಾರ್ಮಿಕರ ಭರ್ಜರಿ ಐಡಿಯಾ ನೋಡಿ! - Vistara News

ವೈರಲ್ ನ್ಯೂಸ್

Viral Video| ಹಳೇ ಬಜಾಜ್​ ಸ್ಕೂಟರ್​​ನ್ನು ಹೀಗೂ ಬಳಸಿಕೊಳ್ಳಬಹುದಾ? ಕಟ್ಟಡ ನಿರ್ಮಾಣ ಕಾರ್ಮಿಕರ ಭರ್ಜರಿ ಐಡಿಯಾ ನೋಡಿ!

ಯಾವುದೇ ಕಟ್ಟಡ ನಿರ್ಮಾಣ ಮಾಡುವಾಗ ಅದರ ಮೇಲಿನ ಅಂತಸ್ತುಗಳನ್ನು ಕಟ್ಟುವಾಗ ಶ್ರಮ ಜಾಸ್ತಿ. ಸಿಮೆಂಟ್​, ಇಟ್ಟಿಗೆ, ಮರಳನ್ನೆಲ್ಲ ರಾಟೆ ಬಳಸಿ ಮೇಲೇರಿಸಬೇಕಾಗುತ್ತದೆ. ಅಲ್ಲಿ ಮನುಷ್ಯ ಶ್ರಮವೂ ಬೇಕು. ಆದರೆ ಈ ಕಾರ್ಮಿಕರು ಶ್ರಮ ಕಡಿಮೆ ಮಾಡಿಕೊಂಡಿದ್ದಾರೆ.

VISTARANEWS.COM


on

Viral Video Old Bajaj Scooter Turn into Electric Pully
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸ ಹೊಸ ತಂತ್ರಜ್ಞಾನಗಳು ಮಾರುಕಟ್ಟೆಗೆ ಬಂದಾಗ ನಾವು ಅಚ್ಚರಿ ವ್ಯಕ್ತಪಡಿಸುತ್ತ, ಅದನ್ನು ನಾವೂ ಅಳವಡಿಸಿಕೊಳ್ಳಲು ಮುಂದಾಗುತ್ತೇವೆ. ಆದರೆ ಹೀಗೆ ಮಾರುಕಟ್ಟೆಗೆ ಬಾರದೆ ಹೋಗುವ ಟೆಕ್ನಾಲಜಿಗಳೂ ಅದೆಷ್ಟೋ ಇವೆ. ಯಾರೋ ಒಬ್ಬರು, ಯಾವುದೋ ಒಂದು ಕಾರ್ಮಿಕ ತಂಡ ತಮ್ಮ ಕೆಲಸ ಸರಳವಾಗಲಿ ಎಂದು ಅವರೇ ಅನ್ವೇಷಣೆ ಮಾಡಿಕೊಳ್ಳುವ ಟೆಕ್ನಾಲಜಿಗಳು ಎಷ್ಟೋ ಸಲ ಉಳಿದವರಿಗೆ ಪರಿಚಿತ ಆಗುವುದೇ ಇಲ್ಲ. ಆದರೂ ಇದು ಸೋಷಿಯಲ್​ ಮೀಡಿಯಾ ಕಾಲವಾಗಿದ್ದರಿಂದ ಅಲ್ಲೊಂದು-ಇಲ್ಲೊಂದು ವಿಡಿಯೊಗಳು ವೈರಲ್​ ಆಗಿ, ನಮ್ಮಲ್ಲಿ ಅಚ್ಚರಿ ಮೂಡಿಸುತ್ತವೆ.

ವಿಷಯಕ್ಕೆ ಬರೋಣ, ನೀವು ಹೇಳಿ… ಒಂದು ಬಜಾಜ್ ಚೇತಕ್​ ಸ್ಕೂಟರ್​​ನ್ನು ಹೇಗೆಲ್ಲ ಬಳಸಿಕೊಳ್ಳಬಹುದು? ಹಳೇ ಕಾಲದ ಈ ಸ್ಕೂಟರ್​ ಈಗ ಬಳಕೆ ಕಡಿಮೆ ಆಗಿದೆ ಅಂತಿಟ್ಟುಕೊಂಡರೂ, ಅದನ್ನು ಓಡಿಸಬಹುದು, ಪೂರ್ತಿ ಜಖಂ ಆಗಿದ್ದರೆ ಅದರ ಭಾಗಗಳನ್ನೆಲ್ಲ ತೆಗೆದು ಗುಜರಿಗೆ ಹಾಕಬಹುದು. ಅದ್ಯಾವುದೋ ಗೋಡೆ ಬುಡದಲ್ಲೋ, ಮರದ ಕೆಳಗೋ ಒತ್ತಿಡಬಹುದು. ಆದರೆ ಈ ವಿಡಿಯೊ ನೋಡಿ, ಸ್ಕೂಟರ್​​ನ್ನು ಹೀಗೂ ಬಳಸಿಕೊಳ್ಳಬಹುದೇ ಎಂಬ ಪ್ರಶ್ನೆ ಮೂಡದೆ ನಿಮ್ಮಲ್ಲೂ ಮೂಡದೆ ಇರದು.

ಅಲ್ಲೊಂದು ಕಟ್ಟಡ ಕಾಮಗಾರಿ ನಡೆಯುತ್ತಿದೆ. ಮೂರನೇ ಫ್ಲೋರ್​​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗೆ ಕಟ್ಟಡಗಳ ಮೇಲ್ಭಾಗದಲ್ಲಿ ಕೆಲಸವಿದ್ದಾಗ, ಇಟ್ಟಿಗೆ, ಸಿಮೆಂಟ್​​ಗಳನ್ನು ಮೇಲ್ಭಾಗಕ್ಕೆ ಸಾಗಿಸಲು ಯಂತ್ರಗಳನ್ನು ಬಳಸಲಾಗುತ್ತದೆ. ಹಗ್ಗದ ಒಂದು ಭಾಗದಲ್ಲಿ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು, ಇನ್ನೊಂದು ಭಾಗವನ್ನು ಕಾರ್ಮಿಕರು ಹಿಡಿದುಕೊಂಡು, ಒಂದು ರಾಟೆಯ ಸಹಾಯದಿಂದ ಮೇಲೆತ್ತುವುದನ್ನು ನಾವು ನೋಡಿದ್ದೇವೆ. ಆದರೆ ಈ ಕಾರ್ಮಿಕರು ಬುದ್ಧಿ ಉಪಯೋಗಿಸಿ, ಶ್ರಮ ಕಡಿಮೆ ಮಾಡಿಕೊಂಡಿದ್ದಾರೆ. ‘ಕಾರ್ಮಿಕನೊಬ್ಬ ಸ್ಕೂಟರ್​ ಮೇಲೆ ಕುಳಿತಿದ್ದಾನೆ. ಆ ಬಜಾಜ್​ ಸ್ಕೂಟರ್​ಗೆ ಹಿಂಬದಿಯ ಗಾಲಿಯಿಲ್ಲ. ಆ ಸ್ಕೂಟರ್​​ನ ಅಡಿಭಾಗದಲ್ಲಿ ಮತ್ತು ಪಕ್ಕದಲ್ಲಿ ಎರಡು ರಾಟೆಗಳನ್ನು ಅಳವಡಿಸಿಕೊಂಡಿದ್ದಾರೆ. ಅದಕ್ಕೆ ಹಗ್ಗವನ್ನೂ ಕಟ್ಟಿದ್ದಾರೆ. ಕಾರ್ಮಿಕ ಸ್ಕೂಟರ್​​ನ್ನು ಸ್ಟಾರ್ಟ್​ ಮಾಡಿಕೊಂಡು, ಎಕ್ಸಿಲೇಟರ್​ ಕೊಡುವ ಮೂಲಕ ಆ ರಾಟೆ ಕಾರ್ಯ ನಿರ್ವಹಿಸುವಂತೆ ಮಾಡುತ್ತಿದ್ದಾನೆ. ಹೀಗೆ ಆತ ಎಕ್ಸಿಲೇಟರ್ ಜಾಸ್ತಿ ಕೊಟ್ಟಾಗ ಹಗ್ಗದ ಒಂದು ತುದಿಗೆ ಕಟ್ಟಲಾಗಿರುವ ಇಟ್ಟಿಗೆ/ಸಿಮೆಂಟ್​ ತುಂಬಿದ ಚೀಲ ಮೇಲ್ಭಾಗಕ್ಕೆ ಹೋಗುವುದನ್ನು ವಿಡಿಯೊದಲ್ಲಿ ಕಾಣಬಹುದು.

ಈ ಭರ್ಜರಿ ಐಡಿಯಾ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. Pankaj Parekh ಎಂಬುವರು ಶೇರ್​ ಮಾಡಿಕೊಂಡ ವಿಡಿಯೊಕ್ಕೆ ಈಗಾಗಲೇ 25 ಸಾವಿರ ವೀಕ್ಷಣೆಗಳು ಬಂದಿವೆ. 580ಕ್ಕೂ ಹೆಚ್ಚು ಲೈಕ್ಸ್​ ಬಂದಿವೆ. ಇದು ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಚಿತ್ರೀಕರಿಸಲಾದ ವಿಡಿಯೊ ಎಂದು ನೆಟ್ಟಿಗರೇ ಒಬ್ಬರು ತಿಳಿಸಿದ್ದಾರೆ. ‘ಭಾರತೀಯರಿಗೆ ಇಂಜಿನಿಯರಿಂಗ್​ ಮನಸ್ಥಿತಿ ಹುಟ್ಟುತ್ತಲೇ ಬಂದಿರುತ್ತದೆ’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video| ಮದುವೆಗೆ ಅತಿಥಿಗಳನ್ನೆಲ್ಲ ಕರೆದುಕೊಂಡು ಹೋಗಲು ವಿಮಾನವನ್ನೇ ಬುಕ್​ ಮಾಡಿದ ಕುಟುಂಬ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ನತಾಶಾ ಜತೆ ವಿಚ್ಛೇದನ ಖಚಿತ; ಸುಳಿವು ನೀಡಿದ ಹಾರ್ದಿಕ್​ ಪಾಂಡ್ಯ ಪೋಸ್ಟ್​!

Hardik Pandya: ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಈ ಹಿಂದೆ ವರದಿಯಾದ ಪ್ರಕಾರ ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿರುವುದು ಮತ್ತು ವಿಚ್ಛೇದನ ಪಡೆಯುವುದು ಬಹುತೇಖ ಖಚಿತ ಎನ್ನುವಂತಿದೆ. ಹೌದು, ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿರುವ ಹಾರ್ದಿಕ್​ ಪಾಂಡ್ಯ ತಮ್ಮ ಮಗನೊಂದಿಗೆ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ಫೋಟೊ ಮತ್ತು ವಿಡಿಯೊಗಳನ್ನು ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಪತ್ನಿ ಈ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡು ಈ ಜೋಡಿ ದೂರವಾದಂತೆ ತೋರುತ್ತಿದೆ.

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನವೇ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾನ್‌ಕೋವಿಕ್‌ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು. ಆದರೆ, ಈ ಜೋಡಿ ಮಾತ್ರ ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೇವಲ ನಿಗೂಡ ಅರ್ಥದ ಪೋಸ್ಟ್​ಗಳನ್ನು ಮಾತ್ರ ಮಾಡುತ್ತಿದ್ದರು.

ವಿಚ್ಛೇದನದ ಸುದ್ದಿಯ ನಡುವೆ, ಕೆಲ ದಿನಗಳ ಹಿಂದೆ ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್‌ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು.

ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

ಟಿ20 ವಿಶ್ವಕಪ್​ ಗೆದ್ದಾಗ ಆಟಗಾರರ ಪತ್ನಿಯರು ಈ ಗೆಲುವಿನ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪತಿಯ ಫೋಟೊ ಮತ್ತು ಸಾಧನೆಯನ್ನು ಕೊಂಡಾಡಿದ್ದರು. ಆದರೆ ನತಾಶ ಯಾವುದೇ ಪೋಸ್ಟ್​ ಕೂಡ ಮಾಡಿರಲಿಲ್ಲ. ಇದೀಗ ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡುವಾಗ ಪಾಂಡ್ಯ ಶೀಘ್ರದಲ್ಲೇ ನತಾಶಾಗೆ ವಿಚ್ಛೇದನ ನೀಡುವುದು ಖಚಿತ ಎನ್ನುವಂತಿದೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ವೈರಲ್ ನ್ಯೂಸ್

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಬಿಹಾರದ ರಾಜೌಲಿ ಪ್ರದೇಶದಲ್ಲಿ ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ ಆತನು ಆಸ್ಪತ್ರೆಗೆ ಓಡದೆ, ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಇದಾದ ಬಳಿಕವೇ ಆತನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹಾವು ಹಾಗೂ ವ್ಯಕ್ತಿ ನಡುವಿನ ಕಾಳಗದಲ್ಲಿ ಯಾರು ಗೆದ್ದರು? ಇಲ್ಲಿದೆ ಮಾಹಿತಿ.

VISTARANEWS.COM


on

Snake
Koo

ಪಟನಾ: ಹಾವುಗಳು (Snakes) ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಸಣ್ಣ ಹಾವು ಕಚ್ಚಿದರೂ ಗಾಬರಿಯಾಗುತ್ತದೆ. ಕೂಡಲೇ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುತ್ತೇವೆ. ಹಳ್ಳಿಯಲ್ಲಾದರೆ ಆಯುರ್ವೇದದಿಂದ ಹಾವಿನ ವಿಷಯವನ್ನು ನಿಗ್ರಹಿಸಲಾಗುತ್ತದೆ. ಅಷ್ಟರಮಟ್ಟಿಗೆ, ಹಾವು ಕಚ್ಚಿದರೆ (Snake Bite) ಗಾಬರಿ, ಆತಂಕ, ಭಯ ಆಗುತ್ತದೆ. ಆದರೆ, ಬಿಹಾರದಲ್ಲೊಬ್ಬ (Bihar) ಭೂಪನು, ತನಗೆ ಕಚ್ಚಿದ ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಎಂತಹ ಅದೃಷ್ಟ ನೋಡಿ, ಹಾವು ಕಚ್ಚಿಸಿಕೊಂಡ ವ್ಯಕ್ತಿಯು ಬದುಕುಳಿದರೆ, ಈತನಿಂದ ಕಚ್ಚಿಸಿಕೊಂಡ ಹಾವು ಸತ್ತುಹೋಗಿದೆ.

ಹೌದು, ಬಿಹಾರದ ರಾಜೌಲಿ ಪ್ರದೇಶದಲ್ಲಿ ಇಂತಹದ್ದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಯು ರೈಲ್ವೆ ಲೈನ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಈತನ ದಿನದ ಕೆಲಸ ಮುಗಿಸಿ ರೌಜಲಿಯಲ್ಲಿರುವ ಕ್ಯಾಂಪ್‌ನಲ್ಲಿ ಕಳೆದ ಮಂಗಳವಾರ (ಜುಲೈ 2) ಮಲಗಿದ್ದಾನೆ. ಇದೇ ವೇಳೆ ಹಾವೊಂದು ಸಂತೋಷ್‌ ಲೋಹರ್‌ಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ, ಆಸ್ಪತ್ರೆಗೆ ಓಡದ ಈತನು ಕಬ್ಬಿಣದ ರಾಡ್‌ನಿಂದ ಹಾವನ್ನು ಹಿಡಿದು, ಅದಕ್ಕೇ ಮೂರು ಬಾರಿ ಕಚ್ಚಿದ್ದಾನೆ. ಈತನು ಕಚ್ಚಿದ ತೀವ್ರತೆಗೆ ಹಾವೇ ಸತ್ತುಹೋಗಿದೆ.

Snake bite

ಸಂತೋಷ್‌ ಲೋಹರ್‌ನನ್ನು ಕೂಡಲೇ ಆತನ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಈತನು ಬಹುತೇಕ ಗುಣಮುಖನಾಗಿದ್ದಾನೆ. “ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಕಾರಣ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೀಘ್ರದಲ್ಲೇ ಆತನನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಚಿಕಿತ್ಸೆ ನೀಡಿದ ಡಾ.ಸತೀಶ್‌ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಈತನ ಸಾಹಸವನ್ನು ಕೇಳಿದ ಸುತ್ತಮುತ್ತಲಿನ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ಲೋಹರ್‌ನು ಹಾವಿಗೆ ವಾಪಸ್‌ ಕಚ್ಚಿದ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈತನ ಸಂದರ್ಶನವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. “ನಮ್ಮ ಊರಿನಲ್ಲಿ ಒಂದು ಮಾತಿದೆ. ನಮಗೇನಾದರೂ ಹಾವು ಕಚ್ಚಿದರೆ, ಅದಕ್ಕೆ ಎರಡು ಬಾರಿ ವಾಪಸ್‌ ಕಚ್ಚಬೇಕು ಎಂಬ ಪದ್ಧತಿ ಇದೆ. ಅದರಂತೆ, ನಾನು ಹಾವಿಗೆ ವಾಪಸ್‌ ಕಚ್ಚಿದೆ. ಇದರಿಂದ ನಾನು ಬದುಕುಳಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಈತನಿಗೆ ಕಚ್ಚಿದ ಹಾವಿನಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Continue Reading

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Deadly Attack: ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Deadly Attack
Koo

ಚಂಢಿಗಡ: ಪಂಜಾಬ್‌ನ ಶಿವಸೇನೆ ಮುಖಂಡ(Shivsena Leader)ನ ಮೇಲೆ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ(Deadly Attack) ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದಿದೆ. ಶಿವಸೇನೆ ನಾಯಕ ಸಂದೀಪ್‌ ಥಾಪರ್‌ ಅಲಿಯಾಸ್‌ ಗೋರಾ ಮೇಲೆ ಸ್ಕೂಟರ್‌ನಲ್ಲಿ ಬಂದ ನಿಹಾಂಗ್ ಉಡುಪಿನಲ್ಲಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ವೈರಲ್‌(Viral Video) ಆಗಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ನಿಹಾಂಗ್ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್‌ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅಲ್ಲೇ ಇದ್ದ ಪ್ರಯಾಣಿಕರು ಆಘಾತದಿಂದ ನೋಡುತ್ತಿದ್ದಂತೆ ದಾಳಿಕೋರರು ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಅನೇಕ ಜನ ಥಾಪರ್‌ ಸಹಾಯಕ್ಕೆ ಬರಲೇ ಇಲ್ಲ. ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಥಾಪರ್ ಅವರು ಸಂವೇದನಾ ಟ್ರಸ್ಟ್ ಎಂಬ ಎನ್‌ಜಿಒ ಕಚೇರಿಯಿಂದ ಸಿವಿಲ್ ಆಸ್ಪತ್ರೆ ಬಳಿ ತೆರಳಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಥಾಪರ್‌ನನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಸ್ಥಳೀಯ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು. ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಸ್ಕಿರಂಜಿತ್ ಸಿಂಗ್ ತೇಜಾ ತಿಳಿಸಿದ್ದಾರೆ.

ಘಟನೆಯ ನಂತರ, ಶಿವಸೇನಾ ಪಂಜಾಬ್ ನಾಯಕರು ಸಿವಿಲ್ ಆಸ್ಪತ್ರೆಯ ಹೊರಗೆ ಜಮಾಯಿಸಿ ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಥಾಪರ್‌ಗೆ ಮೂವರು ಬಂದೂಕುಧಾರಿಗಳ ಭದ್ರತೆ ನೀಡಲಾಗಿತ್ತು. ಪೊಲೀಸರು ಒಂದು ವಾರದ ಹಿಂದೆ ಅವರ ಭದ್ರತೆಯನ್ನು ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ. ಥಾಪರ್‌ ಮೇಲಿನ ದಾಳಿಗೆ ಹಿಂದೂ ಸಂಘಟನೆ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಿಗೆ ಸರ್ಕಾರ ಭದ್ರತೆ ನೀಡುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಇಂತಹ ಕ್ರೂರ ದಾಳಿ ಖಂಡನೀಯ. ಇದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading
Advertisement
spicejet news
ಪ್ರಮುಖ ಸುದ್ದಿ7 mins ago

SpiceJet News: ಬೆಂಗಳೂರಿನ ಪ್ರಯಾಣಿಕರನ್ನು ದಿಲ್ಲಿಯಲ್ಲಿ ವಿಮಾನದೊಳಗೇ 12 ಗಂಟೆ ಕೊಳೆಹಾಕಿದ ಸ್ಪೈಸ್‌ಜೆಟ್!

Kiran Raj celebrate Family day on his birthday
ಸ್ಯಾಂಡಲ್ ವುಡ್8 mins ago

Kiran Raj: ಜನುಮದಿನ ʻಫ್ಯಾಮಿಲಿ ಡೇʼ ಎಂದು ಆಚರಿಸಿ, ಅಭಿಮಾನಿಗಳಿಂದ ಸೈ ಎನಿಸಿಕೊಂಡ ʻಕನ್ನಡತಿʼ ಸೀರಿಯಲ್‌ ನಟ!

Wild Animal Attack Elephant attack
ರಾಮನಗರ12 mins ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

gold rate today
ವಾಣಿಜ್ಯ17 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಶಾಕ್‌

Portugal vs France
ಕ್ರೀಡೆ20 mins ago

Portugal vs France: ಶೂಟೌಟ್​ನಲ್ಲಿ ಗೆದ್ದ ಫ್ರಾನ್ಸ್; ಟೂರ್ನಿಯಿಂದ ಕಿಕ್​ ಔಟ್​ ಆದ ಪೋರ್ಚುಗಲ್

Actor Darshan soon as he heard the news that Renuka Swami had passed away, Darshan shocked
ಸ್ಯಾಂಡಲ್ ವುಡ್34 mins ago

Actor Darshan: ರೇಣುಕಾ ಸ್ವಾಮಿ ಸತ್ತೋಗ್ಬಿಟ್ಟ ಎಂಬ ಸುದ್ದಿ ಕೇಳಿದ ಕೂಡಲೇ ತಲೆ ಮೇಲೆ ಕೈ ಇಟ್ಟುಕೊಂಡಿದ್ರಂತೆ ದರ್ಶನ್‌!

SpiceJet Flight
ದೇಶ35 mins ago

SpiceJet Flight: ಸ್ಪೈಸ್‌ಜೆಟ್‌ ವಿಮಾನ 12 ಗಂಟೆ ವಿಳಂಬ; ಪ್ರಯಾಣಿಕರ ಪರದಾಟ

Anant Ambani wedding
ಕ್ರೀಡೆ1 hour ago

Anant Ambani wedding: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರದಲ್ಲಿ ಪಾಲ್ಗೊಂಡ ಧೋನಿ, ಪಾಂಡ್ಯ ಬ್ರದರ್ಸ್​, ಇಶಾನ್​ ಕಿಶನ್​

dengue fever death bangalore
ಕ್ರೈಂ1 hour ago

Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

UK Election
ವಿದೇಶ2 hours ago

UK Election: ಇಂಗ್ಲೆಂಡ್‌ನಲ್ಲಿ ಅಧಿಕಾರಕ್ಕೆ ಬಂದ ಲೇಬರ್‌ ಪಕ್ಷ; ಭಾರತದ ಮೇಲೇನು ಪರಿಣಾಮ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ17 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ19 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ20 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ22 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ23 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 day ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು1 day ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌