Viral Video | ಸುಡುಬಿಸಿಲಿನಲ್ಲಿ ಕುಳಿತಿದ್ದ ವೃದ್ಧೆಯ ಎಲ್ಲ ಹಣ್ಣು ಖರೀದಿಸಿ, ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ - Vistara News

ವೈರಲ್ ನ್ಯೂಸ್

Viral Video | ಸುಡುಬಿಸಿಲಿನಲ್ಲಿ ಕುಳಿತಿದ್ದ ವೃದ್ಧೆಯ ಎಲ್ಲ ಹಣ್ಣು ಖರೀದಿಸಿ, ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

ಸುಡು ಬಿಸಿಲಿನಲ್ಲಿ ವ್ಯಾಪಾರ ಮಾಡುತ್ತಿದ್ದ ಮುದುಕಿಯ ಮೇಲೆ ಪೊಲೀಸ್ ಅಧಿಕಾರಿ ತೋರಿದ ಕರುಣೆಯ ವಿಡಿಯೋ ಸಖತ್ ವೈರಲ್ ಆಗಿದೆ(Viral Video).

VISTARANEWS.COM


on

Aged Woman Selling fruits @ Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸುಡು ಬಿಸಿಲಿನಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ವೃದ್ಧೆಯ ಸಂಕಟ ನೋಡಲಾಗದ ಪೊಲೀಸ್ ಅಧಿಕಾರಿಯೊಬ್ಬರು, ಆಕೆಯ ಬಳಿ ಮಾರಾಟಕ್ಕಿದ್ದ 2 ಕೆ.ಜಿ ಪೇರಲ ಹಣ್ಣುಗಳನ್ನು ಖರೀದಿಸಿ ವಿಶ್ರಾಂತಿಗಾಗಿ ಮನೆಗೆ ಕಳುಹಿಸಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜನರ ಮೇಲೆ ಸ್ವಲ್ಪವೇ ಕರುಣೆ ತೋರಿಸಿದರೂ ಸಾಕು ಅದು ಬೀರುವ ಪರಿಣಾಮ ಬಹಳ ದೊಡ್ಡದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗುತ್ತಿದೆ(Viral Video).

ರಸ್ತೆಯ ಪಕ್ಕದಲ್ಲಿ ಮುದುಕಿಯೊಬ್ಬಳು ಪೇರಲ ಹಣ್ಣು ಮಾರುತ್ತಿರುತ್ತಾಳೆ. ಇದನ್ನು ಗಮನಿಸಿದ ಪೊಲೀಸ್ ಅಧಿಕಾರಿ ಆಕೆಯ ಪರಿಚಯವನ್ನು ಮಾಡಿಕೊಳ್ಳುತ್ತಾರೆ. ಎಲ್ಲ ಪೇರಲು ಹಣ್ಣು ಖರೀದಿಸಿದರೆ ಮನೆಗೆ ಹೋಗಿ ವಿಶ್ರಾಂತಿ ಮಾಡುತ್ತೀರಾ ಎಂದು ಕೇಳುತ್ತಾರೆ. ಅದಕ್ಕೆ ವೃದ್ಧೆ ಹೌದು ಎನ್ನುತ್ತಾಳೆ. ಬಳಿಕ, 1 ಕೆ.ಜಿ ಪೇರಲ ಹಣ್ಣಿಗೆ ಎಷ್ಟು ಎಂದು ಕೇಳುತ್ತಾರೆ. ಅಜ್ಜಿ 1 ಕೆ.ಜಿ. ಪೇರಲ ಹಣ್ಣಿಗೆ 20 ರೂ. ಎನ್ನುತ್ತಾಳೆ. ಪೊಲೀಸ್ ಅಧಿಕಾರಿ ನೂರರ ನೋಟು ನೀಡಿ, ಎಲ್ಲ ಹಣ್ಣನ್ನು ಖರೀದಿಸುತ್ತಾರೆ. ಬಳಿಕ, ಮನೆಗೆ ಹೋಗಿ ವಿಶ್ರಾಂತಿ ಮಾಡುವಂತೆ ಸೂಚಿಸುತ್ತಾರೆ. ಎಲ್ಲ ಹಣ್ಣು ಮಾರಾಟವಾದ ಖುಷಿಯಲ್ಲಿ ಪೊಲೀಸ್ ಅಧಿಕಾರಿಗೆ ಒಳ್ಳೆಯದಾಗಲಿ ಎಂದು ವೃದ್ಧೆ ಹಾರೈಸುತ್ತಾಳೆ. ಈ ವೃದ್ಧೆಯ ಹೆಸರು ಫೂಲ್‌ರಾಣಿ.

ಸುಮಾರು ಒಂದೂವರೆ ನಿಮಿಷದ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. Bundeli Bauchhar ಎಂಬ ಟ್ವೀಟರ್ ಖಾತೆಯಲ್ಲಿ ಈ ವಿಡಿಯೋ ಷೇರ್ ಮಾಡಲಾಗಿದ್ದು, ಅಧಿಕಾರಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ. ಈವರೆಗೆ 1.1 ಮಿಲಿಯನ್ ವೀವ್ಸ್ ಬಂದಿದೆ.

ಇದನ್ನೂ ಓದಿ | Petrol Pump Robbery | ಪೆಟ್ರೋಲ್ ಪಂಪ್ ದರೋಡೆಗೆ ಬಂದು ಹೆಣವಾದ! ವಿಡಿಯೋ ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

Viral Video ಬಿಜೆಪಿ ಶಾಲು ಧರಿಸಿದ ವ್ಯಕ್ತಿ ಅಯೋಧ್ಯೆ ಹೆಸರಿನ ಪ್ರತಿಮೆಗೆ ಬೆಂಕಿ ಹಚ್ಚಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಅಯೋಧ್ಯೆ ಪೊಲೀಸರಿಗೆ ಆದೇಶಿಸಲಾಗಿದೆ.

VISTARANEWS.COM


on

Viral Video
Koo

ಅಯೋಧ್ಯೆ ಹಿಂದೂ ಧರ್ಮಗಳ (Viral video) ಪವಿತ್ರ ಸ್ಥಳವೆಂದು ಕರೆಯಬಹುದು. ಯಾಕೆಂದರೆ ಇದು ಭಗವಾನ್ ಶ್ರೀರಾಮನ ಜನ್ಮಭೂಮಿ ಮಾತ್ರವಲ್ಲ ಇತ್ತೀಚೆಗಷ್ಟೇ ಇಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿತ್ತು. ಇಂತಹ ಪವಿತ್ರ ಸ್ಥಳದಲ್ಲಿ ವ್ಯಕ್ತಿಯೊಬ್ಬ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಲೋಕಸಭೆಯ ಚುನಾವಣೆಯ ನಂತರ ಈ ಕಾರ್ಯ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಅಯೋಧ್ಯೆ ಪೊಲೀಸರಿಗೆ ಆದೇಶಿಸಲಾಗಿದೆ. ಸೈಬರ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಪೆಕ್ಟರ್ ಗೆ ಇದರ ಸಂಪೂರ್ಣ ವಿಚಾರಣೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಅಯೋಧ್ಯೆ ಜನತೆ ಮೇಲೆ ಬಿಜೆಪಿ ಬೆಂಬಲಿಗರ ಆಕ್ರೋಶ

ಅಯೋಧ್ಯೆಯಲ್ಲಿ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಮಮಂದಿರವನ್ನು ನಿರ್ಮಿಸಿತ್ತು. ಹಾಗಿದ್ದರೂ ಈ ಬಾರಿಯ ಲೋಕ ಸಭೆಯ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದಲ್ಲಿ  ಬಿಜೆಪಿ ಪಕ್ಷದ ಅಭ್ಯರ್ಥಿ ಲಲ್ಲೂ ಸಿಂಗ್ ಸೋಲನುಭವಿಸಿದ್ದರು. ಹೀಗಾಗಿ ಅಯೋಧ್ಯೆ ಜನರ ಮೇಲೆ ಅನೇಕ ಬಿಜೆಪಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ನಡುವೆ ಬಿಜೆಪಿ ಶಾಲು ಧರಿಸಿದ ವ್ಯಕ್ತಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯ ಮೇಲೆ ಹಿಂದೂಗಳನ್ನು ಎತ್ತಿಕಟ್ಟುವ ಹುನ್ನಾರವೇ? ಅಥವಾ ಬಿಜೆಪಿಗರು ಅಯೋಧ್ಯೆ ಜನರ ಮೇಲೆ ವ್ಯಕ್ತಪಡಿಸಿದ ಆಕ್ರೋಶವೇ? ಎಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಈ ಘಟನೆಯನ್ನ ತನಿಖೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

ಅಯೋಧ್ಯೆ ಜನರನ್ನು ಗುರಿಯಾಗಿಸಿಕೊಂಡು ನಿಂದನಾತ್ಮಕವಾಗಿ ಮಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಬಳಕೆದಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಉದ್ವಿಗ್ನ ಮತ್ತು ಹಿಂಸಾಚಾರ ಪರಿಸ್ಥಿತಿಯನ್ನು ಹುಟ್ಟುಹಾಕುವ ಹುನ್ನಾರವನ್ನು ಎತ್ತಿ ತೋರಿಸುತ್ತದೆ. ಹಾಗಾಗಿ  ಅಯೋಧ್ಯೆ ನಿವಾಸಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು ಮತ್ತು ಮತ್ತಷ್ಟು ಹಿಂಸಾಚಾರ ಅಥವಾ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕೆಂದು ಸೋಶಿಯಲ್ ಮೀಡಿಯಾದ ಬಳಕೆದಾರರು ತಿಳಿಸಿದ್ದಾರೆ.

ಒಟ್ಟಾರೆ ಈ ವಿಡಿಯೋ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ತನಿಖೆಯ ಬಳಿಕ ಇದರ ಹಿಂದಿನ ಉದ್ದೇಶ ತಿಳಿದುಬರಬೇಕಿದೆ.

Continue Reading

ಪ್ರಮುಖ ಸುದ್ದಿ

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

PM Narendra Modi: ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ.

VISTARANEWS.COM


on

pm narendra modi leopord
Koo

ಹೊಸದಿಲ್ಲಿ: ನರೇಂದ್ರ ಮೋದಿ (PM Narendra Modi) ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ (Prime minister) ಪ್ರಮಾಣ ವಚನ (Oath taking) ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದ್ದಾಗ ಹಿನ್ನೆಲೆಯಲ್ಲಿ ಚಿರತೆಯಂಥ (leopord) ಪ್ರಾಣಿಯೊಂದು ವೇದಿಕೆಯ ಹಿಂಭಾಗದಲ್ಲೇ ಓಡಾಡಿರುವುದು ಇದೀಗ ಕಂಡುಬಂದಿದೆ. ಸಮಾರಂಭದ ವಿಡಿಯೋದಲ್ಲಿ ಇದು ಕಂಡುಬಂದಿದ್ದು, ಇದೀಗ ಎಲ್ಲರ ಆಶ್ಚರ್ಯ, ಆತಂಕಗಳಿಗೆ ಕಾರಣವಾಗಿದೆ. ವಿಡಿಯೋ ವೈರಲ್‌ (viral video) ಆಗುತ್ತಿದೆ.

ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ. ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚಿರತೆ ಕಂಡುಬಂದಿದೆ.

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಬೆಕ್ಕಿನ ಸ್ವರೂಪದ ಪ್ರಾಣಿಯೊಂದು ಓಡಾಡಿದ್ದನ್ನು ಹೆಚ್ಚಿನವರು ಗುರುತಿಸಲಿಲ್ಲ. ಆದರೆ ವೇದಿಕೆಯ ಹಿಂದೆಯೇ ಅದರ ಮಿಂಚಿನ ಓಡಾಟವನ್ನು ಅನೇಕರು ಗಮನಿಸಿದರು. ದೂರದರ್ಶನದಲ್ಲಿ ಪ್ರಮಾಣವಚನ ಸಮಾರಂಭ ನೇರ ಪ್ರಸಾರವಾಗಿದ್ದು, ಇದೀಗ ಆ ಕ್ಷಣದ ವಿಡಿಯೋಗಳು ಮರುಪ್ರಸಾರವಾಗುತ್ತಿವೆ.

ಈ ವರ್ಷದ ಅತಿದೊಡ್ಡ ರಾಜಕೀಯ ಇವೆಂಟ್‌ ಆಗಿರುವ ಈ ಕಾರ್ಯಕ್ರಮದಲ್ಲಿ ಈ ಅನಪೇಕ್ಷಿತ, ಅನಿರೀಕ್ಷಿತ ಅತಿಥಿಯ ಆಗಮನ ಇದೀಗ ಇಂಟರ್ನೆಟ್‌ನಲ್ಲಿ ಬಿರುಗಾಳಿಯಂತೆ ಗಮನ ಸೆಳೆಯುತ್ತಿದೆ. ಅನೇಕ X ಬಳಕೆದಾರರು ತಮ್ಮ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಹಲವರು ಅಚ್ಚರಿ ಹಾಗೂ ಆತಂಕ ಹೊರಸೂಸಿದ್ದಾರೆ.

ಆದರೂ ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗಳೆಯಾಲಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಂಗಳು ಇಲ್ಲಿವೆ.

ಅಮೃತ್ ಉದ್ಯಾನ್‌ನ ಸಸ್ಯವರ್ಗದ ಜೊತೆಗೆ ರಾಷ್ಟ್ರಪತಿ ಭವನವು ಚಿಟ್ಟೆ ಪಾರ್ಕ್‌, ನವಿಲು ಪಾರ್ಕ್‌, ಕೊಳ ಇತ್ಯಾದಿ ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳಿಗೂ ನೆಲೆಯಾಗಿದೆ. ಭವನದ ಆವರಣದ ಉದ್ಯಾನವು 111 ಜಾತಿಯ ಪಕ್ಷಿಗಳನ್ನೂ ಹೊಂದಿದೆ. ಸೋಮವಾರ ಮತ್ತು ನಿರ್ದಿಷ್ಟ ರಜಾದಿನಗಳನ್ನು ಹೊರತುಪಡಿಸಿ, ಅಮೃತ್‌ ಉದ್ಯಾನವು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿದೆ.

ಇದೀಗ ಈ ಚಿರತೆ ಎಲ್ಲಿಂದ ಬಂದಿರಬಹುದು, ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಸೆಕ್ಯುರಿಟಿ ಅದನ್ನು ಸಮಾರಂಭ ನಡೆಯುವ ಜಾಗದವರೆಗೂ ಹೇಗೆ ಬರಲು ಬಿಟ್ಟರು, ನಿಜಕ್ಕೂ ಈ ವಿಡಿಯೋದಲ್ಲಿ ಕಾಣಿಸಿರುವುದು ನಿಜವೇ ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿವೆ. ಒಂದು ವೇಳೆ ಇಲ್ಲಿ ಚಿರತೆ ಇರುವುದು ನಿಜವೇ ಆಗಿದ್ದರೆ, ಅದು ದೇಶವಿದೇಶದ ಗಮನ ಸೆಳೆಯುವ ದೊಡ್ಡ ಸುದ್ದಿಯೇ ಆಗಲಿದೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Continue Reading

ವೈರಲ್ ನ್ಯೂಸ್

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

Viral Video ಮುಸ್ಲಿಂರ ಪವಿತ್ರ ಸ್ಥಳವಾದ ಮೆಕ್ಕಾದಲ್ಲಿರುವ ಕಾಬಾದ ಮುಂದೆ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ನೃತ್ಯ ಮಾಡಿದ ಘಟನೆ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಈ ಘಟನೆಗೆ ಮುಸ್ಲಿಂ ಸಮುದಾಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo

ದೆಹಲಿ: ಎಲ್ಲಾ ಧರ್ಮದವರಿಗೂ ಅವರವರ ಧರ್ಮವನ್ನು ಆಚರಿಸುವ ಸ್ಥಳ ತುಂಬಾ ಪವಿತ್ರವಾಗಿರುತ್ತದೆ. ಮುಸ್ಲಿಂ ಧರ್ಮದವರಿಗೆ ಮೆಕ್ಕಾ (Mecca) ಒಂದು ಪವಿತ್ರ ಸ್ಥಳವಾಗಿದೆ. ಪ್ರತಿವರ್ಷ ಸಾವಿರಾರು ಮಂದಿ ಮುಸ್ಲಿಂರು ಎಷ್ಟೇ ಕಠಿಣ ಪರಿಸ್ಥಿತಿಯಲ್ಲೂ ಈ ಸ್ಥಳಕ್ಕೆ ಯಾತ್ರೆಗೆ ಹೋಗುತ್ತಾರೆ. ಮೆಕ್ಕಾವೆಂದರೆ ಮುಸ್ಲಿಂರಿಗೆ ತುಂಬಾನೇ ಗೌರವ. ಇಂತಹ ಪವಿತ್ರ ಸ್ಥಳದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಮೈಮರೆತು ನೃತ್ಯ (Dance) ಮಾಡಿದ ವಿಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದ್ದು, ಈ ಘಟನೆಗೆ ಮುಸ್ಲಿಂ ಸಮುದಾಯದವರು ಸಿಕ್ಕಾಪಟ್ಟೆ ಗರಂ ಆಗಿದ್ದಾರೆ..

ಮೆಕ್ಕಾದಲ್ಲಿರುವ ಕಾಬಾದ ಮುಂದೆ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯೊಬ್ಬಳು ನೃತ್ಯ ಮಾಡಿದ್ದಾಳೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಮುಸ್ಲಿಂ ಸಮೂಹದವರು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಮಹಿಳೆಯ ನೃತ್ಯಕ್ಕೆ ಸಿಟ್ಟಾದ ಮುಸ್ಲಿಂ ಸಮುದಾಯ!

ಹಜ್ 2024ರ ಸೀಸನ್ ಪ್ರಾರಂಭವಾಗಿದೆ. ಈ ಸಮಯದಲ್ಲಿ ಪ್ರಪಂಚದಾದ್ಯಂತ ಮುಸ್ಲಿಂರು ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾಕ್ಕೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಪ್ರವಾದಿ ಮುಹಮ್ಮದ್ ಅವರು ತಿಳಿಸಿದ್ದರು. ಹಾಗಾಗಿ ಮುಸ್ಲಿಂರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ವೇಳೆ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯೊಬ್ಬಳು ಎಲ್ಲಾ ಯಾತ್ರಿಕರ ಮುಂದೆ ನೃತ್ಯ ಮಾಡಿದ್ದಾಳೆ. ಈ ಸ್ಥಳದಲ್ಲಿ ಭಕ್ತಿ ಭಾವದಲ್ಲಿರಬೇಕಾದ ಮಹಿಳೆ  ಈ ರೀತಿ ಮೈಮರೆತು ಡ್ಯಾನ್ಸ್ ಮಾಡಿದ್ದಕ್ಕೆ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಈ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋದಲ್ಲಿರುವ ಮಹಿಳೆ ಬುರ್ಖಾ ಧರಿಸಿದ ಕಾರಣ ಆಕೆ ಯಾರು ಎಂಬುದು ತಿಳಿದುಬಂದಿಲ್ಲ.

ಯೊರುಬಾ ಬುಡಕಟ್ಟಿನ ಮಹಿಳೆ!

ಈ ವಿಡಿಯೊ ಬಗ್ಗೆ ಸೋಷಿಯಲ್ ಮೀಡಿಯಾದ ಬಳಕೆದಾರರು ಕಾಮೆಂಟ್ ಮಾಡಿದ್ದು, ಅದರಲ್ಲಿ ಒಬ್ಬರು ಮಹಿಳೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಹಿಳೆ ನೈರುತ್ಯ ನೈಜೀರಿಯಾದ ಯೊರುಬಾ ಬುಡಕಟ್ಟಿನವರು, ನೃತ್ಯವು ಅವರ ಸಂಸ್ಕೃತಿಯಲ್ಲಿ ಬಹಳ ಮುಖ್ಯವಾದುದು. ಹಾಗಾಗಿ ಆಕೆ ಹಾಗೇ ಮಾಡಿರಬಹುದು ಎಂದು ತಿಳಿಸಿದ್ದಾರೆ. ಹಾಗೇ ಮತ್ತೊಬ್ಬ ಬಳಕೆದಾರರು, ಹಜ್ 2024ರ ಸೀಸನ್ ಸಮೀಪಿಸುತ್ತಿರುವಾಗ ಕೆಲವು ದೃಶ್ಯಗಳು ಈ ತಿಂಗಳ ಪವಿತ್ರತೆಯನ್ನು ಉಲ್ಲಂಘಿಸಲು ಪ್ರಾರಂಭಿಸಿದ್ದಾವೆ ಮತ್ತು ಇದು ಲಕ್ಷಾಂತರ ಮುಸ್ಲಿಂರ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

2024ರ ಹಜ್ ಗೆ ಮುಂಚಿತವಾಗಿ ಸುಮಾರು 13 ಮಿಲಿಯನ್ ಮುಸ್ಲಿಂರು ಸೌದಿ ಅರೇಬಿಯಾಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಇನ್ನೂ ಅನೇಕ ಮಂದಿ ಮುಸ್ಲಿಂ ಯಾತ್ರಿಕರು ಪವಿತ್ರ ಆಚರಣೆಗಾಗಿ ಇಲ್ಲಿಗೆ ಆಗಮಿಸುವ ನಿರೀಕ್ಷೆಗಳಿವೆ ಎನ್ನಲಾಗಿದೆ. ಹಾಗಾಗಿ ಅಧಿಕಾರಿಗಳು ನಿಷೇಧಿಸಿರುವ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಯಾತ್ರಿಕರಿಗೆ ಸೌದಿ ಸರ್ಕಾರ ಒತ್ತಾಯಿಸಿದೆ. ನಿಯಮ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ:Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

ಈ ಬಗ್ಗೆ ಹಜ್ ಸಚಿವರು ಮಾತನಾಡಿ, “ಹಜ್ ಕೇವಲ ಪೂಜೆಗಾಗಿಯೇ ಹೊರತು ರಾಜಕೀಯ ಫೋಷಣೆಗಳಿಗಾಗಿ ಅಲ್ಲ. ಪ್ಯಾಲೆಸ್ಟೀನಿಯಾದವರಿಗೆ, ವಿಶೇಷವಾಗಿ ಗಾಜಾದಲ್ಲಿರುವ ನಮ್ಮ ಸಹೋದರರಿಗೆ ದುವಾ ಮಾಡುವುದನ್ನು ನಿಷೇಧಿಸಲಾಗಿಲ್ಲ. ಇದು ಸಂಪೂರ್ಣವಾಗಿ ಸುಳ್ಳು. ಯಾವುದೇ ದೇಶದ ರಾಜಕೀಯ ಫೋಷಣೆಗಳನ್ನು ಕೂಗುವುದನ್ನು ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

Continue Reading

ಕ್ರೈಂ

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಪಂಕಜ್ ಮುಂಡೆ ಸೋತರೆ ಇನ್ನಿಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕಿದ್ದ ವ್ಯಕ್ತಿಯೊಬ್ಬ ಬಸ್ ಅಪಘಾತದಲ್ಲಿ (Bus Accident) ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

By

Bus Accident
Koo

ಲಾತೂರ್: ಲೋಕಸಭಾ ಚುನಾವಣೆಯಲ್ಲಿ (lok sabha election) ಮಹಾರಾಷ್ಟ್ರದ (maharastra) ಬೀಡ್ ನಿಂದ ಕಣಕ್ಕೆ ಇಳಿದಿದ್ದ ಬಿಜೆಪಿ (bjp) ನಾಯಕಿ ಪಂಕಜಾ ಮುಂಡೆ (Pankaja Munde) ಅವರು ಸೋತರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋ (video) ಅಪ್‌ಲೋಡ್ ಮಾಡಿದ್ದ ವ್ಯಕ್ತಿಯೊಬ್ಬರು ಬಸ್‌ನಡಿ (Bus Accident) ಸಿಲುಕಿ ಮೃತಪಟ್ಟಿದ್ದಾರೆ.

ವಿಡಿಯೋ ಮಾಡಿದ 38 ವರ್ಷದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೋರ್ಗಾಂವ್ ಪಾಟಿ ಬಳಿಯ ಅಹ್ಮದ್‌ಪುರ- ಅಂಧೋರಿ ರಸ್ತೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಲಿಯಾದವರನ್ನು ಟ್ರಕ್ ಚಾಲಕ ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ನಿವಾಸಿ ಸಚಿನ್ ಕೊಂಡಿಬಾ ಮುಂಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ಘಟನೆಗೆ ಸಂಬಂಧಿಸಿ ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಯಲ್ದರವಾಡಿ ರಾತ್ರಿ ಬಸ್ ನಿಲುಗಡೆ ಮಾಡುತ್ತಿದ್ದಾಗ ಬಸ್ ನ ಹಿಂದೆ ನಿಂತಿದ್ದ ಸಚಿನ್ ಅವರು ಬಸ್ ನ ಚಕ್ರದಡಿ ಬಿದ್ದು ನಜ್ಜುಗುಜ್ಜಾಗಿದ್ದಾರೆ ಎಂದು ಆತನ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಕಿಂಗಾವ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪತ್ನಿಯನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ ಪತಿಯೊಬ್ಬನನ್ನು ಬಂಧಿಸಲಾಗಿದೆ. ಗಂಗಿರೆಡ್ಡಿ ಬಂಧಿತ ಆರೋಪಿ.
ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಜಗಳ ನಡೆದು ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಗಂಗಿರೆಡ್ಡಿ ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Continue Reading
Advertisement
Yuva Rajkumar
ಕರ್ನಾಟಕ2 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ3 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ4 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು4 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ4 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ4 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ5 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ5 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ6 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ6 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌