Election Result 2022 | ಗುಜರಾತ್‌, ಹಿಮಾಚಲ ಪ್ರದೇಶ ವಿಧಾನ ಸಭೆ ಚುನಾವಣೆ ಮತ ಎಣಿಕೆ ಶುರು - Vistara News

ದೇಶ

Election Result 2022 | ಗುಜರಾತ್‌, ಹಿಮಾಚಲ ಪ್ರದೇಶ ವಿಧಾನ ಸಭೆ ಚುನಾವಣೆ ಮತ ಎಣಿಕೆ ಶುರು

ನವೆಂಬರ್‌ ಹಾಗೂ ಈ ತಿಂಗಳ ಆರಂಭದಲ್ಲಿ ಮತದಾನ ನಡೆದಿದ್ದ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Election result_
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್‌ : ನವೆಂಬರ್‌ ಹಾಗೂ ಈ ತಿಂಗಳ ಆರಂಭದಲ್ಲಿ ಮತದಾನ ನಡೆದಿದ್ದ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಶುರುವಾಗಿದ್ದು, ಗುಜರಾತ್‌ನಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಹಿಮಾಚಲ ಪ್ರದೇಶದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಿದೆ.

ಇದರ ಜತೆಗೆ ಉಭಯ ರಾಜ್ಯಗಳಲ್ಲಿ ನಡೆದ ಒಂದು ಲೋಕಸಭೆ ಹಾಗೂ ಆರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತಗಳ ಎಣಿಕೆಯೂ ನಡೆಯುತ್ತಿದೆ.

ಗುಜರಾತ್‌ನ ಒಟ್ಟು ವಿಧಾನಸಭೆ ಕ್ಷೇತ್ರಗಳು 182. ಇದರಲ್ಲಿ 13 ಎಸ್‌ಸಿ ಹಾಗೂ 27 ಎಸ್‌ಟಿ ಮೀಸಲು ಕ್ಷೇತ್ರಗಳು. ಚುನಾವಣೆಯ ಮತದಾನಗಳು ಎರಡು ಹಂತಗಳಲ್ಲಿ, ಡಿಸೆಂಬರ್‌ 1 ಹಾಗೂ 5ರಂದು ನಡೆದಿದ್ದವು. ಗುಜರಾತ್‌ನಲ್ಲಿದ್ದ ಒಟ್ಟಾರೆ ಮತಗಳು 49,117,708. ಇದರಲ್ಲಿ 64.33% ಮತಗಳು ಚಲಾವಣೆಯಾಗಿದ್ದವು. ಕಳೆದ ಬಾರಿಯ ಫಲಿತಾಂಶ: ಬಿಜೆಪಿ 99, ಕಾಂಗ್ರೆಸ್‌ 77, ಐಎನ್‌ಡಿ 3, ಇತರ 2.

37 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಸುಸಜ್ಜಿತ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 182 ಮತ ಎಣಿಕೆ ವೀಕ್ಷಕರು, 182 ಚುನಾವಣಾಧಿಕಾರಿಗಳು ಮತ್ತು 494 ಸಹಾಯಕ ಚುನಾವಣಾಧಿಕಾರಿಗಳು ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಎಣಿಕೆ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ನಡೆಯಯುತ್ತಿದೆ. ಮತಗಟ್ಟೆಗಳ ಬಳಿ ಸಿಎಪಿಎಫ್, ಎಸ್‌ಆರ್‌ಪಿಎಫ್‌ ಬಿಗಿ ಭದ್ರತೆ ಒದಗಿಸಲಾಗಿದೆ.

ಸಂಖ್ಯೆಯಲ್ಲಿ ಹಿಮಾಚಲ ಪ್ರದೇಶ

ಇಲ್ಲಿರುವ ವಿಧಾನಸಭೆ ಕ್ಷೇತ್ರಗಳು 68. ಎಲ್ಲ ಕಡೆಯೂ ಮೂರು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಹುಜನ ಸಮಾಜ ಪಕ್ಷ ಕೂಡ 53 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ನವೆಂಬರ್‌ 12ರಂದು ಇಲ್ಲಿ ಮತದಾನ ನಡೆಯಿತು. 74%ರಷ್ಟು ಮತದಾನವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರಕ್ಕಾಗಿ ಹೋರಾಟ ನಡೆಯಲಿದೆ, ಮಧ್ಯೆ ಆಪ್‌ ತನ್ನ ಜಾಗ ಕಂಡುಕೊಳ್ಳಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿವೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಕಾಂಗ್ರೆಸ್ 21 ಸ್ಥಾನಗಳನ್ನು ಪಡೆದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಕೇರಳ ವಿಶ್ವವಿದ್ಯಾಲಯ ಈ ಜನಪ್ರಿಯ ಕಾರ್ಯಕ್ರಮಕ್ಕೆ ಇದೀಗ ಅನುಮತಿ ನಿರಾಕರಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಮಧ್ಯೆ ಸಂಘರ್ಷ ಶುರುವಾಗಿದೆ. ಸನ್ನಿ ಲಿಯೋನ್‌ ಕಾರ್ಯಕ್ರಮ ಬೇಕೇಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ!

VISTARANEWS.COM


on

By

Sunny Leone
Koo

ತಿರುವಂತನಂತಪುರ: ಇತ್ತೀಚೆಗೆ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಕೇರಳ (kerala) ಸರ್ಕಾರವು ಹೊರಗಿನ ಡಿಜೆ ಪಾರ್ಟಿಗಳು (DJ party) ಮತ್ತು ಕಾಲೇಜು ಕ್ಯಾಂಪಸ್‌ಗಳಲ್ಲಿ ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು (music event) ನಿಷೇಧಿಸಿತ್ತು. ಆದರೂ ಬಾಲಿವುಡ್ ನಟಿ (bollywood actress) ಸನ್ನಿ ಲಿಯೋನ್ (Sunny Leone) ಅವರ ನೃತ್ಯ (dance) ಕಾರ್ಯಕ್ರಮಕ್ಕೆ ಕೇರಳ ವಿಶ್ವವಿದ್ಯಾಲಯ (kerala university) ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯ ಅನುಮತಿ ನಿರಾಕರಿಸಿದೆ.

ಕೇರಳ ರಾಜಧಾನಿ ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಕೇರಳ ವಿಶ್ವವಿದ್ಯಾಲಯ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದೆ.

ಕೇರಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಮೋಹನನ್ ಕುನ್ನುಮ್ಮಾಲ್ ಅವರು ಈ ಕಾರ್ಯಕ್ರಮವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮದ ಪಟ್ಟಿಯಲ್ಲಿ ವಿಶ್ವವಿದ್ಯಾನಿಲಯವು ಮಿಸ್ ಲಿಯೋನ್ ಅವರ ಪ್ರದರ್ಶನವನ್ನು ಸೇರಿಸದಂತೆ ನೋಡಿಕೊಳ್ಳಲು ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದ್ದಾರೆ. ಕ್ಯಾಂಪಸ್ ಒಳಗೆ ಅಥವಾ ಹೊರಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಒಕ್ಕೂಟಕ್ಕೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ನಡೆಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯುವಲ್ಲಿ ಕಾಲೇಜು ಒಕ್ಕೂಟವೂ ವಿಫಲವಾಗಿದೆ ಎನ್ನಲಾಗಿದೆ.

ಯಾಕೆ ನಿಷೇಧ?

ಕೊಚ್ಚಿನ್‌ನ ವಿಶ್ವವಿದ್ಯಾನಿಲಯದಲ್ಲಿ ನೂಕುನುಗ್ಗಲು ಸಂಭವಿಸಿ ಹಲವು ವಿದ್ಯಾರ್ಥಿಗಳ ಸಾವು ಸಂಭವಿಸಿದ ನಂತರ ರಾಜ್ಯ ಸರ್ಕಾರವು ಕಾಲೇಜು ಕ್ಯಾಂಪಸ್‌ಗಳಲ್ಲಿ ಹೊರಗಿನ ಡಿಜೆ ಪಾರ್ಟಿಗಳು, ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಕಳೆದ ವರ್ಷ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ (CUSAT) ಕಾಲ್ತುಳಿತದಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದರು. ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ನಡೆದ ನಿಖಿತಾ ಗಾಂಧಿ ನೇತೃತ್ವದ ಸಂಗೀತ ಕಛೇರಿಯಲ್ಲಿ ಈ ದುರಂತ ಸಂಭವಿಸಿತ್ತು. ಪಾಸ್‌ಗಳನ್ನು ಹೊಂದಿರದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ ಮಳೆ ಪ್ರಾರಂಭವಾದಾಗ ಪರಿಸ್ಥಿತಿಯು ಬದಲಾಗಿತ್ತು. ಹೊರಗೆ ಕಾಯುತ್ತಿದ್ದ ಜನರು ಆಶ್ರಯಕ್ಕಾಗಿ ಸಭಾಂಗಣಕ್ಕೆ ನುಗ್ಗಿದರು. ಇದು ಕಾಲ್ತುಳಿತಕ್ಕೆ ಕಾರಣವಾಗಿ ದುರಂತ ನಡೆದಿತ್ತು.


ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಸನ್ನಿ ಲಿಯೋನ್

43 ವರ್ಷದ ಸನ್ನಿ ಲಿಯೋನ್ ಬಾಲಿವುಡ್ ಚಿತ್ರಗಳಾದ ಜಿಸ್ಮ್ 2, ಜಾಕ್‌ಪಾಟ್, ಶೂಟೌಟ್ ಅಟ್ ವಡಾಲಾ ಮತ್ತು ರಾಗಿಣಿ ಎಂಎಂಎಸ್ 2ನಲ್ಲಿ ನಟಿಸಿದ್ದಾರೆ. ಅವರು ಇತ್ತೀಚೆಗೆ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಏಪ್ರಿಲ್‌ನಲ್ಲಿ ಈ ಚಲನಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಇದರ ಮುಹೂರ್ತ ಸಮಾರಂಭದ ದೃಶ್ಯವನ್ನು ಹಂಚಿಕೊಂಡಿದ್ದ ಅವರು, ಈ ಅದ್ಭುತ ಮಲಯಾಳಂ ಚಿತ್ರದ ಭಾಗವಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಅವರು ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದರು.

Continue Reading

ದೇಶ

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾವು ನಿಯಮಗಳ ಉಲ್ಲಂಘನೆ ಕುರಿತು ಇತ್ತೀಚೆಗೆ ತನಿಖೆ ನಡೆಸಲಾಗಿತ್ತು. ವರದಿಯ ಬಳಿಕ ಬ್ಯಾಂಕ್‌ಗೆ ಆರ್‌ಬಿಐ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಆರ್‌ಬಿಐ ನಿಯಮಗಳ ಉಲ್ಲಂಘನೆ, ನೋಟಿಸ್‌ಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿದ ಪ್ರತಿಕ್ರಿಯೆ ಆಧರಿಸಿ ದಂಡ ವಿಧಿಸಿದೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ.

VISTARANEWS.COM


on

RBI Penalty
Koo

ಮುಂಬೈ: ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ (Central Bank Of India) ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ (RBI Penalty) ವಿಧಿಸಿದೆ. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಿ ಜೂನ್‌ 11ರಂದು ಆರ್‌ಬಿಐ ಆದೇಶ ಹೊರಡಿಸಿದೆ.

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾವು ನಿಯಮಗಳ ಉಲ್ಲಂಘನೆ ಕುರಿತು ಇತ್ತೀಚೆಗೆ ತನಿಖೆ ನಡೆಸಲಾಗಿತ್ತು. ವರದಿಯ ಬಳಿಕ ಬ್ಯಾಂಕ್‌ಗೆ ಆರ್‌ಬಿಐ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಆರ್‌ಬಿಐ ನಿಯಮಗಳ ಉಲ್ಲಂಘನೆ, ನೋಟಿಸ್‌ಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿದ ಪ್ರತಿಕ್ರಿಯೆ ಆಧರಿಸಿ ದಂಡ ವಿಧಿಸಿದೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಇದೇ ಕಾರಣಕ್ಕಾಗಿ, ಸೊನಾಲಿ ಬ್ಯಾಂಕ್‌ ಪಿಎಲ್‌ಸಿಗೂ ಆರ್‌ಬಿಐ 96.4 ಲಕ್ಷ ರೂ. ದಂಡ ವಿಧಿಸಿದೆ. ಪ್ರತ್ಯೇಕವಾಗಿ ಸೊನಾಲಿ ಬ್ಯಾಂಕ್‌ ಪಿಎಲ್‌ಸಿಗೆ ದಂಡ ವಿಧಿಸಲಾಗಿದೆ.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI news: ನಿಯಮ ಪಾಲಿಸದ ಎಲ್‌&ಟಿ ಫೈನಾನ್ಸ್‌ಗೆ ₹2.5 ಕೋಟಿ ದಂಡ ವಿಧಿಸಿದ ಆರ್‌ಬಿಐ

Continue Reading

ದೇಶ

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Narendra Modi: ನರೇಂದ್ರ ಮೋದಿ ಅವರನ್ನು ನೋಡುತ್ತಲೇ ಜಾರ್ಜಿಯಾ ಮೆಲೋನಿ ಖುಷಿಯಾದರು. ನಗುತ್ತಲೇ ಕೈಮುಗಿದು ಮೋದಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಪ್ರಧಾನಿಯಾಗಿದ್ದಕ್ಕೂ ಮೆಲೋನಿ ಅವರು ಅಭಿನಂದನೆ ತಿಳಿಸಿದರು ಎಂದು ತಿಳಿದುಬಂದಿದೆ. ಇನ್ನು, ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ರೋಮ್:‌ 50ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ (G 7 Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಇಟಲಿಯ ಅಪುಲಿಯಾಗೆ ತೆರಳಿದ್ದಾರೆ. ಇನ್ನು, ಜಿ 7 ಸಭೆ ನಡೆಯುವ ಸ್ಥಳಕ್ಕೆ ತೆರಳಿದ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ನಮಸ್ತೆ ಎಂದು ಕೈಮುಗಿದು ಭಾರತದ ಸಂಪ್ರದಾಯದಂತೆ ಸ್ವಾಗತಿಸಿದ್ದಾರೆ. ಮೋದಿ ಹಾಗೂ ಮೆಲೋನಿ ಅವರು ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರೂ ಕೆಲ ನಿಮಿಷ ಆತ್ಮೀಯವಾಗಿ ಮಾತುಕತೆ ನಡೆಸಿರುವ ವಿಡಿಯೊ ವೈರಲ್‌ ಆಗಿದೆ.

ಭಾರತವು ಜಿ7 ರಾಷ್ಟ್ರಗಳ ಒಕ್ಕೂಟದ ಸದಸ್ಯ ರಾಷ್ಟ್ರವಾಗಿರದಿದ್ದರೂ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ. ಮೋದಿ ಅವರು ಶುಕ್ರವಾರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೂ ಹಲವು ನಾಯಕರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮೋದಿ+ಮೆಲೋನಿ= ಮೆಲೋಡಿ ಎಂದೇ ಟ್ರೋಲ್‌

ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಅವರ ಫೋಟೊ ಹಾಗೂ ವಿಡಿಯೊಗಳು ದೇಶದಲ್ಲಿ ಜಾಸ್ತಿ ಟ್ರೋಲ್‌ ಆಗುತ್ತಿರುತ್ತವೆ. ಅದರಲ್ಲೂ, ಮೋದಿ ಹಾಗೂ ಮೆಲೋನಿ ಎಂಬ ಪದಗಳನ್ನು ಸೇರಿಸಿ ಮೆಲೋಡಿ ಎಂದೇ ಕರೆಯುತ್ತಾರೆ. ಈಗ ಮೋದಿ ಅವರು ಇಟಲಿಗೆ ಹೋಗಿದ್ದು, ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮೆಲೋಡಿ ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

2023ರ ಡಿಸೆಂಬರ್‌ 2ರಂದು ಯುಎಇ ದೇಶದ ರಾಜಧಾನಿ ದುಬೈನಲ್ಲಿ ನಡೆದ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದೇ ವೇಳೆ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರ ಜತೆ ಸೆಲ್ಫಿ ತೆಗೆಸಿಕೊಂಡಿದ್ದರು. “ಸಿಒಪಿ28 ಸಭೆಯಲ್ಲಿ ಆತ್ಮೀಯ ಸ್ನೇಹಿತರು” ಎಂದು ಒಕ್ಕಣೆ ಬರೆದಿದ್ದರು. ಅಷ್ಟೇ ಅಲ್ಲ, ಮೆಲೋನಿ+ಮೋದಿ= ಮೆಲೋಡಿ ಎಂಬ ಅರ್ಥ ಬರುವ ಕಾರಣ ಮೆಲೋಡಿ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದರು. ಈ ಫೋಟೊ ಭಾರಿ ವೈರಲ್‌ ಆಗಿದ್ದು, ಸಾವಿರಾರು ಜನ ಪ್ರತಿಕ್ರಿಯಿಸಿದ್ದರು.

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ಜಾರ್ಜಿಯಾ ಮೆಲೋನಿ ಅವರು ಇದಕ್ಕೂ ಮೊದಲು ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

Continue Reading

ದೇಶ

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Raaj Kumar Anand: ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರ ಕುರಿತಂತೆ ಪ್ರತಿಕ್ರಿಯಿಸಬೇಕು ಎಂಬುದಾಗಿ ಸ್ಪೀಕರ್‌ ಅವರಿಗೆ ನೋಟಿಸ್‌ ನೀಡಿದ್ದರು. ಆದರೆ, ನೋಟಿಸ್‌ಗೆ ರಾಜ್‌ ಕುಮಾರ್‌ ಆನಂದ್‌ ಪ್ರತಿಕ್ರಿಯೆ ನೀಡಿರಲಿಲ್ಲ.

VISTARANEWS.COM


on

Raaj Kumar Anand
Koo

ನವದೆಹಲಿ: ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾದ ಬೆನ್ನಲ್ಲೇ ದೆಹಲಿ ವಿಧಾನಸಭೆ ಸದಸ್ಯತ್ವದಿಂದ ಶಾಸಕ ರಾಜ್‌ ಕುಮಾರ್‌ ಆನಂದ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ (Ram Niwas Goel) ಮಾಹಿತಿ ನೀಡಿದ್ದಾರೆ. ರಾಜ್‌ ಕುಮಾರ್‌ ಆನಂದ್‌ ಅವರು ಆಮ್‌ ಆದ್ಮಿ ಪಕ್ಷದ ನಾಯಕರಾಗಿದ್ದರು. ಅಲ್ಲದೆ, ಇವರು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಈಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

“ರಾಜ್‌ ಕುಮಾರ್‌ ಆನಂದ್‌ ಅವರಿಗೆ ಜೂನ್‌ 10ರೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ನೋಟಿಸ್‌ ನೀಡಲಾಗಿತ್ತು ಆದರೆ, ಅವರು ನೋಟಿಸ್‌ಗೆ ಇದುವರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಜೂನ್‌ 11ರಂದು ಹಾಜರಾಗಬೇಕು ಎಂದು ಕೂಡ ಅದೇ ನೋಟಿಸ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೂ, ಅವರು ಹಾಜರಾಗಿಲ್ಲ. ಜೂನ್‌ 14ರವರೆಗೆ ಹಾಜರಾಗಲು ಕೂಡ ಸಮಯಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅವರು ಹಾಜರಾಗಿಲ್ಲ. ಹಾಗಾಗಿ, ವಿಧಾನಸಭೆಯಿಂದ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪೀಕರ್‌ ತಿಳಿಸಿದ್ದಾರೆ.

ಯಾಕಾಗಿ ಅನರ್ಹ?

ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಹಾಗಾಗಿ, ಅವರಿಗೆ ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ ಅವರು ನೋಟಿಸ್‌ ಜಾರಿಗೊಳಿಸಿದ್ದರು. ರಾಜ್‌ ಕುಮಾರ್‌ ಆನಂದ್‌ ಅವರು 2020ರ ವಿಧಾನಸಭೆ ಚುನಾವಣೆಯಲ್ಲಿ ಆಪ್‌ನಿಂದ ಸ್ಪರ್ಧಿಸಿ, ಪಟೇಲ್‌ ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರಿಗೆ ಸಚಿವ ಸ್ಥಾನವನ್ನೂ ನೀಡಲಾಗಿತ್ತು.

ಏಪ್ರಿಲ್‌ 10ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ

ಕಳೆದ ಏಪ್ರಿಲ್‌ 10ರಂದು ರಾಜ್‌ ಕುಮಾರ್‌ ಆನಂದ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಆಮ್‌ ಆದ್ಮಿ ಪಕ್ಷವನ್ನೂ ತೊರೆದಿದ್ದರು. “ದೆಹಲಿಯ ಸಮಾಜ ಕಲ್ಯಾಣ ಖಾತೆ ಸಚಿವ ಸ್ಥಾನ ಹಾಗೂ ಆಮ್‌ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮಾರ್ಚ್‌ 21ರಂದೇ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವಾಗಿದೆ. ಇದುವರೆಗೆ ಅವರು ರಾಜೀನಾಮೆ ನೀಡಿಲ್ಲ. ಆಮ್‌ ಆದ್ಮಿ ಪಕ್ಷವು ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಭ್ರಷ್ಟರ ಜತೆ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಹಾಗಾಗಿ ಪಕ್ಷದಿಂದ ಹೊರಬಂದಿರುವೆ” ಎಂದು ರಾಜ್‌ ಕುಮಾರ್‌ ಆನಂದ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಆಮ್‌ ಆದ್ಮಿ ಪಕ್ಷದ ಕುರಿತು ರಾಜ್‌ ಕುಮಾರ್‌ ಆನಂದ್‌ ಅವರು ಹಲವು ಆರೋಪ ಮಾಡಿದರು. “ಆಪ್‌ನಲ್ಲಿ ದಲಿತ ಸಚಿವರು, ಶಾಸಕರು ಹಾಗೂ ಕೌನ್ಸಿಲರ್‌ಗಳಿಗೆ ಗೌರವ ಇಲ್ಲ. ಪಕ್ಷದಲ್ಲಿ ದಲಿತರಿಗೆ ಮೋಸ ಮಾಡಲಾಗುತ್ತಿದೆ. ಇಂತಹ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ. ನಾನು ರಾಜೀನಾಮೆ ನೀಡಿರುವ ಸಂದರ್ಭದ ಕುರಿತು ಮಾತನಾಡಬೇಕಿಲ್ಲ. ಯಾವಾಗ ಹೈಕೋರ್ಟ್‌ ಜಾಮೀನು ಅರ್ಜಿ ತಿರಸ್ಕರಿಸಿತೋ, ದೊಡ್ಡ ಪ್ರಮಾದವೇ ನಡೆದಿದೆ ಎಂಬುದು ತಿಳಿಯಿತು. ಹಾಗಾಗಿ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Continue Reading
Advertisement
Sunny Leone
ಸಿನಿಮಾ11 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ14 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ22 mins ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ23 mins ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು28 mins ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ31 mins ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ1 hour ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ1 hour ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ2 hours ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ2 hours ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌