Gujarat Election Results | ಗುಜರಾತ್‌ನಲ್ಲಿ ಬಿಜೆಪಿಯ ಚಾರಿತ್ರಿಕ ಜಯಭೇರಿಗೆ 10 ಕಾರಣಗಳೇನು? - Vistara News

ದೇಶ

Gujarat Election Results | ಗುಜರಾತ್‌ನಲ್ಲಿ ಬಿಜೆಪಿಯ ಚಾರಿತ್ರಿಕ ಜಯಭೇರಿಗೆ 10 ಕಾರಣಗಳೇನು?

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು, ಅಮಿತ್‌ ಶಾ ಅವರ ಕಾರ್ಯತಂತ್ರ, ಪೂರ್ವಸಿದ್ಧತೆಯ ಪರಿಣಾಮ ಗುಜರಾತ್‌ನಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಪಕ್ಷದ ಸಾಧನೆಗೆ 10 ಕಾರಣಗಳ ವಿವರ ಇಲ್ಲಿದೆ.

VISTARANEWS.COM


on

Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್:‌ ಗುಜರಾತ್‌ ವಿಧಾನಸಭೆಯ 182 ಕ್ಷೇತ್ರಗಳ ಪೈಕಿ 158 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸತತ 7ನೇ ಬಾರಿಗೆ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ. (Gujarat Election Results) ಮತಗಳ ಹಂಚಿಕೆಯಲ್ಲಿ ದಾಖಲೆಯ 52.9% ಸಿಂಹಪಾಲನ್ನು ಗಳಿಸಿದೆ. ಪಶ್ಚಿಮ ಕರಾವಳಿಯ ಗುಜರಾತ್‌ನ ರಾಜಕಾರಣದಲ್ಲಿಯೇ ಯಾವೊಂದು ಪಕ್ಷವೂ ಇದುವರೆಗೆ ಇಂಥ ಅಮೋಘ ಗೆಲುವನ್ನು ಕಂಡಿಲ್ಲ. ಈ ಹಿಂದೆ 1985ರಲ್ಲಿ ಕಾಂಗ್ರೆಸ್‌ 149 ಕ್ಷೇತ್ರಗಳಲ್ಲಿ ಗೆದ್ದಿತ್ತು. ಇಂದಿರಾ ಗಾಂಧಿ ನಿಧನದ ಬಳಿಕ ನಡೆದ ಚುನಾವಣೆಯಾದ್ದರಿಂದ ಅನುಕಂಪದ ಅಲೆಯಲ್ಲಿ ಪಕ್ಷ ಪ್ರಚಂಡ ಬಹುಮತ ಗಳಿಸಿತ್ತು. ಆಗ ಬಿಜೆಪಿ ಕೇವಲ ಎರಡು ಕ್ಷೇತ್ರಗಳನ್ನು ತನ್ನದಾಗಿಸಿತ್ತು. ಇಂದು ಕಾಂಗ್ರೆಸ್‌ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾಗಾದರೆ ಬಿಜೆಪಿಯ ಚಾರಿತ್ರಿಕ ಗೆಲುವಿನ ಹಿಂದಿನ 10 ಕಾರಣಗಳ ವಿವರ ಇಲ್ಲಿದೆ.

ಮುಂದುವರಿದ ಮೋದಿ ಮ್ಯಾಜಿಕ್

ಇದು ನಿಸ್ಸಂದೇಹವಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಗುಜರಾತ್‌ನ ಜನತೆ ಇಟ್ಟಿರುವ ಅದಮ್ಯವಾದ ಪ್ರೀತಿ, ವಿಶ್ವಾಸ, ಗೌರವಕ್ಕೆ ಸಾಕ್ಷಿ. ಲೋಕಸಭೆ ಚುನಾವಣೆ ವರ್ಷಕ್ಕೆ ಮುನ್ನ ತವರೂರಿನ ಜನತೆ, ಪ್ರಧಾನಿ ಮೋದಿಯವರಿಗೆ ಐತಿಹಾಸಿಕ ಮತ್ತು ಅವಿಸ್ಮರಣೀಯವಾದ ಫಲಿತಾಂಶದ ಕೊಡುಗೆಯನ್ನು ನೀಡಿದ್ದಾರೆ.

ಪ್ರಧಾನಿ ಮೋದಿಯವರ 27 ರ‍್ಯಾಲಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೊ ಯಾತ್ರೆಯಲ್ಲಿ ಗುಜರಾತ್‌ಗೆ ಒಂದೇ ಸಲ ಭೇಟಿ ಕೊಟ್ಟು ಕೈ ತೊಳೆದುಕೊಂಡಿದ್ದರು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಬ್ಬರೇ ರಾಜ್ಯದಲ್ಲಿ ಬರೋಬ್ಬರಿ ೨೭ ರ‍್ಯಾಲಿಗಳನ್ನು ನಡೆಸಿದ್ದರು. ಬಿಜೆಪಿ ಚಾಣಕ್ಯ ಅಮಿತ್‌ ಶಾ ಅವರಂತೂ ಎರಡು ತಿಂಗಳು ಗುಜರಾತ್‌ನಲ್ಲಿಯೇ ವಾಸ್ತವ್ಯ ಹೂಡಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ ಹಲವು ಪ್ರಮುಖರು ಗುಜರಾತ್‌ನಲ್ಲಿ ಸಾಲು ಸಾಲು ರ‍್ಯಾಲಿ, ಸಮಾವೇಶಗಳನ್ನು ಕೈಗೊಳ್ಳುವ ಮೂಲಕ ಮತದಾರರ ಒಲವು ಬೇರೆಡೆ ವಾಲದಂತೆ ತಡೆಯಲು ಯತ್ನಿಸಿದ್ದರು.
ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ೧೬ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ೫೦ ಕಿ.ಮೀ ಮೆಗಾ ರೋಡ್‌ ಶೋ (Modi Mega Roadshow) ನಡೆಸಿದ್ದು, ಹೊಸ ದಾಖಲೆಯಾಗಿತ್ತು. ಇಡೀ ಚುನಾವಣಾ ಪ್ರಚಾರ ಮೋದಿ Vs ಇತರರು ಎಂದಾಗಿತ್ತು. ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಮುಖವನ್ನೂ ನೋಡದೆ ಮತದಾರರು ಬಿಜೆಪಿಗೆ ಮತ ಚಲಾಯಿಸಿದ್ದರು. ಡಿಸೆಂಬರ್‌ 1 ರಂದು ಅಹಮದಾಬಾದ್‌ನಲ್ಲಿ ಬೃಹತ್‌ ಸಮಾವೇಶ ನಡೆಸಿದ್ದರು.

ಬಿಜೆಪಿಯ ಸಂಘಟನಾ ಬಲ, ಪೂರ್ವಸಿದ್ಧತೆ

೨೦೨೪ರಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ ವಿಧಾನಸಭೆಯ ಹಣಾಹಣಿ ಬಿಜೆಪಿಗೆ ಅತ್ಯಂತ ಪ್ರತಿಷ್ಠೆಯ ಪಣವಾಗಿತ್ತು. ಕಳೆದ ಸುಮಾರು ಮೂರು ದಶಕಗಳಿಂದ ಅಧಿಕಾರದಲ್ಲಿದ್ದರೂ, ಈ ಚುನಾವಣೆಯನ್ನು ಕೇಸರಿ ಪಡೆ ಯಾವುದೇ ಕಾರಣಕ್ಕೂ ಕಡೆಗಣಿಸಿರಲಿಲ್ಲ. ಪಕ್ಷ ಸಂಘಟನೆಯ ವಿಚಾರದಲ್ಲಿ ಬಿಜೆಪಿಯನ್ನು ಗುಜರಾತ್‌ನಲ್ಲಿ ಮೀರಿಸುವ ಮತ್ತೊಂದು ಪಕ್ಷ ಇಲ್ಲ. ಕಾಂಗ್ರೆಸ್‌, ಆಮ್‌ ಆದ್ಮಿಗೆ ಸಂಘಟನೆ ದುರ್ಬಲವಾಗಿತ್ತು. ನವೆಂಬರ್‌ನಲ್ಲಿ ಅಭ್ಯರ್ಥಿಗಳ ಮೊದಲ ಎರಡು ಪಟ್ಟಿ ಬಿಡುಗಡೆಗೊಳಿಸಿ ಬಂಡಾಯವನ್ನು ಹತ್ತಿಕ್ಕಿತ್ತು. ಮತದಾನಕ್ಕೆ ಕನಿಷ್ಠ 6 ತಿಂಗಳು ಇರುವಾಗಲೇ ಬಿಜೆಪಿ ಸೌರಾಷ್ಟ್ರ ವಲಯದಲ್ಲಿ ಭಾರಿ ಪೂರ್ವ ಸಿದ್ಧತೆ ಆರಂಭಿಸಿತ್ತು. ಪ್ರತಿ ಚುನಾವಣೆಯೂ ಕೊನೆಯ ಚುನಾವಣೆ ಎಂಬಂತೆ, ಮಾಡು-ಇಲ್ಲವೇ ಮಡಿ ಎಂಬ ರಣತಂತ್ರವನ್ನು ಬಿಜೆಪಿ ಜಾರಿಗೊಳಿಸಿತ್ತು. ಪ್ರತಿ ಮತಗಟ್ಟೆಯಲ್ಲಿಯೂ ಬಿಜೆಪಿ ಈ ಸಲವೂ “ಪನ್ನಾ ಪ್ರಮುಖ್‌ʼ ಜಾಲವನ್ನು ಹೆಣೆದಿತ್ತು. ಪ್ರತಿ ಮತಗಟ್ಟೆಯ ಮೂಲಕ ಪ್ರತಿ ಮತದಾರರನ್ನೂ ತಲುಪಿತ್ತು. ತಳಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆಗೆ ಮಣೆ ಹಾಕಿತ್ತು.

ಹೊಸಬರಿಗೆ ಮಣೆ ಹಾಕಿ, ಆಡಳಿತ ವಿರೋಧಿ ಅಲೆ ಹತ್ತಿಕ್ಕುವ ತಂತ್ರ

ಸುದೀರ್ಘ ಕಾಲದಿಂದ ಅಧಿಕಾರದಲ್ಲಿ ಯಾವುದೇ ಪಕ್ಷ ಇದ್ದಾಗ ಆಡಳಿತ ವಿರೋಧಿ ಅಲೆ ಸಹಜ. ಅದನ್ನು ನಿಯಂತ್ರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಗುಜರಾತ್‌ನಲ್ಲಿ 42ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಸಚಿವ ಸಂಪುಟದ ಐವರು ಸಚಿವರಿಗೂ ಟಿಕೆಟ್‌ ಕೊಟ್ಟಿರಲಿಲ್ಲ. ಹೊಸ ಮುಖಗಳಿಗೆ ಟಿಕೆಟ್‌ ಕೊಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಯಶಸ್ವಿಯಾಗಿ ಎದುರಿಸಿತ್ತು. ಹಾಗಂತ ಸಿಎಂ ಬದಲಿಸುವ ತಂತ್ರ ಹಿಮಾಚಲಪ್ರದೇಶದಲ್ಲಿ ಪಕ್ಷಕ್ಕೆ ಪ್ರಯೋಜನವಾಗಿಲ್ಲ ಎಂಬುದನ್ನೂ ಇಲ್ಲಿ ಗಮನಿಸಬಹುದು. ಮಾಜಿ ಸಿಎಂ ವಿಜಯ್‌ ರೂಪಾನಿ, ಮಾಜಿ ಗೃಹ ಸಚಿವ ಪ್ರದೀಪ್‌ಸಿನ್ಹ್‌ ಜಡೇಜಾ, ಇಂಧನ ಸಚಿವ ಸೌರಭ್‌ ದಲಾಲ್‌, ಶಿಕ್ಷಣ ಸಚಿವ ಭೂಪೇಂದ್ರಸಿನ್ಹ್‌ ಚುದಾಸ್ಮ ಅವರಿಗೂ ಟಿಕೆಟ್‌ ನಿರಾಕರಿಸಲಾಗಿತ್ತು. ಬಿಜೆಪಿ ಗುಜರಾತ್‌ನಲ್ಲಿ ಈ ಸಲ ಮಹಿಳಾ ಮತದಾರರ ಮನಗೆಲ್ಲಲು ೧೭ ಮಂದಿ ಮಹಿಳೆಯರಿಗೆ ಪಕ್ಷದ ಟಿಕೆಟ್‌ ವಿತರಿಸಿತ್ತು.

ಬಿಜೆಪಿಗೆ ಕಾಂಗ್ರೆಸ್‌ ನ 20 ಶಾಸಕರ ವಲಸೆ

ಕಳೆದ 2017ರ ಬಳಿಕ ಕಾಂಗ್ರೆಸ್‌ ನ 20 ಶಾಸಕರು ಬಂಡಾಯವೆದ್ದು ಬಿಜೆಪಿಗೆ ಸೇರಿದ್ದರು. ಚುನಾವಣೆ ಸಮೀಪಿಸುತ್ತಿರುವಾಗ ಹಲವು ಪ್ರಮುಖ ನಾಯಕರು ಕೈ ಪಾಳೆಯ ತೊರೆದು ಕೇಸರಿ ಪಕ್ಷದ ಕೈ ಹಿಡಿದಿದ್ದರು. ಹಾರ್ದಿಕ್‌ ಪಟೇಲ್, ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಪಡಸಾಲೆಗೆ ಸೇರಿದ್ದರು. ಗೆಲ್ಲುವ ಕುದುರೆಗಳನ್ನು ಯಾವುದೇ ಪಕ್ಷ, ಮೂಲವಾದರೂ ಸರಿ ಎಂದು ಬಿಜೆಪಿ ಸ್ವಾಗತಿಸಿತ್ತು.

ಪಾಟೀದಾರ ಮತಗಳ ನಿರ್ವಹಣೆ

ಹಾರ್ದಿಕ್‌ ಪಟೇಲ್‌ ಸಾರಥ್ಯದಲ್ಲಿ ನಡೆದ ಮೀಸಲಾತಿ ಹೋರಾಟದಲ್ಲಿ ಪಾಟೀದಾರ ಸಮುದಾಯ, ಕ್ರಮೇಣ ಕಾಂಗ್ರೆಸ್‌ ಕಡೆಗೆ ವಾಲುತ್ತಿತ್ತು. ಆದರೆ ಈ ಸಲ ಪಾಟೀದಾರ್‌ ಸಮುದಾಯದ ಪ್ರಬಲ ನಾಯಕರಿಗೆ ಪಕ್ಷ ಟಿಕೆಟ್‌ ಕೊಟ್ಟಿತ್ತು. ಸಮುದಾಯದ ಆಕ್ರೋಶವನ್ನು ತಣ್ಣಗಾಗಿಸಿತ್ತು. ಬುಡಕಟ್ಟು ಸಮುದಾಯ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೂ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಿತ್ತು.

ಹಿಂದುತ್ವ, ರಾಷ್ಟ್ರೀಯತೆ, ಗುಜರಾತ್‌ ಅಸ್ಮಿತೆಯ ಅಲೆ

ಗುಜರಾತ್‌ನಲ್ಲಿ ನರೇಂದ್ರ ಮೋದಿಯವರ ಅಭಿವೃದ್ಧಿ ಯೋಜನೆಗಳ ಜತೆಗೆ ಹಿಂದುತ್ವ, ರಾಷ್ಟ್ರೀಯತೆ, ಗುಜರಾತ್‌ ಅಸ್ಮಿತೆ ಕೂಡ ಬಿಜೆಪಿಗೆ ವರವಾಗಿ ಪರಿಣಮಿಸಿದೆ. ಈ ಹಿಂದಿನ ಚುನಾವಣೆಗಳಂತೆ ಈ ಸಲವೂ ಫಲಪ್ರದವಾಗಿದೆ. ರಾಜ್ಯದಲ್ಲಿ ಪ್ರತಿಪಕ್ಷ ಬಹುತೇಕ ನಿರ್ನಾಮವಾಗಿದೆ.

ಕೋವಿಡೋತ್ತರ ಪರಿಹಾರ ಕಾರ್ಯಾಚರಣೆ

ಕೋವಿಡ್-‌19 ಬಿಕ್ಕಟ್ಟಿನ ಬಳಿಕ ಗುಜರಾತ್‌ ವಿಧಾನಸಭೆಗೆ ನಡೆದ ಮೊದಲ ಚುನಾವಣೆ ಇದಾಗಿದೆ. ರಾಜ್ಯದಲ್ಲಿ ಸಂಭವಿಸಿದ್ದ ಸಾವು-ನೋವುಗಳಿಂದ ಬಿಜೆಪಿಗೆ‌ ಆಡಳಿತ ವಿರೋಧಿ ಅಲೆ ತೀವ್ರವಾಗಿ ಹಿನ್ನಡೆ ಆಗಬಹುದು ಎಂದು ಭಾವಿಸಲಾಗಿತ್ತು. ಆದರೆ ಬಿಜೆಪಿ ಇದನ್ನು ಗ್ರಹಿಸಿಕೊಂಡು ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರನ್ನು ಬದಲಿಸಿತ್ತು. ಈ ಮೂಲಕ ಮತದಾರರ ಆಕ್ರೋಶವನ್ನು ತಣ್ಣಗಾಗಿಸಿತ್ತು. ಇದಾದ ಬಳಿಕ, ಕೋವಿಡ್-‌19 ನಿರ್ವಹಣೆಯ ವೈಫಲ್ಯ ಚುನಾವಣಾ ವಿಷಯದಿಂದಲೇ ಕಳೆದು ಹೋಗಿತ್ತು!

ಕಾಂಗ್ರೆಸ್‌, ಆಮ್‌ ಆದ್ಮಿಯ ದಯನೀಯ ವೈಫಲ್ಯ

ಕಾಂಗ್ರೆಸ್‌ ಕಳೆದ 2017ರ ವಿಧಾನಸಭೆ ಚುನಾವಣೆಯಲ್ಲಿ 77 ಸೀಟುಗಳನ್ನು ಗೆದ್ದು ಬೀಗಿತ್ತು. ಆಗ 41.4 % ಮತಗಳೊಂದಿಗೆ ಎರಡು ದಶಕಗಳಲ್ಲೇ ಉತ್ತಮ ಪ್ರದರ್ಶನವನ್ನು ದಾಖಲಿಸಿತ್ತು. ಆದರೆ ಈ ಸಲ ಅತ್ಯಂತ ಕಳಪೆ ಮಟ್ಟದ ಸಾಧನೆಯೊಂದಿಗೆ ನೆಲಕಚ್ಚಿದೆ. ಮತಗಳ ಪಾಲು 27.04%ಕ್ಕೆ ಕುಸಿದಿದೆ. ದುರ್ಬಲ ಕಾಂಗ್ರೆಸ್‌ ಆಡಳಿತ ವಿರೋಧಿ ಅಲೆಯ ಲಾಭವನ್ನು ಪಡೆಯಲೂ ಅಶಕ್ತವಾಗಿತ್ತು. ಆಮ್‌ ಆದ್ಮಿ ಪ್ರಮುಖ ಪ್ರತಿಪಕ್ಷವಾಗಿ ಅಸ್ತಿತ್ವ ಕಂಡುಕೊಳ್ಳುವುದಾಗಿ ಹೇಳಿಕೊಂಡಿದ್ದರೂ, ವಿಫಲವಾಗಿತ್ತು. ಹೀಗಾಗಿ ಬಿಜೆಪಿಗೆ ಎದುರಾಳಿಗಳೇ ಇದ್ದಿರಲಿಲ್ಲ. ಎಲ್ಲ ಗುಡ್ಡಗಾಡು ಪ್ರದೇಶಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಿದೆ.

2017ರಲ್ಲಿ ಸೋತಿದ್ದ ಕ್ಷೇತ್ರಗಳಿಗೆ ಆದ್ಯತೆ

ಬಿಜೆಪಿ ಕಳೆದ 2017ರ ಚುನಾವಣೆಯಲ್ಲಿ ಸೋತಿದ್ದ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲು ಆದ್ಯತೆ ನೀಡಿತ್ತು.ಮೋರ್ಬಿ, ಸುರೇಂದ್ರನಗರ್‌, ಸೋಮನಾಥ್‌ ಮತ್ತು ಆಮ್ರೇಲಿ ವಲಯದಲ್ಲಿ ಕಳೆದು ಹೋಗಿದ್ದ ಸೀಟುಗಳನ್ನು ಮರು ವಶಪಡಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಯತ್ನಿಸಿತ್ತು. ಇದರಲ್ಲಿ ಬಿಜೆಪಿ ಯಶಸ್ವಿಯಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

West Bengal Violence: ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

West Bengal Violence
Koo

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆ (Lok Sabha Election 2024)ಯ ಆರನೇ ಹಂತದ ಮತದಾನಕ್ಕೂ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ(West Bengal Violence) ನಡೆದಿದೆ. ನಂದಿಗ್ರಾಮ ಜಿಲ್ಲೆಯಲ್ಲಿ ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತೆಯೊಬ್ಬರ ಹತ್ಯೆ ನಡೆದಿದ್ದು, ಇದರಲ್ಲಿ ಟಿಎಂಸಿ(TMC) ಮುಖಂಡರದ್ದೇ ಕೈವಾಡ ಇದೆ ಎಂದು ಆರೋಪಿಸಿ ಬಿಜೆಪಿ(BJP) ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣ ತರಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.

ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಜಿಲ್ಲೆಯ ಸೋನಾಚೂರ ಪ್ರದೇಶದಲ್ಲಿ ಹಿಂಸಾಚಾರದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಪೊಲೀಸರನ್ನು ನಿಯೋಜಿಸಲಾಗಿದೆ.

ಬಿಜೆಪಿ ಆರೋಪ ಏನು?

ಚುನಾವಣೆ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರು ಸೇರದಂತೆ ಅನೇಕ ಬಿಜೆಪಿಗರು ಸೋನಾಚೂರ ಪ್ರದೇಶದಲ್ಲಿ ಸಮಾಜದ್ರೋಹಿ ಚಟುವಟಿಕೆ ವಿರುದ್ಧ ನಿಗಾ ವಹಿಸುವ ನಿಟ್ಟಿನಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮೋಟರ್‌ ಬೈಕ್‌ನಲ್ಲಿ ಬಂದ ಕೆಲವು ಟಿಎಂಸಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋತಿಬಾಲಾ ಎಂಬ ಕಾರ್ಯಕರ್ತೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಆಕೆಯ ಮಗ ಸೇರಿದಂತೆ ಅನೇಕರಿಗೆ ಗಂಭೀರ ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಪ್ರತಿಕ್ರಿಯಿಸಿದ್ದು, ಕಳೆದ ವಾರ ಹಲ್ದೀಯಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ತಮ್ಮ ಸೋಲಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಘೋಷಣೆ ಹೊರಡಿಸಿದ್ದರು. ಇದೀಗ ಅದನ್ನು ಮಾಡಿ ತೋರಿಸಿದ್ದಾರೆ ಎಂದು ಎಕ್ಸ್‌ ಮೂಲಕ ಕಿಡಿ ಕಾರಿದ್ದಾರೆ. ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದೆ

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading

ದೇಶ

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Narendra Modi: “ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂಬುದಾಗಿ ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಗೆ ನರೇಂದ್ರ ಮೋದಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಾಕಿಸ್ತಾನ, ಜಮ್ಮು-ಕಾಶ್ಮೀರ, ಅಣುಬಾಂಬ್‌ ಸೇರಿ ಹಲವು ವಿಷಯಗಳು ಮುನ್ನೆಲೆಗೆ ಬರುತ್ತಿವೆ. ಅದರಲ್ಲೂ, “ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ. ಭಾರತವು ಪಾಕಿಸ್ತಾನಕ್ಕೆ ಗೌರವ ಕೊಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿದ ಹೇಳಿಕೆಗೆ ಖುದ್ದು ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿದೆ. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದು, “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯೂ ಮಣಿಶಂಕರ್‌ ಅಯ್ಯರ್‌ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂಬುದಾಗಿ ಚುನಾವಣೆ ರ‍್ಯಾಲಿಯಲ್ಲಿ ಹೇಳಿದ್ದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Continue Reading

ಪ್ರಮುಖ ಸುದ್ದಿ

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Ayodhya Ram Mandir: ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

VISTARANEWS.COM


on

ayodhya ram mandir 1
Koo

ಚಿಕ್ಕಮಗಳೂರು: ಅಯೋಧ್ಯೆ ಶ್ರೀರಾಮ ಮಂದಿರದ (Ayodhya Ram Mandir) ಆರಾಧ್ಯ ಮೂರ್ತಿ ಬಾಲಕ ರಾಮ (Balak Ram) ನಿಗೆ ಬೆಳ್ಳಿಯ ಬಿಲ್ಲು-ಬಾಣ (Silver bow, silver Arrow) ಸಮರ್ಪಿಸಲಾಗುತ್ತಿದೆ. ಬೆಂಗಳೂರು ಮೂಲದ ಭಕ್ತರೊಬ್ಬರು ಬೆಳ್ಳಿಯ ಬಿಲ್ಲು-ಬಾಣ ಸಮರ್ಪಣೆ ಮಾಡುತ್ತಿದ್ದು, ಅದಕ್ಕೂ ಮೊದಲು ಶೃಂಗೇರಿಯ ಶಾರದಾ ಪೀಠದಲ್ಲಿ (Sringeri Sharada Peetham) ಶ್ರೀ ಗುರುಗಳ ಮುಂದೆ ಅದನ್ನು ಪ್ರದರ್ಶಿಸಿದರು.

ಅತ್ಯಂತ ಸುಂದರ ಹಾಗೂ ಮನಮೋಹಕವಾದ, ಬೆಳ್ಳಿಯಿಂದ ಮಾಡಲಾದ ಈ ಬಿಲ್ಲು-ಬಾಣವನ್ನು ಶೃಂಗೇರಿ ಹಿರಿಯ ಹಾಗೂ ಕಿರಿಯ ಶ್ರೀಗಳು ಪೂಜಿಸಿ ಕಳಿಸಿಕೊಟ್ಟರು. ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

ರಾಮ ಮಂದಿರದ ಪ್ರತಿಷ್ಠಾಪನೆಗೆ ಶೃಂಗೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಶ್ರೀಗಳು ಶುಭಹಾರೈಕೆಯ ಸಂದೇಶವನ್ನು ಕಳಿಸಿಕೊಟ್ಟಿದ್ದರಲ್ಲದೆ, ಆ ದಿನ ಮಠದಲ್ಲಿ ಹಾಗೂ ಶಾಖಾಮಠಗಳಲ್ಲಿ ಶ್ರೀರಾಮನ ಆರಾಧನೆಗೆ ನಿರ್ದೇಶನ ನೀಡಿದ್ದರು.

ಚಿನ್ನದ ಬಿಲ್ಲು ಬಾಣ

ಪ್ರಸ್ತುತ ಅಯೋಧ್ಯಾ ರಾಮನ ಕೈಯಲ್ಲಿ ಚಿನ್ನದ ಬಿಲ್ಲು ಬಾಣ ಇವೆ. ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೂ ಮುನ್ನವೇ ಹಲವು ಅಮೂಲ್ಯ ಉಡುಗೊರೆಗಳು ಅಯೋಧ್ಯೆಯನ್ನು ತಲುಪಿದ್ದವು. ದೇಶಾದ್ಯಂತ ಹಲವು ಭಕ್ತರು ಅನೇಕ ಉಡುಗೊರೆಗಳನ್ನು ಶ್ರೀರಾಮನಿಗಾಗಿ ಅಯೋಧ್ಯೆಗೆ ಕಳಿಸಿದ್ದರು. ಅತ್ತ ನೇಪಾಳದಿಂದಲೂ ಅತ್ಯಮೂಲ್ಯ ವಸ್ತುಗಳು ಅಯೋಧ್ಯೆ ಸೇರಿದ್ದವು. ಶ್ರೀರಾಮನಿಗಾಗಿ ಚಿನ್ನದ ಬಿಲ್ಲು (golden bow), ಚಿನ್ನದ ಬಾಣ (golden arrow), ಚಿನ್ನದ ಘಂಟೆ (golden bell) ಸೇರಿದಂತೆ ಹಲವು ಅಮೂಲ್ಯ ವಸ್ತುಗಳು ಬಂದಿದ್ದವು.

ಒನವಿಲ್ಲು ಸಮರ್ಪಣೆ

ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು (Padmanabhaswamy Temple) ಕೂಡ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ (Ayodhya Ram Mandir) ಪ್ರತಿಷ್ಠಾಪನೆ ಸಮಾರಂಭದ ಸಂದರ್ಭದಲ್ಲಿ ಸಾಂಪ್ರದಾಯಿಕ ಬಿಲ್ಲು ‘ಒನವಿಲ್ಲು’ (Onavillu) ಸಮರ್ಪಿಸಿತ್ತು. ‘ಒನವಿಲ್ಲು’ ಮೂರು ಶತಮಾನಗಳ ಹಳೆಯ ಸಂಪ್ರದಾಯದ ಭಾಗವಾಗಿ ಭಗವಾನ್ ಶ್ರೀ ಪದ್ಮನಾಭನಿಗೆ ಸಮರ್ಪಿತವಾದ ವಿಧ್ಯುಕ್ತ ಅರ್ಪಣೆಯಾಗಿದೆ. ಇಲ್ಲಿನ ಸ್ಥಳೀಯರು ಇದನ್ನು ಪ್ರತಿ ವರ್ಷ ‘ತಿರು ಓಣಂ’ ಹಬ್ಬದಂದು ಪದ್ಮನಾಭ ದೇವಸ್ಥಾನಕ್ಕೆ ಅರ್ಪಿಸುತ್ತಾರೆ. ಭಕ್ತರಿಂದ ಪವಿತ್ರವೆಂದು ಪರಿಗಣಿಸಲ್ಪಟ್ಟಿರುವ ‘ವಿಲ್ಲು’ ಸಾಮಾನ್ಯವಾಗಿ ಬಿಲ್ಲಿನ ಆಕಾರದ ಮರದ ಫಲಕವಾಗಿದ್ದು, ಅನಂತಶಯನಂ ಪೌರಾಣಿಕ ಸರ್ಪ ಅನಂತ, ದಶಾವತಾರಂ ವಿಷ್ಣುವಿನ ಅವತಾರಗಳು, ಶ್ರೀರಾಮ ಪಟ್ಟಾಭಿಷೇಕ ಮುಂತಾದ ವರ್ಣಚಿತ್ರಗಳನ್ನು ಹೊಂದಿದೆ.

ಈವರೆಗೆ ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿದವರ ಸಂಖ್ಯೆ 1.5 ಕೋಟಿ!

ಭಗವಾನ್ ಶ್ರೀರಾಮನ (sriram) ಜನ್ಮ ಸ್ಥಳವಾದ ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ರಾಮಲಲ್ಲಾನ (ram lalla) ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಪ್ರತಿನಿತ್ಯ ಸುಮಾರು ಒಂದು ಲಕ್ಷ ಮಂದಿ ಭೇಟಿ ನೀಡುತ್ತಿದ್ದಾರೆ. ದೇವಾಲಯ ಉದ್ಘಾಟನೆಯಾದ ಬಳಿಕ ಈವರೆಗೆ ಸುಮಾರು 1.5 ಕೋಟಿ ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Theertha Kshetra Trust) ಪ್ರಧಾನ ಕಾರ್ಯದರ್ಶಿ (Principal Secretary) ಚಂಪತ್ ರಾಯ್‌ (Champat Rai), ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಸರಿಸುಮಾರು 1.5 ಕೋಟಿ ಜನರು ರಾಮ್ ಲಲ್ಲಾನ ದರ್ಶನ ಪಡೆದಿದ್ದಾರೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಹೊಸದಾಗಿ ನಿರ್ಮಿಸಲಾದ ಭವ್ಯವಾದ ರಾಮಜನ್ಮಭೂಮಿ ದೇವಾಲಯದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಚಿಸಿರುವ 51 ಇಂಚು ಎತ್ತರದ ಭಗವಾನ್ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಜನವರಿ 22ರಂದು ಎಲ್ಲಾ ಪಂಗಡಗಳಿಗೆ ಸೇರಿದ ಸುಮಾರು 8,000 ಗಣ್ಯರ ಸಮ್ಮುಖದಲ್ಲಿ ನಡುವೆ ನಡೆಯಿತು. ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

ಇದನ್ನೂ ಓದಿ: Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Continue Reading

ವಾಣಿಜ್ಯ

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Highest Paid CEO: 2024ರ ಹಣಕಾಸು ವರ್ಷದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಐಟಿ ಸಿಇಒ ವಿಪ್ರೊದ ಥಿಯೆರ್ರಿ ಡೆಲಾಪೋರ್ಟೆ ಅವರು ಏಪ್ರಿಲ್ 6ರಂದು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ 32 ವರ್ಷಗಳ ಕಾಲ ಅನುಭವಿ ಶ್ರೀನಿವಾಸ್ ಪಾಲ್ಲಿಯಾ ಅವರನ್ನು
ನೇಮಿಸಲಾಗಿದೆ. ಬೃಹತ್‌ ಐಟಿ ಕಂಪನಿಗಳ ಸಿಇಒಗಳು ಹೆಚ್ಚು ಸಂಬಳ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Highest Paid CEO
Koo

ವಿಪ್ರೋದ (Wipro) ಮಾಜಿ ಸಿಇಒ (ex-ceo) ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ (Thierry Delaporte) ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ (Highest Paid CEO) ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ. ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ. ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

ಮತ್ತೊಂದೆಡೆ ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ ಅವರು ಹೆಚ್ಚುತ್ತಿರುವ ಏಕೀಕೃತ ನಿವ್ವಳ ಲಾಭದ ಮೇಲೆ ಶೇ. 0.35ರಷ್ಟು ಕಮಿಷನ್‌ಗೆ ಅರ್ಹರಾಗಿದ್ದಾರೆ. ಕಂಪನಿಯ ಹಣಕಾಸಿನ ವರ್ಷದಲ್ಲಿ ನಷ್ಟವನ್ನು ಅನುಭವಿಸಿದ ಕಾರಣ ಅದನ್ನು ತಡೆಹಿಡಿಯಲಾಗಿದೆ.

ಕಂಪನಿಯ ಆದಾಯ ಇಳಿಕೆ

ಆರ್ಥಿಕ ವರ್ಷ 2024ರ ಪೂರ್ಣ ವರ್ಷದಲ್ಲಿ ವಿಪ್ರೋ ಆದಾಯವು ವರ್ಷಕ್ಕೆ 90,486 ಕೋಟಿಗಳಿಂದ 89,760 ಕೋಟಿಗೆ ಇಳಿದಿದೆ.

ಅತಿ ಹೆಚ್ಚು ವಾರ್ಷಿಕ ಸಂಭಾವನೆ

2023- 24ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರು ವಾರ್ಷಿಕ ಸಂಭಾವನೆ ಪ್ಯಾಕೇಜ್‌ನಲ್ಲಿ 56 ಕೋಟಿ ರೂ. ಆಗಿದೆ. ಎಚ್‌ಸಿಎಲ್‌ಟೆಕ್‌ನ ಸಿ ವಿಜಯಕುಮಾರ್, 28.4 ಕೋಟಿ ರೂ. ಗಳಿಸಿದ್ದಾರೆ. L&T ಮತ್ತು Mindtree ವಿಲೀನದ ಅನಂತರ ನವೆಂಬರ್ 2022 ರಲ್ಲಿ ಚುಕ್ಕಾಣಿ ಹಿಡಿದ ಅದರ ಸಿಇಒ ದೇಬಾಶಿಸ್ ಚಟರ್ಜಿ ಆರ್ಥಿಕ ವರ್ಷ 22-23ರಲ್ಲಿ 17.5 ಕೋಟಿ ರೂ. ಗಳಿಸಿದ್ದಾರೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

ಟೆಕ್ ಮಹೀಂದ್ರಾದ ಮೋಹಿತ್ ಜೋಶಿ ಅವರು ವಾರ್ಷಿಕವಾಗಿ 6.5 ಕೋಟಿ ರೂಪಾಯಿಗಳ ವೇತನ ಪಡೆಯುತ್ತಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು 2024ರಲ್ಲಿ ವಾರ್ಷಿಕ ಪರಿಹಾರದಲ್ಲಿ 25.36 ಕೋಟಿ ರೂ. ಗಳನ್ನು ಪಡೆದರು.

2024ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಡೆಲಾಪೋರ್ಟೆ ಅವರಿಗೆ ನೀಡಿದ ಪರಿಹಾರವು 9,89,130 ಅನ್ವೆಸ್ಟೆಡ್ ಸ್ಟಾಕ್ ಆಯ್ಕೆ ಮತ್ತು 4.33 ಮಿಲಿಯನ್ ಡಾಲರ್ ಮೊತ್ತದ ನಗದು ಪರಿಹಾರವನ್ನು ಒಳಗೊಂಡಿದೆ.

Continue Reading
Advertisement
West Bengal Violence
ದೇಶ15 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ29 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್32 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ46 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ48 mins ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ50 mins ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Share Market
ದೇಶ1 hour ago

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Viral Video
ವೈರಲ್ ನ್ಯೂಸ್1 hour ago

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Crime News
ದೇಶ2 hours ago

ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

cm siddaramaiah meet 2
ಪ್ರಮುಖ ಸುದ್ದಿ2 hours ago

CM Siddaramaiah: ರೈತರ ಬರ ಪರಿಹಾರ ಸಮಸ್ಯೆಯಾದರೆ ಸಹಿಸುವುದಿಲ್ಲ- ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌