Border Dispute | ಕರ್ನಾಟಕದಿಂದ ಮಹಾರಾಷ್ಟ್ರದತ್ತ ಹೊರಟ ಸಾರಿಗೆ ಬಸ್‌; ಇನ್ನೂ ಆರಂಭವಾಗದ ಮಹಾ ಸಂಚಾರ - Vistara News

ಕರ್ನಾಟಕ

Border Dispute | ಕರ್ನಾಟಕದಿಂದ ಮಹಾರಾಷ್ಟ್ರದತ್ತ ಹೊರಟ ಸಾರಿಗೆ ಬಸ್‌; ಇನ್ನೂ ಆರಂಭವಾಗದ ಮಹಾ ಸಂಚಾರ

Border Dispute | ಬೆಳಗಾವಿಯಿಂದ ಸಾರಿಗೆ ಬಸ್‌ ಸಂಚಾರವನ್ನು ಆರಂಭ ಮಾಡಲಾಗಿದೆ. ಬಸ್‌ ಚಾಲಕ ಹಾಗೂ ನಿರ್ವಾಹಕರಿಗೆ ಸಾರಿಗೆ ಅಧಿಕಾರಿಗಳು ಧೈರ್ಯ ತುಂಬಿ ಕಳುಹಿಸುತ್ತಿದ್ದಾರೆ. ಅಲ್ಲದೆ, ಅಲ್ಲಿನ ಸಾರಿಗೆ ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

VISTARANEWS.COM


on

border dispute ಮಹಾರಾಷ್ಟ್ರ - ಕರ್ನಾಟಕ ಬಸ್‌ ಬೆಳಗಾವಿ - ಚಿಕ್ಕೋಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ತಣ್ಣಗಾದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Border Dispute) ಸಂಬಂಧ ಎರಡೂ ರಾಜ್ಯಗಳಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆಯೇ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭವಾಗಿದೆ. ತ್ವೇಷಮಯ ವಾತಾವರಣವಿದ್ದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಬಸ್‌ ಸಂಚಾರ ಸ್ಥಗಿತಗೊಂಡಿತ್ತು. ಆದರೆ, ಅತ್ತ ಕಡೆಯಿಂದ ಇನ್ನೂ ಬಸ್‌ ಸಂಚಾರ ಆರಂಭವಾಗಿಲ್ಲ.

ಈ ಮೂಲಕ ಉಭಯ ರಾಜ್ಯಗಳ ಗಡಿ ಭಾಗದ ಜನರಿಗೆ ಇದ್ದ ಸಮಸ್ಯೆಗಳು ಅಲ್ಪಮಟ್ಟಿಗೆ ಬಗೆಹರಿದಂತಾಗಿದೆ. ಶಿವಸೇನೆ, ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಪುಂಡರ ಉದ್ಧಟತನಕ್ಕೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಶುಕ್ರವಾರದಿಂದ (ಡಿ.೯) ಬೆಳಗಾವಿ, ಚಿಕ್ಕೋಡಿ ವಿಭಾಗದ ಬಸ್ ಸಂಚಾರ ಪುನರಾರಂಭಗೊಂಡಿದೆ. ಬೆಳಗಾವಿ ವಿಭಾಗದಿಂದ 150 ಹಾಗೂ ಚಿಕ್ಕೋಡಿ ವಿಭಾಗದಿಂದ 250 ಬಸ್ ಸಂಚಾರವನ್ನು ಪುನರಾರಂಭ ಮಾಡಲಾಗಿದೆ. ಬೆಳಗಾವಿಯಿಂದ ಮುಂಬೈ, ಠಾಣೆ, ನಾಸಿಕ್, ಪುಣೆ ಔರಂಗಾಬಾದ್, ಮೀರಜ್, ಸಿಂಧದುರ್ಗ‌ಗೆ ಬಸ್‌ಗಳು ಸಂಚಾರವನ್ನು ಆರಂಭಿಸಿವೆ.

ಇದನ್ನೂ ಓದಿ | Item Song | ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ಹೆಜ್ಜೆ ಹಾಕಿದ ಮುಸ್ಲಿಂ ಯುವಕರು; ಕಾಲೇಜಿಂದ ನಾಲ್ವರು ಸಸ್ಪೆಂಡ್

೭೦ ಲಕ್ಷ ರೂಪಾಯಿ ನಷ್ಟ
ಎರಡು ದಿನ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಬೆಳಗಾವಿ- ಚಿಕ್ಕೋಡಿ ವಿಭಾಗಕ್ಕೆ 70 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಚಾಲಕ-ನಿರ್ವಾಹಕರಿಗೆ ಆತ್ಮಸ್ಥೈರ್ಯ
ಮಹಾರಾಷ್ಟ್ರದಲ್ಲಿ ಉದ್ವಿಗ್ನ ವಾತಾವರಣ ಇರುವುದು ಹಾಗೂ ಅಲ್ಲಿ ಮರಾಠಿ ಪುಂಡರಿಂದ ದಾಂಧಲೆಗಳು ಆಗಬಹುದು ಎಂದು ರಾಜ್ಯ ಸಾರಿಗೆಯ ಚಾಲಕರು ಹಾಗೂ ನಿರ್ವಾಹಕರು ಭಯಗೊಂಡಿದ್ದು, ಕರ್ತವ್ಯಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹಿರಿಯ ಅಧಿಕಾರಿಗಳು, ಇವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದು, ಮಹಾರಾಷ್ಟ್ರ ‌ಸಾರಿಗೆ ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಇದೇ ರೀತಿ ಅಲ್ಲಿಯ ಸಾರಿಗೆ ಅಧಿಕಾರಿಗಳ ಜತೆಗೆ ಬೆಳಗಾವಿ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಿಂದ ಇನ್ನೂ ಬಾರದ ಬಸ್‌
ಈ ಬೆಳವಣಿಗೆ ಮಧ್ಯೆ ಮಹಾರಾಷ್ಟ್ರ ಬಸ್‌ಗಳು ಇನ್ನೂ ಕರ್ನಾಟಕವನ್ನು ಪ್ರವೇಶ ಮಾಡಿಲ್ಲ. ಈ ಬಗ್ಗೆ ಇನ್ನೂ ಅಲ್ಲಿನ ಸಾರಿಗೆ ಅಧಿಕಾರಿಗಳು ನಿರ್ಧಾರ ಮಾಡಿಲ್ಲ. ಮಹಾರಾಷ್ಟ್ರದಿಂದ ಬೆಳಗಾವಿ ‌ವಿಭಾಗಕ್ಕೆ ನಿತ್ಯ 69 ಬಸ್‌ಗಳು ಬರುತ್ತಿದ್ದವು. ಆದರೆ, ಈವರೆಗೂ ಯಾವುದೇ ಬಸ್‌ ಬಂದಿಲ್ಲ ಎಂದು ಮಾಧ್ಯಮಗಳಿಗೆ ಬೆಳಗಾವಿ ವಿಭಾಗದ ಡಿಟಿಒ ಕೆ.ಕೆ ಲಮಾಣಿ ಮಾಹಿತಿ ನೀಡಿದ್ದಾರೆ.

Border Dispute ಅಕ್ಕಲಕೋಟ ತಾಲೂಕಿನ 11 ಗ್ರಾಮಗಳಿಂದ ಠರಾವು

ಗ್ರಾಪಂ ಚುನಾಯಿತ ಮಂಡಳಿ ವಿಸರ್ಜನೆ ಬೆದರಿಕೆ
ಕರ್ನಾಟಕಕ್ಕೆ ಸೇರುತ್ತೇವೆ ಎಂದು ಮಹಾರಾಷ್ಟ್ರದಲ್ಲಿರುವ ಜತ್ತ, ಅಕ್ಕಲಕೋಟ ತಾಲೂಕಿನ 11 ಗ್ರಾಮಗಳಿಂದ ಠರಾವು ಹೊರಡಿಸಿರುವ ಬೆನ್ನಲ್ಲೆ ಅಲ್ಲಿನ ಸರ್ಕಾರ ಕನ್ನಡಿಗರಿಗೆ ಬೆದರಿಕೆಯೊಡ್ಡಿದೆ. ಇಂತಹ ಚಟುವಟಿಕೆಯನ್ನು ನಿಲ್ಲಿಸದಿದ್ದರೆ ಗ್ರಾಮ ಪಂಚಾಯಿತಿ ಚುನಾಯಿತ ಮಂಡಳಿಯನ್ನು ವಿಸರ್ಜನೆ ಮಾಡಲಾಗುವುದು ಹಾಗೆಯೇ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಆದರೆ, ಇದಕ್ಕೆ ಸಡ್ಡು ಹೊಡೆದಿರುವ ಕನ್ನಡ ಭಾಷಿಕರು ನೇಣು ಹಾಕಿದರೂ ನಮ್ಮ ಹಕ್ಕಿಗಾಗಿ ಹೋರಾಟವನ್ನು ನಿಲ್ಲಿಸಲಾರೆವು. ಅಭಿವೃದ್ಧಿ ಮಾಡದಿದ್ದರೆ ನಾವು ಕರ್ನಾಟಕಕ್ಕೆ ಹೋಗಿಯೇ ಹೋಗುತ್ತೇವೆ ಎಂದು ಸಂದೇಶವನ್ನು ರವಾನೆ ಮಾಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಅಕ್ಕಲಕೋಟ ತಾಲೂಕಿನ ತಡವಳ ಗ್ರಾಮದಲ್ಲಿ ನಡೆದ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಭೆ ನಡೆಸಿದ್ದಾರೆ.

ಈ ವೇಳೆ ಸಭೆಯಲ್ಲಿ ಮಾತನಾಡಿದ್ದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನ ಆಳಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಹತ್ತೂರೆ, ನನ್ನನ್ನು ಗಲ್ಲಿಗೇರಿಸಿದರೂ ನಮ್ಮ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ. ಕಳೆದ ವಾರವೇ ಕರ್ನಾಟಕ ಸೇರ್ಪಡೆ ಆಗುವ ಬಗ್ಗೆ ಈ ಗ್ರಾಪಂನಿಂದ ಠರಾವು ಪಾಸ್ ಮಾಡಲಾಗಿತ್ತು. ಅಲ್ಲದೆ, ಈ ಬಗ್ಗೆ ಸೊಲ್ಲಾಪುರ ಜಿಲ್ಲಾಧಿಕಾರಿ ಮತ್ತು ಕರ್ನಾಟಕ ಸಿಎಂಗೆ ಪತ್ರ ಬರೆದು ಕರ್ನಾಟಕ ಸೇರ್ಪಡೆ ಆಗುವ ನಿರ್ಧಾರಗಳನ್ನು ತಿಳಿಸಲಾಗಿತ್ತು.

ಇದನ್ನೂ ಓದಿ | Border Dispute | ರಾಜ್ಯದ ನೀತಿ-ನಿಲುವನ್ನು ಸ್ಪಷ್ಟಪಡಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Lok Sabha Election 2024: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ರಾಮಮಂದಿರ ನಿರ್ಮಾಣ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ರಾಜು ಕಾಗೆ, ಕೇವಲ ಗುಡಿಗಳನ್ನು ಕಟ್ಟುವುದರಿಂದ ಸವರ್ಣೀಯರಾಗುತ್ತೇವೆಂದರೆ ನಾವು ಕೂಡ ನಿರಂತರವಾಗಿ ಗುಡಿಗಳನ್ನು ಕಟ್ಟುತ್ತೇವೆ. ನಾವು ನಮ್ಮಲ್ಲಿರುವ ವ್ಯವಸ್ಥೆಗಳ ಬಗ್ಗೆ ವಿಚಾರ ಮಾಡಬೇಕು. ಅದೆಲ್ಲವನ್ನು ಬಿಟ್ಟು ಬಿಜೆಪಿಯವರು ಬಂದ ತಕ್ಷಣ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಕೂಗುವುದಲ್ಲ ಎಂದು ರಾಜು ಕಾಗೆ ಕಿಡಿಕಾರಿದ್ದಾರೆ.

VISTARANEWS.COM


on

Lok Sabha Election 2024 Raju Kage calls those chanting Jai Shri Ram are beggars
Koo

ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಕೂಗಲಾಗುವ “ಜೈ ಶ್ರೀರಾಮ್‌” ಘೋಷಣೆ (Jai Shri Ram slogan) ಬಗ್ಗೆ ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗೆ ಘೋಷಣೆ ಕೂಗುವವರು ಭಿಕಾರಿಗಳು ಎಂದು ಕಿಡಿಕಾರಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಹಿಂದೆ ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಕಡಿಮೆ ಲೀಡ್‌ ಕೊಟ್ಟರೆ ಕರೆಂಟ್‌ ಕಟ್‌ ಎಂಬ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್‌ ನೀಡಿದೆ.

ಬೆಳಗಾವಿಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಜು ಕಾಗೆ, ಬಿಜೆಪಿಯವರು ಪ್ರತಿ ಸಮಾವೇಶ, ರೋಡ್ ಶೋಗಳಲ್ಲಿ ‘ಜೈ ಶ್ರೀರಾಮ್, ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾರೆ. ಇಂಥದ್ದನ್ನೆಲ್ಲ 40 ವರ್ಷಗಳ ಹಿಂದೆಯೇ ನಾನು ಮಾಡಿ ಬಿಟ್ಟಿದ್ದೇನೆ. ಜೈ ಶ್ರೀರಾಮ್‌ ಘೋಷಣೆ ಕೂಗುವವರಿಗೆ ನಾನು ಸಮರ್ಥವಾಗಿ ಉತ್ತರ ಕೊಡುತ್ತೇನೆ. ಅವರು ಗತಿ ಇಲ್ಲದ ಭಿಕಾರ್ ಛೋಟ್ (ಗತಿ ಇಲ್ಲದ ಭಿಕಾರಿಗಳು) ಇದ್ದಾರೆ ಎಂದು ನಾವು ಆ ಲೆವೆಲ್‌ಗೆ ಇಳಿಯುವುದಕ್ಕೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಆಕ್ಷೇಪ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ರಾಮಮಂದಿರ ನಿರ್ಮಾಣ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ರಾಜು ಕಾಗೆ, ಕೇವಲ ಗುಡಿಗಳನ್ನು ಕಟ್ಟುವುದರಿಂದ ಸವರ್ಣೀಯರಾಗುತ್ತೇವೆಂದರೆ ನಾವು ಕೂಡ ನಿರಂತರವಾಗಿ ಗುಡಿಗಳನ್ನು ಕಟ್ಟುತ್ತೇವೆ. ನಾವು ನಮ್ಮಲ್ಲಿರುವ ವ್ಯವಸ್ಥೆಗಳ ಬಗ್ಗೆ ವಿಚಾರ ಮಾಡಬೇಕು. ಅದೆಲ್ಲವನ್ನು ಬಿಟ್ಟು ಬಿಜೆಪಿಯವರು ಬಂದ ತಕ್ಷಣ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಕೂಗುವುದಲ್ಲ ಎಂದು ಕಿಡಿಕಾರಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಕೂಗುವವರಿಗೆ ನಾನು ಉತ್ತರ ಕೊಡಬಹುದು. ಆದರೆ, ಅಂಥ ಲೆವೆಲ್‌ಗೆ ಇಳಿಯಲು ನನ್ನಿಂದ ಆಗುವುದಿಲ್ಲ. ಇದಕ್ಕೆಲ್ಲ ಈಗ ಮತದಾರರೇ ತಕ್ಕ ಉತ್ತರ ನೀಡಬೇಕು ಎಂದು ರಾಜು ಕಾಗೆ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

ಕರೆಂಟ್‌ ಕಟ್‌ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್‌

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಗುರುವಾರ ಮತಯಾಚನೆ ಮಾಡಿದ್ದ ರಾಜು ಕಾಗೆ, “ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್” ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.

Continue Reading

ಕ್ರೈಂ

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Prajwal Revanna Case: ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಎಫ್ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ಹೀಗಿದ್ದರೂ ನಿರೀಕ್ಷಣಾ ಜಾಮೀನಿಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ? ಈ ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲವೇ ಎಂದು ರೇವಣ್ಣ ಪರ ಹಿರಿಯ ವಕೀಲರಿಗೆ ಕೋರ್ಟ್ ಪ್ರಶ್ನೆ ಮಾಡಿದೆ. ಕೊನೆಗೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

VISTARANEWS.COM


on

Prajwal Revanna Case Revanna denied anticipatory bail today Court allows SIT to file objections
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಇನ್ನೊಬ್ಬ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ.

ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಎಫ್ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ಹೀಗಿದ್ದರೂ ನಿರೀಕ್ಷಣಾ ಜಾಮೀನಿಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ? ಈ ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲವೇ ಎಂದು ರೇವಣ್ಣ ಪರ ಹಿರಿಯ ವಕೀಲರಿಗೆ ಕೋರ್ಟ್ ಪ್ರಶ್ನೆ ಮಾಡಿದೆ.

ಇದಕ್ಕೆ ವಾದ ಮಂಡಿಸಿದ ಎಚ್.ಡಿ. ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ. ಎಫ್ಐಆರ್‌ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್‌ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಎಚ್.ಡಿ. ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ವಕೀಲ ಮೂರ್ತಿ ಡಿ. ನಾಯ್ಕ್ ತಿಳಿಸಿದರು.

ಎಸ್‌ಐಟಿಗೆ ವಿಶೇಷ ಕೋರ್ಟ್‌ ನೋಟಿಸ್‌

ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾದೀಶರಾದ ಸಂತೋಷ್ ಗಜಾನನ ಭಟ್, ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಮೇ 3) ಮುಂದೂಡಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

Continue Reading

ಕ್ರೈಂ

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Prajwal Revanna Case: ಈಗ ಎಸ್ಐಟಿ ಮುಂದೆ ಹಾಜರಾಗಿರುವ ಮತ್ತೊಬ್ಬ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆ ಸಂಬಂಧ ಸಿಐಡಿಯಲ್ಲಿಯೇ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಖಾತ್ರಿಪಡಿಸಿದ್ದಾರೆ. ಸಂಜೆ ಮ್ಯಾಜಿಸ್ಟ್ರೇಟರ್ ಮುಂದೆ ಮತ್ತೊಬ್ಬ ಸಂತ್ರಸ್ತೆಯನ್ನು ಹಾಜರುಪಡಿಸಿ 164 ಅಡಿಯಲ್ಲಿ‌ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಮತ್ತೊಂದು ದೂರನ್ನು ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆಯು ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನೀಡಿದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

VISTARANEWS.COM


on

Prajwal Revanna Case Another victim gives statement before judge Will Revanna get anticipatory bail
Koo

ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ (Prajwal Revanna Case) ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕಾಗಿದೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಬಾರದ ಪ್ರಜ್ವಲ್ ಪತ್ತೆಗೆ ಲುಕ್ ಔಟ್ ನೋಟಿಸ್ ಅನ್ನು ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಜಾರಿ ಮಾಡಿದ್ದಾರೆ.‌ ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಸಂತ್ರಸ್ತೆ ದೂರು ನೀಡಿದ್ದಾರೆ. ಇದರಿಂದ ಈ ಪ್ರಕರಣವು ಪ್ರಜ್ವಲ್‌ಗೆ ಮತ್ತಷ್ಟು ಕಂಟಕವಾಗಿ ಪರಿಣಮಿಸಿದೆ. ಇತ್ತ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಂತೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ನೋಟಿಸ್‌ ನೀಡಿತ್ತು. ಆದರೆ, ಇಬ್ಬರೂ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಎಚ್‌.ಡಿ. ರೇವಣ್ಣ ಬೆಂಗಳೂರಿನಲ್ಲಿದ್ದರೂ ಎಸ್‌ಐಟಿಯತ್ತ ಸುಳಿಯುತ್ತಿಲ್ಲ. ಇನ್ನು ಪ್ರಜ್ವಲ್‌ ಸಹ ತಾವು ಬೆಂಗಳೂರಿನಲ್ಲಿ ಇಲ್ಲ. ವಿದೇಶದಲ್ಲಿರುವುದರಿಂದ ಬರಲು ಸಮಯಾವಕಾಶ ಬೇಕು. ಹೀಗಾಗಿ ಏಳು ದಿನ ಅವಕಾಶ ಕೊಡಿ ಎಂದು ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ್ದರು. ಆದರೆ, ಸಮಯ ನೀಡಲು ಎಸ್ಐಟಿ ನಿರಾಕರಣೆ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಖಡಕ್ ಸೂಚನೆ ನೀಡಿದೆ. ಇದು ಪ್ರಜ್ವಲ್‌ ಸಂಕಷ್ಟಕ್ಕೆ ಕಾರಣವಾಗಿದೆ.

ದುಬೈಗೆ ಹಾರಿರುವ ಪ್ರಜ್ವಲ್‌

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು (ಗುರುವಾರ ಮೇ 2) ಎಚ್.ಡಿ. ರೇವಣ್ಣ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಪ್ರಶ್ನಾವಳಿಗಳನ್ನೂ ಸಿದ್ಧಪಡಿಸಿಟ್ಟುಕೊಂಡಿತ್ತು. ಆದರೆ, ಸಂಜೆವರೆಗೂ ಎಸ್ಐಟಿಯತ್ತ ಮುಖ ಮಾಡದೇ ರೇವಣ್ಣ ಟೆಂಪಲ್ ರನ್ ಮಾಡಿಕೊಂಡಿದ್ದಾರೆ. ಇದರ ಜತೆಗೆ ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಯಲ್ಲಿ ಮೀಟಿಂಗ್‌ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ಪ್ರಜ್ವಲ್ ರೇವಣ್ಣ ಮೇ 15ಕ್ಕೆ ಬರುವುದಾಗಿ ವಿಮಾನ ಟಿಕೆಟ್‌ ಬುಕ್ ಮಾಡಿದ್ದರು ಎಂಬ ಅವರ ಹೆಸರಿನಲ್ಲಿದ್ದ ಟಿಕೆಟ್ ವೈರಲ್ ಆಗಿತ್ತು. ಆದರೆ, ಬೆಂಗಳೂರಿಗೆ ಬರಬೇಕಾದ ಪ್ರಜ್ವಲ್ ಬುಧವಾರ ರಾತ್ರಿಯೇ ಜರ್ಮನಿಯಿಂದ ದುಬೈಗೆ ಹಾರಿದ್ದಾರೆ.

ದೂರು ದಾಖಲಿಸಿದ ಮತ್ತೊಬ್ಬ ಸಂತ್ರಸ್ತೆ!

ಈ ಎಲ್ಲ ಬೆಳವಣಿಗೆಗಳ‌ ಎಸ್ಐಟಿ ಮುಂದೆ ಹಾಜರಾಗಿರುವ ಮತ್ತೊಬ್ಬ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆ ಸಂಬಂಧ ಸಿಐಡಿಯಲ್ಲಿಯೇ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಖಾತ್ರಿಪಡಿಸಿದ್ದಾರೆ. ಸಂಜೆ ಮ್ಯಾಜಿಸ್ಟ್ರೇಟರ್ ಮುಂದೆ ಮತ್ತೊಬ್ಬ ಸಂತ್ರಸ್ತೆಯನ್ನು ಹಾಜರುಪಡಿಸಿ 164 ಅಡಿಯಲ್ಲಿ‌ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಮತ್ತೊಂದು ದೂರನ್ನು ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆಯು ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನೀಡಿದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

ಮತ್ತೊಂದು ನೋಟಿಸ್‌ಗೆ ಸಿದ್ಧತೆ

ಮತ್ತೊಂದೆಡೆ ಸಂಜೆಯೊಳಗೆ ವಿಚಾರಣೆಗೆ ಬರುತ್ತಾರೆ ಅಂದುಕೊಂಡಿದ್ದ ಎಚ್‌.ಡಿ. ರೇವಣ್ಣ ಅವರು ಕೊನೇ ಕ್ಷಣದಲ್ಲಿ ವಕೀಲರ ಮೂಲಕ‌ ಜನ್ರತಿನಿಧಿಗಳ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ‌ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯು ಶುಕ್ರವಾರ (ಮೇ 3) ನಡೆಯಲಿದ್ದು, ಯಾವ ತೀರ್ಪು ಹೊರ ಬರುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಇದರ ಮಧ್ಯೆ ತನಿಖಾಧಿಕಾರಿಗಳು ಮತ್ತೊಂದು‌ ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Site Dispute : ಸೈಟು ವಿಚಾರಕ್ಕೆ ಎರಡು ಗುಂಪುಗಳು ಜ್ಞಾನಭಾರತಿ ಠಾಣೆಯಲ್ಲೇ ಕಿತ್ತಾಡಲು ಮುಂದಾಗಿದ್ದರು. ಈ ವೇಳೆ ಗಲಾಟೆ ಮಾಡದಂತೆ ಎಚ್ಚರಿಸಿ ಮಧ್ಯೆ ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಮೋಕ್ಷ (Assault Case) ಮಾಡಿದ್ದಾಳೆ.

VISTARANEWS.COM


on

By

assault Case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ (Assault Case) ಮಾಡಿದ್ದಾಳೆ. ಸೈಟು ವಿಚಾರಕ್ಕೆ (Site Dispute) ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು. ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ.

ನಿನ್ನೆ ಬುಧವಾರ ಸಂಜೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು.

ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್‌ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್‌ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್‌ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

ಬೆಂಗಳೂರು: ಬೆಂಗಳೂರಿನ (Bengaluru News) ಕೋರಮಂಗಲ ಪೊಲೀಸ್ ಠಾಣಾ (Kormangala police station) ವ್ಯಾಪ್ತಿಯಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ಸೆಲ್ವಿನ್ ಪ್ರಾನ್ಸಿಸ್ ಎಂಬಾತ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಸೆಲ್ವಿನ್ ಪ್ರಾನ್ಸಿಸ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ಪತಿಯಿಂದ 6 ತಿಂಗಳ ಹಿಂದೆ ದೂರಾಗಿದ್ದಳು. ವೆಂಕಟಾಪುರದ ತಾಯಿ ಮನೆಯಲ್ಲಿ ವಾಸವಿದ್ದಳು. ಇಂದು ಗುರುವಾರ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಪತ್ನಿ ಜತೆಗೆ ಸೆಲ್ವಿನ್‌ ಪ್ರಾನ್ಸಿಸ್‌ ಗಲಾಟೆ ಮಾಡಿಕೊಂಡಿದ್ದ. ಈ ಮೊದಲೇ ಪ್ರಿಪ್ಲಾನ್‌ ಮಾಡಿಕೊಂಡು ಪತ್ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೆಂಜ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೃತ್ಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Reliance Retail Tira Beauty launch new brand Nails Our Way
ದೇಶ3 seconds ago

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

M S Dhoni
ಪ್ರಮುಖ ಸುದ್ದಿ4 mins ago

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

Rahul Gandhi
ದೇಶ21 mins ago

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Virat kohli
ಕ್ರೀಡೆ46 mins ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Religious Freedom
ದೇಶ50 mins ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 202451 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ1 hour ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ2 hours ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ2 hours ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ16 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌