Yellapura News | ನಿರ್ಭೀತಿಯಿಂದ ವಾಸ ಮಾಡಿ, ನಿಮ್ಮ ಬೆನ್ನಿಗೆ ಸರ್ಕಾರವಿದೆ: ಸಿದ್ಧಿ ಜನಾಂಗಕ್ಕೆ ಸಚಿವ ಶ್ರೀರಾಮುಲು ಭರವಸೆ - Vistara News

ಉತ್ತರ ಕನ್ನಡ

Yellapura News | ನಿರ್ಭೀತಿಯಿಂದ ವಾಸ ಮಾಡಿ, ನಿಮ್ಮ ಬೆನ್ನಿಗೆ ಸರ್ಕಾರವಿದೆ: ಸಿದ್ಧಿ ಜನಾಂಗಕ್ಕೆ ಸಚಿವ ಶ್ರೀರಾಮುಲು ಭರವಸೆ

ಯಲ್ಲಾಪುರ (Yellapur News) ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಚಿವ ಶ್ರೀರಾಮುಲು ಉದ್ಘಾಟಿಸಿದರು.

VISTARANEWS.COM


on

Magodu Vilage Minister Sriramulu
ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಚಿವ ಶ್ರೀರಾಮುಲು ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಕಾಡನ್ನೇ ಸರ್ವಸ್ವವನ್ನಾಗಿಸಿಕೊಂಡಿರುವ ಸಿದ್ಧಿ ಜನಾಂಗವು, ಯಾವುದೇ ತೊಂದರೆಯಾಗದಂತೆ ತಮ್ಮ ಮೂಲ ಜಾಗದಲ್ಲಿ ನಿರ್ಭೀತಿಯಿಂದ ವಾಸ ಮಾಡಬೇಕು. ನಮ್ಮ ಸರ್ಕಾರ ಸದಾ ನಿಮ್ಮ ಬೆಂಬಲಕ್ಕಿದ್ದು, ಈ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು‌ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಯಲ್ಲಾಪುರ ತಾಲೂಕಿನಲ್ಲಿ (Yellapura News) ತಮ್ಮ ಗ್ರಾಮ ವಾಸ್ತವ್ಯದ ವೇಳೆ ತಿಳಿಸಿದರು.

ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬಹಳ ವರ್ಷಗಳಿಂದ ಅರಣ್ಯ ಹಕ್ಕು ಪತ್ರದಲ್ಲಿನ ನ್ಯೂನತೆಯಿಂದ ಅನುಭವಿಸುತ್ತಿರುವ ತೊಂದರೆಯನ್ನು ಈಗಾಗಲೇ ಮುಖ್ಯ ಮಂತ್ರಿಗಳ ಗಮನಕ್ಕೆ ತರಲಾಗಿದೆ. ತುರ್ತಾಗಿ ಅದನ್ನು ನಮ್ಮ ಇಲಾಖೆಯ ವತಿಯಿಂದ ಬಗೆಹರಿಸಿ ಕೊಡುತ್ತೇನೆ” ಎಂದರು.

ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರಿಗೆ ಸಚಿವ ಶ್ರೀರಾಮುಲು ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.

“ಈ ಹಿಂದೆ ಯಾವುದೇ ಸರ್ಕಾರ ಮಾಡದಂತಹ ಮಹತ್ತರ ಬದಲಾವಣೆಯಾಗಿ ನಮ್ಮ ಸರ್ಕಾರವು ಪರಿಶಿಷ್ಟ ವರ್ಗಗಳ ಮೀಸಲಾತಿಯನ್ನು ಶೇ.೩ ರಿಂದ ಶೇ.೭ಕ್ಕೆ ಏರಿಸಿದೆ. ಇದರಿಂದ ನಮ್ಮ ಸಮುದಾಯದ ಮಕ್ಕಳೂ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳಿಗೆ ತಲುಪಲು ಸಹಾಯವಾಗುತ್ತದೆ. ಕೇವಲ ಆಶ್ವಾಸನೆ ನೀಡದೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಈ ಕೆಲಸವನ್ನು ಮಾಡಿದ್ದೇವೆ. ನಿಮ್ಮ ಮನವಿಗಳನ್ನು ಸಹ ಆಲಿಸಿದ್ದೇನೆ. ನಮ್ಮ ಇಲಾಖೆಯಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಬಗೆಹರಿಸಲಾಗುವುದು. ಮುಂದೆಯೂ ಸಿದ್ಧಿ ಜನಾಂಗದವರೊಂದಿಗೆ ಸಂಪರ್ಕದಲ್ಲಿದ್ದು, ಆಗುಹೋಗುಗಳ ಬಗ್ಗೆ ನಿಗಾ ವಹಿಸುತ್ತೇನೆ ಎಂದು ತಿಳಿಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ಪಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟನಕರ್, ನಂದೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ಕೋಣೆಮನೆ, ಉಪಾಧ್ಯಕ್ಷೆ ಮೀನಾಕ್ಷಿ ವೆಂಕಟ್ರಮಣ ಭಟ್, ಸದಸ್ಯೆ ಭವಾನಿ ಸಿದ್ಧಿ, ಲಕ್ಷ್ಮೀ ಸಿದ್ಧಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್. ಕಾಂತರಾಜು, ಕವಿತಾ ವಾರಂಗಲ್, ಅರುಣಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನಿರ್ದೇಶಕರಾದ ರಾಜಕುಮಾರ್ ಸ್ವಾಗತಿಸಿದರು. ಕೆಂಗೇರಿ ಮಲ್ಲಿಕಾರ್ಜುನ, ವಸಂತ ಲಕ್ಷ್ಮೀ ನಿರ್ವಹಿಸಿದರು.

ಇದನ್ನೂ ಓದಿ | ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದ ಪರಮೇಶ್ವರ್‌ ಹೇಳಿಕೆ: ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Rain News : ರಾಜ್ಯಾದ್ಯಂತ ಗುಡುಗು ಸಹಿತ ಮಧ್ಯಮ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ವ್ಯಾಪಕ ಲಘುದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Rain News : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮುಂದಿನ ಐದು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವೀಕೆಂಡ್‌ ಮೂಡ್‌ನಲ್ಲಿದ್ದ ಜನರಿಗೆ ಮಳೆರಾಯನ (Rain News) ಎಂಟ್ರಿ ಕೊಂಚ ಕಿರಿಕಿರಿಯನ್ನುಂಟು ಮಾಡಿದೆ. ಬೆಳಗ್ಗೆ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಧ್ಯಾಹ್ನ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣ ಇತ್ತು. ನೋಡನೋಡುತ್ತಿದ್ದಂತೆ ಗುಡುಗು ಸಹಿತ ಧಾರಾಕಾರ ಮಳೆ (Karnataka Weather Forecast) ಸುರಿದಿತ್ತು. ರಾಜಧಾನಿ ಬೆಂಗಳೂರಲ್ಲಿ ಬಿಡುವು ನೀಡಿದ್ದ ವರುಣ ವಾರದ ನಂತರ ಅಬ್ಬರಿಸಿದ್ದ. ಜಸ್ಟ್‌ ಒಂದೂವರೆ ಗಂಟೆಯ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಬೇಕಾಯಿತು.

ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ ಸೇರಿದಂತೆ ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿತ್ತು.

ಮುಳುಗಡೆಯಾದ ಸಹಕಾರ

ಮಹಾದೇವಪುರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆ ಸುರಿದಿದೆ. ಮಳೆಗೆ ಸಹಕಾರ ನಗರದ ಜಿ ಬ್ಲಾಕ್‌ನ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು. ಇದರಿಂದಾಗಿ ಅಂಗಡಿ ಮುಂಗಟ್ಟುಗಳಲ್ಲಿ ನೀರು ನಿಂತಿದ್ದರಿಂದ ಜನರು ಪರದಾಡಬೇಕಾಯಿತು. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ಇನ್ನೂ ದಿಢೀರ್‌ ಮಳೆಗೆ ವಾಹನ ಸವಾರರು ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು.

Karnataka weather Forecast

ಆನೇಕಲ್‌ನಲ್ಲೂ ಮಳೆ ಅಬ್ಬರ

ಆನೇಕಲ್ ತಾಲೂಕಿನಾದ್ಯಂತ ಮಳೆಯು ಅಬ್ಬರಿಸಿತ್ತು. ಆನೇಕಲ್, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಳೆಯಾಗಿದೆ. ಚಂದಾಪುರದ ಬಳಿ ಸರ್ವೀಸ್ ರಸ್ತೆ ಜಲಾವೃತಗೊಂಡಿತ್ತು. ಇದರಿಂದಾಗಿ ಬೈಕ್ ಸವಾರರು, ಪಾದಚಾರಿಗಳು ಹಾಗೂ ವಾಹನ ಸವಾರ ಪರದಾಡಬೇಕಾಯಿತು. ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ರಸ್ತೆಯು ಕೆರೆಯಂತಾಗಿತ್ತು.

ಇದನ್ನೂ ಓದಿ: Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಚಿಕ್ಕಮಗಳೂರಿನಲ್ಲೂ ಮಳೆಯ ಸಿಂಚನ

ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಬೆಳವಾಡಿ, ಕಳಸಾಪುರ, ಮಾಗಡಿ, ಅಂಬಳೆ, ತೇಗೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಡೂರು ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಭಾರಿ ಬಿರುಗಾಳಿ ಮಳೆಗೆ ಚಿಕ್ಕಮಗಳೂರು ಗ್ರಾಮಾಂತರ ತತ್ತರಿಸಿತ್ತು. ಮಳೆಯಿಂದಾಗಿ ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇನ್ನೈದು ದಿನ ಭಾರಿ ಮಳೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮುಂದಿನ ಐದು ದಿನಗಳ‌ ಕಾಲ ಭಾರಿ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ನಂತರ ಕರ್ನಾಟಕವನ್ನು ಆವರಿಸಲಿದೆ.

ಈ ಭಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಜೂನ್ 15ಕ್ಕೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಈ ಬಾರಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Cow Smuggling: ಕಾರವಾರದಲ್ಲಿ ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೇನರ್‌ವೊಂದರಲ್ಲೇ ಜಾನುವಾರಗಳನ್ನು ತುರುಕಿ ಹಿಂಸಾತ್ಮಕವಾಗಿ ರವಾನೆ ಮಾಡಲಾಗುತ್ತಿತ್ತು. ಇತ್ತ ಮೈಸೂರಿನಲ್ಲೂ ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Cow Smuggling
Koo

ಕಾರವಾರ/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ (Cow Smuggling) ವಾಹನಗಳ ಮೇಲೆ ಪೊಲೀಸರು ದಾಳಿ, ರಾಸುಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಾಸ್ತಿಕಟ್ಟಾ ಸರ್ಕಲ್ ಬಳಿ ಕಂಟೇನರ್‌ನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟಕ್ಕೆ ಯತ್ನಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಭಟ್ಕಳಕ್ಕೆ ಕಂಟೇನರ್‌ ಮೂಲಕ ಜಾನುವಾರಗಳನ್ನು ಸಾಗಾಟಕ್ಕೆ ತೆರಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 23 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮಂಡ್ಯ ಮೂಲದ ಚಾಲಕ ಸೈಯ್ಯದ್ ಇಸ್ಮಾಯಿಲ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮಹಮ್ಮದ್ ಅತೀಕ್, ಇರ್ಫಾನ್ ಬಂಧಿತರು. ಜಾನುವಾರು ಸಾಗಾಟ ಸಂಬಂಧ ಭಟ್ಕಳದ ಮದೀನಾ ಕಾಲೋನಿಯ ಶಾಯ್ ನೂರ್, ಅವುಫ್ ಅಬು ಅಹ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಿಲ್ಕ್‌ ಟ್ಯಾಂಕ್‌ನಲ್ಲಿದ್ದ ಗೋವು!

ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮಧ್ಯರಾತ್ರಿ ವೇಳೆ ದಾಳಿ ಮಾಡಿದಾಗ ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ. ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Weather Updates
ಮಳೆ9 mins ago

Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

cyber attack ನನ್ನ ದೇಶ ನನ್ನ ದನಿ
ಅಂಕಣ29 mins ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ39 mins ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ1 hour ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ2 hours ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Stray dogs attack in Shira 4 children one woman injured
ಪ್ರಮುಖ ಸುದ್ದಿ8 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ8 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ8 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ8 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು15 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌