Horoscope Today | ಇಂದು ಮೂರು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today | ಇಂದು ಮೂರು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷದ ಬಿದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (10 -12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ.

ತಿಥಿ: ಬಿದಿಗೆ 13:47 ವಾರ: ಶನಿವಾರ
ನಕ್ಷತ್ರ: ಆರಿದ್ರಾ 17:40 ಯೋಗ: ಶುಕ್ಲ 28:23
ಕರಣ: ಗರಜ 13:47 ಇಂದಿನ ವಿಶೇಷ: ವಿಶ್ವ ಸಂಸ್ಥೆ ಮಾನವ ಹಕ್ಕುಗಳ ದಿನ.
ಅಮೃತಕಾಲ: ಬೆಳಗ್ಗೆ 06 ಗಂಟೆ 34 ನಿಮಿಷದಿಂದ 08 ಗಂಟೆ 21 ನಿಮಿಷದವರೆಗೆ.

ಸೂರ್ಯೋದಯ: 06: 31    ಸೂರ್ಯಾಸ್ತ: 05 : 54

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ ಎದುರಿಸಬೇಕಾಗಿ ಬರಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನ ಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರ ಫಲ. ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಇಂದು ನಿಮಗೆ ಆರೋಗ್ಯ ಕಾಳಜಿ ಇರಲಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಮೊರೆಹೋಗುವುದು ಬೇಡ. ಶಾಂತವಾಗಿ ಪರಿಸ್ಥಿತಿಯನ್ನು ಎದುರಿಸಿ. ಆರ್ಥಿಕವಾಗಿ ಕೊಂಚ ಲಾಭ ಇರುವ ದಿನ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕವಾಗಿ ಲಾಭಗಳಿಸುವಿರಿ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ ದೊರೆಯಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚು ಹೆಚ್ಚಾಗಬಹುದು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿ ಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮೆಲ್ಲ ಕೆಲಸ ಕಾರ್ಯಗಳಿಗೆ ಆಪ್ತರಿಂದ ಬೆಂಬಲ ದೊರೆಯಲಿದೆ. ಹಿಡಿದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸಲು ಆಮಂತ್ರಣ ದೊರೆಯಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಮಾಡುವ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಇಂದು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್‌ ಧನ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

Lok Sabha Election 2024: ಮತದಾನ ಸಂಬಂಧ ಐಟಿಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು. ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಿದೆ. ಅಲ್ಲದೆ, ಈ ಸಂಬಂಧ ಬಿಬಿಎಂಪಿಯಿಂದ ಔಟರ್ ರಿಂಗ್‌ರೋಡ್ ಅಸೋಸಿಯೇಷನ್‌ಗೆ ಪತ್ರವೂ ರವಾನೆಯಾಗಿದೆ.

VISTARANEWS.COM


on

Lok Sabha Election 2024 IT companies to remain closed in Bengaluru on April 26 BBMP order
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಖಾಡಕ್ಕಿಳಿದಿವೆ. ಎಲ್ಲ ಕಡೆಯೂ ಮತ ಬೇಟೆ ಭರದಿಂದ ಸಾಗಿದೆ. ಇನ್ನು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದೆ. ಈ ದಿನ (Voting Day) ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ (IT BT Sector) ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ (Tushar Girinath) ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ.

ಮತದಾನ ಸಂಬಂಧ ಐಟಿಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು. ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಿದೆ. ಅಲ್ಲದೆ, ಈ ಸಂಬಂಧ ಬಿಬಿಎಂಪಿಯಿಂದ ಔಟರ್ ರಿಂಗ್‌ರೋಡ್ ಅಸೋಸಿಯೇಷನ್‌ಗೆ ಪತ್ರವೂ ರವಾನೆಯಾಗಿದೆ.

ಇನ್ನು ಮತದಾನ ಹೆಚ್ಚಳ ಸಂಬಂಧ ಐಟಿ ಬಿಟಿ ಕಂಪನಿಗಳ ಜತೆಗೆ ಬಿಬಿಎಂಪಿ ಇಂದು (ಮಂಗಳವಾರ) ಸಭೆ ನಡೆಸಲಾಗಿದೆ. ಸಭೆ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ತಮ್ಮ ತಮ್ಮ ನೌಕರರು ತಪ್ಪದೇ ಮತದಾನ ಮಾಡಲು ಯಾವ ರೀತಿ ಪ್ರೋತ್ಸಾಹವನ್ನು ನೀಡಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆಯಿತು.

ಒಪ್ಪಿದ ಐಟಿ ಬಿಟಿ ಕಂಪನಿಗಳು

ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ. ಬಿಬಿಎಂಪಿ ಜತೆ ನಡೆದ ಸಭೆಯಲ್ಲಿ ಪೇಡ್ ಲೀವ್‌ಗೆ ಒಪ್ಪಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 5 ಸಾವಿರಕ್ಕೂ ಅಧಿಕ ಐಟಿ ಬಿಟಿ ಕಂಪನಿಗಳು ಬಿಬಿಎಂಪಿ ಮನವಿಗೆ ಸ್ಪಂದಿಸಿವೆ.

ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಈಗಾಗಲೇ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ತಲಾ 14 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

2.ಹಾಸನ (ಸಾಮಾನ್ಯ)

3.ದಕ್ಷಿಣ ಕನ್ನಡ (ಸಾಮಾನ್ಯ)

4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

5..ತುಮಕೂರು (ಸಾಮಾನ್ಯ)

6.ಮಂಡ್ಯ (ಸಾಮಾನ್ಯ)

7.ಮೈಸೂರು-ಕೊಡಗು (ಸಾಮಾನ್ಯ)

8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

10 ಬೆಂಗಳೂರು ಉತ್ತರ (ಸಾಮಾನ್ಯ)

11. ಬೆಂಗಳೂರು ಕೇಂದ್ರ (ಸಾಮಾನ್ಯ)

12. ಬೆಂಗಳೂರು ದಕ್ಷಿಣ (ಸಾಮಾನ್ಯ)

13.ಚಿಕ್ಕಬಳ್ಳಾಪುರ (ಸಾಮಾನ್ಯ)

14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)\

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಮಾರ್ಚ್‌ 28

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 04

ನಾಮಪತ್ರ ಪರಿಶೀಲನೆ: ಏಪ್ರಿಲ್‌ 05

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 08

ಮತದಾನದ ದಿನಾಂಕ: ಏಪ್ರಿಲ್‌ 26, ಶುಕ್ರವಾರ

Lok Sabha Election 2024 Karnataka declares 2 day general holiday

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)

2.ಬೆಳಗಾವಿ (ಸಾಮಾನ್ಯ)

3.ಬಾಗಲಕೋಟೆ (ಸಾಮಾನ್ಯ)

4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)

5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)

7.ಬೀದರ್ (ಸಾಮಾನ್ಯ)

8,ಕೊಪ್ಪಳ (ಸಾಮಾನ್ಯ)

9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

10. ಹಾವೇರಿ (ಸಾಮಾನ್ಯ)

11. ಧಾರವಾಡ (ಸಾಮಾನ್ಯ)

12.ಉತ್ತರ ಕನ್ನಡ (ಸಾಮಾನ್ಯ)

13.ದಾವಣಗೆರೆ (ಸಾಮಾನ್ಯ)

14.ಶಿವಮೊಗ್ಗ (ಸಾಮಾನ್ಯ)

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಏಪ್ರಿಲ್‌ 12

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 19

ನಾಮಪತ್ರ ಪರಿಶೀಲನೆ: ಏಪ್ರಿಲ್‌ 20

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 22

ಮತದಾನದ ದಿನಾಂಕ: ಮೇ 07, ಮಂಗಳವಾರ

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ನಿಂದ ‘ತೆರಿಗೆ ಭಯೋತ್ಪಾದನೆ’ ಅಸ್ತ್ರ; ಬಿಜೆಪಿ ಕಟ್ಟಬೇಕಾದ ತೆರಿಗೆ ಲೆಕ್ಕ ಬಿಚ್ಚಿಟ್ಟ ಸಿಎಂ

ಈಗ ರಾಜ್ಯದ ರಾಜಕೀಯ ಸ್ಥಿತಿ ಗತಿ ಹೇಗಿದೆ?

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಎಲ್ಲ ಕಡೆ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಪ್ರಬಲ ಪೈಪೋಟಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಒಂದು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆದಿದ್ದರು.

ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದು 28 ಕ್ಷೇತ್ರಗಳನ್ನು ಹಂಚಿಕೊಂಡಿವೆ. ಬಿಜೆಪಿ 25 ಮತ್ತು ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. (ಇನ್ನೂ ಅಂತಿಮವಾಗಿಲ್ಲ.) ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಹೋರಾಟ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಸ್ಯಾಂಡಲ್‌ವುಡ್‌ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Actor Dwarakish
Koo

ಬೆಂಗಳೂರು: ಕರುನಾಡ ಕುಳ್ಳ, ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್‌ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್‌ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

1942ರ ಆಗಸ್ಟ್‌ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಇವರ ತಂದೆ ಶಾಮರಾವ್‌ ಹಾಗೂ ತಾಯಿ ಜಯಮ್ಮ. ಶಾರದಾ ವಿಲಾಸ್‌ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದರು. ಆರಂಭದಲ್ಲಿ ಸಹೋದರನ ಜತೆಗೂಡಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ, ಅವರ ಆಸಕ್ತಿ ಸಿನಿಮಾ ಕಡೆಗೆ ಇತ್ತು.

ಡಿಕೆಶಿ ಸಂತಾಪ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ

ದ್ವಾರಕೀಶ್‌ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಟಿ ಗಿರಿಜಾ ಲೋಕೇಶ್‌ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. “ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಡಿಕೆಶಿ ಪೋಸ್ಟ್‌ ಮಾಡಿದ್ದಾರೆ. ಇನ್ನು, ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲು ತೀರ್ಮಾನಿಸಲಾಗಿದೆ.

ಡಾ.ರಾಜಕುಮಾರ್‌ ಸೇರಿ ಹಲವು ಗಣ್ಯರೊಂದಿಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ ಸಿನಿಮಾ ಜಗತ್ತಿನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಅವರು 1963ರಲ್ಲಿ ವೀರಸಂಕಲ್ಪ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಅದರಲ್ಲೂ, 1966ರಲ್ಲಿ ಡಾ.ರಾಜಕುಮಾರ್‌ ಅಭಿನಯದ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ಮಾಣ ಮಾಡಿದರು. ಅಲ್ಲಿಂದ ಡಾ.ರಾಜಕುಮಾರ್‌ ಅವರ ಜತೆ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು.

1985ರಲ್ಲಿ ಸಿನಿಮಾ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು ಅಲ್ಲೂ ಯಶಸ್ವಿಯಾದರು. ಡಾ.ವಿಷ್ಣುವರ್ಧನ್‌ ಅಭಿನಯದ ನೀ ಬರೆದ ಕಾದಂಬರ್‌ ಸೂಪರ್‌ ಹಿಟ್‌ ಆಯಿತು. ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಕುಳ್ಳ, ಭಾಗ್ಯವಂತರು, ಗುರು ಶಿಷ್ಯರು, ಪೆದ್ದ-ಗೆದ್ದ, ಆಪ್ತಮಿತ್ರ ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ದ್ವಾರಕೀಶ್‌ ಅವರದ್ದಾಗಿದೆ. ಚೌಕ ಇವರ ಕೊನೆಯ ಸಿನಿಮಾ ಆಗಿದೆ. ʼದ್ವಾರಕೀಶ್‌ ಚಿತ್ರʼ ಇವರ ನಿರ್ಮಾಣ ಸಂಸ್ಥೆಯಾಗಿತ್ತು. ಇವರು ಸುಮಾರು 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

ಕುಳ್ಳ ಏಜೆಂಟ್‌ 000, ಕಿಟ್ಟು ಪುಟ್ಟು, ಕಳ್ಳ-ಕುಳ್ಳ, ಕುಳ್ಳ-ಕುಳ್ಳಿ, ಗುರು-ಶಿಷ್ಯರು, ಮಂಕು ತಿಮ್ಮ, ಪ್ರಚಂಡ ಕುಳ್ಳ, ನ್ಯಾಯ ಎಲ್ಲಿದೆ, ಹೊಸ ಕಳ್ಳ, ಹಳೇ ಕುಳ್ಳ, ಆಪ್ತಮಿತ್ರ ಇವರು ನಟಿಸಿದ ಪ್ರಮುಖ ಚಿತ್ರಗಳು. ನಾಯಕ ನಟನಾಗಿ, ಹಾಸ್ಯ ಕಲಾವಿದನಾಗಿ ಅಲ್ಲದೆ ಪೋಷಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದರು.

19 ಸಿನಿಮಾಗಳ ನಿರ್ದೇಶನ

ಡಾ.ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಜೋಡಿಯು ರಾಜ್ಯಾದ್ಯಂತ ಮೋಡಿ ಮಾಡಿತು. ಈ ಜೋಡಿಯು ಕಳ್ಳ-ಕುಳ್ಳ ಎಂದೇ ಖ್ಯಾತಿಯಾಯಿತು. ನೀ ಬರೆದ ಕಾದಂಬರಿ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಾಯರು ಬಂದರು ಮಾವನ ಮನೆಗೆ ಡಾನ್ಸ್‌ ರಾಜ ಡಾನ್ಸ್‌, ಶ್ರುತಿ ಹಾಕಿದ ಹೆಜ್ಜೆ ನಿರ್ದೇಶನ ಮಾಡಿದ ಪ್ರಮುಖ ಚಿತ್ರಗಳಾಗಿವೆ. ಕನ್ನಡದ ಜತೆಗೆ ಹಿಂದಿ, ತಮಿಳು, ತೆಲುಗು ಸಿನಿಮಾಗಳನ್ನೂ ನಿರ್ಮಾಣ ಮಾಡಿದ ಕೀರ್ತಿ ಇವರದ್ದು. ಇವರು 52 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: Meera Jasmine: ʻಮೌರ್ಯʼ, ʻಅರಸುʼ ಖ್ಯಾತಿ ನಟಿಯ ತಂದೆ ಇನ್ನಿಲ್ಲ

Continue Reading

ಪ್ರಮುಖ ಸುದ್ದಿ

BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

BSP List: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿಯು 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಇದರ ಬೆನ್ನಲ್ಲೇ, ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಪತ್ನಿಗೂ ಮಾಯಾವತಿ ಅವರು ಟಿಕೆಟ್‌ ನೀಡಿದ್ದಾರೆ.

VISTARANEWS.COM


on

BSP Candidates List
Koo

ಲಖನೌ: ದೇಶದ ಹಲವು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಬಹುಜನ ಸಮಾಜ ಪಕ್ಷವು (BSP List) 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲೂ, ವಾರಾಣಸಿಯಲ್ಲಿ (Varanasi) ನರೇಂದ್ರ ಮೋದಿ ಅವರ ವಿರುದ್ಧ ಅಥರ್‌ ಜಮಾಲ್‌ ಲರಿ (Athar Jamal Lari) ಅವರನ್ನು ಮಾಯಾವತಿ (Mayawati) ಅವರು ಕಣಕ್ಕಿಳಿಸಿದ್ದಾರೆ. ಮತ್ತೊಂದೆಡೆ, ಕೊಲೆ, ಸುಲಿಗೆ, ಅಪಹರಣ ಸೇರಿ ಹಲವು ಪ್ರಕರಣಗಳ ಆರೋಪಿ, ಜೈಲುಪಾಲಾಗಿರುವ ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿಗೂ ಬಿಎಸ್‌ಪಿ ಟಿಕೆಟ್‌ ಘೋಷಿಸಿದೆ.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಈಗ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ

ಯಾರೀತ ಧನಂಜಯ್‌ ಸಿಂಗ್‌?

ಧನಂಜಯ್‌ ಸಿಂಗ್‌ ಉತ್ತರ ಪ್ರದೇಶ ಕಂಡ ಕುಖ್ಯಾತ ಗ್ಯಾಂಗ್‌ಸ್ಟರ್‌ಗಳಲ್ಲಿ ಒಬ್ಬನಾಗಿದ್ದಾನೆ. ಈತನ ವಿರುದ್ಧ 1991ರಿಂದ 2023ರ ಅವಧಿಯಲ್ಲಿ ದೆಹಲಿ, ಜೌನ್‌ಪುರ ಹಾಗೂ ಲಖನೌನಲ್ಲಿ ಕೊಲೆ, ಸುಲಿಗೆ, ಅಪಹರಣ, ಗಲಭೆ, ಅಪರಾಧಕ್ಕೆ ಪ್ರಚೋದನೆ ಸೇರಿ 46 ಪ್ರಕರಣಗಳು ದಾಖಲಾಗಿವೆ. ಇಂತಹ ಗ್ಯಾಂಗ್‌ಸ್ಟರ್‌ ಒಮ್ಮೆ ಶಾಸಕ ಹಾಗೂ ಒಮ್ಮೆ ಸಂಸದನಾಗಿ (ಜೌನ್‌ಪುರ ಕ್ಷೇತ್ರದ ಸಂಸದ) ಆಯ್ಕೆಯಾಗಿದ್ದ ಎಂಬುದೇ ವ್ಯವಸ್ಥೆಯ ಘೋರ ಅಣಕವಾಗಿದೆ. ನಮಾಮಿ ಗಂಗೆ ಯೋಜನೆಯ ಮ್ಯಾನೇಜರ್‌ ಒಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಈತನಿಗೆ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Lok Sabah Election : ಉತ್ತರ ದಿಲ್ಲಿಯಿಂದ ಕಾಂಗ್ರೆಸ್​ ಟಿಕೆಟ್ ಪಡೆದ ಕನ್ಹಯ್ಯ ಕುಮಾರ್​​

Continue Reading

ದೇಶ

Boat Capsize: ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

Boat Capsize: ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ಮಂಗಳವಾರ ಬೆಳಗ್ಗೆ ದೋಣಿ ದುರಂತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ ಹಲವರು ಮಂದಿ ದೋಣಿಯಲ್ಲಿ ಸಂಚರಿಸುವಾಗ ಅದು ಮಗುಚಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗಿದೆ.

VISTARANEWS.COM


on

Boat Capsize
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಜೇಲಂ ನದಿಯಲ್ಲಿ (Jhelum River) ಮಂಗಳವಾರ (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು (Boat Capsize), ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading
Advertisement
RR vs KKR
ಕ್ರೀಡೆ12 mins ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Toyota Kirloskar Motor Launches New Innova Hicross Petrol GX (O) Grade
ದೇಶ14 mins ago

Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

Lok Sabha Election 2024 IT companies to remain closed in Bengaluru on April 26 BBMP order
Lok Sabha Election 202426 mins ago

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

NEET PG-2024
ಶಿಕ್ಷಣ47 mins ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು49 mins ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Dinesh Karthik
ಕ್ರೀಡೆ54 mins ago

Dinesh Karthik: ಕಾರ್ತಿಕ್​ಗೆ ಟಿ20 ವಿಶ್ವಕಪ್​ನಲ್ಲಿ ಅವಕಾಶ ನೀಡಿ; ದಿಗ್ಗಜ ಕ್ರಿಕೆಟಿಗರ ಒತ್ತಾಯ

gold rate today tapasi
ಚಿನ್ನದ ದರ57 mins ago

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Actor Dwarakish
ಪ್ರಮುಖ ಸುದ್ದಿ1 hour ago

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Theft Case in Bengaluru
ಬೆಂಗಳೂರು1 hour ago

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

actor prakash Rai
ವೈರಲ್ ನ್ಯೂಸ್2 hours ago

Actor Prakash Rai: “ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ; ನಿರ್ದಿಗಂತಕ್ಕೆ ಹಣದ ಹೊಳೆ!” ಸಿಡಿದೆದ್ದ ಜೆಡಿಎಸ್‌ನಿಂದ ನಟ ಪ್ರಕಾಶ್‌ ರೈಗೆ ಚಾಟಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ8 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌