Sunday read | ಹೊಸ ಪುಸ್ತಕ | ತಟ್ಟನೆ ಮನಮಂ ಪಸಾಯದಾನ ಕೊಟ್ಟಳು - Vistara News

ಕಲೆ/ಸಾಹಿತ್ಯ

Sunday read | ಹೊಸ ಪುಸ್ತಕ | ತಟ್ಟನೆ ಮನಮಂ ಪಸಾಯದಾನ ಕೊಟ್ಟಳು

ಸಂಧ್ಯಾರಾಣಿ ಅವರ ʼಇಷ್ಟುಕಾಲ ಒಟ್ಟಿಗಿದ್ದು…ʼ ಕಾದಂಬರಿಯನ್ನು ಸಾವಣ್ಣ ಪ್ರಕಾಶನ ಪ್ರಕಟಿಸಿದ್ದು, ಇಂದು ಬಿಡುಗಡೆಯಾಗುತ್ತಿದೆ. ಈ ಕಾದಂಬರಿಯಿಂದ ಆಯ್ದ ಭಾಗ ಇಲ್ಲಿದೆ.

VISTARANEWS.COM


on

sandhyarani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

sandhyarani

| ಸಂಧ್ಯಾರಾಣಿ

ಪೀಠಿಕೆ
‘ಕಾದಂಬರಿ ಹೇಗೆ ಬರುತ್ತಿದೆ ಮೇಡಂ? ಬಿಡುಗಡೆ ದಿನಗಳು ಹತ್ತಿರ ಬರುತ್ತಿವೆ’

ಪ್ರಕಾಶಕ ಜಮೀಲ್ ಅವರ ಮೆಸೇಜ್ ತಲುಪಿದಾಗ ಎದೆ ಝಲ್ ಎಂದಿತು. ಆರು ತಿಂಗಳ ಹಿಂದೆ ಶುರು ಮಾಡಿದ ಕಥೆಯೊಂದು ನಡುವಲ್ಲೇ ದಾರಿ ತಿಳಿಯದೆ ನಿಂತುಬಿಟ್ಟಿದೆ. ಹಾಗೆ ತೀರಾ ಬರೆದೇ ಇಲ್ಲ ಅಂತಲೂ ಅಲ್ಲ, ಶುರು ಮಾಡಿ, ಸ್ವಲ್ಪ ಮುಂದೆ ಸರಿದಿದ್ದೆ. ಆಮೇಲೆ ಬೇರೆ ಏನೇನೋ ಕೆಲಸಗಳ ನಡುವೆ ನಿಲ್ಲಿಸಬೇಕಾಗಿ ಬಂದಿತ್ತು. ಇನ್ನೂ ಸಮಯ ಇದೆ, ಇನ್ನೂ ಸಮಯ ಇದೆ ಎಂದುಕೊಂಡಿದ್ದರೆ, ಆ ಸಮಯ ಬಂದೇ ಬಿಟ್ಟಿದೆ! ಮರುದಿನ ಸ್ನೇಹಿತೆಯರೊಂದಿಗೆ ಮಡಿಕೇರಿ ಬಳಿಯ ರೆಸಾರ್ಟ್ ಒಂದಕ್ಕೆ ಹೋಗುವ ಕಾರ್ಯಕ್ರಮ ಹಾಕಿ ಆಗಿತ್ತು. ಬರೆದಷ್ಟನ್ನು ಪ್ರಿಂಟ್ ತೆಗೆಸಿಕೊಂಡು ಹೊರಟೆ. ಸುತ್ತಲೂ 96 ಎಕರೆಗಳ ಕಾಫಿತೋಟ. ನಡುವಿನಲ್ಲಿ ಜಂಗಲ್ ಲಾಡ್ಜ್ ಥರದ ರೆಸಾರ್ಟ್. ರಾತ್ರಿ ಇಡೀ ಕಾಡು ಮಾತನಾಡುವ ಸದ್ದು. ಮರುದಿನ ಮುಂಜಾನೆ ಎದ್ದು ವಾಕಿಂಗ್, ಸ್ನಾನ ತಿಂಡಿ ಮುಗಿಸಿ, ಕಾಫಿ ಕಪ್ ಜೊತೆಗೆ ಆ ಹಾಳೆಗಳನ್ನು ಹಿಡಿದು ಕುಳಿತೆ. ಆ ದಿನ ಸುತ್ತಾಡಲು ಬರುವುದಿಲ್ಲ ಎಂದು ಹೇಳಿ ಬೈಸಿಕೊಂಡಾಗಿತ್ತು. ಅಷ್ಟು ದಿನಗಳ ಅಂತರದ ನಂತರ ಮತ್ತೆ ಕಥೆ ಕೈಗೆತ್ತಿಕೊಂಡಿದ್ದೆ. ಆಗ ಶುರುವಾಯಿತು, ಇದನ್ನು ಹೀಗೆ ಹೇಳಬಹುದೆ, ಕಥೆ ಮುಖ್ಯವೆ, ತಂತ್ರ ಮುಖ್ಯವೆ, ಈ ಬರಹ ಹೆಚ್ಚು ನಗರ ಕೇಂದ್ರಿತ ಆಗುತ್ತಿದೆಯೆ? ಆದರೆ ಕಥೆ ನಡೆಯುವುದೇ ನಗರದಲ್ಲಿ. ಕಥೆ ಕೇಳುವ ಬದುಕನ್ನು ಬರೆಯಬೇಕಲ್ಲದೆ, ಬೇಕೆಂದೇ ಬೇರೆಯದನ್ನು ತರುವುದು ಹೇಗೆ? ಹೀಗೆ ನೂರೆಂಟು ಪ್ರಶ್ನೆಗಳು.

ಕತೆಯ ಪಾತ್ರವಾಗಿದ್ದ ಸರೋಜಿನಿ ಈಗಲೂ ನಿದ್ದೆಯಿಂದ ಎಬ್ಬಿಸಿ, `ನಿರಂಜನ ಪತ್ರ ಬರೆದನೆ?’ ಎಂದು ಕೇಳುತ್ತಾಳೆ. ಗೌರಿ ನಗುವಿನ ನಡುವೆಯೇ ಮ್ಲಾನವಾಗುತ್ತಾಳೆ. ಇನಾಯಾ ‘ಇವಾಗೇನು?’ ಅನ್ನುತ್ತಾಳೆ. ಅರುಂಧತಿ ‘ಚಿಲ್ ಬೇಬಿ, ಚಿಲ್’ ಎನ್ನುತ್ತಾಳೆ. ರಾಮಚಂದ್ರ ನೆನಪಾದರೆ ಮಾತ್ರ ನನಗೆ ಮಾತು ಹೊರಡುವುದಿಲ್ಲ, ಮನಸ್ಸು ವಿಷಣ್ಣ ರಾಗದಲ್ಲಿ ಮುಳುಗುತ್ತದೆ. ನಿರಂಜನನ ಪಾತ್ರದ ಮುಖ ಆಗಾಗ ಬದಲಾಗುತ್ತಾ ಅಲ್ಲಿ ನಾನು ಕಂಡಿದ್ದ, ಕೇಳಿದ್ದ, ಓದಿದ್ದ ಯಾರು ಯಾರೋ ಕಾಣಿಸಿಕೊಂಡು ಮಿಣ್ಣಗೆ ನಗುತ್ತಾರೆ. ಈ ಪಾತ್ರಕ್ಕಿಂತ ನಿಜಜೀವನದ ವ್ಯಕ್ತಿಗಳೇ ಹೆಚ್ಚು ವರ್ಣರಂಜಿತವಾಗಿ ಕಂಡು ಬಂದು, ‘ನನ್ನ ಕಥೆ ಬರಿ, ನನ್ನ ಕಥೆ ಬರಿ’ ಎಂದು ಕೇಳುತ್ತಾರೆ. ಆದರೆ ಗೊತ್ತಿದ್ದವರ ಬಗ್ಗೆ ಬರೆಯುವುದೆಂದರೆ ತರಲೆ ತಾಪತ್ರಯ ಜಾಸ್ತಿ. ಏಕೆಂದರೆ, ‘ನನ್ನ ಕಥೆ ಹೇಳುತ್ತೇನೆ ಬರಿ’ ಎಂದವರೂ ಸಹ ಕಥೆ ಪೂರ್ತಿಯಾದ ಮೇಲೆ ಅವಕ್ಕೂ ತಮಗೂ ಸಂಬಂಧವೇ ಇಲ್ಲ, ಅದು ತಾವಲ್ಲವೇ ಅಲ್ಲ ಎಂದು ಹೇಳಿ, ಆ ಪಾತ್ರಗಳನ್ನು ಅನಾಥರನ್ನಾಗಿ ಮಾಡಿಬಿಡುತ್ತಾರೆ. ಆಮೇಲೆ ಅವಕ್ಕೊಂದು ದಡ ಮುಟ್ಟಿಸುವವರೆಗೂ ಅವುಗಳ ಹೊಣೆ ಇಡಿಯಾಗಿ ನಮ್ಮ ಮೇಲೆ ಬೀಳುತ್ತದೆ.

ಯಾರೇ ಆಗಲಿ, ಎಂಥವರೇ ಆಗಲಿ ಅವರ ಕಣ್ಣಲ್ಲಿನ ಅವರ ಪಾತ್ರಕ್ಕೂ, ನಮ್ಮ ಕಣ್ಣಲ್ಲಿನ ಅವರ ಪಾತ್ರಕ್ಕೂ ವ್ಯತ್ಯಾಸಗಳು ಇದ್ದೇ ಇರುತ್ತದೆ. ಎಷ್ಟೇ ಕೇಳಿ ಬರೆದರೂ ಕಡೆಗೆ ನಾವು ಬರೆದದ್ದು ಅವರು ಹೇಳಿದ್ದಕ್ಕಿಂತ ಹೆಚ್ಚೋ, ಕಡಿಮೆಯೋ ಆಗಿ ಅದು ಅವರ ಕಥೆಗಿಂತ ಹೆಚ್ಚಾಗಿ ನಮ್ಮ ಕಥೆ ಆಗಿಬಿಟ್ಟಿರುತ್ತದೆ. ‘ಪ್ರತಿ ವಿಲನ್ ಪಾತ್ರಧಾರಿ ಸಹ ತನ್ನನ್ನು ತಾನು ಹೀರೋ ಎಂದುಕೊಂಡೇ ತನ್ನ ಪಾತ್ರ ನಿರ್ವಹಿಸುತ್ತಾನೆ’ ಎಂದು ಗೆಳೆಯನೊಬ್ಬ ಹೇಳಿದ್ದು ನೆನಪಾಯಿತು. ಯಾರದೇ ಕಥೆ ಏಕಮೇವ ಸತ್ಯವಾಗಿರಲು ಸಾಧ್ಯವೇ ಇಲ್ಲ. ಅದು ಅವರೊಬ್ಬರದೇ ಕಥೆ ಆಗಿರಲು ಸಹ ಸಾಧ್ಯವಿಲ್ಲ. ಅವರ ಮಟ್ಟಿಗೆ ಪ್ರತಿಯೊಬ್ಬರೂ ಅವರವರ ಕಥೆಗಳಲ್ಲಿ ನಾಯಕ ಮತ್ತು ನಾಯಕಿಯರೇ ಆಗಿರುತ್ತಾರೆ. ಅವರ ಎಲ್ಲಾ ನಿರ್ಧಾರಗಳಿಗೂ, ನಡವಳಿಕೆಗಳಿಗೂ ಸಮರ್ಪಕವಾದ ಕಾರಣಗಳು ಇದ್ದೇ ಇರುತ್ತವೆ.

ಈ ಸಾವಾಸವೇ ಬೇಡ ಎಂದುಕೊಂಡು ಈ ಕಾದಂಬರಿ ಬರೆಯುವಾಗ ಕಾಲ್ಪನಿಕ ಪಾತ್ರಗಳಿಗೆ ಮೊರೆ ಹೋಗಿದ್ದೆ. ಆದರೆ ಈ ಕಾಲ್ಪನಿಕ ಪಾತ್ರಗಳು ಸಹ ಬೆಳೆದಂತೆ ನನ್ನ ಸುತ್ತಮುತ್ತಲಿನವರು, ಕಂಡು ಕೇಳಿದವರಂತೆಯೇ ಕಂಡು ನನ್ನ ದಿಕ್ಕೆಡೆಸುತ್ತಿದ್ದಾವೆ. ಸರಿರಾತ್ರಿಯಲ್ಲಿ ಎಚ್ಚರಾಗಿ, ಮತ್ತೆ ನಿದ್ದೆ ಬರದೆ ಹೊರಳುವಾಗ, ಒಬ್ಬಂಟಿಯಾಗಿ ವಾಕಿಂಗ್ ಹೊರಟಾಗ, ಡ್ರೈವ್ ಮಾಡುವಾಗ ವಾಸ್ತವದ ರೂಪ ಧರಿಸಿ, ಹರಟೆ ಹೊಡೆಯಲು ಆರಂಭಿಸುತ್ತವೆ. ನನ್ನ ಕಾದಂಬರಿಯ ಪಾತ್ರ ಸರೋಜಿನಿ ಒಮ್ಮೊಮ್ಮೆ ಹಾಡುಗಾರ್ತಿಯಂತೆ ಕಂಡರೆ ಮತ್ತೊಮ್ಮೆ ಬರಹಗಾರ್ತಿಯೊಬ್ಬಳಂತೆ ಕಾಣುತ್ತಾಳೆ. ಇನ್ನೂ ಕೆಲವೊಮ್ಮೆ ಯಾವುದೋ ಬುಟಿಕ್‌ನಲ್ಲಿರುತ್ತಾಳೆ. ಮೊನ್ನೆ ಯಾವಾಗಲೋ ಕಾತ್ಯಾಯಿನಿ ದೇವಿಯ ರೂಪದಲ್ಲಿ ಬಂದುಬಿಟ್ಟಿದ್ದಳು. ಅಂದಹಾಗೆ ಹಾಡುಗಾರ್ತಿ ಕಾತ್ಯಾಯಿನಿ ನೆನಪಿದೆಯಾ? ಪ್ರಖ್ಯಾತ ಸಂಗೀತಕಾರ ನೀಲಲೋಹಿತರ ಪತ್ನಿ. ಬಹಳ ಹಿಂದೆ ನಾನವರ ಸಂದರ್ಶನ ಮಾಡಿದ್ದೆ. ಆಗ ಒಂದು ಚಾನೆಲ್‌ಗಾಗಿ ಪ್ರತಿವಾರ ಸಾಂಸ್ಕೃತಿಕ ಕಾರ್ಯಕ್ರಮವೊಂದನ್ನು ನಡೆಸಿಕೊಡುತ್ತಿದ್ದೆ. ಅಂದು ಮಹಿಳಾ ದಿನಾಚರಣೆ, ಅದಕ್ಕೆ ತಕ್ಕ ಹಾಗೆ ನೀಲಲೋಹಿತರ ಹುಟ್ಟಿದ ದಿನ ಸಹ. ವರ್ಷಾನುಗಟ್ಟಲೆ ಹಾಡು ನಿಲ್ಲಿಸಿದ್ದ ಕಾತ್ಯಾಯಿನಿ ಇತ್ತೀಚೆಗಷ್ಟೇ ಮತ್ತೆ ಹಾಡಲು ಪ್ರಾರಂಭಿಸಿದ್ದರು. ಕಪ್ಪುಬಿಳಿ ನೀಳ ಕೂದಲು, ಆರ್ದ್ರವಾದ, ಕಾಡಿಗೆಯಿಲ್ಲದ, ಒದ್ದೆಒದ್ದೆ ಕಣ್ಣುಗಳು. ಅಪಾರ ಆತ್ಮವಿಶ್ವಾಸದ ಮುಖ, ಕಣ್ಣ ಕೊನೆಯ ಗೆರೆಗಳಲ್ಲಿ, ತುಟಿ ಪಕ್ಕದ ತಿರುವಿನ ಕಣಿವೆಗಳಲ್ಲಿ ಒತ್ತಿಟ್ಟ ವಯಸ್ಸು, ಕಿವಿಗಳಲ್ಲಿ ವಜ್ರದೋಲೆ, ಮೂಗಿಗೆ ವಜ್ರದ ಮೂಗುತಿ, ಬೇಸರಿ…ಉಟ್ಟಿದ್ದ ಕೆಂಪಂಚಿನ ಬಿಳಿಬಿಳಿ ಸೀರೆ… ಸೌಂದರ್ಯಕ್ಕೆ ವಯಸ್ಸಾದರೆ ಹೀಗೆಯೇ ಕಾಣಿಸಬಹುದು ಎನ್ನುವ ರೂಪ.

ನೀಲಲೋಹಿತ ಸಹ ಹೀಗೆಯೇ ಅತ್ಯಂತ ಆಕರ್ಷಕ ವ್ಯಕ್ತಿತ್ವ. ಅವರನ್ನು ಕಂಡರೆ ಜೀವ ಬಿಡುವಷ್ಟು ಮೋಹ. ಯಾವುದೋ ಕಾಣದ ಮಾಯೆಯನ್ನು ಹುಡುಕುತ್ತಾ, ತಡಕುತ್ತಾ ಇಗೋ ಇನ್ನೇನು ಮುಟ್ಟೇಬಿಟ್ಟೆ ಎನ್ನುವಂತೆ ರಾಗದ ಏರಿಳಿತಗಳ ಬೆನ್ನು ಹತ್ತಿ ಹೋಗುತ್ತಿದ್ದ ಆ ಬಲಕೈ ಬೆರಳುಗಳ ತುದಿಯಲ್ಲಿ ಹೃದಯವನ್ನಿಟ್ಟು ನಿವಾಳಿಸಬೇಕು ಅನ್ನಿಸಿಬಿಡುತ್ತಿತ್ತು. ರಂಗದ ಮೇಲೆ ಆತ ಹಾಡುತ್ತಿದ್ದರೆ ‘ಎಲ್ಲೋ ಜೋಗಪ್ಪ ನಿನ್ನರಮನೆ?’ ಎಂದು ಬಾಯಿ ಮಾತಿಗೂ ಕೇಳದೆ, ಹಳ್ಳಕೊಳ್ಳ, ಬಯಲು ದಿಣ್ಣೆ ಎಲ್ಲೋ ಒಂದು ಕಡೆ ಒಟ್ಟಿನಲ್ಲಿ ಅವರೊಟ್ಟಿಗೆ ಹೋಗಿಬಿಡಬೇಕು ಅನ್ನಿಸುತ್ತಿತ್ತು. ಯಾವುದೇ ಸಾಲಿನಲ್ಲಿ ಕುಳಿತು ಸಂಗೀತ ಕೇಳುತ್ತಿರಲಿ, ಯಾವುದೋ ಒಂದು ಕ್ಷಣ ಕೇಳುಗರೆಲ್ಲರೆಡೆಗೆ ತಿರುಗುತ್ತಾ, ಎಲ್ಲರ ಕಣ್ಣುಗಳನ್ನೂ ಸ್ಪರ್ಶಿಸುತ್ತಿದ್ದ ಅವರ ಕಣ್ಣೋಟ ನಮ್ಮ ಕಣ್ಣುಗಳಲ್ಲಿ ಅರೆಘಳಿಗೆ ತಂಗಿದಾಗ ’ತಟ್ಟನೆ ಮನಮಂ ಪಸಾಯದಾನ ಕೊಟ್ಟಳು’ ಎನ್ನುವ ಯಶೋದರೆ ಅರ್ಥವಾಗಿಬಿಡುತ್ತಿದ್ದಳು. ಪ್ರತಿಸಲ ಅವರ ಸಂಗೀತ ಕೇಳುವಾಗಲೂ ಕಣ್ಣುಗಳಿಂದ ತಣ್ಣಗೆ ಕಂಬನಿ ಹರಿದು, ಒಳಗನ್ನೆಲ್ಲಾ ತೊಳೆಯುತ್ತಿತ್ತು. ಅವರ ಧ್ವನಿಯಲ್ಲಿ ಒಬ್ಬ ಗಂಧರ್ವ ಮತ್ತು ಒಬ್ಬ ತಾಯಿ ಇದ್ದಾಳೆ ಅನ್ನಿಸುತ್ತಿತ್ತು. ಅವರ ಗುರುವಿನ ಮಗಳೇ ಈ ಕಾತ್ಯಾಯಿನಿ. ಗುರುಗಳು ಮಗಳ ಜೊತೆಯಲ್ಲಿ ತನ್ನ ಘರಾನಾ ಪರಂಪರೆಯನ್ನೂ ಇವರಿಗೆ ಧಾರೆಯೆರೆದು ಕೊಟ್ಟಿದ್ದರು. ತುಂಬಾ ಬಡತನದಿಂದ ಬಂದ ನೀಲಲೋಹಿತರಲ್ಲಿ ಅಪಾರ ಪ್ರತಿಭೆಯ ಜೊತೆಜೊತೆಗೆ ಪಟ್ಟು ಬಿಡದೆ ಸಾಧಿಸುವ ಛಲವೂ ಇತ್ತು. ಬೆಳೆಯುತ್ತಾ, ಬೆಳೆಯುತ್ತಾ ಅವರು ರಾಜ್ಯ, ದೇಶಗಳ ಸೀಮೆಯನ್ನು ದಾಟಿ ಬೆಳೆದಿದ್ದರು. ಅವರ ಅಡಿಗಳನ್ನು ಅನುಸರಿಸಿದ ಅದೆಷ್ಟು ಶಿಷ್ಯರು ಮತ್ತು ಶಿಷ್ಯೆಯರು.

ಮುಖ್ಯವಾಗಿ ಶಿಷ್ಯೆಯರು…ಅವರನ್ನು ಸದಾ ಹಿಂಬಾಲಿಸುತ್ತಿದ್ದ ಶಿಷ್ಯೆಯರು. ಹೆಂಡತಿಯ ಹಕ್ಕು, ಅಧಿಕಾರ, ಗೌರವ, ಮನ್ನಣೆ ಎಲ್ಲವನ್ನೂ ಕಾಲಕಾಲಕ್ಕೆ ಹಂಚಿಕೊಳ್ಳುತ್ತಿದ್ದ, ಕಾಲಕಾಲಕ್ಕೆ ಬದಲಾಗುತ್ತಿದ್ದ ಶಿಷ್ಯೆಯರು. ಸಾಣೆ ಹಿಡಿದ ಕತ್ತಿಯ ಅಲುಗಿನಂತಹ ಅವರ ಆಲಾಪದೊಂದಿಗೆ ಇಂತಹ ಸುದ್ದಿಗಳೂ ಪಸರಿಸುತ್ತಿದ್ದವು. ಅವರ ಸಿಟ್ಟು, ವಿಕ್ಷಿಪ್ತತೆ, ಕೆಲವು ಹೆಣ್ಣುಗಳಿಗೆ ಆಕರ್ಷಕವೆನ್ನಿಸುವ ಆರೋಗೆನ್ಸ್… ಎಲ್ಲಾ ಗೊತ್ತಿದ್ದರೂ ಅವರ ಹಾಡು ಕೇಳಿದಮೇಲೆ ಅವರನ್ನು ಪ್ರೀತಿಸದೆ ಇರಲು ಸಾಧ್ಯವೇ ಇರಲಿಲ್ಲ. ಆದರೆ ಅವರ ಕಾಲಾನಂತರ ಒಂದು ಪವಾಡ ನಡೆದಿತ್ತು. ಅವರಿರುವವರೆಗೂ ಬಾಯೇ ಬಿಡದ ಅವರ ಹೆಂಡತಿ ಆಮೇಲೆ ತಾವೂ ಹಾಡಲು ಶುರು ಮಾಡಿದ್ದರು. ಮಾಡಿದ್ದೇ ಮಾಡಿದ್ದು ಒಂದು ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದ್ದರು. ಬಿಸಿಲು ಮಳೆಯಾಗಿ, ಮಳೆ ಬೆಳದಿಂಗಳಾಗಿ, ತಂಗಾಳಿ ಬಿರುಗಾಳಿಯಾಗಿ ಅವರ ಸ್ವರದಲ್ಲಿ ಸಂಗೀತದ ಸ್ವರಗಳು ಕುಣಿಯುತ್ತಿದ್ದವು. ಆ ದನಿಯಲ್ಲಿ ಒಂದು ಮಾಧುರ್ಯವಿತ್ತು, ವರ್ಷಗಳ ಸಾಧನೆ ಇತ್ತು. ಜೊತೆಜೊತೆಯಲ್ಲೇ ಒಂದು ಅವ್ಯಕ್ತ ವಿಷಾದ, ನೋವು ಅಲೆಅಲೆಯಾಗಿ ಬರುತ್ತಿತ್ತು. ಅವರ ಪತಿ ಹಾಡುತ್ತಿದ್ದದ್ದು ತಾಂತ್ರಿಕವಾಗಿ ಅತ್ಯುನ್ನತ ಮಟ್ಟದಲ್ಲಿರುತ್ತಿತ್ತು, ಆದರೆ ಇವರ ಹಾಡಿನಲ್ಲಿದ್ದ ‘ಏನೋ ಒಂದು’ ಎಲ್ಲರ ಎದೆಯಾಳದ ದುಃಖಕ್ಕೂ ಮಾತು ಕೊಟ್ಟುಬಿಡುತ್ತಿತ್ತು. ಇಷ್ಟು ದಿನ ಈಕೆ ಹಾಡುತ್ತಿರಲಿಲ್ಲ ಏಕೆ ಎನ್ನುವುದು ಎಲ್ಲರ ಪ್ರಶ್ನೆಯಾಗಿತ್ತು.

‘ನಾನು ಹೊರಗೆ ಹಾಡುವುದು ಅವರಿಗೆ ಇಷ್ಟವಾಗುತ್ತಿರಲಿಲ್ಲ..’ ಒಮ್ಮೆ ಮಾತ್ರ ಅವರು ಹೇಳಿದ್ದರು. ಎಲ್ಲರ ಆರಾಧ್ಯದೈವವಾಗಿದ್ದ ಆ ದಿವಂಗತ ಸಂಗೀತಗಾರರು ಇದ್ದಕ್ಕಿದ್ದಂತೆ ಈಕೆಯನ್ನು ಮನೆಯ ಒಳಕೋಣೆಯಲ್ಲಿ ಕೂಡಿಹಾಕಿ, ಕಾವಲು ಕೂತಿದ್ದ ಗಂಡಸಾಗಿ ಬದಲಾಗಿಬಿಟ್ಟಿದ್ದರು. ಕಾತ್ಯಾಯಿನಿಯವರ ಸಂದರ್ಶನ ಮಾಡಲೆಂದು ಅವರ ನಡುಮನೆಯಲ್ಲಿದ್ದ ತೊಟ್ಟಿಮನೆಯಂತಹ ಚೌಕದ ಕಟ್ಟೆಯ ಮೇಲೆ ಕುಳಿತಿದ್ದೆ. ಅವರ ಮೆಲುಮಾತು, ಸಮಾಧಾನದ ಉತ್ತರ ತುಂಬಾ ಇಷ್ಟವಾಗುತ್ತಿತ್ತು. ಏನೇನೋ ಪ್ರಶ್ನೆ ಕೇಳುತ್ತಿದ್ದವಳು ನಡುವಿನಲ್ಲಿ, ‘ಹೀಗೆ ಜಗತ್ತಿನ ಯಾರೇ ಆಗಲಿ ಪ್ರೀತಿಸದೆ ಇರಲು ಸಾಧ್ಯವೇ ಇಲ್ಲದಂತಹ ಕಲಾವಿದರ ಪತ್ನಿಯಾಗಿ, ಆ ಎಲ್ಲಾ ಪ್ರೀತಿಯ ನಡುವಲ್ಲಿ, ಅವರೆಲ್ಲರೊಡನೆ ಅವರನ್ನು ಹಂಚಿಕೊಂಡು, ಮನೆಯಲ್ಲಿ ಅವರನ್ನು ಪ್ರೀತಿಸುತ್ತಲೇ ಇರುವುದು ಸಾಧ್ಯವೆ?’ ಅಂದೆ.

ಕೃತಿ: ಇಷ್ಟು ಕಾಲ ಒಟ್ಟಿಗಿದ್ದು… (ಕಾದಂಬರಿ)
ಲೇಖಕಿ: ಸಂಧ್ಯಾರಾಣಿ
ಪ್ರಕಾಶಕರು: ಸಾವಣ್ಣ ಪ್ರಕಾಶನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading
Advertisement
Kaladarpana-Art Reflects
ಬೆಂಗಳೂರು1 hour ago

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Covishield Vaccine
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Narendra modi
ಪ್ರಮುಖ ಸುದ್ದಿ2 hours ago

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

DK Shivakumar
ಪ್ರಮುಖ ಸುದ್ದಿ2 hours ago

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

IPL 2024
Latest2 hours ago

IPL 2024 : ‘ಆಲ್​ರೌಂಡರ್​’ ಪಾಂಡ್ಯ ನೇತೃತ್ವದ ಮುಂಬೈ ತಂಡವನ್ನು ಸೋಲಿಸಿದ ರಾಹುಲ್ ನಾಯಕತ್ವದ ಲಕ್ನೊ

Union Minister Pralhad Joshi election campaign in Shiggavi
ಧಾರವಾಡ2 hours ago

Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Lok Sabha Election 2024 Bike rally for voting awareness in Hosapete
ವಿಜಯನಗರ2 hours ago

Lok Sabha Election 2024: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
ಕರ್ನಾಟಕ2 hours ago

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

2nd PUC Paper Leak
ಕರ್ನಾಟಕ2 hours ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 20242 hours ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ21 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌