Karun Nair | ಕ್ರಿಕೆಟ್​ನಲ್ಲಿ ಒಂದು ಅವಕಾಶ ನೀಡಿ; ಕರುಣ್ ನಾಯರ್​​ ಹತಾಶೆಯ ಟ್ವೀಟ್​ - Vistara News

ಕ್ರಿಕೆಟ್

Karun Nair | ಕ್ರಿಕೆಟ್​ನಲ್ಲಿ ಒಂದು ಅವಕಾಶ ನೀಡಿ; ಕರುಣ್ ನಾಯರ್​​ ಹತಾಶೆಯ ಟ್ವೀಟ್​

ಟೀಮ್​ ಇಂಡಿಯಾ ಆಟಗಾರ ಕರುಣ್​ ನಾಯರ್​ ಕ್ರಿಕೆಟ್​ನಲ್ಲಿ ಒಂದು ಅವಕಾಶ ನೀಡುವಂತೆ ಟ್ವೀಟ್​ ಮಾಡುವ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

karun nair
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಗ್ಲೆಂಡ್​ ವಿರುದ್ಧ 2016ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಭರವಸೆ ಮೂಡಿಸಿದ್ದ ಕರುಣ್​ ನಾಯರ್​ ಬಳಿಕ ರಾಷ್ಟ್ರೀಯ ತಂಡದಲ್ಲಿ ಸರಿಯಾದ ಅವಕಾಶ ಸಿಗದೆ ಸುಮಾರು ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಕರುಣ್​ ನಾಯರ್​ ಟ್ವೀಟ್​ ಮಾಡಿದ್ದು “ಪ್ರೀತಿಯ ಕ್ರಿಕೆಟ್, ನನಗೆ ಇನ್ನೂ ಒಂದು ಅವಕಾಶ ನೀಡಿ” ಎಂದು ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ತ್ರಿಶತಕ ಸಿಡಿಸಿದ ಕೇವಲ ಎರಡನೇ ಭಾರತೀಯ ಆಟಗಾರ ಎಂಬ ಖ್ಯಾತಿಯ ಕರುಣ್ ನಾಯರ್ ಈ ಟ್ವೀಟ್​ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಕ್ರಿಕೆಟ್​ನಲ್ಲಿ ಸರಿಯಾದ ಅವಕಾಶ ಸಿಗದ ಕಾರಣದಿಂದ ಅವರು ಬೇಸರದಿಂದ ಈ ಟ್ವೀಟ್​ ಮಾಡಿದಂತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು.
ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

ದೇಶೀಯ ಕ್ರಿಕೆಟ್​ನಲ್ಲಿಯೂ ಫಾರ್ಮ್​ ಕಳೆದುಕೊಂಡ ಕರುಣ್​

ಇತ್ತೀಚಿನ ವರ್ಷಗಳಲ್ಲಿ ಐಪಿಎಲ್, ದೇಶೀಯ ಕ್ರಿಕೆಟ್​ನಲ್ಲಿಯೂ ಕರುಣ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ.
ರಾಷ್ಟ್ರೀಯ ತಂಡದಿಂದ ಹೊರಬಿದ್ದರೂ ಕರುಣ್ ನಾಯರ್ ದೇಶೀಯ ಕ್ರಿಕೆಟ್ ನಲ್ಲಿ ಕರ್ನಾಟಕ ತಂಡದ ಅವಿಭಾಜ್ಯ ಭಾಗವಾಗಿದ್ದರು. ಆದರೆ ಇತ್ತೀಚೆಗೆ ಇಲ್ಲಿಯೂ ಕೂಡ ಅವರ ಪ್ರದರ್ಶನ ಮಂಕಾಗಿದೆ. ಇದೇ ಕಾರಣದಿಂದ ಕಳೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದುಕೊಂಡಿರಲಿಲ್ಲ. ಆದರೂ ರಣಜಿ ಟೂರ್ನಿಯ ಸಂಭಾವ್ಯ ತಂಡದಲ್ಲಿ ಕರುಣ್​ಗೆ ಅವಕಾಶ ನೀಡಲಾಗಿತ್ತು. ಆದರೆ ಶನಿವಾರದಂದು ಪ್ರಕಟಿಸಿದ ರಣಜಿ ಟ್ರೋಫಿಯ ಮೊದಲೆರಡು ಪಂದ್ಯಗಳಿಗೆ ಅವರ ಹೆಸರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಕರುಣ್ ನಾಯರ್ ಟ್ವೀಟ್ ಮಾಡಿದ್ದು, ಪ್ರೀತಿಯ ಕ್ರಿಕೆಟ್, ನನಗೆ ಇನ್ನೂ ಒಂದು ಅವಕಾಶ ನೀಡಿ.” ಎಂದು ಹೇಳಿದ್ದಾರೆ.

ಕರುಣ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 6 ಟೆಸ್ಟ್ ಮತ್ತು 2 ಏಕ ದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ ತ್ರಿಶತಕ ಸೇರಿದಂತೆ ಒಟ್ಟು 374 ರನ್ ಗಳಿಸಿದ್ದಾರೆ. ಇದರ ಜತೆಗೆ ಏಕ ದಿನ ಕ್ರಿಕೆಟ್‌ನಲ್ಲಿ 2 ಪಂದ್ಯಗಳಲ್ಲಿ 46 ರನ್ ಗಳಿಸಿದ್ದಾರೆ. ಜೂನ್ 2016 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಇದಾಗ ಬಳಿಕ ಅವರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ | INDvsBAN | ಮೂರನೇ ಪಂದ್ಯದಲ್ಲಿ ಟೀಮ್‌ ಇಂಡಿಯಾ ಅಬ್ಬರ, ಬಾಂಗ್ಲಾದೇಶ ವಿರುದ್ಧ 227 ರನ್‌ಗಳ ಭರ್ಜರಿ ಜಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SL ODI : ಲಂಕಾ ವಿರುದ್ಧ ಪಂದ್ಯದ ವೇಳೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೈದಾನಕ್ಕೆ ಇಳಿದ ರೋಹಿತ್​ ಪಡೆ

IND vs SL ODI: ಅನ್ಶುಮಾನ್ ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 2 ಶತಕ ಸಮೇತ 2254 ರನ್ ಗಳಿಸಿದ್ದಾರೆ. 1983 ರಲ್ಲಿ ಜಲಂಧರ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 201 ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತಹ ಹಿರಿಯ ರಾಷ್ಟ್ರೀಯ ಪುರುಷರ ತಂಡಕ್ಕೆ ತರಬೇತುದಾರರಾಗಿದ್ದರು.

VISTARANEWS.COM


on

IND vs SL ODI
Koo

ಬೆಂಗಳೂರು: ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನದ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ (IND vs SL ODI) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ತೋಳಿನಲ್ಲಿ ಕಪ್ಪು ಪಟ್ಟಿ ಧರಿಸಿದ್ದರು. ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಜುಲೈ 31 ರಂದು ತಮ್ಮ 71 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು. ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ (ಆಗಸ್ಟ್ 2) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಪ್ಪು ಪಟ್ಟಿ ಧರಿಸಿ ಆಡಿದರು.

“ಬುಧವಾರ ನಿಧನರಾದ ಭಾರತದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಅಂಶುಮಾನ್ ಗಾಯಕ್ವಾಡ್ ಅವರ ಸ್ಮರಣಾರ್ಥ ಟೀಮ್ ಇಂಡಿಯಾ ಇಂದು ಕಪ್ಪು ತೋಳುಗಳನ್ನು ಧರಿಸಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಅನ್ಶುಮಾನ್ ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 2 ಶತಕ ಸಮೇತ 2254 ರನ್ ಗಳಿಸಿದ್ದಾರೆ. 1983 ರಲ್ಲಿ ಜಲಂಧರ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 201 ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತಹ ಹಿರಿಯ ರಾಷ್ಟ್ರೀಯ ಪುರುಷರ ತಂಡಕ್ಕೆ ತರಬೇತುದಾರರಾಗಿದ್ದರು. ಮಾಜಿ ಕ್ರಿಕೆಟಿಗ ಅನ್ಶುಮಾನ್ ತಮ್ಮ ಕೊನೆಯ ದಿನಗಳನ್ನು ಆಸ್ಪತ್ರೆಯಲ್ಲಿ ಕಳೆದಾಗ ಅವರ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿತ್ತು.

ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ

ಶುಕ್ರವಾರ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕೊಲಂಬೊದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜತೆಗೂಡಿ ಗೆಲುವಿಗಾಗಿ ಯತ್ನಿಸಲಿದೆ. ಆರಂಭದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡುವುದಿಲ್ಲ ಎಂದು ಹೇಳಲಾಗಿತ್ತು. ಅಂತಿಮವಾಗಿ ಭಾರತ ತಂಡಕ್ಕೆ ಅವರು ಸೇರಿಕೊಂಡಿದ್ದರು. ಭಾರತ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ತನ್ನ ಸಿದ್ಧತೆ ಪ್ರಾರಂಭಿಸಿದೆ.

ಇದನ್ನೂ ಓದಿ: Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

ಏಕದಿನ ಸರಣಿಯ ಭಾಗವಾಗದ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಇಲ್ಲ. ಇದೇ ವೇಲೆ ರಿಷಭ್ ಪಂತ್ ಅವರನ್ನು ಕೈಬಿಟ್ಟು ಕೆಎಲ್ ರಾಹುಲ್ ಅವರನ್ನು ಭಾರತ ತನ್ನ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತವು ಶ್ರೀಲಂಕಾವನ್ನು ಟಿ 20 ಐ ಸರಣಿಯಲ್ಲಿ 3-0 ಅಂತರದಿಂದ ಸೋಲಿಸಿದ ನಂತರ ಏಕದಿನ ಸರಣಿಗೆ ಬಂದಿದೆ.

Continue Reading

ಕ್ರೀಡೆ

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

MS Dhoni: ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

VISTARANEWS.COM


on

MS Dhoni
Koo

ರಾಂಚಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ತಮ್ಮ ನೆಚ್ಚಿನ ಕ್ರಿಕೆಟಿಗನ ಹೆಸರನ್ನು(Dhoni Picks His Favourite Cricketer) ಬಹಿರಂಗಪಡಿಸಿದ್ದಾರೆ. ಇದುವರೆಗೂ ಅಭಿಮಾನಿಗಳು ಧೋನಿಯ ನೆಚ್ಚಿನ ಕ್ರಿಕೆಟಿಗ ವಿರಾಟ್​ ಕೊಹ್ಲಿ ಅಥವಾ ರೋಹಿತ್​ ಶರ್ಮ ಎಂದು ಭಾವಿಸಿದ್ದರು. ಆದರೆ, ಧೋನಿ ಅವರ ಸದ್ಯದ ಫೇವರಿಟ್​ ಕ್ರಿಕೆಟಿಗನೆಂದರೆ ಅದು ಜಸ್​ಪ್ರೀತ್​ ಬುಮ್ರಾ (Jasprit Bumrah). ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಧೋನಿ ಈ ವಿಚಾರವನ್ನು ರಿವೀಲ್​ ಮಾಡಿದ್ದಾರೆ.

ಪ್ರಸ್ತುತ ಕ್ರಿಕೆಟ್​ನಲ್ಲಿ ನಿಮ್ಮ ನೆಚ್ಚಿನ​ ಆಟಗಾರ ಯಾರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧೋನಿ, “ಸದ್ಯ ಫೇವರಿಟ್ ಆಟಗಾರ ವೇಗಿ ಜಸ್​ಪ್ರೀತ್​ ಬುಮ್ರಾ. ಭಾರತ ತಂಡವು ಉತ್ತಮ ಪ್ರದರ್ಶನ ನೀಡುತ್ತಿರುವಾಗ ನಾನು ಬ್ಯಾಟರ್ ನನ್ನು ಆಯ್ಕೆ ಮಾಡುವುದಿಲ್ಲ. ಅವರು ರನ್ ಗಳಿಸುತ್ತಲೇ ಇರುತ್ತಾರೆ. ನಾನು ಬೌಲರ್​ ಬುಮ್ರಾ ಅವರನ್ನು ಆಯ್ಕೆ ಮಾಡುತ್ತೇನೆ” ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ಆಟಗಾರ ಬುಮ್ರಾ ಎನ್ನುವುದನ್ನು ತಿಳಿಸಿದ್ದಾರೆ.

ಮುಂದಿನ ಐಪಿಎಲ್​ ಆಡಲಿದ್ದಾರಾ ಧೋನಿ?


ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇದೀಗ ಅವರು ಮುಂದಿನ ಐಪಿಎಲ್ ಆಡುತ್ತಾರಾ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಚರ್ಚೆಯಾಗುತ್ತಿದೆ.

ಇದನ್ನೂ ಓದಿ MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

​ಕೆಲ ಮೂಲಗಳ ಪ್ರಕಾರ ಡಿಸೆಂಬರ್​ನಲ್ಲಿ ನಡೆಯುವ ಆಟಗಾರರ ಮೆಗಾ ಹರಾಜಿಗೆ ಬಿಸಿಸಿಐ(BCCI) ಈ ನಿಯಯ ಜಾರಿಗೆ ತಂದರೆ ಧೋನಿ ಅವರು 18ನೇ ಆವೃತ್ತಿ ಐಪಿಎಲ್(IPL 2025)​ ಆಡುವುದು ಅನುಮಾನ ಎನ್ನಲಾಗಿದೆ. ಬಿಸಿಸಿಐ ಐಪಿಎಲ್ ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಮಾತ್ರ ನೀಡಿದ್ದಲ್ಲಿ ಧೋನಿಗೆ ಚೆನ್ನೈ(CSK) ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಸಿಎಸ್‌ಕೆ ನಾಯಕ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶ್ರೀಲಂಕಾದ ವೇಗಿ ಮತಿಶಾ ಪತಿರಾಣ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳುವ ಯೋಚನೆಯಲ್ಲಿದೆ ಎನ್ನಲಾಗಿದೆ. ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

Continue Reading

ಕ್ರೀಡೆ

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

India vs Sri Lanka: ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ.

VISTARANEWS.COM


on

India vs Sri Lanka
Koo

ಕೊಲಂಬೊ: ಕಳೆದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದ ಬಳಿಕ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರರಾದ ನಾಯಕ ರೋಹಿತ್​ ಶರ್ಮ(rohit sharma) ಮತ್ತು ವಿರಾಟ್​ ಕೊಹ್ಲಿ(virat kohli) ಶ್ರೀಲಂಕಾ(India vs Sri Lanka) ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ.

ರೋಹಿತ್​​ಗೆ ಬೇಕು 2 ಶತಕ

ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ. ರೋಹಿತ್​ 2 ಶತಕ ಬಾರಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

14 ಸಾವಿರ ರನ್​ ದಾಖಲೆ ಮೇಲೆ ಕೊಹ್ಲಿ ಕಣ್ಣು


ವಿರಾಟ್​ ಕೊಹ್ಲಿ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದನ್ನೂ ಓದಿ IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ

Continue Reading

ಕ್ರೀಡೆ

IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

IND vs SL: ವಿಕೆಟ್​ ಕೀಪಿಂಗ್​ ವಿಚಾರದಲ್ಲಿ ಕನ್ನಡಿಗ ಕೆ.ಎಲ್‌ ರಾಹುಲ್‌ ಮತ್ತು ರಿಷಭ್‌ ಪಂತ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ ಕೂಡ ರಾಹುಲ್​ ಮೊದಲ ಆಯ್ಕೆಯ ಕೀಪರ್​ ಆಗಿದ್ದಾರೆ.

VISTARANEWS.COM


on

IND vs SL: When and where to watch ODI, squads, predicted XI, venues
Koo

ಕೊಲಂಬೊ: ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್ ಸಾಧನೆಗೈದ ಭಾರತ ತಂಡ ಶುಕ್ರವಾರದಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು(IND vs SL) ಸಜ್ಜಾಗಿದೆ. ಇತ್ತಂಡಗಳ ಮೊದಲ ಪಂದ್ಯಕ್ಕೆ ಆರ್‌. ಪ್ರೇಮದಾಸ ಕ್ರೀಡಾಂಗಣ ಅಣಿಯಾಗಿದೆ. ಇಂದು ಮಧ್ಯಾಹ್ನ 2.30ರಿಂದ ಪಂದ್ಯ ಆರಂಭಗೊಳ್ಳಲಿದೆ. ಸೋನಿ ಸ್ಪೋರ್ಟ್ಸ್​ನಲ್ಲಿ ಪ್ರಸಾರ ಕಾಣಲಿದೆ.

ಕೊಹ್ಲಿ, ರೋಹಿತ್​ ಕಮ್​ಬ್ಯಾಕ್​


ಈ ಸರಣಿಯ ಮೂಲಕ ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮ ಮತ್ತೆ ಏಕದಿನ ಪಂದ್ಯಕ್ಕೆ ಕಮ್​ಬ್ಯಾಕ್​ ಮಾಡಲಿದ್ದಾರೆ. ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ. ಅತ್ತ ಇದು ಹೊಸ ಕೋಚ್‌ ಗೌತಮ್‌ ಗಂಭೀರ್‌ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಮೊದಲ ಏಕದಿನ ಸರಣಿಯಾಗಿದೆ. ಹೀಗಾಗಿ ನಿರೀಕ್ಷೆ ದೊಡ್ಡ ಮಟ್ಟದಿಂದ ಕೂಡಿದೆ.

ವಿಕೆಟ್​ ಕೀಪಿಂಗ್​ ವಿಚಾರದಲ್ಲಿ ಕನ್ನಡಿಗ ಕೆ.ಎಲ್‌ ರಾಹುಲ್‌ ಮತ್ತು ರಿಷಭ್‌ ಪಂತ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ ಕೂಡ ರಾಹುಲ್​ ಮೊದಲ ಆಯ್ಕೆಯ ಕೀಪರ್​ ಆಗಿದ್ದಾರೆ. ಏಕೆಂದರೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ತಂಡ ಪ್ರಕಟಿಸುವ ವೇಳೆಯೇ ರಾಹುಲ್​ ಮೊದಲ ಕೀಪಿಂಗ್​ ಆಯ್ಕೆ ಎಂದು ಹೇಳಿದ್ದರು. ಮುಂದಿನ ವರ್ಷ ಪಾಕ್​ ಆತಿಥ್ಯದಲ್ಲಿ ನಡೆಯುವ ಏಕದಿನ ಮಾದರಿಯ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯ ನಿಟ್ಟಿನಲ್ಲಿ ಯುವ ಆಟಗಾರರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡರೆ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಬಹುದು.

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದನ್ನೂ ಓದಿ IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಲಂಕಾ ತಂಡ ಭಾರತದ ಸವಾಲು ಎದುರಿಸೀತೇ ಎನ್ನುವುದು ಇಲ್ಲಿ ಪ್ರಮುಖ ಸಂಗತಿ. ತಂಡದ ಪ್ರಧಾನ ವೇಗಿಗಳಾದ ಮತೀಷ ಪತಿರಣ ಮತ್ತು ದಿಲ್ಶನ್‌ ಮಧುಶಂಕ ಹೊರಬಿದ್ದಿರುವುದರಿಂದ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading
Advertisement
Woman Deliver Baby in Auto
ಕರ್ನಾಟಕ2 mins ago

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Mangaluru Train Timings
Latest16 mins ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ24 mins ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ27 mins ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Haris Rauf
ಕ್ರೀಡೆ27 mins ago

Haris Rauf: ʼದಿ ಹಂಡ್ರೆಡ್‌ʼ ಕ್ರಿಕೆಟ್‌ ಲೀಗ್‌ ಆಡುತ್ತಿದ್ದ ಪಾಕ್‌ ವೇಗಿ ರೌಫ್‌ಗೆ ಕೊಹ್ಲಿ ಬಾರಿಸಿದ ಸಿಕ್ಸರ್‌ ನೆನಪಿಸಿದ ಅಭಿಮಾನಿ; ವಿಡಿಯೊ ವೈರಲ್‌

Wayanad Tragedy
Latest30 mins ago

Wayanad Tragedy: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

Western Ghats
ಕರ್ನಾಟಕ51 mins ago

Western Ghats: ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

Parliament Session
ರಾಜಕೀಯ54 mins ago

Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ

Rajeev Chandrasekhar
ದೇಶ58 mins ago

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

Teacher Transfer Counselling
ಬೆಂಗಳೂರು1 hour ago

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌