BITM Silver jubilee | ರಜತ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿ ʼಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ʼ - Vistara News

ಕರ್ನಾಟಕ

BITM Silver jubilee | ರಜತ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿ ʼಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ʼ

BITM Silver jubilee | ಮಾಜಿ ಕೇಂದ್ರ ಸಚಿವೆ ದಿ. ಶ್ರೀಮತಿ ಬಸವರಾಜೇಶ್ವರಿಯವರ ನಾಲ್ಕೂವರೆ ದಶಕದ ರಾಜಕೀಯ ಸೇವೆಯ ಅನುಭವದ ಫಲವೇ ಟಿ.ಇ.ಎಚ್.ಆರ್.ಡಿ. ಟ್ರಸ್ಟ್. ಗುಣಾತ್ಮಕ ಶಿಕ್ಷಣ, ಸತತ ಪರಿಶ್ರಮವೇ ಈ ಸಂಸ್ಥೆಯ ಯಶಸ್ಸಿನ ಗುಟ್ಟಾಗಿದೆ. ಬಿಐಟಿಎಂ ಸಂಸ್ಥೆಯ ರಜತ ಮಹೋತ್ಸವ ಸಂಭ್ರಮಾಚರಣೆ ಡಿ.17ರಂದು ಬಳ್ಳಾರಿಯಲ್ಲಿ ನಡೆಯಲಿದೆ.

VISTARANEWS.COM


on

BITM Silver jubilee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ರಾಜ್ಯದ ಹಿಂದುಳಿದ ಭಾಗದಲ್ಲಿ ಸುದೀರ್ಘವಾಗಿ ಮೂರು ದಶಕಗಳ ಕಾಲ ಅಕ್ಷರ ಸೇವೆ ನೀಡುತ್ತಿರುವ ಹೆಗ್ಗಳಿಕೆಯೊಂದಿಗೆ ಸಾಗುತ್ತಿದೆ ತುಂಗಭದ್ರ ಎಜುಕೇಷನ್ ಹೆಲ್ತ್ ಆ್ಯಂಡ್ ರೂರಲ್ ಡೆವೆಲಪ್‌ಮೆಂಟ್ ಟ್ರಸ್ಟ್ (ಟಿ.ಇ.ಎಚ್.ಆರ್.ಡಿ ಟ್ರಸ್ಟ್). ಅಂದು ರಾಜಕೀಯದ ಮೂಲಕ ಸಮಾಜ ಸೇವೆ ಮಾಡಿದ ಮಾಜಿ ಸಚಿವೆ ಬಸವರಾಜೇಶ್ವರಿ ಕುಟುಂಬದವರು, ಇಂದು ಶಿಕ್ಷಣ ಸಂಸ್ಥೆಯ ಮೂಲಕ ಅಕ್ಷರ ದಾಸೋಹ ಮಾಡುತ್ತಿದ್ದಾರೆ. ತಾಯಿ ಹಾಕಿಕೊಟ್ಟ ಪಥದಲ್ಲಿ ಸಾಗುತ್ತಾ ಜನಮಾನಸದಲ್ಲಿ ಅಚ್ಚಳಿಯದೆ ಇದ್ದಾರೆ. “ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆ”ಯ ಅಡಿಯಲ್ಲಿ ಬರುವ “ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್” ರಜತ ಮಹೋತ್ಸವದ (BITM Silver jubilee) ಸಂಭ್ರಮದ ಹೊಸ್ತಿಲಲ್ಲಿದೆ.

ಹಿಂದುಳಿದ ಜಿಲ್ಲೆಗಳ ಭಾಗ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಕಲ್ಯಾಣ ಕರ್ನಾಟಕದಲ್ಲಿಯೇ ಶೈಕ್ಷಣಿಕ ಸೇವೆ ಮಾಡಬೇಕೆಂಬ ಮಹದಾಸೆಯಲ್ಲಿ ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಅಕ್ಷರದ ಕಲ್ಪತರು ಟಿ.ಇ.ಎಚ್.ಆರ್.ಡಿ. ಟ್ರಸ್ಟ್ ಆಗಿದೆ.

ಬಿಐಟಿಎಂ ಎಂಬ ಕಾಲೇಜು ಇಲ್ಲದಿದ್ದರೆ ಈ ಭಾಗದ ವಿದ್ಯಾರ್ಥಿಗಳಿಗೆ ಗುಣಾತ್ಮಕ ತಾಂತ್ರಿಕ ಶಿಕ್ಷಣ ಮರೀಚಿಕೆಯಾಗುತ್ತಿತ್ತು ಎಂದರೆ ತಪ್ಪಾಗಲಿಕ್ಕಿಲ್ಲ. ಗುಣಾತ್ಮಕ ಶಿಕ್ಷಣ ನೀಡುವ ರಾಜ್ಯದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಬಿಐಟಿಎಂ ಒಂದು ಎನ್ನುವುದು ಈ ಭಾಗದ ಹೆಗ್ಗಳಿಕೆಯೇ ಸರಿ. ಇದರಿಂದಾಗಿ ರಾಜಧಾನಿಯಲ್ಲಿ ಸಿಗುವಂತಹ ಗುಣಮಟ್ಟದ ತಾಂತ್ರಿಕ ಶಿಕ್ಷಣ ಬಳ್ಳಾರಿಯಲ್ಲಿಯೇ ಸಿಗುತ್ತಿದೆ. ಈ ಸಂಸ್ಥೆಯು ಕಳೆದ ಮೂರು ದಶಕಗಳಿಂದಲೂ ಅಕ್ಷರ ದಾಸೋಹದಲ್ಲಿ ತೊಡಗಿಸಿಕೊಂಡಿದೆ.

ಸಂಸ್ಥೆಯ ಇಣುಕುನೋಟ
ಬಳ್ಳಾರಿ ಸೇರಿ ಸುತ್ತಮುತ್ತಲ ಜಿಲ್ಲೆಗಳ ಜನರ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, 1981ರಲ್ಲಿ ಹುಟ್ಟಿಕೊಂಡಿರುವ ಸಂಸ್ಥೆಯೇ ತುಂಗಭದ್ರ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್(ರಿ). ನರ್ಸರಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಮೂಲಕ ಈ ಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಈ ಟ್ರಸ್ಟ್ ಮಾಡಿದೆ. ಇಲ್ಲಿನ ವಿದ್ಯಾರ್ಥಿ ಸಮೂಹ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಜತೆಗೆ ಬೇರೆ ದೇಶದಲ್ಲಿಯೂ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವುದು ಇಲ್ಲಿನ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ. ಉತ್ತಮ ಶಿಕ್ಷಣದಲ್ಲಿ ಧನ್ಯತಾಭಾವವನ್ನು ಕಂಡ ಸಂಸ್ಥೆಯು, ಇಲ್ಲಿನ ವಿದ್ಯಾರ್ಥಿಗಳ ಜ್ಞಾನದ ದಾಹವನ್ನು ಮನಗೊಂಡು ವಿದ್ಯಾ ಸಂಸ್ಥೆಗಳನ್ನು ಟ್ರಸ್ಟ್ ಅಡಿಯಲ್ಲಿ ಹುಟ್ಟುಹಾಕುತ್ತಾ ಇಲ್ಲಿನ ಜನರ ಶೈಕ್ಷಣಿಕ ಆಶೋತ್ತರಗಳನ್ನು ಈಡೇರಿಸುತ್ತಾ ಈ ಭಾಗದ ಶೈಕ್ಷಣಿಕ ರಂಗವನ್ನು ವಿಸ್ತಾರಗೊಳಿಸಿ, ಶ್ರೀಮಂತ ಗೊಳಿಸುವತ್ತ ದಾಪುಗಾಲಿಟ್ಟಿದೆ.

ಅಮ್ಮನೇ ಪ್ರೇರಣೆ ಮತ್ತು ಆದರ್ಶ
ಮಾಜಿ ಕೇಂದ್ರ ಸಚಿವರಾದ ದಿ. ಶ್ರೀಮತಿ ಬಸವರಾಜೇಶ್ವರಿಯವರ ಅನುಭವ, ವಿಚಕ್ಷಣೆ ಮತ್ತು ಸಮಾಜದ ಬಗ್ಗೆ ಇದ್ದ ಕಾಳಜಿ ಅಪೂರ್ವವಾದುದು. ಅತ್ಯುತ್ತಮ ಕ್ರಮ ಶಿಕ್ಷಣ, ಶಿಸ್ತು, ಬದ್ಧತೆ, ಸಮಾಜದ ಸಮಗ್ರ ಏಳಿಗೆಗೆ ಪ್ರತಿಯೊಬ್ಬರಿಗೂ ವಿದ್ಯಾಭ್ಯಾಸ ಅತ್ಯಗತ್ಯ ಎಂಬ ತತ್ವದಲ್ಲಿ ನಂಬಿಕೆ ಇಟ್ಟವರು ಶ್ರೀಮತಿ ಬಸವರಾಜೇಶ್ವರಿಯವರಾಗಿದ್ದಾರೆ. ಇವರ ನೇತೃತ್ವದಲ್ಲಿ ತುಂಗಭದ್ರ ಶಿಕ್ಷಣ ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯು 1992ರಲ್ಲಿ ಬಳ್ಳಾರಿಯಲ್ಲಿ ಪ್ರಪಥಮ ಬಾರಿಗೆ “ಸಂಜಯ ಗಾಂಧಿ ಪಾಲಿಟೆಕ್ನಿಕ್” ಅನ್ನು ಪ್ರಾರಂಭವಾಯಿತು. ಅಂದು ಆರಂಭಿಸಿದ ಶಿಕ್ಷಣ ಸಂಸ್ಥೆಯು ವರ್ಷದಿಂದ ವರ್ಷಕ್ಕೆ ಹೆಮ್ಮರವಾಗಿ ಬೆಳೆಯುತ್ತಾ ಬಂದಿದೆ. ಇದೀಗ ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ “ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್” 1997ರಲ್ಲಿ ಪ್ರಾರಂಭವಾಗಿ ಈ ವರ್ಷ “ರಜತ ಮಹೋತ್ಸವ”ದ ಸಂಭ್ರಮದಲ್ಲಿದೆ.

ನ್ಯಾಕ್‌ನಿಂದ “ಎ+” ಗ್ರೇಡ್ ಪಡೆದ ಹೆಗ್ಗಳಿಕೆ
ಈ ಹಿಂದುಳಿದ ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತಾಂತ್ರಿಕ ವಿದ್ಯಾಭ್ಯಾಸ ನೀಡುವ ಇಚ್ಛೆಯಿಂದ ಬಳ್ಳಾರಿಯಲ್ಲಿ 1997ರಲ್ಲಿ ಸ್ಥಾಪಿಸಿದ ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ (ಬಳ್ಳಾರಿ ಇಂಜಿನಿಯರಿಂಗ್ ಕಾಲೇಜ್) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಸ್ವಾಯತ್ತತೆ ಪಡೆದು, ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಶನ್ (ಎನ್‌ಬಿಎ) ಮಾನ್ಯತೆಯನ್ನೂ ಪಡೆದುಕೊಂಡಿತ್ತು. ಅಲ್ಲದೆ, ನ್ಯಾಷನಲ್ ಅಸೆಸ್‌ಮೆಂಟ್ & ಅಕ್ರೆಡಿಟೇಷನ್ ಕೌನ್ಸಿಲ್ (ನ್ಯಾಕ್) ನಿಂದ ಎ+ ಗ್ರೇಡ್ ಪಡೆದಿದೆ. ರಾಜ್ಯದ 220 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ವಾಯತ್ತತೆ ಪಡೆದ ಕೇವಲ 25 ಕಾಲೇಜಿಗಳಲ್ಲಿ ಬಿಐಟಿಎಂ ಕೂಡ ಒಂದಾಗಿದೆ.

ನಾಲ್ಕೂವರೆ ದಶಕಗಳ ಅನುಭವದ ಫಲ ಈ ಶಿಕ್ಷಣ ಕಲ್ಪನೆ
ಕೃಷಿ ಕುಟುಂಬದಿಂದ ಬಂದ ಬಸವರಾಜೇಶ್ವರಿಯವರು ಓದಿದ್ದು ಬಳ್ಳಾರಿಯ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಎನ್ನುವುದು ವಿಶೇಷ. ನಾಲ್ಕು ದಶಕಗಳ ಕಾಲ ಗೆಜ್ಜಲಗಟ್ಟ ಸಂಸ್ಥಾನದಲ್ಲಿ ಜಹಗೀರದಾರ ಮನೆತನದ ಸೊಸೆಯಾಗಿ, 1956ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೇರಿ, 1957 ರಿಂದ 1977ರವರೆಗೆ ಮೂರು ಬಾರಿ ಮಾನ್ವಿಯಿಂದ ಶಾಸಕರಾಗಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1977 ರಿಂದ 1984ರವರೆಗೆ ರಾಯಚೂರಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಲ್ಲದೆ, ಮುಖ್ಯಮಂತ್ರಿ ಗುಂಡೂರಾವ್ ಅವರ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷರಾಗಿದ್ದರು. 1984, 1989 ಮತ್ತು 1991ರಲ್ಲಿ ಮೂರು ಬಾರಿ ಬಳ್ಳಾರಿ ಸಂಸದರಾಗಿದ್ದರು. 1993ರಿಂದ 1995ರವರೆಗೆ ಪಿ.ವಿ.ನರಸಿಂಹ ರಾವ್ ಅವರ ಸರ್ಕಾರದ ಅವಧಿಯಲ್ಲಿ ಕೇಂದ್ರದ ಮಹಿಳಾ ಮತ್ತು ಕಲ್ಯಾಣ ಸಚಿವರಾಗಿದ್ದರು. ಚೀನಾದ ಬೀಜಿಂಗ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನ ಮತ್ತು ಸಾರ್ಕ್ ಶೃಂಗ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಮೆರಿಕ, ಜಪಾನ್, ಹಾಂಕಾಂಗ್, ಸಿಂಗಾಪುರ್, ಮಲೇಷಿಯಾ, ಈಜಿಪ್ಟ್, ಜಾಂಬಿಯಾ ಮುಂತಾದ ದೇಶಗಳಿಗೆ ಭೇಟಿ ನೀಡಿದ ಅನುಭವವೇ ಇಂತಹ ದೊಡ್ಡದೊಂದು ಶಿಕ್ಷಣ ಸಂಸ್ಥೆಯ ಅಡಿಪಾಯಕ್ಕೆ ಕಾರಣವಾಯಿತು.

ಹಲವು ಹುದ್ದೆಗಳ ಅನುಭವವೇ ಶೈಕ್ಷಣಿಕ ಸೇವೆಗೆ ಪ್ರೇರಣೆ
ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಲ್ಲದೇ, ಬಸವರಾಜೇಶ್ವರಿಯವರು ನವಕರ್ನಾಟಕ ಸ್ಟೀಲ್ಸ್ ಲಿಮಿಟೆಡ್ ಸ್ಥಾಪಿಸುವ ಮೂಲಕ ಉದ್ಯಮಿಯೂ ಆಗಿದ್ದರು. ಬೆಂಗಳೂರಿನ ಕರ್ನಾಟಕ ಕೃಷಿಕ ಸಮಾಜದ ಕಾರ್ಯಾಧ್ಯಕ್ಷರಾಗಿ, ರಾಯಚೂರಿನ ಟ್ಯಾಗೂರ್ ಸ್ಮಾರಕ ವಿದ್ಯಾಸಂಸ್ಥೆಯ ಸ್ಥಾಪನಾ ಅಧ್ಯಕ್ಷರಾಗಿ, ಸಂಸದೀಯ ವ್ಯವಹಾರಗಳ ಸ್ಥಾಪನಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಅವರ ಹಲವು ಹುದ್ದೆಗಳ ಅನುಭವವೇ ಅವರು ಒಬ್ಬ ಶಿಕ್ಷಣ ಪ್ರೇಮಿಯಾಗಿ ರೂಪುಗೊಳ್ಳಲು ಕಾರಣವಾಯಿತು.

ದೇಶ ಮತ್ತು ವಿದೇಶ ಕಲ್ಪನೆಯಲ್ಲಿ ಶಿಕ್ಷಣ
ದಿ. ಬಸವರಾಜೇಶ್ವರಿಯವರ ತೃತೀಯ ಪುತ್ರರಾದ ಡಾ.ಯಶವಂತ್ ಭೂಪಾಲ್ ಅವರು ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷರಾಗಿದ್ದಾರೆ. ಇವರು ಕೃಷಿ ಮತ್ತು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದರೂ, ದೇಶ-ವಿದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಣ ಪದ್ಧತಿಯ ಬಗ್ಗೆ ಅಧ್ಯಯನ ಮಾಡಿ, ಸಂಸ್ಥೆಯ ಮತ್ತು ಶಿಕ್ಷಣ ಗುಣಮಟ್ಟದ ಏಳಿಗೆಗೆ ಅವಶ್ಯ ಎನಿಸಿದ ಅಂಶಗಳನ್ನು, ತಮ್ಮ ವಿದ್ಯಾಸಂಸ್ಥೆಗಳಲ್ಲಿ ಅಳವಡಿಸಿಕೊಂಡಿದ್ದು, ಸಂಸ್ಥೆಯ ಗುಣಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಇವರನ್ನು ಈಗಲೂ ತಮ್ಮ ಗೆಜ್ಜಲಗಟ್ಟ ಗ್ರಾಮದಲ್ಲಿ ಕೃಷಿಕರಾಗಿಯೂ ಕಾಣಬಹುದು. ಇವರು ಸಾವಿರಾರು ಜನರಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ನೀಡಿ, ಅನ್ನದಾತರಾಗಿದ್ದಾರೆ ಹಾಗೂ ಸಿಬ್ಬಂದಿಯನ್ನು ತಮ್ಮ ಕುಟುಂಬದ ಸದಸ್ಯರೆಂದೇ ಭಾವಿಸುತ್ತಾರೆ. ಈ ಕಲ್ಪನೆಯೇ ಸಂಸ್ಥೆಯು ಆಲದ ಮರದಂತೆ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದರೆ ಉತ್ಪ್ರೇಕ್ಷೆ ಎನಿಸದು.

ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ ಹೆಗ್ಗಳಿಕೆ ವಿಭಾಗಗಳಿವು
ಪ್ರಸ್ತುತ ಬಿ.ಇ. ಪದವಿಯಲ್ಲಿ 1) ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, 2) ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, 3) ಮೆಕಾನಿಕಲ್ ಎಂಜಿನಿಯರಿಂಗ್, 4) ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, 5) ಸಿವಿಲ್ ಎಂಜಿನಿಯರಿಂಗ್, 6) ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್, 7) ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್), 8) ಕಂಪ್ಯೂಟರ್ ಸೈನ್ಸ್ (ಆರ್ಟಿಫಿಸಿಲ್ ಇಂಟೆಲಿಜೆನ್ಸ್)ನಲ್ಲಿ ಸುಮಾರು 3800 ವಿದ್ಯಾಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಎಂಬಿಎ ಮತ್ತು ಒಂಬತ್ತು ಸಂಶೋಧನಾ ಕೇಂದ್ರಗಳನ್ನೂ ಈ ಶಿಕ್ಷಣ ಸಂಸ್ಥೆ ಹೊಂದಿದೆ.

95 ರಿಂದ ೩೫೦೦ ಸಾವಿರ ಗಡಿದಾಟಿದ ವಿದ್ಯಾರ್ಥಿ ಬಳಗ
ಬಿಐಟಿಎಂ, ಬಳ್ಳಾರಿಯು ಕೇವಲ 95 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು, ಇಂದು 3,800 ವಿದ್ಯಾರ್ಥಿಗಳಿಗೆ ಉತ್ತಮ ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್ ಶಿಕ್ಷಣ ನೀಡುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ, ಉದ್ಯೋಗಾವಕಾಶ ಮಾಡಿ ಕೊಟ್ಟು, ಅವರ ಜೀವನಕ್ಕೆ ಆಧಾರವಾಗಿರುವುದು, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಏರುಮುಖದಲ್ಲಿ ಸಾಗಲು ಕಾರಣವಾಗಿದೆ.

BITM Silver jubilee

ಸಂಸ್ಥೆಯ ಸಾರಥಿಗಳಿವರು
ದಿ.ಶ್ರೀಮತಿ ಬಸವರಾಜೇಶ್ವರಿಯವರ ನೇತೃತ್ವದಲ್ಲಿ ಟ್ರಸ್ಟ್ ಪ್ರಾರಂಭಗೊಂಡಿದ್ದು, ಪ್ರಸ್ತುತ ಟ್ರಸ್ಟ್‌ನ ಅಧ್ಯಕ್ಷರಾಗಿ ಡಾ.ಎಸ್.ಜೆ.ವಿ.ಮಹಿಪಾಲ್ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಿಐಟಿಎಂ ಕಾಲೇಜಿನ ಅಧ್ಯಕ್ಷರಾಗಿ ಡಾ.ಯಶವಂತ ಭೂಪಾಲ್, ಟ್ರಸ್ಟಿ, ಗೌರವ ಕಾರ್ಯದರ್ಶಿ ಹಾಗೂ ಬಿಐಟಿಎಂನ ಉಪನಿರ್ದೇಶಕರಾದ ವೈ.ಜೆ.ಪೃಥ್ವಿರಾಜ್ ಭೂಪಾಲ್, ಹಾಗೂ ಟ್ರಸ್ಟಿಗಳಾದ ಎಸ್.ಬಿ.ಅಶೋಕ್ ಭೂಪಾಲ್, ಡಾ.ವಿ.ಜೆ.ಭರತ್ ಮತ್ತು ಅಮರರಾಜ್ ಭೂಪಾಲ್‌ ಅವರು ಸಂಸ್ಥೆಯ ಸಾರಥಿಗಳಾಗಿ ಮುನ್ನಡೆಸುತ್ತಿದ್ದಾರೆ.

ಉತ್ಕೃಷ್ಟ ಆಡಳಿತ ಮಂಡಳಿ
ಬಿಐಟಿಎಂ ಕಾರ್ಯಚಟುವಟಿಕೆಗಾಗಿ ಮಾರ್ಗದರ್ಶನ ಮತ್ತು ಸಲಹೆ ನೀಡಲು ಉತ್ಕೃಷ್ಟವಾದ ಆಡಳಿತ ಮಂಡಳಿಯನ್ನು ಹೊಂದಿದ್ದು, ಇದರಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪ್ರೊಫೆಸರ್‌ಗಳು, ಬಹುರಾಷ್ಟ್ರಿಯ ಕಂಪನಿಗಳ ಮುಖ್ಯಸ್ಥರು ಹಾಗೂ ಉನ್ನತ ಶ್ರೇಣಿಯ ಅಧಿಕಾರಿಗಳು, ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳ ಪ್ರಾಚಾರ್ಯರು ಹಾಗೂ ಪ್ರೊಫೆಸರ್‌ಗಳು, ಖ್ಯಾತ ಲೆಕ್ಕ ಪರಿಶೋಧಕರು ಇರುತ್ತಾರೆ.

ಉತ್ತಮ ಫಲಿತಾಂಶದಲ್ಲೂ ಸೈ
ಫಲಿತಾಂಶದಲ್ಲೂ ರಾಜ್ಯದ ಯಾವುದೇ ಪ್ರತಿಷ್ಠಿತ ಕಾಲೇಜಿಗೂ ಕಡಿಮೆ ಇಲ್ಲ ಎನ್ನುವುದು ಕಾಲೇಜಿನ ಫಲಿತಾಂಶದ ಇತಿಹಾಸದಿಂದ ತಿಳಿಯುತ್ತದೆ. ಶೇ.90-95ರಷ್ಟು ಫಲಿತಾಂಶವನ್ನು ಹೊಂದಿದ್ದು, ಕಾಲೇಜಿನ ಗುಣಮಟ್ಟವನ್ನು ಸಾರಿ ಹೇಳುತ್ತವೆ. ಕಳೆದ ಐದು ವರ್ಷದಲ್ಲಿ ವಿಶ್ವವಿದ್ಯಾಲಯದ 10 ರ‍್ಯಾಂಕ್‌ಗಳಿಗೆ ಕಾಲೇಜಿನ ವಿದ್ಯಾರ್ಥಿಗಳು ಭಾಜನರಾಗಿದ್ದಾರೆ. ಇನ್ನು ಕ್ರೀಡೆಯಲ್ಲಿ ಕಾಲೇಜಿನ ಕ್ರೀಡಾಪಟುಗಳು ವಿಶ್ವವಿದ್ಯಾಲಯದ ಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದು, “ಯುನಿವರ್ಸಿಟಿ ಬ್ಲೂ” ಎಂದು ಗುರುತಿಸಲ್ಪಟ್ಟು, ಹಲವಾರು ಕ್ರೀಡೆಗಳಲ್ಲಿ ವಿಶ್ವವಿದ್ಯಾನಿಲಯವನ್ನು ಸಹ ಪ್ರತಿನಿಧಿಸಿದ್ದಾರೆ

ವಿದ್ಯಾರ್ಥಿಗಳ ಉದ್ಯೋಗದ ವಿವರಗಳು
ಈವರಗೆ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ಶೇ.78ರಷ್ಟು ವಿದ್ಯಾರ್ಥಿಗಳು ಬಹುರಾಷ್ಟೀಯ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಪಡೆಯುವ ಅತ್ಯಧಿಕ ಪ್ಯಾಕೇಜ್ ವರ್ಷಕ್ಕೆ 27.70 ಲಕ್ಷ ರೂ ಆಗಿದ್ದು, ಸರಾಸರಿ ಪ್ಯಾಕೇಜ್ ವರ್ಷಕ್ಕೆ ರೂ.4.50 ಲಕ್ಷಗಳು ಆಗಿವೆ.

ಇವರೇ ನಮ್ಮ ಶ್ರೇಯಸ್ಸು
ಡಾ. ಯಡವಳ್ಳಿ ಬಸವರಾಜ್, ಪ್ರಾಚಾರ್ಯರು, ಡಾ. ಬಿ.ಎಸ್. ಖೇಣೇದ, ಉಪಪ್ರಾಚಾರ್ಯರು ಮತ್ತು ಡೀನ್ (ಅಕಾಡೆಮಿಕ್ಸ್), ಡಾ. ಯು. ಈರಣ್ಣ, ಡೀನ್ (ವಿದ್ಯಾರ್ಥಿ ಮತ್ತು ಅಧ್ಯಾಪಕ ವ್ಯವಹಾರಗಳು), ಡಾ. ವಿ.ಸಿ.ಪಾಟೀಲ್, ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ), ಆಡಳಿತಾಧಿಕಾರಿಯಾಗಿ ಪಿ.ಅಮರೇಶಯ್ಯ, ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಕಾಲೇಜಿನ ಮುಖ್ಯ ಸ್ತಂಭಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜತೆಗೆ ನುರಿತ ಮತ್ತು ಅಪಾರ ಅನುಭವ ಹೊಂದಿದ 24 ಪ್ರಾಧ್ಯಾಪಕರು, 22 ಅಸೋಸಿಯೇಟ್ ಪ್ರಾಧ್ಯಾಪಕ, 199 ಸಹಾಯಕ ಪ್ರಾಧ್ಯಾಪಕರ ಬಳಗವನ್ನು ಸಂಸ್ಥೆ ಹೊಂದಿದೆ. 48 ಜನರು ಡಾಕ್ಟರೇಟ್ ಪದವಿ, 196 ಸ್ನಾತಕೋತ್ತರ ಪದವಿ ಪಡೆದವರಾಗಿದ್ದು, ಇದರಲ್ಲಿ ಪ್ರಸ್ತುತ 68 ಸಿಬ್ಬಂದಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅಧ್ಯಾಪಕರ ಪ್ರಕಟಣೆಗಳು
ಕಳೆದ ಐದು ವರ್ಷಗಳಲ್ಲಿ ನಮ್ಮ ಅಧ್ಯಾಪಕ ವೃಂದದ ಪ್ರಕಟಣೆಗಳು: ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಪ್ರಕಟಣೆ: 620, ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಪ್ರಕಟಣೆ: 50, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪ್ರಸ್ತುತಪಡಿಸಲಾದ ಪ್ರಬಂಧಗಳು: 166, ಪ್ರಕಟಿತ ಪುಸ್ತಕಗಳ ಸಂಖ್ಯೆ: 05.

ನಮ್ಮ ದೇವಾಲಯ ಎಂಬ ವಿದ್ಯಾಲಯದ ವಿಸ್ತೀರ್ಣ
ಮಹಾವಿದ್ಯಾಲಯವು 15.00 ಎಕರೆ ವಿಸ್ತೀರ್ಣದ ಕ್ಯಾಂಪಸ್ ಹೊಂದಿದ್ದು, ಹಸಿರು ಗಿಡಗಳು ಮತ್ತು ವಿವಿಧ ರೀತಿಯ ಹೂಬಳ್ಳಿ ಉದ್ಯಾನವನಗಳಿಂದ ಕೂಡಿದ ಸುಂದರ ಪರಿಸರದಲ್ಲಿ 28,000 ಚದರ ಮೀಟರ್‌ನಷ್ಟು ಸುಸಜ್ಜಿತ ಕಟ್ಟಡಗಳಾದ ಅಡ್ಮಿನ್ & ಪಿಜಿ ಬ್ಲಾಕ್, ಮಿಲ್ಲೇನಿಯಂ ಬ್ಲಾಕ್, ರಾಜಶೇಖರ್ ರೆಡ್ಡಿ ಎಲೆಕ್ಟ್ರಿಕಲ್ ಬ್ಲಾಕ್, ಡಾ. ರಾಜ್ ಗೋಪಾಲ್ ಮೆಕಾನಿಕಲ್ ಬ್ಲಾಕ್ ಮತ್ತು ಸಿ.ವಿ.ರಾಮನ್ ಬ್ಲಾಕ್ ನಿರ್ಮಿಸಲಾಗಿದೆ.

ನಮ್ಮ ತಂತ್ರಜ್ಞಾನ ಮತ್ತು ಪುಸ್ತಕ ಸಂಪತ್ತು
ಈಗಿನ ಶೈಕ್ಷಣಿಕ ಗುಣಮಟ್ಟಕ್ಕೆ ಅನುಗುಣವಾಗಿ ಅತ್ಯಾಧುನಿಕ ಕಂಪ್ಯೂಟರ್‌ಗಳು, ಎಲೆಕ್ಟಾನಿಕ್ಸ್, ಎಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕಾನಿಕಲ್ ಉಪಕರಣಗಳು, ಪ್ರಯೋಗಾಲಯಗಳು ಮತ್ತು ಡಿಜಿಟಲ್ ತರಗತಿಗಳು, ಸೆಮಿನಾರ್ ಹಾಲ್, ಭವ್ಯವಾದ ಸಭಾಂಗಣ, ಅತ್ಯುತ್ತಮ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳು ಲಭ್ಯವಿದೆ. ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಪುಸ್ತಕಗಳು (ಸಂಪುಟಗಳ ಹಾಗೂ ಶೀರ್ಷಿಕೆಗಳು) ಮತ್ತು ರಾಷ್ಟ್ರೀಯ/ಅಂತಾರಾಷ್ಟ್ರೀಯ ನಿಯತಕಾಲಿಕೆಗಳು ಲಭ್ಯವಿದೆ. ಕಾಲೇಜಿನ ಆವರಣದಲ್ಲಿಯೇ ಸುಸಜ್ಜಿತ ಸುಮಾರು 1400 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ವಾಸಿಸಲು ಅನುಕೂಲವಾಗುವ ತುಂಗಾ, ಭದ್ರ, ಕೃಷ್ಣ, ಕಾವೇರಿ ಮತ್ತು ನೇತ್ರಾವತಿ ವಿದ್ಯಾರ್ಥಿ ವಸತಿ ನಿಲಯಗಳಿವೆ.

ಇದನ್ನೂ ಓದಿ | Bernard Arnault | ಈಗ ವಿಶ್ವದ ಅತ್ಯಂತ ಶ್ರೀಮಂತ ಎಲಾನ್‌ ಮಸ್ಕ್‌ ಅಲ್ಲ, ಬರ್ನಾರ್ಡ್‌ ಅರ್ನಾಲ್ಟ್! ಅದಾನಿ ನಂ.3

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

Continue Reading
Advertisement
Pakistan
ಸಂಪಾದಕೀಯ49 mins ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ49 mins ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ58 mins ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ1 hour ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ1 hour ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು1 hour ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ2 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ2 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ2 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ3 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ11 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು14 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌