Rahul Gandhi | ಆರೆಸ್ಸೆಸ್‌ನಲ್ಲಿ ಮಹಿಳಾ ಕಾರ್ಯಕರ್ತರು ಏಕೆ ಇಲ್ಲ? ಇದು ಸ್ತ್ರೀ ಶೋಷಣೆ : ರಾಹುಲ್‌ ಗಾಂಧಿ - Vistara News

ಪ್ರಮುಖ ಸುದ್ದಿ

Rahul Gandhi | ಆರೆಸ್ಸೆಸ್‌ನಲ್ಲಿ ಮಹಿಳಾ ಕಾರ್ಯಕರ್ತರು ಏಕೆ ಇಲ್ಲ? ಇದು ಸ್ತ್ರೀ ಶೋಷಣೆ : ರಾಹುಲ್‌ ಗಾಂಧಿ

ಬಿಜೆಪಿಯು ಜೈ ಸಿಯಾರಾಮ್‌ ಬದಲಿಗೆ ಜೈ ಶ್ರೀರಾಮ್‌ ಎಂಬ ಘೋಷಣೆ ಮಾಡುವ ಮೂಲಕ ಸೀತಾ ಮಾತೆಯನ್ನು ಅವಮಾನಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಿಸಿದ್ದಾರೆ.

VISTARANEWS.COM


on

Rahul Gandhi Response Video Viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮಹಿಳೆಯರನ್ನು ದಮನಿಸುತ್ತಿದೆ. ಅಲ್ಲಿ ಮಹಿಳಾ ಕಾರ್ಯಕರ್ತರು ಏಕೆ ಇಲ್ಲ? ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi ) ಪ್ರಶ್ನಿಸಿದ್ದಾರೆ.

ಆರೆಸ್ಸೆಸ್‌ ಮಹಿಳಾ ವಿರೋಧಿಯಾಗಿರುವುದರಿಂದಲೇ ಅವರಿಗೆ ಇಲ್ಲಿ ಸದಸ್ಯತ್ವವನ್ನು ನಿರಾಕರಿಸಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ವ್ಯಾಖ್ಯಾನಿಸಿದ್ದಾರೆ. ಆದರೆ ಆರೆಸ್ಸೆಸ್‌ ರಾಷ್ಟ್ರ ಸೇವಿಕಾ ಸಮಿತಿ ಎಂಬ ಮಹಿಳಾ ಘಟಕವನ್ನೂ ಒಳಗೊಂಡಿದೆ.

ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯವನ್ನು ಹುಟ್ಟಿಸುವುದೇ ಬಿಜೆಪಿ ಮತ್ತು ಆರೆಸ್ಸೆಸ್‌ ಷಡ್ಯಂತ್ರವಾಗಿದೆ ಎಂದರು.

ತಮಿಳುನಾಡಿನ ಕನ್ಯಾಕುಮಾರಿಯಿಂದ ಸೆಪ್ಟೆಂಬರ್‌ 7ರಂದು ಆರಂಭವಾಗಿದ್ದ ಭಾರತ್‌ ಜೋಡೊ ಯಾತ್ರೆ ರಾಜಸ್ಥಾನವನ್ನು ಹಾದು ಹೋಗುತ್ತಿದೆ. ಇದು ಶುಕ್ರವಾರ 100 ದಿನಗಳನ್ನು ಪೂರೈಸಲಿದೆ.

ಬಿಜೆಪಿಯು ಜೈ ಸಿಯಾರಾಮ್‌ ಬದಲಿಗೆ ಜೈ ಶ್ರೀರಾಮ್ ಎನ್ನುವ ಮೂಲಕ ಸೀತಾಮಾತೆಯನ್ನು ಅವಮಾನಿಸುತ್ತದೆ ಎಂದೂ ರಾಹುಲ್‌ ಗಾಂಧಿ ದೂರಿದರು. ಸಿಯಾರಾಮ್‌ ಎಂದರೆ ಭಗವಾನ್‌ ಶ್ರೀರಾಮ ಚಂದ್ರ ಹಾಗೂ ಸೀತಾ ಮಾತೆ ಇಬ್ಬರನ್ನೂ ಒಟ್ಟಿಗೆ ಕರೆಯುವುದಾಗಿದೆ.‌ ಜೈ ಶ್ರೀರಾಮ್‌ ಎನ್ನುವ ಮೂಲಕ ನೀವು ಏಕೆ ಸೀತಾಮಾತೆಯನ್ನು ದೂರ ಇಡುತ್ತಿದ್ದೀರಿ? ಭಾರತದ ಮಹಿಳೆಯರನ್ನು ಏಕೆ ಅವಮಾನಿಸುತ್ತಿದ್ದೀರಿ? ಎಂದು ರಾಹುಲ್‌ ಗಾಂಧಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ದೇಶದಲ್ಲಿ ನಿರುದ್ಯೋಗದ ಭೀತಿ ಹೆಚ್ಚುತ್ತಿದೆ. ಈ ಭೀತಿಯ ಲಾಭವನ್ನು ಆರೆಸ್ಸೆಸ್‌ ಮತ್ತು ಬಿಜೆಪಿ ಪಡೆಯುತ್ತಿದೆ. ಭೀತಿಯನ್ನು ದ್ವೇಷವಾಗಿ ಪರಿವರ್ತಿಸುತ್ತದೆ. ಭಾರತ್‌ ಜೋಡೋ ಯಾತ್ರೆ ಈ ದ್ವೇಷಕ್ಕೆ ವಿರುದ್ಧವಾಗಿದೆ.

ದೇಶದ 100 ಶ್ರೀಮಂತ ವ್ಯಕ್ತಿಗಳು 55 ಕೋಟಿ ಜನ ಹೊಂದಿರುವ ಸಂಪತ್ತಿಗೆ ಸಮವಾಗುವಷ್ಟು ಸಂಪತ್ತನ್ನು ಹೊಂದಿದ್ದಾರೆ. ಭಾರತದ ಅರ್ಧದಷ್ಟು ಸಂಪತ್ತು 100 ಜನರ ಕೈಯಲ್ಲಿದೆ ಎಂದರು. ಭಾರತದಲ್ಲಿ ನಾಲ್ಕೈದು ಮಂದಿ ಶ್ರೀಮಂತರನ್ನು ಮಹಾರಾಜರು ಎನ್ನಬಹುದು. ಇಡೀ ಸರ್ಕಾರ, ಅಧಿಕಾರಿ ವರ್ಗ, ಮಾಧ್ಯಮ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರ ಕೆಲಸ ಮಾಡುತ್ತಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Hathras Case: ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ್ದಾರೆ. ಇದರ ನಡುವೆ ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ. ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Bhole Baba
Koo

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ (Hathras Case) ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ ಘಟನೆಯ ನಂತರ, ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ.

ಬಾಬಾನ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳಿರುವ ಬಗ್ಗೆ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ, ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Bhole Baba

ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮದ ಜಮೀನಿನ ಮೌಲ್ಯ 4 ಕೋಟಿ ರೂ. ಎಂಬುದಾಗಿ ತಿಳಿದುಬಂದಿದೆ. ಇನ್ನು ಮೈನ್ಪುರಿ ಆಶ್ರಮವು ಪಂಚತಾರಾ ಹೋಟೆಲ್‌ನಲ್ಲಿರುವ ಸೌಲಭ್ಯಗಳನ್ನು ಹೊಂದಿವೆ ಎನ್ನಲಾಗಿದೆ. ಈ ಆಶ್ರಮದಲ್ಲಿ ವಾಸವಾಗಿದ್ದ, ದೇವತಾಮಾನ ಎಂದು ಕರೆಯುವ ಬಾಬಾರಿಗೆ ಈ ಆಶ್ರಮದಲ್ಲಿ ಆರು ಕೊಠಡಿಗಳನ್ನು ಮೀಸಲಿಡಲಾಗಿದೆ. ಇನ್ನೂ ಆರು ಕೊಠಡಿಗಳನ್ನು ಸಮಿತಿಯ ಸದಸ್ಯರು ಮತ್ತು ಅವರ ಸಂಸ್ಥೆಯ ಸ್ವಯಂಸೇವಕರಿಗೆ ಮೀಸಲಿಡಲಾಗಿದೆ. ಆಶ್ರಮವು ಖಾಸಗಿ ರಸ್ತೆಯನ್ನು ಮಾತ್ರವಲ್ಲದೆ ಅತ್ಯಾಧುನಿಕ ಕೆಫೆಟೇರಿಯಾವನ್ನು ಸಹ ಹೊಂದಿದೆ ಎನ್ನಲಾಗಿದೆ.

Bhole Baba

ಆಶ್ರಮಕ್ಕಾಗಿ ಭೂಮಿಯನ್ನು 3-4 ವರ್ಷಗಳ ಹಿಂದೆ ತನಗೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಬಾಬಾ ಹೇಳಿದ್ದಾರೆ. ಆದರೆ ದಾಖಲೆಗಳು ಅವರು ಕೋಟಿಗಟ್ಟಲೆ ಮೌಲ್ಯದ ಹಲವಾರು ಆಸ್ತಿಗಳನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸುತ್ತವೆ. ದೇಶದ ಇತರ ಸ್ಥಳಗಳಲ್ಲಿನ ಹೆಚ್ಚಿನ ಆಶ್ರಮಗಳು ಈ ಆಸ್ತಿಗಳ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ.

Hathras Case

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಬಾಬಾ ಮತ್ತು ಅವರ ಸಂಸ್ಥೆ ಆಯೋಜಿಸಿದ್ದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ) ದಲ್ಲಿ ಕಾಲ್ತುಳಿತದಿಂದ ಕನಿಷ್ಠ ಏಳು ಮಕ್ಕಳು ಸೇರಿದಂತೆ 121 ಜನರ ಸಾವು ಸಂಭವಿಸಿದೆ. 80,000 ಜನರಿಗೆ ಅನುಮತಿ ನೀಡಲಾಗಿದ್ದು, 2.5 ಲಕ್ಷ ಜನರು ಕಾರ್ಯಕ್ರಮಕ್ಕೆ ಜಮಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಬಾ ತನ್ನ ಕಾರಿನಲ್ಲಿ ಹೊರಟಾಗ, ಜನಸಮೂಹವು ಅವರ ಆಶೀರ್ವಾದ ಪಡೆಯಲು ಅವರ ಹಿಂದೆ ಓಡಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಸ್ವಯಂಸೇವಕರು ಮತ್ತು ಬಾಬಾ ಅವರ ಭದ್ರತಾ ಪಡೆ ಜನರನ್ನು ಹಿಂದಕ್ಕೆ ತಳ್ಳಲು ಪ್ರಾರಂಭಿಸಿದರು. ಇದರಿಂದ ಹಲವಾರು ಭಕ್ತರು ಕೆಳೆಗೆ ಬಿದ್ದು ಕಾಲ್ತುಳಿತಕ್ಕೆ ಒಳಗಾದರು.
ಈ ಪ್ರಕರಣದ ಬಗ್ಗೆ ಮಾತನಾಡಿದ ಬಾಬಾ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದರು ಮತ್ತು ಈ ದುರಂತದ ಹಿಂದೆ ಸಮಾಜ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಹೇಳಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  34 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಕಾಶ್ಮೀರಿ ಪಂಡಿತ; ಪಾಳುಬಿದ್ದ ಮನೆ ನೋಡಿ ಭಾವುಕ

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹಾಗೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳು ಬೇಗನೆ ಗುಣಮುಖರಾಗುವಂತೆ ಹಾರೈಸಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade: ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ.

VISTARANEWS.COM


on

Team India victory parade
Koo

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ನೆಟ್​ವರ್ಕ್​ 18ನ ಸ್ಪೋರ್ಟ್ಸ್ 18ನಲ್ಲೂ ಈ ವಿಜಯೋತ್ಸವದ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆಯಪ್​ನಲ್ಲೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Heart Attack: ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

VISTARANEWS.COM


on

heart attack death
Koo

ಉಡುಪಿ: ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ (Heart Attack Death) ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು (SSLC Student Death) ಸಾವನ್ನಪ್ಪಿರುವ ಘಟನೆ ಉಡುಪಿ (Udupi news) ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಇತ್ತೀಚೆಗೆ ಕೊಡಗಿನಲ್ಲಿ ಯುವತಿಯೊಬ್ಬಳು ಹೀಗೇ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕ ಪೊನ್ನಪ್ಪ (24) ಮೃತ ದುರ್ದೈವಿ. ಕರ್ತವ್ಯಕ್ಕೆಂದು ಮನೆಯಿಂದ ಹೊರಟಾಗ ಹೃದಯ ಬಡಿತವೇ ನಿಂತು ಹೋಗಿದೆ. ಎದೆ ನೋವೆಂದು ಒದ್ದಾಡಿದ ನಿಲಿಕ ಕುಸಿದು ಬಿದ್ದಿದ್ದಳು. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ದೃಢಪಡಿಸಿದ್ದರು.

ಶ್ರೀಶೈಲ ಪಾದಯಾತ್ರೆ‌ಗೆ (Srisailam Padayatra) ಹೊರಟ್ಟಿದ್ದ ಯುವಕನೊಬ್ಬ ದಾರಿ ಮಧ್ಯೆ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದು ಕೂಡ ಇತ್ತೀಚೆಗೆ ವರದಿಯಾಗಿತ್ತು. ರಾಯಚೂರಿನ ಮಾನ್ವಿ ತಾಲೂಕಿನ ಚಿಕ್ಕ ಕೊಟ್ನೆಕಲ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಮೂಲದ 22 ವರ್ಷದ ಪಾದಯಾತ್ರಾರ್ಥಿ ವಿಶ್ರಾಂತಿಗಾಗಿ ತಂಗಿದ್ದಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಮ್ಮಡ ಗ್ರಾಮದ ಶ್ರೀಶೈಲ ದಡೂತಿ ಮೃತ ದುರ್ದೈವಿ.

ಇತ್ತೀಚೆಗೆ ಯುವಜನತೆಯಲ್ಲೇ ಇಂಥ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗುತ್ತಿದ್ದು, ಆತಂಕ ಮೂಡಿಸಿದೆ. ಹೃದಯವು ಯಾವ ಕ್ಷಣದಲ್ಲಿ ಆಘಾತಕ್ಕೆ (Heart Attack) ಒಳಗಾಗುತ್ತದೆ ಎಂದು ಅಂದಾಜಿಸಲೂ ಸಾಧ್ಯವಿಲ್ಲದಾಗಿದೆ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ಕಾಣಲಾಗುತ್ತಿದೆ. ಕೊರೊನಾ ವೈರಸ್‌ ದಾಳಿಯ ಬಳಿಕ ಇಂಥ ಪ್ರಕರಣಗಳು ಹೆಚ್ಚಿವೆ ಎಂಬುದನ್ನು ವೈದ್ಯಲೋಕ ಕೂಡ ದೃಢಪಡಿಸಿದೆ.

ಇದನ್ನೂ ಓದಿ: Silent Heart Attack: ಏನಿದು ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌? ಇದರ ಲಕ್ಷಣಗಳೇನು?

Continue Reading

ಉದ್ಯೋಗ

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Job Alert: ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗಮನಿಸಿ ಅರ್ಜಿ ಸಲ್ಲಿಕೆ ದಿನಾಂಕ ಬದಲಾಗಿದ್ದು, ಉಳಿದೆಲ್ಲ ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.bankofbaroda.in/career/current-opportunities)
  • ನೀವು ಅರ್ಜಿ ಸಲ್ಲಿಸಬೇಕಿರುವ ಹುದ್ದೆಯ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Continue Reading
Advertisement
Team India
ಕ್ರೀಡೆ6 mins ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest10 mins ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ14 mins ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

karnataka Rain
ಮಳೆ24 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್29 mins ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ30 mins ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

heart attack death
ಪ್ರಮುಖ ಸುದ್ದಿ38 mins ago

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Job Alert
ಉದ್ಯೋಗ42 mins ago

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Electric shock
ಬೆಂಗಳೂರು ಗ್ರಾಮಾಂತರ1 hour ago

Electric shock : ಕತ್ತಲಲ್ಲಿ ಕೆಲಸಕ್ಕೆ ಹೋದವನಿಗೆ ಕರೆಂಟ್‌ ಶಾಕ್‌

Paris Olympics
ಕ್ರೀಡೆ1 hour ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 9 ಅಥ್ಲೀಟ್​ಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ24 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ2 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ3 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

ಟ್ರೆಂಡಿಂಗ್‌