Actor Rajinikanth | ಪುತ್ರಿ ಐಶ್ವರ್ಯಾ ಜತೆ ತಿರುಪತಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ರಜನಿಕಾಂತ್‌: ವಿಡಿಯೊ ವೈರಲ್‌! - Vistara News

ಕಾಲಿವುಡ್

Actor Rajinikanth | ಪುತ್ರಿ ಐಶ್ವರ್ಯಾ ಜತೆ ತಿರುಪತಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ರಜನಿಕಾಂತ್‌: ವಿಡಿಯೊ ವೈರಲ್‌!

ಪುತ್ರಿ ಐಶ್ವರ್ಯಾ ಜತೆ ನಟ ರಜನಿಕಾಂತ್‌ (Actor Rajinikanth) ಬೆಳಗಿನ ಜಾವ ತಿರುಪತಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. 

VISTARANEWS.COM


on

Actor Rajinikanth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ (Actor Rajinikanth) ಹಾಗೂ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರು ತಿರುಪತಿ ದೇವಸ್ಥಾನಕ್ಕೆ ಗುರುವಾರ ಬೆಳಗಿನ ಜಾವ ಭೇಟಿ, ವಿಶೇಷ ಪೂಜೆ ಸಲ್ಲಿದ್ದಾರೆ. ‘ಜೈಲರ್’ ಸಿನಿಮಾ ರಜನಿಕಾಂತ್ ಅವರ ಮುಂಬರುವ ಚಿತ್ರವಾಗಿದೆ.

ʻಜೈಲರ್‌ʼ ಸಿನಿಮಾ ಚಿತ್ರಿಕರಣದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಅವರು ಕಾಣಿಸಿಕೊಂಡಿದ್ದು, ಅವರ ಲುಕ್‌ ಈ ಹಿಂದೆ ರಿವೀಲ್‌ ಆಗಿತ್ತು. ಚೆನ್ನೈ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ಶಿವಣ್ಣ ಅವರ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ʻಪೆಟ್ಟಾʼ, ʻದರ್ಬಾರ್ʼ ಬಳಿಕ ಮೂರನೇ ಬಾರಿಗೆ ರಜನಿಕಾಂತ್ ಸಿನಿಮಾಕ್ಕೆ ಸಂಗೀತ ನೀಡುವ ಅವಕಾಶವನ್ನು ಅನಿರುದ್ಧ್‌ ಗಿಟ್ಟಿಸಿಕೊಂಡಿದ್ದಾರೆ.

ಇದನ್ನೂ ಓದಿ | ರಜನಿಕಾಂತ್​, ಶಿವಣ್ಣ ಸಿನಿಮಾದ ಪೋಸ್ಟರ್​ ರಿಲೀಸ್, ಜೈಲರ್​ ಆಗಿ ಆರ್ಭಟಿಸಲಿದ್ದಾರೆ ಸೂಪರ್​ಸ್ಟಾರ್‌

ರಜನಿಕಾಂತ್ ಮತ್ತು ಶಿವರಾಜಕುಮಾರ್ ಅವರ ಭಾಗವಾಗಿ, ಜೈಲರ್ ಸಹ ವಸಂತ ರವಿ, ಯೋಗಿ ಬಾಬು, ರಮ್ಯಾ ಕೃಷ್ಣನ್ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Rajinikanth | ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ʻಜೈಲರ್‌ʼ ಸೆಟ್‌ನಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Jyotika Trolled: ಸೂರ್ಯ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Jyotika Trolled For Claiming Online Private Voting
Koo

ಬೆಂಗಳೂರು: ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆ ಎಂದು ಹೇಳುವ ಮೂಲಕ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ಕಳೆದ ತಿಂಗಳು, ನಟ ಸೂರ್ಯ ಚೆನ್ನೈನ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ್ದರು. ಆದರೆ, ಅವರ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ.

ಈವೆಂಟ್‌ನ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವರದಿಗಾರರೊಬ್ಬರು ಜ್ಯೋತಿಕಾ ಅವರಿಗೆ ಏಕೆ ವೋಟ್‌ ಮಾಡಲು ಬರಲಿಲ್ಲ? ಎಂದು ಕೇಳಿದ್ದರು. ಆಗ ನಟಿ ʻʻನಾನು ಪ್ರತಿ ವರ್ಷ ವೋಟ್‌ ಮಾಡುತ್ತೇನೆʼʼಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು.ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.

ಯಾಕೆ ಮತ ಹಾಕಲಿಲ್ಲ ಎಂಬುದನ್ನು ವಿವರಿಸಿದ ಜ್ಯೋತಿಕಾ ʻʻಕೆಲವೊಮ್ಮೆ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಬೇರೆ ರಾಜ್ಯಕ್ಕೆ ಹೋಗಿರಬಹುದು. ನಾವು ಅನಾರೋಗ್ಯಕ್ಕೆ ಒಳಗಾಗಬಹುದು, ಇದು ಖಾಸಗಿ ವಿಷಯವಾಗಿದೆʼʼಎಂದಿದ್ದಾರೆ ನಟಿ.

ಇದನ್ನೂ ಓದಿ: Jyotika and Suriya: ಸೂರ್ಯ ಜತೆ ಜಿಮ್‌ನಲ್ಲಿ ನಟಿ ಜ್ಯೋತಿಕಾ ಹೆವಿ ವರ್ಕೌಟ್!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಟಿಯನ್ನು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ. ಒಬ್ಬರು ʻʻನಟಿಯ ಆರೋಗ್ಯ ಹದೆಗಟ್ಟಿದ್ದರಿಂದ ವೋಟ್‌ ಹಾಕದೇ ಇರಬಹುದುʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಇದೇನು ಬಿಗ್ ಬಾಸ್‌ನಲ್ಲಿ ಮತ ಚಲಾಯಿಸಿದಂತೆಯಾ?ʼʼಎಂದು ಕಮೆಂಟ್‌ ಮಾಡಿದ್ದಾರೆ. `ಜ್ಯೋತಿಕಾ ರೀತಿ ಆನ್​ಲೈನ್​ ವೋಟ್ ಮಾಡೋದು ಹೇಗೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.‘ಸಮಾಜ ಸುಧಾರಕಿ ಜ್ಯೋತಿಕಾ, ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷಕ್ಕೆ ಅಲ್ಲ, 5 ವರ್ಷಕ್ಕೊಮ್ಮೆ ಎಂದು. ನಾನು ಭಾರತದಲ್ಲಿ ಈವರೆಗೆ ಆನ್‌ಲೈನ್ ಮತದಾನದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಜ್ಯೋತಿಕಾ ಕೊನೆಯದಾಗಿ ʻಶೈತಾನ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.ಈ ಚಿತ್ರದಲ್ಲಿ ಆರ್ ಮಾಧವನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್​ಕುಮಾರ್ ರಾವ್, ಅಲಾಯ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

Annamalai Biopic: ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

VISTARANEWS.COM


on

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
Koo

ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ. ಸದ್ಯ ಅಣ್ಣಾಮಲೈ ಕುರಿತು ತಮಿಳಿನಲ್ಲಿ ಬಯೋಪಿಕ್ ಸಿನಿಮಾ (Annamalai Biopic) ಮಾಡುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ನಟ ವಿಶಾಲ್ ತೆರೆಮೇಲೆ ಅಣ್ಣಾಮಲೈ ಆಗಿ ನಟಿಸುತ್ತಾರೆ ಎನ್ನಲಾಗುತ್ತಿದೆ.

ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. 1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. ಬಿಇ ಎಂಜಿನಿಯರಿಂಗ್‌ ಮಾಡಿ ಎಂಬಿಎ ಪೂರ್ಣಗೊಳಿಸಿದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಆಗಿದ್ದರು.

ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ

  • ಅಣ್ಣಾಮಲೈ ಅವರಿಗೆ ಈಗ ಕೇವಲ 39 ವರ್ಷ. 2021ರಲ್ಲಿ ಅವರು ತಮಿಳುನಾಡಿನ ಅತ್ಯಂತ ಕಿರಿಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು.
  • ಕೆ. ಅಣ್ಣಾಮಲೈ ಅವರು 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮಿಳುನಾಡಿನಲ್ಲಿ ಅವರು ಯುವಜನತೆಯ ಅಪಾರ ಬೆಂಬಲ ಪಡೆದಿದ್ದಾರೆ. ಈ ಮೂಲಕ ಅವರು ತಮಿಳುನಾಡಿನಲ್ಲಿ ಬಿಜೆಪಿಗೆ ಶಕ್ತಿ ತುಂಬಿದ್ದಾರೆ. ಬಹಳ ವೇಗವಾಗಿ ಜನಪ್ರಿಯತೆ ಪಡೆಯುತ್ತಿದ್ದಾರೆ.
  • ಕರ್ನಾಟಕ ಕೇಡರ್‌ನ 2011ರ ಬ್ಯಾಚ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅಪಾರ ಜನಪ್ರಿಯತೆ ಪಡೆದಿದ್ದರು. ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಅವರು ಜನರ ವಿಶ್ವಾಸ ಗಳಿಸಿದ್ದರು. ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
  • ಕೆ ಅಣ್ಣಾಮಲೈ ಅವರು ಸೆಪ್ಟೆಂಬರ್ 2019ರಲ್ಲಿ ಪೊಲೀಸ್ ಸೇವೆಯನ್ನು ತೊರೆದು ಅಚ್ಚರಿ ಮೂಡಿಸಿದ್ದರು.
  • ಇವರು ಎಂಜಿನಿಯರಿಂಗ್ ಪದವೀಧರರಾಗಿದ್ದು, ಐಐಎಂ ಲಕ್ನೋದಲ್ಲಿ ಎಂಬಿಎ ಓದಿದ್ದರು.
  • ಪೊಲೀಸ್ ಫೋರ್ಸ್‌ನಲ್ಲಿ ಕೆಲಸ ಮಾಡುವಾಗ ಕೆ ಅಣ್ಣಾಮಲೈ ಅವರ ಕಟ್ಟುನಿಟ್ಟಾದ ಕಾರ್ಯಶೈಲಿಯನ್ನು ಕಂಡು ಅವರನ್ನು “ಸಿಂಗಂ ಅಣ್ಣ” ಎಂದೇ ಕರೆಯಲಾಗಿತ್ತು.
  • ಅಣ್ಣಾಮಲೈ ಅವರು ಉಡುಪಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಧಾರ್ಮಿಕ ಗ್ರಂಥಗಳ ತಪ್ಪು ವ್ಯಾಖ್ಯಾನವನ್ನು ತಪ್ಪಿಸಲು ಮತ್ತು ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಇಸ್ಲಾಂ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ಧಾರ್ಮಿಕ ವಿದ್ವಾಂಸರ ಸಹಾಯದಿಂದ ಖುರಾನ್ ಮತ್ತು ಹದೀಸ್ ಅನ್ನು ಅಧ್ಯಯನ ಮಾಡಿದ್ದರು.
  • 2019ರಲ್ಲಿ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವಾಗ ರಾಜೀನಾಮೆ ಪತ್ರದಲ್ಲಿ, ಇದು ನಾನು ತಕ್ಷಣ ತೆಗೆದುಕೊಂಡು ನಿರ್ಧಾರವಲ್ಲ. 2018ರಲ್ಲಿ ಕೈಗೊಂಡಿದ್ದ ಕೈಲಾಸ ಮಾನಸ ಸರೋವರ ಪ್ರವಾಸವು ನನ್ನ ಜೀವನವನ್ನು ಹಿಂತಿರುಗಿ ನೋಡುವಂತೆ ಮಾಡಿದೆ ಎಂದು ಬರೆದಿದ್ದರು.
  • 2023ರಲ್ಲಿ ಅಣ್ಣಾಮಲೈ ಅವರು ‘ಎನ್‌ ಮನ್ ಎನ್ ಮಕ್ಕಳ್ (ನನ್ನ ಭೂಮಿ ನನ್ನ ಜನರು)’ ಯಾತ್ರೆಯನ್ನು ತಮಿಳುನಾಡು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದರು.
  • ಅಣ್ಣಾಮಲೈ ಅವರನ್ನು ಬಿಜೆಪಿಯ ಭರವಸೆಯ ಉದಯೋನ್ಮುಖ ತಾರೆ ಎಂದು ವ್ಯಾಖ್ಯಾನಿಸಲಾಗಿದೆ. ಅವರು ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ಕಾರಣ ಅವರ ಭಾಷಣಗಳು ಸಾಮಾನ್ಯವಾಗಿ ವೈರಲ್ ಆಗುತ್ತವೆ.
Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಾಲಿವುಡ್

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Aishwarya Rajinikanth: ರಜನಿಕಾಂತ್ ಮಗಳು ಐಶ್ವರ್ಯಾ ಅವರ ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು.

VISTARANEWS.COM


on

Aishwarya Rajinikanth new house priceless reaction Rajinikanth
Koo

ಬೆಂಗಳೂರು: ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಹೊಸ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ರಜನಿ ಮತ್ತು ಪತ್ನಿ ಲತಾ ಮಗಳ ಹೊಸ ಮನೆಗೆ ಭೇಟಿ ನೀಡಿದ್ದರು. ಮಾತ್ರವಲ್ಲ ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು. ಮನೆಯ ಒಳಗೆ ಬರಬರುತ್ತಲೇ ಅಲಂಕಾರಗಳನ್ನು ಕಂಡು ಹುಬ್ಬೇರಿಸಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿವೆ.

ರಜನಿಕಾಂತ್ ಮಗಳು ಐಶ್ವರ್ಯಾ ಅವರು ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇಡೀ ಮನೆ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಬಳಿಕ ಲತಾ ಅವರು ದೇವರ ಮನೆಯಲ್ಲಿ ದೀಪ ಹಚ್ಚಿ ಮಗಳಿಗೆ ವಿಶ್‌ ಮಾಡಿದ್ದಾರೆ.

 ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Aishwaryaa Rajinikanth: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಕದ್ದ ಕಳ್ಳರು ಕೊನೆಗು ಸಿಕ್ಕಿಬಿದ್ದರು; ಯಾರವರು?

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು

Continue Reading
Advertisement
Prajwal Revanna Case HD Revanna arrest is correct says R Ashok
ರಾಜಕೀಯ16 mins ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Vicky Pedia New reels about heat in Karnataka
ವೈರಲ್ ನ್ಯೂಸ್18 mins ago

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Lok Sabha Election 2024
Lok Sabha Election 202425 mins ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Prajwal Revanna Case Siddaramaiah tweets vote for Prajwal Full class from BJP!
ಕ್ರೈಂ37 mins ago

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

bajrang punia Suspended
ಕ್ರೀಡೆ37 mins ago

Bajrang Punia: ಬಜರಂಗ್​ಗೆ ಅಮಾನತು ಶಿಕ್ಷೆ ವಿಧಿಸಿದ ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ; ಪ್ಯಾರಿಸ್ ಒಲಿಂಪಿಕ್ಸ್​ಗೆ ಹಿನ್ನಡೆ

Kannada New Movie Adhipatra audio rights
ಸಿನಿಮಾ43 mins ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

assault case
Lok Sabha Election 202451 mins ago

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Viral News
ವೈರಲ್ ನ್ಯೂಸ್60 mins ago

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

FIFA World Cup qualifiers
ಕ್ರೀಡೆ1 hour ago

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

Prajwal Revanna Case HD Revanna mobile phone seized SIT to collect technical evidence
ಕ್ರೈಂ1 hour ago

Prajwal Revanna Case: ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌