Car Accident | ಹಂಚಿನಾಳ ಬಳಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಇಬ್ಬರು ಸಾವು - Vistara News

ಕರ್ನಾಟಕ

Car Accident | ಹಂಚಿನಾಳ ಬಳಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಇಬ್ಬರು ಸಾವು

Car Accident | ರಸ್ತೆ ಅಪಘಾತದಲ್ಲಿ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಂಚಿನಾಳ ಕ್ರಾಸ್‌ ನಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಇಲ್ಲಿನ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಕಾರಿಗೆ (Car Accident ) ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಗೋಕಾಕ ಮೂಲದ ಸಂಜು ಹಿತಾರಗೌಡರ (33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು.

car accident
ಕಾರಿನ ಬಲಭಾಗ ಪೂರ್ಣ ಛಿದ್ರವಾಗಿರುವ ಚಿತ್ರಣ

ರಸ್ತೆ ಅಪಘಾತದಲ್ಲಿ ಆಶಿಫ್ ಮುಲ್ಲಾ (24) ಎಂಬಾತ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ‌ ನಡೆದಿದೆ. ಡಿಕ್ಕಿ ಹೊಡೆದಿರುವ ವಾಹನ ಯಾವುದು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Road accident | ತುಮಕೂರಿನಲ್ಲಿ ಅಪಘಾತಗಳ ಸರಮಾಲೆ: 24 ಗಂಟೆ ಅವಧಿಯಲ್ಲಿ ಒಂಬತ್ತು ಮಂದಿ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ರಾಬರಿ ಎಂದು ದೂರು ಕೊಟ್ಟವನೇ ಕಾಮುಕ; ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಆಟೋ ಚಾಲಕ!

Physical Abuse: ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಹೋಗಿ ಮಚ್ಚಿನೇಟು ತಿಂದ ಆಟೋ ಚಾಲಕ, ಪೊಲೀಸರಿಗೆ ದೂರು ನೀಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಹಲ್ಲೆ ಮಾಡಿದ ಯುವಕ ಕೂಡ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

VISTARANEWS.COM


on

Physical Abuse
ಆಟೋ ಚಾಲಕ ರಾಜು
Koo

ಬೆಂಗಳೂರು: ಅಪರಿಚಿತ ಊರಿಗೆ ತೆರಳಬೇಕಾಗಿದ್ದರೆ ಎಷ್ಟು ಎಚ್ಚರಿಕೆದಿಂದ ಇರುತ್ತೇವೋ ಅಷ್ಟು ಒಳ್ಳೆಯದು‌. ಇಲ್ಲದಿದ್ದಲ್ಲಿ ಎಂತಹ ಅನಾಹುತ ಆಗ ಬಲ್ಲದು ಎಂಬುವುದಕ್ಕೆ ಈ ಘಟನೆ ಸಾಕ್ಷಿ‌. ಮನೆ ಬಿಟ್ಟು ಓಡಿ ಬಂದಿದ್ದ ಯುವಕ-ಯುವತಿಗೆ ಬಾಡಿಗೆ ಮನೆ ಹುಡುಕಿಕೊಡುತ್ತೇನೆ ಎಂದು ಹೇಳಿ, ಯುವತಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಆಟೋ ಚಾಲಕ ಹಾಗೂ ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಯುವಕ ಜೈಲು ಪಾಲಾಗಿದ್ದಾರೆ.

ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕ ರಾಜು ಹಾಗೂ ಹಲ್ಲೆ ಮಾಡಿದ ಯುವಕ ಮಹಮ್ಮದ್ ಅನ್ಸರ್ ಎಂಬುವರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಪಿಳ್ಳಗಾನಹಳ್ಳಿಯ ಕೃಷ್ಣಪ್ಪ ಲೇಔಟ್ ನಿವಾಸಿಯಾಗಿರುವ ಆಟೋ ಚಾಲಕ ರಾಜುವಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗಳಿದ್ದಾಳೆ‌. ಗಂಡು ಮಕ್ಕಳು ಆಟೋ ಓಡಿಸಿದರೆ ಮಗಳಿಗೆ ಮದುವೆ ಆಗಿದೆ. ಆದರೂ ಮಗಳ ವಯಸ್ಸಿನ ಹೆಣ್ಣು ಮಗಳ ಜತೆ ಸರಸವಾಡಲು ಹೋಗಿ ತಲೆಗೆ ಮಚ್ಚೇಟು ತಿಂದಿದ್ದಲ್ಲದೇ ಜೈಲು ಪಾಲಾಗಿದ್ದಾನೆ.

ಇದನ್ನೂ ಓದಿ | Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

ಇನ್ನು ಪರಾರಿಯಾಗಿದ್ದ ಜೋಡಿ ಈ ಬಗ್ಗೆ ದೂರು ನೀಡಿರಲಿಲ್ಲ. ಆದರೆ ತನ್ನ ತಪ್ಪನ್ನು ಮುಚ್ಚಿ ಹಾಕಲು ಆಟೋ ಚಾಲಕ ರಾಜು, ತನ್ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ರಾಬರಿ ಮಾಡಿದ್ದಾರೆಂದು ಹೇಳಿ ಕೊಲೆ ಯತ್ನ ಕೇಸು ದಾಖಲಿಸಿದ್ದ. ಇದೇ ಆತನಿಗೆ ಮುಳುವಾಗಿತ್ತು.

ಚಿಕ್ಕಮಗಳೂರು ಮೂಲದ ಯುವತಿ ತ್ರಿಷಾ ಹಾಗೂ ಕೇರಳ ಮೂಲದ ಯುವಕ ಮಹಮ್ಮದ್ ಅನ್ಸರ್ ಮನೆ ಬಿಟ್ಟು ಬೆಂಗಳೂರಿಗೆ ಓಡಿ ಬಂದಿದ್ದರು. ಚೇತನ್ ಎಂಬಾತ ಸಹಾಯ ಮಾಡುತ್ತಾನೆ ಎಂದು ನಂಬಿ ಜಯನಗರದ ಮೆಟ್ರೋ ಸ್ಟೇಷನ್ ಬಳಿ ಕಾದು ಕೂತಿದ್ದರು. ಎಷ್ಟೇ ಕಾದರೂ ಚೇತನ್ ಬಂದಿರಲಿಲ್ಲ. ಕಾಲ್ ಮಾಡಿದರೆ ಸ್ವಿಚ್ ಆಫ್ ಬರ್ತಿತ್ತು. ಇದನ್ನು ಗಮನಿಸಿದ್ದ ಆಟೋ ಚಾಲಕ ರಾಜು, ನೇರವಾಗಿ ಜೋಡಿಯ ಬಳಿ ಬಂದು ಹೋಗಬೇಕಾದ ಜಾಗದ ಬಗ್ಗೆ ಕೇಳಿದಕ್ಕೆ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಎಂದಿದ್ದರು. ಸರಿ ಎಂದು ಕೂರಿಸಿಕೊಂಡು ಹೋಗುವಾಗ ಮನೆ ಬಾಡಿಗೆಗೆ ಬೇಕಾ ಎಂದಿದ್ದಾನೆ. ಇದಕ್ಕೆ ಒಪ್ಪಿ ಬೇಕು ಎಂದಿದಕ್ಕೆ ನನ್ನದೇ ಮನೆ ಬಾಡಿಗೆಗೆ ಇದೆ‌, ಇಷ್ಟವಾದರೆ ತೆಗೆದುಕೊಳ್ಳಿ ಎಂದಿದ್ದ.

ಸ್ವಲ್ಪ ದೂರ ಹೋದ ಬಳಿಕ ತನ್ನ ಬಾಡಿಗೆ ಮನೆ ದೂರ ಇದೆ. ಇಲ್ಲೆ ಪಿಳ್ಳಗಾನಹಳ್ಳಿಯಲ್ಲಿ ನನ್ನ ಸ್ಚಂತ ಮನೆ ಇದೆ. ಇವತ್ತು ಇದ್ದು, ನಾಳೆ ಹೋಗುವಂತೆ ಹೇಳಿದಕ್ಕೆ ಅದಕ್ಕೆ ಆ ಜೋಡಿ ಒಪ್ಪಿದ್ದರು. ದಾರಿ ಮಧ್ಯೆ ಆರೋಪಿ ಆಟೋ ಚಾಲಕ ರಾಜು ಮದ್ಯ ಖರೀದಿ ಮಾಡಿದ್ದ. ನಂತರ ಸೀದಾ ಮನೆಗೆ ಬಂದವನೇ ಅನ್ಸರ್‌ಗೆ ಸ್ವಲ್ಪ ಕುಡಿಸಿ ಮಲಗಿಸಿದ್ದ. ಸ್ವಲ್ಪ ಸಮಯದ ಬಳಿಕ ಯುವತಿಯನ್ನು ಅಡುಗೆ ಮನೆಗೆ ಎಳೆದೊಯ್ದು ತನ್ನ ಜತೆ ಮಲಗುವಂತೆ ಒತ್ತಾಯಿಸಿ ಚುಂಬಿಸಿದ್ದನಂತೆ. ಇದರಿಂದ ಯುವತಿ ಕಿರುಚಿದಾಗ ಅನ್ಸರ್ ಒಳ ಓಡಿ ಬಂದಿದ್ದ. ಆಗ ರಾಜು ಮಚ್ಚು ತೋರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿ ಮಚ್ಚು ಅಲ್ಲೆ ಪಕ್ಕ ಇಟ್ಟು ಮತ್ತೆ ತನ್ನ ಕಾಮುಕತನ ಮುಂದುವರಿಸಿದ್ದ. ಅಷ್ಟರಲ್ಲಿ ಅನ್ಸರ್ ಅಲ್ಲೇ ಇದ್ದ ಮಚ್ಚಿನಿಂದ ರಾಜುವಿನ ತಲೆಗೆ ಹೊಡೆದು ಯುವತಿಯ ಜತೆ ಹೊರಗೆ ಓಡಿ ಬಂದಿದ್ದ. ನಂತರ ಗೂಗಲ್ ಮ್ಯಾಪ್ ನೋಡಿ ಯಾರ್ಯಾರೋ ಕೈ ಕಾಲು ಹಿಡಿದು ಮೆಜೆಸ್ಟಿಕ್ ಬಂದಿದ್ದರು. ಆದರೆ ದೂರು ನೀಡಿರಲಿಲ್ಲ. ಇವರಿಂತ ಮುಂಚೆ ರಾಜು ಕೊಲೆ ಯತ್ನದ ದೂರು ನೀಡಿದಾಗ ಜೋಡಿಯನ್ನು ಟ್ರೇಸ್ ಮಾಡಿದಾಗ ಅಸಲಿ ಸಂಗತಿ ಹೊರ ಬಿದ್ದಿದೆ.

ಇದನ್ನೂ ಓದಿ | Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

ಇನ್ನು ರಾಜು ನೀಡಿದ ದೂರಿನ ಅನ್ವಯ ಯುವಕ ಮಹಮ್ಮದ್ ಅನ್ಸರ್‌ನ ಬಂಧನ ಮಾಡಿದಲ್ಲದೆ ಯುವತಿ ನೀಡಿದ ದೂರಿನ ಮೇಲೆ ಆಟೋ ಚಾಲಕ ರಾಜುವನ್ನು ಬಂಧನ ಮಾಡಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

Bengaluru News: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ ನಲ್ಲಿ ನಡೆಯಲಿದೆ. ಸಾಹಿತಿ ಎಸ್‌.ಎಲ್‌.ಭೈರಪ್ಪ ಕೃತಿ ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

Bharathada dheera chethanagalu kruthi lokarpane in Bengaluru on May 26
Koo

ಬೆಂಗಳೂರು: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ (Bengaluru News) ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಜರುಗಲಿದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಎಸ್‌.ಎಲ್‌. ಭೈರಪ್ಪನವರ ಇಂಗ್ಲೀಷ್‌ ಅನುವಾದಿತ 3 ಕಾದಂಬರಿಗಳನ್ನು ಡಾ. ವಿಕ್ರಮ್‌ ಸಂಪತ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

ಕಾರ್ಯಕ್ರಮದಲ್ಲಿ ಡಾ. ವಿಕ್ರಮ್‌ ಸಂಪತ್‌ ಅವರೊಂದಿಗೆ ಅರ್ಧಗಂಟೆಯ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅನುವಾದಕರಾದ ಎಲ್‌.ವಿ. ಶಾಂತಕುಮಾರಿ, ಪ್ರೊ. ಜಿ.ಎಲ್‌. ಶೇಖರ್‌ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಎಂ.ಎ. ಸುಬ್ರಮಣ್ಯ ಮತ್ತು ಎಂ.ಎಸ್‌. ಋತ್ವಿಕ್‌ ತಿಳಿಸಿದ್ದಾರೆ.

Continue Reading

ಸಿನಿಮಾ

Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

Kannada New Movie: ಪ್ರಚಲಿತ ವಿದ್ಯಮಾನದಲ್ಲಿ ’ಪೆನ್‌ಡ್ರೈವ್’ ಸಾಕಷ್ಟು ಸದ್ದು ಮಾಡುತ್ತಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರುತ್ತಿದ್ದು, ’ದೊಡ್ಡವರಲ್ಲ ಜಾಣರಲ್ಲ’ ಎಂಬ ಅಡಿಬರಹವಿದ್ದು, ಈ ಹಿಂದೆ ’ಪಾತರಗಿತ್ತಿ’ಎನ್ನುವ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

VISTARANEWS.COM


on

Kannada New Movie The movie is becoming a pendrive
Koo

ಬೆಂಗಳೂರು: ’ಪೆನ್‌ಡ್ರೈವ್’ (Pendrive) ಪ್ರಚಲಿತ ವಿದ್ಯಮಾನದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ರಾಜಕೀಯದಲ್ಲಿ ಹೆಚ್ಚೇ ಎಂದು ಹೇಳಬಹುದು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು (Kannada New Movie) ಸೆಟ್ಟೇರುತ್ತಿದ್ದು, ’ದೊಡ್ಡವರೆಲ್ಲ ಜಾಣರಲ್ಲ’ ಎಂಬ ಅಡಿಬರಹವಿದೆ. ಈ ಹಿಂದೆ ’ಪಾತರಗಿತ್ತಿ’ ಎನ್ನುವ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್‌

ಮನುಷ್ಯನೊಬ್ಬ ಮುಖವಾಡ ಹಾಕಿಕೊಂಡು ಪೆನ್‌ಡ್ರೈವ್ ಹಿಡಿದುಕೊಂಡಿರುವುದು, ಮರದ ಬಳ್ಳಿಯಲ್ಲಿ ಎಲೆಗಳ ಬದಲು ಪೆನ್‌ಡ್ರೈವ್‌ಗಳು ಇರುವ ಪೋಸ್ಟರ್ ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ. ಸೂಪರ್ ಮೂವೀಸ್ ಮೇಕರ‍್ಸ್ ಅಡಿಯಲ್ಲಿ ಲೋಕೇಶ್ ಆರ್. ಬಂಡವಾಳ ಹೂಡುತ್ತಿದ್ದಾರೆ. ಮಂಜುನಾಥ ಎಂ.ಸಿ. ಮತ್ತು ಬದ್ರುದ್ದೀನ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: makemytrip : ರೈಲು ಪ್ರಯಾಣದ ವೇಳೆ ಹೊಸತನ ತರಲು ವೈಶಿಷ್ಟ್ಯಗಳನ್ನು ಪರಿಚಯಿಸಿದ ಮೇಕ್‌ಮೈಟ್ರಿಪ್‌

ಶೀರ್ಷಿಕೆಗೂ ಕಥೆಗೂ ಏನು ಸಂಬಂಧ. ಯಾರ‍್ಯಾರು ತಗಲಿಕೊಳ್ತಾರೆ. ಇದೇ ಟೈಟಲ್ ನೀಡಲು ಯಾರಿಂದ ಉತ್ತೇಜನ ಸಿಕ್ಕಿತು. ಏನೆಲ್ಲಾ ಅಂಶಗಳು ಇರಲಿದೆ. ಚಿತ್ರದಲ್ಲಿ ಪೊಲೀಸ್, ಕೋರ್ಟು, ವಕೀಲರು, ದಸ್ತಗಿರಿ ಹೀಗೆಲ್ಲ ಇರುತ್ತಾ ಎಂಬುದಕ್ಕೆ ನಿರ್ದೇಶಕರು ದಸ್ತಗಿರಿನೂ ಆಗುತ್ತೆ. ಜೈಲು ಊಟಾನೂ ಇರುತ್ತೆ. ಅದು ಸಿನಿಮಾದ ಮೂಲಕಥೆ. ಒಟ್ಟಿನಲ್ಲಿ ಎಲ್ಲರೂ ಊಹಿಸುವಂತಹ ಪಾತ್ರಗಳು ಬರುತ್ತದೆ ಎಂದಷ್ಟೇ ಹೇಳಿ ಉತ್ತರ ಕೊಡದೆ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ.

ಸದ್ಯ ರಾಜಕೀಯ ವಲಯ, ಹಲವರ ವೈಯಕ್ತಿಕ ಬದುಕಿನಲ್ಲಿ ಪೆನ್‌ಡ್ರೈವ್ ಸಂಚಲನವನ್ನು ಹುಟ್ಟಿಸುತ್ತಾ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ಟೈಟಲ್ ಕೇಳಿದ ತಕ್ಷಣ ಕೇವಲ ಒಂದೇ ಕೋನದಿಂದ ಯಾಕೆ ಯೋಚನೆ ಮಾಡುತ್ತೀರಾ. ಅದರೊಳಗಡೆ ಏನನ್ನಾದರೂ ತುಂಬಿಸಬಹುದು. ಆದರೆ ಅದರ ಒಳಗಡೆ ಜನರು ನಿರೀಕ್ಷೆ ಮಾಡುವುದಕ್ಕಿಂತ ಹೆಚ್ಚಾಗಿ ವಿಷಯಗಳು ಇರುತ್ತವೆ. ಅದು ದೊಡ್ಡವರು ಅಥವಾ ಚಿಕ್ಕವರು ಇರಬಹುದು. ಸಮಾಜದ ಎಲ್ಲಾ ಮುಖಗಳು ಸಿಗುತ್ತದೆ. ಇದನ್ನು ಸಕರಾತ್ಮಕವಾಗಿ ನೋಡಿದರೆ ಆಗುವುದಾದರೂ ಏನು? ಒಟ್ಟಿನಲ್ಲಿ ಯಾರಿಗೂ ಅನ್ವಯವಾಗುವಂತ ಸನ್ನಿವೇಶಗಳು ಇರುವುದಿಲ್ಲ. ದೃಶ್ಯಗಳು ಸತ್ಯವೋ, ಮಿಥ್ಯವೋ ಎಂಬುದು ತೆರೆಕಂಡ ನಂತರ ತಿಳಿಯಲಿದೆ. ಅದ್ದೂರಿ ತಾರಾಗಣ ಇರುತ್ತದೆ. ಎಲ್ಲವನ್ನು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎನ್ನುತ್ತಾರೆ ಈಶ್ವರ್.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ಬೆಂಗಳೂರು, ಬಳ್ಳಾರಿ, ಹಾಸನ, ಸಕಲೇಶಪುರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಸಂಗೀತ ಹಂಸರಾಗ, ಛಾಯಾಗ್ರಹಣ ವಿಜಯ್ ರಾಘವ್, ಸಂಭಾಷಣೆ ಶ್ರೀಹರ್ಷ ಚಿತ್ರದುರ್ಗ, ಜೀವನ್‌ರಾಂ ಸಂಕಲನ ಇರಲಿದೆ.

Continue Reading

ಕರ್ನಾಟಕ

KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

KPTCL Recruitment: ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ, ಕೆಪಿಟಿಸಿಎಲ್‌ ನೇಮಕಾತಿ ಆದೇಶ ನೀಡಲಾಗಿದೆ.

VISTARANEWS.COM


on

KPTCL Recruitment
Koo

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ (KPTCL Recruitment) ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಎಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. 902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Continue Reading
Advertisement
Physical Abuse
ಕ್ರೈಂ13 mins ago

Physical Abuse: ರಾಬರಿ ಎಂದು ದೂರು ಕೊಟ್ಟವನೇ ಕಾಮುಕ; ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಆಟೋ ಚಾಲಕ!

Jeans Fashion
ಫ್ಯಾಷನ್13 mins ago

Jeans Fashion: ಜೀನ್ಸ್ ಪ್ಯಾಂಟ್‌ನಲ್ಲಿ ಇಂಡೋ-ವೆಸ್ಟರ್ನ್ ಲುಕ್‌ಗೆ 3 ಸಿಂಪಲ್‌ ಐಡಿಯಾ

T20 World Cup 2024
ಕ್ರೀಡೆ28 mins ago

T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

Viral Video
ವೈರಲ್ ನ್ಯೂಸ್31 mins ago

Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

Laila Khan Case
ದೇಶ32 mins ago

Laila Khan Case: ನಟಿ ಲೈಲಾ ಖಾನ್‌ ಸೇರಿ 6 ಜನರ ಹತ್ಯೆ;‌ ನಟಿಯ ತಂದೆ ಪರ್ವೇಜ್‌ ತಕ್‌ಗೆ ಗಲ್ಲು ಶಿಕ್ಷೆ!

Youngest Artist
ವಿದೇಶ33 mins ago

Youngest Artist: ಅಂಬೆಗಾಲಿಡುವ ಬಾಲಕ ಈಗ ವಿಶ್ವದ ಅತಿ ಕಿರಿಯ ಚಿತ್ರ ಕಲಾವಿದ!

Toothpaste Hacks
ಲೈಫ್‌ಸ್ಟೈಲ್43 mins ago

Toothpaste Hacks: ಟೂತ್‌ಪೇಸ್ಟ್‌ನಿಂದ ಯಾವೆಲ್ಲ ವಸ್ತುಗಳನ್ನು ಹೊಳೆಯುವಂತೆ ಮಾಡಬಹುದು ನೋಡಿ!

Bharathada dheera chethanagalu kruthi lokarpane in Bengaluru on May 26
ಕರ್ನಾಟಕ50 mins ago

Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

Kannada New Movie The movie is becoming a pendrive
ಸಿನಿಮಾ53 mins ago

Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

KPTCL Recruitment
ಕರ್ನಾಟಕ55 mins ago

KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌