Kannada Sahitya Sammelana | ಕನ್ನಡ ರಥದ ಅದ್ಧೂರಿ ಮೆರವಣಿಗೆ; ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕಸಾಪ - Vistara News

ಕ ಸಾ ಪ

Kannada Sahitya Sammelana | ಕನ್ನಡ ರಥದ ಅದ್ಧೂರಿ ಮೆರವಣಿಗೆ; ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕಸಾಪ

ಹಾವೇರಿಯಿಂದ ಆಗಮಿಸಿರುವ ಕನ್ನಡ ರಥವನ್ನು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.

VISTARANEWS.COM


on

Kannada Sahitya Sammelana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡದ ಸ್ವಾಭಿಮಾನದ ಸಂಕೇತವಾದ ಕನ್ನಡ ರಥದ ಜಾಥಾವನ್ನು (Kannada Sahitya Sammelana) ಪರಿಷತ್‌ ಹಮ್ಮಿಕೊಂಡಿದ್ದು, ಹೊಸ ಪರಂಪರೆಗೆ ನಾಂದಿ ಹಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯಪಟ್ಟರು.

ನಗರಕ್ಕೆ ಶುಕ್ರವಾರ ಆಗಮಿಸಿದ ಕನ್ನಡ ರಥಕ್ಕೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ಪೂಜೆ ಸಲ್ಲಿಸಿ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹೆಸರಾಂತ ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ 2023ರ ಜನವರಿ 6, 7 ಹಾಗೂ 8ರಂದು ಮೂರು ದಿನಗಳ ಕಾಲ ಆಚರಿಸಲಾಗುತ್ತಿರುವ ಕನ್ನಡದ ನುಡಿ ಜಾತ್ರೆಯನ್ನು ಐತಿಹಾಸಿಕ ದಾಖಲೆಯನ್ನಾಗಿಸುವ ಸದುದ್ದೇಶದಿಂದ ಕನ್ನಡದ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಮಾಡಲಾಗುತ್ತಿದೆ ಎಂದರು.

ಕನ್ನಡ ರಥ ನಾಡಿನಾದ್ಯಂತ ಸಂಚರಿಸುವ ಮೂಲಕ ಎಲ್ಲ ಕನ್ನಡಿಗರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುತ್ತಿದೆ. ಜತೆಗೆ ಕನ್ನಡ ತಾಯಿ ಭುವನೇಶ್ವರಿಯ ಸನ್ನಿಧಾನದಿಂದ ತರಲಾದ ಪವಿತ್ರ ಕನ್ನಡ ಜ್ಯೋತಿಯನ್ನು ಕನ್ನಡಿಗರಿಗೆ ದರ್ಶನ ಮಾಡಿಸುವುದರ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Vijay Diwas | ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಸಿಎಂ ಭರವಸೆ

ಕನ್ನಡ ರಥಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಶ್ರೀ ಬೇಲಿಮಠದ ಪೀಠಾಧಿಕಾರಿ ಶ್ರೀ ಶಿವರುದ್ರ ಸ್ವಾಮೀಜಿ ಮಾತನಾಡಿ, ಕನ್ನಡ ತಾಯಿ ಭುವನೇಶ್ವರಿಯ ಪೂರ್ಣ ಕೃಪೆ ಸಮಸ್ತ ಕನ್ನಡಿಗರ ಮೇಲಿದೆ. ಈ ಸತ್ಯವನ್ನು ಇಂದು ಕನ್ನಡ ಸಾಹಿತ್ಯ ಪರಿಷತ್‌ ನಾಡಿನ ಎಲ್ಲ ಮೂಲೆ ಮೂಲೆಗಳ ಕನ್ನಡಿಗರಿಗೆ ರಥದಲ್ಲಿ ಕನ್ನಡ ಜ್ಯೋತಿ ದರ್ಶನ ಮಾಡಿಸುವುದರ ಮೂಲಕ ತೋರಿಸಿಕೊಟ್ಟಿದೆ ಎಂದು ಹೇಳಿದರು.

೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ದೊಡ್ಡರಂಗೇಗೌಡ ಅವರು ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳವು ಕನ್ನಡಿಗರ ಹೆಮ್ಮೆಯ ಪ್ರತೀಕವಾಗಬೇಕಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಸಕಾರಾತ್ಮಕವಾದ ಹೆಜ್ಜೆಯನ್ನು ಇಡುತ್ತಿದೆ. ಎಲ್ಲ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಕನ್ನಡದ ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಕನ್ನಡಾಭಿಮಾನವನ್ನು ತೋರಬೇಕಿದೆ ಎಂದು ಹೇಳಿದರು.

ವಿವಿಧ ಕಲಾ ತಂಡಗಳನ್ನೊಳಗೊಂಡ ಕನ್ನಡ ರಥದ ಅದ್ಧೂರಿ ಮೆರವಣಿಗೆ, ಕನ್ನಡ ಸಾಹಿತ್ಯ ಪರಿಷತ್‌ನ ಆವರಣದಿಂದ ಹೊರಟು, ಪಂಪ ಮಹಾಕವಿ ರಸ್ತೆಯ ಮೂಲಕ ಚಾಮರಾಜಪೇಟೆ, ಬಸವನಗುಡಿ ಮಾರ್ಗವಾಗಿ ಬನಶಂಕರಿ ತೆರಳಿ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಪೂಜೆ ಸ್ವೀಕರಿಸಿ, ಕೋಣನಕುಂಟೆ, ಬನ್ನೇರುಘಟ್ಟ, ಜಿಗಣಿ ಮಾರ್ಗವಾಗಿ ಆನೇಕಲ್‌ಗೆ ತೆರಳಿತು. ನಂತರ ಚಂದಾಪುರ ಮಾರ್ಗವಾಗಿ ಮಡಿವಾಳ, ಡೈರಿ ವೃತ, ಲಾಲ್‌ಬಾಗ್ ಮಾರ್ಗವಾಗಿ ಮತ್ತೆ ಕನ್ನಡ ಸಾಹಿತ್ಯ ಪರಿಷತ್‌ಗೆ ತಲುಪಿತು. ಶನಿವಾರ ಬೆಳಗ್ಗೆ ಮೈಸೂರು ರಸ್ತೆಯಿಂದ ಕನ್ನಡ ರಥ ತೆರಳಿ ಶ್ರೀ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸ್ವೀಕರಿಸಿ, ಕೆಂಗೇರಿ ಮಾರ್ಗವಾಗಿ ರಾಮನಗರ ಜಿಲ್ಲೆಗೆ ಕನ್ನಡ ರಥ ತೆರಳಲಿದೆ.

ರಥಯಾತ್ರೆಗೆ ಚಾಲನೆ ವೇಳೆ ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್‌, ಹಿರಿಯ ಇತಿಹಾಸ ತಜ್ಞ ಡಾ. ತಲಕಾಡು ಚಿಕ್ಕರಂಗೇಗೌಡ, ಕರ್ನಾಟಕ ನವ ನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಕಸಾಪ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಕೆ. ಮಹಾಲಿಂಗಯ್ಯ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್ಪಾಂಡು ಸೇರಿ ಅನೇಕ ಕನ್ನಡಾಭಿಮಾನಿಗಳು, ಸಾಹಿತಿಗಳು ಹಾಗೂ ಕನ್ನಡ ಪರ ಹೋರಾಟಗಾರರು ಭಾಗವಹಿಸಿದ್ದರು.

ಇದನ್ನೂ ಓದಿ | Kannada Sahitya Sammelana | ನುಡಿ ಜಾತ್ರೆಗೆ ಬನ್ನಿ; ಮಾಜಿ ಸಿಎಂ ಸಿದ್ದರಾಮಯ್ಯಗೆ ಕಸಾಪ ಆಮಂತ್ರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
assault Case
ಕ್ರೈಂ8 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ12 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್15 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest31 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest34 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ39 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌