Drowned in Canal | ಕಾಲುವೆಯಲ್ಲಿ ಈಜಾಡಲು ಹೋಗಿ ನೀರು ಪಾಲಾದ ವಿದ್ಯಾರ್ಥಿಗಳು; ಕುಟುಂಬಸ್ಥರ ಆಕ್ರಂದನ - Vistara News

ಕರ್ನಾಟಕ

Drowned in Canal | ಕಾಲುವೆಯಲ್ಲಿ ಈಜಾಡಲು ಹೋಗಿ ನೀರು ಪಾಲಾದ ವಿದ್ಯಾರ್ಥಿಗಳು; ಕುಟುಂಬಸ್ಥರ ಆಕ್ರಂದನ

ಗೆಳೆಯರ ಜತೆ ಈಜಲು ಹೋಗಿದ್ದವರಲ್ಲಿ ಮೂವರು ನೀರುಪಾಲಾಗಿರುವ (Drowned in Canal) ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ನೀರುಪಾಲಾದವರಿಗಾಗಿ ಹುಡುಕಾಟ ನಡೆಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಇಲ್ಲಿನ ಹೊಸಪೇಟೆಯ ಹೊರವಲಯದಲ್ಲಿರುವ ಕಾಲುವೆಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿಗಳು ನೀರುಪಾಲಾಗಿರುವ (Drowned in Canal) ಘಟನೆ ನಡೆದಿದೆ. 6 ಮಂದಿ ಈಜಾಡಲು ಹೋಗಿದ್ದು, ಮೂವರು ಮಾತ್ರ ವಾಪಸ್ ಆಗಿದ್ದು, ಉಳಿದ ಮೂವರು ನೀರು ಪಾಲಾಗಿದ್ದಾರೆ.

ಹೊಸಪೇಟೆಯ ವಿಜಯನಗರ ಕಾಲೇಜಿನ ಇಬ್ಬರು ಪಿಯುಸಿ ವಿದ್ಯಾರ್ಥಿಗಳು, ಒಬ್ಬ ಪದವಿ ವಿದ್ಯಾರ್ಥಿ ಆಗಿದ್ದು, ಯಶ್ವಂತ್, ಅಂಜಿನಿ, ಗುರುರಾಜ್ ನೀರುಪಾಲಾದವರು ಎಂದು ಗುರುತಿಸಲಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬದುಕುಳಿದ ಮೂವರು ವಿದ್ಯಾರ್ಥಿಗಳನ್ನು ಗ್ರಾಮೀಣ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ನೀರುಪಾಲಾಗಿರುವ ವಿದ್ಯಾರ್ಥಿಗಳ ಶೋಧ ಕಾರ್ಯ ಮುಂದುವರಿದಿದೆ.

ಹೊಸಪೇಟೆಯ ಎಂಜೆ ನಗರ, ಗುಂಡಾ ಗ್ರಾಮ, ಕೊಪ್ಪಳದ ಹೊಸ ನಿಂಗಾಪುರದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇತ್ತ ವಿದ್ಯಾರ್ಥಿಗಳು ನೀರುಪಾಲಾದ ವಿಷಯ ತಿಳಿದ ಕುಟುಂಬಸ್ಥರ ಸ್ಥಳಕ್ಕಾಗಮಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Bigg Boss Kannada | ʼಕಳಪೆʼ ನೀಡುವಾಗ ಬೇಸರ ಹೊರಹಾಕಿದ ಅಮೂಲ್ಯ ಗೌಡ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Renuka swamy Murder : ಟೀಕೆಗೆಲ್ಲ ಕೊಲೆ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು- ಸಿಟಿ ರವಿ

Renuka swamy Murder case : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಆ್ಯಂಡ್‌ ಗ್ಯಾಂಗ್‌ ಅರೆಸ್ಟ್‌ ಆಗಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಮೈಸೂರಿನಲ್ಲಿ ನಟ ದರ್ಶನ್‌ನನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವಂತೆ ಪ್ರತಿಭಟಿಸಲಾಗಿದೆ.

VISTARANEWS.COM


on

By

Renuka swamy murder case
Koo

ಚಿಕ್ಕಮಗಳೂರು/ಮೈಸೂರು/ಹುಬ್ಬಳ್ಳಿ: ರೇಣುಕಾಸ್ವಾಮಿ ಎಂಬಾತ (Renuka swamy Murder) ಕೊಲೆ ಕೇಸ್‌ನಲ್ಲಿ ಸೆರೆಯಾಗಿರುವ ನಟ ದರ್ಶನ್ (Actor Darshan) ಪ್ರಕರಣದ ಸುದ್ದಿ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಪ್ರತಿಕ್ರಿಯಿಸಿದ್ದರು. ಸಿನಿಮಾದಲ್ಲಿ ಹೀರೋ ಆದವರೆಲ್ಲ ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ. ದರ್ಶನ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ದರು ಅನ್ನಿಸುತ್ತದೆ.

ನಮ್ಮ ಪಕ್ಷದವರು ರೇಣುಕಾಸ್ವಾಮಿ ಕುಟುಂಬದ ಜತೆ ಇದೆ, ಅವರಿಗೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆಲ್ಲ ಆ ರೀತಿಯೇ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಆ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು.

ನಟ ದರ್ಶನ್‌ಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡುತ್ತಿದ್ದಾರೆ ಎನ್ನುವ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ದರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಇದನ್ನೂ ಓದಿ: Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

ಅವನು ಮನುಷ್ಯನೋ.. ರಾಕ್ಷಸನೋ – ಶಾಸಕ ಅರವಿಂದ ಬೆಲ್ಲದ್‌ ವಾಗ್ದಾಳಿ

ದರ್ಶನ ವಿರುದ್ಧ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ವಾಗ್ದಾಳಿ ನಡೆಸಿದರು. ನಟ ದರ್ಶನ್‌ ಮಾಡಿರುವ ಕೆಲಸ ನೋಡಿದರೆ, ಅವನು ಮನುಷ್ಯನೋ ಅಥವಾ ರಾಕ್ಷಸನೋ ಎಂಬುದು ತಿಳಿಯುತ್ತಿಲ್ಲ. ದರ್ಶನ್‌ನನ್ನು ಕೃಷಿ ರಾಯಭಾರಿ‌ಯನ್ನಾಗಿ ಮಾಡಲಾಗಿತ್ತು. ಈ ಸರ್ಕಾರ ಮಾಡುತ್ತಿರುವ ತಪ್ಪು ಒಂದಲ್ಲ ಎರಡಲ್ಲ. ಸಮಾಜ ವಿರೋಧಿ, ಕ್ರಿಮಿನಲ್ ಕೆಲಸ ಮಾಡುತ್ತಿರುವವರಿಗೆ ರಾಜಾತಿಥ್ಯ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ – ಜಗದೀಶ್‌ ಶೆಟ್ಟರ್‌

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ಸಹಚರರು ಸೆರೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಸಂಬಂಧ ಪ್ರತಿಕ್ರಿಯಿಸಿದ್ದು, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಾನೂನುನನ್ನು ಯಾರು ಕೈಗೆ ತೆಗೆದುಕೊಳ್ಳಬಾರದು ಎಂದರು.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌ ಕಳಿಸಿದ್ದಕ್ಕೆ ಕೊಲೆ ಯಾಕೆ ಮಾಡಬೇಕು . ಅದಕ್ಕಾಗಿಯೇ ಸೈಬರ್ ಕ್ರೈಂ ಇದೆ, ಅಲ್ಲಿ ದೂರು ಕೊಡಬಹುದಿತ್ತು. ಒಬ್ಬ ಸಿನಿಮಾ ನಟ ಆ ವ್ಯಕ್ತಿಯನ್ನು ಕೊಲೆ ಮಾಡಬಾರದಿತ್ತು. ನಟ ಆಗಲಿ ಸಾಮಾನ್ಯ ಜನರಾಗಲಿ ಅಪರಾಧ ಮಾಡಿದಾಗ ತಾರತಮ್ಯ ಮಾಡಬಾರದು ಎಂದರು.

ನಟರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು- ಜಯ ಮೃತ್ಯುಂಜಯ ಸ್ವಾಮೀಜಿ

ಕಲಾವಿದರ ಬದುಕು ಮತ್ತು ಬರಹ ಒಂದೆ ಆಗಿರಬೇಕು. ಪರದೆ ಮೇಲಿನ ನಟನೆಗೂ ಬದುಕಿಗೂ ಸಾಮೀಪ್ಯವಾಗುವಂತೆ ಬದಕುವ ಪ್ರಯತ್ನ ಮಾಡಬೇಕು. ಪರದೇ ಮೇಲೆ ಒಂದು ನಟನೆ, ಪರದೇ ಹಿಂದೆ ಒಂದು ನಟನೆ ಮಾಡಿದಾಗ ಇಂತಹ ಅವಘಡ ಆಗುತ್ತವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಅವಘಡಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬ ನಟರು ತಮ್ಮ ವ್ಯಕ್ತಿತ್ವ ರೂಪಿಸಿಕೋಳ್ಳಬೇಕು. ಡಾ ರಾಜಕುಮಾರ, ಡಾ ವಿಷ್ಣುವರ್ಧನ್‌ ಆದರ್ಶವಾಗಿದ್ದಾರೆ. ಅಂತಹ ಮಹಾನ್‌ ನಟರಂತೆ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ಇದನ್ನೂ ಓದಿ: Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

ಚಿತ್ರರಂಗದಿಂದ ಬ್ಯಾನ್‌ ಮಾಡಿ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಮೈಸೂರಿನ ತಿ.ನರಸೀಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟ ಪ್ರತಿಭಟಿಸಿದೆ. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ನಟ ದರ್ಶನ್‌ ಚಿತ್ರರಂಗದಿಂದ ಬ್ಯಾನ್ ಆಗಬೇಕು ಎಂದು ಒತ್ತಾಯಿಸಿದರು.

ನಟ ದರ್ಶನ್‌ ಚಿತ್ರಗಳು ತೆರೆಯ ಮೇಲೆ ಬರದಂತೆ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Renuka Swamy Murder: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರು, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ.

VISTARANEWS.COM


on

Renuka Swamy murder
Koo

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ (Renuka Swamy Murder) ಪೊಲೀಸ್‌ಗೆ ಹಸ್ತಾಂತರಗೊಂಡಿದ್ದು, ವರದಿಯಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ.

ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ರೇಣುಕಾಸ್ವಾಮಿ ದೇಹದ ಮೇಲೆ 30ಕ್ಕೂ ಅಧಿಕ ಗಾಯಗಳು ಕಂಡುಬಂದಿದ್ದು, ತಲೆ ಮೇಲೆ ನಾಲ್ಕು ಬಲವಾದ ಗಾಯಗಳು ಪತ್ತೆಯಾಗಿವೆ. ಸಾಯುವ ಮುನ್ನ ನಾಲ್ಕು ಬಾರಿ ಎಲೆಕ್ಟ್ರಿಕ್ ಶಾಕ್ ನೀಡಿರುವುದು ತಿಳಿದುಬಂದಿದೆ. ಹೀಗಾಗಿ ತೀವ್ರ ರಕ್ತ ಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿರುವುದು ದೃಢವಾಗಿದೆ. ಕಬ್ಬಿಣದ ರಾಡ್, ದೊಣ್ಣೆಯಿಂದ ಹಲ್ಲೆ ನಡೆಸಿದ್ದರಿಂದ ರಕ್ತ ಹೆಪ್ಪುಗಟ್ಟಿ, ರಕ್ತಸಾವ್ರದಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಮತ್ತೊಂದು ಹಂತದ ತನಿಖೆಗೆ ಮುಂದಾದ ಪೊಲೀಸರು

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೊಂದು ಹಂತದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಕಸ್ಟಡಿಗೆ ಪಡೆದ ಆರೋಪಿಗಳ ವಿಚಾರಣೆ ವೇಗಗೊಳಿಸಿದ್ದು, ಈ ವೇಳೆ ಸಾಕ್ಷ್ಯ ನಾಶಕ್ಕೆ ಸತ ಪ್ರಯತ್ನ ನಡೆಸಿರುವುದು ತಿಳಿದುಬಂದಿದೆ.

ಆರೋಪಿಗಳ ಬಳಿ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ಇನ್ನು ಸ್ಥಳ ಮಹಜರು ವೇಳೆ ಮತ್ತಷ್ಟು ಆಧಾರಗಳು ಪತ್ತೆಯಾಗಿವೆ ಎನ್ನಲಾಗಿದೆ. ಈಗಾಗಲೇ ಆಯುಧಗಳು, 30 ಲಕ್ಷ ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿ ಮಾಡಲಾಗಿದೆ.

ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan teacher Addanda Cariappa sad on arrested darshan

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

Shootout Case: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ರೌಡಿಶೀಟರ್‌ ಮೃತಪಟ್ಟಿದ್ದಾನೆ.

VISTARANEWS.COM


on

Shootout Case
Koo

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

murder case in Bengaluru rural

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ರಾಮನಗರ

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Kusina Mane : ಗ್ರಾಮೀಣ ಮಹಿಳೆಯರ ಪಾಲಿಗೆ ಕೂಸಿನ ಮನೆಯು ವರದಾನವಾಗಿದೆ. ಅದರಲ್ಲೂ ನರೇಗಾ ಮಹಿಳಾ ಕೂಲಿಕರಾರು ತಮ್ಮ ಮಕ್ಕಳನ್ನು ಕೂಸಿನ ಮನಯಲ್ಲಿ ಬಿಟ್ಟು, ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

VISTARANEWS.COM


on

By

kusina mane
Koo

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಮಕ್ಕಳಿಗೆ ಅನೂಕೂಲ ಕಲ್ಪಿಸುವ ಉದ್ದೇಶದೊಂದಿಗೆ ಪ್ರಾರಂಭಿಸಲಾಗಿರುವ ಕೂಸಿನ ಮನೆಗಳು (Kusina Mane) ಇದೀಗ ಮಕ್ಕಳ ಹಾಗೂ ಪೋಷಕರ ಪಾಲಿಗೆ ಆಶಾಕಿರಣವಾಗಿವೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ರಾಮನಗರ ತಾಲೂಕಿನಲ್ಲಿ ಆರಂಭಿಸಿರುವ 20 ಕೂಸಿನ ಮನೆಗಳು ಗ್ರಾಮೀಣ ಮಕ್ಕಳಿಗೆ ಅನುಕೂಲ ವಾಗುತ್ತಿದೆ. ಕೂಸಿನ ಮನೆಗಳು ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 4ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಕೂಸಿನ ಮನೆಯಲ್ಲಿ 6 ತಿಂಗಳಿಂದ 3 ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುತ್ತದೆ. ಇದರಿಂದಾಗಿ ನರೇಗಾ ಮಹಿಳಾ ಕೂಲಿಕರಾರು ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

kusina Mane

ಆರಂಭದಲ್ಲಿ ಕೂಸಿನ ಮನೆಗೆ ಮಕ್ಕಳು ನಿರೀಕ್ಷಿತ ಪ್ರಮಾಣದಲ್ಲಿ ಬಂದಿರಲಿಲ್ಲ. ನಂತರ ಪಂಚಾಯಿತಿ ಹಾಗೂ ಶಿಶು ಆರೈಕೆದಾರರ ಜಾಗೃತಿ, ಐಇಸಿ (IEC) ಚಟುವಟಿಕೆ, ಜಾಗೃತಿ ಕಾರ್ಯಕ್ರಮದ ಮೂಲಕ ಮನವರಿಕೆ ಮಾಡಿದ್ದಾರೆ. ಇದರ ಫಲವಾಗಿ ಮಹಿಳಾ ಕಾರ್ಮಿಕರು ಕೂಸಿನ ಮನೆಯಲ್ಲಿ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋಗಲಾರಂಭಿಸಿದ್ದಾರೆ.

ಇದೀಗ ಮಕ್ಕಳ ದಾಖಲಾತಿ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುತ್ತಿದ್ದು, ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ. ಇದರಿಂದ ಮಹಿಳಾ ಕೂಲಿಕಾರರು ತಮ್ಮ ಜೀವನವನ್ನು ಇನ್ನಷ್ಟು ಸುಧಾರಿಸಿಕೊಳ್ಳಲು ಕೂಸಿನ ಮನೆ ಕಾರಣವಾಗಿದೆ ಎಂದು ರಾಮನಗರ ತಾಲೂಕಿನ ಐಇಸಿ ಸಂಯೋಜಕರು ಸುಚಿತ್ರ ತಿಳಿಸಿದ್ದಾರೆ.

kusina mane

ಈಗಾಗಲೇ ರಾಮನಗರದ 20 ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ (ಶಿಶುಪಾಲನ ಕೇಂದ್ರ) ಆರಂಭವಾಗಿದ್ದು, ಬನ್ನಿಕುಪ್ಪೆ, ಕೆ, ಸುಗ್ಗನಹಳ್ಳಿ, ಬನ್ನಿಕುಪ್ಪೆ.ಬಿ, ಕೈಲoಚ ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Renuka swamy murder case
ಕ್ರೈಂ1 min ago

Renuka swamy Murder : ಟೀಕೆಗೆಲ್ಲ ಕೊಲೆ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು- ಸಿಟಿ ರವಿ

Goat With Plastic Teeth
ವಿದೇಶ22 mins ago

Goat With Plastic Teeth: ಬಕ್ರೀದ್‌ಗೆ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಾಟ ಮಾಡಿ ಸಿಕ್ಕಿಬಿದ್ದ ಭೂಪ

Double iSmart to release on August 15
ಟಾಲಿವುಡ್24 mins ago

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Rahul Gandhi
ದೇಶ37 mins ago

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Euro 2024
ಕ್ರೀಡೆ51 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ52 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ2 hours ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ2 hours ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ2 hours ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ2 hours ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌