ಗರ್ಭಿಣಿ ನೀನು, ಚೆನ್ನಾಗಿರಬೇಕು ಎನ್ನುತ್ತ ಪತ್ನಿಗೆ ಎಚ್​ಐವಿ ಸೋಂಕಿನ ರಕ್ತ ಇಂಜೆಕ್ಟ್​ ಮಾಡಿಸಿದ ಪತಿ; ನಂಬಿ ಮೋಸ ಹೋದ ಹೆಂಡತಿ - Vistara News

ಕ್ರೈಂ

ಗರ್ಭಿಣಿ ನೀನು, ಚೆನ್ನಾಗಿರಬೇಕು ಎನ್ನುತ್ತ ಪತ್ನಿಗೆ ಎಚ್​ಐವಿ ಸೋಂಕಿನ ರಕ್ತ ಇಂಜೆಕ್ಟ್​ ಮಾಡಿಸಿದ ಪತಿ; ನಂಬಿ ಮೋಸ ಹೋದ ಹೆಂಡತಿ

ನಮ್ಮಿಬ್ಬರ ದಾಂಪತ್ಯ 2018ಕ್ಕೂ ಮೊದಲು ಚೆನ್ನಾಗಿಯೇ ಇತ್ತು. ಹೆಣ್ಣುಮಗುವೂ ಆಯಿತು. ಬರುಬರುತ್ತ ವರದಕ್ಷಿಣೆ ಬೇಕೆಂದು ಪತಿ ಪೀಡಿಸಲು ಪ್ರಾರಂಭಿಸಿದ. ಅವನಿಗೆ ಅನೈತಿಕ ಸಂಬಂಧವೂ ಇದೆ ಎಂದು ಪತ್ನಿ ಗೋಳು ಹೇಳಿಕೊಂಡಿದ್ದಾಳೆ.

VISTARANEWS.COM


on

Man Injects Wife With HIV Blood In Andhra Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯವಾಡ: ಗರ್ಭಿಣಿ ಪತ್ನಿಗೆ ಎಚ್​ವಿಐ ಸೋಂಕಿರುವ ರಕ್ತವನ್ನು ಇಂಜೆಕ್ಟ್​​ ಮಾಡಿದ ಆರೋಪದಡಿ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಅಮಾನುಷ ಕೃತ್ಯ ನಡೆದಿದ್ದು ಆಂಧ್ರಪ್ರದೇಶದಲ್ಲಿ. ಎಂ. ಚರಣ್​ ಎಂಬಾತ ಆರೋಪಿ. ಈತನಿಗೆ ತನ್ನ ಪತ್ನಿಯಿಂದ ವಿಚ್ಛೇದನ ಬೇಕಾಗಿತ್ತು. ಡಿವೋರ್ಸ್ ಪಡೆಯಲು ಒಂದು ಸಕಾರಣ ಹುಡುಕುತ್ತಿದ್ದ. ಆದರೆ ಸಿಗದೆ ಇದ್ದಾಗ ಹೀಗೊಂದು ಕೀಳುಮಟ್ಟದ ತಂತ್ರ ಪ್ರಯೋಗ ಮಾಡಿದ್ದಾನೆ.

ಚರಣ್​ ಮತ್ತು ಆತನ ಪತ್ನಿಗೆ ಈಗಾಗಲೇ ಒಬ್ಬಳು ಮಗಳಿದ್ದಾಳೆ. ಇನ್ನೊಂದು ಮಗು ಮಹಿಳೆಯ ಗರ್ಭದಲ್ಲಿತ್ತು. ಇತ್ತೀಚೆಗೆ ಒಮ್ಮೆ ಆರೋಗ್ಯ ತಪಾಸಣೆಗೆ ಹೋದಾಗ ಆಕೆಗೆ ಎಚ್​ಐವಿ ಸೋಂಕು ಇರುವುದು ಪತ್ತೆಯಾಗಿದೆ. ಅಕ್ಷರಶಃ ಆಕೆ ಕಂಗಾಲಾಗಿ ಹೋದಳು. ಈ ಸೋಂಕು ತನಗೆ ಹೇಗೆ ಬಂತು ಎಂದೇ ಅವಳಿಗೆ ಕೆಲ ಕಾಲ ಅರ್ಥವಾಗಲಿಲ್ಲ. ಬಳಿಕ ನೆನಪಿಸಿಕೊಂಡು ವೈದ್ಯರಿಗೆ ವಿಷಯ ತಿಳಿಸಿದ್ದಾಳೆ. ‘ಕೆಲವು ದಿನಗಳ ಹಿಂದೆ ನನ್ನ ಪತಿ ನನ್ನನ್ನು ಒಬ್ಬ ವೈದ್ಯನ ಬಳಿ ಕರೆದುಕೊಂಡ ಹೋಗಿದ್ದ. ಬಸುರಿ ಆರೋಗ್ಯವಂತಳಾಗಿರಬೇಕು, ನಿನಗೆ ಶಕ್ತಿ ಬರಬೇಕು ಎಂದು ಹೇಳುತ್ತ ಒಂದು ಚುಚ್ಚುಮದ್ದು ಕೊಡಿಸಿದ. ಬಹುಶಃ ಆಗಲೇ ನನಗೆ ಎಚ್​ಐವಿ ಸೋಂಕು ತಗುಲಿರಬಹುದು’ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಬಳಿಕ ಪೊಲೀಸರಿಗೂ ದೂರು ಕೊಟ್ಟು ಈ ವಿಷಯವನ್ನೆಲ್ಲ ತಿಳಿಸಿದ್ದಾಳೆ.

‘ನಮ್ಮಿಬ್ಬರ ದಾಂಪತ್ಯ 2018ಕ್ಕೂ ಮೊದಲು ಚೆನ್ನಾಗಿಯೇ ಇತ್ತು. ಹೆಣ್ಣುಮಗುವೂ ಆಯಿತು. ಬರುಬರುತ್ತ ವರದಕ್ಷಿಣೆ ಬೇಕೆಂದು ಪತಿ ಪೀಡಿಸಲು ಪ್ರಾರಂಭಿಸಿದ. ಹಾಗೇ ಗಂಡುಮಗು ಹುಟ್ಟಿಲ್ಲವೆಂದೂ ಮೂದಲಿಸುತ್ತಿದ್ದ. ವಿಶಾಖಪಟ್ಟಣಂನಲ್ಲಿ 21 ವರ್ಷದ ಯುವತಿಯೊಂದಿಗೆ ಅನೈತಿಕ ಸಂಬಂಧವನ್ನೂ ಹೊಂದಿದ್ದ. ಅದೇ ಕಾರಣಕ್ಕೆ ನನಗೆ ಹಿಂಸೆ ನೀಡುತ್ತಿದ್ದ. ವಿಚ್ಛೇದನ ಬೇಕೆಂದು ಬಲವಂತ ಮಾಡುತ್ತಿದ್ದ. ನಾನು ಒಪ್ಪದ ಕಾರಣ ಆತ ಹೀಗೆ ಎಚ್​ಐವಿ ಸೋಂಕಿರುವ ರಕ್ತವನ್ನು ಇಂಜೆಕ್ಟ್​ ಮಾಡಿಸಿದ್ದಾನೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರಿಗೆ ಈ ಮಹಿಳೆಗೆ ಚುಚ್ಚುಮದ್ದು ಕೊಟ್ಟಿದ್ದು ಒಬ್ಬ ನಕಲಿ ವೈದ್ಯ ಎಂಬುದು ಗೊತ್ತಾಗಿದೆ. ಪತಿಯನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Italian Man | ಪುರುಷರ ಜತೆ ಲೈಂಗಿಕ ಕ್ರಿಯೆ, ಇಟಲಿ ವ್ಯಕ್ತಿಗೆ ಒಮ್ಮೆಗೇ ಮಂಕಿಪಾಕ್ಸ್‌, ಎಚ್‌ಐವಿ, ಕೊರೊನಾ ದೃಢ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೀದರ್‌

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Dead Body Found : ಗ್ರಾಮದಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ದಿನಗಟ್ಟಲೆ ಅದೇ ನೀರನ್ನು ಕುಡಿದಿದ್ದ ಜನರು (Water Tank) ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

By

Dead Body Found in water tank
ವಾಟರ್‌ ಟ್ಯಾಂಕರ್‌ನಲ್ಲಿ ಶವ ಪತ್ತೆಯಾಗುತ್ತಿದ್ದಂತೆ ಜಮಾಯಿಸಿದ ಗ್ರಾಮಸ್ಥರು
Koo

ಬೀದರ್ : ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದೆ. ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿಯಿಯಲ್ಲಿ ವ್ಯಕ್ತಿಯೊಬ್ಬಮ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ಸತ್ಯ ವಿಷಯವನ್ನು ತಿಳಿದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Road Accident : ಬೈಕ್‌ಗೆ (Bike Accident) ಲಾರಿ ಡಿಕ್ಕಿಯಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಆನೇಕಲ್: ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ಘಟನೆ (Road Accident) ನಡೆದಿದೆ.

ರಾಕೇಶ್ (28) ಮೃತ ದುರ್ದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಆನೇಕಲ್ ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡುತ್ತಿದ್ದರು.

ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ರಾಕೇಶ್ ತಲೆಯ ಮೇಲೆಯೇ ಲಾರಿಯ ಚಕ್ರ ಹರಿದಿದೆ. ಪರಿಣಾಮ ನಜ್ಜುಗುಜ್ಜಾದ ರಾಕೇಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಅಪಘಾತದಲ್ಲಿ ವಿನಯ್‌ಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Attempt To Murder : ಹಣದಾಸೆಗೆ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ಕಾರ್ಮಿಕರಿಬ್ಬರು ಪ್ರಾಣವನ್ನು (Accident Case) ಕಳೆದುಕೊಂಡಿದ್ದಾರೆ. ಹುಣಸೆ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕಬ್ಬಿಗೆರೆ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಗುಡ್ಡದ ಜೋಗಿಹಳ್ಳಿ ಮೂಲದ ಮಂಜುನಾಥ್ (32) ಮೃತ ದುರ್ದೈವಿ.

ಕಬ್ಬಿಗೆರೆ ಗ್ರಾಮದಲ್ಲಿ ಜವರೇಗೌಡ ಎಂಬುವವರ ಜಮೀನಿನಲ್ಲಿ ಹುಣಸೆ ಹಣ್ಣನ್ನು ಕೀಳಲು ಮಂಜುನಾಥ್‌ ಹೋಗಿದ್ದರು. ಮಂಜುನಾಥ್ ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದರು. ಮರ ಹತ್ತಿ ಕೋಲಿನಿಂದ ಹಣ್ಣು ಬಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದಾರೆ.

ಮರದಿಂದ ಕೆಳಗೆ ಬಿದ್ದ ರಭಸಕ್ಕೆ ಮಂಜುನಾಥ್‌ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

Accident Case : ತುಮಕೂರಿನಲ್ಲಿ ಒಂದೇ ದಿನ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಒಬ್ಬರು ವಿದ್ಯುತ್ ಶಾಕ್‌ನಿಂದ ಮತ್ತೊಬ್ಬರು ಹುಣಸೆ ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ.

VISTARANEWS.COM


on

By

Accident Case
ಒಬ್ಬ ಹುಣಸೆ ಮರದಿಂದ ಬಿದ್ದು ಮತ್ತೊಬ್ಬ ಕರೆಂಟ್‌ನಿಂದ ಕಾರ್ಮಿಕ ಸಾವು
Koo

ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ಕಾರ್ಮಿಕರಿಬ್ಬರು ಪ್ರಾಣವನ್ನು (Accident Case) ಕಳೆದುಕೊಂಡಿದ್ದಾರೆ. ಹುಣಸೆ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಕಬ್ಬಿಗೆರೆ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಗುಡ್ಡದ ಜೋಗಿಹಳ್ಳಿ ಮೂಲದ ಮಂಜುನಾಥ್ (32) ಮೃತ ದುರ್ದೈವಿ.

ಕಬ್ಬಿಗೆರೆ ಗ್ರಾಮದಲ್ಲಿ ಜವರೇಗೌಡ ಎಂಬುವವರ ಜಮೀನಿನಲ್ಲಿ ಹುಣಸೆ ಹಣ್ಣನ್ನು ಕೀಳಲು ಮಂಜುನಾಥ್‌ ಹೋಗಿದ್ದರು. ಮಂಜುನಾಥ್ ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದರು. ಮರ ಹತ್ತಿ ಕೋಲಿನಿಂದ ಹಣ್ಣು ಬಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದಾರೆ.

ಮರದಿಂದ ಕೆಳಗೆ ಬಿದ್ದ ರಭಸಕ್ಕೆ ಮಂಜುನಾಥ್‌ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಹಾಸನದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುವ ಜಾಲ ಬಯಲಾಗಿದೆ. ಸುಮಾರು 60 ಗೋವುಗಳನ್ನು ಮಾರಾಟಗಾರರು ವಧೆ ಮಾಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

Cows
Koo

ಹಾಸನ: ಗೋವುಗಳ ಅಕ್ರಮ ಸಾಗಣೆ (Cow Smuggling), ಅಕ್ರಮವಾಗಿ ಗೋಮಾಂಸ ಮಾರಾಟ ನಿಯಂತ್ರಣಕ್ಕೆ ಎಷ್ಟೇ ಕಾನೂನು ಜಾರಿಯಲ್ಲಿದ್ದರೂ ಕೆಲವೆಡೆ ಯಥೇಚ್ಛವಾಗಿ ಗೋಮಾಂಸ ಮಾರಾಟ ದಂಧೆ ಮುಂದುವರಿದಿದೆ. ಇದಕ್ಕೆ ಉದಾಹರಣೆ ಎಂಬಂತೆ, ಹಾಸನದಲ್ಲಿ (Hassan) ಗೋಮಾಂಸದ ಅಕ್ರಮ ಮಾರಾಟದ ಜಾಲವೊಂದು ಬಯಲಾಗಿದೆ. ಮಾಂಸ ಮಾರಾಟಕ್ಕಾಗಿ ದುರುಳರು ಸುಮಾರು 60ಕ್ಕೂ ಅಧಿಕ ಗೋವುಗಳನ್ನು ವಧೆ (Cow Slaughter) ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಸುಮಾರು 60 ಗೋವುಗಳನ್ನು ಕೊಂದಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಐದು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು 60 ಗೋವುಗಳನ್ನು ಕೊಂದ ದುಷ್ಕರ್ಮಿಗಳು, ಅವುಗಳನ್ನು ನೇತು ಹಾಕಿದ್ದಾರೆ. ಪೊಲೀಸರು ಸುಮಾರು 10 ಸಾವಿರ ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Cow slaugher near bynduru

ಮೊಹಮ್ಮದ್‌ ಅಬ್ದುಲ್‌ ಹಕ್‌ ವಿರುದ್ಧ ಆರೋಪ

ಮೊಹಮ್ಮದ್‌ ಅಬ್ದುಲ್‌ ಹಕ್‌ ಎಂಬುವವರು ಗೋವುಗಳ ಮಾಂಸವನ್ನು ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಗೋವುಗಳನ್ನು ವಧೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದು, ದುಷ್ಕರ್ಮಿಗಳು ಕೂಡಲೇ ಪರಾರಿಯಾಗಿದ್ದಾರೆ. ಗೋವುಗಳನ್ನು ಸಂಹರಿಸಿ, ಅವುಗಳ ರಕ್ತವನ್ನು ಕೆರೆ ಬಿಡುತ್ತಿದ್ದರು ಎಂಬ ಕುರಿತು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಮಾಂಸವನ್ನು ವಶಪಡಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಂಧಿ ಕರುಗಳ ರಕ್ಷಣೆ

ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಂಧಿ ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಿನ ಜಾವ 4.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ ಪೊಲೀಸರು 26 ಸಿಂಧಿ ಕರುಗಳನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಒಂದೇ ದಿನ ಎರಡು ಕಡೆ ಪೊಲೀಸರು ದಾಳಿ ನಡೆಸಿದ್ದು, ಕರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪೊಲೀಸರನ್ನು ಕಾಣುತ್ತಲೇ ವಾಹನ ಚಾಲಕ ಸೇರಿ ಹಲವು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಗೋವುಗಳ ರಕ್ಷಣೆಗೆ ಕೈ ಜೋಡಿಸಲು ನಿವೃತ್ತ ಆರ್‌ಸಿ ಮಹಾಂತೇಶ ಹಿರೇಮಠ ಕರೆ

ಕೆಲ ತಿಂಗಳ ಹಿಂದಷ್ಟೇ ಎರಡು ಹಸುಗಳಿಗೆ ಗುಂಡಿಕ್ಕಿ ಕೊಂದ ಘಟನೆ ಹಾಸನದ ಬೇಲೂರು ತಾಲೂಕಿನ ಹಿರೇಹಸಡೆ ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ವಸಂತ್‌‌ಕುಮಾರ್, ಶಿವಮ್ಮ ಎಂಬುವವರಿಗೆ ಸೇರಿದ ಹಸುಗಳು ಕಾಣೆಯಾಗಿದ್ದವು. ವಸಂತ್‌ಕುಮಾರ್, ಶಿವಮ್ಮ ಸೇರಿ ಗೋವುಗಳಿಗಾಗಿ ಹುಡುಕಾಡಿದ್ದರು. ಎರಡು ದಿನಗಳ ಐಬಿಸಿ ಎಸ್ಟೇಟ್‌ನಲ್ಲಿ ಗೋವುಗಳ ಮೃತದೇಹ ಪತ್ತೆಯಾಗಿದ್ದವು. ಕಿರಾಕತರು ಎರಡು ಗಬ್ಬದ ಹಸುಗಳನ್ನು ಗುಂಡು ಹಾರಿಸಿ ಕೊಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kodagu University
ಕೊಡಗು1 second ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ4 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ16 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202422 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ28 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು28 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್2 hours ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 20242 hours ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌