Prerane | ಮೂರು ಶ್ರೇಷ್ಠ ಪ್ರಾರ್ಥನೆಗಳು - Vistara News

ಧಾರ್ಮಿಕ

Prerane | ಮೂರು ಶ್ರೇಷ್ಠ ಪ್ರಾರ್ಥನೆಗಳು

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ಇಂದು ಮೂರು ಶ್ರೇಷ್ಠ ಪ್ರಾರ್ಥನೆಗಳ ಕುರಿತು ತಿಳಿಯೋಣ.

VISTARANEWS.COM


on

prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಬ್ರಹ್ಮಣ್ಯ ಸೋಮಯಾಜಿ
ಅಸತೋಮಾ ಸದ್ಗಮಯ|
ತಮಸೋಮಾ ಜ್ಯೋತಿರ್ಗಮಯ|
ಮೃತ್ಯೋರ್ಮಾ ಅಮೃತಂ ಗಮಯ||

ಅಸತ್ಯದಿಂದ ಸತ್ಯದೆಡೆಗೆ, ಕತ್ತಲಿನಿಂದ ಬೆಳಕಿನೆಡೆಗೆ, ಮೃತ್ಯುವಿನಿಂದ ಅಮೃತತ್ವದ ಎಡೆಗೆ ನಮ್ಮನ್ನು ಕರೆದೊಯ್ಯು ಎಂದು ಭಗವಂತನಲ್ಲಿ ನಮ್ಮ ಪ್ರಾಚೀನ ಮಹರ್ಷಿಗಳ ಪ್ರಾರ್ಥನೆ. ಭಾರತೀಯ ಜೀವನದಲ್ಲಿ ಈ ಪ್ರಾರ್ಥನೆ ಜನಜನಿತ. ನಮ್ಮ ಪೂಜೆ ಪುರಸ್ಕಾರಗಳಲ್ಲಿ, ವಿಶೇಷ ಸಮಾರಂಭಗಳಲ್ಲಿ ಈ ಬಗೆಯ ಪ್ರಾರ್ಥನೆಮಾಡುವುದನ್ನು ಇಂದಿಗೂ ಅಲ್ಲಲ್ಲಿ ಕಾಣಬಹುದಾಗಿದೆ. ನಮ್ಮ ಶಾಲಾ ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ಈ ಪ್ರಾರ್ಥನೆಯನ್ನು ಮೊಳಗುವುದನ್ನು ಕಾಣುತ್ತೇವೆ.

ನಿಜ ಹೇಳಿದರೆ ಸತ್ಯ ನುಡಿದಂತೆ. ಸುಳ್ಳು ಹೇಳಬಾರದು ಎಂಬ ನೀತಿ ಎಲ್ಲರಿಗೂ ಗೊತ್ತಿರುವುದೇ. ಹಾಗೆಯೇ ಕತ್ತಲೆ ನಮಗೆ ಗೊತ್ತು. ಬೆಳಕೂ ಸಹ ಗೊತ್ತು. ಕತ್ತಲೆಯಿಂದ ಬೆಳಕಿನೆಡೆಗೆ ನಾವೇ ಸಾಗಬಹುದು. ಕಡೆಯದು ಮೃತ್ಯು. ಎಲ್ಲರಿಗೂ ಬರುವಂತಹದು. ಯಾರೂ ಚಿರಂಜೀವಿಗಳಲ್ಲ. ಎಂದಮೇಲೆ ಈ ಪ್ರಾರ್ಥನೆಯ ಔಚಿತ್ಯವಾದರೂ ಏನು? ಪ್ರಾಯಃ ಜೀವಿತಾವಧಿಯಲ್ಲೇ ಲೋಕದಲ್ಲಿ ಎಂದೆಂದಿಗೂ ಅಳಿಯದ ಕೆಲಸಗಳನ್ನು ಮಾಡಬೇಕು ಎಂದಿರಬೇಕು.

ಇವೆಲ್ಲವೂ ನಮಗೆ ಗೊತ್ತಿದೆ ಎಂದಮೇಲೆ ಭಗವಂತನಲ್ಲಿ ಪ್ರಾರ್ಥನೆ ಮಾಡುವುದೇನಿದೆ? ನಾವೇ ಮಾಡಬಹುದಾದ ಕೆಲಸಕ್ಕೆ ಅವನ ಸಹಾಯ ಏಕೆ? ಬುದ್ಧಿಗೆ ಶ್ರಮ ಕೊಡದೇ ಇಷ್ಟನ್ನು ಆಲೋಚನೆ ಮಾಡಬಹುದು. ಆದರೆ ಪ್ರಾರ್ಥನೆ ಮಾಡಿದವರು ಈ ದೇಶದ ಮಹರ್ಷಿಗಳು. ಅಂತರಂಗದ ಸತ್ಯವನ್ನು, ಪರಮಾತ್ಮನನ್ನು ತಮ್ಮಲ್ಲಿ ಕಂಡು ಪ್ರಾರ್ಥನೆ ಮಾಡಿದ್ದಾರೆ. ವ್ಯರ್ಥವಾದ ಮಾತುಗಳು ಅವರಿಂದ ಬಾರವು. ಏನೀ ಪ್ರಾರ್ಥನೆಯ ಔಚಿತ್ಯ ಎಂದು ವಿಚಾರಮಾಡಬೇಕಿದೆ.

ಅಸತೋಮಾ ಸದ್ಗಮಯ
ಶಂಕರಭಗವತ್ಪಾದರು ಸತ್ಯವನ್ನು ಮೂರು ಬಗೆಯಲ್ಲಿ ವಿವರಿಸಿದ್ದಾರೆ- ವ್ಯಾವಹಾರಿಕ ಸತ್ಯ,ಪ್ರಾತಿಭಾಸಿಕ ಸತ್ಯ,ಮತ್ತು ಪಾರಮಾರ್ಥಿಕ ಸತ್ಯ ಎಂಬುದಾಗಿ. ನಾವು ಮೇಲೆ ಹೇಳಿದಂತೆ ನಿಜ ಹೇಳುವುದು ಇತ್ಯಾದಿ ವ್ಯಾವಹಾರಿಕ ಸತ್ಯವಾಗುತ್ತದೆ. ಪ್ರಾತಿಭಾಸಿಕ ಸತ್ಯವೆಂದರೆ ಕನಸಿನಲ್ಲಿ ಕಂಡ ಅನುಭವಗಳು, ನಾವು ನಮ್ಮ ಭ್ರಮೆಯಿಂದ ಸತ್ಯವೆಂದು ತಿಳಿದುಕೊಂಡ ಸತ್ಯಗಳು-ಉದಾಹರಣೆಗೆ ಹಗ್ಗವನ್ನು ಹಾವೆಂದು ಭಾವಿಸಿದಂತೆ. ಆದರೆ ಎಂದೆಂದಿಗೂ ಬದಲಾಗದ, ತಾನೇ ತಾನಾಗಿ ಬೆಳಗುತ್ತಿರುವ ಮತ್ತು ಎಲ್ಲವನ್ನೂ ತನ್ನ ಇರುವಿಕೆಯಿಂದ ಬೆಳಗುವಂತೆ ಮಾಡುವ, ನಿತ್ಯ ಶಾಶ್ವತವಾದ, ಜಗತ್ತಿನ ಇರುವಿಕೆಗೇ ಕಾರಣವಾದ ಪರಮಾತ್ಮ ಸತ್ಯವೇ ಪಾರಮಾರ್ಥಿಕ ಸತ್ಯ.

ನಚಿಕೇತನಿಗೆ ಯಮನು ಉಪದೇಶಿಸುವಂತೆ ನ ತತ್ರ ಸೂರ್ಯೋ ಭಾತಿ ನ ಚಂದ್ರತಾರಕಂ, ನೇಮಾ ವಿದ್ಯುತೋ ಭಾಂತಿ ಕುತೋಯಮಗ್ನಿ: ತಮೇವ ಭಾನ್ತಮ್ ಅನುಭಾತಿ ಸರ್ವಂ ತಸ್ಯ ಭಾಸಾ ಸರ್ವಮಿದಂ ವಿಭಾತಿ- ಎಂಬಂತೆ ಸೂರ್ಯಚಂದ್ರಾಗ್ನಿಗಳು ವಿದ್ಯುತ್ತು ಎಲ್ಲವೂ ಯಾವ ಬೆಳಕನ್ನು ತಮ್ಮಬೆಳಗುವಿಕೆಗಾಗಿ ಅವಲಂಬಿಸಿವೆಯೋ ಅಂತಹ ಪರಮಾತ್ಮಜ್ಯೋತಿಯನ್ನೇ ಇಲ್ಲಿ ಸತ್ಯ ಎಂದಿರುವುದು. ಅದು ಎಂದೆಂದಿಗೂ ಇರುವಂತಹದ್ದು. ಇವತ್ತಿದ್ದು ನಾಳೆ ಇಲ್ಲವಾಗುವುದಲ್ಲ.

ಅಂತಹ ಸತ್ಯವು ನಮ್ಮ ಅರಿವಿಗೆ ಬರುವಂತೆ ಸತ್ಯಸ್ವರೂಪನಾದ ಅವನೇ ಮಾಡಬೇಕು. ನಮ್ಮ ಕೈಯಲ್ಲಿ ಯಾವುದನ್ನು ಮಾಡಲು ಸಾಧ್ಯವಾಗದೋ ಅಥವಾ ಅತ್ಯಂತ ಕಷ್ಟಸಾಧ್ಯವೋ ಅದನ್ನು ತಾನೇ ಭಗವಂತನನ್ನು ಕೇಳಬೇಕು? ಆ ಪರಮ ಸತ್ಯದ ನೇರದಲ್ಲಿ ಅದಲ್ಲದೇ ಉಳಿದುದೆಲ್ಲವೂ ಅಸತ್ಯವೇ. ಎಲ್ಲವೂ ಆ ಪರಮಸತ್ಯವನ್ನು ಮರೆ ಮಾಡುವಂತಹದ್ದೇ. ಅಂತಹ ಅಸತ್ಯಗಳಿಂದ ನಮ್ಮನ್ನು ಪರಮ ಸತ್ಯದೆಡೆಗೆ ಕೊಂಡೊಯ್ಯು ಎಂಬ ಪ್ರಾರ್ಥನೆ ಜೀವಲೋಕವೆಲ್ಲವೂ ಅನವರತವೂ ಮಾಡಬೇಕಾದ ಪ್ರಾರ್ಥನೆಯೇ ಆಗುತ್ತದೆ.

ತಮಸೋಮಾ ಜ್ಯೋತಿರ್ಗಮಯ
ಕತ್ತಲೆಯಿಂದ ಬೆಳಕಿನೆಡೆಗೆ. ಭಾರತೀಯರಿಗೆ ಕತ್ತಲೆಯೇ ಬೇಕಿಲ್ಲವೇ? ಹೊರಗಿನ ಕತ್ತಲೆ ನಾವು ವಿಶ್ರಾಂತಿ ತೆಗೆದುಕೊಳ್ಳಲು ಅವಶ್ಯವಾಗಿ ಬೇಕು. ಅಲ್ಲದೇ ತಾನಾಗಿ ಕತ್ತಲಾಗುತ್ತದೆ, ಸೂರ್ಯ ಉದಿಸಿದ ನಂತರ ಬೆಳಕೂ ಆಗುತ್ತದೆ. ಮತ್ತೆ ಈ ಪ್ರಾರ್ಥನೆಯ ಔಚಿತ್ಯವಾದರೂ ಏನು? ಎಂದರೆ ಆ ಪಾರಮಾರ್ಥಿಕ ಸತ್ಯದ ವಿಷಯದಲ್ಲಿ ನಮ್ಮ ಬುದ್ಧಿಗೆ ಕತ್ತಲು ಕವಿದಿದೆ. ನಾವು ನಮ್ಮ ವ್ಯಾವಹಾರಿಕ, ಇಂದ್ರಿಯಜೀವನದಲ್ಲೇ ಜನ್ಮ ಜನ್ಮಾಂತರಗಳಿಂದ ಕಾಲ ಕಳೆಯುತ್ತಾ ನಮ್ಮೊಳಗೇ ಬೆಳಗುತ್ತಿರುವ ಬೆಳಕನ್ನು ಕಾಣಲಾರದವರಾಗಿದ್ದೇವೆ.

ಜ್ಞಾನಿಗಳು, ಸಂತರು ಹೇಳಿದರೂ ಅಂತಹ ಬೆಳಕೊಂದು ಉಂಟು ಎಂದು ನಮಗೆ ನಂಬಿಕೆ ಬಾರದಷ್ಟು ವಿಸ್ಮೃತರಾಗಿದ್ದೇವೆ. ಆ ಅಂತರ್ಜ್ಯೋತಿಯನ್ನು ಸಂಪೂರ್ಣವಾಗಿ ಮರೆತಿರುವುದೇ ತಮಸ್ಸು. ಅದನ್ನು ಕಳಚಿ ನಮ್ಮನ್ನು ಆ ಒಳ ಬೆಳಕಿನ ಕಡೆಗೆ ನಡೆಸು ಎಂದು ಬೆಳಕನ್ನೇ ಪ್ರಾರ್ಥಿಸಿದ್ದಾರೆ. ಆ ಬೆಳಕು ತಾನೇ ತಾನಾಗಿ ಬೆಳಗುತ್ತಿದೆ. ಅದರ ಭಿಕ್ಷೆಯಿಂದಲೇ ನಮ್ಮ ಲೌಕಿಕ ಜೀವನಗಳೂ ನಡೆಯುತ್ತಿವೆ. ಆದರೆ ನಮ್ಮ ಮನಸ್ಸುಗಳಲ್ಲಿ ಅದನ್ನು ಅರಿಯದ ಕತ್ತಲು. ಈ ಕತ್ತಲೆಯಿಂದಲೇ ನಮ್ಮನ್ನು ಆ ಬೆಳಕಿನೆಡೆಗೆ ಕರೆದೊಯ್ಯಬೇಕಿರುವುದು.

ಅದಕ್ಕಾಗಿಯೇ ಋಷಿಗಳು ಭಗವಂತನಲ್ಲಿ ಪ್ರಾರ್ಥಿಸುತ್ತಿರುವುದು. ಅದು ಹೊರಗಿನ ಕತ್ತಲೆಯಿಂದ ಹೊರಗಿನ ಬೆಳಕಿನೆಡೆ ಅಲ್ಲ. ನಮ್ಮಬುದ್ಧಿಯಲ್ಲಿನ ಕತ್ತಲೆಯಿಂದ ಒಳಬೆಳಕಿನೆಡೆಗೆ. ನಮ್ಮ ಪ್ರಾರ್ಥನೆ ಎಷ್ಟು ಬಲವತ್ತರವೋ ಅಷ್ಟು ಬೇಗ ಅವನು ನಮ್ಮಕತ್ತಲೆಯನ್ನು ಹೋಗಲಾಡಿಸುತ್ತಾನೆ. ಈ ಭಾವವಿಲ್ಲದೇ ಶುಷ್ಕವಾಗಿ ಮಾಡುವ ಪ್ರಾರ್ಥನೆಯಿಂದ ಪ್ರಯೋಜನವಿರದು.

ಮೃತ್ಯೋರ್ಮಾ ಅಮೃತಂ ಗಮಯ
ಶರೀರವನ್ನು ತಳೆದು ಬಂದಮೇಲೆ ಇದಕ್ಕೆ ಮೃತ್ಯು ನಿಶ್ಚಿತ. ಜಾತಸ್ಯ ಮರಣಂ ಧ್ರುವಂ. ಎಂದಮೇಲೆ ಅಮರತ್ವಎಲ್ಲಿಂದ ಬರಬೇಕು? ನಾವು ಸಾಯದಂತೆ ವರವನ್ನು ಬೇಡುತ್ತಿದ್ದೆವೆಯೇ? ಅಂತಹ ಬೇಡಿಕೆ ಎಷ್ಟು ಅರ್ಥಪೂರ್ಣ? ಅದನ್ನುಭಗವಂತನು ಹೇಗೆ ಈಡೇರಿಸಿಯಾನು? ಎಲ್ಲವೂ ಪ್ರಶ್ನೆಯಾಗುತ್ತದೆ. ಇಲ್ಲಿ ಅಮರವಾದುದು ನಮ್ಮೊಳಗೇ ಬೆಳಗುತ್ತಿರುವ ಚೈತನ್ಯ. ಅದೇ ನಮ್ಮನ್ನು ಜೀವಂತವಾಗಿಟ್ಟಿರುವುದು. ಅದು ನಮ್ಮ ಆನಂದದ, ನೆಮ್ಮದಿಯ ನಿಜವಾದ ತಾಣ. ಅದರೊಡನೆ ನಮ್ಮ ಮನಸ್ಸು ನಿರಂತರವಾಗಿ ಸಂಪರ್ಕವನ್ನಿಟ್ಟುಕೊಂಡರೆ ಅದೇ ಅಮರ ಜೀವನ.

ನದಿಯೊಂದು ತಾನು ಹರಿಯುತ್ತಿರುವ ಎಲ್ಲೆಕಟ್ಟುಗಳೊಂದಿಗೆ ಸಮುದ್ರವನ್ನು ಸೇರಿದಾಗಲೇ ಆ ನದಿಯ ಜೀವನ ಅಮರ. ಅಲ್ಲಿ ಅದನ್ನು ಗಂಗೆ,ಯಮುನೆ, ಗೋದಾವರಿ,ಕಾವೇರಿ ಎಂದು ಗುರುತಿಸಲಾಗದು. ಅದು ಮಹಾ ಸಮುದ್ರವೇ ಆಗಿಬಿಡುತ್ತೆ. ಹಾಗೆ ಈ ಜೀವನದಿಯೂ ತನ್ನ ಮೂಲವಾದ ಆ ಮಹಾ ಚೈತನ್ಯದ ಆಶಯದಂತೆ ಅದರ ನೆನಪನ್ನು ಒಂದಿನಿತೂ ಬಿಡದೇ ಬಾಳುತ್ತಾ ಕಡೆಯಲ್ಲಿ ನಾಮ-ರೂಪಗಳಿಂದ ಆರೋಪಿತವಾದ ಶರೀರದ ಎಲ್ಲೆಕಟ್ಟುಗಳನ್ನು ಮೀರಿ ಪರಮಾತ್ಮ ಸಮುದ್ರದಲ್ಲಿ ಸೇರುವಂತಾಗುವುದು ಇದರ ಸಹಜವಾದ ನಡೆ ಎಂಬುದನ್ನು ಹಾಗೆ ಅಮರಜೀವನವನ್ನು ಮಾಡಿದ ಮಹರ್ಷಿಗಳ ಆನುಭವಿಕ ಸತ್ಯ. ಎಂದೇ ನಮ್ಮ ಜೀವಿತಕಾಲದಲ್ಲಿ ನಮ್ಮ ಜೀವನದ ಸ್ರೋತಸ್ಸಾದ, ಎಂದೆಂದಿಗೂ ಇರುವ ಆ ಅಮರವಾದ ಬೆಳಕಿನ ಆಶಯದಂತೆ ಬದುಕಿ ಕಡೆಯಲ್ಲಿ ಆ ಅಮೃತನಾದ ದೇವನಲ್ಲಿ ಒಂದಾಗುವಂತೆ ಮಾಡೆಂದು ಭಗವಂತನಲ್ಲಿ ಪ್ರಾರ್ಥನೆ-ಮೃತ್ಯೋರ್ಮಾ ಅಮೃತಂ ಗಮಯ.

ಈಗ ನಾವು ಆ ಸ್ರೋತಸ್ಸನ್ನು ಮರೆತು ಕೇವಲ ಮೃತ್ಯುಮುಖರಾಗಿ ಜೀವನ ನಡೆಸುತ್ತಿದ್ದೇವೆ. ಹಾಗಿಲ್ಲದೇ ಮೃತವಾಗುವ ಈ ಶರೀರದಿಂದ ಅಮೃತವಾದ ವಸ್ತುವನ್ನೇ ಕಾಣುತ್ತಾ ಕಡೆಯಲ್ಲಿ ಆ ಅಮೃತವೇ ಆಗಿಬಿಡುವಂತೆ ನಮ್ಮನ್ನು ಅನುಗ್ರಹಿಸು ಎಂಬ ಪ್ರಾರ್ಥನೆ. ನದಿಗಳು ಸಮುದ್ರವಾದಂತೆ. ಶ್ರೀರಂಗಮಹಾಗುರುಗಳು ಸತ್ಯ ಎನ್ನುವ ಪದಕ್ಕೆ “ಸತಿಯಂ” ಎಂಬ ಉಪನಿಷತ್ತಿನ ವ್ಯಾಖ್ಯೆಯನ್ನು ನೆನಪಿಸಿದ್ದರು. ಅದರಂತೆ ಅಮರವಾದದ್ದಕ್ಕೂ ಮರವಾದದ್ದಕ್ಕೂ ಸೇತುವೆಯನ್ನು ಹಾಕುವುದು ಸತ್ಯವೆಂದಾಗುತ್ತದೆ. ನಮ್ಮ ಬಾಳು ಮರವಾದ ಈ ದೇಹದಿಂದ ಅಮರವಾದ ಭಗವಂತನನ್ನು ಕಂಡು ಅವನಲ್ಲಿ ಒಂದಾಗುವ ಅಪೇಕ್ಷೆಯಿಂದ ಬಂದ ಪ್ರಾರ್ಥನೆ ಇದು.

ಇಂದು ಮೃತ್ಯುಭಯ, ಜೀವನದ ಅನಿಶ್ಚಿತತೆ ಇತ್ಯಾದಿ ಆತಂಕಗಳಿಂದ ನಾವೆಲ್ಲಾ ಭಯಗ್ರಸ್ತರಾಗಿದ್ದೇವೆ. ಈ ಶ್ರೇಷ್ಠ ಪ್ರಾರ್ಥನೆಗಳು ಇಂದು ಅತ್ಯಂತ ಪ್ರಸ್ತುತವಾಗಿವೆ. ನಮ್ಮ ಆರೋಗ್ಯವನ್ನು ರಕ್ಷಿಸಿಕೊಂಡು ಬದುಕುವ ಸರ್ವ ಪುರುಷಪ್ರಯತ್ನವನ್ನೂ ಮೆರೆಯೋಣ. ಉಳಿದುದನ್ನುಆ ಕರುಣಾಮಯನಿಗೆ ಬಿಡೋಣ. ನಮ್ಮ ಮನಸ್ಸುಗಳು ಎಂದೆಂದಿಗೂ ಬೆಳಗುವ ಸತ್ಯದಕಡೆಗೆ, ಬುದ್ಧಿಯು ಸದಾ ಬೆಳಗುವ ಬೆಳಕಿನೆಡೆಗೆ ಒಯ್ಯಲ್ಪಟ್ಟರೆ, ನಾವು ಈ ಮರವಾದ ಬದುಕನ್ನು ಅಮರವಾದ ಜೀವನದ ಚೈತನ್ಯದ ಜೊತೆಗೆ ಜೋಡಿಸಿಕೊಂಡೆವಾದರೆ ಎಲ್ಲಾ ಬಗೆಯ ಭಯ, ಆತಂಕಗಳಿಂದ ಮುಕ್ತರಾಗಿ ಜೀವನ ಮಾಡಬಹುದಾಗಿದೆ.

ಕಡೆಯಲ್ಲಿ ಶ್ರೀರಂಗಮಹಾಗುರುಗಳ ಈ ಮಾತು ಇಲ್ಲಿ ಸ್ಮರಣೀಯ-“ಜ್ಞಾನವನ್ನು ಬೆಳೆಸಲು,ಸತ್ಯವನ್ನು ಮೆರೆಸಲು ಎಷ್ಟು ಸಮಾಜಗಳು ದುಡಿದಿವೆ! ಎಷ್ಟು ತಪಸ್ಯೆಗಳು ನಡೆದಿವೆ! ವೇದ-ಇತಿಹಾಸ-ಪುರಾಣಗಳನ್ನು ನೋಡಿದರೆ ಒಂದೊಂದು ವಿಷಯ ತರಲು ಲಕ್ಷಾಂತರ ವರ್ಷಗಳ ತಪಸ್ಯೆ ನಡೆದಿದೆ ಎಂಬುದು ತಿಳಿಯುತ್ತದೆ

ಹೀಗೆ ಕೇವಲ ಪುರುಷಪ್ರಯತ್ನದಿಂದ ಸಾಧ್ಯವಾಗದ, ಅವನ ಅನುಗ್ರಹದಿಂದಲೇ ಆಗಬೇಕಾದದ್ದನ್ನೇ ಅವನಲ್ಲಿ ಪ್ರಾರ್ಥಿಸಿದ್ದಾರೆ. ಮಹರ್ಷಿಗಳು ತಾವು ಅಸತ್ಯದಿಂದ ಸತ್ಯದೆಡೆಗೆ, ತಮಸ್ಸಿನಿಂದ ಆಜ್ಯೋತಿರ್ಧಾಮದೆಡೆಗೆ, ಮೃತ್ಯುವಿನಿಂದ ಅಮೃತತ್ವದ ಎಡೆಗೆ ಸಾಗಿ ಜೀವನದ ಸಾರ್ಥಕತೆಯನ್ನು ಪಡೆದವರಾಗಿದ್ದರೂ ಜೀವಲೋಕವೆಲ್ಲವೂ ಅಂತಹ ನೆಮ್ಮದಿಯನ್ನು ಹೊಂದುವಂತಾಗಲಿ ಎಂಬ ಕರುಣೆಯಿಂದ ಈ ಪ್ರಾರ್ಥನೆಯನ್ನು ನಮ್ಮೆಲ್ಲರಿಗಾಗಿ ಮೊಳಗಿದ್ದಾರೆ. ಅವರ ಮನಸ್ಸಿನಂತೆ ನಮ್ಮ ಜೀವನದ ಯಶಸ್ಸಿಗಾಗಿ ಅನವರತವೂ ಈ ಪ್ರಾರ್ಥನೆಯನ್ನು ಮಾಡೋಣ.

ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ | Prerane | ಸ್ಫೂರ್ತಿಯ ಮಾತುಗಳಿಂದ ಕಾರ್ಯೋತ್ಸಾಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading
Advertisement
Kangana Ranaut
ದೇಶ1 hour ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ1 hour ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Lorry Accident
ಕರ್ನಾಟಕ1 hour ago

Lorry Accident: ಕಾರ್ಕಳದಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

RCB vs CSK
ಕ್ರೀಡೆ2 hours ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ2 hours ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ2 hours ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ2 hours ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ2 hours ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 20242 hours ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ2 hours ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌