Emergency Movie | ಸಂಸತ್‌ನಲ್ಲಿ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೋರಿದ ಕಂಗನಾ ರಣಾವತ್‌, ಸಮ್ಮತಿಸುವುದೇ ಸರ್ಕಾರ? - Vistara News

ದೇಶ

Emergency Movie | ಸಂಸತ್‌ನಲ್ಲಿ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೋರಿದ ಕಂಗನಾ ರಣಾವತ್‌, ಸಮ್ಮತಿಸುವುದೇ ಸರ್ಕಾರ?

ಇಂದಿರಾ ಗಾಂಧಿ ಅವರು 1975ರಲ್ಲಿ ಹೇರಿದ ತುರ್ತು ಪರಿಸ್ಥಿತಿ ಕುರಿತ ಸಿನಿಮಾಗೆ (Emergency Movie) ಕಂಗನಾ ರಣಾವತ್‌ ಅವರೇ ನಿರ್ದೇಶಕಿ ಹಾಗೂ ನಿರ್ಮಾಪಕಿಯೂ ಆಗಿದ್ದಾರೆ.

VISTARANEWS.COM


on

Emergency Movie Shooting In Parliament
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್‌.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ನಿರ್ದೇಶನದ ಎಮರ್ಜೆನ್ಸಿ (Emergency Movie) ಚಿತ್ರದ ಚಿತ್ರೀಕರಣವನ್ನು ಸಂಸತ್‌ ಆವರಣದಲ್ಲಿ ಮಾಡಲು ಅವಕಾಶ ನೀಡಬೇಕು ಎಂದು ಕಂಗನಾ ರಣಾವತ್‌ ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸುವ ಸಾಧ್ಯತೆ ಕಡಿಮೆ ಇದೆ ಎಂದೇ ಹೇಳಲಾಗುತ್ತಿದೆ.

1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ಕುರಿತ ಕಥಾಹಂದರವಿರುವ ಸಿನಿಮಾದಲ್ಲಿ ಸಂಸತ್‌ನಲ್ಲಿ ನಡೆಯುವ ಘಟನೆಗಳ ಬಗ್ಗೆ ಚಿತ್ರೀಕರಣದ ಅಗತ್ಯವಿದೆ. ಹಾಗಾಗಿ, ಸೆಟ್‌ ಬದಲು ಸಂಸತ್ತಿನಲ್ಲಿಯೇ ಚಿತ್ರೀಕರಿಸಲು ಕಂಗನಾ ತೀರ್ಮಾನಿಸಿದ್ದಾರೆ. ಇದಕ್ಕಾಗಿ ಲೋಕಸಭೆ ಸಚಿವಾಲಯಕ್ಕೆ ನಟಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಭದ್ರತೆ ದೃಷ್ಟಿಯಿಂದಾಗಿ ಮನವಿ ತಿರಸ್ಕರಿಸುವ ಸಾಧ್ಯತೆ ಇದೆ.

ಎಮರ್ಜೆನ್ಸಿ ಚಿತ್ರಕ್ಕೆ ಕಂಗನಾ ಅವರೇ ನಿರ್ಮಾಪಕಿಯೂ ಆಗಿದ್ದಾರೆ. ಅಲ್ಲದೆ, ಇಂದಿರಾ ಗಾಂಧಿ ಪಾತ್ರ ನಿರ್ವಹಿಸುತ್ತಿದ್ದಾರೆ. ಕಳೆದ ಜೂನ್‌ನಲ್ಲಿಯೇ ಸಿನಿಮಾದ ಶೂಟಿಂಗ್‌ ಆರಂಭವಾಗಿದ್ದು, ಸಂಸತ್‌ ಘಟನೆಗಳ ಚಿತ್ರೀಕರಣ ಬಾಕಿ ಇದೆ ಎನ್ನಲಾಗಿದೆ.

ಇದನ್ನೂ ಓದಿ | Pathaan Controversy | ಕೇಸರಿ ಬಣ್ಣಕ್ಕೆ ಬೂಟುಗಾಲಿಟ್ಟ ಕಂಗನಾ ರಣಾವತ್: ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ನಟಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

ಖ್ಯಾತ ವೈದ್ಯರು ಪತ್ತೆ ಹಚ್ಚಲಾಗದ ಕಾಯಿಲೆಯನ್ನು ಮನೆ ಕೆಲಸದವಳು ಸುಲಭವಾಗಿ ಗುರುತಿಸಿದ್ದಾಳೆ ಎಂದು ಲಿವರ್ ಡಾಕ್ ಎಂದೇ ಜನಪ್ರಿಯವಾಗಿರುವ ಕೇರಳದ ಹೆಪಟಾಲಜಿಸ್ಟ್ ಸಿರಿಯಾಕ್ ಡಾ. ಅಬ್ಬಿ ಫಿಲಿಪ್ಸ್ ಎಕ್ಸ್ ನಲ್ಲಿ ಹೇಳಿಕೊಂಡಿದ್ದು ಭಾರಿ ವೈರಲ್ (Viral News) ಆಗಿದೆ. ಆ ರೋಗ ಯಾವುದು, ಅದರ ಲಕ್ಷಣಗಳು ಏನು ಗೊತ್ತೇ? ಇಲ್ಲಿದೆ ವರದಿ.

VISTARANEWS.COM


on

By

Viral news
Koo

ತಿರುವನಂತಪುರಂ: ಕುಟುಂಬದ ಸದಸ್ಯರಿಗೆ ಇದ್ದ ರೋಗವನ್ನು ಗುರುತಿಸಲು ಮನೆಯ ಹಿರಿಯರು ಹೇಗೆ ಸಹಾಯ ಮಾಡಿದ್ದಾರೆ ಎಂಬುದನ್ನು ಕೇರಳದ (kerala) ಹೆಪಟಾಲಜಿಸ್ಟ್ (hepatologist) ಒಬ್ಬರು ಎಕ್ಸ್ ನಲ್ಲಿ (x) ಹಂಚಿಕೊಂಡಿದ್ದು, ಭಾರಿ ವೈರಲ್ (Viral News) ಆಗಿದೆ. ಈ ರೋಗ ನಿರ್ಣಯ (identify a disease) ಮಾಡಲು ಸ್ವತಃ ವೈದ್ಯರು ಹೆಣಗಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಲಿವರ್ ಡಾಕ್ (Liver Doc) ಎಂದು ಜನಪ್ರಿಯವಾಗಿರುವ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ವಯಸ್ಕರೊಬ್ಬರಿಗೆ ಬಿಟ್ಟು ಬಿಟ್ಟು ಬರುತ್ತಿದ್ದ ಜ್ವರ, ಶೀತ, ಆಯಾಸ, ಸಂಧಿವಾತದಂತಹ ಲಕ್ಷಣಗಳನ್ನು ಕಂಡು ಎಲ್ಲ ಪರೀಕ್ಷೆಗಳನ್ನು ನಡೆಸಿದರು. ಆದರೆ ಎಲ್ಲವೂ ನಕಾರಾತ್ಮಕ ಫಲಿತಾಂಶ ನೀಡಿತ್ತು. ವೈರಲ್ ಹೆಪಟೈಟಿಸ್‌, ಕೋವಿಡ್ -19, ಇನ್ ಫ್ಲೂ ಯೆನ್ಸ್, ಡೆಂಗ್ಯೂ, ಎಬ್‌ಸ್ಟೈನ್ ಬಾರ್ ವೈರಸ್‌ ಎಲ್ಲವನ್ನೂ ಪರೀಕ್ಷಿಸಿದರು. ಆದರೆ ಎಲ್ಲವೂ ನೆಗೆಟಿವ್ ವರದಿ ನೀಡಿತ್ತು. ಇದರಿಂದ ಸ್ವತಃ ವೈದ್ಯರಿಗೆ ಹತಾಶೆ ಉಂಟಾಯಿತು. ಎಲ್ಲ ವೈದ್ಯಕೀಯ ಪುಸ್ತಕಗಳನ್ನು ನೋಡಿದರು. ಯಾವುದೇ ಪ್ರಯೋಜನವಾಗಲಿಲ್ಲ.

ಒಂದು ದಿನ ಮನೆಯ ಕೆಲಸದವಳು ಬಂದು ತಮ್ಮ ಮೊಮ್ಮಕ್ಕಳಲ್ಲಿ ಈ ದದ್ದು ಕಾಣಿಸಿಕೊಂಡಿದೆ. ಇದನ್ನು ಸ್ಥಳೀಯ ಭಾಷೆಯಲ್ಲಿ ‘ಅಂಜಂಪಣಿ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದಳು. ಬಳಿಕ ಪಾರ್ವೊವೈರಸ್ ಬಿ 19 ಗಾಗಿ ಪರಿಶೀಲಿಸಿದಾಗ ಅದು ಪಾಸಿಟಿವ್ ಬಂದಿದೆ ಎಂದು ಡಾ. ಫಿಲಿಪ್ಸ್ ಹೇಳಿದ್ದಾರೆ.

17 ವರ್ಷಗಳ ವೈದ್ಯಕೀಯ ವೃತ್ತಿಯಲ್ಲಿ ವಯಸ್ಸಾದ ಸೇವಕಿಯೊಬ್ಬರು 10 ಸೆಕೆಂಡುಗಳಲ್ಲಿ ರೋಗವನ್ನು ಗುರುತಿಸಿದ್ದು ಇದೇ ಮೊದಲು ಎಂದು ಅವರು ತಿಳಿಸಿದ್ದಾರೆ.

ಇದನ್ನು ಐದನೇ ರೋಗ ಎಂದು ಕರೆಯಲಾಗುತ್ತದೆ. ಇದು ಪಾರ್ವೊವೈರಸ್ B19 ನಿಂದ ಉಂಟಾಗುತ್ತದೆ. ಇದು ವಯಸ್ಕರಿಗಿಂತ ಮಕ್ಕಳಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಯಾರಾದರೂ ಕೆಮ್ಮಿದಾಗ ಅಥವಾ ಸೀನಿದಾಗ ಮೂಗು ಮತ್ತು ಬಾಯಿಯಲ್ಲಿರುವ ದ್ರವಗಳ ಮೂಲಕ ರೋಗ ಹರಡುತ್ತದೆ. ಕೆನ್ನೆಗಳ ಮೇಲೆ ಕೆಂಪು ದದ್ದುಗಳನ್ನು ಹೊಂದಿರುತ್ತದೆ. ದೇಹಕ್ಕೂ ಹರಡುತ್ತದೆ ಮತ್ತು ಇತರ ರೋಗಲಕ್ಷಣಗಳನ್ನು ಉಂಟುಮಾಡಬಹುದು.


ವೈರಲ್ ಆದ ಟ್ವೀಟ್

ಡಾ. ಫಿಲಿಪ್ ಅವರ ಈ ಟ್ವಿಟ್ ಭಾರೀ ವೈರಲ್ ಆಗಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಇದು 4.18 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಕೂಡ ಮಾಡಿದ್ದಾರೆ.

ಒಬ್ಬರು ಕೆಲವೊಮ್ಮೆ ಪ್ರಯೋಗಿಕ ಜ್ಞಾನವನ್ನು ಸಾಂಪ್ರದಾಯಿಕ ಜ್ಞಾನ ಸೋಲಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು ಕಾಮೆಂಟ್ ನಲ್ಲಿ ಕೆಲವು ಸಂದರ್ಭದಲ್ಲಿ ವೈದ್ಯರಿಗಿಂತ ಹಿರಿಯರ ನಂಬಿಕೆಯೇ ನಿಜವಾಗುತ್ತದೆ ಎಂದು ತಿಳಿಸಿದ್ದಾರೆ.

Continue Reading

ದೇಶ

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Eid Prayers: ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Eid Prayers
Koo

ಶ್ರೀನಗರ: ದೇಶಾದ್ಯಂತ ಮುಸ್ಲಿಮರು ತ್ಯಾಗ, ಬಲಿದಾನದ ಸಂದೇಶ ಸಾರುವ ಬಕ್ರೀದ್‌ (Bakrid 2024) ಸಡಗರ-ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಸೀದಿಗೆ ತೆರಳಿ, ನಮಾಜ್‌ ಮಾಡುವ ಮೂಲಕ, ತಮ್ಮ ಕೈಲಾದಷ್ಟು ದಾನ-ಧರ್ಮವನ್ನೂ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದಾರೆ. ಆದರೆ, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಜಾಮಾ ಮಸೀದಿಯಲ್ಲಿ (Jama Masjid) ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರು ನಮಾಜ್‌ (Eid Prayers) ಮಾಡಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ ಎಂದು ತಿಳಿದುಬಂದಿದೆ.

“ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷವೂ ಮುಸ್ಲಿಮರು ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ. ಸೋಮವಾರ (ಜೂನ್‌ 17) ಬೆಳಗ್ಗೆ ಜಾಮಾ ಮಸೀದಿಯಲ್ಲಿ ನಮಾಜ್‌ ಮಾಡಲಾಯಿತು. ಇದಾದ ನಂತರ 9 ಗಂಟೆಗೆ ಈದ್‌ ಪ್ರಾರ್ಥನೆ ಕಾರ್ಯಕ್ರಮ ಇತ್ತು. ಆದರೆ, ಭದ್ರತಾ ಸಿಬ್ಬಂದಿಯು ಮಸೀದಿಯ ಗೇಟ್‌ಗೆ ಬೀಗ ಹಾಕಿ, 9 ಗಂಟೆಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂಬುದಾಗಿ ಹೇಳಿದರು” ಎಂದು ಮಸೀದಿಯಲ್ಲಿ ನಮಾಜ್‌ ಪ್ರಕ್ರಿಯೆ ನಡೆಸಿಕೊಡಬೇಕಿದ್ದ ಅಂಜುಮಾನ್‌ ಔಕಾಫ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಬಕ್ರೀದ್‌ ಆಚರಣೆ

“ಜಾಮಾ ಮಸೀದಿಯಲ್ಲಿ ನಿರಂತರವಾಗಿ ನಮಾಜ್‌ ಮಾಡಲು ನಿರ್ಬಂಧ ವಿಧಿಸಲಾಗುತ್ತಿದೆ. ಬಕ್ರೀದ್‌ನಂತಹ ಸಂದರ್ಭಗಳಲ್ಲಿ ಪ್ರಾರ್ಥನೆ ಸಲ್ಲಿಸುವುದು ಧಾರ್ಮಿಕ ಆಚರಣೆ, ಅಧ್ಯಾತ್ಮಿಕ ಪ್ರತಿಬಿಂಬ ಹಾಗೂ ಸಾಮರಸ್ಯದ ಸಂಕೇತವಾಗಿದೆ. ಹಾಗಾಗಿ, ನಿರಂತರವಾಗಿ ಪ್ರಾರ್ಥನೆಗೆ ನಿರ್ಬಂಧವನ್ನು ವಿಧಿಸುವುದು ಜಮ್ಮು-ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿಲ್ಲ ಎಂಬುದಕ್ಕೆ ಕೈಗನ್ನಡಿಯಾಗಿದೆ. ಪದೇಪದೆ ನಿರ್ಬಂಧಗಳನ್ನು ಹೇರುವುದು, ಜನರ ಆಚರಣೆಗಳಿಗೆ ಅಡ್ಡಿ ಮಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪ್ರತಿ ವರ್ಷವೂ ನಮಾಜ್‌ಗೆ ತಡೆ ನೀಡುತ್ತಿರುವುದಕ್ಕೆ ಮುಸ್ಲಿಮರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Continue Reading

ಉದ್ಯೋಗ

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ಸಿಎಂಡಿ ಹುದ್ದೆಗೆ ಸಂದರ್ಶನ ನೀಡಿದ (HPCL Job Interview) ಎಲ್ಲ ಎಂಟು ಅಭ್ಯರ್ಥಿಗಳನ್ನು ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (ಪಿಇಎಸ್‌ಬಿ) ತಿರಸ್ಕರಿಸಿದೆ. ಜೂನ್ 14ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಲಾಗಿತ್ತು.

VISTARANEWS.COM


on

By

HPCL Job Interview
Koo

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (HPCL) ಸಿಎಂಡಿ (CMD) ಹುದ್ದೆಗೆ ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (PESB) ಸಂದರ್ಶನ (HPCL Job Interview) ನಡೆಸಿದ್ದು, ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸಿದೆ. ಜೂನ್ 14 ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದರು. ಆದರೆ ಅವರೆಲ್ಲರನ್ನೂ ತಿರಸ್ಕರಿಸಲಾಗಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಗೆ ಇದು ಮೂರನೇ ಸಂದರ್ಶನವಾಗಿದ್ದು, ಈವರೆಗೆ ರಾಜ್ಯ ತೈಲ ಸಂಸ್ಥೆಯಲ್ಲಿನ ಈ ಹುದ್ದೆಗೆ ಯಾವುದೇ ಸೂಕ್ತ ಅಭ್ಯರ್ಥಿಯನ್ನು ಮಂಡಳಿಗೆ ಆಯ್ಕೆ ಮಾಡುವುದು ಸಾಧ್ಯವಾಗಲಿಲ್ಲ.

ಎಚ್‌ಪಿಸಿಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಮ್‌ಡಿ) ಹುದ್ದೆಗೆ ಯಾವುದೇ ಅಭ್ಯರ್ಥಿಯನ್ನು ಮಂಡಳಿಯು ಶಿಫಾರಸು ಮಾಡಿಲ್ಲ ಮತ್ತು ಸರ್ಚ್-ಕಮ್-ಸೆಲೆಕ್ಷನ್ ಕಮಿಟಿ (ಎಸ್‌ಸಿಎಸ್‌ಸಿ) ಸೇರಿದಂತೆ ಆಯ್ಕೆಗಾಗಿ ಮುಂದಿನ ಕ್ರಮದ ಸೂಕ್ತ ಕೋರ್ಸ್ ಅನ್ನು ಆಯ್ಕೆ ಮಾಡಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಸಲಹೆ ನೀಡಿದೆ ಎಂದು ಪಿಇಎಸ್ ಬಿ ಸಮಿತಿಯು ಅಧಿಸೂಚನೆಯಲ್ಲಿ ತಿಳಿಸಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಯು 2024ರ ಸೆಪ್ಟೆಂಬರ್ 1ರಂದು ಖಾಲಿಯಾಗಲಿದೆ. ಪ್ರಸ್ತುತ ಪುಷ್ಪ್ ಕುಮಾರ್ ಜೋಶಿ ಅವರು ಈ ಹುದ್ದೆಯಲ್ಲಿದ್ದು, ಅವರು 60 ವರ್ಷಗಳನ್ನು ತಲುಪಿದಾಗ ನಿವೃತ್ತರಾಗಲಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮತ್ತು ಆಯಿಲ್ ಆಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್‌ಜಿಸಿ) ನಲ್ಲಿ ಉನ್ನತ ಹುದ್ದೆಗೆ ಸೂಕ್ತವಾದ ಯಾರನ್ನೂ ಪಿಇಎಸ್‌ಬಿ ಈ ಹಿಂದೆಯೂ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದು ಐಒಸಿಯಲ್ಲಿ ಅಧಿಕಾರ ವಹಿಸಿಕೊಂಡವರು ನಿವೃತ್ತಿ ವಯಸ್ಸನ್ನು ತಲುಪಿದ ಅನಂತರವೂ ಹೆಚ್ಚುವರಿ ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವಾಯಿತು ಮತ್ತು ನಿವೃತ್ತ ಕಾರ್ಯನಿರ್ವಾಹಕರಿಗೆ ಒಎನ್ ಜಿಸಿ ಯಲ್ಲಿ ಪ್ರಭಾರ ಅಧಿಕಾರವನ್ನು ನೀಡಲಾಯಿತು.

ಪಿಇಎಸ್‌ಬಿ 2021ರ ಜೂನ್ 3ರಂದು ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಉತ್ಪಾದಕ ಒಎನ್ ಜಿಸಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಅಭ್ಯರ್ಥಿಗಳನ್ನು ಸಂದರ್ಶಿಸಿತು. ಹಿರಿಯ ಅಧಿಕಾರಿಗಳಾದ ಅವಿನಾಶ್ ಜೋಶಿ, ನೀರಜ್ ವರ್ಮಾ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಣಕಾಸು ನಿರ್ದೇಶಕಿ ಪೊಮಿಲಾ ಜಸ್ಪಾಲ್ ಮತ್ತು ತಂತ್ರಜ್ಞಾನ ಮತ್ತು ಕ್ಷೇತ್ರ ಸೇವೆಗಳ ಒಎನ್‌ಜಿಸಿ ನಿರ್ದೇಶಕ ಓಂ ಪ್ರಕಾಶ್ ಸಿಂಗ್ ಅವರನ್ನು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅನಂತರ ಸಚಿವಾಲಯವು ಆಯ್ಕೆ ಸಮಿತಿಯನ್ನು ರಚಿಸಿತು. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ನಿಂದ 60 ವರ್ಷ ವಯಸ್ಸಿನ ಅನಂತರ ನಿವೃತ್ತರಾದ ಅರುಣ್ ಕುಮಾರ್ ಸಿಂಗ್ ಅವರನ್ನು ಒಎನ್ ಜಿಸಿ ಮುಖ್ಯಸ್ಥರನ್ನಾಗಿ ಹೆಸರಿಸಿತು. ಸಿಂಗ್ ಅವರು ಮೊದಲ ಸ್ಥಾನದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರಲಿಲ್ಲ. ಆದರೆ 60 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಪರಿಗಣಿಸಲು ಅರ್ಹತಾ ನಿಯಮವನ್ನು ಬದಲಾಯಿಸಲಾಯಿತು. ಅವರಿಗೆ ಮೂರು ವರ್ಷಗಳ ಅವಧಿಯನ್ನು ನೀಡಲಾಗಿದ್ದು ಅದು ಡಿಸೆಂಬರ್ 2025ರಲ್ಲಿ ಕೊನೆಗೊಳ್ಳಲಿದೆ.

ಐಒಸಿ, ಪಿಇಎಸ್‌ಬಿ ಪ್ರಕರಣದಲ್ಲಿ ಕಳೆದ ವರ್ಷ ಮೇನಲ್ಲಿ ಶ್ರೀಕಾಂತ್ ಮಾಧವ್ ವೈದ್ಯ ಅವರ ಬದಲಿಗಾಗಿ ಯಾವುದೇ ಶಿಫಾರಸು ಮಾಡಲಿಲ್ಲ. ಅವರು ಆಗಸ್ಟ್ 2023 ರಲ್ಲಿ 60 ವರ್ಷ ವಯಸ್ಸಿನ ಅನಂತರ ನಿವೃತ್ತಿ ಹೊಂದಿದ್ದರು. ಸಮಿತಿಯು ಚೆನ್ನೈ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನ (CPCL) ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಕುಮಾರ್ ಸೇರಿ 10 ಅಭ್ಯರ್ಥಿಗಳನ್ನು ಸಂದರ್ಶಿಸಿತು.

2020ರ ಜುಲೈ 1ರಂದು ಭಾರತದ ಅತಿದೊಡ್ಡ ತೈಲ ಕಂಪೆನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವೈದ್ಯ ಅವರು ಗುತ್ತಿಗೆ ಆಧಾರದ ಮೇಲೆ ಮರು-ಉದ್ಯೋಗ ದಲ್ಲಿ ತಮ್ಮ ನಿವೃತ್ತಿಯ ದಿನಾಂಕದ ಅನಂತರ 2023ರ ಸೆಪ್ಟೆಂಬರ್ 1ರಿಂದ 202೪ರ ಆಗಸ್ಟ್ ವರೆಗೆ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡರು.

ಈ ತಿಂಗಳು, ತೈಲ ಸಚಿವಾಲಯವು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ನ ಹೊಸ ಅಧ್ಯಕ್ಷರ ಅರ್ಜಿಗಳನ್ನು ಆಹ್ವಾನಿಸಿದೆ. ಪಿಇಎಸ್‌ಬಿ ಅಧ್ಯಕ್ಷರ ನೇತೃತ್ವದ ಮೂವರು ಸದಸ್ಯರ ಹುಡುಕಾಟ-ಕಮ್-ಆಯ್ಕೆ ಸಮಿತಿಯು ಈ ಆಯ್ಕೆಯನ್ನು ಮಾಡುತ್ತದೆ. ಈ ಸಮಿತಿಯು ತೈಲ ಕಾರ್ಯದರ್ಶಿ ಮತ್ತು ಮಾಜಿ ಎಚ್‌ಪಿಸಿಎಲ್ ಅಧ್ಯಕ್ಷ ಎಂ.ಕೆ. ಸುರಾನಾ ಅವರನ್ನು ಸದಸ್ಯರನ್ನಾಗಿ ಒಳಗೊಂಡಿದೆ.

ಜುಲೈ 3ರೊಳಗೆ ನಾಯಕತ್ವದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರುವ ಪ್ರಮುಖ ಸಂಸ್ಥೆಗಳಿಂದ ಸ್ನಾತಕೋತ್ತರ ನಿರ್ವಹಣಾ ಪದವಿಗಳನ್ನು ಹೊಂದಿರುವ ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೆಚ್ಚ ಲೆಕ್ಕಪರಿಶೋಧಕರಿಂದ ಅರ್ಜಿಗಳನ್ನು ಕೋರಲಾಗಿದೆ. ವಯಸ್ಸಿನ ಅರ್ಹತೆಯ ಕಟ್-ಆಫ್ ಅನ್ನು ಆಂತರಿಕರಿಗೆ 58 ವರ್ಷಗಳಿಗಿಂತ ಹೆಚ್ಚಿಲ್ಲ ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಮತ್ತು ಹೊರಗಿನವರಿಗೆ 57 ವರ್ಷಗಳು, ಜಾಹೀರಾತಿನ ಪ್ರಕಾರ ನಿವೃತ್ತಿ ವಯಸ್ಸು 60 ವರ್ಷಗಳು.

ಸಚಿವಾಲಯವು ಆರಂಭದಲ್ಲಿ 61 ವರ್ಷ ವಯಸ್ಸನ್ನು ತಲುಪದ ಯಾರನ್ನಾದರೂ ಕೆಲಸಕ್ಕೆ ಪರಿಗಣಿಸಲು ಅವಕಾಶ ನೀಡಿತು. ಇದರಿಂದ ವೈದ್ಯ ಅವರು ಕೆಲಸಕ್ಕೆ ಅರ್ಹರಾದರು.


ಪಿಎಸ್‌ಯುಗಳಲ್ಲಿ ಬೋರ್ಡ್ ಮಟ್ಟದ ಹುದ್ದೆಗಳನ್ನು ನೇಮಿಸಿಕೊಳ್ಳಲು ಅಸ್ತಿತ್ವದಲ್ಲಿರುವ ನಿಯಮಗಳು ನಿವೃತ್ತಿಯ ಮೊದಲು ಕನಿಷ್ಠ ಎರಡು ವರ್ಷಗಳ ಸೇವೆಯನ್ನು ಹೊಂದಿರುವ ಆಂತರಿಕ ವ್ಯಕ್ತಿಯ ಉಮೇದುವಾರಿಕೆಯನ್ನು ಪರಿಗಣಿಸಲು ಮತ್ತು ಹೊರಗಿನ ಅಭ್ಯರ್ಥಿಗಳ ಸಂದರ್ಭದಲ್ಲಿ ಮೂರು ವರ್ಷಗಳನ್ನು ಅನುಮತಿಸುತ್ತದೆ.

ಇದನ್ನೂ ಓದಿ: Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹೆಚ್ ಪಿಸಿಎಲ್ ಉನ್ನತ ಹುದ್ದೆಗೆ ಜೂನ್ 14 ರ ಅಧಿಸೂಚನೆಯಲ್ಲಿ ಪಿಇಎಸ್ ಬಿ , ಹೆಚ್ ಪಿಸಿಎಲ್ ಸಂಸ್ಕರಣಾಗಾರಗಳ ನಿರ್ದೇಶಕ ಶುಣ್ಮುಗವೇಲ್ ಭರತನ್, ಕಂಪೆನಿಯ ನಾಲ್ವರು ಕಾರ್ಯನಿರ್ವಾಹಕ ನಿರ್ದೇಶಕರಾದ ಅನುಜ್ ಕುಮಾರ್ ಜೈನ್, ಸುಬೋಧ್ ಬಾತ್ರಾ, ಕೆ. ವಿನೋದ್, ಸಂದೀಪ್ ಮಹೇಶ್ವರಿ ಹಾಗೂ ಐಒಸಿ, ಗೇಲ್ ಮತ್ತು ಐಜಿಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಮಲ್ ಕಿಶೋರ್ ಚಾಟಿವಾಲ್ ಅವರನ್ನು ಸಂದರ್ಶನ ನಡೆಸಿತ್ತು. ಆದರೆ ಹೆಚ್ ಪಿಸಿಎಲ್ ನ ಉನ್ನತ ಹುದ್ದೆಗೆ ಇವರು ಯಾರೂ ಸೂಕ್ತವಾಗಿಲ್ಲ ಎಂದು ಮಂಡಳಿ ಹೇಳಿದೆ.

Continue Reading

EXPLAINER

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಮಾರ್ಗದಲ್ಲಿ ಕವಚ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) 15 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಈ ಮಾರ್ಗದಲ್ಲಿ ರೈಲುಗಳ ಸುರಕ್ಷತೆಗಾಗಿ ಅಳವಡಿಸಿಕೊಳ್ಳಲಾಗಿರುವ ಕವಚ (Kavach) ಸುರಕ್ಷಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಾಗಾದರೆ, ಏನಿದು ಕವಚ ಸುರಕ್ಷಾ ವ್ಯವಸ್ಥೆ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಏನಿದು ಕವಚ?

ಆತ್ಮನಿರ್ಭರ ಭಾರತದ ಭಾಗವಾಗಿ 2022-23ರಲ್ಲಿ ರೈಲುಗಳ ಸುರಕ್ಷತೆ ಮತ್ತು ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 2,000 ಕಿ.ಮೀ. ಮಾರ್ಗವನ್ನು ಕವಚ ಸುರಕ್ಷತಾ ವಿಧಾನದ ಅಡಿಯಲ್ಲಿ ತರಲಾಗುವುದು ಎಂದು ಸಚಿವಾಲಯ ಹೇಳಿತ್ತು. ಕವಚ ಎಂಬುದು ಸೇಫ್ಟಿ ಇಂಟೆಗ್ರಿಟಿ ಲೆವೆಲ್ 4 ಮಾನದಂಡಗಳಾಗಿವೆ. ಇದನ್ನು ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್​​ಡಿಎಸ್​​ಒ) ಅಭಿವೃದ್ಧಿಪಡಿಸಿದೆ. ಕವಚ​ ವ್ಯವಸ್ಥೆಯು ರೈಲುಗಳು ಕೆಂಪು ಸಿಗ್ನಲ್​ ದಾಟಿ ಮುಂದಕ್ಕೆ ಹೋಗುವುದನ್ನು ತಡೆಯುತ್ತದೆ. ಒಂದು ವೇಳೆ ದಾಟಿದರೆ ಸ್ವಯಂಚಾಲಿತ ಬ್ರೇಕಿಂಗ್ ವ್ಯವಸ್ಥೆ ಆ್ಯಕ್ವಿವೇಟ್​ ಆಗುತ್ತದೆ. ಹೀಗಾಗಿ ಎರಡು ರೈಲುಗಳ ನಡುವಿನ ಮುಖಾಮುಖಿ ಡಿಕ್ಕಿಯ ಸಂಭವ ಕಡಿಮೆ.

ಕವಚ ಕಾರ್ಯನಿರ್ವಹಿಸುವುದು ಹೇಗೆ?

ಯಾವುದೇ ತುರ್ತು ಸಂದರ್ಭದಲ್ಲಿ ರೈಲು ಅಪಘಾತ ತಡೆಯುವುದೇ ಕವಚದ ಉದ್ದೇಶವಾಗಿದೆ. ರೈಲು ಹಳಿಗಳು, ಸ್ಟೇಷನ್‌ ಯಾರ್ಡ್‌ ಹಾಗೂ ಸಿಗ್ನಲ್‌ಗಳಿಗೆ ಆರ್‌ಎಫ್‌ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್)‌ ಟ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ರೈಲುಗಳು ಎದುರು ಬದಿರಾಗಿ ಒಂದೇ ಹಳಿಯ ಮೇಲೆ ಚಲಿಸಿದರೂ ಎರಡೂ ಡಿಕ್ಕಿಯಾಗುವ ಮುನ್ನ ಸ್ವಯಂಚಾಲಿತವಾಗಿಯೇ ರೈಲುಗಳು ಬ್ರೇಕ್‌ ಹಾಕಿಕೊಳ್ಳುತ್ತವೆ. ಲೋಕೊ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸಿಗ್ನಲ್‌ನಿಂದಾಗಿಯೇ ಸ್ವಯಂಚಾಲಿತವಾಗಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ಅಷ್ಟೇ ಅಲ್ಲ, ಒಂದು ರೈಲಿನ ಹಿಂದೆ ಮತ್ತೊಂದು ರೈಲು ಚಲಿಸುವಾಗ ಹಿಂದಿನ ರೈಲು ನಿಧಾನಗತಿಯಲ್ಲಿ ಸಾಗುವುದು, ರೈಲಿನ ಸಮೀಪ ಹೋದಾಗ ಬ್ರೇಕ್‌ ಹಾಕುವುದು, ಹವಾಮಾನ ವೈಪರೀತ್ಯದಿಂದ ಮಂದ ಬೆಳಕು ಇದ್ದಾಗ ಬ್ರೇಕ್‌ ಹಾಕುವುದು, ಗೇಟ್‌ಗಳು ಅಡ್ಡ ಬಂದಾಗ ಬ್ರೇಕ್‌ ಹಾಕುವುದು ಸೇರಿ ಯಾವುದೇ ತುರ್ತು ಸಂದರ್ಭದಲ್ಲಿ ಲೋಕೊಮೋಟಿವ್‌ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸ್ವಯಂಚಾಲಿತವಾಗಿ ಕವಚ ವ್ಯವಸ್ಥೆಯ ಅಡಿಯಲ್ಲಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ದೇಶಾದ್ಯಂತ ವಿಸ್ತರಣೆ ಯಾವಾಗ?

ಕವಚ ಸುರಕ್ಷಾ ವಿಧಾನದ ಅಳವಡಿಕೆಯಿಂದ ರೈಲುಗಳ ಅಪಘಾತವು ಗಣನೀಯವಾಗಿ ಕುಸಿದಿದೆ. ಆದರೆ, ಇದುವರೆಗೆ 1,500 ಕಿಲೋಮೀಟರ್‌ ರೈಲು ಮಾರ್ಗಕ್ಕೆ ಮಾತ್ರ ಕವಚ ಅಳವಡಿಸಲಾಗಿದೆ. ಆರಂಭಿಕ ಹಂತದಲ್ಲಿ 2 ಸಾವಿರ ಕಿಲೋಮೀಟರ್‌ ಹಾಗೂ ಹಂತ ಹಂತವಾಗಿ 34 ಸಾವಿರ ಕಿಲೋಮೀಟರ್‌ ಉದ್ದದ ರೈಲು ಮಾರ್ಗಕ್ಕೆ ಕವಚ ಅಳವಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಭಾರತೀಯ ರೈಲ್ವೆಯು ಸುಮಾರು 1 ಲಕ್ಷ ಕಿಲೋಮೀಟರ್‌ ಮಾರ್ಗವನ್ನು ಹೊಂದಿರುವ ಕಾರಣ ಎಲ್ಲ ಮಾರ್ಗಗಳಲ್ಲೂ ಕವಚ ಅಳವಡಿಸಲು ಸಮಯ ಬೇಕಾಗುತ್ತದೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading
Advertisement
Viral news
ವೈರಲ್ ನ್ಯೂಸ್8 mins ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ8 mins ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್9 mins ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ20 mins ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ21 mins ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು32 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest33 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest41 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್47 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ48 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ23 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ24 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌