ಬೆಳಗಾವಿ ಅಧಿವೇಶನ | ಸಾವರ್ಕರ್‌ ಸೇರಿ 7 ಮಹನೀಯರ ಫೋಟೊ ಅನಾವರಣ; ವಿರೋಧಿಸದ ಕಾಂಗ್ರೆಸ್‌ ಬುದ್ಧಿವಂತಿಕೆಯ ನಡೆ - Vistara News

ಕರ್ನಾಟಕ

ಬೆಳಗಾವಿ ಅಧಿವೇಶನ | ಸಾವರ್ಕರ್‌ ಸೇರಿ 7 ಮಹನೀಯರ ಫೋಟೊ ಅನಾವರಣ; ವಿರೋಧಿಸದ ಕಾಂಗ್ರೆಸ್‌ ಬುದ್ಧಿವಂತಿಕೆಯ ನಡೆ

ವಿಧಾನಸೌಧದಲ್ಲಿರುವಂತೆ ಮಹನೀಯರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯ ಸುವರ್ಣ ಸೌಧದಲ್ಲಿ ನೆರವೇರಿದೆ. ಸಾವರ್ಕರ್‌ ಫೋಟೊವನ್ನು ವಿರೋಧಿಸವ ಬದಲಿಗೆ ಮತ್ತಷ್ಟು ದಾರ್ಶನಿಕರ ಫೋಟೊ ಅಳವಡಿಸುವಂತೆ ಒತ್ತಾಯಿಸುವ ಮೂಲಕ ಕಾಂಗ್ರೆಸ್‌ ಬುದ್ಧಿವಂತಿಕೆಯ ಹೆಜ್ಜೆ ಇಟ್ಟಿದೆ.

VISTARANEWS.COM


on

Belgavi session seven photos of eminent personalities unveiled in belagavi suvarna soudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ:‌ ವಿಧಾನಸಭೆ ಚುನಾವಣೆಗೂ ಮುನ್ನ ಭಾರೀ ವಿವಾದ ಸೃಷ್ಟಿಸಬಹುದು ಎಂದು ಅಂದಾಜಿಸಲಾಗಿದ್ದ, ಬೆಳಗಾವಿ ಸುವರ್ಣ ಸೌಧದಲ್ಲಿ ಮಹನೀಯರ ಫೋಟೊ ಅನಾವರಣ ಕಾರ್ಯಕ್ರಮ ಸೋಮವಾರ ಬೆಳಗ್ಗೆ ನೆರವೇರಿದೆ.

ಸ್ಪೀಕರ್‌ ಕುರ್ಚಿಯ ಬಲಭಾಗದಲ್ಲಿ ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್‌ಚಂದ್ರ ಬೋಸ್‌ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಚಿತ್ರಗಳಿದ್ದರೆ ಸ್ಪೀಕರ್‌ ಕುರ್ಚಿಯ ಎಡಭಾಗದಲ್ಲಿ ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹಾಗೂ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್‌ ಚಿತ್ರಗಳಿವೆ. ಸ್ಪೀಕರ್‌ ಕುರ್ಚಿಯ ಹಿಂದಿನ ಮೇಲ್ಭಾಗದಲ್ಲಿ ಜಗಜ್ಯೋತಿ ಬಸವೇಶ್ವರರ ಚಿತ್ರವನ್ನು ಅಳವಡಿಸಲಾಗಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಜೆ.ಸಿ‌ ಮಾಧುಸ್ವಾಮಿ, ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ನಾರಾಯಣಗೌಡ, ಬೈರತಿ ಬಸವರಾಜ್, ಪ್ರಭು ಚೌವ್ಹಾಣ್ ಮುಂತಾದವರೊಂದಿಗೆ ಚಿತ್ರಗಳನ್ನು ಅನಾವರಣ ಮಾಡಲಾಯಿತು.

ಆಹ್ವಾನ ನೀಡಲಾಗಿತ್ತಾದರೂ ನಿರೀಕ್ಷೆಯಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರಾರೂ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಮುಖ್ಯವಾಗಿ ಸಾವರ್ಕರ್‌ ಭಾವಚಿತ್ರವನ್ನು ಅಳವಡಿಸಿರುವುದರಿಂದ ಅದಕ್ಕೆ ವಿರೋಧವಾಗಿ ಭಾಗವಹಿಸದೇ ಇರಲು ನಿರ್ಧಾರ ಮಾಡಿದ್ದರು.

ಕಾಂಗ್ರೆಸ್‌ ಬುದ್ಧಿವಂತಿಕೆಯ ನಡೆ

ಸಾವರ್ಕರ್‌ ಭಾವಚಿತ್ರ ಅಳವಡಿಕೆ ಎಂದ ಕೂಡಲೆ ಕಾಂಗ್ರೆಸ್‌ ವಿರೋಧ ಮಾಡುತ್ತದೆ, ಆಗ ಕಾಂಗ್ರೆಸನ್ನು ದೇಶದ್ರೋಹಿ ಪಕ್ಷ ಎಂಬ ಸುಳಿಯಲ್ಲಿ ಸಿಲುಕಿಸಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಚುನಾವಣೆ ವರ್ಷದಲ್ಲಿ ತರಾತುರಿಯ ನಿರ್ಧಾರ ಬೇಡ ಎಂದು ನಿರ್ಧರಿಸಿದ ಕಾಂಗ್ರೆಸ್‌ ನಾಯಕರು ಯಾವ ಭಾವಚಿತ್ರವನ್ನೂ ವಿರೋಧಿಸಲಿಲ್ಲ.

ವಿಧಾನಸಭೆಯ ಮೆಟ್ಟಿಲುಗಳ ಮೇಲೆ ಕುಳಿತು ವಾಲ್ಮೀಕಿ, ಕುವೆಂಪು, ಕನಕದಾಸರು ಸೇರಿ ಅನೇಕ ದಾರ್ಶನಿಕರು, ಸಾಹಿತಿಗಳ ಭಾವಚಿತ್ರವನ್ನೂ ಅಳವಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾವು ಯಾವುದೇ ಭಾವಚಿತ್ರವನ್ನೂ ವಿರೋಧ ಮಾಡುತ್ತಿಲ್ಲ. ಆದರೆ ಇಂತಹ ನಿರ್ಧಾರ ಮಾಡುವ ಮುನ್ನ ಎಲ್ಲರ ಜತೆಗೆ ಚರ್ಚೆ ಮಾಡಬೇಕಿತ್ತು. ದೇಶದ ಮೊದಲ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರೂ ಸೇರಿ ಅನೇಕರ ಭಾವಚಿತ್ರಗಳನ್ನು ಅಳವಡಿಸಬಹುದಿತ್ತು. ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿಲ್ಲ. ಇನ್ನಷ್ಟು ಮಹನೀಯರ ಭಾವಚಿತ್ರ ಸೇರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ತಂತ್ರ ಉಪಯೋಗಿಸುತ್ತಿದೆ ಎಂದು ದೂರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿ, ಈ ಸರ್ಕಾರ ಬಂದ ಮೇಲೆ ಜನರ ಸಮಸ್ಯೆಗಳನ್ನು ಮರೆತುಬಿಟ್ಟಿದೆ. ಇದೆಲ್ಲವನ್ನೂ ದಾರಿತಪ್ಪಿಸಲು ಪ್ರಯತ್ನ ನಡೆಯುತ್ತಿದೆ. ಸ್ಪೀಕರ್‌ ಕಚೇರಿಯಿಂದ ಫೋನ್‌ ಮಾಡಿ ಕಾರ್ಯಕ್ರಮದ ಬಗ್ಗೆ ಹೇಳಿದರು. ಮಹಾತ್ಮಾ ಗಾಂಧೀಜಿ ಮುಂತಾದವರ ಫೋಟೊ ಎಂದು ನಾವು ಭಾಗವಹಿಸಲು ನಿರ್ಧರಿಸಿದ್ದೆವು. ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದುಕೊಟ್ಟಿದ್ದು ಸತ್ಯ. ಅವರಿಗೂ ಕರ್ನಾಟಕಕ್ಕೂ ಸಂಬಂಧವಿಲ್ಲ, ಅವರೊಬ್ಬ ವಿವಾದಿತ ವ್ಯಕ್ತಿ. ಅದರ ಬಗ್ಗೆ ಚರ್ಚೆಗಿಂತಲೂ ಹೆಚ್ಚಾಗಿ ನಾವು, ಪಂಡಿತ್‌ ನೆಹರೂ, ಶಿಶುನಾಳ ಷರೀಫ್‌, ನಾರಾಯಣ ಗುರು, ಕನಕದಾಸರು, ಬಾಬು ಜಗಜೀವನ್‌ ರಾಮ್‌ ಫೋಟೊ ಸೇರಿ ಅನೇಕ ನಾಯಕರ ಫೋಟೊ ಅಳವಡಿಸಬೇಕು ಎಂದು ಹೇಳುತ್ತಿದ್ದೇವೆ. ಬಿಜೆಪಿಯವರದ್ದು ಬೂಟಾಟಿಕೆಯ ಹಿಂದುತ್ವ. ನಾವು ನಿಜವಾದ ಹಿಂದುಗಳು. ನಾವು ಆಚರಣೆಯನ್ನು ಮಾಡುತ್ತೇವೆ ಎಂದರು.

ಸಮಾಜ ಸುಧಾರಕರ ಫೋಟೊ ಅಳವಡಿಸುವಂತೆ ಕಾಂಗ್ರೆಸ್‌ ಒತ್ತಾಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾತನಾಡಿ, ಪೋಟೋ ಅನಾವರಣ ವಿಚಾರ ಗೌಪ್ಯವಾಗಿಟ್ಟಿದ್ದಾರೆ. ಸದನದ ಹೊರಗೂ, ಒಳಗೂ ಹೋರಾಟ ಮಾಡುತ್ತೇವೆ. ಮುಂದಿನ ಹೋರಾಟದ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕರು ನಾಯಕರ ತೀರ್ಮಾನ ಮಾಡುತ್ತಾರೆ. ದೇಶಕ್ಕಾಗಿ ಹೋರಾಟ ಮಾಡಿದವರು ಬಹಳ ಜನ ಇದ್ದಾರೆ, ಅವರ ಪೋಟೋ ಅಲ್ಲಿ ಬರಲಿ. ಖಂಡಿತವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟಿಗೆ ಸಿಲುಕಿಸುವ ಕೆಲಸ ಮಾಡುತ್ತಾರೆ. ನಾವು ಇಕ್ಕಟಿಗೆ ಸಿಲುಕಬಾರದು ಎಂದು ಹೋರಾಟ ಮಾಡುತ್ತಾ ಇದ್ದೇವೆ ಎಂದರು.

ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, ವಿಧನಾಸಭೆಯ ಒಳಗೆ ಯಾರದ್ದಾದರೂ ಭಾವಚಿತ್ರ ಹಾಕುವುದಾದರೆ ಮೊದಲೇ ತಿಳಿಸಬೇಕು. ಬಿಎಸಿ ಸಭೆಯಲ್ಲಿ ಪಕ್ಷದ ನಾಯಕರಿಗೆ ತಿಳಿಸಬೇಕು. ಆ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು. ಅಭಿಪ್ರಾಯ, ಸಲಹೆ ಪಡೆದುಕೊಳ್ಳಬೇಕು. ಆದರೆ ಸರ್ಕಾರ ಯಾವುದನ್ನೂ ಮಾಡದೇ ಏಕಾಏಕಿ ಫೋಟೊ ಬಿಡುಗಡೆ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಫೋಟೊ ಅನಾವರಣ ಮಾಡುವ ಪ್ರಯತ್ನ ಮಾಡುತ್ತಿದೆ ಎಂದರು.

ಜೆಡಿಎಸ್‌ ಉಪನಾಯಕ ಬಂಡೆಪ್ಪ ಖಾಶೆಂಪೂರ ಮಾತನಾಡಿ, ಇದು ಬಿಜೆಪಿಯ ಹಿಡನ್ ಅಜೆಂಡಾ. ಇವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಇಷ್ಟು ದಿನ ಸುಮ್ಮನಿದ್ದು , ಈಗ ತರುವ ಅವಶ್ಯಕತೆ ಏನಿತ್ತು? ಅವರಿಗೆ ಸಮಸ್ಯೆಗಳ ಬಗ್ಗೆ ಚರ್ಚೆ ಬೇಕಾಗಿಲ್ಲ. ಗಲಾಟೆ ನಡುವೆ ಬಿಲ್ ಪಾಸ್ ಮಾಡಿಕೊಳ್ಳಲು ಹೊರಟಿದ್ದಾರೆ‌. ನಾವು ಜನಪರವಾಗಿದ್ದೇವೆ, ಅದಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪಂಚರತ್ನ ಮಾಡಿದ್ದಾರೆ. ಅವರು ಪಂಚರತ್ನದಲ್ಲಿ ಭಾಗಿಯಾಗುತ್ತಾರೆ. ನಾಳೆ ಜೆಡಿಎಲ್‌ಪಿ ಸಭೆ ಮಾಡುತ್ತೇವೆ. ಯಾವ ವಿಷಯಗಳು ಪ್ರಸ್ತಾಪ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾತನಾಡಿ, ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರೀಯ ವಿಚಾರಗಳ ವಿರೋಧಿಗಳು. ರಾಷ್ಟ್ರೀಯ ವಿಚಾರಗಳನ್ನು ಮಾತನಾಡುವವರನ್ನು ವಿರೋಧಿಸುತ್ತಿದ್ದಾರೆ. ಕೇವಲ ಸಾವರ್ಕರ್ ಮಾತ್ರವಲ್ಲ, ನೇತಾಜಿ ಬೋಸ್, ಇತ್ತೀಚಿಗೆ ಗಾಂಧಿಜಿಯನ್ನು ಯಾವ ರೀತಿ ಕಾಂಗ್ರೆಸ್ ನಡೆಸುಕೊಳ್ಳುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ನಡೆಯಿಂದ ಯಾವುದೇ ನಷ್ಟವಿಲ್ಲ ಎಂದರು.

ಇದನ್ನೂ ಓದಿ | Belagavi session | ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೊ: ಕಾಂಗ್ರೆಸ್‌ ಮೌನದ ಹಿಂದಿದ್ದಾರೆ ಸೋನಿಯಾ ಗಾಂಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

B C Mylarappa: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ ಅವರನ್ನು ಅಮಾನತು ಮಾಡಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

VISTARANEWS.COM


on

B C Mylarappa
Koo

ಬೆಂಗಳೂರು: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ (B C Mylarappa) ಅವರನ್ನು ಅಮಾನತು ಮಾಡುವಂತೆ ಬೆಂಗಳೂರು ವಿವಿ ಕುಲಸಚಿವರಿಗೆ ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಹೈದರಬಾದ್‌ನ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಕೆ. ಶಶಿಧರ್ ರೆಡ್ಡಿ ಎಂಬುವರು 2023ರ ಫೆ. 15ರಂದು ನೀಡಿದ್ದ ದೂರಿನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, 2024ರ ಮಾ.22ರಂದು ಮೈಲಾರಪ್ಪ ಸೇರಿ ಪ್ರಕರಣದ ಇತರ ಆರೋಪಿಗಳಾದ ಕೊರಟಗೆರೆ ಕೃಷ್ಣಪ್ರಸಾದ್, ಆರ್. ಜಗನ್ನಾಥ್, ಸುರೇಂದರ್ ರೆಡ್ಡಿ ಅವರನ್ನು ಬಂಧಿಸಿದ್ದರು.

ಮೈಲಾರಪ್ಪ ಅವರ ಬಂಧನದ ಬಗ್ಗೆ ತೆಲಂಗಾಣ ಪೊಲೀಸರು ಬೆಂಗಳೂರು ವಿವಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ನೀತಿ ಸಂಹಿತೆ ಜಾರಿಯಾದ ಕಾರಣ ವಿವಿಯ ಸಿಂಡಿಕೇಟ್‌ ಸಭೆ ಕರೆದು ತೀರ್ಮಾನ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಅಭಿಪ್ರಾಯ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯನ್ನು ಕೋರಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಮೈಲಾರಪ್ಪ ಅವರು 48 ಗಂಟೆಗೂ ಅಧಿಕ ಕಾಲ ಕಾರಾಗೃಹ ವಾಸದಲ್ಲಿದ್ದುದರಿಂದ ಬಂಧಿಸಲಾದ ದಿನಾಂಕದಿಂದ (ಮಾ.22) ಪೂರ್ವಾನ್ವಯ ಆಗುವಂತೆ ಅಮಾನತಿನಲ್ಲಿಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಏನಿದು ಪ್ರಕರಣ?

ಶಶಿಧರ್‌ ರೆಡ್ಡಿ ತಮ್ಮ ಒಡೆತನದ ಶ್ರಿವೆನ್‌ ಇನ್‌ಫ್ರಾ ಹೆಸರಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಮುಂದಾಗಿದ್ದರು. ಅವರಿಗೆ ಯಲಹಂಕದ ಹೊಸಹಳ್ಳಿಯಲ್ಲಿ ಕೃಷ್ಣಪ್ರಸಾದ್ ಎಂಬುವವರಿಗೆ ಸೇರಿದ ಜಮೀನು ಕೊಡಿಸುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 5 ಕೋಟಿ ರೂ. ಮುಂಗಡ ಹಣವನ್ನು ಆರೋಪಿಗಳು ಪಡೆದಿದ್ದರು. ಆ ಜಮೀನು ಕೃಷ್ಣಪ್ರಸಾದ್ ಅವರಿಗೆ ಸೇರಿಲ್ಲ ಎಂದು ತಿಳಿದ ಹಿನ್ನೆಲೆಯಲ್ಲಿ ಮುಂಗಡ ಹಣ ವಾಪಸ್ ನೀಡುವಂತೆ ಶಶಿಧರ್ ರೆಡ್ಡಿ ಕೇಳಿದ್ದರು. ಆಗ ಪ್ರೊ. ಮೈಲಾರಪ್ಪ ಕರೆ ಮಾಡಿ ತನಗೆ ಸರ್ಕಾರದ ಮಟ್ಟದಲ್ಲಿ ಉತ್ತಮ ಸಂಪರ್ಕವಿದೆ, ಹಣಕ್ಕಾಗಿ ಆರೋಪಿಗಳ ಮೇಲೆ ಒತ್ತಡ ಹೇರಬೇಡಿ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಆ ಬಳಿಕ ಈ ಜಮೀನನ್ನು ಸರ್ಕಾರವು ವೈಎಎಸ್ ಚಾರಿಟಬಲ್ ಟ್ರಸ್ಟ್ ಮತ್ತು ಕೊಡವ ಸಮಾಜಕ್ಕೆ ಹಂಚಿಕೆ ಮಾಡಿರುವುದು ಶಶಿಧರ್ ರೆಡ್ಡಿ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಣ ವಾಪಸ್ ನೀಡುವಂತೆ ಕೇಳಿದಾಗ ಬೆದರಿಕೆ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ಶಶಿಧರ್ ರೆಡ್ಡಿ ತಮ್ಮ ದೂರಿನಲ್ಲಿ ತಿಳಿಸಿದ್ದರು.

Continue Reading

ಉದ್ಯೋಗ

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಕಡ್ಡಾಯವಾಗಿ ಇನ್ಫರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (IIMB Recruitment 2024). ಅನೇಕ ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನ (Job alert).

ವಿದ್ಯಾರ್ಹತೆ

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಕಡ್ಡಾಯವಾಗಿ ಇನ್ಫರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ಸೈಬರ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್‌ ಕ್ಷೇತ್ರದಲ್ಲಿ 8 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯ. ಸೈಬರ್ ಸೆಕ್ಯುರಿಟಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಾರ್ಯಗತಗೊಳಿಸುವ ಅನುಭವ ಇರಬೇಕು.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 13,20,000 ರೂ. – 14,50,000 ರೂ. ವಾರ್ಷಿಕ ವೇತನ ದೊರೆಯಲಿದೆ.

IIMB Recruitment 2024 ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲ ಮಾಹಿತಿ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಗಮನಿಸಿ, ಅಪೂರ್ಣ ಅರ್ಜಿಯನ್ನು ರಿಜೆಕ್ಟ್‌ ಆಗಲಿದೆ. ಹೀಗಾಗಿ ಸರಿಯಾಗಿ ಮಾಹಿತಿ ನೀಡಿ ಅಪ್ಲಿಕೇಷನ್‌ ಭರ್ತಿ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ವೈರಲ್ ನ್ಯೂಸ್

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Viral video: ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ.

VISTARANEWS.COM


on

viral video shakti scheme women fight
Koo

ಬೀದರ್‌: ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ (Shakthi scheme women fight) ಸೀಟಿಗಾಗಿ ಕೆಲವು ಮಹಿಳೆಯರು ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (viral video) ಆಗಿದೆ. ಒಂದು ಸೀಟಿಗಾಗಿ ಪರಸ್ಪರ ಮಾನ ಮರ್ಯಾದೆ ಬಿಟ್ಟು ಚಪ್ಪಲಿ ಹಿಡಿದು ಬಡಿದಾಡಿಕೊಂಡಿದ್ದಾರೆ. ಅಂಗಿ- ರವಿಕೆ ಹರಿದುಕೊಂಡಿದ್ದಾರೆ.

ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ. ಅವಾಚ್ಯ ಬೈಗುಳಗಳು ವಿನಿಮಯ ಆಗಿದ್ದು, ಪರಸ್ಪರರ ಅಂಗಿ ಹಿಡಿದು ಎಳೆದಾಡಿಕೊಂಡಿದ್ದಾರೆ. ನಂತರ ಚಪ್ಪಲಿ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಜೊತೆಗಿದ್ದ ಹಲವರು ಇವರ ಜಗಳ ಬಿಡಿಸಲು ಯತ್ನಿಸಿದರೆ, ಇನ್ನು ಹಲವರು ತಾವೂ ಎರಡು ಪಕ್ಷ ವಹಿಸಿ ಕಿತ್ತಾಡಿಕೊಂಡಿದ್ದಾರೆ!

ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದಾರೆ. ಫನ್ನೀ ಕಾಮೆಂಟ್‌ಗಳು ಇದಕ್ಕೆ ಬಂದಿವೆ. “ಜಡೆಗಳು ಕಿತ್ತುಬರುವುದೊಂದೇ ಬಾಕಿ” ಎಂದು ಒಬ್ಬರು, “ಇದು ಗ್ಯಾರಂಟಿ ಹೊಡೆದಾಟ” ಎಂದು ಇನ್ನು ಕೆಲವರು ವಿನೋದವಾಡಿದ್ದಾರೆ. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಜಾರಿಯ ಬಳಿಕ ಇಂಥ ಹಲವಾರು ಹೊಡೆದಾಟಗಳು ಸೋಶಿಯಲ್‌ ಮೀಡಿಯಾಗಳಲ್ಲಿ ದಾಖಲಾಗಿವೆ.

ಖಾಸಗಿ ಬಸ್‌ಗಳಿಗೂ ವಿಸ್ತರಣೆ?

ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus service) ಅವಕಾಶವನ್ನು ಒದಗಿಸಿರುವ ಶಕ್ತಿ ಯೋಜನೆ (Shakthi Scheme) ಖಾಸಗಿ ಬಸ್‌ಗಳಿಗೂ (Private Buses) ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಹತ್ವದ ಸೂಚನೆ ನೀಡಿದ್ದು, ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ನಿರ್ದೇಶನ ನೀಡಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಸರ್ಕಾರಿ ಬಸ್‌ ಸೌಲಭ್ಯ ಇಲ್ಲ. ಹೀಗಾಗಿ ಅಲ್ಲಿನ ಜನರಿಗೂ ಯೋಜನೆಯ ಲಾಭ ದೊರೆಯುವಂತಾಗಲು ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ ಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಕೆಲವು ಕಡೆ ಕೇಳಿಬಂದಿತ್ತು. ಖಾಸಗಿ ಬಸ್‌ ಮಾಲೀಕರೊಬ್ಬರು ಹೈಕೋರ್ಟ್‌ ಮೆಟ್ಟಿಲು ಹತ್ತಿದ್ದಾರೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ನ್ಯಾಯಾಲಯ ಆದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

ಇದನ್ನೂ ಓದಿ: Electric Bus : ಶಕ್ತಿ ಯೋಜನೆ ಟೀಕಿಸುವ ಬಿಜೆಪಿಗೆ ಹೆಣ್ಮಕ್ಕಳೇ ಉತ್ತರ ಕೊಡಿ ಎಂದ ಸಿದ್ದರಾಮಯ್ಯ

Continue Reading

ಕೋಲಾರ

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Blackmail Case: ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

VISTARANEWS.COM


on

blackmail case kgf
Koo

ಕೋಲಾರ: ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ (gram Panchayat) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು (romance) ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ (Blackmail Case) ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಬೇತಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೋದಾಗ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು. ತನ್ನ ಮಗನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗದಂತೆ ಆರೋಪಿಯ ತಾಯಿ ಪೊಲೀಸರ ಜೀಪ್‌ ಮುಂದೆ ಅಡ್ಡಲಾಗಿ ಮಲಗಿ ತಡೆ ಒಡ್ಡಿದರು. ಕೊನೆಗೆ ಪೊಲೀಸರು ಅವರನ್ನು ಪಕ್ಕಕ್ಕೆ ಸರಿಸಿ ಆರೋಪಿಯನ್ನು ಕರೆದೊಯ್ದರು.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಮಸಾಗರ ಗ್ರಾಮ ಪಂಚಾಯಿತಿಯ 14 ಸದಸ್ಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯನ್ನು ಸೇವೆಯಿಂದ ಅಮಾನತು ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿರುವುದಾಗಿ ಹರ್ತಿ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ ನಡೆಸುತ್ತಿದ್ದಾರೆ.

ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

ಪಂಚಾಯತಿ ಸಿಬ್ಬಂದಿಯ ಈ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿವೆ. ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ, ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರದ ದಿನಗಳಲ್ಲಿ ಲೈಂಗಿಕವಾಗಿ ಸಹಕರಿಸುವಂತೆ, ಇಲ್ಲದಿದ್ದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಮುತ್ತು ಕೊಡುವ ಕ್ಷಣಗಳ ಫೋಟೋ ವೈರಲ್‌ ಮಾಡಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Continue Reading
Advertisement
B C Mylarappa
ಕರ್ನಾಟಕ43 seconds ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ2 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ15 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ16 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ24 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ25 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್35 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ38 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ52 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ56 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌