Elephant Attack | ನಾಡಿನಲ್ಲಿ ಒಂಟಿ ಸಲಗ ಬಿಂದಾಸ್‌ ಆಟ; ಹೇಮಾವತಿ ಬ್ಯಾಕ್ ವಾಟರ್‌ನಲ್ಲಿ ಈಜಾಡಿದ ಕಾಡಾನೆ - Vistara News

ಕರ್ನಾಟಕ

Elephant Attack | ನಾಡಿನಲ್ಲಿ ಒಂಟಿ ಸಲಗ ಬಿಂದಾಸ್‌ ಆಟ; ಹೇಮಾವತಿ ಬ್ಯಾಕ್ ವಾಟರ್‌ನಲ್ಲಿ ಈಜಾಡಿದ ಕಾಡಾನೆ

ಕಾಡಾನೆ ಹಾವಳಿಯಿಂದ (Elephant Attack) ನಿತ್ಯ ಕಾಡಂಚಿನ ಜನರು ಭೀತಿಯಲ್ಲಿ ಓಡಾಡುವಂತಾಗಿದೆ. ಈಗ ಹೇಮಾವತಿ ಹಿನ್ನೀರಿನಲ್ಲಿ ಆನೆಯೊಂದು ಆಟವಾಡಿದೆ. ಈ ವಿಡಿಯೋ ಈಗ ವೈರಲ್‌ ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ರಾಜ್ಯದ ವಿವಿಧ ಕಡೆ ಗಜಪಡೆಗಳ ಹಾವಳಿ (Elephant Attack) ಮುಂದುವರಿದಿದೆ. ಸಕಲೇಶಪುರ ತಾಲೂಕಿನ ಕೆಸಗುಲಿ, ಕಲ್ಲಹಳ್ಳಿ, ಮತಿಗಳಲೆ, ಶಿಡಿಗಳಲೆ ಗ್ರಾಮಗಳಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಆಗಮಿಸುತ್ತಿದ್ದು, ಸುತ್ತಮುತ್ತಲ ಗ್ರಾಮಸ್ಥರನ್ನು ಆತಂಕಕ್ಕೆ ತಳ್ಳಿದೆ. ಇದರ ಮಧ್ಯೆ ಒಂಟಿ ಸಲಗವೊಂದು ನೀರಿನಲ್ಲಿ ಮೈಮರೆತು ಆಟವಾಡಿದೆ. ಇದರ ವಿಡಿಯೊ ಈಗ ಸಖತ್‌ ವೈರಲ್‌ ಆಗಿದೆ.

Elephant Attack

ಸಕಲೇಶಪುರ ತಾಲೂಕಿನ ದಬ್ಬಳ್ಳಿ ಗ್ರಾಮದ ಹೇಮಾವತಿ ಬ್ಯಾಕ್ ವಾಟರ್‌ನಲ್ಲಿ ಒಂಟಿ ಸಲಗವೊಂದು ಈಜಾಡಿದೆ. ಅದೆಷ್ಟು ಚೆಂದ ಆಟವಾಡಿದೆ ಎಂದರೆ ನೀರು, ನೆಲದಲ್ಲಿ ಬಿದ್ದು ಹೊರಳಾಡಿದೆ.

Elephant Attack

ನೀರಿನಲ್ಲಿ ಆಟವಾಡುವ ಈ ಆನೆಯು ಕೆರೆಯ ದಡದ ಮೇಲೆ ಒಮ್ಮೆ ಬೀಳುವುದು, ಬಳಿಕ ಮತ್ತೆ ಅಲ್ಲಿಂದ ನೀರಿಗೆ ಜಾರುವುದು ಮಾಡಿದೆ. ಹೀಗೆ ಮಾಡಿ ಖುಷಿ ಪಟ್ಟಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗ ಈಗ ಕಾಡಾನೆಗಳ ಬಿಡಾಗಿದೆ. ಕಾಡಾನೆಗಳ ಉಪಟಳದಿಂದ ಜನರು ಹೈರಾಣಾಗಿದ್ದಾರೆ. ಈಗ ಒಂಟಿ ಸಲಗದ ಈ ನೀರಾಟದ ವಿಡಿಯೊವನ್ನು ಸ್ಥಳೀಯರೊಬ್ಬರು ರೆಕಾರ್ಡ್‌ ಮಾಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

Elephant Attack

ದಾಂಧಲೆ ಮಾಡಿರುವ ಕಾಡಾನೆಗಳು
ಸಕಲೇಶಪುರ ತಾಲೂಕಿನ ಶಿಡಿಗಳಲೆ ಗ್ರಾಮದ ತೋಟವೊಂದರಲ್ಲಿ ಆನೆಗಳ ಗುಂಪೊಂದು ಸೋಮವಾರ (ಡಿ.೧೯) ಕಾಣಿಸಿಕೊಂಡಿವೆ. 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿವೆ. ಅಪಾರ ಪ್ರಮಾಣದಲ್ಲಿ ಬೆಳೆದಿದ್ದ ಕಾಫಿ, ಭತ್ತದ ಬೆಳೆಗಳನ್ನು ಧ್ವಂಸ ಮಾಡಿವೆ. ಗ್ರಾಮದ ಜಗದೀಶ್ ಮಲ್ಲಣ್ಣ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ದಾಂಧಲೆ ನಡೆಸಿವೆ.

ಆನೇಕಲ್‌ ಗಡಿಭಾಗದಲ್ಲೂ ಕಾಡಾನೆ ಹಾವಳಿ
ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಹಿಂಡು ಹಿಂಡಾಗಿ ಕಾಡಾನೆಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಕಾಡಂಚಿನ ಗ್ರಾಮಗಳಾದ ತೆಲಗರಹಳ್ಳಿ, ಕಾಳನಾಯಕನಹಳ್ಳಿ, ವಣಕನಹಳ್ಳಿ ಭಾಗದಲ್ಲಿ 20ಕ್ಕೂ ಹೆಚ್ಚು ಕಾಡಾನೆ ಪ್ರತ್ಯಕ್ಷವಾಗಿದ್ದು, ಕಳೆದೆರಡು ದಿನಗಳಿಂದ ಬೀಡು ಬಿಟ್ಟಿವೆ. ಕಾಡಾನೆಗಳು ರಸ್ತೆ ದಾಟಿ ಹೋಗುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Elephant Attack | ಶಿಡಿಗಳಲೆ ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ; ಅಪಾರ ಪ್ರಮಾಣದ ಬೆಳೆ ನಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Female Foeticide: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ. ಗರ್ಭಪಾತ ನಡೆಸುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ.

VISTARANEWS.COM


on

Female foeticide
ಪಾಂಡವಪುರದಲ್ಲಿ ಭ್ರೂಣಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ದಂಪತಿ.
Koo

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Prajwal Revanna Case: ಪೆನ್ ಡ್ರೈವ್ ಕಥಾನಾಯಕರೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಿದ್ದಾರೆ. ನನಗೆ ಬಹಳ ದೊಡ್ಡ ಮಟ್ಟದ ಆಫರ್ ಬಂತು. ಕ್ಯಾಬಿನೆಟ್ ರ‍್ಯಾಂಕ್‌ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟರು. ಪೆನ್‌ಡ್ರೈವ್‌ ಹೇಗೆ ರೆಡಿ ಆಯಿತು ಹೊಳೆನರಸೀಪುರಕ್ಕೆ ಹೇಗೆ‌‌ ಹೋಯಿತು? ಶ್ರೇಯಸ್‌ಗೆ‌ ಏನೆಲ್ಲಾ ಡೈರೆಕ್ಷನ್ ಇತ್ತು? ಎಲ್ಲವೂ ನನಗೆ ಗೊತ್ತು ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case DK Shivakumar behind Prajwal video leak Devaraje Gowda demands CBI probe
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ವಿಡಿಯೊ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಹತ್ವದ ವಿಚಾರವನ್ನು ಹೊರಹಾಕಿದ್ದಾರೆ. ಅಲ್ಲದೆ, ಈ ಎಲ್ಲ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿರುವ ಅವರು, ಡಿಕೆಶಿಯದ್ದು ಎನ್ನಲಾದ ಆಡಿಯೊವನ್ನು ಪ್ಲೇ ಮಾಡಿದ್ದಾರೆ. ಜತೆಗೆ ತಮಗೆ ಎಸ್‌ಐಟಿ ಮೇಲೆ ಯಾವುದೇ ನಂಬಿಕೆ ಇಲ್ಲ. ಹೀಗಾಗಿ ಈ ಎಲ್ಲ ಸಾಕ್ಷಿಗಳನ್ನು ನೇರವಾಗಿ ಸಿಬಿಐಗೆ ನೀಡುವುದಾಗಿ ಹೇಳಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವರಾಜೇಗೌಡ, ಮೊದಲು ನನಗೆ ಎಲ್.ಆರ್ ಶಿವರಾಮ್ ಗೌಡ ಕರೆ ಮಾಡಿದರು. ಬಳಿಕ ಅವರು ಪಕ್ಕದಲ್ಲಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಕೈಗೆ ಕೊಡುತ್ತಾರೆ ಎಂದು ಹೇಳುತ್ತಾ ಅದರ ಆಡಿಯೊವನ್ನು ಅರ್ಧ ಪ್ಲೇ ಮಾಡಿದರು. ಡಿಕೆಶಿ ಅವರ ಧ್ವನಿಯುಳ್ಳ ಮಾತು ಆರಂಭವಾಗುತ್ತಿದ್ದಂತೆ ಅದನ್ನು ಆಫ್‌ ಮಾಡಿದರು. ಹೀಗಾಗಿ ಪೂರ್ಣ ಆಡಿಯೊವನ್ನು ಬಿಡುಗಡೆ ಮಾಡಿ ಎಂದು ಮಾಧ್ಯಮದವರು ಆಗ್ರಹಿಸಿದರು. ಆದರೆ, ಅದಕ್ಕೆ ದೇವರಾಜೇಗೌಡರು ಒಪ್ಪಲಿಲ್ಲ. ನಾನಿದನ್ನು ಸಿಬಿಐಗೆ ಸಾಕ್ಷಿಯಾಗಿ ಕೊಡುತ್ತೇನೆ ಎಂದು ಹೇಳಿದರು.

ಪೆನ್ ಡ್ರೈವ್ ಕಥಾನಾಯಕರೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಿದ್ದಾರೆ. ನನಗೆ ಬಹಳ ದೊಡ್ಡ ಮಟ್ಟದ ಆಫರ್ ಬಂತು. ಕ್ಯಾಬಿನೆಟ್ ರ‍್ಯಾಂಕ್‌ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟರು. ಪೆನ್‌ಡ್ರೈವ್‌ ಹೇಗೆ ರೆಡಿ ಆಯಿತು ಹೊಳೆನರಸೀಪುರಕ್ಕೆ ಹೇಗೆ‌‌ ಹೋಯಿತು? ಶ್ರೇಯಸ್‌ಗೆ‌ ಏನೆಲ್ಲಾ ಡೈರೆಕ್ಷನ್ ಇತ್ತು? ಎಲ್ಲವೂ ನನಗೆ ಗೊತ್ತು ಎಂದು ದೇವರಾಜೇಗೌಡ ಹೇಳಿದರು.

Prajwal Revanna Case DK Shivakumar behind Prajwal video leak Devaraje Gowda demands CBI probe
ದೇವರಾಜೇಗೌಡ ಅವರ ಕಚೇರಿಗೆ ಭೇಟಿ ನೀಡಿದ್ದ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌. ವಿಡಿಯೊ ಹೊರಬಿಟ್ಟ ದೇವರಾಜೇಗೌಡ.

ಸರ್ಕಾರದ ಪರ ಎಸ್‌ಐಟಿ ಕೆಲಸ

ಎಸ್‌ಐಟಿ ಟೀಂ ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧವಾಗಿ ನಾನು ಎಸ್‌ಐಟಿಗೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಿರಿ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಎಸ್‌ಐಟಿ ತನಿಖಾ ತಂಡದಲ್ಲಿರುವ ಮಹಿಳಾ ಎಸ್‌ಪಿ ಸುಮನ್ ಡಿ ಪೆನ್ನೇಕರ್ ನನಗೆ ತಾಕೀತು ಮಾಡಿದ್ದರು. ಹೀಗಾಗಿ ಎಸ್‌ಐಟಿ ಬಗ್ಗೆ ನನಗೆ ನಂಬಿಕೆಯೇ ಇಲ್ಲ ಎಂದು ದೇವರಾಜೇಗೌಡ ಕಿಡಿಕಾರಿದರು.

ಇನ್ನು ಮಾಜಿ ಸಚಿವ ಎಲ್‌.ಆರ್.‌ ಶಿವರಾಮೇಗೌಡ ಕರೆ ಮಾಡಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಹೆಸರನ್ನು ಹೇಳಬೇಡಿ ಎಂದು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ ದೇವರಾಜೇಗೌಡ ಅವರು, ಅದಕ್ಕೆ ಸಂಬಂಧಪಟ್ಟ ಆಡಿಯೊವನ್ನು ಬಿಡುಗಡೆ ಮಾಡಿದರು. ಈ ಪ್ರಕರಣದಲ್ಲಿ ಎಲ್‌.ಆರ್.‌ ಶಿವರಾಮೇಗೌಡ ಮಧ್ಯವರ್ತಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್‌ ಪರವಾಗಿ ಕೆಲಸ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದರು.

ಎಲ್ಲ ಮಾಹಿತಿ ಕೊಟ್ಟರೂ ಪೆನ್‌ಡ್ರೈವ್‌ ಹಂಚಿದ ಆರೋಪಿಯನ್ನು ಹಿಡಿಯಲಿಲ್ಲ

ಪೆನ್ ಡ್ರೈವ್ ಹಂಚಿರುವವರ ಹೆಸರು, ಲೋಕೇಶನ್ ಹಾಗೂ ಫೋನ್ ನಂಬರ್‌ಗಳನ್ನು ಕೊಟ್ಟರೂ ಆರೋಪಿಗಳನ್ನು ಹಿಡಿಯಲಿಲ್ಲ. ಈಗ ದೇವರಾಜೇ ಗೌಡನನ್ನು ನನ್ನ ಫಿಟ್ ಮಾಡಬೇಕು ಅಂತ ಈ ತಂತ್ರ ಮಾಡಿದ್ದಾರೆ. ನಿನ್ನೆಯವರೆಗೂ ನನ್ನ ಜತೆ ಸಂಧಾನ ಆಯ್ತು. ಶಿವರಾಮೇಗೌಡರು ಸಂಧಾನ ಮಾಡಲು‌ ಮುಂದಾದರು. ನನಗೆ ಸರ್ಕಾರದ, ಸಿಎಂ, ಡಿಸಿಎಂ ಹೆಸರು ತರಬೇಡ ಎಂದು ನನಗೆ ತಾಕೀತು ಮಾಡಿದರು. ಆದರೆ, ನಾನು ಅದನ್ನು ನಿರಾಕರಣೆ ಮಾಡಿದೆ ಎಂದು ದೇವರಾಜೇಗೌಡ ವಿವರಣೆ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿ ಸಭೆ ನಡೆದಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾರನ್ನೆಲ್ಲ ಬಂಧಿಸಬೇಕು? ತನಿಖೆ ಯಾವ ನಿಟ್ಟಿನಲ್ಲಿ ಸಾಗಬೇಕು? ಎಂಬಿತ್ಯಾದಿಗಳ ಬಗ್ಗೆ ಚರ್ಚೆ ನಡೆದಿದೆ. ನನ್ನ ಜೀವನದ ದೊಡ್ಡ ಹೋರಾಟ ಇದ್ದಿದ್ದೇ ಹಾಸನದ ನಾಯಕರ ವಿರುದ್ಧವಾಗಿ ಆಗಿದೆ. ನನ್ನ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನನ್ನ ಹೋರಾಟವನ್ನು ಕೆಲವು‌ ಕಿಡಿಗೇಡಿ ರಾಜಕಾರಣಿಗಳು ವಾಮಮಾರ್ಗದಲ್ಲಿ ಬಳಸಿದ್ದಾರೆ ಎಂದು ದೇವರಾಜೇಗೌಡ ಆರೋಪಿಸಿದರು.

ಕಾರ್ತಿಕ್‌ ನನ್ನ ಕಚೇರಿಗೆ ಬಂದಿದ್ದ

ನನ್ನ ಸಾಕ್ಷಿಯನ್ನು ಪರಿಗಣಿಸಲಾಗಿದೆ. ಹೀಗಾಗಿ ಎಸ್‌ಐಟಿಯವರ ಮುಂದೆ ನಾನು ಕಹಿ ಸತ್ಯಗಳನ್ನು ಬಯಲು ಮಾಡಿದ್ದೇನೆ. ಅಶ್ಲೀಲ ವಿಡಿಯೊ ವಿಚಾರದಲ್ಲಿ ಕೆಲ ಬಂಧನ ಆಗಿದೆ. ಆದರೆ, ಯಾವ ವಿಡಿಯೊದಲ್ಲೂ ಮುಖ‌ಗಳನ್ನು ಬ್ಲರ್‌ ಮಾಡಲಾಗಿಲ್ಲ. ದೇವರಾಜೇಗೌಡನ ಪಾತ್ರ ಏನು ಅಂತ ತಿಳಿಸುತ್ತೇನೆ. ಕೊಲೆಗಾರ ಕೂಡ ಬಂದಾಗ ವಕೀಲರಾಗಿ ರಕ್ಷಣೆ ಮಾಡುವುದು ನನ್ನ ಕರ್ತವ್ಯವಾಗಿತ್ತು. ವಕೀಲ ವೃತ್ತಿಯ ಮೂಲ ಜವಾಬ್ದಾರಿ ಇದು. ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ನನ್ನ ಗೃಹ ಕಚೇರಿಗೆ ಬಂದಿದ್ದ. ಈ ಫೈಲ್ ಹಾಸನದಲ್ಲಿರುವ ನನ್ನ ಮನೆಯಲ್ಲಿರುವ ಕಚೇರಿಯಲ್ಲಿ ಕೊಟ್ಟಿದ್ದಾನೆ. ಇದರ ಜತೆ ಪೆನ್ ಡ್ರೈವ್‌ ಕೂಡ ಇತ್ತು ಎಂದು ದೇವರಾಜೇಗೌಡ ಹೇಳಿದರು.

ಎಲ್ಲ ದಾಖಲೆಗಳೂ ನನ್ನಲ್ಲಿದೆ

ಕಾರ್ತಿಕ್‌ ನನಗೆ ಪೆನ್‌ಡ್ರೈವ್ ಕೊಟ್ಟ ನಂತರ ಅದನ್ನು ನಾನು ಲಕೋಟೆಯಲ್ಲಿ ಇಟ್ಟಿದ್ದೆ. ನಾನು ಹೆಣ್ಣುಮಕ್ಕಳನ್ನು ಕಾಪಾಡಬೇಕು ಅಂತ ಬಹಿರಂಗ ಮಾಡಿಲ್ಲ. ಆತ ಮುಂದೆಯೇ ಸೀಲ್ಡ್ ಕವರ್‌ಗೆ ಹಾಕಿದೆ. ಪೆನ್ ಡ್ರೈವ್ ಹೊಳೆನರಸೀಪುರದಿಂದ ಪರಾಜಿತ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ತಲುಪಿತ್ತು. ಆತನ ಗುರು ಪುಟ್ಟಿ @ ಪುಟ್ಟರಾಜು ಅವರು ಬೆಂಗಳೂರಿಗೆ ಬಂದರು. ಅವರು ಯಾರನ್ನು ಭೇಟಿಯಾದರು? ಇದರ ದಾಖಲೆ ನನ್ನ ಬಳಿ‌ ಇದೆ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಕಾರ್ತಿಕ್‌ ಬಂದಿದ್ದ ವಿಡಿಯೊ ಪ್ರದರ್ಶನ

ಎಸ್‌ಐಟಿ ನನ್ನ ಬಳಿ ಇರುವ ದಾಖಲೆ ಏನು ಅಂತ ಕೇಳಿದರು? ಎಲ್ಲವನ್ನೂ ಅವರಿಗೆ ಕೊಟ್ಟಿದ್ದೇನೆ. ತನಿಖಾಧಿಕಾರಿ ಎಸ್‌ಪಿ ಮುಂದೆ ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಿದ್ದೇನೆ. ಕಾರ್ತಿಕ್ ನನ್ನ ಮನೆಗೆ ಯಾವಾಗ ಬಂದಿದ್ದು? ಎಂಬ ವಿಡಿಯೊ ನನ್ನ ಬಳಿ ಇದೆ. ಈಗ ಅದನ್ನು ಸಹ ಸಿಬಿಐಗೆ ನೀಡುತ್ತೇನೆ ಎಂದು ದೇವರಾಜೇಗೌಡ ಅವರು ಮಾಧ್ಯಮದೆದುರು ಆ ವಿಡಿಯೊವನ್ನು ಪ್ರದರ್ಶನ ಮಾಡಿದರು. ಕಾರ್ತಿಕ್‌ ಪೆನ್ ಡ್ರೈವ್ ಅನ್ನು ಯಾರಿಗೆ ಕೊಟ್ಟಿದ್ದೇನೆ ಎಂದು ಆತ ಹೇಳಿದ್ದು ಕೂಡಾ ರೆಕಾರ್ಡ್ ಆಗಿದೆ ಎಂದು ದೇವರಾಜೇಗೌಡ ಹೇಳಿದರು.

Continue Reading

ಕರ್ನಾಟಕ

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election 2024: ಲೋಕಸಭಾ ಚುನಾವಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ ಗಂಗಾವತಿಗೆ ಮತದಾನ ಮಾಡಲು ಆಗಮಿಸಿದ್ದಾರೆ. ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಐಶ್ವರ್ಯ ಗೌಡರ್ ಮತ್ತು ಕಿರಣ್ ಪಾಟೀಲ್ ದಂಪತಿ ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ತಿಳಿಸಿದ್ದಾರೆ.

VISTARANEWS.COM


on

couple came to Gangavathi from Dubai to vote
Koo

ಗಂಗಾವತಿ: ಲೋಕಸಭಾ ಚುನಾವಣೆ 2024 (Lok Sabha Election 2024) ಹಿನ್ನೆಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ (Dubai) ಗಂಗಾವತಿಗೆ ಮತದಾನಕ್ಕಾಗಿ ಆಗಮಿಸಿದ್ದಾರೆ.

ನಗರದ ಎಪಿಎಂಸಿ ಸಮೀಪದ ನಿವಾಸಿಯಾಗಿರುವ ಉದ್ಯಮಿ ಆರ್ಹಾಳ ಶರಣಪ್ಪ ಅವರ ಪುತ್ರಿ ಐಶ್ವರ್ಯ ಗೌಡರ್ ಮತ್ತು ಅಳಿಯ ಕಿರಣ್ ಪಾಟೀಲ್ ದಂಪತಿ ದುಬೈನಲ್ಲಿ ನೆಲೆಸಿದ್ದಾರೆ. ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಉದ್ದೇಶಕ್ಕಾಗಿಯೇ ದುಬೈನಿಂದ ಗಂಗಾವತಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

ಕಿರಣ್ ಪಾಟೀಲ್ ಕೂಡ ಗಂಗಾವತಿಯ ಕುವೆಂಪು ಬಡಾವಣೆಯ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷದಿಂದ ದುಬೈನಲ್ಲಿ ನೆಲೆಸಿದ್ದಾರೆ. ಕಳೆದ ಡಿಸಂಬರ್‌ನಲ್ಲಿ ಐಶ್ವರ್ಯ ಮತ್ತು ಕಿರಣ್ ಪಾಟೀಲ್‌ಗೆ ವಿವಾಹವಾಗಿದ್ದು, ಇಬ್ಬರೂ ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಲ್ಲಿನ ಎಪಿಎಂಸಿ ಮುಂಭಾಗದ ಟಿಎಪಿಸಿಎಂಎಸ್‌ನ ಮತಗಟ್ಟೆಯಲ್ಲಿ ಐಶ್ವರ್ಯ ಮತದಾನ ಮಾಡಲಿದ್ದು, ಬೆಂಡರವಾಡಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕಿರಣ್ ಪಾಟೀಲ್ ಮತದಾನ ಮಾಡಲಿದ್ದಾರೆ. ಮತದಾನದ ಬಳಿಕ ಈ ದಂಪತಿ ಮತ್ತೆ ದುಬೈಗೆ ತೆರಳಲಿದ್ದಾರೆ.

ಇದನ್ನೂ ಓದಿ: No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

`ಭಾರತ ಬದಲಾಗುತ್ತಿದ್ದು, ಅಭಿವೃದ್ಧಿಗೆ ವೇಗ ಸಿಕ್ಕಿದೆ. ವಿದೇಶಗಳಲ್ಲೂ ಭಾರತದ ಬಗ್ಗೆ ಗೌರವ ಭಾವ ಮೂಡಿದೆ. ಹೀಗಾಗಿ ಭಾರತದ ಪ್ರಜೆಗಳೆಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಎನಿಸುತ್ತಿದೆ. ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ಐಶ್ವರ್ಯ ಮತ್ತು ಕಿರಣ್ ದಂಪತಿ ತಿಳಿಸಿದ್ದಾರೆ.

Continue Reading

ಕೊಡಗು

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Marriage Cancel : ಯಾವ್ಯಾವುದೋ ಕಾರಣಕ್ಕೆ ಮದುವೆಯ ದಿನ ಮುರಿದು ಬಿದ್ದಿರುವುದು ನೋಡಿದ್ದೇವೆ. ಆದರೆ ಕೊಡಗಿನಲ್ಲಿ ವರನ ಕಡೆಯವರಿಗೆ ಸಿಹಿ ತಿಂಡಿ‌ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯೊಂದು ಮುರಿದಿದೆ.

VISTARANEWS.COM


on

By

marriage cancel in kodagu
Koo

ಕೊಡಗು: ವರದಕ್ಷಿಣೆ ಕೊಡಲಿಲ್ಲ ಎಂದು ಮದುವೆ ದಿನವೇ ವರನೊಬ್ಬ ಮದುವೆ ಬೇಡ (Marriage Cancel) ಎಂದಿದ್ದಾನೆ. ಮದುವೆ ಬೇಡ ಎನ್ನಲು ಮೊದಲು ಕಾರಣ ಕೊಟ್ಟಿದ್ದು, ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲದ ಕಾರಣ ಹೇಳಿ ನನಗೆ ಈ ಮದುವೆ ಬೇಡ ಎಂದು ಗಲಾಟೆ ಮಾಡಿದ್ದಾನೆ.

ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ ಮೇ 5ರಂದು ಮದುವೆ ನಿಶ್ಚಯಾಗಿವಾಗಿತ್ತು. ಆದರೆ ರಾತ್ರೋ ರಾತ್ರಿ ವರ ಉಂಗುರ ಕಳಚಿಕೊಟ್ಟು ಹೋಗಿದ್ದಾನೆ.

ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯವು ಕೇಳಿ ಬಂದಿತ್ತು ಎನ್ನಲಾಗಿದೆ. ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡುವಂತೆ ವರನ ಪೋಷಕರು ಒತ್ತಾಯಿಸಿದ್ದರು. ಮದುವೆ ದಿನ ಚಿನ್ನ ಕೊಟ್ಟಿಲ್ಲ ಎಂದು ಊಟದ ನೆಪ ಹೇಳಿ ಗಲಾಟೆ ತೆಗೆದು ಮದುವೆ ಬೇಡ ಎಂದು ಬಿಟ್ಟು ಹೋಗಿದ್ದಾರೆ ಎಂದು ವಧುವಿನ ಪೋಷಕರು ಆರೋಪಿಸಿದ್ದಾರೆ.

ವರನ ಕಡೆಯವರು ಶನಿವಾರ ಸಂಜೆಯೇ ತುಮಕೂರಿನಿಂದ ಮಂಟಪಕ್ಕೆ ಆಗಮಿಸಿದ್ದರು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ, ಎಂದು ಸಣ್ಣ ಗಲಾಟೆ ತೆಗೆದಿದ್ದಾರೆ. ನಂತರ ಈ ಮದುವೆ ಗಲಾಟೆಯು ಪೊಲೀಸ್‌ ಠಾಣೆಯ ಮೆಟ್ಟಿಲೇರಿದಾಗ, ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದಾನೆ.

ಇದೆಲ್ಲ ಘಟನೆಯಿಂದ ಬೇಸತ್ತ ವಧು ಕೂಡ ಈ ಮದುವೆಯೇ ಬೇಡ, ಈಗಲೇ ಈ ರೀತಿ ವರ್ತಿಸುವ ಗಂಡು ನನಗೂ ಬೇಡಪ್ಪಾ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ ಗುರು ಹಿರಿಯರೆಲ್ಲರೂ ಸೇರಿ ನಿಶ್ಚಯಿಸಿದ ವಿವಾಹ ಕಾರ್ಯವು ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿದ್ದಿದೆ.

ಇದನ್ನೂ ಓದಿ: 12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Female foeticide
ಪ್ರಮುಖ ಸುದ್ದಿ3 mins ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ7 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್7 mins ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ12 mins ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

IPL 2024
ಪ್ರಮುಖ ಸುದ್ದಿ12 mins ago

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

couple came to Gangavathi from Dubai to vote
ಕರ್ನಾಟಕ16 mins ago

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election-2024
ದೇಶ20 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು37 mins ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Jasprit Bumrah
ಪ್ರಮುಖ ಸುದ್ದಿ37 mins ago

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Chinese Scientists
ವಿಜ್ಞಾನ44 mins ago

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ7 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ23 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

ಟ್ರೆಂಡಿಂಗ್‌