Viral video | ಹಗ್ಗದ ಸಹಾಯವಿಲ್ಲದೆ 122 ಮೀಟರ್‌ ಎತ್ತರದ ಕಟ್ಟಡವೇರಿದ ಸಾಹಸಿ! - Vistara News

ವೈರಲ್ ನ್ಯೂಸ್

Viral video | ಹಗ್ಗದ ಸಹಾಯವಿಲ್ಲದೆ 122 ಮೀಟರ್‌ ಎತ್ತರದ ಕಟ್ಟಡವೇರಿದ ಸಾಹಸಿ!

ಫ್ರೆಂಚ್‌ ಸಾಹಸಿ ಆರೋಹಿ (ಕ್ಲೈಂಬರ್)‌ ಆಲೆಕ್ಸಿಸ್‌ ಲ್ಯಾಂಡೋಟ್‌ ಎಂಬವರು ೨೨ ಮೀಟರ್‌ ಎತ್ತರದ ಕಟ್ಟಡವನ್ನು ಯಾವುದೇ ಹಗ್ಗ ಅಥವಾ ಯಾವುದೇ ಪರಿಕರಗಳ ಸಹಾಯವೂ ಇಲ್ಲದೆ ಏರಿದ್ದು ಮೈನವಿರೇಳಿಸುವ ಸಾಹಸದ ದೃಶ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

VISTARANEWS.COM


on

viral video climber
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವೊಂದು ಸಾಹಸೀ ದೃಶ್ಯಗಳು ಸಿನಿಮಾದಲ್ಲಿ ಹೇಗೆ ಸೀಟಿನ ತುದಿಗೆ ನಮ್ಮನ್ನು ತಂದು ನಿಲ್ಲಿಸುತ್ತವೆಯೋ, ಹಾಗೆಯೇ ನಿಜ ಜೀವನದಲ್ಲೂ. ಇಲ್ಲೊಬ್ಬ ಫ್ರೆಂಚ್‌ ಸಾಹಸಿ ಆರೋಹಿ (ಕ್ಲೈಂಬರ್)‌ ಆಲೆಕ್ಸಿಸ್‌ ಲ್ಯಾಂಡೋಟ್‌ ಎಂಬವರು ೨೨ ಮೀಟರ್‌ ಎತ್ತರದ ಕಟ್ಟಡವನ್ನು ಯಾವುದೇ ಹಗ್ಗ ಅಥವಾ ಯಾವುದೇ ಪರಿಕರಗಳ ಸಹಾಯವೂ ಇಲ್ಲದೆ ಏರಿದ್ದು ಮೈನವಿರೇಳಿಸುವ ಸಾಹಸದ ದೃಶ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

೨೨ ವರ್ಷದ ಲ್ಯಾಂಡೋಟ್‌ ವಿಶ್ವದ ಕೆಲವೇ ಕೆಲವು ಫ್ರೀ ಸೋಲೋ ಕ್ಲೈಂಬರ್‌ಗಳಲ್ಲಿ ಒಬ್ಬರಾಗಿದ್ದು, ಇವರು ಯಾವುದೇ ಪರಿಕರ ಹಾಗೂ ಹಗ್ಗದ ಸಹಾಯವಿಲ್ಲದೆ ಎತ್ತರದ ಬಹುಮಹಡಿ ಕಟ್ಟಡಗಳನ್ನು ಏರುವ ಸಾಹಸ ಮಾಡುತ್ತಾರೆ. ಇದೂ ಅಂತಹ ಸಾಹಸಗಳಲ್ಲಿ ಇನ್ನೊಂದಾಗಿದೆ.

ಈ ಹಿಂದೆಯೂ ಹಲವು ವಿಶ್ವವಿಖ್ಯಾತ ಬಹುಮಹಡಿ ಕಟ್ಟಡಗಳನ್ನು ಏರಿರುವ ಸಾಹಸ ಮಾಡಿರುವ ಲ್ಯಾಂಡೋಟ್‌ ಈ ಬಾರಿಯೂ ಮತ್ತೆ ಅಂಥದ್ದೊಂದು ಸಾಹಸ ಮಾಡಿದ್ದು ಇದರ ವಿಡಿಯೋ ಮೈನವಿರೇಳಿಸುವಂತಿದೆ. ಇದರ ವಿಡಿಯೋ ಪೋಸ್ಟ್‌ ಮಾಡುವ ಜೊತೆಗೆ ʻಮಿಷನ್‌ ಇಂಪಾಸಿಬಲ್‌ ಇನ್‌ ರಿಯಲ್‌ ಲೈಫ್‌ʼ ಎಂದು ಪೋಸ್ಟ್‌ ಮಾಡಿ ಟಾಮ್‌ ಕ್ರೂಸ್‌ಗೆ ಚಾಲೆಂಜ್‌ ಹಾಕಿದ್ದಾರೆ. ಇದರ ಜೊತೆಗೆ, ʻತಮಾಷೆ ಸೈಡಿಗಿರಲಿ, ಇದೊಂದು ಅತ್ಯದ್ಭುತ ಅನುಭವ. ಸ್ವಲ್ಪ ಚಳಿಯಿದ್ದುದು ಒಳ್ಳೆಯದಾಯಿತು, ಇದೇ ನನ್ನ ಮಿಷನ್‌ಗೆ ಸಹಾಯ ಕೂಡಾ ಮಾಡಿತುʼ ಎಂದವರು ಬರೆದುಕೊಂಡಿದ್ದಾರೆ.

ಈ ವಿಡಿಯೋ ಆರು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಮೋಡಿ ಮಾಡಿದ್ದು, ಬಹಳಷ್ಟು ಮಂದಿ ʻದಯವಿಟ್ಟು ಇದನ್ನು ಮಾಡಬೇಡಿʼ ಎಂದು ಆತನಿಗೆ ಬುದ್ಧಿ ಹೇಳಿದ್ದಾರೆ. ʻಈ ಕೌಶಲ್ಯದಲ್ಲಿ ನೀವು ಎಷ್ಟೇ ಪಕ್ವವಿದ್ದರೂ, ಎಷ್ಟೇ ಅನುಭವ ಇದ್ದರೂ ಒಂದೇ ಒಂದು ಸಣ್ಣ ತಪ್ಪು ಹೆಜ್ಜೆ ಕೂಡಾ ನಿಮ್ಮ ಬದುಕನ್ನೇ ಕಸಿದುಕೊಳ್ಳಬಹುದು. ದಯವಿಟ್ಟು ಇಂತಹ ಸಾಹಸ ಮಾಡಬೇಡಿ. ಬದುಕು ಬಹಳ ದೊಡ್ಡದು ಹಾಗೂ ಮೌಲ್ಯಯುತವಾದದ್ದು. ಇಂತಹ ಮೂರ್ಖತನದ ಕೆಲಸಗಳನ್ನು ಮಾಡಿ ಇದಕ್ಕಿಂತ ಹೆಚ್ಚು ದೊಡ್ಡದಿರುವ, ಅಮೂಲ್ಯವಾದ ಬದುಕನ್ನು ಕಳೆದುಕೊಳ್ಳದಿರಿ. ಸಾಮಾಜಿಕ ಜಾಲತಾಣಗಳಲ್ಲಿ ಸಿಗುವ ಮನ್ನಣೆ, ಲಕ್ಷಲಕ್ಷ ಜನರ ವೀಕ್ಷಣೆ ಎಲ್ಲವೂ ಕ್ಷಣಿಕ. ನಮ್ಮ ಬದುಕು ಇವೆಲ್ಲವುಗಳನ್ನು ಮೀರಿದ್ದು. ಹಾಗಾಗಿ ದಯವಿಟ್ಟು ಇಂಥದ್ದನ್ನು ನಿಲ್ಲಿಸಿʼ ಎಂದು ಕೆಲವರು ಹೃದಯದಿಂದ ಆತನ ಒಳ್ಳೆಯದನ್ನು ಬಯಸಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ | Viral video | ಹಿಮ ಸುರಿಯುವುದನ್ನು ಮೊದಲ ಬಾರಿ ನೋಡಿ ಹುಚ್ಚೆದ್ದು ಕುಣಿದ ಒಂಟೆ!

ವೀಕ್ಷಕರೊಬ್ಬರು, ʻಯಾಕೆ ಇದೆಲ್ಲ?ʼ ಎಂದು ಆತನಿಗೆ ಪ್ರಶ್ನೆ ಮಾಡಿದ್ದು ಅದಕ್ಕೆ ಲ್ಯಾಂಡೋಟ್‌, ʻಇದು ನನ್ನ ಅಭಿರುಚಿ, ಹವ್ಯಾಸʼ ಎಂದು ಉತ್ತರಿಸಿದ್ದಾರೆ.

ಇದಕ್ಕೆ ಇನ್ನೊಬ್ಬರು, ʻನಿಮಗಿದು ಹವ್ಯಾಸವಾಗಿದ್ದರೆ, ದಯವಿಟ್ಟು ಇಂಥ ಹವ್ಯಾಸಗಳನ್ನು ಬಿಟ್ಟು ಬೇರೆ ಹವ್ಯಾಸಗಳನ್ನು ಹುಡುಕಿಕೊಳ್ಳಿ. ನಿಮ್ಮ ಮೇಲೆ ಗೌರವದಿಂದ ಹೇಳುತ್ತಿದ್ದೇನೆ. ನಮಗೆ ಈ ವಿಡಿಯೋ ನೋಡಲು ಯಾವುದೇ ಮಜಾ ಬರುತ್ತಿಲ್ಲ. ಅತೀವ ಸಂಕಟವಾಗುತ್ತಿದೆ. ಇನ್ನು ನಿಮ್ಮ ಹೆತ್ತವರ ಹೃದಯ ಹೇಗಾಗಿರಬಹುದು ಯೋಚಿಸಿಕೊಂಡೇ ನಮ್ಮ ಕೈಕಾಲು ನಡುಗುತ್ತದೆ. ನಿಮ್ಮನ್ನು ಪ್ರೀತಿಸುವವರು ನಿಮ್ಮ ಇಂತಹ ವಿಡಿಯೋ ನೋಡಿದರೆ ಎಂಬುದನ್ನು ಯೋಚಿಸಲು ನಮಗೇ ಭಯವಾಗುತ್ತಿದೆ. ಇನ್ನು ಅವರ ಪರಿಸ್ಥಿತಿ ಹೇಗಿರಬಹುದು. ಇದು ಖಂಡಿತವಾಗಿಯೂ ಖುಷಿಯನ್ನು ನಮಗೆ ಹಂಚುತ್ತಿಲ್ಲ. ನಿಮಗೆ ದೇವರು ಒಳ್ಳೆಯದು ಮಾಡಲಿʼ ಎಂದು ಪ್ರತಿಕ್ರಿಯೆ ಬರೆದಿದ್ದಾರೆ.

ʻಇದು ನಿಮ್ಮ ಹವ್ಯಾಸ ಆಗಿರಬಹುದು. ಆದರೆ, ಯಾಕೆ ಇಂತಹ ಹವ್ಯಾಸ? ಇದೆಲ್ಲ ಬೇಕಾ? ಇಂತಹ ಡೇಂಜರಸ್‌ ಹವ್ಯಾಸಗಳನ್ನೆಲ್ಲ ಇಟ್ಕೋಬೇಡ್ರಪ್ಪಾ. ಹುಷಾರುʼ ಎಂದೂ ಒಬ್ಬಾತ ಕಾಮೆಂಟಿಸಿದ್ದಾರೆ.

ಇದನ್ನೂ ಓದಿ | Viral News | ರೊಮೇನಿಯಾದ ಹೊಸ ಯೋಜನೆ: ಇಪ್ಪತ್ತು ಬಸ್ಕಿ ತೆಗೆದರೆ ಉಚಿತ ಬಸ್‌ ಟಿಕೆಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Video Viral: ಮಹಿಳೆಯೊಬ್ಬಳು ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Latest

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Viral Video: ಹೆಣ್ಣುಮಕ್ಕಳ ಮದುವೆಯನ್ನು ಕಣ್ತುಂಬಿಸಿಕೊಳ್ಳಬೇಕು ಎಂಬ ಆಸೆ ಎಲ್ಲಾ ತಂದೆಯರಿಗಿರುತ್ತದೆ. ಆದರೆ ಆ ಸಂದರ್ಭದಲ್ಲಿ ಆರೋಗ್ಯ ಕೈ ಕೊಟ್ಟರೆ ಆ ತಂದೆಯ ಪರಿಸ್ಥಿತಿ ಹೇಗಿರಬೇಡ? ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಇನ್ನೇನು ಕೆಲವೇ ದಿನಗಳಲ್ಲಿ ಹೆಣ್ಣುಮಕ್ಕಳ ಮದುವೆ ಇದೆಯೆನ್ನುವಾಗ ತಂದೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಎದುರಾಗಿ ಐಸಿಯುಗೆ ದಾಖಲಾದರು. ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಗಿದೆ.

VISTARANEWS.COM


on

Viral Video
Koo

ಲಕ್ನೋ : ಆಸ್ಪತ್ರೆಗೆ ಎಲ್ಲರೂ ಅನಾರೋಗ್ಯಕ್ಕೆ ಚಿಕಿತ್ಸೆಗೆಂದು ಹೋಗುತ್ತಾರೆ. ಆದರೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ಬಂದ ರೋಗಿಯ ಹೆಣ್ಣು ಮಕ್ಕಳಿಗೆ ಐಸಿಯುನಲ್ಲಿ ಮದುವೆ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ಉತ್ತರ ಪ್ರದೇಶದ ಲಕ್ನೋದ ಎರಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಲಕ್ನೋ ನಿವಾಸಿಯಾದ ಮೊಹಮ್ಮದ್ ಇಕ್ಬಾಲ್ (51) ಅವರು ದಾಖಲಾಗಿದ್ದರು. ಆದರೆ ಇನ್ನೂ ಕೆಲವೇ ದಿನಗಳಲ್ಲಿ ಅವರ ಹೆಣ್ಣುಮಕ್ಕಳ ಮದುವೆ ಇತ್ತು. ಇಕ್ಬಾಲ್ ಅವರು ತೀವ್ರ ಎದೆ ನೋವಿನಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಯಿತು!

ಇಕ್ಬಾಲ್ ಸಂಬಂಧಿಕರು ಆತ ಇಲ್ಲದೇ ಮಕ್ಕಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಇಕ್ಬಾಲ್ ಮದುವೆಗೆ ಬರಲು ಸಾಧ್ಯವಾಗದ ಕಾರಣ ಆಸ್ಪತ್ರೆಯಲ್ಲಿಯೇ ಸರಳವಾಗಿ ಮದುವೆಯಾಗಲು ಅವಕಾಶ ನೀಡುವಂತೆ ವೈದ್ಯರ ಬಳಿ ಮನವಿ ಮಾಡಿದ್ದರು. ಸಾಕಷ್ಟು ಚರ್ಚೆಯ ಬಳಿಕ ವೈದ್ಯರು ಮದುವೆಗೆ ಅನುಮತಿ ನೀಡಿದ ಕಾರಣ ಅವರ ಮಕ್ಕಳ ಮದುವೆ ಅವರ ಕಣ್ಣುಮುಂದೆಯೇ ನಡೆದಿದೆ. ಇಕ್ಬಾಲ್ ಮೊದಲ ಮಗಳು ಐಸಿಯುನಲ್ಲಿ ಗುರುವಾರ ಮದುವೆಯಾದರೆ, ಅವರ ಎರಡನೇ ಮಗಳು ಮರುದಿನ ಮದುವೆಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗೇ ಈ ಅದ್ಭುತ ಕ್ಷಣವನ್ನು ಆಸ್ಪತ್ರೆಯಲ್ಲಿ ನಡೆಸುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಮತ್ತು ಆಡಳಿತ ವರ್ಗ, ಇತರರ ರೋಗಗಳಿಗೆ ಸಮಸ್ಯೆಯಾಗುವುದನ್ನು ತಡೆಯಲು ವಿಶೇಷ ವ್ಯವಸ್ಥೆಯನ್ನು ಮಾಡಿದ್ದಾರೆ. ಮತ್ತು ಮಾನವೀಯತೆಯಿಂದ ಈ ಮದುವೆಗೆ ಐದು ಜನರಿಗೆ ಭಾಗವಹಿಸಲು ಅವಕಾಶ ನೀಡಿದ್ದರು ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ ಇಕ್ಬಾಲ್ ಮಕ್ಕಳ ಮದುವೆ ಜೂನ್ 22ರಂದು ಮುಂಬೈನಲ್ಲಿ ನಿಗದಿಯಾಗಿತ್ತು.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

“ನಮ್ಮ ತಂದೆ ನಮ್ಮ ಜಗತ್ತು. ಮತ್ತು ಅವರ ಆಶೀರ್ವಾದವಿಲ್ಲದೆ ಮದುವೆಯಾಗಲು ನಮಗೆ ಇಷ್ಟವಿಲ್ಲ. ಇದಕ್ಕೆ ಅವಕಾಶ ಮಾಡಿಕೊಟ್ಟ ಆಸ್ಪತ್ರೆಯ ಆಡಳಿತ ವರ್ಗಕ್ಕೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮ ತಂದೆ ವೆಂಟಿಲೇಟರ್ ಸಹಾಯದಿಂದ ಪ್ರಜ್ಞೆಯಲ್ಲಿದ್ದರು. ನಮ್ಮ ಮದುವೆ ನೋಡಿ ಅವರ ಕಣ್ಣು ತೃಪ್ತಿಯಿಂದ ತುಂಬಿದವು” ಎಂದು ಇಕ್ಬಾಲ್ ಮಕ್ಕಳು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಈ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದರೂ ಪತ್ನಿಗೆ ಕಾಣಿಸಿವೆ. ಇದರಿಂದಾಗಿ ಕಂಪನಿ ವಿರುದ್ಧವೇ ಉದ್ಯಮಿಯು ಮೊಕದ್ದಮೆ ಹೂಡಿದ್ದಾನೆ.

VISTARANEWS.COM


on

Sex Worker
Koo

ಲಂಡನ್:‌ ಸುರಕ್ಷತೆಯ ದೃಷ್ಟಿಯಿಂದ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಜನ ಹೆಚ್ಚಿನ ದುಡ್ಡು ಕೊಟ್ಟು ಖರೀದಿಸುತ್ತಾರೆ. ಐಫೋನ್‌ ಹಾಗೂ ಐಮ್ಯಾಕ್‌ಗಳನ್ನು ಇದೇ ಕಾರಣಕ್ಕಾಗಿ ಖರೀದಿಸುತ್ತಾರೆ. ಆದರೆ, ಲಂಡನ್‌ನಲ್ಲಿ ವ್ಯಕ್ತಿಯೊಬ್ಬ ಸುರಕ್ಷತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಆ್ಯಪಲ್‌ ಕಂಪನಿ (Apple Company) ವಿರುದ್ಧವೇ ಮೊಕದ್ದಮೆ ಹೂಡಿದ್ದಾನೆ. ವ್ಯಕ್ತಿಯೊಬ್ಬ ಐಮ್ಯಾಕ್‌ನಲ್ಲಿ ಲೈಂಗಿಕ ಕಾರ್ಯಕರ್ತೆ (Sex Worker) ಜತೆ ಚಾಟ್‌ ಮಾಡಿದ್ದು, ಆ ಮೆಸೇಜ್‌ಗಳನ್ನು ಬಳಿಕ ಡಿಲೀಟ್‌ ಮಾಡಿದ್ದಾನೆ. ಆದರೆ, ಪರ್ಮನೆಂಟ್‌ ಆದ ಮೆಸೇಜ್‌ಗಳು ಹೆಂಡತಿಗೆ ಕಾಣಿಸಿದ ಕಾರಣ ವ್ಯಕ್ತಿಯು ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಐಮ್ಯಾಕ್‌ನಲ್ಲಿ ಕಳುಹಿಸಿದ ಮೆಸೇಜ್‌ಗಳನ್ನು ಆತ ತನ್ನ ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದಾನೆ. ಪರ್ಮನೆಂಟ್‌ ಆಗಿ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದ್ದಾನೆ. ಆದರೂ, ಈ ಮೆಸೇಜ್‌ಗಳನ್ನು ಪತ್ನಿಯು ಪತ್ತೆಹಚ್ಚಿದ್ದಾರೆ. ಇದು ಉದ್ಯಮಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

Hiring to Apple

ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ

ಪತಿಯು ರೆಡ್‌ಲೈಟ್‌ ಏರಿಯಾದ ಲಲನೆಯರ ಜತೆ ‘ಸರಸ’ದ ಮೆಸೇಜ್‌ಗಳನ್ನು ಮಾಡಿರುವುದು ಪತ್ತೆ ಹಚ್ಚಿದ ಪತ್ನಿಯು ಈಗ ವಿಚ್ಛೇದನ ಅರ್ಜಿ ಹಾಕಿದ್ದಾರೆ. ಅಷ್ಟೇ ಅಲ್ಲ, ಸುಮಾರು 52 ಕೋಟಿ ರೂ. (50 ಲಕ್ಷ ಪೌಂಡ್ಸ್)‌ ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಮೊರೆಹೋಗಿದ್ದಾರೆ. ಇದು ಈಗ ಹೆಸರು ಹೇಳಲು ಇಚ್ಛಿಸದ ಉದ್ಯಮಿಗೆ ಪೇಚಾಟ ತಂದಿದೆ. ಹೆಂಡತಿ ಇದ್ದರೂ ಬೇರೆ ಹೆಣ್ಣುಮಕ್ಕಳ ಜತೆ ಚಾಟ್‌ ಮಾಡಿದ್ದರಿಂದ ಕುಟುಂಬಸ್ಥರು ಹಾಗೂ ಗೆಳೆಯರ ಎದುರು ಅವಮಾನ ಆಗಿದೆ. ಇದರ ಮಧ್ಯೆಯೇ ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆ್ಯಪಲ್‌ ವಿರುದ್ಧ ಕೇಸ್‌ ಏಕೆ?

ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳನ್ನು ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದರಿಂದ ಉದ್ಯಮಿಯ ಪತ್ನಿಗೆ ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳು ಸಿಕ್ಕಿವೆ. ಹಾಗಾಗಿ, “ಲಿಂಕ್‌ ಆದ ಡಿವೈಸ್‌ಗಳ ಮೂಲಕ ಕಳುಹಿಸಿದ ಮೆಸೇಜ್‌ಗಳನ್ನು ಎಲ್ಲ ಕಡೆಯೂ ಡಿಲೀಟ್‌ ಮಾಡಬೇಕು ಎಂಬುದರ ಕುರಿತು ಆ್ಯಪಲ್‌ ಕಂಪನಿಯು ಗ್ರಾಹಕರಿಗೆ ಮಾಹಿತಿ ನೀಡಿಲ್ಲ. ಇದರಿಂದ ನಾನೀಗ ನನ್ನ ಪತ್ನಿ, ಅಪಾರ ಪ್ರಮಾಣದ ಹಣ ಕಳೆದುಕೊಳ್ಳುವಂತಾಗಿದೆ” ಎಂದು ಉದ್ಯಮಿಯು ಕೋರ್ಟ್‌ ಮೊರೆ ಹೋಗಿದ್ದಾನೆ.

ಇದನ್ನೂ ಓದಿ: Murder Case : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ ಕಟ್ಟಿದಳು ಹೆಂಡತಿ

Continue Reading

Latest

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Viral Video: ಕಟ್ಟಿಕೊಂಡ ಗಂಡನ ಜೊತೆ ಈಗ ಬಾಳ್ವೆ ನಡೆಸುವುದೇ ಕಷ್ಟವಾಗಿರುವ ಈ ದಿನಗಳಲ್ಲಿ ಇಲ್ಲೊಬ್ಬಳು ಯುವತಿ ಏಳು ಮಂದಿ ಪುರುಷರ ಜೊತೆ ಸುಖವಾಗಿ ಇದ್ದೇನೆ ಎಂದು ಹೇಳುವ ಮೂಲಕ ಎಲ್ಲರ ಗಮನವನ್ನು ತನ್ನತ್ತ ಸೆಳೆದುಕೊಂಡಿದ್ದಾಳೆ. ಪ್ರೀತಿಸಿದ ಯುವಕ ದೂರಾದ ಬಳಿಕ ಈಕೆ ಸಂಬಂಧ ಬೆಳೆಸಿದ್ದು ವಯಸ್ಸಾದ ಪುರುಷರ ಜೊತೆಯಂತೆ. ಇನ್ನು ಈ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಕೇಳಿದ್ರೆ ನೀವು ಶಾಕ್‌ ಆಗ್ತೀರಿ!

VISTARANEWS.COM


on

Viral Video
Koo

ಕೊಲಂಬಿಯಾ : ತಾಳಿ ಕಟ್ಟಿಸಿಕೊಂಡ ಒಬ್ಬನ ಜೊತೆ ಸರಿಯಾಗಿ ಬಾಳ್ವೆ ನಡೆಸದೇ ಮದುವೆಯಾಗಿ ಮಾರನೇ ದಿನಕ್ಕೆ ವಿಚ್ಛೇದನ ನೀಡುವ ಹೆಣ್ಣಿನ ಬಗ್ಗೆ, ಮನೆಯಲ್ಲಿ ಹೆಂಡತಿಯಿದ್ದರೂ, ಹೊರಗಡೆ ಸಂಬಂಧ ಇಟ್ಟುಕೊಂಡ ಗಂಡಸಿನ ಬಗ್ಗೆ ಕೇಳಿರುತ್ತೇವೆ, ನೋಡಿರುತ್ತೇವೆ. ಇನ್ನು ನಮ್ಮ ಪುರಾಣದ ಪುಟ ತಿರುವಿ ಹಾಕಿದರೆ ಮಹಾಭಾರತದಲ್ಲಿ ದ್ರೌಪದಿಗೆ ಐದು ಮಂದಿ ಪತಿಯರಿರುವುದನ್ನೂ ಕೇಳಿರುತ್ತೇವೆ. ಆದರೆ ಕಲಿಯುಗದ ಈ ಮಹಿಳೆಯೊಬ್ಬಳು 7 ಮಂದಿ ಪುರುಷರ ಜೊತೆ ಸುಖವಾಗಿ ಕಾಲ ಕಳೆಯುತ್ತಿರುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ (Viral Video) ಆಗಿದ್ದು, ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ವರದಿಯ ಪ್ರಕಾರ ಲೀನಾ ಎಂಬ ಮಹಿಳೆ ಕೊಲಂಬಿಯಾದ ಬ್ಯಾರನ್ ಕ್ವಿಲ್ಲಾ ನಗರದಲ್ಲಿ ವಾಸವಾಗಿದ್ದಳು. ಆಕೆಗೆ 7 ಮಂದಿ ಗೆಳೆಯರಿದ್ದು, ಎಲ್ಲರೂ ವಯಸ್ಸಾದ ಮುದುಕರಾಗಿದ್ದಾರೆ. ಅಲ್ಲದೇ ಅವರ ಖರ್ಚುವೆಚ್ಚವನ್ನು ಆಕೆಯೇ ನೋಡಿಕೊಳ್ಳುತ್ತಾಳೆ ಎನ್ನಲಾಗಿದೆ. ಇನ್ನು ಅವರ ಜೊತೆಗೆ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಆಕೆ ಬಿಚ್ಚಿಟ್ಟಿದ್ದಾಳೆ.

ಮಹಿಳೆಯ ಸಂದರ್ಶನದ ವಿಡಿಯೊವನ್ನು ಯೂಟ್ಯೂಬ್ ಚಾನೆಲ್‌ವೊಂದು ಪೋಸ್ಟ್ ಮಾಡಿದ್ದು, ಈ ವಿಡಿಯೊದಲ್ಲಿ ಮಹಿಳೆ ತಿಳಿಸಿದಂತೆ ಆಕೆಗೆ ತನ್ನ ಪ್ರಿಯತಮನ ಜೊತೆಗಿನ ಸಂಬಂಧದಲ್ಲಿ ಸಮಸ್ಯೆಯಾದ ಕಾರಣ ಆಕೆ ತನ್ನ ಜೀವನವನ್ನು ಸಾಗಿಸಲು ಪಿಂಚಣಿ ಹೊಂದಿರುವ ವಯಸ್ಸಾದ ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಲು ಶುರುಮಾಡಿದಳಂತೆ. ಆಕೆ ಮೊದಲು ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳಂತೆ. ಆದರೆ ಅವರ ನಡುವೆ ಸಮಸ್ಯೆ ಉಂಟಾದ ಕಾರಣ ಇಬ್ಬರೂ ದೂರವಾದರು. ಹೀಗಿರುವಾಗ ಒಂದು ದಿನ ಆಕೆಯ ಪಕ್ಕದ ಮನೆಯ ವಯಸ್ಸಾದ ವ್ಯಕ್ತಿಯೊಬ್ಬ ಅವಳ ಜೊತೆ ಚೆಲ್ಲಾಟವಾಡಲು ಶುರುಮಾಡಿದನಂತೆ. ಆಕೆಗೆ ಆರ್ಥಿಕ ಸಮಸ್ಯೆ ಇರುವ ಕಾರಣ ಅವನ ಚೆಲ್ಲಾಟವನ್ನು ಸಹಿಸಿಕೊಂಡಳು. ಮುಂದೆ ಇದನ್ನೇ ದಾರಿಯಾಗಿಸಿಕೊಂಡ ಆಕೆ ಪಿಂಚಣಿ ಹಣ ಹೊಂದಿರುವ ವಯಸ್ಸಾದ ವ್ಯಕ್ತಿಯ ಜೊತೆ ಸಂಬಂಧವಿರಿಸಿಕೊಳ್ಳುವುದಕ್ಕೆ ಶುರುಮಾಡಿದ್ದಾಳೆ. ಅದಕ್ಕಾಗಿ ಅವಳು ಉದ್ಯಾನವನ ಮತ್ತು ವಯಸ್ಸಾದ ವ್ಯಕ್ತಿಗಳು ಸಮಯ ಕಳೆಯುವಂತಹ ಸ್ಥಳಗಳಿಗೆ ಭೇಟಿ ನೀಡಲು ಪ್ರಾರಂಭಿಸಿದಳು. ಹಾಗಾಗಿ ಇದೀಗ ಅವಳು 7 ಮಂದಿ ವಯಸ್ಸಾದ ಪುರುಷರ ಜೊತೆ ಸಂಬಂಧದಲ್ಲಿರುವ ಮೂಲಕ ಬಹುಪತಿತ್ವವನ್ನು ಅನುಸರಿಸುತ್ತಿದ್ದಾಳೆ.

ಇದನ್ನೂ ಓದಿ: Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

ಅಲ್ಲದೇ ಆಕೆಯ ಪ್ರಕಾರ ವಯಸ್ಸಾದ ವ್ಯಕ್ತಿಗಳ ಬಳಿ ಏನನ್ನೂ ಕೇಳಬೇಕಾಗಿಲ್ಲ, ಎಲ್ಲವನ್ನೂ ಅವರೇ ನೀಡುತ್ತಾರೆ. ಏಕೆಂದರೆ ಅವರ ವಯಸ್ಸಿನವರಿಗೆ ತನ್ನಂತಹ ಹುಡುಗಿಯು ಸಿಗುವುದಿಲ್ಲ. ಹಾಗಾಗಿ ತಾನು ಪಿಂಚಣಿ ಹೊಂದಿರುವ ಅಂತಹ ವ್ಯಕ್ತಿಯನ್ನು ಹುಡುಕಿದೆ. ಯಾಕೆಂದರೆ ಅವರು ತನ್ನನ್ನು ಸುಖವಾಗಿ ನೋಡಿಕೊಳ್ಳುತ್ತಾರೆ. ಅಂದ ಹಾಗೇ ಈಕೆಯ ಗೆಳೆಯರು ಕಾರ್ಲೋಸ್, ಸೈಮನ್, ಜೀಸಸ್, ಪಾಬ್ಲೋ, ಮ್ಯಾನುಯೆಲ್ ಹಾಗೂ ಇಬ್ಬರ ಹೆಸರನ್ನು ಬಹಿರಂಗಪಡಿಸಿಲ್ಲ. ಇವರೆಲ್ಲರೂ ಸಹ ಪಿಂಚಣಿದಾರರಾಗಿದ್ದು, ಒಬ್ಬರನೊಬ್ಬರು ಚೆನ್ನಾಗಿ ಅರಿತುಕೊಂಡಿದ್ದಾರಂತೆ. ಹಾಗೇ ಅವರು ಆಕೆಗೆ ಅಡುಗೆ ಮಾಡಲು, ಬಟ್ಟೆ ಒಗೆಯಲು, ಮನೆ ಶುಚಿ ಮಾಡುವಂತಹ ಕೆಲಸಗಳಲ್ಲಿ ಸಹಾಯ ಮಾಡುತ್ತಾರಂತೆ.

Continue Reading
Advertisement
Rahul Gandhi
ಕರ್ನಾಟಕ20 mins ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ22 mins ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ29 mins ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest47 mins ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest50 mins ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ1 hour ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ2 hours ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ2 hours ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest2 hours ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್2 hours ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು6 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌