Australian Open | ಜೊಕೋ ಆಸ್ಟ್ರೇಲಿಯಾ​ ಓಪನ್​ ಆಡುವುದು ಬಹುತೇಕ ಖಚಿತ; ಸಂತಸ ವ್ಯಕ್ತಪಡಿಸಿದ ವುಡ್‌ಬ್ರಿಡ್ಜ್! - Vistara News

ಕ್ರೀಡೆ

Australian Open | ಜೊಕೋ ಆಸ್ಟ್ರೇಲಿಯಾ​ ಓಪನ್​ ಆಡುವುದು ಬಹುತೇಕ ಖಚಿತ; ಸಂತಸ ವ್ಯಕ್ತಪಡಿಸಿದ ವುಡ್‌ಬ್ರಿಡ್ಜ್!

ನೊವಾಕ್ ಜೊಕೋವಿಕ್​ ವರ್ಷಾರಂಭದ ಮೊದಲ ಗ್ರ್ಯಾನ್ ಸ್ಲಾಮ್ ಟೆನಿಸ್​ ಟೂರ್ನಿ ಆಸ್ಟ್ರೇಲಿಯಾ ಓಪನ್​ನಲ್ಲಿ ಆಡುವುದು ಖಚಿತ ಎಂದು ತಿಳಿದುಬಂದಿದೆ.

VISTARANEWS.COM


on

Australian Open
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿ ಕಳೆದ ಆಸ್ಟ್ರೇಲಿಯಾ ಓಪನ್ ಟೆನಿಸ್(Australian Open) ಟೂರ್ನಿಯಿಂದ ಹೊರಬಿದ್ದಿದ್ದ ಸರ್ಬಿಯಾದ ನೊವಾಕ್ ಜೊಕೋವಿಕ್​​ ಈ ಬಾರಿಯ ಟೂರ್ನಿಯಲ್ಲಿ ಆಡುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸರ್ಕಾರವು ನಿಯಮ ಸಡಿಲಗೊಳಿಸಿದೆ. ಇದರಿಂದ ಜೊಕೋ ಈ ಬಾರಿ ಟೂರ್ನಿ ಆಡಲಿದ್ದಾರೆ ಎಂದು ವರದಿಯಾಗಿದೆ. ಜೊಕೋ ಆಡುವ ಕುರಿತು ಮಾತನಾಡಿದ ಮಾಜಿ ಆಟಗಾರ ಟಾಡ್ ವುಡ್‌ಬ್ರಿಡ್ಜ್, “ನೋವಾಕ್ ಆಡುವುದರಿಂದ ಆಸ್ಟ್ರೇಲಿಯಾ ಓಪನ್ ಟೂರ್ನಿಗೆ ಮತ್ತೆ ಕಳೆ ಬಂದಿದೆ. ಅವರು ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರನಾಗಿ ಈ ಬಾರಿ ಕಣಕ್ಕಿಳಿಯಲಿದ್ದಾರೆ” ಎಂದು ವುಡ್‌ಬ್ರಿಡ್ಜ್ ಹೇಳಿದ್ದಾರೆ.

ಜೊಕೋ ಇಲ್ಲಿ ಜಯಗಳಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಅವರಿಗೆ ಇಲ್ಲಿ ಆಡಲು ಅನುಮತಿ ಲಭಿಸಲಿಲ್ಲ. ಇದೀಗ ಅವರು ರಾಫೆಲ್‌ ನಡಾಲ್‌ ಅವರ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆಲುವಿನ ದಾಖಲೆಯನ್ನು ಮೀರಿ ನಿಲ್ಲುವ ಛಲದಲ್ಲಿದ್ದಾರೆ. ಆದ್ದರಿಂದ ಅವರ ಆಟ ರಂಗೇರಲಿದೆ ಎಂದು ವುಡ್‌ಬ್ರಿಡ್ಜ್ ಅಭಿಪ್ರಾಯಪಟ್ಟಿದ್ದಾರೆ. ಜನವರಿ 16ರಿಂದ ಟೂರ್ನಿ ಆರಂಭವಾಗಲಿದೆ.

ಇದನ್ನೂ ಓದಿ | Asian Cup Table Tennis | ಐತಿಹಾಸಿಕ ಪದಕ ಗೆದ್ದ ಮಣಿಕಾ ಬಾತ್ರಾ; ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Paris Olympics 2024: ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

VISTARANEWS.COM


on

Sumit Nagal
Koo

ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ ಮೂರು ವಾರಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಅರ್ಹತೆ ಪೆಡೆದಿರುವ ಕ್ರೀಡಾಪಟುಗಳು ಭರದಿಂದ ಅಭ್ಯಾಸ ನಡೆಸುತ್ತಿದ್ದಾರೆ. ಇದೀಗ ಭಾರತದ ಟೆನಿಸ್‌ ಆಟಗಾರ ಸುಮಿತ್‌ ನಗಾಲ್‌(Sumit Nagal) ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದ್ದಾರೆ.

‘2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿದ್ದೇನೆ ಎಂದು ತಿಳಿಸಲು ಸಂತಸವಾಗುತ್ತಿದೆ. ನನ್ನ ಪಾಲಿಗೆ ಇದು ಅವಿಸ್ಮರಣೀಯ ಕ್ಷಣ’ ಎಂದು ನಗಾಲ್​ ಟ್ವೀಟ್​ ಮಾಡಿ ತಮಗೆ ಒಲಿಂಪಿಕ್ಸ್​ ಅರ್ಹತೆ ಪಡೆದ ವಿಚಾರವನ್ನು ಖಚಿತಪಡಿಸಿದ್ದಾರೆ. 26 ವರ್ಷದ ನಗಾಲ್‌ ಅವರಿಗೆ ಇದು ಎರಡನೇ ಒಲಿಂಪಿಕ್‌ ಕೂಟವಾಗಿದೆ. 2020ರ ಟೋಕಿಯೊ ಟೂರ್ನಿಯಲ್ಲಿಯೂ ಅವರು ಕಣಕ್ಕಿಳಿದ್ದರು. ಅಲ್ಲಿ ಅವರು, ಅಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದರು. ಜೂನ್‌ 10ರ ವರೆಗಿನ ಐಟಿಎಫ್‌ ರ‍್ಯಾಂಕಿಂಗ್‌ ಆಧಾರದಲ್ಲಿ ನಗಾಲ್‌ ಅವರಿಗೆ ಒಲಿಂಪಿಕ್ಸ್‌ಗೆ ಅರ್ಹತೆ ದೊರಕಲಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಹೇಳಿತ್ತು. ಇದೀಗ ಅಧಿಕೃತಗೊಂಡಿದೆ.

ಟೆನಿಸ್‌ ಸ್ಪರ್ಧೆಯ ಪುರುಷರ ಡಬಲ್ಸ್​ನಲ್ಲಿ ಎನ್‌. ಶ್ರೀರಾಮ್‌ ಬಾಲಾಜಿ(N Sriram Balaji) ಅವರು ಕನ್ನಡಿಗ ರೋಹನ್‌ ಬೋಪಣ್ಣ(Rohan Bopanna) ಜತೆ ಆಡಲಿದ್ದಾರೆ. 44 ವರ್ಷದ ಬೋಪಣ್ಣ ಜನವರಿಯಲ್ಲಿ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಕಳೆದ ವಾರ ಫ್ರೆಂಚ್ ಓಪನ್‌ನಲ್ಲಿ ಸೆಮಿಫೈನಲ್ ತಲುಪಿದ್ದರು. ಬೋಪಣ್ಣ ಲಂಡನ್ 2012 ಗೇಮ್ಸ್ ಮತ್ತು ರಿಯೊ 2016 ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಕಳೆದುಕೊಂಡಿದ್ದರು.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಇದನ್ನು ಓದಿ Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಭಾರೀ ನಗದು ಪ್ರಶಸ್ತಿ ಘೋಷಣೆ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ. ಆದರೆ, 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

Continue Reading

ಪ್ರಮುಖ ಸುದ್ದಿ

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Virat Kohli: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 36 ರನ್ ಬಾರಿಸಿ ಔಟಾಗುವ ಮೊದಲು ಈ ವಿಶೇಷ ಸಾಧನೆ ಮಾಡಿದ್ದಾರೆ. ಅದೇನೆಂದರೆ ಅವರು ಐಸಿಸಿ ಆಯೋಜಿಸುವ ಸೀಮಿತ ಓವರ್​ಗಳ (ಏಕದಿನ ಹಾಗೂ ಟಿ20) ಟೂರ್ನಿಗಳಲ್ಲಿ 3500 ರನ್​ಗಳನ್ನು ಬಾರಿಸಿದ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಈ ಸಾಧನೆ ಮಾಡಿರುವುದು ಇನ್ನೂ ವಿಶೇಷ.

VISTARANEWS.COM


on

Virat kohli
Koo

ಬೆಂಗಳೂರು: ವೆಸ್ಟ್​ ಇಂಡೀಸ್​ನ ಆಂಟಿಗುವಾದಲ್ಲಿ ನಡೆದ ಟಿ20 ವಿಶ್ವ ಕಪ್​ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC Tournament) ಟೂರ್ನಮೆಂಟ್ ಗಳ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 36 ರನ್ ಬಾರಿಸಿ ಔಟಾಗುವ ಮೊದಲು ಈ ವಿಶೇಷ ಸಾಧನೆ ಮಾಡಿದ್ದಾರೆ. ಅದೇನೆಂದರೆ ಅವರು ಐಸಿಸಿ ಆಯೋಜಿಸುವ ಸೀಮಿತ ಓವರ್​ಗಳ (ಏಕದಿನ ಹಾಗೂ ಟಿ20) ಟೂರ್ನಿಗಳಲ್ಲಿ 3500 ರನ್​ಗಳನ್ನು ಬಾರಿಸಿದ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಈ ಸಾಧನೆ ಮಾಡಿರುವುದು ಇನ್ನೂ ವಿಶೇಷ.

ಹಾಲಿ ಟಿ20 ವಿಶ್ವಕಪ್ 2024ರಲ್ಲಿ ಫಾರ್ಮ್​ ಕಂಡುಕೊಳ್ಳದ ವಿರಾಟ್ ಕೊಹ್ಲಿ ಬಾಂಗ್ಲಾ ವಿರುದ್ಧ ಸಕಾರಾತ್ಮಕ ಇನ್ನಿಂಗ್ಸ್ ಆಡಿದ್ದಾರೆ. ಸೂಪರ್ 8 ಹಂತದ ಎರಡನೇ ಪಂದ್ಯದ ತಮ್ಮ ಇನ್ನಿಂಗ್ಸ್​ನಲ್ಲಿ ಕೆಲವು ಅದ್ಭುತ ಶಾಟ್​ಗಳನ್ನು ಹೊಡೆದು ರಂಜಿಸಿದ್ದಾರೆ. ಇನ್ನಿಂಗ್ಸ್ ಆರಂಭಿಸಿದ ವಿರಾಟ್​ ಬ್ಯಾಟ್ ನಿಂದ ಮಿಂಚಿದ್ದರು. ರೋಹಿತ್ ಶರ್ಮಾ ಜತೆ 39 ರನ್ ಮತ್ತು ರಿಷಭ್ ಪಂತ್ (36) ಅವರೊಂದಿಗೆ 32 ರನ್ ಗಳ ಪಾಲುದಾರಿಕೆ ನೀಡಿದ್ದಾರೆ. ಇದು ಭಾರತಕ್ಕೆಬೃಹತ್ ಮೊತ್ತ ಪೇರಿಸಲು ನೆರವಾಯಿತು.

ಐಸಿಸಿ ಟೂರ್ನಿಯಲ್ಲಿ ಅದ್ಭುತ ಆಟಗಾರ

ಕಳೆದ ಹಲವು ವರ್ಷಗಳಿಂದ ವಿರಾಟ್ ಕೊಹ್ಲಿ ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ ತಂಡಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಬೆನ್ನೆಲುಬಾಗಿದ್ದಾರೆ. ಅಂತೆಯೇ ಬಾಂಗ್ಲಾ ವಿರುದ್ಧ 28 ಎಸೆತಗಳಲ್ಲಿ 37 ರನ್ ಗಳಿಸಿದರು. ಅವರು 132 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಅವರ ಇನ್ನಿಂಗ್ಸ್​ನಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್​ಗಳು ಸೇರಿಕೊಂಡಿವೆ. ಅಂತೆಯೇ ಹಾರ್ದಿಕ್ ಪಾಂಡ್ಯ ಅವರ ಅರ್ಧಶತಕದ ನೆರವಿನಿಂದ ಭಾರತ 196 ರನ್​ಗಳ ಬೃಹತ್ ಮೊತ್ತ ಪೇರಿಸಿ, ಬಾಂಗ್ಲಾವನ್ನು 50 ರನ್​ಗಳಿಂದ ಸೋಲಿಸಿದೆ.

ಐಸಿಸಿ ಸೀಮಿತ ಓವರ್ ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ರನ್ ದಾಖಲೆ

ಐಸಿಸಿ ಸೀಮಿತ ಓವರ್​ಗಳ ಕ್ರಿಕೆಟ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಈಗ ಅಗ್ರಸ್ಥಾನದಲ್ಲಿದ್ದಾರೆ. ಅವರು ಒಟ್ಟು 3500 ರನ್ ಪೂರೈಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ 2024ರಲ್ಲಿ ರಲ್ಲಿ ಭಾರತವು ಇನ್ನೂ ಕೆಲವು ಪಂದ್ಯಗಳನ್ನು ಆಡಲಿದೆ. ಹೀಗಾಗಿ ಅವರ ರನ್​ ಗಳಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಅಂದ ಹಾಗೆ ಐಸಿಸಿ ವೈಟ್-ಬಾಲ್ ಪಂದ್ಯಾವಳಿಗಳ ಇತಿಹಾಸದಲ್ಲಿ ನಾಯಕ ರೋಹಿತ್ ಶರ್ಮಾ 3107 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

ಕ್ರಿಸ್ ಗೇಲ್ 2942 ರನ್ ಗಳಿಸಿ ಮೂರನೇ ಸ್ಥಾನ ಪಡೆದರೆ, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಮಹೇಲ ಜಯವರ್ಧನೆ ಕ್ರಮವಾಗಿ 2876 ಮತ್ತು 2858 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. ಬ್ಯಾಟಿಂಗ್ ದಂತಕತೆ ಸಚಿನ್ ತೆಂಡೂಲ್ಕರ್ (2719) ಮತ್ತು ಡೇವಿಡ್ ವಾರ್ನರ್ (2590) ಐಸಿಸಿ ಟೂರ್ನಿಗಳಲ್ಲಿ (ವೈಟ್ಬಾ ಲ್) ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಪಟ್ಟಿ ಇಲ್ಲಿದೆ

  • 3500 ರನ್​​ – ವಿರಾಟ್ ಕೊಹ್ಲಿ
  • 3107 ರನ್​​ – ರೋಹಿತ್ ಶರ್ಮಾ
  • 2942 ರನ್​​ – ಕ್ರಿಸ್ ಗೇಲ್
  • 2876 ರನ್​​ – ಕುಮಾರ ಸಂಗಕ್ಕಾರ
  • 2858 ರನ್​​ – ಮಹೇಲಾ ಜಯವರ್ಧನೆ
  • 2719 ರನ್​​- ಸಚಿನ್ ತೆಂಡೂಲ್ಕರ್
  • 2590 ರನ್​​ – ಡೇವಿಡ್ ವಾರ್ನರ್
Continue Reading

ಪ್ರಮುಖ ಸುದ್ದಿ

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

T20 World Cup 2024 : ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಆಹ್ವಾನ ಪಡೆದು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 146 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

T20 world cup 2024
Koo

ಆಂಟಿಗುವಾ: ಸಾಂಘಿಕ ಪ್ರದರ್ಶನ ನೀಡಿದ ಭಾರತ ತಂಡ ಟಿ20 ವಿಶ್ವ ಕಪ್ (T20 World Cup 2024)​ ಸೂಪರ್ 8 ಹಂತದಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ 50 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಈ ಪ್ರಮುಖ ಹಂತದಲ್ಲಿ ಸತತ ಎರಡನೇ ಗೆಲುವು ತನ್ನದಾಗಿಸಿಕೊಂಡಿದ್ದು ಸೆಮಿಫೈನಲ್ ಪ್ರವೇಶ ಬಹುತೇಕ ನಿಶ್ಚಿತವಾಗಿದೆ. ಭಾರತ ತಂಡ ಈಗ ಎ ಗುಂಪಿನ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದುಕೊಂಡಿದೆ. 27 ಎಸೆತಗಳಲ್ಲಿ ಅರ್ಧಶತಕ (50 ರನ್​) ಬಾರಿಸಿದ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ 3 ವಿಕೆಟ್​ ಕಬಳಿಸಿದ ಕುಲ್ದೀಪ್ ಯಾದವ್​ ಗೆಲುವಿನ ರೂವಾರಿಗಳೆನಿಸಿಕೊಂಡರು.

ಆಂಟಿಗುವಾದ ವಿವಿಎನ್​ ರಿಚರ್ಡ್ಸ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಆಹ್ವಾನ ಪಡೆದು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 146 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇದರೊಂದಿಗೆ ಹಾಲಿ ವಿಶ್ವ ಕಪ್​ನಲ್ಲಿ ಭಾರತ ತಂಡದ ಗೆಲುವಿನ ಅಭಿಯಾನ ಮುಂದುವರಿಯಿತು. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ಭರ್ಜರಿ ರನ್​ ಬಾರಿಸುವ ಜತೆಗೆ ಸಂಘಟಿತ ಬೌಲಿಂಗ್ ನಡೆಸಿದ ಭಾರತ ಅರ್ಹವಾಗಿ ಗೆಲುವು ದಾಖಲಿಸಿತು.

ಪಾಂಡ್ಯ ಅಬ್ಬರದ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಉತ್ತಮ ಆರಂಭವನ್ನೇ ಪಡೆಯಿತು. ರೋಹಿತ್ ಶರ್ಮಾ 11 ಎಸೆತಕ್ಕೆ 23 ರನ್ (3 ಫೋರ್​, 1 ಸಿಕ್ಸರ್​) ಬಾರಿಸಿದರೆ ವಿರಾಟ್​ ಕೊಹ್ಲಿ 27 ಎಸೆತಕ್ಕೆ 37 ರನ್ (1 ಫೋರ್​, 3 ಸಿಕ್ಸರ್​)​ ಕೊಡುಗೆ ಕೊಟ್ಟರು. ಆದರೆ, 39 ರನ್​ಗಳಿಗೆ ಮೊದಲ ವಿಕೆಟ್​ ನಷ್ಟವಾದ ಕಾರಣ ಭಾರತದ ಬ್ಯಾಟಿಂಗ್​ ಮೇಲೆ ಒತ್ತಡ ಬಿತ್ತು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್ ಪಂತ್ ಮತ್ತೊಮ್ಮೆ ಅಬ್ಬರಿಸಿ 24 ಎಸೆತಗಳಿಗೆ 36 ರನ್ ಕೊಡುಗೆ ಕೊಟ್ಟರು. ಅವರ ಇನಿಂಗ್ಸ್​​ನಲ್ಲಿ 4 ಫೋರ್ ಹಾಗೂ 2 ಸಿಕ್ಸರ್​ಗಳಿದ್ದವು. ಆದರೆ ವಿರಾಟ್ ಔಟಾದ ಬಳಿಕ ಆಡಲು ಬಂದ ಸೂರ್ಯಕುಮಾರ್ ಯಾದವ್​ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿ ಸಿಡಿಯುವ ವಿಶ್ವಾಸ ಮೂಡಿಸಿದರೂ ನಂತರದ ಎಸೆತದಲ್ಲೇ ಔಟಾದರು.

ಇದನ್ನೂ ಓದಿ: T20 World Cup 2024 : ವೆಸ್ಟ್​ ಇಂಡೀಸ್​​ನಲ್ಲಿ ಹಲಾಲ್​ ಮಾಂಸದೂಟ ಸಿಗದ್ದಕ್ಕೆ ತಾವೇ ಅಡುಗೆ ಮಾಡಿಕೊಳ್ಳುತ್ತಿರುವ ಅಫಘಾನಿಸ್ತಾನದ ಕ್ರಿಕೆಟಿಗರು !

ಒಂದು ಹಂತದಲ್ಲಿ ಭಾರತ ತಂಡ 108 ರನ್​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತು. ಈ ವೇಳೆ ಜತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ದುಬೆ 24 ಎಸೆತಕ್ಕೆ 34 ರನ್ ಗಳಿಸಿದರೆ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಮೂಲಕ 50 ರನ್​ ಕೊಡುಗೆ ಕೊಟ್ಟರು. ಇವರಿಬ್ಬರ ಆಟದಿಂದ ಭಾರತದ ಬ್ಯಾಟಿಂಗ್ ಶಕ್ತಿ ಚೇತರಿಸಿಕೊಂಡು ಬೌಲಿಂಗ್ ಸ್ನೇಹಿ ಈ ಸ್ಟೇಡಿಯಮ್​ನಲ್ಲಿ ಗೆಲುವಿನ ಮೊತ್ತನ್ನೇ ಪರಿಸಿತು.

ಕುಲ್ದೀಪ್​ ಭರ್ಜರಿ ಬೌಲಿಂಗ್​

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಬಾಂಗ್ಲಾದೇಶ ತಂಡ ಭರ್ಜರಿ ವಿಶ್ವಾಸ ವ್ಯಕ್ತಪಡಿಸಿತು. ಅದರೆ, ಭಾರತೀಯ ಬೌಲರ್​ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಹಾರ್ದಿಕ್ ಪಾಂಡ್ಯ ಆರಂಭಿಕ ಬ್ಯಾಟರ್​ ಲಿಟನ್ ದಾಸ್ ಅವರನ್ನು 13 ರನ್ ಗೆ ಔಟ್ ಮಾಡಿದರು. ಆದರೆ, ತಂಜಿದ್ ಹಸನ್​ (29 ರನ್​) ಹಾಗೂ ನಜ್ಮುಲ್ ಹೊಸೈನ್​ (40 ರನ್​) ಇನಿಂಗ್ಸ್​ ಕಟ್ಟಲು ಆರಂಭಿಸಿದರು. ಈ ವೇಳೆ ದಾಳಿಗಿಳಿದ ಕುಲ್ದೀಪ್ ಯಾದವ್​ ತಂಜಿದ್​, ತೌಹಿದ್ ಹೃದೋಯ್​ (4 ರನ್​) , ಹಾಗೂ ಶಕಿಬ್ ಅಲ್​ ಹಸನ್​ (11 ರನ್​) ವಿಕೆಟ್​ ಕಿತ್ತರು. ಈ ವೇಳೆ ಬಾಂಗ್ಲಾ ತಂಡದ ಬಲ ಕುಸಿಯಿತು. ಭಾರತದ ಬೌಲರ್​ಗಳಿಗೆ ಬೆದರಿಕೆ ಹುಟ್ಟಿಸಿದ್ದ ನಜ್ಮುಲ್ ಬುಮ್ರಾ ಎಸೆತಕ್ಕೆ ಔಟಾದರು. ಜೇಕರ್ ಅಲಿ ಅರ್ಶ್​ದೀಪ್​ಗೆ ವಿಕೆಟ್ ಒಪ್ಪಿಸಿದರು. ನಂತರದಲ್ಲಿ ಆಡಲು ಬಂದ ರಶಿದ್ ಹೊಸೈನ್​ 10 ಎಸೆತಕ್ಕೆ 24 ರನ್ ಬಾರಿಸಿ ಬುಮ್ರಾಗೆ ವಿಕೆಟ್​ ಕೊಟ್ಟರು. ಮಹಮ್ಮದುಲ್ಲಾ 13 ರನ್​ಗಳಿಗೆ ತಮ್ಮ ಆಟ ಮುಗಿಸಿದರು.

ಭಾರತ ಪರ ಕುಲ್ದೀಪ್​ 3 ವಿಕೆಟ್​, ಬುಮ್ರಾ 2 ವಿಕೆಟ್​, ಅರ್ಶ್​ದೀಪ್​ 2 ವಿಕೆಟ್ ಹಾಗೂ ಪಾಂಡ್ಯ 1 ವಿಕೆಟ್​ ತಮ್ಮದಾಗಿಸಿಕೊಂಡರು.

Continue Reading

ಪ್ರಮುಖ ಸುದ್ದಿ

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತ ವಿಕೆಟ್​ ನಷ್ಟವಿಲ್ಲದೆ 100 ರನ್​; ಭವಿಷ್ಯ ನುಡಿದ ಬ್ರಿಯಾನ್ ಲಾರಾ

T20 World Cup 2024 : ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ವೈಫಲ್ಯ ಕೊನೆಯಾಗಲಿದೆ. ಅವರು ರನ್​ ಗಳಿಸಲಿದ್ದಾರೆ ಎಂಬುದು ಲಾರಾ ಅವರ ಭವಿಷ್ಯವಾಣಿಯಾಗಿದೆ. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತ ತಂಡದ ಇಬ್ಬರು ದಿಗ್ಗಜರ ಫಾರ್ಮ್ ದೊಡ್ಡ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

T20 world cup
Koo

ಆಂಟಿಗುವಾ: ಟಿ20 ವಿಶ್ವ ಕಪ್​ನಲ್ಲಿ (T20 World Cup 2024) ಭಾರತ ತಂಡ ವಿಶ್ವಾಸದಿಂದ ಮುನ್ನುಗ್ಗುತ್ತಿದೆ. ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಜೂನ್ 22ರಂದು ಬಾಂಗ್ಲಾದೇಶ ವಿರುದ್ಧದ ಭಾರತದ (IND vs BAN) ಸೂಪರ್ 8 ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯ ಹೆಚ್ಚು ಕುತೂಹಲ ಮೂಡಿಸಿದೆ. ಭಾರತ ಗೆದ್ದರೆ ನೇರವಾಗಿ ಸೆಮಿಫೈನಲ್​ ಪ್ರವೇಶ ಮಾಡಲಿದೆ. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್​ ತಂಡದ ದಂತಕತೆ ಬ್ರಿಯಾನ್ ಲಾರಾ ಪಂದ್ಯದ ಕುರಿತು ದಿಟ್ಟ ಭವಿಷ್ಯ ನುಡಿದಿದ್ದಾರೆ. ಭಾರತವು ಯಾವುದೇ ವಿಕೆಟ್ ಕಳೆದುಕೊಳ್ಳದೆ ನೂರು ರನ್ ಗಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ವೈಫಲ್ಯ ಕೊನೆಯಾಗಲಿದೆ. ಅವರು ರನ್​ ಗಳಿಸಲಿದ್ದಾರೆ ಎಂಬುದು ಲಾರಾ ಅವರ ಭವಿಷ್ಯವಾಣಿಯಾಗಿದೆ. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತ ತಂಡದ ಇಬ್ಬರು ದಿಗ್ಗಜರ ಫಾರ್ಮ್ ದೊಡ್ಡ ಚರ್ಚೆಗೆ ಕಾರಣವಾಗಿದೆ. ಭಾರತದ ಅಜೇಯ 4 ಪಂದ್ಯಗಳ ಗೆಲುವಿನ ಹೊರತಾಗಿಯೂ, ರೋಹಿತ್ ಮತ್ತು ಕೊಹ್ಲಿ ಇನ್ನೂ ಬ್ಯಾಟಿಂಗ್​ನಲ್ಲಿ ಮಿಂಚಿಲ್ಲ ಎಂಬುದೇ ಚಿಂತೆಯಾಗಿದೆ.

ರೋಹಿತ್ ನಾಲ್ಕು ಇನ್ನಿಂಗ್ಸ್​​ಗಳಲ್ಲಿ 111.76 ಸ್ಟ್ರೈಕ್ ರೇಟ್​ನಲ್ಲಿ 19.00 ಸರಾಸರಿಯಲ್ಲಿ ಕೇವಲ 76 ರನ್ ಗಳಿಸಿದ್ದರೆ, ಕೊಹ್ಲಿ 7.25 ಸರಾಸರಿಯಲ್ಲಿ 29 ರನ್ ಗಳಿಸಿದ್ದಾರೆ. ಆದಾಗ್ಯೂ ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ ಅವರಂಥ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಮತ್ತು ಬೌಲರ್​​ಗಳ ಸಾಂಘಿಕ ಪ್ರಯತ್ನದೊಂದಿಗೆ ಗೆಲುವು ಕಾಣುತ್ತಿದೆ.

ಇದನ್ನೂ ಓದಿ: T20 World Cup 2024 : ವೆಸ್ಟ್​ ಇಂಡೀಸ್​​ನಲ್ಲಿ ಹಲಾಲ್​ ಮಾಂಸದೂಟ ಸಿಗದ್ದಕ್ಕೆ ತಾವೇ ಅಡುಗೆ ಮಾಡಿಕೊಳ್ಳುತ್ತಿರುವ ಅಫಘಾನಿಸ್ತಾನದ ಕ್ರಿಕೆಟಿಗರು !

ಪಂದ್ಯಾವಳಿಯ ಸೆಮಿಫೈನಲ್ ಕಡೆಗೆ ಭಾರತ ತಂಡ ಮುನ್ನುಗ್ಗುತ್ತಿರುವ ರೀತಿಗೆ ಲಾರಾ ಪ್ರಭಾವಿತರಾಗಿದ್ದಾರೆ. ಬಾಂಗ್ಲಾದೇಶವು ಭಾರತಕ್ಕೆ ಸೆಡ್ಡು ಹೊಡೆಯಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ, ಕೊಹ್ಲಿ ಮತ್ತು ರೋಹಿತ್ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಬಗ್ಗೆ ಜಾಗರೂಕರಾಗಿರುವುದು ಉತ್ತಮ ಎಂದು ಸಲಹೆ ಕೊಟ್ಟಿದ್ದಾರೆ.

ಸೂಪರ್​ 8 ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿದರೆ ವಿಕೆಟ್ ನಷ್ಟವಿಲ್ಲದೆ 100 ರನ್ ಗಳಿಸುವುದು ಖಚಿತ. ಅವರು 2ನೇ ಬ್ಯಾಟಿಂಗ್ ಮಾಡಿದರೂ 100 ರನ್ ಗಳಿಸಲಿದ್ದಾರೆ. ಭಾರತ ತಂಡ ತುಂಬಾ ಬಲಿಷ್ಠವಾಗಿದೆ. ಈ ಸಮಯದಲ್ಲಿ ಪ್ರತಿ ತಂಡವನ್ನು ಸೋಲಿಸುತ್ತಿದ್ದಾರೆ. ಆದರೆ ಆರಂಭಿಕ ಪಾಲುದಾರಿಕೆ ಬಗ್ಗೆ ಭಾರತವು ತುಂಬಾ ಕಾಳಜಿಯಾಗಿದೆ. ಆದರೆ ಬಾಂಗ್ಲಾದೇಶವು ಬೆದರಿಕೆಯಾಗುವುದಿಲ್ಲ, “ಎಂದು ಲಾರಾ ಹೇಳಿದ್ದಾರೆ.

ರೋಹಿತ್ ಹಲವು ವರ್ಷಗಳಿಂದ ಎಡಗೈ ಬೌಲರ್​ಗಳ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ್ದಾರೆ. ಟಿ 20 ವಿಶ್ವಕಪ್ 2024 ರಲ್ಲಿ ಎಡಗೈ ವೇಗದ ಬೌಲರ್ ವಿರುದ್ಧ ಆರಂಭಿಕ ಬ್ಯಾಟರ್​​ ಎಲ್ಲಾ 4 ಬಾರಿ ಔಟ್ ಆಗಿದ್ದಾರೆ. ಈ ಬಾರಿ ಬಾಂಗ್ಲಾದೇಶ ವಿರುದ್ಧದ ಸವಾಲನ್ನು ಜಯಿಸಲು ಎದುರು ನೋಡುತ್ತಿದ್ದಾರೆ.

ಫಾರ್ಮ್​​ ಮರಳುತ್ತಾರಾ ರೋಹಿತ್-ಕೊಹ್ಲಿ ಜೋಡಿ

ವಿರಾಟ್​ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಫಾರ್ಮ್ ಭಾರತಕ್ಕೆ ಆತಂಕಕಾರಿಯಾಗಬಾರದು ಎಂದು ಲಾರಾ ಅಭಿಪ್ರಾಯಪಟ್ಟಿದ್ದಾರೆ. ಬಾಂಗ್ಲಾದೇಶದ ವಿರುದ್ಧ ರನ್ ಗಳಿಸಲು ಆರಂಭಿಕ ಜೋಡಿಯನ್ನು ಬೆಂಬಲಿಸಿದ್ದಾರೆ.

ಭಾರತ ತಂಡವು ಉತ್ತಮ ಆರಂಭಿಕ ಜತೆಯಾಟವನ್ನು ನಿರೀಕ್ಷಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಎಲ್ಲವೂ ಸರಿಯಾಗಿಯೇ ನಡೆಯುತ್ತಿದೆ. ಈ ವಿಶ್ವಕಪ್​​ನಲ್ಲಿ ಪಿಚ್​ಗಳ ಸ್ಥಿತಿಯಿಂದಾಗಿ ಯಾವುದೇ ತಂಡವು ಹೆಚ್ಚು ಪ್ರಾಬಲ್ಯ ಹೊಂದಿಲ್ಲ. ಭಾರತವು ಆರಂಭಿಕ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾದರೆ ಭಾರತವೇ ಉತ್ತಮ ತಂಡ ಎಂದು ಹೇಳಿದ್ದಾರೆ.

Continue Reading
Advertisement
Sumit Nagal
ಕ್ರೀಡೆ41 seconds ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ17 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಪ್ರಜ್ವಲ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್25 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ46 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ1 hour ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ3 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌