ಹೊಸ ಪುಸ್ತಕ | ಕಾದಂಬರಿ ವಿಮರ್ಶೆ | ಕಳೆದುಹೋದ ಮೌಲ್ಯಗಳನ್ನು ಹುಡುಕುತ್ತಾ ಸಾಗುವ ಕಥಾನಕ ʼಅಬ್ಬೆʼ - Vistara News

ಕಲೆ/ಸಾಹಿತ್ಯ

ಹೊಸ ಪುಸ್ತಕ | ಕಾದಂಬರಿ ವಿಮರ್ಶೆ | ಕಳೆದುಹೋದ ಮೌಲ್ಯಗಳನ್ನು ಹುಡುಕುತ್ತಾ ಸಾಗುವ ಕಥಾನಕ ʼಅಬ್ಬೆʼ

ಅಬ್ಬೆ ಎಂದರೆ ವಿಷಕಾರಿ ಜೇಡ. ಪ್ರಕೃತಿಯನ್ನೂ ಮಾನವ ಸಂಬಂಧಗಳನ್ನೂ ಮಾನವವ ಧನದಾಹವನ್ನೂ ಮುಖಾಮುಖಿಯಾಗಿಸುವ ಈ ಕೃತಿಯಲ್ಲಿ ಕಳೆದುಹೋದ ಮೌಲ್ಯಗಳ ಹುಡುಕಾಟವಿದೆ.

VISTARANEWS.COM


on

abbe novel shashidhar halady
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
narayana yaji
ನಾರಾಯಣ ಯಾಜಿ

| ನಾರಾಯಣ ಯಾಜಿ

ಶಶಿಧರ ಹಾಲಾಡಿಯವರು ಮೂಲತಃ ಪರಿಸರವನ್ನು ಪ್ರೀತಿಸುವ ಕವಿಹೃದಯವನ್ನು ಹೊಂದಿರುವವರು. ಅದೇ ರೀತಿ ಅವರು ಇತಿಹಾಸವನ್ನೂ ಸಹ ತನ್ನದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಬಲ್ಲರು. ಭಾರತದ ಸ್ವಾತಂತ್ರ್ಯ ಹೋರಾಟವನ್ನು ವಿಮರ್ಶಿಸುವಾಗ ಲಭ್ಯವಿರುವ ಕಥೆಗಳನ್ನು ಹೇಳದೇ ಕಾಲಗರ್ಭದಲ್ಲಿ ಇಣುಕಿ ಮಹತ್ವದ ಸಾಧನೆಯನ್ನು ಮಾಡಿಯೂ ಯಾರ ಕಣ್ಣಿಗೂ ಬೀಳದೇ ಅವಿತು ಹೋದವರ ಸಂಗತಿಗಳನ್ನು ಅಥವಾ ಮಹತ್ವದ ಹೋರಾಟಗಳನ್ನು ತಮ್ಮ ಅಂಕಣದಲ್ಲಿ ದಾಖಲಿಸಿದ್ದಾರೆ. ಅಂಕಣಕಾರ ಘಟನೆಯನ್ನು ದಾಖಲಿಸುವತ್ತಲೇ ತನ್ನ ಬರಹದ ಕಡೆಗೆ ಲಕ್ಷ್ಯ ವಹಿಸುತ್ತಾನೆ. ಆತನಿಗೆ ಬರೆಯುವದು ಮತ್ತು ಆ ಕಾರಣಕ್ಕಾಗಿ ಹೊಸ ಹೊಸ ಓದನ್ನು ರೂಢಿಸಿಕೊಳ್ಳುವದು ಅಭ್ಯಾಸವಾಗಿರುತ್ತದೆ. ಈ ಬರೆಯುವ ಕ್ರಿಯೆಯಲ್ಲಿ ಅವನಿಗೆ ಅರಿವಿಲ್ಲದಂತೆಯೇ ಕಥನ ಕಟ್ಟುವ ಒಂದು ಚೌಕಟ್ಟು ರೂಪುಗೊಂಡಿರುತ್ತದೆ. ಆ ಮಿತಿಯನ್ನು ಮೀರದೇ ವಿಷಯಗಳನ್ನು ಅಚ್ಚುಕಟ್ಟಾಗಿ ಹೇಳುವ ತವಕ ಅಂಕಣಕಾರನಿಗೆ ಯಾವಾಗಲೂ ಇರುತ್ತದೆ.

ಆದರೆ ಕಾದಂಬರಿಯಲ್ಲಿ ಹಾಗಲ್ಲ. ಈ ಬೇಲಿಯನ್ನು ಮುರಿಯಲು ಆತನಿಗೆ ಸ್ವಚ್ಛಂದ ಅವಕಾಶಗಳಿರುತ್ತವೆಯಾದರೂ ಅಭ್ಯಾಸಬಲದಿಂದ ವಿಷಯಗಳು ಒಂದು ಚೌಕಟ್ಟಿನೊಳಗೇ ವಿಹರಿಸಲು ತೊಡಗುತ್ತವೆ. ಅಂಕಣ ವಿಸ್ತ್ರತ ಸಾಹಿತ್ಯವಾಗುವದಿಲ್ಲ. ವಿಸ್ತ್ರತ ಸಾಹಿತ್ಯಕ್ಕೆ ಅದು ಬುನಾದಿಯನ್ನು ಹಾಕಿಕೊಡಬಹುದು. ಈ ಹಿನ್ನೆಲೆಯಲ್ಲಿ ಹಾಲಾಡಿಯವರ ಎರಡನೇ ಕಾದಂಬರಿ “ಅಬ್ಬೆ”ಯನ್ನು ಓದಿದರೆ ಇದು ಪರಿಸರವನ್ನು ಅಧರಿಸಿದ ಕಾದಂಬರಿಯಾದರೂ ಪರಿಸರದಲ್ಲಿಯೇ ಬದುಕುವ ಮನುಷ್ಯ, ಪರಿಸರದಲ್ಲಿನ ವಿಷಜಂತುಗಳಿಗಿಂತ ಹೇಗೆ ಅಪಾಯವನ್ನು ತರಬಲ್ಲ ಎಂದು ಹೇಳಲು ಹೊರಟಿದ್ದಾರೆ. ಮನುಷ್ಯನ ಕ್ರೌರ್ಯ ಮತ್ತು ಹಿಂಸೆಯ ವಿಜೃಂಭಣೆ ಅನಾವರಣಗೊಳ್ಳಲು ಕಾರಣವೇ ಬೇಕಿಲ್ಲ. ಅಬ್ಬೆಯೆನ್ನುವುದು ಒಂದು ಪ್ರಕಾರದ ಜೇಡ. ತುಂಬಾ ವಿಷದ ಪ್ರಾಣಿ. ಅದು ಕಚ್ಚಿದರೆ ಹೆಬ್ಬಾಗಿಲಿಗೆ ಬರುವಷ್ಟೂ ಸಮಯವಿಲ್ಲದೇ ಕಚ್ಚಿಸಿಕೊಂಡ ವ್ಯಕ್ತಿ ಸಾಯುತ್ತಾನೆ ಎನ್ನುವ ನಂಬಿಕೆ ಇಂದಿಗೂ ಹಳ್ಳಿಗಳಲ್ಲಿ ರೂಢಿಯಲ್ಲಿದೆ. ಇಂತಹ ಜೇಡಕ್ಕೆ ಕೆಲವು ಕಡೆ ಅಬ್ಬೆ ಎನ್ನುತ್ತಾರೆ, ಇನ್ನು ಕೆಲವು ಕಡೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಹಾಗಂತ ಅದು ಕಚ್ಚಿರುವದನ್ನು ನೇರವಾಗಿ ಯಾರೂ ನೋಡಿಲ್ಲ. ಅಕಸ್ಮಾತ್ತಾಗಿ ಯಾರಾದರೂ ಸತ್ತರೂ ಹಾಗೇ ಸತ್ತವನ ಸುತ್ತಮುತ್ತ ಎಲ್ಲಿಯಾದರೂ ವಿಲಕ್ಷಣವಾದ ಜೇಡ ಕಾಣಿಸಿತು ಎಂದರೆ ಅದು ಅಬ್ಬೆ ಕಡಿದು ಆದ ಸಾವು ಎನ್ನುವುದನ್ನು ನಂಬುತ್ತಾರೆ. ಕಂಡ ಕಂಡ ಜೇಡಗಳ ಮಾರಣಹೋಮ ನಡೆಯುತ್ತದೆ.

shashidhara halady
ಶಶಿಧರ ಹಾಲಾಡಿ

ಉತ್ತರ ಕನ್ನಡದ ಕೆಲವೆಡೆ ಮದ್ದು ಹಾಕುವದು ಎನ್ನುವ ನಂಬಿಕೆ ಇದೆ. ಇಲ್ಲಿನ ಹಳ್ಳಿಗಳಲ್ಲಿ ಯಾವುದಾದರೂ ಒಂದು ಮನೆಗೆ ಮದ್ದು ಹಾಕುವವರ ಮನೆ ಎನ್ನುವ ಅಭಿಶಾಪವಿರುತ್ತದೆ. ಗೊತ್ತಿಲ್ಲದೇ ಆ ಮನೆಗೆ ಹೋದ ಅಂತ ಇಟ್ಟುಕೊಳ್ಳಿ. ಆ ಮನೆಯ ಯಾವುದೋ ಹೆಂಗಸು ಆತನ ಊಟದಲ್ಲಿ ಸತ್ತ ಉಡದ್ದೋ ಅಥವಾ ಹಲ್ಲಿಯದ್ದೋ ಅಥವಾ ಅನಾಮಧೇಯ ಪ್ರಾಣಿಯದ್ದೋ ದೇಹದಿಂದ ತೆಗೆದ ವಿಷದ ಪುಡಿಯನ್ನು ತನ್ನ ಕೈ ಉಗುರಿನಲ್ಲಿಯೋ ಎಲ್ಲೋ ಬಚ್ಚಿಟ್ಟು ಚಿಟಿಕೆ ಉದುರಿಸಿಬಿಡುತ್ತಾಳಂತೆ. ಆ ಹೆಂಗಸು ಯಾರೆಂದು ಆ ಮನೆಯವರಿಗೂ ತಿಳಿದಿಲ್ಲದ ಗೂಢ ವಿಷಯ. ಅಲ್ಲಿ ಊಟ ಮಾಡಿದವನನ್ನು ನಿಶ್ಯಕ್ತಿ ಕಾಡಿ ದೈಹಿಕವಾಗಿ ಸೊರಗುತ್ತಾನೆ. ಡಾಕ್ಟರುಗಳಿಗೂ ಈ ವಿಷವನ್ನು ಕಂಡುಹಿಂಡಿಯಲಾಗುವುದಿಲ್ಲ. ಅದೇ ಊರಿನಲ್ಲಿ ಇಂತಹ ವಿಷವನ್ನು ವಾಂತಿ ಮಾಡಿ ತೆಗೆಯುವ ಮನೆಯಿರುತ್ತದೆ. ಆ ಮನೆಯವರು ವಾಂತಿ ಮಾಡಿಸಿದರೆ ಹಸಿರು ಬಣ್ಣದ ವಾಂತಿ ಬಂತೋ, ಅದು ಮದ್ದು ಹಾಕಿದುದರ ಪರಿಣಾಮ ಎನ್ನುವುದು ಖಾತ್ರಿಯಾಗುತ್ತದೆ. ಇದಕ್ಕೂ ಆಧಾರವಿಲ್ಲ. ಹೀಗೆ ತಳವಿಲ್ಲದ ಅನೇಕ ನಂಬಿಕೆಗಳು ಹಳ್ಳಿಗಳಲ್ಲಿವೆ. ಅಂತಹ ಕಥೆಗಳಲ್ಲಿ ಅಬ್ಬೆ ಜೇಡದ ಕಥೆಯೂ ಒಂದು.

ಇಲ್ಲಿನ ನಾಯಕ ಶಿವರಾಂ ಕರಾವಳಿಯಿಂದ ಕಲ್ಕೆರೆ ಎನ್ನುವ ಬಯಲುಸೀಮೆಯ ಕಡೆ ಹೊಸತಾಗಿ ಬ್ಯಾಂಕಿನ ನೌಕರಿಗೆ ಹೋಗುತ್ತಾನೆ. ಸುಮಾರು 1980ರ ದಶಕದಲ್ಲಿ ಲೇಖಕರು ಬ್ಯಾಂಕಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕಾಲದಲ್ಲಿ ನಡೆದಿರಬಹುದಾಗಿರುವ ಘಟನೆಗಳನ್ನು ಆಧರಿಸಿದ ಸಂಗತಿಗಳು ಇಲ್ಲಿವೆ. ಕಲ್ಕೆರೆ ಮಲೆನಾಡಿನಂತೆ ಅಲ್ಲವೇ ಅಲ್ಲ, ಹಾಗಂತ ಬಯಲುಸೀಮೆಯೂ ಅಲ್ಲ. ಶಿವರಾಂನಿಗೆ ಕುತೂಹಲಕ್ಕೆ ಕಾರಣವಾಗುವದು ಉದ್ಯೋಗಕ್ಕೆ ಸೇರುವ ದಿವಸ ಬಸ್ಸಿನಲ್ಲಿ ಬರುವಾಗಲೇ ನೋಡಿದ “ಗರುಡನಗಿರಿ ರಕ್ಷಿತಾರಣ್ಯ” ಎನ್ನುವ ಬ್ರಿಟಿಷರ ಕಾಲದ ಮಸುಕು ಮಸುಕಾಗಿದ್ದ ಬೋರ್ಡ್. ಈಗೊಂದಿನ್ನೂರು ವರ್ಷಗಳಲ್ಲಿ ದಟ್ಟಕಾಡಿನ ಪ್ರದೇಶವೊಂದು ಹೇಗೆ ಮನುಷ್ಯನ ದಾಳಿಗೆ ಸಿಕ್ಕು ಬೋಳಾಗಿಹೋಗಿದೆ ಎನ್ನುವದರ ಕುರುಹನ್ನು ಪ್ರಾರಂಭದಲ್ಲಿಯೇ ತೋರಿಸಿಬಿಡುತ್ತಾರೆ.

ಬ್ಯಾಂಕಿನ ಲೋಕವೆನ್ನುವದು ಹೊರಗಿನಿಂದ ಅಂದವಾಗಿ ಕಾಣಿಸುತ್ತದೆ. ಆದರೆ ಅಲ್ಲಿ ಹಣದ ವ್ಯವಹಾರವಿರುವ ಕಡೆ ಅನೇಕ ದುರ್ಬಲ ಮನಸ್ಸುಗಳನ್ನು ಚಂಚಲಚಿತ್ತರನ್ನಾಗಿಸಿ ದುರ್ಬಳಕೆಗೆ ಪ್ರೇರೇಪಿಸುವ ಅನೇಕ ಘಟನೆಗಳು ಆಗುತ್ತಲೇ ಇರುತ್ತವೆ. ಹಣದ ಒಂದು ಗುಣವೆಂದರೆ ಅದು ಯಾರನ್ನೂ ನಂಬಲು ಆಸ್ಪದ ಮಾಡಿಕೊಡುವದಿಲ್ಲ. ಎಲ್ಲರನ್ನೂ ಸಂಶಯದಿಂದಲೇ ನೋಡುವ ಸ್ವಭಾವ ಹಾಗೂ ತಮ್ಮ ತಪ್ಪನ್ನು ಇನ್ನೊಬ್ಬರ ತಲೆಗೆ ತಣ್ಣಗೆ ದಾಟಿಸಿ ಅವರನ್ನು ಹೊಂಡಕ್ಕೆ ಹಾಕಿ ತಾವು ಸಂಭಾವಿತರಂತೆ ಇದ್ದುಬಿಡುವ ಅನೇಕ ವ್ಯಕ್ತಿಗಳು ಅಲ್ಲಿ ಸಿಗುತ್ತಾರೆ. ಕಲ್ಕೆರೆಗೆ ಬಂದ ಶಿವರಾಮನಿಗೆ ಮ್ಯಾನೇಜರನ ಅಸಹನೆಯ ಸ್ವಾಗತ, ಸಿಬ್ಬಂದಿಗಳೆಲ್ಲರ ಹಿತಮಿತವಾದ ಮಾತುಗಳು ಅಧೈರ್ಯವನ್ನು ಹುಟ್ಟಿಸಿಬಿಟ್ಟಿದೆ. ಆದರೂ ಉದ್ಯೋಗವೆನ್ನುವದು ಅನಿವಾರ್ಯವಾದ ಕಾರಣ ಸಹಿಸಿಕೊಂಡು ಇರಬೇಕಾಗಿದೆ. ಇಡೀ ಬ್ಯಾಂಕೇ ತನ್ನ ತಲೆಯ ಮೇಲೇ ಇದೆಯೇನೋ ಎಂದು ಸದಾ ಒದ್ದಾಡುತ್ತಾ ಉಳಿದವರ ಮೇಲೆ ಸಿಡುಕುವ ಮ್ಯಾನೇಜರ್ ಕೈ, ಬಾಯಿ, ದೇಹ ಎಲ್ಲವೂ ಸಡಿಲವಾಗಿರುವ ವ್ಯಕ್ತಿ, ಕ್ಯಾಷಿಯರ್, ಮತ್ತೋರ್ವ ಕ್ಲರ್ಕ್ ಹಾಗೂ ಅರೆಕಾಲಿಕ ಸಿಬ್ಬಂದಿಗಳು ಈ ಎಲ್ಲರೂ ಕಥಾನಾಯಕ ಶಿವರಾಮನಿಗೆ ಒಗಟಾಗಿಯೇ ತೋರುತ್ತಾರೆ.

ಇದನ್ನೂ ಓದಿ | Sunday read | ಹೊಸ ಪುಸ್ತಕ | ಮತ್ತೆ ಹಾಡಾಗಿದೆ ಮಳೆ ಸಂಗೀತ

ಹಳ್ಳಿಯಾದುದರಿಂದ ಎಲ್ಲರೂ ಅವರವರ ಸಂಸಾರವನ್ನು ಎಲ್ಲಿಯೋ ಬಿಟ್ಟು ಇಲ್ಲಿ ಅಂಕೆ ತಪ್ಪಿ ರಾತ್ರಿ ಹೊತ್ತು ಕಳೆಯಲು ರೂಢಿಸಿಕೊಂಡ ಚಟಗಳು; ಇವೆಲ್ಲವುಗಳಿಂದ ಪಾರಾಗುವ ಚಿಂತೆಯ ಜೊತೆಗೆ ಅನನುಭವಿಯನ್ನು ಶಾಖೆಗೆ ಹಾಕಿದ್ದಾರೆಂದು ಸಿಡುಕುವ ಮ್ಯಾನೇಜರ್ ಮತ್ತೊಂದು ಕಡೆ. ಈ ಎಲ್ಲದರ ಜೊತೆಗೆ ಏಗುತ್ತಿರುವಾಗಲೇ ಕುಪ್ಪೂರು ತಿಮ್ಮಪ್ಪನ ನಿಗೂಢ ಸಾವಾಗುತ್ತದೆ. ಅದನ್ನು ಸರಳವಾಗಿ ಆತ್ಮಹತ್ಯೆಯೆಂದು ಮುಚ್ಚಿಹಾಕುವ ವ್ಯವಸ್ಥೆಗಳೆಲ್ಲಾ ಸಲೀಸಾಗಿ ಮೂಡಿಬಂದಿದೆ. ತಿಮ್ಮಪ್ಪನ ಸಾವಿನೊಂದಿಗೆ ಊರಿನ ಫಾಸಲೆಯಲ್ಲಿ ಮರಗಳನ್ನು ಕಡಿದು ಕಳ್ಳಸಾಗಾಟ ಮಾಡುವ ಮತ್ತು ಅದಕ್ಕೆ ಇಡೀ ಊರಿಗೆ ಊರೇ ಇಂತಹ ಕೆಲಸ ಒಂದು ಅಪರಾಧವೆಂದು ಗ್ರಹಿಸದ ವ್ಯವಸ್ಥೆ ಬಿಚ್ಚಿಕೊಳ್ಳುತ್ತಾ ಹೋಗುತ್ತಿರುವಂತೆ ಪರಿಸರದ ಜೊತೆ ಬೆಳೆದ ನಾಯಕನಿಗೆ ಅಚ್ಚರಿಯ ಜೊತೆಗೆ ಅದನ್ನು ತಡೆಯಬೇಕೆನ್ನುವ ಹಂಬಲವೂ ಜಾಸ್ತಿಯಾಗುತ್ತಾ ಹೋಗುತ್ತದೆ. ಇದೇ ಹೊತ್ತಿನಲ್ಲಿ ಅದೇ ಕುಪ್ಪೂರು ತಿಮ್ಮಪ್ಪನ ಮಗನ ಮದುವೆಯಲ್ಲಿ ಪಾರ್ಟಿ ಮುಗಿಸಿ ಹೋಗುವಾಗ ಧರ್ಮ ಎನ್ನುವವನ ಅಸಹಜ ಸಾವನ್ನು “ಅಬ್ಬೆ ಕಚ್ಚಿ ಆತ ಸತ್ತʼʼ ಎನ್ನುವ ತೀರ್ಮಾನಕ್ಕೆ ಬಂದಾಗ ಶಿವರಾಮನಿಗೆ ಅಬ್ಬೆ ಎನ್ನುವ ಜೇಡದ ಕುರಿತು ಮೊದಲ ಸುದ್ದಿ ತಿಳಿಯುತ್ತದೆ.

ಅಬ್ಬೆ ಕಚ್ಚಿದರೆ ತಕ್ಷಣವೇ ಸಾವು ಬರುತ್ತದೆ; ಆದರೆ ಯಾರೂ ಪ್ರತ್ಯಕ್ಷವಾಗಿ ಅಬ್ಬೆ ಕಡಿಯುವದನ್ನು ನೋಡಿರುವದಿಲ್ಲ. ಅಲ್ಲಿದ್ದ ಅಮಾಯಕ ಜೇಡಗಳನ್ನು ಈ ಕಾರಣಕ್ಕಾಗಿ ಕೊಂದು ಹಾಕಲಾಗುತ್ತದೆ. ಅದೇ ರೀತಿ ಕಲ್ಕೆರೆಯ ಪರಿಸರವನ್ನೂ ಸಹ ಅವರಿಗರಿವಿಲ್ಲದೇ ನಾಶ ಮಾಡುವತ್ತ ಕೇವಲ ಊರಿನ ಜನ ಮಾತ್ರವಲ್ಲ. ಅಲ್ಲಿಗೆ ಆ ಕಾರಣಕ್ಕಾಗಿಯೇ ಬರುವ ಬಳ್ಳಾರಿಯ ಕಡೆಯ ಕೆಂಚಪ್ಪನಂತಹವರಿಗೆ ಚಿಪ್ಪುಹಂದಿಯನ್ನು ಹಿಡಿದು ಮಾರಿ ಹಣ ಮಾಡುವ ಧಾವಂತ. ಅನಕ್ಷರಸ್ಥನಾದ ಆತನ ಹತ್ತಿರ ಬ್ಯಾಂಕಿನ ಸಿಬ್ಬಂದಿಗಳಿಗಿಂತಲೂ ಜಾಸ್ತಿ ಹಣವಿದೆ. ಪರಿಸರ ನಾಶಕ್ಕೆ ತೊಡಗಿದವರಿಗೆ ತಾವು ಚಿನ್ನದ ಕೋಳಿಯ ಕತ್ತನ್ನು ಕೊಯ್ಯುತ್ತೇವೆನ್ನುವ ಅರಿವಿಲ್ಲ. ಬ್ಯಾಂಕಿನವರೆಲ್ಲ ಬಿಡುವಿನ ಸಮಯದಲ್ಲಿ ಇಸ್ಪೀಟು ಅದೂ ಇದೂ ಅಂತ ಕಾಲಕ್ಷೇಪ ಮಾಡುತ್ತಿದ್ದರೆ ಶಿವರಾಮ ಪಡ್ಡೆ ಹುಡುಗರೊಂದಿಗೆ ಸೇರಿ ಕ್ರಿಕೆಟ್ ಆಡುತ್ತಾ ಇರುವುದು ಮ್ಯಾನೇಜರನ ಅಸಹನೆಗೆ ಕಾರಣ. ಇದೇ ಹೊತ್ತಿಗೆ ಅಲ್ಲಿನ ಕಾಲೇಜೊಂದಕ್ಕೆ ಪ್ರಿನ್ಸಿಪಾಲ್ ಆಗಿ ಬರುವ ಡಾ. ಕಲ್ಲೂರಾಯರು ಸಹ ಕರಾವಳಿ ಕಡೆಯವರೇ. ಜೀವಶಾಸ್ತ್ರ, ಸಸ್ಯಶಾಸ್ತ್ರವೆಲ್ಲವನ್ನೂ ಓದಿಕೊಂಡಿದ್ದಾರೆ. ಅವರೂ ಸಹ ಈ ಅಬ್ಬೆ ಕಚ್ಚಿದರೆ ಸಾಯುವದು ಎನ್ನುವದು ಕೇವಲ ಭ್ರಮೆ ಎನ್ನುತ್ತಾರೆ. ಹುಡುಗರೊಂದಿಗೆ ಹಿರೇಕಲ್ಲು ಗುಡ್ಡ ಗರುಡನಗಿರಿಯ ಬೆಟ್ಟಕ್ಕೆ ಚಾರಣ ಹೋಗುವ ಅವರು ಅಲ್ಲಿನ ಸಸ್ಯಗಳ ವೈವಿಧ್ಯಗಳನ್ನು ನೋಡಿ ಅಪೂರ್ವ ಸಸ್ಯ ಸಂಪತ್ತು ನಾಶವಾಗುವ ಕುರಿತು ಖೇದ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ Sunday read | ಹೊಸ ಪುಸ್ತಕ | ಮಹಾಭಾರತದ ನೈಜ ನಾಯಕ ವಿದುರ

ಬ್ಯಾಂಕಿನ ನೀರಸ ಬದುಕು, ಊರವರ ಹಣ ಮಾಡುವ ಮತ್ತು ವಿದ್ಯಾವಂತರಾದವರೆಲ್ಲ ಊರು ಬಿಡುವವರ ನಡುವೆ ಅರಣ್ಯ ಬರಿದಾಗಿದೆ. ಮೊದಲು ಕೇವಲ ಗರುಡನಗಿರಿ ಬೆಟ್ಟ ನಾಶವಾಗಿ ಹೋಗಿದೆ. ಈಗ ಹಿರೇಕಲ್ಲು ಗುಡ್ಡದಲ್ಲಿನ ಪ್ರಾಣಿಗಳ ಸಹಿತ ಅರಣ್ಯನಾಶವಾಗಲು ಹೆಚ್ಚಿನ ಸಮಯವಿಲ್ಲ ಎನ್ನುವ ಅರಿವಾಗುತ್ತ ಇದ್ದಕ್ಕಿದ್ದಂತೆ ಪರಿಸರದ ಹುಡುಕಾಟದ ತೇಜಸ್ವಿಯವರ ಕಾದಂಬರಿಯನ್ನು ನೆನಪಿಸುವ ಜಾಡಿನಲ್ಲಿ ಸಾಗುತ್ತದೆ. ಕಲ್ಲೂರಾಯರಿಗೆ ಇಲ್ಲಿನ ಸಸ್ಯ ವೈವಿದ್ಯತೆಯನ್ನು ಹೊರಜಗತ್ತಿಗೆ ತಿಳಿಸುವುದು ಮುಖ್ಯ. ಹಣಕ್ಕಾಗಿ ಹೌದಾದರೂ ಅರೆಕಾಲಿಕ ಉದ್ಯೋಗದಲ್ಲಿರುವ ಅವರಿಗೆ ಹಣವನ್ನು ಹೇಗೋ ಹೇಗೋ ಗಳಿಸುವ ಹುಚ್ಚಿಲ್ಲ. ಕಾಣದ ಅಬ್ಬೆಗಿಂತ ಪಕ್ಕದಲ್ಲಿರುವ ಜನರ ಅಸೂಯೆಯ ವಿಷವೇ ಹೆಚ್ಚಿನ ಅಪಾಯಕಾರಿ ಎನ್ನುವ ಮಾತುಗಳು ಶಿವರಾಮನನ್ನು ಎಚ್ಚರಿಸುತ್ತಿರುತ್ತವೆ. ಅಸೂಯೆ ದ್ವೇಷವೆನ್ನುವುದು ಹೆಣ್ಣಿನ ರೂಪದಲ್ಲಿ ಶಿವರಾಮನ ಮೇಲೆ ಮ್ಯಾನೇಜರ್ ಮಸಲತ್ತು ಮಾಡಿಸುವದು ಈ ಹೊತ್ತಿನಲ್ಲಿ ಬ್ಯಾಂಕಿನ ಯೂನಿಯನ್ನಿನ ಪ್ರತಿನಿಧಿಯಾದ ಕ್ಯಾಷಿಯರ್ ಸಹಾಯಕ್ಕೆ ಬಂದು ಅದನ್ನು ತಪ್ಪಿಸುವ ಘಟನೆಗಳು ಚೆನ್ನಾಗಿ ಬಂದಿವೆ. ಪರಿಸರದ ಹುಡುಕಾಟದಲ್ಲಿ ಇನ್ನೇನು ಬಿಜಿಎಲ್ ಸ್ವಾಮಿಯವರ ಹಸಿರು ಹೊನ್ನು ಅಥವಾ ತೇಜಸ್ವಿಯವರ ಕರ್ವಾಲೋ ತರಹದ ಹುಡುಕಾಟ ಪ್ರಾರಂಭವಾಗುತ್ತದೆ ಎನ್ನುವಾಗ ಮತ್ತೆ ಬ್ಯಾಂಕಿನ ಸಮಸ್ಯೆಗಳಲ್ಲಿ ಸಿಕ್ಕು ಅದರಿಂದ ಪಾರಾಗಲು ಒದ್ದಾಡುವ ನಾಯಕನ ಸುತ್ತಲೇ ಕಥೆ ಸುತ್ತುತ್ತದೆ. ಇದು ಕಾದಂಬರಿಯ ಮಿತಿಯೂ ಹೌದು.

ಹಿರೇಕಲ್ಲು ಗುಡ್ಡವೆನ್ನುವದು ಭೂವೈವಿಧ್ಯದ ಪಳೆಯುಳಿಕೆ ಎನ್ನುವುದನ್ನು ತಿಳಿಸುವಲ್ಲಿ ಕಾದಂಬರಿ ಯಶಸ್ವಿಯಾದರೂ ಏಕಕಾಲದಲ್ಲಿ ಕಥೆ, ಉದ್ಯೋಗ ಮತ್ತು ಒಂದು ಕಾಲದ ರಕ್ಷಿತಾರಣ್ಯವಾದ ಗರುಡನಗಿರಿಯ ಮಸುಕಾದ ಬೋರ್ಡು, ಪಾಳು ಬಂಗಲೆ, ಎಲ್ಲಿಂದಲೋ ಬರುವ ಸಂನ್ಯಾಸಿಗಳು, ಮುಕುಂದೂರು ಸ್ವಾಮಿಗಳು, ಅಮಾಯಕನಾಗಿ ನಟಿಸುವ ಕೆಂಚಪ್ಪ ಈ ನಡುವೆ ಪೂಜಾರಿಯು ಸಾಲಮೇಳ ಹೇಗೆ ದಿಕ್ಕು ತಪ್ಪಿತೆನ್ನುವುದನ್ನು ವಿವರಿಸುವ ರೀತಿ ಇವುಗಳ ದೊಡ್ಡ ಬೀಸಿನಲ್ಲಿ ಕಥೆ ಸಾಗುತ್ತಾ ಹೋಗುತ್ತದೆ. ಊರಿನಲ್ಲಿ ತನಗಿಂತ ಶಿವರಾಮ ಜನಪ್ರಿಯನಾಗುವುದನ್ನು ಸಹಿಸದ ಮ್ಯಾನೇಜರ್ ಆತನ ಪ್ರೊಬೇಷನರಿಯನ್ನು ಮುಂದುವರಿಸಲು ಶಿಫಾರಸು ಮಾಡುತ್ತಾನೆ. ಆ ಚಿಂತೆ ಶಿವರಾಮನನ್ನು ತೀವ್ರವಾಗಿ ಕಾಡುವಂತೆ ಅನಿಸಿದರೂ ಅಬ್ಬೆ ಕಚ್ಚುವದು ಎನ್ನುವದು ಕೇವಲ ಭ್ರಮೆ ಎನ್ನುವದನ್ನು ಮೊದಲೇ ಸಾರುತ್ತಾ ಹೋಗುವುದರಿಂದ ಕಥೆ ಬ್ಯಾಂಕಿನಲ್ಲಿ ಇರುವ ವಿಷವ್ಯೂಹದಲ್ಲಿ ಸಿಲುಕಿಸುತ್ತದೆ. ಹೃದಯಾಘಾತದಿಂದ ಆದ ಸಾವನ್ನು ಅಬ್ಬೆಯ ತಲೆಗೆ ಕಟ್ಟುವುದನ್ನು ವಿವರಿಸುತ್ತಾ ಪ್ರಯತ್ನ ಪೂರ್ವಕವಾಗಿ ಓದುಗರನ್ನು ಕಥೆಯ ಬಂಧಕ್ಕೆ ತಂದು ಕೂರಿಸುತ್ತಾರೆ. ಒಂದು ಕಾಲಕ್ಕೆ ಸಮೃದ್ಧ ಮಳೆಯ ಪ್ರದೇಶವಾಗಿದ್ದ ಕಲ್ಕೆರೆಯಂತಹ ಪ್ರದೇಶ ಇಂದು ಮಳೆಯ ನೆರಳಿನ (Rain Shade) ಪ್ರದೇಶವಾಗಿ ಬದಲಾಗಿರುವದರ ಸೂಕ್ಷ್ಮತೆಯನ್ನು ವಿವರಿಸುತ್ತಾ ಹೋಗುವಾಗ ಮೂಲತಃ ಪ್ರಕೃತಿಯನ್ನು ಪ್ರೀತಿಸುವ ಹಾಲಾಡಿಯವರ ಸಾತ್ವಿಕ ನೋವು ಎದ್ದು ಕಾಣಿಸುತ್ತದೆ. ಓದುಗ ಇಲ್ಲಿ ಕಥಾನಾಯಕನೊಂದಿಗೆ ತಾನೂ ಮಿಳಿತವಾಗುತ್ತಾನೆ. ಊರಿನಲ್ಲಿ ಮರಗಳೊಟ್ಟಿಗೆ ಚಿನ್ನದ ನಿಧಿಯೂ ಇರುವ ವಿಷಯಗಳೆಲ್ಲವೂ ಬಂದು ಹಳ್ಳಿಯ ವ್ಯವಸ್ಥೆಯಲ್ಲಿ ಇವೆಲ್ಲ ಮಾಮೂಲು ಎಂದು ಅಷ್ಟೇ ವೇಗವಾಗಿ ಅವೆಲ್ಲವೂ ಮುಚ್ಚಿಹೋಗಿಬಿಡುತ್ತವೆ. ಇದು ಕಲ್ಕೆರೆಯಲ್ಲಿ ವಿದ್ಯುತ್ ಇದ್ದೂ ಇಲ್ಲದಂತಿರುವ ವಿವರಣೆಗೆ ಪೂರಕವಾಗುತ್ತದೆ. ಕಾರಣವಿಲ್ಲದೇ ಮ್ಯಾನೇಜರ್ ಇವರನ್ನು ದ್ವೇಷಿಸುವುದಕ್ಕೆ ನರಸಿಂಹಯ್ಯನವರ ಬಾಯಿಯಿಂದ ಜನ್ಮಾಂತರದ ಸಂಚಿತ ಕರ್ಮದ ಸಮಾಧಾನವಿಲ್ಲದೇ ಇದ್ದಿದ್ದರೆ ಒಳ್ಳೆಯದಿತ್ತು. ಕೆಲವೊಮ್ಮೆ ಕೆಲವು ಜನರ Maladaptive behavior (ಅಸಮರ್ಪಕ ನಿರ್ವಹಣೆ) ಇಂತಹುದಕ್ಕೆಲ್ಲಾ ಕಾರಣವಾಗುತ್ತದೆ. ನಾಗರ ಹಾವನ್ನೂ, ಅಮಾಯಕ ಜೇಡವನ್ನೂ ಕಂಡಕಂಡಲ್ಲಿ ಜಜ್ಜಿ ಕೊಲ್ಲುವ ವಿಷಯಗಳೆಲ್ಲವೂ ಇಲ್ಲಿ ಸಾಂಕೇತಿಕವಾಗಿ ಬಂದಿರುವದರಿಂದ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಹೇಳದೇ ಹಾಗೇ ಬಿಡುವದು ಒಳ್ಳೆಯದು.

ಇದನ್ನೂ ಓದಿ | Sunday read | ಹೊಸ ಪುಸ್ತಕ | ತಟ್ಟನೆ ಮನಮಂ ಪಸಾಯದಾನ ಕೊಟ್ಟಳು

ಗರುಡನಗಿರಿ ರಕ್ಷಿತಾರಣ್ಯವಾಗಿರುವದು ಬರಡುಗಿರಿ ರಕ್ಷಿತಾರಣ್ಯವಾಗಿ ಬದಲಾಗಿರುವ ವರದಿ ಪತ್ರಿಕೆಗಳಲ್ಲಿ ಬಂದಿರುವದು ಕಥೆಗೆ ಕೊಡುವ ಬಹುಮುಖ್ಯ ತಿರುವು. ಶಿವರಾಮ ಊರಿನವರ ಯಾರ ಸಂಗಡವೂ ವಿರೋಧ ಕಟ್ಟಿಕೊಳ್ಳದೇ ಅವರೆಲ್ಲರಿಗೂ ತಮ್ಮ ತಪ್ಪುಗಳನ್ನು ಅರಿಯಲು ಸಹಾಯ ಮಾಡಿರುವುದು, ಊರಲ್ಲಿ ಧನಾತ್ಮಕ ಗುಣಗಳುಳ್ಳವರು ತುಂಬಾ ಜನರಿದ್ದಾರೆ. ಕೆಲವೊಂದಿಷ್ಟು ಪುಂಡರು ತಮ್ಮ ಸ್ವಾರ್ಥಕ್ಕೋಸ್ಕರ ಮಾಡುವ ಆಟದಲ್ಲಿ ಇವರ ಮೌನ ಹೇಗೆ ಸಹಕಾರಿಯಾಗುತ್ತದೆ ಎನ್ನುವದನ್ನು ಚನ್ನಾಗಿ ಕಟ್ಟಿಕೊಟ್ಟಿದ್ದಾರೆ. ತನ್ನದಲ್ಲದ ಊರಿನಲ್ಲಿ ಶಿವರಾಮನಿಗೆ ಯಾವ ಬಂಧನವೂ ಇಲ್ಲ; ಆದರೂ ದೂರದ ಅಂಡಮಾನಿಗೆ ವರ್ಗವನ್ನು ಮ್ಯಾನೇಜರ್ ಮಾಡಿಸಿದಾಗ ಅಲ್ಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಲು ಯತ್ನಿಸುತ್ತಾನೆ. ಈತನಿಗೆ ತೊಂದರೆ ಕೊಟ್ಟ ಮ್ಯಾನೇಜರ್ ಸಹ ದೂರದ ಕಲ್ಕತ್ತಾಕ್ಕೆ ವರ್ಗವಾಗುವ ಕ್ರಿಯೆಯಲ್ಲಿ Karma hits back ಎನ್ನುವುದು ನೆನಪಿಗೆ ಬರುತ್ತದೆ. ಬೋಳಾದ ಕಾಡಿಗಿಂತ ಜೀವ ವೈವಿಧ್ಯತೆಯಿಂದ ತುಂಬಿರುವ ಅಂಡಮಾನ್ ದ್ವೀಪವನ್ನು ನಾಯಕ ಸಮಾಧಾನದಿಂದಲೇ ಸ್ವೀಕರಿಸುವದು ಒಂದು ಆಶಾವಾದದ ಸೂಚನೆಯೂ ಹೌದು.

ಅಬ್ಬೆ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷಕ್ಕೆ ಕಾರಣವಾಗುವದಿಲ್ಲ. ಆದರೆ ಮಾನವನ ಅಜ್ಞಾನವೆನ್ನುವುದು ಅವನಿಗೆ ಅರಿಯದೇ ವಿನಾಶಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ವಿವರಿಸುತ್ತದೆ. ಸಮಸ್ಯೆಯನ್ನು ಎದುರಿಸಲು ತಾನೊಬ್ಬ ಏನು ಮಾಡಬಲ್ಲೆ ಎನ್ನುವುದಕ್ಕಿಂತ ಯಾರಾದರೂ ಒಬ್ಬರು ಪ್ರಾರಂಬಿಸುವುದು ಒಳ್ಳೆಯದು; ನಂತರ ಅದು ಹೇಗೋ ಮುಂದುವರಿಯುವುದು ಎನ್ನುವುದನ್ನು ಶಿವರಾಮ ಕಲ್ಕೆರೆಯಿಂದ ಹೊರಡುವ ಸಮಯಕ್ಕೆ ಅರಣ್ಯ ಇಲಾಖೆಯವರು ಗರುಡನಗಿರಿಗೆ ಬೇಲಿ ಹಾಕಲು ಬರುವುದನ್ನು ನೋಡಿ ಸಮಾಧಾನ ಪಡುತ್ತಾನೆ.

ಈ ಕಾದಂಬರಿಯಲ್ಲಿ ಪಾತ್ರಗಳ ಸಂಘರ್ಷ ಅಥವಾ ಮುಖಾಮುಖಿಯಿಲ್ಲ. ಆದರೆ ಪ್ರಸ್ತುತ ಸಮಾಜದಲ್ಲಿ ಕಾಡುವ ಸಮಸ್ಯೆಗಳತ್ತ ಗಮನ ಸೆಳೆಯುವ ತುಡಿತವಿದೆ. ಜೀವವೈವಿಧ್ಯದ ವಿವರಗಳಿರುವ ವಸ್ತುಗಳ ಕೊರತೆಯಿರುವ ವರ್ತಮಾನದಲ್ಲಿ ಶಶಿಧರ ಹಾಲಾಡಿಯವರು ಆ ಕುರಿತು ಹೇಳುವ ಮನಸ್ಸು ಮಾಡಿದ್ದಾರೆ. ಎಲ್ಲಿಯೂ ನೀರಸ ಅಂತ ಅನಿಸುವದಿಲ್ಲ. ಹಣದ ಹಿಂದೆ ಸಾಗುವ ಆಧುನಿಕ ವರ್ತಮಾನದ ಪ್ರತಿನಿಧಿಯಾಗಿ ಬ್ಯಾಂಕು ಇದ್ದರೆ; ಕೊನೆಗೆ ಬರುವ ಅರಣ್ಯ ಅಧಿಕಾರಿಗಳು ಬೇಲಿ ಹಾಕಲು ಬಂದು ಕಳೆದು ಹೋದ ಮಾನವನ್ನು ಪುನರುಜ್ಜೀವನಗೊಳಿಸುವ ಸಂಕೇತವಾಗಿ ಆಶಾವಾದದ ಮುಕ್ತಾಯವನ್ನು ಕೊಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
love jihad
ಕರ್ನಾಟಕ4 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ4 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು5 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ5 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ5 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ5 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ6 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ6 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202411 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202414 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202416 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202416 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ19 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌