ಮೊದಲ ಬಾರಿಗೆ 3ಡಿ ಕಿವಿ ಯಶಸ್ವಿ ಕಸಿ, ಚೆನ್ನಾಗಿ ಸೆಟ್ ಆಗುತ್ತೆ ಅಂತ ಮಹಿಳೆಗೆ ಖುಷಿ! - Vistara News

ವಿಜ್ಞಾನ

ಮೊದಲ ಬಾರಿಗೆ 3ಡಿ ಕಿವಿ ಯಶಸ್ವಿ ಕಸಿ, ಚೆನ್ನಾಗಿ ಸೆಟ್ ಆಗುತ್ತೆ ಅಂತ ಮಹಿಳೆಗೆ ಖುಷಿ!

ಮಹಿಳೆಯೊಬ್ಬರ ವಿರೂಪಗೊಂಡ ಕಿವಿಯ ಬದಲಿಗೆ ಆಕೆಯದೇ ಅಂಗಾಂಶ ಬಳಸಿ ಹೊಸ ಕಿವಿಯನ್ನು ವಿಜ್ಞಾನಿಗಳು ಪ್ರಿಂಟ್‌ ಮಾಡಿ ಜೋಡಿಸಿದ್ದಾರೆ. ಏನಿದು ತಂತ್ರಜ್ಞಾನ, ಯಾಕಿದು ವಿಶೇಷ, ಏನಾಗಿತ್ತು ಮಹಿಳೆಗೆ? ಈ ವರದಿ ಓದಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್‌: ಕಾಲು, ಕೈ ಮತ್ತಿತರ ಅಂಗಗಳನ್ನು ಕೃತಕವಾಗಿ ನಿರ್ಮಿಸಿಕೊಟ್ಟು ಸಂಕಷ್ಟದಲ್ಲಿರುವವರಿಗೆ ಹೊಸ ಬದುಕು ನೀಡುವುದನ್ನು ಕೇಳಿದ್ದೇವೆ. ಆದರೆ, ಅಮೆರಿಕದ ವಿಜ್ಞಾನಿಗಳು ಮಹಿಳೆಯೊಬ್ಬರ ಕಿವಿಯನ್ನೇ ಮರು ನಿರ್ಮಾಣ ಮಾಡುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ. ಇದು ಸಾಮಾನ್ಯ ಪ್ಲಾಸ್ಟಿಕ್‌ ಕಿವಿಯೇನೂ ಅಲ್ಲ, ಅಂಗಾಂಶ ಕಸಿ ತಂತ್ರಜ್ಞಾನದ ಮೂಲಕ ಸಜೀವ ಅಂಗಾಂಶಗಳನ್ನೇ ಬಳಸಿ 3ಡಿ ಪ್ರಿಂಟಿಂಗ್‌ ಮೂಲಕ ಈ ಕಿವಿಯನ್ನು ರೂಪಿಸಲಾಗಿದೆ. ಈ ಕಿವಿಯನ್ನು ಕಸಿ ಮಾಡಲಾಗಿದ್ದು, ದೇಹ ಅದಕ್ಕೆ ಚೆನ್ನಾಗಿ ಹೊಂದಿಕೊಂಡಿದೆ. ಇದನ್ನು ಒಂದು ಲೆಕ್ಕಾಚಾರದಲ್ಲಿ ಒರಿಜಿನಲ್‌ ಕೃತಕ ಕಿವಿ ಎನ್ನಬಹುದೇನೋ.. ಯಾಕೆಂದರೆ, ಅವರದೇ ಅಂಗಾಂಶಗಳನ್ನು ಬಳಸಿಕೊಂಡು ಮಾಡಿರುವ ಕೃತಕ ಕಿವಿ ಇದು.

ಹೊಸ ಕಿವಿ ಹುಟ್ಟಿದ್ದು ಹೇಗೆ?
ಮೆಕ್ಸಿಕೊ ಮೂಲದ 20 ವರ್ಷ ವಯಸ್ಸಿನ ಈ ಮಹಿಳೆಗೆ ಹುಟ್ಟುವಾಗಲೇ ಮೈಕ್ರೋಷಿಯ ಸಮಸ್ಯೆಯಿತ್ತು. ಅಂದರೆ, ಹುಟ್ಟುವಾಗಲೇ ಒಂದು ಅಥವಾ ಎರಡೂ ಕಿವಿಗಳ ಹೊರಭಾಗ, ಪೂರ್ಣವಾಗಿ ಅಥವಾ ಭಾಗಶಃ ರಚನೆಯಾಗಿರುವುದಿಲ್ಲ. ಕಳೆದ ಮಾರ್ಚ್‌ನಲ್ಲಿ ಅಮೆರಿಕದಲ್ಲಿ ಈ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಉತ್ತಮವಾಗಿ ಸ್ಪಂದಿಸಿದ್ದು, ಕಸಿ ಮಾಡಿರುವ ಕಿವಿಯ ಬೆಳವಣಿಗೆಯೂ ತೃಪ್ತಿದಾಯಕವಾಗಿದೆ ಎಂದು ಈ ಕಸಿ ತಂತ್ರಜ್ಞಾನದ ಹಿಂದಿರುವ 3ಡಿ-ಬಯೋ ಥೆರಪೆಟಿಕ್ಸ್‌ ಸಂಸ್ಥೆ ತಿಳಿಸಿದೆ. ʻಆಕೆಯ ಆರೋಗ್ಯವಾಗಿರುವ ಇನ್ನೊಂದು ಕಿವಿಗೆ ಹೊಂದುವ ರೀತಿಯಲ್ಲಿ ಕಸಿ ಮಾಡಿರುವ ಕಿವಿಯನ್ನು ವಿನ್ಯಾಸಗೊಳಿಸಲಾಗಿದೆʼ ಎಂದಿರುವ ಈ ಸಂಸ್ಥೆ, ಸಂಪೂರ್ಣ ವಿವರಗಳನ್ನು ಬಹಿರಂಗಗೊಳಿಸಿಲ್ಲ.

ಆದರೆ ಮೈಕ್ರೋಟಿಯ ಸಮಸ್ಯೆಯಿಂದ ಬಳಲುತ್ತಿರುವ ಇನ್ನೂ 11 ರೋಗಿಗಳಿಗೆ ಈ ಕುರಿತಾದ ಕ್ಲಿನಿಕಲ್‌ ಟ್ರಯಲ್‌ ಆರಂಭಿಸಲಾಗುವುದು. ಇದರ ವಿವರಗಳನ್ನು ವೈದ್ಯಕೀಯ ನಿಯತಕಾಲಿಕವೊಂದರಲ್ಲಿ ಪ್ರಕಟಿಸಲಾಗುವುದು ಎಂದು ಆ ಸಂಸ್ಥೆ ಹೇಳಿದೆ. ಈ ಕಸಿಯಿಂದ ಅನಿರೀಕ್ಷಿತ ಆರೋಗ್ಯ ಸಮಸ್ಯೆಗಳು ತಲೆದೋರುವ ಆತಂಕ ಇನ್ನೂ ದೂರವಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಸಂಸ್ಥೆ, ರೋಗಿಯದೇ ಕಿವಿಯ ಅಂಗಾಂಶಗಳನ್ನು ಬಳಸಿ ರಚನೆಯಾಗಿರುವ ಈ ಹೊಸ ಕಿವಿಯನ್ನು ದೇಹ ಒಪ್ಪಿಕೊಳ್ಳುತ್ತದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದೆ.

ಕಂಪ್ಯೂಟರ್‌ ನಿರ್ದೇಶಿತ 3ಡಿ ಪ್ರಿಂಟರ್‌ ಮೂಲಕ ಅಂಗಗಳ ವಿನ್ಯಾಸಗಳನ್ನು  ಬೇಕಾದ ರೀತಿಯಲ್ಲಿ ಮುದ್ರಿಸಿ, ಅದನ್ನು ಚಿಕಿತ್ಸೆಗಳಿಗೆ ಬಳಸುವ ಈ ತಂತ್ರಜ್ಞಾನ ಕೆಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಕೃತಕ ಕಾಲುಗಳನ್ನು ರೋಗಿಗಳಿಗೆ  ಅಳವಡಿಸುವಲ್ಲಿ ಈ ತಂತ್ರಜ್ಞಾನ ಈವರೆಗೆ ಹೆಚ್ಚಾಗಿ ಬಳಕೆಯಾಗುತ್ತಿತ್ತು. ಆದರೆ ಈಗ ಇದೇ ತಂತ್ರಜ್ಞಾನವನ್ನು ಬಳಸಿ, ಸಜೀವ ಅಂಗಾಂಶಗಳನ್ನು ಮುದ್ರಿಸಿ, ಅದನ್ನು ಕಸಿ ಮಾಡಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಿರುವ ಮಹತ್ವದ ಮುನ್ನಡೆಯಾಗಿದೆ. ಮಾನವರ ಸಹಜ ಕಿವಿಯಂತೆಯೇ ಈ ಕಸಿ ನಿರ್ಮಿತ ಹೊಸ ಕಿವಿಯೂ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

ರಕ್ತನಾಳಗಳನ್ನು ಒಳಗೊಳ್ಳದ ಹೊರಕಿವಿಯಂಥ ಅಂಗಗಳ ಮೇಲಿನ ಈ ಪ್ರಯೋಗ ಯಶಸ್ವಿಯಾಗಿದ್ದು ನಿಜ. ಆದರೆ ದೇಹದ ಆಂತರಿಕ ಅಂಗಗಳ ಮೇಲೆ ಇಂಥ ಪ್ರಯೋಗಗಳು ಹೇಗಿರಬಹುದು ಮತ್ತು ಏನಾಗಬಹುದು ಎಂಬ ಆತಂಕ ಮತ್ತು ಕುತೂಹಲ ವೈದ್ಯವಿಜ್ಞಾನ ಕ್ಷೇತ್ರದಲ್ಲಿ ವ್ಯಕ್ತವಾಗಿದೆ. ಇದೇ ತಂತ್ರಜ್ಞಾನ ಮುಂದುವರೆದು, ಮೈಕ್ರೋಟಿಯ ರೋಗಿಗಳಿಗೆ ಮಾತ್ರವಲ್ಲದೆ, ಮೂತ್ರಕೋಶಗಳು, ಯಕೃತ್ತಿನಂತಹ ಪ್ರಮುಖ ಅಂಗಗಳ ಚಿಕಿತ್ಸೆ ಮತ್ತು ಕಸಿಯಲ್ಲಿ ನೆರವಾಗುವುದೋ ಎಂಬ ಕುತೂಹಲ ತಜ್ಞರಲ್ಲಿ ಸಹಜವಾಗಿ ಮೂಡಿದೆ. ಇದಲ್ಲದೆ, ಮಾರಣಾಂತಿಕ ರೋಗಗಳಲ್ಲಿ ಅಂಗಗಳನ್ನು ಕಳೆದುಕೊಂಡ ರೋಗಿಗಳಿಗೂ ಇಂಥ ತಂತ್ರಜ್ಞಾನ ವರವಾಗಬಹುದೇ ಎಂಬ ಜಿಜ್ಞಾಸೆ ವಿಜ್ಞಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ | ಎಲಾನ್‌ ಮಸ್ಕ್‌ನ Starlink ಉಪಗ್ರಹಗಳ ಮೇಲೆ ಚೀನಾ ಮಿಲಿಟರಿ ಕಣ್ಣು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Isha Ambani
Koo

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

Continue Reading

ವಿದೇಶ

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sunita Williams:ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದ್ದು, “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿತ್ತು.

ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿತ್ತು. ಆದರೆ ಇನ್ನು ಒಂದೆರಡು ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ದಿನಾಂಕವವನ್ನು ಏ.17ಕ್ಕೆ ಮುಂದೂಡಲಾಗಿದೆ. ಏಪ್ರಿಲ್‌ 17ರಂದು ಸಂಜೆ 6.16ಕ್ಕೆ ಬಾಹ್ಯಾಕಾಶ ನೌಕೆ ಉಡಾವಣೆಯಾಗಲಿದೆ ಎಂದು ಇದೀಗ ನಾಸಾ ಮತ್ತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದನ್ನೂ ಓದಿ:Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading
Advertisement
Hardik Pandya
ಕ್ರೀಡೆ41 seconds ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ12 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್12 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ13 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್14 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ27 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ41 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ49 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ51 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ54 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ54 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌