Prerane | ಫಲ ಮೂಲಾಶನಾಃ ದಾನ್ತಾಃ ಎಂಬ ಋಷಿ ವಾಕ್ಯದ ಅಂತರಾರ್ಥ - Vistara News

ಧಾರ್ಮಿಕ

Prerane | ಫಲ ಮೂಲಾಶನಾಃ ದಾನ್ತಾಃ ಎಂಬ ಋಷಿ ವಾಕ್ಯದ ಅಂತರಾರ್ಥ

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ಇಂದು ಋಷಿ ವಾಕ್ಯವೊಂದರ ಅರ್ಥಪೂರ್ಣ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

prerane hindu sages
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಬ್ರಹ್ಮಣ್ಯ ಸೋಮಯಾಜಿ
ಪ್ರಾಚೀನ ಭಾರತದ ಋಷಿಗಳ ಬಗ್ಗೆ ಉಲ್ಲೇಖಿಸುವಾಗ, “ಫಲ ಮೂಲಾಶನಾಃ ದಾನ್ತಾಃ” ಎಂಬ ಮಾತಿದೆ. ಆ ಇಂದ್ರಿಯ ಸಂಯಮಿಗಳು ಕಾಡಿನಲ್ಲಿ ಸಿಗುವ ಹಣ್ಣು ಮತ್ತು ಗಡ್ಡೆ ಗಳನ್ನು ಆಹಾರವಾಗಿ ಬಳಸುತ್ತಿದ್ದರು ಎಂಬುದು ಮಾತಿನ ಸಾಮಾನ್ಯ ವ್ಯಾಖ್ಯಾನ.

ಆದರೆ ಋಷಿಗಳ ಮಾತನ್ನು ನಾವು ಸ್ಥೂಲ ಬುದ್ಧಿಯಿಂದ ವ್ಯಾಖ್ಯಾನ ಮಾಡುತ್ತೇವೆ. ಕಾರಣ ನಾವು ಅವರಂತೆ ಸ್ಥೂಲ, ಸೂಕ್ಷ್ಮ, ಪರಾ ಎಂಬ ಜೀವನದ ಮೂರೂ ಕ್ಷೇತ್ರಗಳನ್ನು ಮುಟ್ಟಿದವರಾಗಿಲ್ಲ. ಅವರ ಮಾತಿಗೆ ವ್ಯಾಖ್ಯಾನ ಮಾಡಲು ಅವರಂತೆಯೇ ಯೋಗದೃಷ್ಟಿ ಇರುವವರಿಗೆ ಮಾತ್ರ ಸಾಧ್ಯ. ಅಂತಹವರ ಮಾತೇ ನಿಜಕ್ಕೂ ಪ್ರಮಾಣವಾಗುತ್ತವೆ. ಮಹಾ ಯೋಗಿಗಳಾದ ಶ್ರೀರಂಗ ಮಹಾಗುರುಗಳ ವ್ಯಾಖ್ಯಾನವು ಹೀಗಿತ್ತು; “ಋಷಿಗಳು ಸೃಷ್ಟಿಯ ಮೂಲ ಮತ್ತು ಸೃಷ್ಟಿಯ ಫಲ ಇವೆರಡನ್ನೇ ಆಹಾರವಾಗಿಟ್ಟುಕೊಂಡು ಜೀವಿಸುತ್ತಿದ್ದರು”. ಎಂತಹ ಅದ್ಭುತವಾದ ವ್ಯಾಖ್ಯಾನ!

ಯಾವ ಚೈತನ್ಯದ ಮೂಲದಿಂದ ಸೃಷ್ಟಿ ಆರಂಭವಾಯಿತೋ ಅದರೆಡೆಗೆ ಅವರ ಲಕ್ಷ್ಯವಿತ್ತು, ಹಾಗೆಯೇ ಆ ಚೈತನ್ಯದ ವಿಕಾಸದ ಫಲ ಮತ್ತೆ ಆ ಚೈತನ್ಯದಲ್ಲೇ ಒಂದಾಗುವ ಮೋಕ್ಷ. ಇವೆರಡನ್ನೂ ಅರೆನಿಮಿಷವೂ ಮರೆಯದೇ ಅವರು ಜೀವನ ನಡೆಸುತ್ತಿದ್ದರಿಂದ ಅದು ಅವರ ಆಹಾರ. ಅವರ ಜೀವನದ ನಡೆ ಎಲ್ಲವೂ ಸೃಷ್ಟಿಯ ಈ ಸಹಜವಾದ ವೃತ್ತಕ್ಕೆ ಅನುಗುಣವಾಗಿಯೇ ಇರುತ್ತಿತ್ತು. ಒಂದು ವೃತ್ತದ ಅಂತ ವೃತ್ತಾಂತ- ಅದು ಹೊರಟ ಜಾಗಕ್ಕೆ ಮತ್ತೆ ಬಂದು ಸೇರಿದಾಗಲೇ ಆಗುವುದು. ಒಂದು ಬೀಜವು ಬೆಳೆಯುತ್ತಾ, ಕಾಂಡವಾಯಿತು, ಕೊಂಬೆ, ಎಲೆಗಳಾದವು, ಕಾಯಿ, ಹಣ್ಣಾಗಿ ಮತ್ತೆ ಬೀಜದಲ್ಲಿ ನಿಂತಾಗಲೇ ಅದರ ವೃತ್ತದ ಅಂತವಾಗುವುದು.

ಹಾಗೆಯೇ ಭಗವಂತ ಎಂಬ ಮಹಾಶಕ್ತಿಯಿಂದ ಹೊರಟು ತನ್ನ ವಿಕಾಸದ ಹಾದಿಯಲ್ಲೆಲ್ಲೂ ಅದನ್ನು ಮರೆಯದೇ ಕಡೆಯಲ್ಲಿ ಆ ಶಕ್ತಿಯಲ್ಲೇ ಒಂದಾಗಿ ಸೇರುವುದು ಮಾನವ ಜೀವನದ ಸಹಜವಾದ ವೃತ್ತಾಂತ ಎಂಬುದನ್ನು ತಮ್ಮ ತಪಸ್ಯೆಯಿಂದ ಈ ದೇಶದ ಮಹರ್ಷಿಗಳು ಕಂಡುಕೊಂಡ ಪರಮ ಸತ್ಯ. ಅಂತಹ ಜೀವನ ವೃಕ್ಷದ ಕೃಷಿ ಅದರ ಮೂಲ ಮತ್ತು ಫಲದ ಅರಿವಿಲ್ಲದೇ ಮಾಡುವುದಾದರೂ ಹೇಗೆ? ಅಂತಹ ತುಂಬು ಜೀವನವನ್ನು ನಡೆಸಿ ಅದಕ್ಕೆ ಬೇಕಾದ ಕೃಷಿ ವಿಧಾನವನ್ನು ತಮ್ಮ ತಪಸ್ಯೆಯಿಂದ ಕಂಡುಕೊಂಡು ಅದನ್ನು ಲೋಕಕ್ಕೆಲ್ಲಾ ಸಾರಿದ ಮಹಾಪುರುಷರ ನಾಡು ನಮ್ಮೀ ಭಾರತ ಭೂಮಿ.

ನಾವು ನಮ್ಮ ಎಲ್ಲ ಇಂದ್ರಿಯಗಳಿಂದ ಏನೇನನ್ನು ಒಳಗೆ ತೆಗೆದುಕೊಳ್ಳುತ್ತೆವೋ ಅದೆಲ್ಲವೂ ಒಂದು ದೃಷ್ಟಿಯಿಂದ ಆಹಾರವೇ ಆಗಿದೆ. ಬರಿಯ ಹೊಟ್ಟೆ ತುಂಬಿಸುವುದಷ್ಟೇ ಆದರೆ ಉಳಿದ ಪ್ರಾಣಿಗಳಿಗೂ ನಮಗೂ ಯಾವ ವ್ಯತ್ಯಾಸವೂ ಇಲ್ಲ. ನಮ್ಮ ಕಣ್ಣಿಂದ ನೋಡುವ ರೂಪ, ಕಿವಿಯಿಂದ ಕೇಳುವ ಶಬ್ದ, ಬಾಯಿಂದ ತೆಗೆದುಕೊಳ್ಳುವ ಅನ್ನ ಎಲ್ಲವೂ ಆಹಾರವೇ. ಅವೆಲ್ಲವೂ ನಮ್ಮ ಮನಸ್ಸನ್ನೂ ಬೆಳೆಸುತ್ತವೆ ಎಂಬುದನ್ನು ಮರೆಯಬಾರದು. ಮನಸ್ಸಿಗೆ ತನ್ನ ಜೀವನದ ಸಹಜವಾದ ಧ್ಯೇಯವಾದ ನೆಮ್ಮದಿ, ಆನಂದವನ್ನು ಅನುಭವಿಸುವುದಕ್ಕೆ ವ್ಯತಿರಿಕ್ತವಾದ ಆಹಾರವೆಲ್ಲವೂ ತ್ಯಾಜ್ಯ. ಮನಸ್ಸು ಜೀವನದ ಸದ್ವೃತ್ತವನ್ನು ಮರೆಯದೇ ಆ ದಿಕ್ಕಿನಲ್ಲಿ ಹೋಗುವಂತಾದರೆ ಅದಕ್ಕೆ ಸಹಕಾರಿಯಾದ ಆಹಾರವೆಲ್ಲವೂ ಪೂಜ್ಯ. ಇದು ಭಾರತೀಯ ಮಹರ್ಷಿಗಳ ನೋಟ.

ಇಂತಹ ಜೀವನ ದರ್ಶನವನ್ನು ಲೋಕಕ್ಕೆ ಕೊಟ್ಟ ಮಹರ್ಷಿಗಳ ಬಗ್ಗೆ ಬಂದ ಮಾತು “ಫಲಮೂಲಾಶನಾಃ ದಾನ್ತಾಃ” ಈ ಮಾತಿನ ಹಿಂದಿನ ಸತ್ಯಾರ್ಥದ ಶ್ರೀರಂಗಮಹಾಗುರುಗಳ ವ್ಯಾಖ್ಯಾನ ಎಷ್ಟು ಅರ್ಥಪೂರ್ಣವಲ್ಲವೇ?.

ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ | Prerane | ಆಧುನಿಕ ಕ್ಷೇತ್ರಗಳಲ್ಲಿ ಯೋಗಸೂತ್ರದ ಪಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Bengaluru News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಇದೇ ಜು.5 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Satsang programme on 5th July in Bengaluru
Koo

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಜು.5ರಂದು ಶುಕ್ರವಾರ ಸಂಜೆ 5 ಗಂಟೆಗೆ ನಗರದ (Bengaluru News) ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಸೌಮ್ಯನಾಥ ಸ್ವಾಮೀಜಿ ಉಪಸ್ಥಿತರಿರುವರು.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ಬ್ರಹ್ಮಚಾರಿ ಶ್ರೀ ಸಾಯಿ ಕೀರ್ತಿನಾಥ್‌ಜಿ ಮತ್ತು ತಂಡದವರಿಂದ ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಕ್ರಮಣ ಗುರುವಂದನ ಬಳಗ ಕಾರ್ಯಕ್ರಮ ಆಯೋಜನೆ ಮತ್ತು ನಿರ್ವಹಿಸಲಿದ್ದಾರೆ.

Continue Reading

ಧಾರ್ಮಿಕ

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

ಮನೆ ಮತ್ತು ಅಂಗಡಿಯಲ್ಲಿ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುವ ಮೂಲಕ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು. ಹೊಸ ಮನೆ ಅಥವಾ ಅಂಗಡಿಯನ್ನು ಖರೀದಿಸಲು ಹೋದಾಗ ವಿಶೇಷವಾಗಿ ವಾಸ್ತು ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮನೆ (home) ಮತ್ತು ಅಂಗಡಿಯಲ್ಲಿ (store) ಧನಾತ್ಮಕ ಶಕ್ತಿ (Positive energy) ನೆಲೆಯಾಗಿದ್ದರೆ ಮಾತ್ರ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಕಾಣಲು ಸಾಧ್ಯ. ಇದಕ್ಕಾಗಿ ವಾಸ್ತು ನಿಯಮಗಳನ್ನು ಪಾಲಿಸುವುದು ಮುಖ್ಯ. ಮನೆ ಮತ್ತು ಅಂಗಡಿಯಲ್ಲಿ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುವ ಮೂಲಕ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು. ಸಂತೋಷ ಮತ್ತು ಸಮೃದ್ಧಿಯ ಜೊತೆಗೆ ಲಕ್ಷ್ಮಿ ದೇವಿಯ ಆಶೀರ್ವಾದವನ್ನೂ ಪಡೆಯಬಹುದು.

ಹೊಸ ಮನೆ ಅಥವಾ ಅಂಗಡಿಯನ್ನು ಖರೀದಿಸಲು ಹೋದಾಗ ವಿಶೇಷವಾಗಿ ವಾಸ್ತು ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಎಂಬುದು ತಿಳಿದುಕೊಳ್ಳೋಣ.

ದಿಕ್ಕುಗಳ ಬಗ್ಗೆ ತಿಳಿದಿರಲಿ

ವಾಸ್ತು ಶಾಸ್ತ್ರದಲ್ಲಿ ಕೆಲವು ನಿಯಮಗಳಿಗೆ ವಿಶೇಷ ಗಮನ ನೀಡಲಾಗಿದೆ. ಮನೆ ಅಥವಾ ಅಂಗಡಿಯ ಮುಖ್ಯ ದ್ವಾರವು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿರಬೇಕು. ಮನೆಯಲ್ಲಿ ಪೂಜಾ ಸ್ಥಳವು ಈಶಾನ್ಯ ಮೂಲೆಯಲ್ಲಿದ್ದರೆ ಮಲಗುವ ಕೋಣೆ ನೈಋತ್ಯ ದಿಕ್ಕಿನಲ್ಲಿರಬೇಕು. ಅದೇ ಸಮಯದಲ್ಲಿ, ಅಡುಗೆಮನೆಯು ಅಗ್ನಿ ಮೂಲೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿರಬೇಕು.

ಆಕಾರ ಗಮನಿಸಿ

ಮನೆ ಅಥವಾ ಅಂಗಡಿಯ ಆಕಾರವು ಚೌಕ ಅಥವಾ ಆಯತಾಕಾರವಾಗಿರಬೇಕು. ಅನಿಯಮಿತ ಆಕಾರಗಳನ್ನು ಹೊಂದಿರುವ ಕಟ್ಟಡಗಳನ್ನು ವಾಸ್ತು ಪ್ರಕಾರ ಅಶುಭವೆಂದು ಪರಿಗಣಿಸಲಾಗುತ್ತದೆ.


ಗಾಳಿ, ಬೆಳಕು

ಮನೆ ಅಥವಾ ಅಂಗಡಿಯಲ್ಲಿ ಸಾಕಷ್ಟು ಕಿಟಕಿಗಳು ಇರಬೇಕು. ಇದರಿಂದ ನೈಸರ್ಗಿಕ ಬೆಳಕು ಮತ್ತು ಗಾಳಿ ಪ್ರವೇಶಿಸಬೇಕು. ಇದಕ್ಕಾಗಿ ಕಿಟಕಿಗಳು ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿರಬೇಕು.

ಮುಖ್ಯ ಬಾಗಿಲು

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ಬಾಗಿಲು ದೊಡ್ಡದಾಗಿರಬೇಕು ಮತ್ತು ಭವ್ಯವಾಗಿರಬೇಕು. ಮುಖ್ಯ ಬಾಗಿಲಿನ ಮುಂದೆ ಯಾವುದೇ ಅಡೆತಡೆಗಳು ಇರಬಾರದು. ಮನೆ ಅಥವಾ ಅಂಗಡಿಯ ಚಾವಣಿ ಸಮತಟ್ಟಾಗಿರಬೇಕು.

ಚಾವಣಿಯ ಮೇಲಿನ ಇಳಿಜಾರು

ಮನೆ, ಅಂಗಡಿಯ ಚಾವಣಿಯ ಮೇಲಿನ ಇಳಿಜಾರು ನೈಋತ್ಯ, ಈಶಾನ್ಯ ದಿಕ್ಕಿನಲ್ಲಿರಬೇಕು.

ಬಣ್ಣಗಳು

ವಾಸ್ತು ಪ್ರಕಾರ ಮನೆ ಅಥವಾ ಅಂಗಡಿಗೆ ತಿಳಿ ಮತ್ತು ಬಿಳಿ ಬಣ್ಣಗಳನ್ನು ಬಳಸಬೇಕು. ಈ ಬಣ್ಣಗಳು ಧನಾತ್ಮಕತೆಯನ್ನು ತರುತ್ತವೆ. ಇದು ವ್ಯವಹಾರದಲ್ಲಿ ಪ್ರಗತಿಯನ್ನು ಒದಗಿಸುವಲ್ಲಿ ಸಹಾಯಕವೆಂದು ಪರಿಗಣಿಸಲಾಗಿದೆ. ಕಡಿಮೆ ಪ್ರಮಾಣದಲ್ಲಿ ಗಾಢ ಬಣ್ಣಗಳನ್ನು ಬಳಸಿ.

ನೀರಿನ ಸಂಗ್ರಹ

ಮನೆ ಅಥವಾ ಅಂಗಡಿಯಲ್ಲಿ ನೀರಿನ ಸಂಗ್ರಹವು ಈಶಾನ್ಯ ದಿಕ್ಕಿನಲ್ಲಿರಬೇಕು. ಮನೆ ಅಥವಾ ಅಂಗಡಿಯಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇರಬೇಕು.

ಗಿಡಗಳು

ಮನೆ ಅಥವಾ ಅಂಗಡಿಯ ಸುತ್ತ ತುಳಸಿ, ಮನಿ ಪ್ಲಾಂಟ್, ಅಲೋವೆರಾ ಮುಂತಾದ ಮಂಗಳಕರ ಗಿಡಗಳನ್ನು ನೆಡಿ. ಮನೆ ಅಥವಾ ಅಂಗಡಿ ಸುತ್ತಮುತ್ತ ಮುಳ್ಳಿನ ಗಿಡಗಳನ್ನು ನೆಡಬಾರದು.

ಇದನ್ನೂ ಓದಿ: Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?


ಸಮೃದ್ಧಿ ತರುವ ವಸ್ತುಗಳು

ವ್ಯಾಪಾರದಲ್ಲಿ ಯಶಸ್ವಿಯಾಗಲು ಅಂಗಡಿಯಲ್ಲಿ ಶ್ರೀಯಂತ್ರ, ವ್ಯಾಪಾರ ವೃದ್ಧಿ ಯಂತ್ರ, ಸ್ಫಟಿಕ ಆಮೆ ಅಥವಾ ಸ್ಫಟಿಕ ಚೆಂಡನ್ನು ಇರಿಸಬಹುದು. ಇದು ಧನಾತ್ಮಕ ಶಕ್ತಿಯನ್ನು ತರುತ್ತದೆ. ಹೊಸ ಅಂಗಡಿಯನ್ನು ತೆಗೆದುಕೊಂಡಿದ್ದರೆ ಅದರಲ್ಲಿ ಪಾಂಚಜನ್ಯ ಶಂಖವನ್ನು ಸ್ಥಾಪಿಸಬಹುದು. ಶಂಖ್ ಅನ್ನು ಮಾತಾ ಲಕ್ಷ್ಮಿಯ ಸಹೋದರ ಎಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಇಬ್ಬರೂ ಸಮುದ್ರ ಮಂಥನದಿಂದ ಹುಟ್ಟಿಕೊಂಡಿದ್ದಾರೆ. ಶಂಖದ ಆರಾಧನೆಯಿಂದ ಲಕ್ಷ್ಮೀದೇವಿಯೂ ಪ್ರಸನ್ನಳಾಗುತ್ತಾಳೆ. ಇದು ವ್ಯವಹಾರದಲ್ಲಿ ಯಶಸ್ಸನ್ನು ತರುತ್ತದೆ.

ಅಲಂಕಾರ

ಮನೆ ಅಥವಾ ಅಂಗಡಿಯ ಪ್ರವೇಶದ್ವಾರಕ್ಕೆ ಹೆಚ್ಚು ಅಲಂಕಾರಿಕ ವಸ್ತುಗಳಿಂದ ಅಲಂಕರಿಸಬೇಡಿ. ವಾಸ್ತು ತಜ್ಞರ ಪ್ರಕಾರ ಇದನ್ನು ಮಾಡಬಾರದು. ಏಕೆಂದರೆ ದಾರಿಯಲ್ಲಿ ಬರುವ ಉತ್ತಮ ಅವಕಾಶಗಳನ್ನು ಇದು ತಡೆಯಬಹುದು. ಪ್ರವೇಶದ್ವಾರ ಯಾವಾಗಲೂ ಸ್ವಚ್ಛವಾಗಿರಬೇಕು.

Continue Reading

ಕರ್ನಾಟಕ

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲದ ಹುಂಡಿ ಎಣಿಕೆ ಕಾರ್ಯವು ಮಂಗಳವಾರ ನಡೆಯಿತು. ಕಾಣಿಕೆ ಹುಂಡಿಯಲ್ಲಿ 32.95 ಲಕ್ಷ ರೂಪಾಯಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ನಾನಾ ದೇಶಗಳ ನೋಟುಗಳು ಮತ್ತು ನಾಣ್ಯಗಳು ಪತ್ತೆಯಾಗಿರುವುದು ವಿಶೇಷವಾಗಿದೆ.

VISTARANEWS.COM


on

Anjanadri Temple Hundi Count
Koo

ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇಗುಲದ ಹುಂಡಿ ಎಣಿಕೆ ಕಾರ್ಯವು ಮಂಗಳವಾರ (Koppala News) ನಡೆಯಿತು. ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ ಸೂಚನೆ ಮೇರೆಗೆ ತಹಸೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ಹುಂಡಿ ಕಾಣಿಕೆ ಹಣದ ಎಣಿಕೆ ಕಾರ್ಯವು ನಡೆಯಿತು. ಕಾಣಿಕೆ ಹುಂಡಿಯಲ್ಲಿ 32.95 ಲಕ್ಷ ರೂಪಾಯಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ವಿವಿಧ ದೇಶಗಳ ಮೂರು ನೋಟು ಮತ್ತು ಏಳು ನಾಣ್ಯಗಳು ಪತ್ತೆ

ಅಂಜನಾದ್ರಿ ಆಂಜನೇಯ ದೇಗುಲದ ಹುಂಡಿಯಲ್ಲಿ ಸಂಗ್ರವಾಗಿದ್ದ ಕಾಣಿಕೆ ಹಣದ ಎಣಿಕೆಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳ ಮೂರು ನೋಟು ಮತ್ತು ಏಳು ನಾಣ್ಯಗಳು ಪತ್ತೆಯಾಗಿವೆ.

ಈ ಪೈಕಿ ಸೌತ್ ಆಫ್ರಿಕಾದ ಒಂದು ನೂರು ರಾಂಡ್ ಮೊತ್ತದ ಒಂದು ನೋಟು, ಮತ್ತು ಯುನೈಟೆಡ್ ಸ್ಟೇಟ್ಸ್‌ ಆಫ್ ಅಮೆರಿಕಾದ ತಲಾ ಹತ್ತು ಡಾಲರ್ ಮೊತ್ತದ ಎರಡು ನೋಟು ಪತ್ತೆಯಾಗಿವೆ ಹಾಗೂ ಸೌದಿ ಅರೇಬಿಯಾ, ಥೈಲ್ಯಾಂಡ್, ಇಟಲಿ, ಓಮನ್, ಯುಕೆ ಮತ್ತು ನೇಪಾಳದ ನಾನಾ ಮುಖಬೆಲೆಯ ನಾಣ್ಯಗಳು ಪತ್ತೆಯಾಗಿವೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಕಳೆದ ಮೇ 21ರಂದು ಹಣ ಎಣಿಕೆ ಮಾಡಿದ ಸಂದರ್ಭದಲ್ಲಿ 30.21 ಲಕ್ಷ ರೂ. ಮೊತ್ತದ ಹಣ ಸಂಗ್ರವಾಗಿತ್ತು.

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading
Advertisement
Sumalatha Ambareesh First Reaction To Darshan Arrest And Renuka Swamy Murder Case
ಸ್ಯಾಂಡಲ್ ವುಡ್2 mins ago

Sumalatha Ambareesh: ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ ; ದರ್ಶನ್​ ಬಗ್ಗೆ ಸುಮಲತಾ ಅಂಬರೀಶ್‌​ ಮೊದಲ ಪ್ರತಿಕ್ರಿಯೆ

cm siddaramaiah MUDA scam
ಪ್ರಮುಖ ಸುದ್ದಿ3 mins ago

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

Satsang programme on 5th July in Bengaluru
ಬೆಂಗಳೂರು21 mins ago

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Hassan News Distribution of free notebook bag to government primary schools in Alur
ಹಾಸನ23 mins ago

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

To complete pending railway projects in the state former MP DK Suresh appeals central government
ಬೆಂಗಳೂರು24 mins ago

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ದೇಶ33 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ43 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್1 hour ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ1 hour ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌