AUS VS SA | ದಕ್ಷಿಣ ಆಫ್ರಿಕಾ ವಿರುದ್ಧ 16 ವರ್ಷಗಳ ಬಳಿಕ ಟೆಸ್ಟ್​ ಸರಣಿ ಗೆದ್ದ ಆಸ್ಟ್ರೇಲಿಯಾ ತಂಡ! - Vistara News

ಕ್ರಿಕೆಟ್

AUS VS SA | ದಕ್ಷಿಣ ಆಫ್ರಿಕಾ ವಿರುದ್ಧ 16 ವರ್ಷಗಳ ಬಳಿಕ ಟೆಸ್ಟ್​ ಸರಣಿ ಗೆದ್ದ ಆಸ್ಟ್ರೇಲಿಯಾ ತಂಡ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ಇನಿಂಗ್ಸ್​ ಹಾಗೂ 182 ರನ್​ಗಳ ಗೆಲುವು ದಾಖಲಿಸಿದೆ.

VISTARANEWS.COM


on

Australia won by an innings and 182 runs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ(AUS VS SA) ತಂಡ ಇನ್ನಿಂಗ್ಸ್​ ಹಾಗೂ 182 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ.

ಆಸ್ಟ್ರೇಲಿಯಾ ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 16 ವರ್ಷಗಳ ಸೋಲಿನ ಸರಣಿಯನ್ನು ಕೊನೆಗೊಳಿಸಿದೆ. ಆಸೀಸ್​ 16 ವರ್ಷಗಳ ಹಿಂದೆ ಹರಿಣಗಳ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಬಳಿಕ ನಡೆದ ಎಲ್ಲ ಟೆಸ್ಟ್​ ಸರಣಿಯಲ್ಲಿ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಇದೀಗ ಸೋಲಿನ ಸರಪಳಿಯಿಂದ ಹೊರಬಂದಿದೆ.

ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 189 ರನ್‌ಗಳಿಗೆ ಆಲೌಟ್​ ಆಯಿತು. ಗುರಿ ಬೆನ್ನಟಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 8 ವಿಕೆಟ್​ನಷ್ಟಕ್ಕೆ 575 ರನ್‌ಗಳಿಸಿ ಡಿಕ್ಲೇರ್ ಮಾಡಿತು. ಈ ಮೂಲಕ 386 ರನ್​ಗಳ ಮುನ್ನಡೆ ಸಾಧಿಸಿತು.

ದ್ವಿತೀಯ ಇನಿಂಗ್ಸ್​ನಲ್ಲಿ 386 ರನ್‌ಗಳ ಗುರಿ ಬೆನ್ನಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 204 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಡೇವಿಡ್ ವಾರ್ನರ್(200) ಅದ್ಭುತ ದ್ವಿಶತಕ ಬಾರಿಸಿದರೆ, ಅಲೆಕ್ಸ್​ ಕ್ಯಾರಿ(111) ಶತಕ ಸಿಡಿಸಿ ಮಿಂಚಿದರು. ಆಸ್ಟ್ರೇಲಿಯಾ ಪರ ಕ್ಯಾಮರೂನ್​ ಗ್ರೀನ್​ 5 ಮತ್ತು ನಥಾನ್ ಲಿಯೋನ್ 4 ವಿಕೆಟ್​ ಉರುಳಿಸಿದರು.

ಆಸ್ಟ್ರೇಲಿಯಾಗೆ ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ ಟಿಕೆಟ್​ ಕೂಡ ಖಚಿತವಾದಂತಾಗಿದೆ. ಅತ್ತ ಸೋಲು ಕಂಡ ದಕ್ಷಿಣ ಆಫ್ರಿಕಾಗೆ ಈ ರೇಸ್​ನಿಂದ ಹೊರಬೀಳುವ ಸಂಕಟ ಎದುರಾಗಿದೆ.

ಸ್ಕೋರ್​ ವಿವರ

ದಕ್ಷಿಣ ಆಫ್ರಿಕಾ: ಮೊದಲ ಇನಿಂಗ್ಸ್​ 189, ದ್ವಿತೀಯ ಇನಿಂಗ್ಸ್​ 204.

ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್​ 8 ವಿಕೆಟ್​ಗೆ 575 ಡಿಕ್ಲೇರ್​ (ಡೇವಿಡ್​ ವಾರ್ನರ್​ 200, ಅಲೆಕ್ಸ್​ ಕ್ಯಾರಿ 111, ಸ್ಟೀವನ್​ ಸ್ಮಿತ್​ 85)

ಇದನ್ನೂ ಓದಿ | AUS VS SA | ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಿಂದ ಕ್ಯಾಮೆರಮನ್​ಗೆ ಗೇಟ್​ ಪಾಸ್​!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

RCB vs CSK: ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು. ಆದರೆ ಈ ಮೊತ್ತವನ್ನು ಬಾರಿಸಲು ಅವಕಾಶ ಕೊಡದೆ ಪ್ಲೇ ಆಫ್​ಗೆ ಲಗ್ಗೆಯಿಟ್ಟಿತು.

VISTARANEWS.COM


on

RCB vs CSK
Koo

ಬೆಂಗಳೂರು: ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿಕೊಂಡು ಆರಂಭಿಕ ಹಂತದಲ್ಲಿ ಸತತ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಯಿಂದ ಹೊರಬೀಳಬೇಕು ಎನ್ನುವಷ್ಟರಲ್ಲಿ ಪುಟಿದೆದ್ದ ಆರ್​ಸಿಬಿ(RCB vs CSK), ಇದೀಗ ಯಾರೂ ಊಹಿಸಿದ, ಪವಾಡ ಸಂಭವಿಸಿದ ರೀತಿಯಲ್ಲಿ 4ನೇ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಟಿದೆ. ಪ್ಲೇ ಆಫ್​ ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ 27 ರನ್​ ಗಳ ಗೆಲುವು ಸಾಧಿಸಿ ಈ ಅಭೂತಪೂರ್ವ ಸಾಧನೆ ಮಾಡಿದೆ. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈಗೆ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ಮೊದಲ ಎಸೆತದಲ್ಲೇ ಆಘಾತವಿಕ್ಕಿದರು. ನಾಯಕ ಋತುರಾಜ್​ ಗಾಯಕ್ವಾಡ್​​ ಅವರನ್ನು ಶೂನ್ಯಕ್ಕೆ ಔಟ್​ ಮಾಡಿದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಚೆನ್ನೈ ಡೇಂಜಸರ್​ ಬ್ಯಾಟರ್​ ಡೇರಿಯಲ್​ ಮಿಚೆಲ್(4)​ ಅವರ ವಿಕೆಟ್​ ಕೂಡ ಕಳೆದುಕೊಂಡಿತು. ಆರ್​ಸಿಬಿ ಪಾಳಯದಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತು. ಆದರೆ ಈ ಸಂಭ್ರಮ ಹೆಚ್ಚು ಹೊತ್ತು ಸಾಗಲಿಲ್ಲ. ಮೂರನೇ ವಿಕೆಟ್​ಗೆ ರಹಾನೆ ಮತ್ತು ರಚಿನ್ ರವೀಂದ್ರ​ ಸೇರಿಕೊಂಡು ಉತ್ತಮ ಜತೆಯಾಟವೊಂದನ್ನು ಸಂಘಟಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ನಿಂದ ತಂಡಕ್ಕೆ 10 ಸರಾಸರಿಯಲ್ಲಿ ರನ್​ ಹರಿದುಬಂತು.

ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಫರ್ಗುಸನ್​ ಕೊನೆಗೂ ಬೇರ್ಪಡಿಸಿದರು. 33 ರನ್​ ಗಳಿಸಿದ ವೇಳೆ ರಹಾನೆ ವಿಕೆಟ್​ ಕಳೆದುಕೊಂಡರು. ರಹಾನೆ ಮತ್ತು ರಚಿನ್​ ಸೇರಿಕೊಂಡು ಮೂರನೇ ವಿಕೆಟ್​ಗೆ 66 ರನ್​ ಒಟ್ಟುಗೂಡಿಸಿದರು. ಕರ್ನಾಟಕ ಮೂಲದವರೇ ಆದ ನ್ಯೂಜಿಲ್ಯಾಂಡ್​ ಆಟಗಾರ ರಚಿನ್​ ರವೀಂದ್ರ ಅರ್ಧಶತಕ ಬಾರಿಸುವ ಮೂಲಕ ಕನ್ನಡಿಗರಿಗೇ ಕಂಟಕವಾಗುವ ಸೂಚನೆ ನೀಡಿದರು. ಆದರೆ ಇವರ ಬ್ಯಾಟಿಂಗ್​ ಅಬ್ಬರಕ್ಕೆ ಸ್ವಪ್ನಿಲ್ ಸಿಂಗ್​ ಬ್ರೇಕ್​ ಹಾಕಿದರು. ಮ್ಯಾಕ್ಸ್​ವೆಲ್​ ಓವರ್​ನಲ್ಲಿ ಜೀವದಾನ ಪಡೆದರೂ ಕೂಡ ಇದೇ ಓವರ್​ನಲ್ಲಿ ಇಲ್ಲದ ರನ್​ ಕದಿಯಲು ಹೋಗಿ ರನೌಟ್​ ಬಲೆಗೆ ಬಿದ್ದರು. ರಚಿನ್​ 37 ಎಸೆತಗಳಿಂದ 61 ರನ್(5 ಬೌಂಡರಿ, 3 ಸಿಕ್ಸರ್​) ಬಾರಿಸಿದರು. ಈ ವಿಕೆಟ್​ ಪತನದ ಬಳಿಕ ಶಿವಂ ದುಬೆ(7) ವಿಕೆಟ್​ ಕೂಡ ಬಿತ್ತು.

ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರೂ ಕೂಡ ಇದು ಸಾಧ್ಯವಾಗಲಿಲ್ಲ. ಧೋನಿ ಕ್ರೀಸ್​ನಲ್ಲಿ ಇರುತ್ತಿದ್ದರೆ ಚೆನ್ನೈಗೆ ಗೆಲುವು ಖಚಿತವಾಗಿರುತ್ತಿತ್ತು. 6 ಎಸೆತಗಳಲ್ಲಿ 17 ರನ್​ ಬೇಕಿದ್ದಾಗ ಧೋನಿ ಯಶ್​ ದಯಾಳ್​ ಅವರ ಮೊದಲ ಎಸೆತವನ್ನೇ ಸ್ಟೇಡಿಯಂನಿಂದ ಹೊರಗೆಡೆ ಬಾರಿಸಿ 6 ರನ್​ ಕಲೆಹಾಕಿದರು. ಈ ಸಿಕ್ಸರ್​ 110 ಮೀಟರ್​ ದೂರಕ್ಕೆ ಸಿಡಿಯಿತು. ಆದರೆ ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಇಲ್ಲಿಗೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು. ಅಂತಿಮ 2 ಎಸೆತದಲ್ಲಿ 10 ರನ್​ ಗಳಿಸುವ ಯತ್ನದಲ್ಲಿ ಜಡೇಜಾ ವಿಫಲರಾದರು. ಧೋನಿ 13 ಎಸೆತಗಳಿಂದ 25 ರನ್​ ಚಚ್ಚಿದರು.

18ರ ಅದೃಷ್ಟ ಗೆದ್ದ ಆರ್​ಸಿಬಿ


ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿತ್ತು. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿತ್ತು. ಹೀಗಾಗಿ ಇಂದು ಕೂಡ ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆಯಾಗಿತ್ತು. ಅದರಂತೆ ಆರ್​ಸಿಬಿ ಗೆಲುವು ಸಾಧಿಸಿ ಅಭಿಮಾನಿಗಳ ನಂಬಿಕೆಯನ್ನು ಉಳಿಸಿಕೊಂಡಿದೆ. ಮೇ 18ರಂದು ಆರ್​ಸಿಬಿ ವಿರುದ್ಧ ಚೆನ್ನೈ 3ನೇ ಸೋಲಿಗೆ ತುತ್ತಾಯಿತು.

ಕೊಹ್ಲಿ-ಡುಪ್ಲೆಸಿಸ್​ ಉತ್ತಮ ಜತೆಯಾಟ


ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಮೊದಲ ಓವರ್​ನಲ್ಲಿ ಕೇವಲ 2 ರನ್​ ಮಾತ್ರ ಗಳಿಸಿತು. ಆ ಬಳಿಕದ 2 ಓವರ್​ನಲ್ಲಿ ಸಿಡಿದು ನಿಂತ ಕೊಹ್ಲಿ ಮತ್ತು ಡುಪ್ಲೆಸಿಸ್​ 29 ರನ್​ ಬಾಚಿದರು. 3 ಓವರ್​ಗೆ 31 ರನ್​ ಹರಿದು ಬಂತು. ಇದೇ ವೇಳೆ ಮಳೆ ಕೂಡ ಸುರಿಯಿತು. ಕೆಲ ಕಾಲ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಮಳೆ ನಿಂತ ಮೇಲೆ ಪಿಚ್ ವರ್ತನೆ ಕೊಂಚ ಬದಲಾಯಿತು. ಸ್ಪಿನ್ನರ್​ಗಳು ನಿಯಂತ್ರ ಸಾಧಿಸಿದರು. ಇದರಿಂದ ಆರ್​ಸಿಬಿಯ ರನ್​ ಗಳಿಕೆಯೂ ಕೆಲ ಕಾಲ ನಿಧಾನಗತಿಯಿಂದ ಸಾಗಿತು.

ಪಿಚ್​ ವರ್ತನೆಯನ್ನು ಅರಿತುಕೊಂಡ ಬಳಿಕ ಕೊಹ್ಲಿ ಮತ್ತು ಡು ಪ್ಲೆಸಿಸ್​ ಮತ್ತೆ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಅನುಭವಿ ರವೀಂದ್ರ ಜಡೇಜಾಗೆ ಡು ಪ್ಲೆಸಿಸ್​ ಸತತವಾಗಿ 2 ಸಿಕ್ಸರ್​ ಚಚ್ಚಿದರು. ಉತ್ತಮವಾಗಿ ಆಡುತ್ತಿದ್ದ ವಿರಾಟ್​ ಕೊಹ್ಲಿ ಬೌಂಡರಿ ಲೈನ್​ನಲ್ಲಿ ಡ್ಯಾರಿಲ್​ ಮಿಚೆಲ್ ಹಿಡಿದ ಅಸಾಮಾನ್ಯ ಕ್ಯಾಚ್​ಗೆ ಬಲಿಯಾದರು. 47 ರನ್​ ಗಳಿಸಿ ಕೇವಲ 3 ರನ್​ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ದಾಖಲಾಯಿತು. ಕೊಹ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು.​ ಕೊಹ್ಲಿ ಒಟ್ಟು 36 ಸಿಕ್ಸರ್​ ಬಾರಿಸಿದ್ದಾರೆ. ಲಕ್ನೋ ತಂಡ ನಿಕೋಲಸ್​​ ಪೂರನ್​ ಕೂಡ 36 ಸಿಕ್ಸರ್​ ಬಾರಿಸಿದ್ದಾರೆ. ಇದು ಮಾತ್ರವಲ್ಲದೆ ಕೊಹ್ಲಿ ಈ ಬಾರಿ 700 ರನ್​ಗಳ ಗಡಿ ದಾಟಿದರು.

ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

ಕೊಹ್ಲಿ ವಿಕೆಟ್​ ಪತನದ ಬಳಿಕ ಆಡಲಿಳಿದ ರಜತ್​ ಪಾಟೀದಾರ್​ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತ ನೀಡಿದರು. ಆದರೆ ಸ್ಟ್ರೇಟ್​ ಡ್ರೈ ಮಾಡುವ ಯತ್ನದಲ್ಲಿ ನಾನ್​ ಸ್ಟ್ರೈಕರ್​ನಲ್ಲಿದ್ದ ಡು ಪ್ಲೆಸಿಸ್​ ಅವರನ್ನು ರನೌಟ್​ ಆಗುವಂತೆ ಮಾಡಿದರು. ಪಾಟಿದಾರ್​ ಹೊಡೆದ ಚೆಂಡು ಸ್ಯಾಂಟ್ನರ್​ ಅವರ ಕೈಗೆ ತಗುಲಿ ನೇರವಾಗಿ ವಿಕೆಟ್​ಗೆ ತಗುಲಿತು. ಕ್ರೀಸ್​ ಬಿಟ್ಟು ನಿಂತಿದ್ದ ಡು ಪ್ಲೆಸಿಸ್​ ರನೌಟ್​ ಸಂಕಟಕ್ಕೆ ಸಿಲುಕಿದರು. ಡು ಪ್ಲೆಸಿಸ್​ ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ನೆರವಿನಿಂದ 54 ರನ್​ ಬಾರಿಸಿದರು.

ಜೀವದಾನ ಪಡೆದ ಗ್ರೀನ್​


ಮೂರನೇ ವಿಕೆಟ್​ಗೆ ಜತೆಯಾದ ಕ್ಯಾಮರೂನ್​ ಗ್ರೀನ್​ ಮತ್ತು ಪಾಟಿದಾರ್​ ಕೂಡ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. ಇದೇ ವೇಳೆ ಗ್ರೀನ್​ ಅವರು ನಾಯಕ ಋತುರಾಜ್​ ಗಾಯಕ್ವಾಡ್​ ಅವರಿಂದ ಕ್ಯಾಚ್​ ಕೈ ಚೆಲ್ಲಿ ಜೀವದಾನವೊಂದನ್ನು ಪಡೆದರು. ಈ ವೇಳೆ ಗ್ರೀನ್​ 18 ರನ್​ ಗಳಿಸಿದ್ದರು. ಸಿಕ್ಕ ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಗ್ರೀನ್​ ಅಜೇಯ 38 ರನ್​ ಬಾರಿಸಿ ಚೆನ್ನೈಗೆ ಕಂಟಕವಾದರು. ಪಾಟಿದಾರ್​ ಮತ್ತು ಗ್ರೀನ್​ 3ನೇ ವಿಕೆಟ್​ಗೆ ಅತ್ಯಮೂಲ್ಯ 71 ರನ್​ಗಳ ಜತೆಯಾಟ ನಿಭಾಯಿಸಿದರು. ಪಾಟಿದಾರ್​ ಕೂಡ ಕೊಹ್ಲಿಯಂತೆ ಮಿಚೆಲ್​ ಕ್ಯಾಚ್​ಗೆ ವಿಕೆಟ್​ ಕಳೆದುಕೊಂಡರು. 23 ಎಸೆತ ಎದುರಿಸಿ 41 ರನ್​ ಬಾರಿಸಿದರು. ಈ ವೇಳೆ 4 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು. ಬಳಿಕ ಬಂದ ದಿನೇಶ್​ ಕಾರ್ತಿಕ್​(14) ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​(16) ರನ್​ ಬಾರಿಸಿ ವಿಕೆಟ್​ ಕಳೆದುಕೊಂಡರು. ಚೆನ್ನೈ ಪರ ಶಾರ್ದೂಲ್​ ಠಾಕೂರ್​ 2 ವಿಕೆಟ್​ ಪಡೆದರೂ ಕೂಡ 61 ರನ್​ ಬಿಟ್ಟು ಕೊಟ್ಟು ದುಬಾರಿಯಾದರು. ಅನುಭವಿ ರವೀಂದ್ರ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು.

Continue Reading

ಕರ್ನಾಟಕ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ವಿಡಿಯೊ ಮಾಡಿ ಹರಿಬಿಟ್ಟಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಐಪಿಎಲ್‌ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ಹೇಳಿದ್ದ ಯುವಕನನ್ನು ಕಬ್ಬನ್ ಪಾರ್ಕ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ವಿಡಿಯೊ ಮಾಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ನಿತಿನ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಯುವಕ ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮೇ 18ರಂದು ನಡೆಯುವ ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುತ್ತೇನೆ ಎಂದು ಯುವಕ ವಿಡಿಯೊದಲ್ಲಿ ಹೇಳಿದ್ದ. ಈ ವಿಡಿಯೊವನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಗಮನಿಸಿ ನಿತಿನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಮಾರ್ಚ್‌ 25ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಅಭಿಮಾನಿಯೊಬ್ಬ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಪ್ರಸಂಗ ನಡೆದಿತ್ತು. ಈ ಘಟನೆಯಿಂದ ಪ್ರೇರಣೆಗೊಂಡ ಬೆಂಗಳೂರಿನ ಯುವಕ ನಿತಿನ್‌, ತಾನು ಕೂಡ ಮೈದಾನಕ್ಕೆ ನುಗ್ಗುವುದಾಗಿ ವಿಡಿಯೊದಲ್ಲಿ ಹೇಳಿದ್ದ. ಇದರಿಂದ ಪಂದ್ಯದ ವೇಳೆ ಸಮಸ್ಯೆಯಾಗಬಹುದು ಎಂದು ಕ್ರೀಡಾಂಗಣದ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ | RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

ಯುವಕನ ವಿಡಿಯೊ ವೈರಲ್‌ ಆದ ಬಳಿಕ ನಿಗಾ ವಹಿಸಿದ್ದ ಪೊಲೀಸರು, ಯುವಕ ಟಿಕೆಟ್‌ ಪಡೆದು ಪಂದ್ಯ ವೀಕ್ಷಿಸಲು ಶನಿವಾರ ಆಗಮಿಸಿದ್ದಾಗ ವಶಕ್ಕೆ ಪಡೆದಿದ್ದಾರೆ.

ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದಿದ್ದ ಅಭಿಯಾನಿ

ಮಾರ್ಚ್‌ನಲ್ಲಿ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂಗೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಅಭಿಯಾನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ಆರಂಭಿಸಲು ಸಿದ್ಧತೆ ನಡೆಸುತ್ತಿತ್ತು. ಆಗ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಅ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿ ಪಿಚ್‌ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ | RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

ರಾಯಚೂರು ಮೂಲದ ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿ ಕುರುಮಪ್ಪ‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಅತ ಪೊಲೀಸ್​ ವಿಚಾರಣೆ ವೇಳೆ ತನ್ನ ಮೂಲ ಹೆಸರನ್ನು ಮರೆ ಮಾಚಿ ರಂಜಿತ್ ಎಂದು ಹೇಳಿದ್ದ. ದಾಖಲೆಗಳನ್ನು ಪರಿಶೀಲಿಸುವ ವೇಳೆ ಆತ ರಂಜಿತ್​ ಅಲ್ಲ ಕುರುಮಪ್ಪ‌ ಎಂಬ ವಿಚಾರ ಬೆಳಕಿಗೆ ಬಂದಿತ್ತು. ನಂತರ ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಲಾಗಿತ್ತು.

Continue Reading

ಕ್ರೀಡೆ

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

RCB vs CSK: ವಿರಾಟ್​ ನಾಲ್ಕು ಸಿಕ್ಸರ್​ ಬಾರಿಸುತ್ತಿದ್ದಂತೆ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ನಿಕೋಲಸ್​ ಪೂರನ್​(36 ಸಿಕ್ಸರ್) ಜತೆ ಜಂಟಿ ಅಗ್ರಸ್ಥಾನ ಪಡೆದರು.

VISTARANEWS.COM


on

RCB vs CSK
Koo

ಬೆಂಗಳೂರು: ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಚೆನ್ನೈ ಸೂಪರ್​ ಕಿಂಗ್ಸ್(RCB vs CSK)​ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದಿದ್ದಾರೆ. ಕೊಹ್ಲಿ ಈ ಬಾರಿ ಒಟ್ಟು 36 ಸಿಕ್ಸರ್​ ಬಾರಿಸಿದ್ದಾರೆ.

ಎಂ. ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿಗೆ ವಿರಾಟ್​ ಕೊಹ್ಲಿ ತಮ್ಮ ಮನಮೋಹಕ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. 29 ಎಸೆತಗಳಿಂದ 47 ರನ್​ ಗಳಿಸಿ ಔಟಾಗುವ ಮೂಲಕ ಕೇವಲ 3 ಅಂತರದಿಂದ ಅರ್ಧಶತಕದಿಂದ ವಂಚಿತರಾದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ದಾಖಲಾಯಿತು.

ವಿರಾಟ್​ ನಾಲ್ಕು ಸಿಕ್ಸರ್​ ಬಾರಿಸುತ್ತಿದ್ದಂತೆ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ನಿಕೋಲಸ್​ ಪೂರನ್​(36 ಸಿಕ್ಸರ್) ಜತೆ ಜಂಟಿ ಅಗ್ರಸ್ಥಾನ ಪಡೆದರು. 35 ಸಿಕ್ಸರ್​ ಬಾರಿಸಿ 2ನೇ ಸ್ಥಾನದಲ್ಲಿರುವ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಅಭಿಷೇಕ್​ ಶರ್ಮ ನಾಳಿನ ಪಂದ್ಯದಲ್ಲಿ 2 ಸಿಕ್ಸರ್​ ಬಾರಿಸಿದರೆ ಅಗ್ರಸ್ಥಾನ ಅವರ ಪಾಲಾಗಲಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಬ್ಯಾಟರ್​ಗಳು


ವಿರಾಟ್​ ಕೊಹ್ಲಿ-36 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಅಭಿಷೇಕ್​ ಶರ್ಮ-35 ಸಿಕ್ಸರ್​

ಸುನೀಲ್​ ನರೈನ್-34 ಸಿಕ್ಸರ್​

ಇದನ್ನೂ ಓದಿ Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

ಚೆನ್ನೈ ವಿರುದ್ಧದ ಪಂದ್ಯದಲ್ಲಿ 3 ರನ್​ ಗಳಿಸುತ್ತಿದ್ದಂತೆ ಕೊಹ್ಲಿ ಅವರು ರೋಹಿತ್​ ದಾಖಲೆಯೊಂದನ್ನು ಹಿಂದಿಕ್ಕಿದರು. ಐಪಿಎಲ್​ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದ ದಾಖಲೆ ತಮ್ಮ ಹೆಸರಿಗೆ ಬರೆದರು. ರೋಹಿತ್​ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್​ ಬಾರಿಸಿದ್ದರು. ಇದೀಗ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3 ಸಾವಿರಕ್ಕೂ ಅಧಿಕ ರನ್​ ಬಾರಿಸಿದ್ದಾರೆ. ಇದು ಮಾತ್ರವಲ್ಲದೆ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 700 ರನ್​ಗಳ ಗಡಿ ದಾಟಿದರು.

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. 

ಇಂಪ್ಯಾಕ್ಟ್​ ನಿಯಮದ ಬಗ್ಗೆ ಕೊಹ್ಲಿ ಅಸಮಾಧಾನ 

ಐಪಿಎಲ್​ನಲ್ಲಿ ಜಾರಿಯಲ್ಲಿರುವ ಇಂಪ್ಯಾಕ್ಟ್​ ನಿಯಮದ(Impact Player) ಬಗ್ಗೆ ವಿರಾಟ್​ ಕೊಹ್ಲಿ(Virat Kohli) ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಪಂದ್ಯಕ್ಕೂ ಮುನ್ನ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಕೊಹ್ಲಿ, ಇಂಪ್ಯಾಕ್ಟ್​ ಪ್ಲೇಯರ್​ ನಿಯಮ ಕ್ರಿಕೆಟ್​ನ ಸಮತೋಲನವನ್ನು ಹಾಳು ಮಾಡುತ್ತಿದೆ. ಮನರಂಜನೆ ಎನ್ನುವುದು ಕ್ರಿಕೆಟ್​ನ ಒಂದು ಭಾಗವಾಗಿರಬೇಕು. ಆಟವೇ ಮನರಂಜನೆಯಾಗಬಾರದು. ಹಾಗಾದಲ್ಲಿ ಕ್ರಿಕೆಟ್​ನ ನೈಜ ಸ್ವರೂಪ್ ಕಳೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಇಂಪ್ಯಾಕ್ಟ್​ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರ ಮಾತನ್ನು ನಾನು ಒಪ್ಪುತ್ತೇನೆ. ಇಂಪ್ಯಾಕ್ಟ್​ ಪ್ಲೇಯರ್​ ನಿಯಮದಿಂದ ಆಟದಲ್ಲಿ ಸಮತೋಲನ ಉಳಿಯುತ್ತಿಲ್ಲ. ಇದು ಕ್ರಿಕೆಟಿಗರ ಭವಿಷ್ಯಕ್ಕೂ ಮಾರಕವಾಗಲಿದೆ. ಒಂದು ಇನಿಂಗ್ಸ್​ ಆಡಿದ ಬಳಿಕ ಆತ, ಮೈದಾನ ತೊರೆಯಬೇಕು. ಇದರಿಂದ ಆತ ಕ್ರಿಕೆಟ್​ ಎಂದರೆ ಏನು ಎಂಬುದನ್ನು ಕಲಿಯಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿದರು.

Continue Reading

ಕ್ರೀಡೆ

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

RCB vs CSK: ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಕಣಕ್ಕಿಳಿದಿದೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್‌, ನಟ ಶಿವರಾಜ್​ ಕುಮಾರ್​, ರಿಷಬ್​ ಶೆಟ್ಟಿ ಸೇರಿ ಅನೇಕರು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದಾರೆ. ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಗಣ್ಯರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು ಎಂದು ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಆರ್​ಸಿಬಿಗೆ ಸಪೋರ್ಟ್​ ಮಾಡಲು ಮಹಿಳಾ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ತಂಡದ ಆಟಗಾರ್ತಿಯರಾದ ಶ್ರೇಯಾಂಕ ಪಾಟೀಲ್​,ಆಶಾ ಶೋಭನಾ ಹಾಗೂ ಇತರೆ ಆಟಗಾರ್ತಿಯರು ಕೂಡ ಹಾಜರಾಗಿದ್ದಾರೆ. ಆರ್​ಸಿಬಿ ಮಾಜಿ ಆಟಗಾರ ಕ್ರಿಸ್​ ಗೇಲ್​ ಕೂಡ 333 ನಂಬರ್​ನ ಆರ್​ಸಿಬಿ ಜೆರ್ಸಿಯಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ.

ಪಂದ್ಯವನ್ನು ಆರ್​ಸಿಬಿ ತಂಡ ಗೆಲ್ಲುತ್ತದೆ ಎಂದು ಮಹಿಳಾ ಆಟಗಾರ್ತಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೋಟೋವನ್ನು ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹ್ಯಾಟ್ರಿಕ್​ ಹೀರೊ ಶಿವರಾಜ್​ ಕುಮಾರ್​ ಅವರು ಆರ್​ಸಿಬಿ ಜೆರ್ಸಿ ತೊಟ್ಟ ಫೋಟೊವನ್ನು ಅವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್​ಸಿಬಿ ಹುಡುಗರೇ ಎಂದು ಬರೆದುಕೊಂಡಿದ್ದಾರೆ.

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

Continue Reading
Advertisement
Karnataka Police
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ4 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ4 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ4 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ5 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ5 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ5 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ5 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ7 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ7 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌