NPS News | ಕಂಡಿಷನ್‌ ಒಪ್ಪಿ ಕೆಲಸಕ್ಕೆ ಸೇರಿ ಈಗ OPS ಕೇಳುವುದು ಸೌಜನ್ಯವಲ್ಲ: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ - Vistara News

ಕರ್ನಾಟಕ

NPS News | ಕಂಡಿಷನ್‌ ಒಪ್ಪಿ ಕೆಲಸಕ್ಕೆ ಸೇರಿ ಈಗ OPS ಕೇಳುವುದು ಸೌಜನ್ಯವಲ್ಲ: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ

ಹೊಸ ಪಿಂಚಣಿ ಯೋಜನೆಯಿಂದ ತಮ್ಮ ನಿವೃತ್ತಿ ಜೀವನದಲ್ಲಿ ಅಭದ್ರತೆ ಕಾಡುತ್ತದೆ ಎಂದು ಅನೇಕ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

VISTARANEWS.COM


on

NPS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನ ಪರಿಷತ್‌(ಬೆಳಗಾವಿ): ಹೊಸ ಪಿಂಚಣಿ ಯೋಜನೆಯನ್ನು (NPS News) ರದ್ದುಗೊಳಿಸಿ, ಈ ಹಿಂದಿನಂತೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು ಎಂಬ ಹೋರಾಟದ ಕುರಿತು ಸರ್ಕಾರ ನಕಾರಾತ್ಮಕ ಪ್ರತಿಕ್ರಿಯೆ ನೀಡಿದೆ.

ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಬದಲಾವಣೆ ಕುರಿತಂತೆ ಸರ್ಕಾರದ ನಿಲುವೇನು ಎಂದು ಪರಿಷತ್‌ನಲ್ಲಿ ಡಾ. ತಳವಾರ್‌ ಸಾಬಣ್ಣ ಅವರ ಪ್ರಶ್ನೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಉತ್ತರ ನೀಡಿದ್ದಾರೆ.

೨೦೦೪ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಆದೇಶ ಹೊರಡಿಸಿತು. ೨೦೦೬ರಲ್ಲಿ ರಾಜ್ಯ ಸರ್ಕಾರವೂ ಕೂಡ ಅದೇ ನಿಯಮ ಮುಂದುವರಿಸಿತು. ಈಗ ಪ್ರತಿ ತಿಂಗಳು ೨೪ ಕೋಟಿ ರೂ.ನಷ್ಟು ಪಿಂಚಣಿಯನ್ನೇ ನೀಡಲಾಗುತ್ತಿದೆ.

ಸರ್ಕಾರಿ ಸೇವೆಗೆ ನೋಟಿಪಿಕೇಶನ್ ಹೊರಡಿಸಿದಾಗಲೇ, ಪಿಂಚಣಿ ನೀಡುವುದಿಲ್ಲ ಎಂಬ ನಿಬಂಧನೆ ವಿಧಿಸಲಾಗಿತ್ತು. ಅದನ್ನು ಓದಿಕೊಂಡೇ ಎಲ್ಲರೂ ಕೆಲಸಕ್ಕೆ ಸೇರಿದ್ದಾರೆ. ನೇಮಕಾತಿ ಆದಮೇಲೆ ಈಗ ಪಿಂಚಣಿ ಕೇಳುವುದು, ಕಾನೂನು ಸಚಿವನಾಗಿ ನನಗೆ ಸರಿ ಎನ್ನಿಸುತ್ತಿಲ್ಲ. ನಿಬಂಧನೆಗಳನ್ನು ಓದದೇ ಕೆಲಸಕ್ಕೆ ಸೇರಿಕೊಂಡೆವು ಎಂದು ಹೇಳಬಾರದು.

ಆದರೂ ಈ ಕುರಿತು ಪರಿಶೀಲನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುವುದಾಗಿ ತಿಳಿಸಿದ್ದಾರೆ. ಎನ್‌ಪಿಎಸ್‌ನಲ್ಲೇ ಒಪಿಎಸ್‌ ತರಬಹುದೇ ಎಂದೂ ನೋಡುತ್ತಾರೆ. ಇದಕ್ಕಾಗಿ ಸಮಿತಿ ರಚನೆ ಮಾಡಿ ಪರಿಶೀಲಿಸಲಾಗುತ್ತದೆ ಎಂದರು.

ಎನ್‌ಪಿಎಸ್‌ ಯೋಜನೆಯನ್ನು ರದ್ದುಪಡಿಸಿ ಹಳೆಯ ವ್ಯವಸ್ಥೆಗೆ ಮರಳಬೇಕು ಎಂದು ಎನ್‌ಪಿಎಸ್‌ ನೌಕರರ ಸಂಘದಿಂದ ಬೆಳಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈಗಾಗಲೆ ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಭೇಟಿ ನೀಡಿ ಬೆಂಬಲ ನೀಡಿದ್ದಾರೆ. ಆದರೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಭರವಸೆ ನೀಡಿಲ್ಲ. ಈ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುತ್ತದೆ ಎಂದಷ್ಟೆ ತಿಳಿಸಿದ್ದಾರೆ.

ಇದನ್ನೂ ಓದಿ | NPS News | ಎನ್‌ಪಿಎಸ್‌ ರದ್ದುಪಡಿಸುವ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ: ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಭೇಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೈಂ

‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

‌Actor Darshan: ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

VISTARANEWS.COM


on

Actor Darshan Please leave Pavitra Darshan request to police
Koo

ಬೆಂಗಳೂರು: ಆರ್‌ಆರ್‌ ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ, ನಟ ದರ್ಶನ್‌ (Actor Darshan) ಹಾಗೂ ಈತನ ಗ್ಯಾಂಗ್‌ (D boss Gang) ವಿರುದ್ಧ ಸಾಕ್ಷಿಯಾಗಿ (evidence) 139ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 28 ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ.

ಆರೋಪಿಗಳು ಧರಿಸಿದ್ದ ಬಟ್ಟೆ, ಶೆಡ್‌ನಲ್ಲಿ ಹಲ್ಲೆಗೆ ಬಳಸಿದ್ದ ಲಾಠಿ, ಮರದ ರಿಪೀಸ್ ವಸ್ತುಗಳು, ತುಳಿದ ಶೂಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್, ಸಿಸಿಟಿವಿ ರೆಕಾರ್ಡ್, ಕೃತ್ಯದ ವೇಳೆ ಹಾಗೂ ಶವ ಬಿಸಾಡಲು ಬಳಸಿದ್ದ ಕಾರುಗಳು‌, ಆರೋಪಿಗಳು ಪಡೆದುಕೊಂಡಿದ್ದ ಹಣ, ಆರೋಪಿಗಳ ಮೊಬೈಲ್ ಪೋನ್, ಕಾರ್ ಶೆಡ್ ಕಡೆ ಹೋಗುವ ಸಿಸಿಟಿವಿ ರೆಕಾರ್ಡ್‌, ಮೃತದೇಹದ ಮೇಲಿಂದ ಕಳುವಾಗಿದ್ದ ‍ಚಿನ್ನಾಭರಣ ಸೇರಿದಂತೆ ಒಟ್ಟು 139 ವಸ್ತು ಸೀಜ್ ಮಾಡಲಾಗಿದೆ.

ಪ್ರಕರಣದಲ್ಲಿ ಇದುವರೆಗೂ 28 ಕಡೆ ಮಹಜರ್ ಮಾಡಲಾಗಿದೆ. ದರ್ಶನ್ ಸೇರಿ ಎಲ್ಲ 17 ಆರೋಪಿಗಳ ನಿವಾಸ ಹಾಗೂ ಬೇರೆ 11 ಸ್ಥಳಗಳಲ್ಲೂ ಮಹಜರ್ ನಡೆಸಲಾಗಿದೆ. ರೇಣುಕಾಸ್ವಾಮಿ ಕರೆತಂದು ಹಲ್ಲೆ ಕೃತ್ಯ ನಡೆಸಿದ ಪಟ್ಟಣಗೆರೆ ಶೆಡ್, ರೇಣುಕಾಸ್ವಾಮಿಯ ಶವ ಬಿಸಾಡಿದ ರಾಜಕಾಲುವೆ, ಶವ ಬಿಸಾಡಿದ್ದ ಆರೋಪಿಗಳು ತಂಗಿದ್ದ ಆರ್.ಆರ್.ನಗರದ ಹೋಟೆಲ್, ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್, ಕಿಡ್ನಾಪ್ ಮಾಡಿದ್ದ ಚಿತ್ರದುರ್ಗದ ಸ್ಥಳ, ಮೈಸೂರಿನ ಖಾಸಗಿ ಹೋಟೆಲ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

ವಿಡಿಯೋ ಮಾಡಿದ ಮೂವರು ಪೊಲೀಸ್‌ ವಶಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Continue Reading

ಮಳೆ

Karnataka Weather : ಜೂ.23ಕ್ಕೆ ಹೈ ಅಲರ್ಟ್‌! ಇಂದು ವಿಪರೀತ ಮಳೆಯೊಂದಿಗೆ ಬೀಸಲಿದೆ ಬಿರುಗಾಳಿ

Karnataka Weather forecast : ರಾಜ್ಯಾದ್ಯಂತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain News) ನೀಡಿದೆ. ಜೂ.23ಕ್ಕೆ ಕರಾವಳಿಗೆ ಹೈ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.21ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ (Karnataka Weather Forecast) ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಸೇರಿ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಬೆಂಗಳೂರಲ್ಲಿ ಚದುರಿದಂತೆ ಮಳೆ

ಬೆಂಗಳೂರಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್‌ 23ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್‌ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಇಂದಿನಿಂದ ಜೂನ್‌ 23ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ram mohan raju actor darshan
ಪ್ರಮುಖ ಸುದ್ದಿ4 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್7 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest23 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest26 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ31 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್59 mins ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

pm narendra modi international yoga day 2024
ಪ್ರಮುಖ ಸುದ್ದಿ2 hours ago

International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌