ಮಕ್ಕಳ ಕಥೆ: ಹುಲ್ಲನ್ನು ಚಿನ್ನ ಮಾಡುವ ಕಿನ್ನರ! - Vistara News

ಕಲೆ/ಸಾಹಿತ್ಯ

ಮಕ್ಕಳ ಕಥೆ: ಹುಲ್ಲನ್ನು ಚಿನ್ನ ಮಾಡುವ ಕಿನ್ನರ!

ಹುಲ್ಲನ್ನು ಚಿನ್ನ ಮಾಡಲು ಆ ಪುಟ್ಟ ಹುಡುಗಿಗೆ ನೆರವಾದ ಆ ನಿಗೂಢ ಕಿನ್ನರ. ಅದಕ್ಕೆ ಬದಲಾಗಿ ಅವನು ಅವಳಿಂದ ಕೇಳಿದ್ದೇನು? ಅವಳು ರಾಣಿಯಾದಳೇ? ಅವಳ ಮಗುವಿಗೆ ಏನಾಯಿತು? ಓದಿ ಈ ಮಕ್ಕಳ ಕಥೆ.

VISTARANEWS.COM


on

children story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಂದೂರು. ಅಲ್ಲೊಬ್ಬ ಬಡ ಶ್ರಮಜೀವಿಯಿದ್ದ. ದಿನವಿಡೀ ಗಿರಣಿಯಲ್ಲಿ ಕೆಲಸ ಮಾಡಿ, ಧಾನ್ಯಗಳನ್ನು ಹಿಟ್ಟು ಮಾಡುತ್ತಿದ್ದ. ಅವನಿಗೊಬ್ಬಳು ಮಗಳಿದ್ದಳು. ತನ್ನಲ್ಲಿ ಹಿಟ್ಟು ಮಾಡಿಸಲು ಬರುವ ಎಲ್ಲರನ್ನೂ ನಾನಾ ರೀತಿಯ ಕಥೆಗಳನ್ನು ಹೇಳಿ ಬಡವ ರಂಜಿಸುತ್ತಿದ್ದ.

ಒಂದು ದಿನ ಊರಿನ ರಾಜ ಅವನಲ್ಲಿಗೆ ಬಂದ. ಎಂದಿನಂತೆ ನಾನಾ ರೀತಿಯ ಕಥೆಗಳನ್ನು ಹೇಳಿ ರಂಜಿಸುತ್ತಿದ್ದ ಬಡವ, ತನ್ನ ಮಗಳು ಎಷ್ಟೊಂದು ಜಾಣೆ ಎಂಬುದನ್ನೂ ಹೆಮ್ಮೆಯಿಂದ ವರ್ಣಿಸುತ್ತಿದ್ದ. ಇದನ್ನು ಕೇಳುತ್ತಿದ್ದ ರಾಜನ ಕುತೂಹಲ ಹೆಚ್ಚಿತು. ಅವನನ್ನು ತನ್ನ ಬಳಿಗೆ ಕರೆದ. ‘ʼಏನಂಥ ವಿಶೇಷತೆಯಿದೆ ನಿನ್ನ ಮಗಳ ಗುಣದಲ್ಲಿ?ʼ’ ಎಂದು ಆತನನ್ನು ಪ್ರಶ್ನಿಸಿದ.

ಇವನಿಗೋ, ತನ್ನ ಮಗಳ ಹೆಚ್ಚುಗಾರಿಕೆಯನ್ನು ಬಣ್ಣಿಸುವ ಆತುರ. ಸರಿಯೋ ತಪ್ಪೋ ಯೋಚಿಸದೆ ರಾಜನಲ್ಲಿ- “ಏನೆಂದು ಬಣ್ಣಿಸಲಿ ಮಹಾರಾಜ? ನನ್ನ ಮಗಳೆಂಥ ಜಾಣೆ ಎಂದರೆ ಹುಲ್ಲನ್ನೂ ಚಿನ್ನವನ್ನಾಗಿ ಮಾಡಬಲ್ಲಳು!ʼ’ ಎಂದುಬಿಟ್ಟ. ರಾಜನಿಗೆ ಅಚ್ಚರಿಯಾಯಿತು. ‘ʻಹೌದೇ! ಸರಿ, ಅವಳನ್ನು ನನ್ನ ಅರಮನೆಗೆ ಕರೆದುಕೊಂಡು ಬಾ. ನಾನದನ್ನು ಪರೀಕ್ಷಿಸಬೇಕಿದೆʼ’ ಎಂದುಬಿಟ್ಟ ಅರಸ. ಹೌಹಾರಿದ ಬಡವ, ‘ʻಮಹಾಸ್ವಾಮಿ, ನಾನು ಹೇಳಿದ್ದು… ನನ್ನ ಮಾತಿನ ಅರ್ಥ…ʼ’ ಊಹುಂ! ಏನು ಹೇಳುವುದಕ್ಕೂ ತಡವಾಗಿತ್ತು. ಆಜ್ಞೆಯನ್ನು ಮಾಡಿದ ಅರಸ ಅರಮನೆಗೆ ಹಿಂದಿರುಗಿಯಾಗಿತ್ತು.

ರಾಜನ ಆದೇಶದಂತೆ, ಬಡವನ ಮಗಳು ಅರಮನೆಗೆ ಹೋದಳು. ಅವಳನ್ನು ಒಂದು ಕೋಣೆಗೆ ಕರೆದೊಯ್ದ ರಾಜ, ‘ʼಏ ಹುಡುಗಿ! ಈ ಕೋಣೆಯಲ್ಲಿರುವ ಹುಲ್ಲನ್ನೆಲ್ಲಾ ನಾಳೆ ಬೆಳಗಾಗುವುದರೊಳಗೆ ಚಿನ್ನವನ್ನಾಗಿ ಮಾಡು. ಇಲ್ಲದಿದ್ದರೆ ನಿನ್ನ ಜೀವ ಉಳಿಯುವುದಿಲ್ಲʼ’ ಎಂದು ಹೇಳಿ, ಬಾಗಿಲು ಹಾಕಿಕೊಂಡು ನಡೆದುಬಿಟ್ಟ. ಪಾಪದ ಹುಡುಗಿ, ಒಂಟಿಯಾಗಿ ಕುಳಿತು ಯೋಚಿಸತೊಡಗಿದಳು. ಹುಲ್ಲನ್ನು ಚಿನ್ನವನ್ನಾಗಿ ಮಾಡುವುದು ಗೊತ್ತಿದ್ದರೆ ತಾನೇಕೆ ಹೀಗಿರುತ್ತಿದ್ದೆ! ‘ʻನಾನೇ ಏನು, ಇದು ಯಾರಿಂದಲೂ ಅಸಾಧ್ಯʼ’ ಎಂದು ತನ್ನಷ್ಟಕ್ಕೆ ಹೇಳಿಕೊಂಡಳು.

‘ʻಯಾರಿಂದಲೂ ಅಸಾಧ್ಯ ಎಂದ ಹಾಗಾಯ್ತುʼ’ ಎನ್ನುತ್ತಾ ಪುಟ್ಟ ಕಿನ್ನರನೊಬ್ಬ ಅವಳೆದುರು ಪ್ರತ್ಯಕ್ಷನಾದ. ‘ʻನೀನೆಲ್ಲಿಂದ ಬಂದೆ?ʼ’ ಬೆಚ್ಚಿದ ಹುಡುಗಿ ಅವನನ್ನು ಪ್ರಶ್ನಿಸಿದಳು.

‘ʻಎಲ್ಲಿಂದಲೋ ಬಂದೆ, ಆ ವಿಷಯ ಬಿಡು. ಈಗ ನಿನ್ನ ಜೀವ ಉಳಿಸಬಲ್ಲೆ. ಆದರೆ ಅದಕ್ಕೆ ನೀನು ಬೆಲೆ ಕೊಡಬೇಕಾಗುತ್ತದೆʼ’ ಎಂದ ಆ ಕಿನ್ನರ. ‘ʻಬೆಲೆ…? ನಿನಗೆ ಕೊಡುವಂಥದ್ದು ನನ್ನಲ್ಲಿ ಏನೂ ಇಲ್ಲವಲ್ಲʼ’ ಎಂದಳು ಹುಡುಗಿ.

‘ʻಹೆಚ್ಚೇನೂ ಬೇಡ. ನಿನಗೆ ತುಂಬ ಪ್ರೀತಿಯಾಗುವಂಥದ್ದು ಕೊಡು. ಈಗ ನಿನ್ನ ಕೊರಳಲ್ಲಿರುವ ಸರವನ್ನು ಕೊಡಬೇಕುʼ’ ಎಂದ ಕಿನ್ನರ. ಕೊರಳ ಸರ ನನಗೆ ಪ್ರೀತಿಯಾಗಿದ್ದೇ ಹೌದು. ಆದರೆ ನನ್ನ ಜೀವಕ್ಕಿಂತ ಅದು ಹೆಚ್ಚಲ್ಲವಲ್ಲ ಎಂದು ಯೋಚಿಸಿದ ಹುಡುಗಿ, ಒಪ್ಪಿಕೊಂಡಳು.

children story

ರಾತ್ರಿಯಿಡೀ ಕೆಲಸ ಮಾಡಿದ ಕಿನ್ನರ, ಅಷ್ಟೂ ಹುಲ್ಲನ್ನು ಚಿನ್ನದ ದಾರವನ್ನಾಗಿ ಮಾಡಿಟ್ಟು, ಹುಡುಗಿಯ ಸರವನ್ನು ಪಡೆದು ಮಾಯವಾದ. ಬೆಳಗಾಗುತ್ತಿದ್ದಂತೆ ಕೋಣೆಯ ಬಾಗಿಲು ತೆರೆದ ರಾಜನಿಗೆ ಖುಷಿಯೋ ಖುಷಿ. ರಾಜ ಹೇಗಿದ್ದರೂ ತನ್ನನ್ನು ಮನೆಗೆ ಹೋಗಲು ಬಿಡುತ್ತಾನೆಂದು ಭಾವಿಸಿದ್ದ ಹುಡುಗಿಗೆ ನಿರಾಶೆಯಾಗುವಂತೆ, ಅವಳನ್ನು ಇನ್ನೊಂದು ದೊಡ್ಡ ಕೋಣೆಗೆ ಕರೆದೊಯ್ದ. ಅಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹುಲ್ಲು ಪೇರಿಸಿಡಲಾಗಿತ್ತು. ಇವೆಲ್ಲವನ್ನೂ ಬೆಳಗಿನೊಳಗೆ ಚಿನ್ನ ಮಾಡದಿದ್ದರೆ ನಿನಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದ ಅರಸ ಹೊರನಡೆದ. ಹುಡುಗಿ ತಲೆಮೇಲೆ ಕೈ ಹೊತ್ತು ಕುಳಿತಳು.

ಮತ್ತೆ ಬಂದ ಕಿನ್ನರ. ʼʻಈ ಬಾರಿ ನಿನಗೆ ಕೊಡಲು ನನ್ನಲ್ಲಿ ಏನೂ ಇಲ್ಲʼʼ ಎಂದಳು ಹುಡುಗಿ.

ʼʻನಿನ್ನ ಬೆರಳಲ್ಲಿ ಉಂಗುರ ಇದೆಯಲ್ಲ, ಅದು ಸಾಕುʼʼ ಎಂದ ಕಿನ್ನರ. ಬೇರೆ ದಾರಿ ಕಾಣದೆ ಹುಡುಗಿ ಒಪ್ಪಿಕೊಂಡಳು. ಅಷ್ಟೂ ಹುಲ್ಲನ್ನು ಚಿನ್ನದ ಎಳೆಗಳನ್ನಾಗಿ ಮಾಡಿದ ಕಿನ್ನರ, ಉಂಗುರವನ್ನು ಪಡೆದು ಮಾಯವಾದ. ಬೆಳಗಾಯಿತು, ರಾಜ ಬಂದ. ಎರಡು ಕೋಣೆಗಳ ತುಂಬಾ ಚಿನ್ನವನ್ನು ಕಂಡ ರಾಜನಿಗೆ ಮೂರನೇ ಕೋಣೆಯಲ್ಲೂ ಚಿನ್ನ ತುಂಬಿಕೊಳ್ಳುವ ಆಸೆ ಬಾರದಿದ್ದೀತೆ! ಸರಿ, ಹುಡುಗಿಯನ್ನು ಹುಲ್ಲು ತುಂಬಿಸಿದ್ದ ಇನ್ನೊಂದು ತುಂಬಾ ದೊಡ್ಡ ಕೊಠಡಿಗೆ ಕಳುಹಿಸಲಾಯಿತು. ಇದು ಇನ್ನೆಷ್ಟು ದಿನ ಹೀಗೆಯೇ ನಡೆಯುತ್ತದೆ ಎಂಬುದು ತಿಳಿಯದೆ ಹುಡುಗಿಗೆ ಹೆದರಿಕೆಯಾಗತೊಡಗಿತು.

ಈ ಬಾರಿಯೂ ಕಿನ್ನರ ಬಂದಿದ್ದು ಹೌದು. ಆದರೆ ʼʻನೀನು ಬರುತ್ತೀಯೆಂದು ಗೊತ್ತಿತ್ತು. ಆದರೆ ನೀನೀಗ ಸಹಾಯ ಮಾಡಿದರೆ ನೀಡುವುದಕ್ಕೆ ನನ್ನಲ್ಲಿ ನಿಜಕ್ಕೂ ಏನೂ ಇಲ್ಲ. ಹೋಗು ಇಲ್ಲಿಂದʼʼ ಎಂದು ಹುಡುಗಿ ಬೇಡಿಕೊಂಡಳು. ಅವಳ ಮಾತಿನತ್ತ ಗಮನ ನೀಡದ ಕಿನ್ನರ ಹುಲ್ಲನ್ನು ಚಿನ್ನ ಮಾಡತೊಡಗಿದ. ʼʻನಿನ್ನಿಂದ ಏನನ್ನು ಪಡೆಯಬೇಕೋ ನಾನು ಪಡೆಯುತ್ತೇನೆ. ಈಗ ಮೊದಲು ನಿನ್ನ ಜೀವ ಉಳಿಯಬೇಡವೆʼʼ ಎನ್ನುತ್ತ ರಾತ್ರಿಯಿಡೀ ಕೆಲಸ ಮಾಡಿದ. ಕೆಲಸ ನಿಲ್ಲಿಸುವಂತೆ ಹುಡುಗಿ ಮತ್ತೆ ಮತ್ತೆ ಬೇಡುತ್ತಲೇ ಇದ್ದಳು. ಬೆಳಗಾಗುತ್ತಿದ್ದಂತೆ ಕೆಲಸ ಮುಗಿಸಿದ ಕಿನ್ನರ, ʻʼಈಗ ಕೊಡುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. ಆದರೆ ಮುಂದೊಂದು ದಿನ ನೀನು ರಾಣಿಯಾದರೆ, ನಿನಗೆ ಹುಟ್ಟುವ ಮೊದಲ ಮಗುವನ್ನು ನನಗೆ ನೀಡಬೇಕುʼʼ ಎಂದು ಹೇಳಿದ.

ʼʻಇದೆಂಥ ಮಾತು. ಮೊದಲನೇದಾಗಿ ನಾನು ರಾಣಿಯಾಗುವುದು ಸಾಧ್ಯವಿಲ್ಲ. ಹಾಗೊಮ್ಮೆ ಆದರೂ ನನ್ನ ಮಗುವನ್ನು ನಿನಗೇಕೆ ಕೊಡಬೇಕು? ನಿನ್ನ ಸಹಾಯ ಬೇಡವೆಂದು ನಾ ಹೇಳಿದ್ದೆ. ಅದೆಲ್ಲಾ ಆಗುವುದಿಲ್ಲʼʼ ಎಂದಳು ಹುಡುಗಿ. ʼʻಮಾತು ಕೊಟ್ಟಾಯಿತು. ನಿನ್ನ ಕೆಲಸ ಮಾಡಿಕೊಟ್ಟಿದ್ದೇನೆ. ಮತ್ತೆ ಬರುತ್ತೇನೆʼʼ ಎಂದ ಕಿನ್ನರ ಮಾಯವಾದ. ಈ ಬಾರಿ ಕೋಣೆಯ ಒಳಗೆ ಬಂದಿದ್ದು ರಾಜನಲ್ಲ, ರಾಜಕುಮಾರ!

ಇದನ್ನೂ ಓದಿ: ಮಕ್ಕಳ ಕಥೆ: ಮೂವರನ್ನು ರಕ್ಷಿಸಿದವನ ಕತೆ ಏನಾಯಿತು?

ʼʻಹೇಗಿದ್ದೀರಿ? ನನ್ನ ತಂದೆಯಿಂದಾಗಿ ನೀವು ತುಂಬಾ ಕೆಲಸ ಮಾಡಬೇಕಾಯಿತಲ್ಲವೇ?ʼʼ ಕೇಳಿದ ರಾಜಕುಮಾರ.

ʼʻಕೆಲಸ ಮಾಡಿದ್ದು ಹೌದುʼʼ ಎಂದಳು ಹುಡುಗಿ.

ʼʻನಾನು ರಾಜನಾದರೆ ಯಾರನ್ನೂ ಹೀಗೆಲ್ಲ ಕಷ್ಟಕ್ಕೆ ನೂಕುವುದಿಲ್ಲ. ಹುಲ್ಲನ್ನೆಲ್ಲ ಚಿನ್ನವನ್ನಾಗಿ ಮಾಡಿದ ಹುಡುಗಿಯನ್ನು ವಿವಾಹವಾಗುವಂತೆ ನನ್ನ ತಂದೆ ನನಗೆ ಹೇಳಿದ್ದರು. ಆದರೆ ನಿಮಗೆ ಅರಮನೆಯ ಜೀವನ ಬೇಡ ಎನಿಸಿದರೆ, ಇಲ್ಲಿಂದ ಹೋಗಲು ನಿಮಗೆ ಸ್ವಾತಂತ್ರ್ಯ ನೀಡಿದ್ದೇನೆʼʼ ಎಂದು ಹೇಳಿದ ರಾಜಕುಮಾರ. ಇವನು ತನ್ನ ತಂದೆಯಂತಲ್ಲ, ಒಳ್ಳೆಯವನು ಎನಿಸಿತು ಹುಡುಗಿಗೆ. ಅವನನ್ನು ಮದುವೆಯಾಗುವುದಕ್ಕೆ ಒಪ್ಪಿದಳು.

ಕೆಲವು ಕಾಲ ಕಳೆಯಿತು. ರಾಜನಿಗೆ ವಯಸ್ಸಾಗಿ ತೀರಿಕೊಂಡ. ರಾಜಕುಮಾರನೇ ರಾಜನಾದ. ಅವನ ಹೆಂಡತಿ ರಾಣಿಯಾದಳು. ಕೆಲವು ಸಮಯದ ನಂತರ ಅವರಿಗೊಂದು ಮುದ್ದಾದ ಮಗು ಹುಟ್ಟಿತು. ಇಷ್ಟರಲ್ಲಾಗಲೇ ಕಿನ್ನರನ ಜೊತೆಗಿನ ಮಾತನ್ನು ರಾಣಿ ಮರೆತೇಬಿಟ್ಟದ್ದಳು. ಆದರೆ ಆತ ಮರೆಯಬೇಕಲ್ಲ! ರಾಣಿ ಮಗುವಿನೊಂದಿಗೆ ಆಟವಾಡುತ್ತಿದ್ದಾಗ ಕಿನ್ನರ ಪ್ರತ್ಯಕ್ಷನಾದ.

ʼʻನೀನೇಕೆ ಬಂದೆ?ʼʼ ರಾಣಿ ಕೇಳಿದಳು.

ʼʻನೀನು ಕೊಟ್ಟ ಮಾತಿನಂತೆ ನಿನ್ನ ಮಗುವೀಗ ನನ್ನದು. ಕೊಡು, ಕೊಡುʼʼ ಕೈ ಚಾಚಿದ ಕಿನ್ನರ.

ತನ್ನ ಮಗುವನ್ನು ಭದ್ರವಾಗಿ ಹಿಡಿದುಕೊಂಡ ರಾಣಿ, ʼʻನಿನ್ನ ಶರತ್ತಿಗೆ ನಾನೆಂದೂ ಒಪ್ಪಿರಲಿಲ್ಲ. ನಿನಗೆ ಬೇಕಾದ ಬೇರೆಯ ವಸ್ತುಗಳನ್ನು ಕೇಳು. ಕೊಡುತೇನೆ. ದುಡ್ಡು-ಬಂಗಾರ ಬೇಕೆ?ʼʼ ಕೇಳಿದಳು.

ʼʻಚಿನ್ನವನ್ನು ನಾನೇ ಮಾಡಬಲ್ಲೆ. ಅದೆಲ್ಲ ಬೇಡʼʼ ಎಂದ ಕಿನ್ನರ.

ʼʻಅರಮನೆ, ಸೇವಕರು ಬೇಕೆ?ʼʼ ಕೇಳಿದಳು ರಾಣಿ.

ʼʻನಾನೆಲ್ಲಿರುತ್ತೇನೆ ಎಂಬುದು ನನಗೇ ಗೊತ್ತಿಲ್ಲ. ಅವೆಲ್ಲಾ ದಂಡ. ನಾನ್ಯಾರೆಂಬುದು ಯಾರಿಗೂ ಗೊತ್ತಿಲ್ಲ.ʼʼ ಎಂದ ಕಿನ್ನರ.

ʼʻನೀನ್ಯಾರು ಎಂಬುದನ್ನು ನಾನು ಹುಡುಕುತ್ತೇನೆʼʼ ಸವಾಲೆಸೆದಳು ರಾಣಿ

ʼʻನಿಜಕ್ಕೂ…? ನನ್ನ ನಿಜವಾದ ಹೆಸರನ್ನು ನೀನು ಹೇಳಿದೆ ಎಂದಾದರೆ ನಾನು ಸೋಲೊಪ್ಪಿಕೊಳ್ಳುತ್ತೇನೆ. ಮೂರು ದಿನಗಳ ಸಮಯ ಕೊಡುತ್ತೇನೆ. ನೀ ಸೋತರೆ, ನಿನ್ನ ಮಗು ನನ್ನದು. ಆದರೆ ಈ ವಿಷಯವನ್ನು ನೀನು ಯಾರಲ್ಲೂ ಹೇಳುವಂತಿಲ್ಲʼʼ ಎಂದು ಮಾಯವಾದ ಕಿನ್ನರ.

ರಾಣಿಗೆ ಸಂತೋಷವಾಯಿತು. ಹೆಸರು ತಾನೆ! ಖಂಡಿತಾ ಹುಡುಕಬಹುದು ಎಂದುಕೊಂಡ ಆಕೆ, ತನಗೆ ತಿಳಿದಿರುವ ಹೆಸರುಗಳನ್ನೆಲ್ಲಾ ಪಟ್ಟಿ ಮಾಡತೊಡಗಿದಳು. ರಾತ್ರಿ ಕಿನ್ನರ ಬಂದ. ಪಟ್ಟಿಯನ್ನು ಹಿಡಿದ ರಾಣಿ, ಓದುತ್ತಾ ಹೋದಳು. ʼʻಛೇ! ಇವೆಲ್ಲಾ ಯಾವುದೂ ಅಲ್ಲ. ನಾಳೆ ಬರುತ್ತೇನೆ. ಮತ್ತೆ ಪ್ರಯತ್ನಿಸುʼʼ ಎಂದು ಮಾಯವಾದ ಕಿನ್ನರ.

ಈ ಕಥೆಯನ್ನೂ ಓದಿ: ಮಕ್ಕಳ ಕಥೆ: ಮಕ್ಕಳಿಗೆ ಅಬ್ದುಲ್‌ ಕಲಾಂ ಹೇಳಿದ ಎರಡು ಕತೆಗಳು

ಈ ಬಾರಿ ಅರಮನೆಯ ಗ್ರಂಥಾಲಯಕ್ಕೆ ಭೇಟಿ ನೀಡಿದ ರಾಣಿ, ಚಿತ್ರ-ವಿಚಿತ್ರವಾದ ಹೆಸರುಗಳನ್ನೆಲ್ಲಾ ಪಟ್ಟಿ ಮಾಡಿದಳು. ಯಾವ್ಯಾವುದೋ ದೇಶ-ಭಾಷೆಯ ಹೆಸರುಗಳೆಲ್ಲಾ ಅವಳಿಗೆ ದೊರೆತವು. ರಾತ್ರಿ ಕಿನ್ನರ ಬರುತ್ತಿದ್ದಂತೆ, ಅವುಗಳನ್ನೆಲ್ಲಾ ಓದತೊಡಗಿದಳು. ಆಗ ಜೋರಾಗಿ ನಗತೊಡಗಿದ ಕಿನ್ನರ, ʼʻನನ್ನ ಹೆಸರಿನ ಹತ್ತಿರಕ್ಕೂ ನೀನು ಬರಲಿಲ್ಲ ರಾಣಿ. ನಾಳೆ ರಾತ್ರಿಯೊಂದು ಅವಕಾಶ. ನಿನ್ನ ಮಗು ಎಂತಿದ್ದರೂ ನನ್ನದೇʼʼ ಎಂದು ಸಂತೋಷದಿಂದ ತೆರಳಿದ. ರಾಣಿ ತೀವ್ರ ಶೋಕದಲ್ಲಿ ಮುಳುಗಿದಳು.

ಸಂಜೆಯಾಗುತ್ತಿದ್ದಂತೆ ಬೇಸರದಿಂದ ಅರಮನೆಯಿಂದ ಹೊರಬಂದ ರಾಣಿ, ಸಮೀಪದ ಕಾಡಿನತ್ತ ಒಬ್ಬಳೇ ನಡೆಯತೊಡಗಿದಳು. ಹೇಗಾದರೂ ಮಾಡಿ ಅವಳಿಗೆ ತನ್ನ ಮಗುವನ್ನು ಉಳಿಸಿಕೊಳ್ಳಬೇಕಿತ್ತು. ಸಮೀಪದ ಸರೋವರವನ್ನು ದಾಟಿ ಮುಂದೆ ಹೋಗುತ್ತಿದ್ದಂತೆ, ಯಾವುದೋ ವಿಚಿತ್ರವಾದ ಧ್ವನಿ ಕೇಳಿಬರುತ್ತಿತ್ತು. ಈ ಸ್ವರವನ್ನೆಲ್ಲೋ ಕೇಳಿದ್ದೇನೆ ಅಂದುಕೊಂಡ ಆಕೆ, ಧ್ವನಿ ಬಂದ ದಿಕ್ಕಿಗೆ ತೆರಳಿದಳು. ಅಲ್ಲೊಂದು ಹಾಳುಬಿದ್ದ ಕಲ್ಲಿನ ಮಂಟಪವಿತ್ತು. ಅದರ ಬಳಿಗೆ ಸಣ್ಣ ಬೆಂಕಿಯೊಂದು ಉರಿಯುತ್ತಿತ್ತು. ಅದರ ಮುಂದೆ ವಿಚಿತ್ರ ಆಕೃತಿಯೊಂದು ಕುಣಿಯುತ್ತಿತ್ತು. ಮರೆಯಲ್ಲಿ ನಿಂತು ನೋಡುತ್ತಿದ್ದ ರಾಣಿಗೆ ಅಚ್ಚರಿಯಾಯಿತು. ಅದೇ ಕಿನ್ನರ!

ಇಂದು ರಾತ್ರಿ ನನ್ನ ಕನಸು ನನಸಾಗುತ್ತದೆ
ನನಗೆ ಮುದ್ದಾದ ಮಗುವೊಂದು ದೊರೆಯುತ್ತದೆ
ನನ್ನ ಹೆಸರು ರಂಪೆಲ್‌ಸ್ಟಿಟ್ಸ್ಕಿನ್‌ (Rumpelstiltskin) ಎಂದು
ರಾಣಿಗೆ ಗೊತ್ತಾಗುವುದಿಲ್ಲ ಎಂದೆಂದೂ

ಎಂದು ಜೋರಾಗಿ ಹಾಡಿಕೊಂಡು ಕುಣಿಯುತ್ತಿದ್ದ ಆತ!

ಅವನಿಗೆ ಗೊತ್ತಾಗದಂತೆ ರಾಣಿ ಅಲ್ಲಿಂದ ಹಿಂದಿರುಗಿದಳು. ರಾತ್ರಿಯಾಯಿತು. ಕುಣಿದಾಡುತ್ತಲೇ ಬಂದ ಕಿನ್ನರ. ರಾಣಿ ಎಂದಿನಂತೆ ತನ್ನ ಪಟ್ಟಿಯನ್ನು ಓದಿದಳು. ʼʻಛೇ! ಇವೆಲ್ಲಾ ಯಾವುದೂ ಅಲ್ಲ ನನ್ನ ಹೆಸರು. ಕಡೆಯದೊಂದು ಅವಕಾಶ… ಹೇಳಿಬಿಡು. ಆಗದಿದ್ದರೆ ಮಗು ಕೊಡುʼʼ ಎಂದ ಕಿನ್ನರ.

ʼʻನಿನ್ನ ಹೆಸರು ರಂಪೆಲ್‌ಸ್ಟಿಟ್ಸ್ಕಿನ್‌ʼʼ ಎಂದಳು ರಾಣಿ. ಆಘಾತದಿಂದ ಹುಚ್ಚನಂತಾದ ಕಿನ್ನರ ಕೋಪದಿಂದ ನೆಲವನ್ನು ಜೋರಾಗಿ ಗುದ್ದಿದ. ದೊಡ್ಡದೊಂದು ಬಾವಿಯಂತೆ ಬಾಯಿಬಿಟ್ಟ ನೆಲ, ಅವನನ್ನು ಒಳಗೆಳೆದುಕೊಂಡಿತು. ಅಂದೇ ಕೊನೆ. ಮತ್ತೆ ಅವನನ್ನು ಯಾರೂ ನೋಡಲಿಲ್ಲ. ರಾಣಿ ತನ್ನ ರಾಜ ಮತ್ತು ಮಗುವಿನೊಂದಿಗೆ ಸುಖವಾಗಿದ್ದಳು.

ಇದನ್ನೂ ಓದಿ: ಮಕ್ಕಳ ಕಥೆ: ಮುಲಾನಾ ಎಂಬ ದಿಟ್ಟ ಹುಡುಗಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading
Advertisement
Weight Loss Tips
ಆರೋಗ್ಯ18 mins ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ19 mins ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ48 mins ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ1 hour ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ7 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ8 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ8 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ8 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ15 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌