Elephant attack | ಚಾಮರಾಜನಗರದಲ್ಲಿ ರೈತನ ಮೇಲೆ ಕಾಡಾನೆ ದಾಳಿ; ರಾಮನಗರದಲ್ಲಿ ರೈತರ ಪ್ರತಿಭಟನೆ - Vistara News

ಕರ್ನಾಟಕ

Elephant attack | ಚಾಮರಾಜನಗರದಲ್ಲಿ ರೈತನ ಮೇಲೆ ಕಾಡಾನೆ ದಾಳಿ; ರಾಮನಗರದಲ್ಲಿ ರೈತರ ಪ್ರತಿಭಟನೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ (Elephant attack) ಮುಂದುವರಿದಿದ್ದು, ಹಗಲು-ರಾತ್ರಿ ಎನ್ನದೆ ಗ್ರಾಮಗಳಿಗೆ ನುಗ್ಗುತ್ತಿವೆ. ಜಮೀನಿನಲ್ಲಿ ಕೆಲಸ ಮಾಡುವಾಗಲೇ ಕಾಡಾನೆಯೊಂದು ರೈತರೊಬ್ಬರ ಮೇಲೆ ದಾಳಿ ನಡೆಸಿದ್ದರೆ, ರಾಮನಗರದಲ್ಲಿ ಜಮೀನುಗಳಿಗೆ ಕಾಡಾನೆಗಳು ನುಗ್ಗಿ ಉಪಟಳ ನೀಡುತ್ತಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ/ಚಾಮರಾಜನಗರ: ಮಾನವ-ಕಾಡುಪ್ರಾಣಿಗಳ ಸಂಘರ್ಷ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಕಾಡಿನಿಂದ ಅನೇಕ ಪ್ರಾಣಿಗಳು ನಾಡಿನತ್ತ ಬರುತ್ತಿದ್ದು, ಜನ-ಜಾನುವಾರುಗಳ ಮೇಲೆ ದಾಳಿ ನಡೆಸಿ ಆತಂಕವನ್ನು ಹುಟ್ಟುಹಾಕುತ್ತಿವೆ. ಇತ್ತ ಗಜಪಡೆಗಳೂ ರಾಜ್ಯದ ಅಲ್ಲಲ್ಲಿ ದಾಳಿ (Elephant attack) ನಡೆಸುವ ಮೂಲಕ ಸಾಕಷ್ಟು ಬೆಳೆ ಹಾಗೂ ಪ್ರಾಣ ಹಾನಿಗಳಿಗೆ ಕಾರಣವಾಗುತ್ತಿವೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಟ್ಟದ ಮಾದಳ್ಳಿಯಲ್ಲಿ ಕಾಡಾನೆಯೊಂದು ರೈತರೊಬ್ಬರ ಮೇಲೆ ದಾಳಿ ನಡೆಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ದೇವರಾಜ್‌ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಸ್ಥಳೀಯರ ಸಹಾಯದಿಂದ ದೇವರಾಜ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಆನೆಯು ಜಮೀನಿನಲ್ಲಿ ಬೀಡುಬಿಟ್ಟಿದ್ದು, ಅಕ್ಕಪಕ್ಕದ ಜಮೀನಿನ ರೈತರು ಕೆಲಸಕ್ಕೆ ಹೋಗಲು ಭಯಪಡುವಂತಾಗಿದೆ. ದಾಳಿ ವಿಚಾರ ತಿಳಿಸಿದರೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಬಳಿ ಮರಿಗಳು ಸೇರಿ ೧೦ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿವೆ. ಹರೀಶ್ ಎಂಬ ರೈತನಿಗೆ ಸೇರಿದ 500ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ನಾಶಪಡಿಸಿವೆ. ಹೊನ್ನಹಳ್ಳಿ, ವಡ್ಗಲ್‌ಪುರದ ಜಮೀನುಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ರೈತರು ಆಗ್ರಹಿಸಿದ್ದಾರೆ.

Elephant attack
Elephant attack

ರಸ್ತೆ ತಡೆಹಿಡಿದು ರೈತರ ಪ್ರತಿಭಟನೆ
ರಾಮನಗರದ ಕನಕಪುರ ತಾಲೂಕಿನ ಶ್ರೀನಿವಾಸನಹಳ್ಳಿ ಸುತ್ತಮುತ್ತ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿವೆ. ಕಾಡು ಬಿಟ್ಟು ನಾಡಿಗೆ ಹಿಂಡು ಹಿಂಡಾಗಿ ಕಾಡಾನೆಗಳು ಬರುತ್ತಿದ್ದು, ಕಾಡಾನೆಗಳನ್ನು ಸೆರೆ ಹಿಡಿಯುವುದೇ ಅರಣ್ಯಾಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ತಡರಾತ್ರಿ ಗ್ರಾಮಕ್ಕೆ ಕಾಡಾನೆಗಳು ನುಗ್ಗಿದ್ದು, ಇವುಗಳ ಹಾವಳಿ ತಪ್ಪಿಸುವಂತೆ ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕನಕಪುರ-ಕೋಡಿಹಳ್ಳಿ ರಸ್ತೆ ಸಂಪೂರ್ಣ ಬಂದ್ ಮಾಡಿ ರೈತರು ಪ್ರತಿಭಟಿಸಿದರು. ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಬೆಳಗ್ಗೆ 7 ಗಂಟೆಯಿಂದ ರಸ್ತೆ ತಡೆದು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಿಂದ ಶಾಲಾ- ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಪರದಾಡಿದರು. ಸಮಸ್ಯೆ ಬಗೆಹರಿಯುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | Elephant attack | ಕಾಡಾನೆ ತುಳಿತಕ್ಕೆ ಅರಣ್ಯ ಇಲಾಖೆ ಕಾವಲುಗಾರ ಬಲಿ; ಇನ್ನೊಂದೆಡೆ ತೋಟ ನಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

Karnataka Rain: ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Karnataka Rain news) ಅಬ್ಬರಿಸುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ (Flood situation) ಉಂಟಾಗಿದೆ. ಕಾವೇರಿ (Kaveri river), ಕೃಷ್ಣಾ (Krishna River), ಘಟಪ್ರಭಾ ನದಿ ತೀರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಗ್ರಾಮಗಳನ್ನು ತೆರವು ಮಾಡಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ (School holiday) ಮಾಡಲಾಗಿದೆ.

2024ರ ಜುಲೈ ತಿಂಗಳು ಪೂರ್ತಿ ಭರ್ಜರಿ ಮಳೆಯಾದ ಕಾರಣಕ್ಕೆ ಇದೀಗ ಕರ್ನಾಟಕದ ಬಹುತೇಕ ಡ್ಯಾಂಗಳು ತುಂಬಿ ತುಳುಕುತ್ತಿವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಬರುವ ಮುನ್ಸೂಚನೆ ನೀಡಲಾಗಿದ್ದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು- ಮಂಗಳೂರು ನಡುವಿನ ಹಲವು ಸಂಪರ್ಕ ರಸ್ತೆಗಳು ಭೂಕುಸಿತ ಸಮಸ್ಯೆಯಿಂದ ಬಳಲುತ್ತಿದ್ದು, ಈ ಘಾಟಿ ಮಾರ್ಗಗಳಲ್ಲಿ ವಾಹನಗಳ ಸಂಚಾರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭೀಕರ ಮಳೆ ಮುಂದುವರಿದಿದೆ. ಮುಂಗಾರು ಮಳೆ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಭಾರಿ ಮಳೆ ಕಾರಣ ಹಲವೆಡೆ ಭೂಕುಸಿತ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೆಟ್ಟ ಗುಡ್ಡ, ಭೂಮಿ ಕುಸಿದು ಬೀಳುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಿಗೆ ಆಗಸ್ಟ್ 2ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕೂಡ ಮಳೆ ಜೋರಾಗಿ ಸುರಿಯುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರು ನೆರೆ ಮತ್ತು ಪ್ರವಾಹದ ಭೀತಿಯಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ತೀರದ ಹತ್ತಾರು ಗ್ರಾಮಗಳು ಮುಳುಗಡೆಯಾಗಿವೆ.

ಇದನ್ನೂ ಓದಿ: Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Continue Reading

ಮಳೆ

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Karnataka Weather Forecast : ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ಏಳು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಸುತ್ತಮುತ್ತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಮಧ್ಯಮ ಮಳೆಯಾಗಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇದು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ. ರಾತ್ರಿ ಸಮಯ ಚಳಿ ಹೆಚ್ಚಾಗಲಿದೆ.

7 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ & ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

Prajwal Revanna: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಎಸ್‌ಐಟಿ ತನಿಖೆಗೆ ಬಲ ಬಂದಂತಾಗಿದೆ.

VISTARANEWS.COM


on

Prajwal Revanna
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ, ಪ್ರಜ್ವಲ್‌ ರೇವಣ್ಣ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೊಗಳು ಅಸಲಿಯಾಗಿವೆ. ವಿಡಿಯೊಗಳನ್ನು ತಿರುಚಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು (FSL Report) ತಿಳಿಸಿದೆ. ಇದರಿಂದಾಗಿ ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲು ಎಸ್‌ಐಟಿಗೆ ಆನೆ ಬಲ ಬಂದಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ. ಎಲ್ಲ ವಿಡಿಯೊಗಳು ಅಸಲಿಯಾಗಿವೆ ಎಂಬುದಾಗಿ ಎಸ್‌ಎಫ್‌ಎಲ್‌ ವರದಿ ಸಲ್ಲಿಸಿದ್ದು, ವರದಿ ಈಗ ಎಸ್‌ಐಟಿ ತಂಡದ ಕೈಸೇರಿದೆ. ಇದರಿಂದಾಗಿ ಎಸ್‌ಐಟಿ ಇನ್ನು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಿದೆ ಎಂದು ತಿಳಿದುಬಂದಿದೆ.

Prajwal Revanna Case
Prajwal Revanna Case

ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಪುರುಷನ ಮುಖವನ್ನು ತೋರಿಸಿಲ್ಲ. ಹಾಗಾಗಿ, ಅಶ್ಲೀಲ ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಇದುವರೆಗೆ ದೃಢವಾಗಿಲ್ಲ. ಈಗ ವಿಡಿಯೊಗಳು ಅಸಲಿಯಾಗಿವೆ ಎಂಬುದು ಮಾತ್ರ ವರದಿಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಕೂಡ ಬಯಲಾಗಿದೆ. ಎಫ್‌ಎಸ್‌ಎಲ್‌ ವರದಿ ಬಳಿಕ ಎಸ್‌ಐಟಿ ಅಧಿಕಾರಿಗಳ ತನಿಖೆಯು ಚುರುಕುಗೊಂಡಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುತ್ತಾರೆ. ಅದರಲ್ಲಿ, ಎಫ್‌ಎಸ್‌ಎಲ್‌ ವರದಿಯ ಕುರಿತು ಕೂಡ ಉಲ್ಲೇಖಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ, ವಿಡಿಯೊ ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದರು. ಇದಾದ ಕೆಲ ದಿನಗಳ ಬಳಿಕ ಅವರು ಭಾರತಕ್ಕೆ ವಾಪಸ್‌ ಬಂದಿದ್ದರು. ಭಾರತಕ್ಕೆ ವಾಪಸಾಗುತ್ತಲೇ ಅವರನ್ನು ಬಂಧಿಸಲಾಗಿದ್ದು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲು ಸೇರಿದ್ದರು. ಅವರು ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣವು ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಮುಳುವಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Continue Reading

ಕರ್ನಾಟಕ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Kabini dam not cracked no need to worry says DCM DK Shivakumar
Koo

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು (Kabini Dam) ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಹೇಳಿದರು.

ಇದನ್ನೂ ಓದಿ: kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

ನೀರಿನ ಹರಿವು ಹೆಚ್ಚಿದ್ದು, ನದಿ ಪಾತ್ರಗಳಲ್ಲಿ ಜನರು ಅನಗತ್ಯವಾಗಿ ಓಡಾಡದೆ ಸುರಕ್ಷಿತವಾಗಿ ಇರಬೇಕು. ಗುರುವಾರ ಸಂಜೆ ವೇಳೆಗೆ ತಮಿಳುನಾಡಿಗೆ 100 ಟಿಎಂಸಿಗೂ ಹೆಚ್ಚು ನೀರು ಹರಿದು ಹೋಗಿದೆ ಎಂದು ಹೇಳಿದರು.

ಇದನ್ನೂ ಓದಿ: Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

ಕೇರಳ ರಾಜ್ಯ ಸಂಕಷ್ಟದಲ್ಲಿದ್ದು, ನಮ್ಮ ರಾಜ್ಯದ ಸಂಪೂರ್ಣ ಸಹಕಾರ ಅವರಿಗಿದೆ. ನಾವು ಕೇರಳ ಹಾಗೂ ಕೇರಳಿಗರ ಜತೆಗಿದ್ದೇವೆ. ಯಾವುದೇ ರೀತಿಯ ಸಹಾಯ ಮಾಡಲೂ ತಯಾರಿದ್ದೇವೆ. ಮೃತರ ಆತ್ಮಗಳಿಗೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದರು.

Continue Reading
Advertisement
Yogi Adityanath
ದೇಶ6 mins ago

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

India's National Pension System
ಮನಿ-ಗೈಡ್14 mins ago

National Pension System: ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಎನ್‌ಪಿಎಸ್ ಯೋಜನೆ ಸೂಕ್ತ

Karnataka Rain
ಮಳೆ20 mins ago

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

wilma rudolph ರಾಜಮಾರ್ಗ ಅಂಕಣ
ಅಂಕಣ43 mins ago

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

Things to Avoid Cleaning with Lemon
ಲೈಫ್‌ಸ್ಟೈಲ್1 hour ago

Things to Avoid Cleaning with Lemon: ಇವುಗಳನ್ನು ಸ್ವಚ್ಛ ಮಾಡಲು ಯಾವ ಕಾರಣಕ್ಕೂ ನಿಂಬೆಹಣ್ಣನ್ನು ಬಳಸಲೇಬೇಡಿ!

LIC New Jeevan Shanti Plan
ಮನಿ-ಗೈಡ್1 hour ago

LIC New Jeevan Shanti Plan: ಒಮ್ಮೆ ಪಾವತಿಸಿದರೆ ಸಾಕು; ಜೀವನ ಪರ್ಯಂತ ಪಿಂಚಣಿ!

Vastu Tips
ಧಾರ್ಮಿಕ2 hours ago

Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

Tea vs Coffee
ಆರೋಗ್ಯ2 hours ago

Tea vs Coffee: ಟೀ ಒಳ್ಳೆಯದಾ ಕಾಫಿ ಒಳ್ಳೆಯದಾ? ಇಲ್ಲಿದೆ ಉತ್ತರ

karnataka Rain
ಮಳೆ2 hours ago

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ19 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ19 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌