Hombale Films | ಅಧಿಕೃತ ಪೋಸ್ಟ್‌ ಮೂಲಕ ಕೊನೆಗೂ ಸೀಕ್ರೆಟ್‌ ರಿವೀಲ್‌ ಮಾಡಿದ ಹೊಂಬಾಳೆ ಫಿಲ್ಮ್ಸ್‌! - Vistara News

ಸಿನಿಮಾ

Hombale Films | ಅಧಿಕೃತ ಪೋಸ್ಟ್‌ ಮೂಲಕ ಕೊನೆಗೂ ಸೀಕ್ರೆಟ್‌ ರಿವೀಲ್‌ ಮಾಡಿದ ಹೊಂಬಾಳೆ ಫಿಲ್ಮ್ಸ್‌!

ಮುಂದಿನ ಐದು ವರ್ಷಗಳಲ್ಲಿ ಚಿತ್ರೋದ್ಯಮಕ್ಕೆ 3000 ಕೋಟಿ ರೂ. ಬಂಡವಾಳ ಹೂಡಲಿದೆ ಹೊಂಬಾಳೆ ಫಿಲ್ಮ್ಸ್‌ (Hombale Films).

VISTARANEWS.COM


on

Hombale Films
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತಿಯ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್‌ (Hombale Films) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಚಿತ್ರೋದ್ಯಮಕ್ಕೆ 3000 ಕೋಟಿ ರೂ. ಬಂಡವಾಳ ಹೂಡಲಿದೆ. ಈ ವಿಚಾರವಾಗಿ ವಿಜಯ ಕಿರಗಂದೂರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ. ಅದರ ಜತೆ ಉತ್ತಮ ಬಜೆಟ್‌ನಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ.

ʻಕೆಜಿಎಫ್- 1’ ಮತ್ತು ‘ಕೆಜಿಎಫ್ -2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲ್ಮ್ಸ್‌. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲ ನೋಡಿ ಇಷ್ಟಪಟ್ಟಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳ ಮೂಲಕ ಸಾಬೀತುಪಡಿಸಿದೆ.

ಇದನ್ನೂ ಓದಿ | Keerthy Suresh | ತಮಿಳಿಗೆ ಹೊಂಬಾಳೆ ಫಿಲ್ಮ್ಸ್‌: ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘು ತಾತಾ’ ಚಿತ್ರ ನಿರ್ಮಾಣ ಶುರು

ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ
ಇದೀಗ ಹೊಂಬಾಳೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಈಗಾಗಲೇ ಕನ್ನಡದಲ್ಲಿ ನವರಸ ನಾಯಕ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಹೀಗೆ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.

ಬೇರೆ ಭಾಷೆಗಳ ಜವಾಬ್ದಾರಿ ಹೊತ್ತ ಹೊಂಬಾಳೆ
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದೆ. ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದು ಚಿತ್ರದ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲ್ಮ್ಸ್‌ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ.

ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

ಇದನ್ನೂ ಓದಿ | Hombale Films | ಕೆಜಿಎಫ್‌ಗೆ 4 ವರ್ಷಗಳ ಸಂಭ್ರಮ: ಸ್ಪೆಷಲ್‌ ಪೋಸ್ಟ್‌ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

IPL 2024: ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸುತ್ತಿದೆ.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ವಿರಾಟ್ ಮತ್ತು ಅನುಷ್ಕಾ 2013 ರಲ್ಲಿ ಶಾಂಪೂ ಬ್ರಾಂಡ್​ನ ಜಾಹೀರಾತಿನ ಚಿತ್ರೀಕರಣಕ್ಕಾಗಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಅವರು 2017 ರಲ್ಲಿ ಇಟಲಿಯ ಟಸ್ಕನಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರು. 2021 ರಲ್ಲಿ, ಅವರು ತಮ್ಮ ಮೊದಲ ಮಗು ವಮಿಕಾಳನ್ನು ಸ್ವಾಗತಿಸಿದ್ದರು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಮತ್ತು ವಿರಾಟ್ ತಮ್ಮ ಎರಡನೇ ಮಗು ಅಕಾಯ್​​ ಕೊಹ್ಲಿಯ ಆಗಮನವನ್ನು ಘೋಷಿಸಿದ್ದರು.

ಅನುಷ್ಕಾ ಶರ್ಮಾ ಮುಂದಿನ ಚಿತ್ರ ಚಕ್ಡಾ ಎಕ್ಸ್​ಪ್ರೆಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಕ್ಡಾ ಎಕ್ಸ್​​ಪ್ರೆಸ್​ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರ. ಈ ಚಿತ್ರವು ಸುಮಾರು ೪ ವರ್ಷಗಳ ನಂತರ ಅವರು ಚಲನಚಿತ್ರಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಝೀರೋ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಾಲಿವುಡ್

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಮುಖ ಊದಿಕೊಂಡಂತೆ ಕಂಡಿದೆ.ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

VISTARANEWS.COM


on

Suchitra Krishnamoorthi Reveals Her Face Swelled Like A Balloon
Koo

ಬೆಂಗಳೂರು: ʻಕಭಿ ಹಾಂ ಕಭಿ ನಾʼ (Kabhi Haan Kabhi Naa) ಚಿತ್ರದಲ್ಲಿ ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಅವರ ಇತ್ತೀಚಿನ ಫೋಟೊಗಳು ವೈರಲ್‌ ಆಗಿವೆ. ಸುಚಿತ್ರಾ ಕೃಷ್ಣಮೂರ್ತಿ (Suchitra Krishnamoorthi) ಅವರ ಮುಖ ಊದಿಕೊಂಡಂತೆ ಕಂಡಿದೆ. ಇದಾದ ಬಳಿಕ ನಟಿಗೆ ಹಲವರು ಈ ಬಗ್ಗೆ ಪ್ರಶ್ನೆ ಇಟ್ಟಿದ್ದಾರೆ. ಇದೀಗ ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.

ಈವೆಂಟ್‌ನಿಂದ ತನ್ನ ಇತ್ತೀಚಿನ ಫೋಟೊವನ್ನು ಹಂಚಿಕೊಂಡ ಸುಚಿತ್ರಾʻʻಕಲಾ ಪ್ರದರ್ಶನದಲ್ಲಿ ನಾನು ಭಾಗಿಯಾಗಿದ್ದೆ. ಆಗ ನನ್ನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಮುಖ ಕೂಡ ಊದಿಕೊಂಡಂತೆ ಕಂಡಿತ್ತು. ಇದಾದ ಬಳಿಕ ಅನೇಕರು ನನ್ನ ಆರೋಗ್ಯವನ್ನು ವಿಚಾರಿಸುತ್ತಿದ್ದರು. ಮೊಣಕಾಲು ಕೂಡ ಕೆಲವು ದಿನಗಳಿಂದ ತೀವ್ರ ನೋವು ಆಗುತ್ತಿತ್ತು. ಅಷ್ಟೇ ಅಲ್ಲ ನನ್ನ ಮುಖ ಕೂಡ ಬಲೂನ್‌ನಂತೆ ಊದಿಕೊಂಡಿದೆ. ಕಾರಣ ಸೌಂದರ್ಯ ಚಿಕಿತ್ಸೆಯನ್ನು ಮಾಡಿದ್ದೇನೆ. ಹೀಗಾಗಿ ಮುಖ ಮರೆಮಾಚಲು ಪ್ರಯತ್ನಿಸಲಿಲ್ಲ. ಮತ್ತೆ ಮುಖ ಮುಂಚಿನಂತಾಗುತ್ತದೆ. ಸಮಯಬೇಕಷ್ಟೆʼʼ ಎಂದಿದ್ದಾರೆ.

ʻʻಕಾರ್ಯಕ್ರಮವೊಂದರಲ್ಲಿ ಜಾವೇದ್ ಅಖ್ತರ್ ಜತೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದೆ. ಕ್ಷಮಿಸಿ ಗ್ಲ್ಯಾಮರ್‌ ಆಗಿ ಕಾಣಿಸಿಕೊಂಡಿಲ್ಲ. ನಿಮ್ಮ ಮತ್ತು ಕಾಳಜಿ ಪ್ರೀತಿಗಾಗಿ ಧನ್ಯವಾದʼʼ ಎಂದು ನಟಿ ತಮ್ಮ ಫಾಲೋವರ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: Shah Rukh Khan: ದೇವದಾಸ್ ಚಿತ್ರದಲ್ಲಿ ಶಾರುಖ್ ಖಾನ್ ನಿಜವಾಗ್ಲೂ ಕುಡಿದಿದ್ದರೆ?

ಸುಚಿತ್ರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ಸಾಮಾಜಿಕ ಮಾಧ್ಯಮದ ಮೂಲಕ ಹಲವು ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಎಸ್ ಎಸ್ ಎಲ್ ಸಿಯಲ್ಲಿ ಟಾಪರ್ (SSLC Topper) ಆಗಿರುವ ಪ್ರಾಚಿ ನಿಗಮ್ ಮುಖದ ಬಗ್ಗೆ ಹೆಚ್ಚು ಟ್ರೋಲ್‌ ಆಗಿತ್ತು. ಪ್ರಾಚಿ ನಿಗಮ್ ಬಗ್ಗೆ ಜಾಹೀರಾತನ್ನು ಹಾಕಿದ್ದಕ್ಕಾಗಿ ಸುಚಿತ್ರಾ ಬಾಂಬೆ ಶೇವಿಂಗ್ ಕಂಪನಿ ಮತ್ತು ಅದರ ಮಾಲೀಕರ ಮೇಲೆ ನಟಿ ಆಕ್ರೋಶ ಹೊರಹಾಕಿದ್ದರು. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಿರುತೆರೆ

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Amruthadhare Serial : ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ. ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ.

VISTARANEWS.COM


on

Amruthadhare Serial Bhumika-Gautham angryness has melted like ice
Koo

ಬೆಂಗಳೂರು: ಜೀ ಕನ್ನಡ ಧಾರಾವಾಹಿಯಲ್ಲಿ ʻಅಮೃತಧಾರೆʼ (Amruthadhare Serial) ಪ್ರಸಾರ ಕಾಣುತ್ತಿದೆ. ಈಗಾಗಲೇ ಭೂಮಿಕಾ ಮತ್ತು ಗೌತಮ್‌ ನಡುವೆ ಬಿರುಕು ಉಂಟಾಗಿ ಈಗ ಐಸ್ ಥರ ಕೋಪ‌ ಕರಗಿ ರಾಜಿ ಕೂಡ ಮಾಡಿಕೊಂಡಿದ್ದಾರೆ. ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ.

ಗೌತಮ್‌ ತಮ್ಮ ಪಾರ್ಥ ಹಾಗೂ ಭೂಮಿಕಾ ತಂಗಿ ಅಪ್ಪಿ ಒಬ್ಬರಿಗೊಬ್ಬರು ಪ್ರೀತಿಸುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಭೂಮಿಗೆ ಈ ಪ್ರೀತಿ ವಿಚಾರ ಗೊತ್ತಾಗಿ ಪಾರ್ಥನಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರೀತಿ ಎಂದರೆ ಜವಬ್ಧಾರಿ ಎಂದು ಪಾರ್ಥಗೆ ತಿಳಿ ಹೇಳಿದ್ದಾಳೆ ಭೂಮಿಕಾ. ಅತ್ತ ಗೌತಮ್‌ ತಾಯಿ ಶಕುಂತಲಾ ಮಗ ಮತ್ತು ಸೊಸೆ ಒಂದಾಗಬಾರದೆಂದು ಹೊಂಚು ಹಾಕುತ್ತಿದ್ದಾಳೆ.

ಭೂಮಿಕಾಗೆ ಕೋಚಿಂಗ್‌ ಸೆಂಟರ್‌ನಲ್ಲಿ ಪಾಠ ಮಾಡಬೇಕು ಎಂಬ ಆಸೆ. ಗೌತಮ್‌ ಪರ್‌ಮಿಶನ್‌ ಸಿಕ್ಕ ಬಳಿಕ ಕೋಚಿಂಗ್‌ಗೆ ಬರುತ್ತಾರೆ. ಅಲ್ಲಿ ಆದದ್ದೇ ಬೇರೆ. ಅಲ್ಲಿ ಹೋಗುತ್ತಿದ್ದಂತೆ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿರುತ್ತಾರೆ. ಇದರಿಂದ ಸಹುದ್ಯೋಗಿಗಳು ಚುಚ್ಚಿ ಮಾತನಾಡಿದ್ದಾರೆ. ಗೌತಮ್ ಹೆಂಡತಿಗೆ ಸುಲಭವಾಗಿ ಬೋರ್ಡ್ ಮೆಂಬರ್ ಪಟ್ಟ ಸಿಕ್ಕಿದೆ. ಟ್ಯಾಲೆಂಟ್ ಗಿಂತಲೂ ಹಣಕ್ಕೆ ಹೆಚ್ಚು ಆದ್ಯತೆ ಎಂದಿದ್ದಾರೆ. ಇದೆಲ್ಲವೂ ಭೂಮಿಕಾಳ ಮನಸ್ಸಿಗೆ ಘಾಸಿ ಮಾಡಿದೆ. ಶಕುಂತಲಾ ಬೋರ್ಡ್‌ಗೆ ಕಾಲ್ ಮಾಡಿ ನಾವು ಡೊನೇಷನ್ ಕೊಡುತ್ತಿದ್ದೇವೆ. ನನ್ನ ಸೊಸೆಗೆ ದೊಡ್ಡ ಸ್ಥಾನವನ್ನು ಕೊಡಿ ಎಂದು ತಾಕೀತು ಮಾಡಿದ್ದಾಳೆ .ಭೂಮಿಕಾ ಮನೆಗೆ ಬಂದವಳೇ ಗೌತಮ್ ಮೇಲೆ ಕೂಗಾಡಲು ಶುರು ಮಾಡುತ್ತಾಳೆ.

ಗೌತಮ್‌ ಮೇಲೆ ಭೂಮಿಕಾ ಕೂಗಾಡಿದ ಬಳಿಕ ಆನಂದ್‌ ಸಮಾಧಾನ ಮಾಡುತ್ತಾನೆ. ಗೌತಮ್‌ ಬಗ್ಗೆ ಅರಿಯದೇ ಮಾತನಾಡಬೇಡಿ ಎಂದು ಭೂಮಿಕಾಗೆ ತಿಳಿ ಹೇಳುತ್ತೇನೆ. ಈ ರೀತಿ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿದ್ದು ಗೌತಮ್‌ಗೆ ಗೊತ್ತಿಲ್ಲ ಎಂದು ಆನಂದ್‌ ಹೇಳಿದಾಗ ಭೂಮಿಕಾಗೆ ತಪ್ಪಿನ ಅರಿವಾಗುತ್ತದೆ. ಅತ್ತ ಗೌತಮ್‌ಗೆ ಕೂಡ ಶಕುಂತಲ ಕುತಂತ್ರ ಅರಿವಾಗದೇ ಹೋಗುತ್ತದೆ.

ಇದನ್ನೂ ಓದಿ: Amruthadhare Serial: ಕೆಂಪು ಗುಲಾಬಿಯಂತೆ ಕಂಗೊಳಿಸಿದ ʻಮಹಿಮಾʼ; ಸಾರಾ ಅಣ್ಣಯ್ಯ ಹೊಸ ಲುಕ್‌!

ಮಧ್ಯರಾತ್ರಿ ಐಸ್‌ಕ್ರೀಮ್ ತಿಂತಿದ್ದಾರೆ ಗೌತಮ್-ಭೂಮಿಕಾ

ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ. ಆ ಬಳಿಕ ಜೋಡಿ ಮಧ್ಯರಾತ್ರಿ ಕೂತು ಐಸ್‌ಕ್ರೀಮ್‌ ತಿಂದು ರಾಜಿಯಾಗಿ ಖುಷಿಯಲ್ಲಿ ಇರುತ್ತಾರೆ.

ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading
Advertisement
Terrorist attack
ದೇಶ17 mins ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ24 mins ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Prawal Revanna Case
ಕರ್ನಾಟಕ57 mins ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Summer Health Tips
ಆರೋಗ್ಯ1 hour ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Vistara Editorial
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

Drinking Water Before Meals
ಆರೋಗ್ಯ2 hours ago

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

World Laughter Day
ಆರೋಗ್ಯ3 hours ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ8 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌