Accident In Delhi | ಮೈತುಂಬ ಬಟ್ಟೆ ತೊಟ್ಟು ಹೋದ ನನ್ನ ಮಗಳು ಸಿಕ್ಕಿದ್ದು ನಗ್ನವಾಗಿ, ಇದೆಂಥಾ ಅಪಘಾತ?-ದೆಹಲಿ ಯುವತಿ ತಾಯಿಯ ಪ್ರಶ್ನೆ - Vistara News

ಕ್ರೈಂ

Accident In Delhi | ಮೈತುಂಬ ಬಟ್ಟೆ ತೊಟ್ಟು ಹೋದ ನನ್ನ ಮಗಳು ಸಿಕ್ಕಿದ್ದು ನಗ್ನವಾಗಿ, ಇದೆಂಥಾ ಅಪಘಾತ?-ದೆಹಲಿ ಯುವತಿ ತಾಯಿಯ ಪ್ರಶ್ನೆ

ಅಪಘಾತದಲ್ಲಿ ಮೃತಪಟ್ಟ ಯುವತಿಯ ಮೇಲೆ ಅತ್ಯಾಚಾರವಾಗಿದೆಯೇ? ಲೈಂಗಿಕ ದೌರ್ಜನ್ಯ ಎಸಗಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಹೀಗಾಗಿ ಅವಳ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ದೆಹಲಿಯಲ್ಲಿರುವ ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.

VISTARANEWS.COM


on

Accident In Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿಯಲ್ಲಿ ಭೀಕರ ಅಪಘಾತದಲ್ಲಿ ಮೃತಪಟ್ಟ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಆಗಿದ್ದಿರಬಹುದು ಎಂಬುದೊಂದು ಚರ್ಚೆ ಶುರುವಾಗಿದೆ. ಸುಲ್ತಾನ್​ಪುರಿಯಲ್ಲಿ ಕಾರಿನ ಅಡಿಗೆ ಸಿಲುಕಿ 12 ಕಿಮೀ ದೂರ ಎಳೆಯಲ್ಪಟ್ಟ ಯುವತಿಯು ಸಂಪೂರ್ಣ ನಗ್ನಾವಸ್ಥೆಯಲ್ಲಿ ಕಂಝಾವಲ್​ ಬಳಿ ರಸ್ತೆ ಮೇಲೆ ಬಿದ್ದಿದ್ದಳು. ಆಕೆ ಮೈಮೇಲೆ ಒಂದು ಚೂರು ಬಟ್ಟೆಯೂ ಇರಲಿಲ್ಲ. ಈಗ ಅದೇ ವಿಚಾರವೇ ಅನುಮಾನ ಮೂಡಿಸಿದೆ. ಆಮ್​ ಆದ್ಮಿ ಪಕ್ಷದ ನಾಯಕ ಸೌರಭ್​ ಭಾರದ್ವಾಜ್ ಅವರು ಯುವತಿ ಮೇಲೆ ರೇಪ್​ ಆಗಿರಬಹುದು. ಈ ಆಯಾಮದಲ್ಲಿ ತನಿಖೆಯಾಗಬೇಕು ಎಂದಿದ್ದರು. ಈಗ ಯುವತಿಯ ತಾಯಿ ಕೂಡ ಇದೇ ಪ್ರಶ್ನೆ ಎತ್ತಿದ್ದಾರೆ.

‘ನನ್ನ ಮಗಳು ಹೊರಗೆ ಹೋಗಿದ್ದಳು. ನಾನು ಅವಳಿಗಾಗಿ ಕಾಯುತ್ತಿದ್ದೆ. ಆದರೆ ಹೀಗೆ ಶವವಾಗಿ ಬಂದಳು. ಆದರೆ ಅದು ಹೇಗೆ ಆಕೆಯ ಮೈಮೇಲೆ ಸ್ವಲ್ಪವೂ ಬಟ್ಟೆ ಉಳಿದಿಲ್ಲ? ಪೊಲೀಸರು ನನಗೆ ಅವಳ ದೇಹವನ್ನು ಸರಿಯಾಗಿ ತೋರಿಸಲೂ ಇಲ್ಲ. ನನ್ನ ಮಗಳ ಸಾವಿಗೆ ನ್ಯಾಯ ಬೇಕು’ ಎಂದು ತಾಯಿ ಆಗ್ರಹಿಸಿದ್ದಾರೆ.

‘ಈಕೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಮೊದಲು ಗೊತ್ತಾಗಿದ್ದು ನನ್ನ ಸೋದರನಿಗೆ. ಅವನೇ ನನಗೆ ಹೇಳಿದ. ನಮ್ಮ ಕುಟುಂಬದಲ್ಲಿ ಆಕೆಯೊಬ್ಬಳೇ ದುಡಿಯುವವಳು ಆಗಿದ್ದಳು. ಮನೆಯಿಂದ ಹೊರ ಹೋಗುವಾಗ ಮೈತುಂಬ ಬಟ್ಟೆ ತೊಟ್ಟಿದ್ದಳು. ಆದರೆ ಆಕೆ ಪತ್ತೆಯಾಗಿದ್ದಾಗ ಸ್ವಲ್ಪವೂ ಬಟ್ಟೆ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಇದೆಂಥಾ ಸ್ವರೂಪದ ಅಪಘಾತ?’ ಎಂದೂ ಮಹಿಳೆ ಪ್ರಶ್ನಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಯುವತಿಯ ಮೇಲೆ ಅತ್ಯಾಚಾರವಾಗಿದೆಯೇ? ಲೈಂಗಿಕ ದೌರ್ಜನ್ಯ ಎಸಗಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಹೀಗಾಗಿ ಅವಳ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ದೆಹಲಿಯಲ್ಲಿರುವ ರಾಷ್ಟ್ರೀಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದೆ. ಇನ್ನೊಂದೆಡೆ ವಿಧಿವಿಜ್ಞಾನ ತಂಡದ ಸಿಬ್ಬಂದಿ ಅಪಘಾತ ನಡೆದ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಮಾಡಿದ ಕಾರಿನ ಅಡಿಯಲ್ಲಿ ರಕ್ತದ ಕಲೆ ಪತ್ತೆಯಾಗಿದೆ. ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಸಾಧ್ಯತೆ ಕಡಿಮೆ ಎಂದು ದೆಹಲಿ ಪೊಲೀಸರು ಹೇಳಿದ್ದು, ಮರಣೋತ್ತರ ಪರೀಕ್ಷೆ ಮಾಡುವುದಾಗಿಯೂ ತಿಳಿಸಿದ್ದಾರೆ.

ಇದನ್ನೂ ಓದಿ: Accident In Delhi | ಕಾರಿನಡಿ ಎಳೆಯಲ್ಪಟ್ಟ ಯುವತಿ ಮೇಲೆ ರೇಪ್​ ಆಗಿರಬಹುದು ಎಂದ ಆಪ್​; ಕಾರ್ಯಕರ್ತರಿಂದ ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Crime News: ಇಡೀ ದೆಹಲಿ ನಗರವೇ ಹೋಳಿ ಆಚರಣೆಯ ಸಿದ್ಧತೆಯಲ್ಲಿ ತೊಡಗಿದ್ದಾಗ ಘೋರ ಘಟನೆಯೊಂದು ನಡೆದಿತ್ತು. ಪಾಪಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದು ಪರಾರಿಯಾಗಿದ್ದ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಆತನ ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.

VISTARANEWS.COM


on

crime news
Koo

ನವದೆಹಲಿ: ಹೋಳಿ ಹಬ್ಬದ ಮುನ್ನಾ ದಿನ (ಮಾರ್ಚ್‌ 24) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬವಾನಾ ಪ್ರದೇಶದಲ್ಲಿ 5 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕೊಲೆ ಮಾಡಿ, ಪರಾರಿಯಾಗುವ ಮೊದಲು ಮಗುವಿನ ಶವವನ್ನು ಕಾರ್ಖಾನೆಯಲ್ಲಿ ಬಚ್ಚಿಟ್ಟಿದ್ದ. ಸದ್ಯ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Crime News). 

ಘಟನೆ ಹಿನ್ನೆಲೆ

ಮಾರ್ಚ್ 24ರಂದು ಎಲ್ಲರೂ ಹೋಳಿ ಪೂರ್ವದ ಆಚರಣೆ (ಹೋಲಿಕಾ ದಹನ್)ಯಲ್ಲಿ ತೊಡಗಿದ್ದಾಗ ದೆಹಲಿಯ ಬವಾನಾ ಪೊಲೀಸ್ ಠಾಣೆಗೆ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ರಾತ್ರಿ 10.27ರ ಸುಮಾರಿಗೆ ಕರೆ ಬಂದಿತ್ತು. ಬವಾನಾ ಸೆಕ್ಟರ್ 1ರಿಂದ 5 ವರ್ಷದ ಬಾಲಕಿಯನ್ನು ಅಪಹರಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದ. ಚಹಾ ಅಂಗಡಿ ನಡೆಸುತ್ತಿರುವ ಬಾಲಕಿಯ ಪೋಷಕರು, ಸಂಜೆ 5 ಗಂಟೆ ಸುಮಾರಿಗೆ ಬಾಲಕಿಯನ್ನು ಕೊನೆಯದಾಗಿ ನೋಡಿದ್ದಾಗಿಯೂ ಬಳಿಕ ಅವಳನ್ನು ಹುಡುಕಲು ಪ್ರಯತ್ನಿಸಿದರೂ ಕಂಡಿ ಬಂದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದರು.

ಪ್ರಕರಣ ದಾಖಲಿಸಿದ ಪೊಲೀಸರು ಪೋಷಕರೊಂದಿಗೆ ಶೋಧವನ್ನು ಪ್ರಾರಂಭಿಸಿದ್ದರು. ಬಾಲಕಿಯನ್ನು ಕೊನೆಯದಾಗಿ ನೋಡಿದ ಪ್ರದೇಶಗಳ ಸುತ್ತಲೂ ಇಡೀ ರಾತ್ರಿ ಹುಡಕಾಡಿದರೂ ಪತ್ತೆಯಾಗಿರಲಿಲ್ಲ. ಮಾರನೇ ದಿನ ಮಾರ್ಚ್ 25ರಂದು ಬೆಳಗ್ಗೆ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಅದರಲ್ಲಿ ಆ ಬಾಲಕಿ ಒಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಬಂತು. ಹುಡುಗಿಯ ಪೋಷಕರು ಆ ವ್ಯಕ್ತಿಯನ್ನು ಗುರುತಿಸಿದ್ದರು ತೋಟಾನ್ ಎಂದು ಗುರುತಿಸಿದ್ದರು.

ಕೂಡಲೇ ಪೊಲೀಸರು ತೋಟಾನ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು. ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದ. ಅಲ್ಲಿದ್ದವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ನವದೆಹಲಿ ರೈಲ್ವೆ ನಿಲ್ದಾಣದಿಂದ ಹೌರಾಗೆ ತೆರಳುವ ಪೂರ್ವಾ ಎಕ್ಸ್‌ಪ್ರೆಸ್‌ ರೈಲಿಗಾಗಿ ಹೋಗಿದ್ದಾನೆ ಎನ್ನುವುದು ತಿಳಿದು ಬಂತು.

ತಕ್ಷಣ ಪೊಲೀಸರು ಕಾರ್ಯ ಪ್ರವೃತ್ತರಾದರೂ ಅವರು ಅಲ್ಲಿಗೆ ತಲುಪುವಾಗ ರೈಲು ಹೊರಟಿತ್ತು. ಬಳಿಕ ಮಾರ್ಚ್ 26ರ ಬೆಳಗ್ಗೆ ಪೊಲೀಸ್ ತಂಡವೊಂದು ಕೋಲ್ಕತಾ ವಿಮಾನ ನಿಲ್ದಾಣಕ್ಕೆ ತೆರಳಿತು. ನಂತರ ಪೊಲೀಸರು ಅಸನ್ಸೋಲ್ ರೈಲ್ವೆ ನಿಲ್ದಾಣಕ್ಕೆ ತಲುಪಿದರು. ಪೂರ್ವಾ ಎಕ್ಸ್‌ಪ್ರೆಸ್‌ ಅನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಅದರಲ್ಲಿ ಆರೋಪಿ ಪತ್ತೆಯಾಗಿದ್ದ. ಮಾರ್ಚ್ 27ರಂದು ಆತನನ್ನು ದೆಹಲಿಗೆ ಕರೆತರಲಾಯಿತು.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ತಪ್ಪೊಪ್ಪಿಗೆ

ವಿಚಾರಣೆ ವೇಳೆ ಆರೋಪಿ ತೋಟಾನ್ ತಪ್ಪೊಪ್ಪಿಕೊಂಡಿದ್ದಾನೆ. ಮಾರ್ಚ್ 24ರಂದು ಸಂಜೆ 7.30ರ ಸುಮಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಂದು ಶವವನ್ನು ಬವಾನಾದ ಕಾರ್ಖಾನೆಯಲ್ಲಿ ಎಸೆದಿದ್ದಾಗಿ ತಿಳಿಸಿದ್ದಾನೆ. ಪರಿಶೋಧನೆ ಬಳಿಕ ಬಾಲಕಿಯ ದೇಹವು ಬ್ಲೇಡ್ ಮತ್ತು ಇಟ್ಟಿಗೆಯೊಂದಿಗೆ ಪತ್ತೆಯಾಗಿದೆ. ಹೋಳಿ ಆಚರಣೆ ಹಿನ್ನೆಲೆಯಲ್ಲಿ ಕಾರ್ಖಾನೆಗೆ ರಜೆ ಸಾರಿದ್ದು ಆತನಿಗೆ ಅನುಕೂಲವಾಗಿ ಮಾರ್ಪಟ್ಟಿತ್ತು. ಸದ್ಯ ತೋಟಾನ್ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rameswaram cafe: ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ. ಈಗ ಬಾಂಬ್‌ ಬ್ಲಾಸ್ಟ್‌ನ ಪ್ರಮುಖ ಆರೋಪಿ ಮುಜಾವೀರ್ ಹುಸೇನ್‌ಗೆ ಸಹಕಾರ ನೀಡಿದ ಪ್ರಮುಖ ಸಂಚುಕೋರನಾಗಿರುವ ಮುಜಾಮಿಲ್ ಶರೀಫ್‌ನನ್ನು ಬಂಧಿಸಲಾಗಿದೆ. ಈತ ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Rameswaram cafe bomb blast case
Koo

ಬೆಂಗಳೂರು: ವೈಟ್‌ಫೀಲ್ಡ್‌ ಬಳಿಕ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Rameswaram cafe blast case) ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು (NIA Officers) ಮುಖ್ಯ ಸಂಚುಕೋರನೊಬ್ಬನನ್ನು ಬಂಧಿಸಿದ್ದಾರೆ. ಬಾಂಬರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧನ ಮಾಡಲಾಗಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಮುಜಾಮಿಲ್ ಶರೀಫ್ ಬಂಧಿತ ಉಗ್ರ ಎನ್ನಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಮುಜಾವೀರ್ ಹುಸೇನ್ ಜತೆ ಮುಜಾಮಿಲ್ ಶರೀಫ್ ನಿರಂತರ ಸಂಪರ್ಕದಲ್ಲಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ ಎನ್ನಲಾಗಿದೆ. ಮುಜಾವೀರ್ ಹುಸೇನ್‌ಗೆ ಮುಜಾಮಿಲ್ ಶರೀಫ್ ಸಹಕಾರ ನೀಡಿದ್ದ ಅಲ್ಲದೆ, ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಗುರುವಾರ ದಾಳಿ ನಡೆಸಿದ್ದ NIA

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್ ಸಂಬಂಧ ಬುಧವಾರ ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಹದಿನೆಂಟು ಕಡೆ ಎನ್‌ಐಎ ತಂಡ ದಾಳಿ ನಡೆಸಿದೆ. ದಾಳಿ ವೇಲೆ ಹಲವು ವಸ್ತುಗಳು ಹಾಗೂ ಭಾರಿ ಪ್ರಮಾಣದ ಹಣ ಸಹ ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿತ್ತು. ಡಿಜಿಟಲ್ ಡಿವೈಸ್‌ಗಳನ್ನೂ ಸೀಜ್‌ ಮಾಡಲಾಗಿತ್ತು. ಈಗ ಓರ್ವ ಶಂಕಿತನನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಾಂಬರ್‌ಗೆ ಸಹಾಯ ಮಾಡಿದ್ದ?

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾಡಿದವನಿಗೆ ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದ. ಆತನ ಓಡಾಟಕ್ಕೆ ಹಾಗೂ ಪರಾರಿಯಾಗಲು ಸಹಾಯ ಮಾಡಿದ್ದ ಎಂಬ ಅಂಶ ತನಿಖೆ ವೇಳೆ ಗೊತ್ತಾಗಿದೆ. ಮುಜಾವೀರ್ ಶಜೀಬ್ ಹುಸೇನ್, ಅಬ್ದುಲ್ ಮತೀನ್ ತಾಹಗೆ ಸಹ ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ.

ದೊಡ್ಡ ಮಟ್ಟದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ದಾಳಿ ವೇಳೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ, ರಾಮೇಶ್ವರಂ ಕೆಫೆಗೆ ಪ್ರಮುಖ ಆರೋಪಿ ಮುಜಾವೀರ್ ಶಜೀಬ್ ಹುಸೇನ್ ಬಾಂಬ್ ಅನ್ನು ತಂದಿದ್ದ. ಈತನಿಗೆ ಅಬ್ದುಲ್ ಮತೀನ್ ತಾಹ, ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದರು ಎಂಬುದು ಎನ್‌ಐಎಗೆ ತನಿಖೆ ವೇಳೆ ಗೊತ್ತಾಗಿದೆ. ಈ ಮಾಹಿತಿ ಸಿಕ್ಕ ಕೂಡಲೇ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ. ಈಗ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟವನ್ನು ನಡೆಸಲಾಗಿದೆ.

ಗುರಪ್ಪನಪಾಳ್ಯದಲ್ಲಿ ನೆಲಸಿದ್ದ ಮುಜಾವೀರ್ ಹುಸೇನ್!

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಸದ್ಯ ಈತನಿಗೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಸ್ಫೋಟ; ಮತ್ತಿಬ್ಬರನ್ನು ಬಂಧಿಸಿದ ಎನ್‌ಐಎ!

ಅಬ್ದುಲ್ ಮತೀನ್ ಜತೆಗೂ ಮುಜಾಮಿಲ್ ಶರೀಫ್ ಸಂಪರ್ಕ

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

Rameswaram cafe bomb blast Main conspirator trapped by NIA and Terrorist Abdul mateen taha
ಅಬ್ದುಲ್ ಮತೀನ್ ತಾಹ

ಯಾರು ಈ ಅಬ್ದುಲ್ ಮತೀನ್ ತಾಹ?

ಅಬ್ದುಲ್ ಮತೀನ್ ತಾಹ ಅಲ್ ಹಿಂದ್‌ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸೊಪ್ಪುಗುಡ್ಡೆ ನಿವಾಸಿಯಾಗಿರುವ ಈತ 2020ರಿಂದ ನಾಪತ್ತೆ ಆಗಿದ್ದಾನೆ. ಕಳೆದ ಐದು ವರ್ಷಗಳಿಂದ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಆರಂಭದಲ್ಲಿ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ನಂತರ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಡಾರ್ಕ್‌ವೆಬ್ ಬಳಕೆ ಮಾಡುವುದರಲ್ಲಿ ಈತ ಪರಿಣಿತಿಯನ್ನು ಹೊಂದಿದ್ದ. ಇದರ ಜತೆಗೆ ಕುಕ್ಕರ್ ಬಾಂಬ್ ತಯಾರಿಕೆ ಮಾಡುವುದರಲ್ಲೂ ನಿಪುಣನಾಗಿದ್ದ. ಮ್ಯಾಚ್‌ಸ್ಟಿಕ್‌ನಲ್ಲಿರುವ ಫಾಸ್ಪರಸ್ ಬಳಸಿ ಕುಕ್ಕರ್ ಬಾಂಬ್ ಅನ್ನು ಈತ ತಯಾರಿಸುತ್ತಿದ್ದ. ಇದಲ್ಲದೆ, ಅಲ್ ಹಿಂದ್ ಸಂಘಟನೆ ಸದಸ್ಯರಿಗೆ ಅಡಗುದಾಣ ಕಲ್ಪಿಸುವ ಜವಾಬ್ದಾರಿ ಈತನದ್ದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಈಗಾಗಲೇ ಘೋಷಿಸಿದೆ.

Continue Reading

ಬೆಂಗಳೂರು

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

SSLC Students Fight: ಬ್ಯಾಗ್‌ ಇಡುವ ವಿಚಾರಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಮೂವರು ವಿದ್ಯಾರ್ಥಿಗಳಿಗೆ ಚಾಕು (Attempt to Murder Case) ಇರಿಯಲಾಗಿದೆ.

VISTARANEWS.COM


on

By

SSLC Students Fighting
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಹುಡುಗರ ಮಾರಾಮಾರಿ ನಡೆದಿದ್ದು, ಮೂವರು ವಿದ್ಯಾರ್ಥಿಗಳು ಚಾಕು (SSLC Students Fight) ಇರಿತಕ್ಕೊಳಗಾಗಿದ್ದಾರೆ. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ನಿನ್ನೆ ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಇದನ್ನೂ ಓದಿ:Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಯಾದಗಿರಿ: ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕರ (Water Crisis) ಶುರುವಾಗಿದೆ. ಗಂಟೆಗಟ್ಟಲೇ ಕಾಯುತ್ತಾ, ಹಗಲಿರುಳು ಎನ್ನದೇ ನಲ್ಲಿ ಮುಂದೆ ಕೂರುವಂತಾಗಿದೆ. ಬರಗಾಲವು ತೀವ್ರವಾಗಿ ಆವರಿಸಿದೆ. ಈ ಮಧ್ಯೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಸಂಬಂಧಿಕರೇ ಕಿತ್ತಾಡಿಕೊಂಡಿದ್ದು, ರಕ್ತವನ್ನೇ (Murder Case) ಹರಿಸಿದ್ದಾರೆ.

ಕುಡಿಯುವ ನೀರಿಗಾಗಿ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದವನು. ಹಣಮಂತ ಹಾಗೂ ಹಣಮವ್ವ ಕೊಲೆ ಆರೋಪಿಗಳಾಗಿದ್ದಾರೆ. ನೀರಿನ ವಿಚಾರವಾಗಿ ನಂದಕುಮಾರನ ಅಜ್ಜಿ ಜತೆ ಆರೋಪಿಗಳು ಜಗಳವಾಡಿದ್ದರು.

ಹೊರಹೋಗಿ ಮನೆಗೆ ವಾಪಸ್‌ ಬಂದ ನಂದಕುಮಾರಗೆ ಗಲಾಟೆ ವಿಚಾರವನ್ನು ಅಜ್ಜಿ ತಿಳಿಸಿದ್ದರು. ಹೀಗಾಗಿ ಅಜ್ಜಿ ಜತೆ ನೀವೂ ಯಾಕೆ ಜಗಳ ಮಾಡಿದ್ದೀರಿ ಎಂದು ಮೊಮ್ಮಗ ನಂದಕುಮಾರ್‌ ಸಂಬಂಧಿಗಳಾದ ಹಣಮಂತ ಮತ್ತು ಹಣಮವ್ವರಿಗೆ ಪ್ರಶ್ನೆ ಮಾಡಿದ್ದ. ಇದೇ ವೇಳೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ನಂದಕುಮಾರ್‌ಗೆ ಹಾಗೂ ಈತನ ತಾಯಿಗೂ ಹಲ್ಲೆ ನಡೆಸಿದ್ದಾರೆ.

murder case Youth killed over drinking water dispute
ಕೊಲೆಯಾದ ನಂದಕುಮಾರ ಕಟ್ಟಿಮನಿ

ಇಷ್ಟಕ್ಕೆ ಸುಮ್ಮನಾಗದೆ ಹಣಮಂತ ಹಾಗೂ ಹಣಮವ್ವ ಎಂಬುವವರು ನಂದಕುಮಾರಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ಹುಣಸಗಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಣಮಂತ ಹಾಗೂ ಹಣಮವ್ಬ ಇಬ್ಬರನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Murder Case : ತವರು ಮನೆ ಸೇರಿದ್ದ ಪತ್ನಿ ವಾಪಸ್‌ ಬರಲಿಲ್ಲವೆಂಬ ಸಿಟ್ಟಿಗೆ ಪಾಪಿ ಪತಿಯೊಬ್ಬ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Murder case Family Dispute
ಪತ್ನಿಯನ್ನು ಕೊಂದ ಮುಬಾರಕ್‌
Koo

ಆನೇಕಲ್: ಪತ್ನಿಯನ್ನು ಬರ್ಬರವಾಗಿ ಕೊಂದು (Murder case) ಪತಿಯೊಬ್ಬ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಅರ್ಬಿಯಾ ತಾಜ್( 24) ಮೃತ ದುರ್ದೈವಿ. ಮುಬಾರಕ್(28) ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದವನು.

ಮುಬಾರಕ್‌ ಮಚ್ಚಿನಿಂದ ಕೊಚ್ಚಿ ಅರ್ಬಿಯಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅರ್ಬಿಯಾ ತಾಜ್ ಮುಬಾರಕ್‌ನ ಕಿರುಕುಳದಿಂದ ಬೇಸತ್ತಿದ್ದಳು. ಹೀಗಾಗಿ ತಿಂಗಳ ಹಿಂದೆ ತವರು ಮನೆಗೆ ಸೇರಿಕೊಂಡಿದ್ದಳು. ವಾರದ ಹಿಂದೆ ಅರ್ಬಿಯಾಳನ್ನು ಮನೆಗೆ ವಾಪಸ್‌ ಬರುವಂತೆ ಒತ್ತಾಯಿಸಿದ್ದ.

ಆದರೆ ಅರ್ಬಿಯಾ ತಾಜ್ ಗಂಡನ ಮನೆಗೆ ತೆರಳಲು ನಿರಾಕರಿಸಿದ್ದಳು. ಪತ್ನಿಯ ತವರು ಮನೆಗೆ ಬಂದಿದ್ದ ಮುಬಾರಕ್‌, ಬಾಗಿಲು ಬಡಿದಿದ್ದ. ತೆರೆಯದೇ ಇದ್ದಾಗ ಕೊಡಲಿ ಹಾಗೂ ಮಚ್ಚಿನಿಂದ ಬಾಗಿಲು ಮುರಿದು ಒಳ ನುಗ್ಗಿದ್ದಾನೆ. ನಂತರ ಮುಬಾರಕ್‌ ಮಚ್ಚಿನಿಂದ ಪತ್ನಿಗೆ ಹಲ್ಲೆ ನಡೆಸಿ ಬರ್ಬರವಾಗಿ ಕೊಂದಿದ್ದಾನೆ. ಇತ್ತ ಮಗಳ ಕೂಗಾಟ ಕೇಳಿ ತಾಯಿ ನೆರವಿಗೆ ಧಾವಿಸಿದಾಗ, ರೂಮಿನ ಬಾಗಿಲು ಲಾಕ್ ಮಾಡಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ.

Murder Case

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗೆ ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಬಿಯಾ ತಾಜ್‌ಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಎದುರಾಳಿಯ ಮುಗಿಸಲು ತಾನೇ ರೆಡಿ ಮಾಡಿದ್ದ ಹುಡುಗರಿಂದಲೇ ಕೊಲೆಯಾದ ರೌಡಿಶೀಟರ್‌

ಬೆಂಗಳೂರು: ಎದುರಾಳಿಯ ಕೊಲೆಗೆ ಸ್ಕೆಚ್ ಹಾಕಿ ಹುಡುಗರನ್ನು ರೆಡಿ ಮಾಡಿದ್ದ ರೌಡಿಶೀಟರ್‌ ದಿನೇಶ್‌ ಕುಮಾರ್‌, ಅವರಿಂದಲೇ ಬರ್ಬರವಾಗಿ ಕೊಲೆಯಾಗಿ (Murder case) ಹೋಗಿದ್ದ. ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಟ್ಟು ಕೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ದಿನೇಶ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ‌ ಆರೋಪಿಗಳ ಪೈಕಿ ಇಬ್ಬರು ಕೊತ್ತನೂರು ಹಾಗೂ ರಾಮಮೂರ್ತಿನಗರ ಪೊಲೀಸ್ ಠಾಣೆಯ ರೌಡಿಶೀಟರ್‌ಗಳಾಗಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್‌ನನ್ನು ಹತ್ಯೆಗೈದಿದ್ದರು ಎಂದು ತಿಳಿದು ಬಂದಿದೆ. ಇನ್ನೂ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Child Abduction: ಮಲೆನಾಡಿನ ಗ್ರಾಮದಲ್ಲಿ ಹೆಣ್ಣು ಮಗು ಅಪಹರಣ, ಆತಂಕ

ತಿರುಗು ಬಾಣ ಬಿಟ್ಟ ರೌಡಿ ದಿಲೀಪ್‌

ಇನ್ನೂ ಈ ದಿನೇಶ್‌ ತನ್ನ ಎದುರಾಳಿ ಆಗಿರುವ ರಾಮಮೂರ್ತಿನಗರದ ರೌಡಿಶೀಟರ್‌ ದಿಲೀಪ್‌ನ ಕೊಲೆಗೆ ಸ್ಕೆಚ್ ಹಾಕಿದ್ದ. ಇದಕ್ಕಾಗಿ ಸತೀಶ್ ಅರವಿಂದ , ಗೌತಮ್ ಸೇರಿ ಹತ್ತು ಜನ ಹುಡುಗರನ್ನು ರೆಡಿ ಮಾಡಿದ್ದ. ಆದರೆ ಈ ಹತ್ತು ಜನರು ದಿನೇಶ್‌ನ ವಿರೋಧಿ ಆಗಿರುವ ರೌಡಿ ದಿಲೀಪ್ ಜತೆಗೆ ಸಂಪರ್ಕದಲ್ಲಿ ಇದ್ದರು.

ಯಾವ ಹುಡುಗರ ಜತೆಗೆ ದಿನೇಶ್ ಪ್ಲಾನ್ ಮಾಡಿದ್ದನೋ ಅವರನ್ನೇ ಸೆಟ್ ಮಾಡಿಕೊಂಡ ರೌಡಿ ದಿಲೀಪ್‌ ತಿರುಗು ಬಾಣ ಬಿಟ್ಟಿದ್ದ. ದಿನೇಶ್‌ ಜತೆಗಿದ್ದುಕೊಂಡೇ ಆತನನ್ನೇ ಕೊಂದು ಮುಗಿಸಿದ್ದಾರೆ. ದಿಲೀಪ್, ಕ್ರಿಸ್ಟೋಫರ್, ಅರವಿಂದ, ಗೌತಮ್ ಸೇರಿ ಒಟ್ಟು ಹನ್ನೆರಡು ಜನರನ್ನು ಜೈಲಿಗೆ ಕಳುಹಿಸಲಾಗಿದೆ.

ಮೂರೇ ನಿಮಿಷದಲ್ಲಿ ಕೊಂದು ಹಾಕಿದ್ರು

ಮಾ.27ರಂದು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಕಂ ಸುಪಾರಿ ಕಿಲ್ಲರ್‌ ದಿನೇಶ್‌ನನ್ನು ಕಮ್ಮನಹಳ್ಳಿ ಓಯೋ ರೂಂ ಬಳಿ ಬರ್ಬರ ಹತ್ಯೆ ನಡೆದಿತ್ತು. ಹಣ ಇಲ್ಲ ಎಂದು ಕಾರ್ಡ್ ಕೊಡುವ ಬಗ್ಗೆ ರಿಸೆಪ್ಷನಿಸ್ಟ್ ಜತೆ ಆತನ ಹುಡುಗರು ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಸೋಫಾದಲ್ಲಿ ಕೂತಿದ್ದ ದಿನೇಶ್ ಮೇಲೆ ಏಕಾಏಕಿ ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ, ಕೇವಲ ಮೂರು ನಿಮಿಷದಲ್ಲಿ ಕೊಂದು ಹಂತಕರು ಪರಾರಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
kea
ಕರ್ನಾಟಕ1 hour ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ2 hours ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ2 hours ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್3 hours ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ3 hours ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು3 hours ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ3 hours ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ4 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ4 hours ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202412 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202413 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ21 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌