ವಿಸ್ತಾರ ಸಂಪಾದಕೀಯ | ಸಿದ್ದೇಶ್ವರ ಶ್ರೀಗಳು ಪ್ರವಚನ ಮೂಲಕ ನಮ್ಮೊಂದಿಗೆ ಸದಾ ಇರಲಿದ್ದಾರೆ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಸಿದ್ದೇಶ್ವರ ಶ್ರೀಗಳು ಪ್ರವಚನ ಮೂಲಕ ನಮ್ಮೊಂದಿಗೆ ಸದಾ ಇರಲಿದ್ದಾರೆ

ಸಿದ್ದೇಶ್ವರ ಶ್ರೀಗಳಿಗೆ ಅಧ್ಯಾತ್ಮವೆಂಬುದು ಬೋಧನೆಯ ವಸ್ತು ಆಗಿರಲಿಲ್ಲ. ಸರಳ ಸಹಜ ಬದುಕಿನ ದೈನಂದಿನ ನಡೆಯಾಗಿತ್ತು. ತಾವು ಕಾಲವಾದ ಬಳಿಕ ತಮ್ಮ ಸ್ಮಾರಕವಿರಬಾರದೆಂದು ವಿಲ್‌ ಬರೆದಿಟ್ಟ ಮಹಾತ್ಮರವರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

“ನಡೆದಾಡುವ ದೇವರುʼʼ ಶ್ರೀ ಸಿದ್ದೇಶ್ವರ ಶ್ರೀಗಳು ದೇಹತ್ಯಾಗ ಮಾಡಿದ್ದಾರೆ. ಸೀದಾ-ಸಾದಾ, ಸರಳ, ಸುಂದರ ಅಧ್ಯಾತ್ಮಿಕ ಜೀವನದ ಮೂಲಕ ಜನಮನದ ಮೇಲೆ ಗಾಢ ಪ್ರಭಾವ ಬೀರಿದ ಅವರು ಉಪನ್ಯಾಸ, ಅಂಕಣ ಮತ್ತು ಕೃತಿಗಳ ಮೂಲಕ ಅಸಂಖ್ಯಾತ ಜನರ ಮನಸ್ಸಿಗೆ ಸಾಂತ್ವನ ನೀಡಿದ ಮಹಾಗುರು.

ಗದುಗಿನ ಶಿವಾನಂದ ಶ್ರೀಗಳ ಪರಂಪರೆಗೆ ಸೇರಿದ ವಿಜಯಪುರದ ಜ್ಞಾನಯೋಗಾಶ್ರಮ ಮುಖ್ಯಸ್ಥರಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾವಿರಾರು ಹಳ್ಳಿಗಳಲ್ಲಿ ಸಂಚರಿಸಿ ಜ್ಞಾನದಾಸೋಹ ನೀಡಿದವರು. ಭಗವದ್ಗೀತೆ, ಪತಂಜಲಿ ಯೋಗ, ಜಾಬಲಿ, ಕಪಿಲ, ಪರಾಶರಾದಿ ಋಷಿಗಳ ಸಂಹಿತೆಗಳೊಂದಿಗೆ, ವೇದ, ಉಪನಿಷತ್ತು, ಶರಣರ ವಚನಗಳು, ಬೈಬಲ್‌, ಕುರಾನ್‌, ಸಂಸ್ಕೃತ ನಾಟಕಗಳು, ಪಾಶ್ಚಿಮಾತ್ಯ ತತ್ವಜ್ಞಾನಿಗಳು, ವಿಜ್ಞಾನಿಗಳ ಬದುಕಿನ ಅಪರೂಪದ ಘಟನಾವಳಿಗಳನ್ನು ಪ್ರತಿಯೊಬ್ಬರಿಗೂ ಅರ್ಥವಾಗುವಂತೆ ಸಣ್ಣಪುಟ್ಟ ಕತೆಗಳ ಮೂಲಕ ಪ್ರವಚನ ನೀಡುತ್ತಿದ್ದರು. ವೇದ ಸಾರವನ್ನು ಸೊಗಸಾಗಿ ವಿವರಿಸುತ್ತಿದ್ದರು. ಜ್ಞಾನದಾಸೋಹವೇ ಅವರ ಕಾಯಕವಾಗಿತ್ತು.
ಶಿಕ್ಷಣದ ಬಗ್ಗೆ ಅರಿವು ಮೂಡಿಸಿದ ಶರಣ ಪರಂಪರೆಯ ಸ್ವಾಮೀಜಿಗಳಲ್ಲಿ ಅಗ್ರಸ್ಥಾನ ಪಡೆದಿದ್ದರು.

ಅವರ ಪ್ರವಚನಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿರುತ್ತಿದ್ದವು. ವಚನಗಳನ್ನು, ಸುಭಾಷಿತ, ನೀತಿಕತೆಗಳನ್ನು ಪ್ರಸ್ತುತ ಸಮಾಜದಲ್ಲಿನ ವಾಸ್ತವ ಸಂಗತಿಗಳಿಗೆ ಹೋಲಿಸಿ ಮಾತನಾಡುತ್ತಿದ್ದರು. ಇವರ ಮಾತುಗಳು ಜನಸಾಮಾನ್ಯರಿಗೆ ಮಾತ್ರವಲ್ಲ, ಅಡಳಿತಗಾರರಿಗೆ, ನೀತಿ ನಿರೂಪಕರಿಗೆ ಮಹತ್ವದ್ದಾಗಿದ್ದವು. ಶರಣರ ವಚನಗಳ ಮಹತ್ವದ ಕುರಿತು ಇವರು ಇಂಗ್ಲಿಷ್‌ನಲ್ಲಿ ನೀಡುತ್ತಿದ್ದ ಪ್ರವಚನಗಳು, ದೇಶ-ವಿದೇಶಗಳ ಜನರನ್ನು ಆಕರ್ಷಿಸಿತ್ತು. ವಚನ ಪರಂಪರೆಯ ವಿಸ್ತಾರದ ಹರಿವಿನ ಓಟಕ್ಕೆ ಪೂಜ್ಯ ಶ್ರೀಗಳು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ವಚನಗಳ ಕುರಿತ ಅವರ ಕೃತಿಗಳು ಕನ್ನಡ ಸಾರಸ್ವತ ಲೋಕದ ಬಹುದೊಡ್ಡ ಆಸ್ತಿಯಾಗಿವೆ.

ಹಣ ಮತ್ತು ವಸ್ತುಗಳ ಮೇಲೆ ಆಸೆ ಹುಟ್ಟಬಾರದು ಎಂದು ತಾವು ಧರಿಸುವ ಉಡುಪುಗಳಿಗೆ ಅವರು ಜೇಬು ಕೂಡಾ ಇಟ್ಟುಕೊಂಡಿರುತ್ತಿರಲಿಲ್ಲ. ಅವರಿಗೆ ಆಧ್ಯಾತ್ಮವೆಂಬುದು ಬೋಧನೆಯ ವಸ್ತುವಲ್ಲ. ಸರಳ ಸಹಜ ಬದುಕಿನ ದೈನಂದಿನ ನಡೆಯಾಗಿತ್ತು. ತಾವು ಮೃತ ಪಟ್ಟಮೇಲೆ ತಮ್ಮ ಸ್ಮಾರಕವಿರಬಾರದೆಂದು ವಿಲ್‌ ಬರೆದಿಟ್ಟ ಮಹಾತ್ಮರು.

ಈ ಕಾಲಘಟ್ಟದಲ್ಲಿ ನಾವು ಇಬ್ಬರು ಮಹಾತ್ಮರನ್ನು ಕಳೆದುಕೊಂಡಿದ್ದೇವೆ. ಶತಾಯುಶಿಗಳಾಗಿದ್ದ ಪರಮಪೂಜ್ಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಯವರು ಒಬ್ಬರಾದರೆ ಇನ್ನೊಬ್ಬರು ಜ್ಞಾನಯೋಗಾಶ್ರಮ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು. ಇಬ್ಬರೂ ತಮ್ಮ ಸರಳತೆ, ಸಮಾಜದೆಡೆಗಿನ ಪ್ರೀತಿಯಿಂದಾಗಿಯೇ ಅಪಾರ ಭಕ್ತರನ್ನು ಹೊಂದಿದವರು. ಬದುಕಿದ್ದಷ್ಟೂ ದಿನ ಪ್ರತಿ ಕ್ಷಣವೂ ಮನುಕುಲದ ಏಳಿಗೆಗಾಗಿ ಮಿಡಿದವರು.

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಕೇವಲ ತಾವು ಓದಿದ್ದನ್ನು ಸರಳವಾಗಿ ವಿವರಿಸುತ್ತಾರೆ ಎಂಬ ಕಾರಣಕ್ಕಷ್ಟೇ ಅವರ ಪ್ರವಚನಗಳು ಪ್ರಸಿದ್ಧಿಯಾಗಿರಲಿಲ್ಲ. ಅವರಿದ್ದಲ್ಲಿ ದೈವಿಕ ವಾತಾವರಣ ಸೃಷ್ಟಿಯಾಗುತ್ತಿತ್ತು. ಬದುಕಿನ ಜಂಜಾಟದಲ್ಲಿ ಸಿಕ್ಕವರಿಗೆ ಸಾಂತ್ವನವಿರುತ್ತಿತ್ತು. ಕೆಳಕ್ಕೆ ಬಿದ್ದವರನ್ನು ಮೇಲಕ್ಕೆತ್ತಿ, ಬೆಚ್ಚನೆಯ ಅಪ್ಪುಗೆಯಲ್ಲಿ ಕೈಹಿಡಿದು ನಡೆಸುವ ಮಾನವೀಯ ಸಂಬಂಧಗಳಿರುತ್ತಿತ್ತು. ಹೀಗಾಗಿಯೇ ಅವರು ಹೋದಲ್ಲಿ, ಬಂದಲ್ಲಿ ಜನ ಸೇರುತ್ತಿದ್ದರು, ಅವರಿಗೆ ದೇವರ ಸ್ಥಾನವನ್ನೇ ನೀಡಿದ್ದರು.

ಯಾರು ಏನೇ ನೀಡಿದರು ಅದನ್ನೆಲ್ಲಾ ನಯವಾಗಿಯೇ ತಿರಸ್ಕರಿಸುತ್ತಾ ಬಂದಿದ್ದ ಸಿದ್ದೇಶ್ವರ ಶ್ರೀಗಳು ತಮಗೆ ಗೌರವ ಪೂರ್ವಕವಾಗಿ ಸಲ್ಲಿಕೆಯಾಗಿದ್ದ ಪದ್ಮ ಪ್ರಶಸ್ತಿಗಳಿಂದ ಹಿಡಿದು ಎಲ್ಲ ಪ್ರಶಸ್ತಿ-ಪುರಸ್ಕಾರಗಳನ್ನು ನಿರಾಕರಿಸಿದ್ದರು. ಎಲ್ಲವನ್ನು ಬೇಡ ಬೇಡವೆನ್ನುತ್ತಲೇ ಎಲ್ಲರಿಗೂ ಬೇಕಾದವರಾಗಿ, ಸಮಾಜದ ಮಾರ್ಗದರ್ಶಕರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಈ ಹೊತ್ತಿನ ಬಹುದೊಡ್ಡ ಆಧ್ಯಾತ್ಮಿಕ ಸಾಧಕ, ಸಂತ ಎಂದರೆ ತಪ್ಪಾಗಲಾರದು.

“ಎಮ್ಮವರಿಗೆ ಸಾವಿಲ್ಲ, ಎಮ್ಮವರು ಸಾವನರಿಯರು, ಸಾವೆಂಬುದು ಸಯವಲ್ಲ” ಎಂದಿದ್ದರು ಬಸವಣ್ಣನವರು. ಶರಣರಿಗೆ ಸಾವಿಲ್ಲ, ಅವರು ಸಾವಿಗೆ ಹೆದರದವರು. ಎಂದೆಂದಿಗೂ ಶರಣರು ಅಮರರು. ಹೀಗಾಗಿ ಶರಣರು ‘ಮರಣವೇ ಮಾಹಾನವಮಿ’ ಎಂದಿದ್ದಾರೆ. ಹಾಗಾಗಿ ಶ್ರೀಗಳು ನಮ್ಮೊಂದಿಗೆ ಸದಾ ಇರಲಿದ್ದಾರೆ.

ಇದನ್ನೂ ಓದಿ | Siddheshwar Swamiji | ನಡೆದಾಡುವ ದೇವರ ದೇಹಾಂತ್ಯ, ಕಂಬನಿ ಮಿಡಿದ ಪ್ರಧಾನಿ ನರೇಂದ್ರ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದರು. ಹಾಗಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಈಗ ಚುನಾವಣೆ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ.

VISTARANEWS.COM


on

Shyam Rangeela
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣೆ ಆಯೋಗವು ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸದಿರುವುದು ಸೇರಿ ಹಲವು ಶಿಷ್ಟಾಚಾರಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು (Election Commission) ನಾಮಪತ್ರವನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ನಾಮಪತ್ರ ತಿರಸ್ಕಾರಗೊಂಡ ಬಳಿಕ ಶ್ಯಾಮ್‌ ರಂಗೀಲಾ ಅವರು ಅಸಮಾಧಾನ ವ್ಯಕ್ತಪಡಿಸಿದೆ. “ವಾರಾಣಸಿಯಲ್ಲಿ ಚುನಾವಣೆ ಆಯೋಗವು ಪ್ರಜಾಪ್ರಭುತ್ವವನ್ನು ನಿರ್ನಾಮ ಮಾಡಲು ಹೊರಟಿದೆ. ನಾನೇನೂ ಇಲ್ಲಿಗೆ ಮೋದಿ ಅವರನ್ನು ಸೋಲಿಸಲು ಬಂದಿರಲಿಲ್ಲ. ಸ್ಪರ್ಧೆಯಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ, ವಾರಾಣಸಿಯ ಜನ ನನಗೆ ಬೆಂಬಲ ನೀಡಿದರು. ನನಗಾಗಿ ಹಣ ನೀಡಲು ಬಂದರು. ನಾನು ಸೋತರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಭಾವಿಸಿದ್ದೆ. ಆದರೆ, ನನ್ನನ್ನು ಈಗ ಸ್ಪರ್ಧೆಯಿಂದಲೇ ತಡೆಯಲಾಗಿದೆ. ಇದು ಪ್ರಜಾತಂತ್ರಕ್ಕೆ ಮಾಡಿದ ಅಪಮಾನ” ಎಂದು ಶ್ಯಾಮ್‌ ರಂಗೀಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದ ಅವರು ಮೇ 14ರಂದು ನಾಮಪತ್ರ ಸಲ್ಲಿಸಿದ್ದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Continue Reading

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ ಕಚೇರಿನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading

ದೇಶ

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Monsoon 2024: ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ.

VISTARANEWS.COM


on

Monsoon 2024
Koo

ನವದೆಹಲಿ: ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಬಿತ್ತನೆ ಮಾಡಲು ರೈತರು ಜಮೀನನ್ನು ಹದಗೊಳಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಹವಾಮಾನ ಇಲಾಖೆಯು (Met Department) ಸಿಹಿ ಸುದ್ದಿ ನೀಡಿದೆ. ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯು ದೇಶದ ಕೃಷಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ಬಾರಿ ವಾಡಿಕೆಗಿಂತ ಒಂದು ದಿನ ಮೊದಲೇ ಅಂದರೆ, ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

monsoon rain

ರಾಜ್ಯದಲ್ಲಿ ನಾಳೆಯೂ ಭರ್ಜರಿ ಮಳೆ

ಮೇ 16ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ. ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇಲ್ಲ.

ಇದನ್ನೂ ಓದಿ: Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Continue Reading

ಕ್ರೀಡೆ

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

DP Manu: ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇಲ್ಲಿ ತೋರಿದ ಪ್ರದರ್ಶನವು ಇಂದು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

VISTARANEWS.COM


on

DP Manu
Koo

ಬೆಂಗಳೂರು: ಬುಧವಾರ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup 2024) ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರಿಗೆ ಬೆವರಿಳಿಸುಂತೆ ಮಾಡಿ ಸಣ್ಣ ಅಂತರದಿಂದ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಗೆದ್ದ ಡಿ.ಪಿ ಮನು(DP Manu) ಅಪ್ಪಟ ಕನ್ನಡಿಗ. ಇವರ ಪೂರ್ಣ ಹೆಸರು ದೇವರಕೇಶವಿ ಪ್ರಕಾಶ ಮನು (ಡಿ.ಪಿ. ಮನು ಎಂದೇ ಖ್ಯಾತಿ). ಈಗಾಗಲೇ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಇದೇ ರೀತಿಯ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಪಿ. ಮನು ಹಿನ್ನೆಲೆ


ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ. ನೀರಜ್​ ಗೆಲುವಿನ ಅಂತರ 82.27 ಮೀ.

ಇದನ್ನೂ ಓದಿ Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು, ಅವರು ಒಲಿಂಪಿಕ್ಸ್‌ಗೂ ಆಯ್ಕೆಯಾಗಲಿ, ಅಲ್ಲೂ ರಾಜ್ಯ, ದೇಶದ ಘನತೆ ಹೆಚ್ಚಿಸಲಿ ಎಂದು ಆಶಿಸೋಣ.


ಮನು ಮಾಡಿದ ಸಾಧನೆಗಳು

  1. 1. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ

    2. 2023ರಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 6ನೇ ಸ್ಥಾನ
  2. 3. 2024ರಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಬೆಳ್ಳಿ ಪದಕ

    4. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  3. 5. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  4. 6. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  5. 7. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  6. 8. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading
Advertisement
Anjali Murder Case
ಕ್ರೈಂ15 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ26 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ32 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು37 mins ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ48 mins ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ56 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ2 hours ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ3 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌