Virtual Tour: ದೆಹಲಿಯ PM ಸಂಗ್ರಹಾಲಯದಲ್ಲಿದೆ ಕನ್ನಡದ ʼನಮಸ್ತೆʼ - Vistara News

ದೇಶ

Virtual Tour: ದೆಹಲಿಯ PM ಸಂಗ್ರಹಾಲಯದಲ್ಲಿದೆ ಕನ್ನಡದ ʼನಮಸ್ತೆʼ

ದೆಹಲಿಯಲ್ಲಿ ನಿರ್ಮಿಸಿರುವ ಪ್ರಧಾನ ಮಂತ್ರಿ ಸಂಗ್ರಹಾಲಯದಲ್ಲಿ ದೇಶದ ಎಲ್ಲ ಪ್ರಧಾನಮಂತ್ರಿಗಳ ಜೀವನ, ಸಾಧನೆ ಮೂಲಕ ಭಾರತದ ಚರಿತ್ರೆಯನ್ನು ಚಿತ್ರಿಸಲಾಗಿದೆ. ಕನ್ನಡವೂ ಇದೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ದೇಶ ಇಂದು ವಿಶ್ವಮಟ್ಟದಲ್ಲಿ ಛಾಪು ಮೂಡಿಸಲು ಕಳೆದ 75 ವರ್ಷದಲ್ಲಿ (Azadi ka Amrut Mahotsav) ದೇಶವನ್ನಾಳಿದ ಎಲ್ಲ ಪ್ರಧಾನಮಂತ್ರಿಗಳ (Prime Minister) ಕೊಡುಗೆ ಇದೆ. ಪ್ರಧಾನ ಮಂತ್ರಿಗಳ ಜೀವನ, ಸಾಧನೆ ಮೂಲಕ ದೇಶದ ಚರಿತ್ರೆಯನ್ನು ಹೇಳುವ ಪ್ರಧಾನ ಮಂತ್ರಿ ಸಂಗ್ರಹಾಲಯ (PM Sangrahalay) ನವದೆಹಲಿಯಲ್ಲಿ ತಲೆಯೆತ್ತಿ ನಿಂತಿದೆ.

ವಿಶಿಷ್ಠ ಶೈಲಿಯಲ್ಲಿ ನಿರ್ಮಿಸಲಾಗಿರುವ ಪಿಎಂ ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ಉದ್ಘಾಟಿಸಿದರು. ಸಂಗ್ರಹಾಲಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಸಂಪೂರ್ಣ ಡಿಜಿಟಲೀಕರಿಸಲಾಗಿದೆ. ಸಂಗ್ರಾಹಲಯದ ವೀಕ್ಷಣೆ ಮಾತ್ರವಲ್ಲ, ಒಳಪ್ರವೇಶಕ್ಕೆ ಟಿಕೆಟ್‌ ಖರೀದಿಯನ್ನೂ ಡಿಜಿಟಲ್‌ ಮಾಡಲಾಗಿದೆ. ಸಂಗ್ರಹಾಲಯ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಸ್ವತಃ ಡಿಜಿಟಲ್‌ ಪಾವತಿ ಮೂಲಕ ಟಿಕೆಟ್‌ ಖರೀದಿಸಿ ಒಳಪ್ರವೇಶಿಸಿದರು. ಇಡೀ ವಿಶ್ವವೇ ಭಾರತದ ಕಡೆಗೆ ಆಶಾಭಾವನೆಯಿಂದ ಇಂದು ನೋಡುತ್ತಿದೆ. ಇಂದತಹ ಸಮಯದಲ್ಲಿ ಪಿಎಂ ಸಂಗ್ರಹಾಲಯ ನಮಗೆ ಪ್ರೇರಣೆ ನೀಡುತ್ತದೆ ಎಂದು ಮೋದಿ ಹೇಳಿದರು. ಹಾಗಾದರೆ ಸಂಗ್ರಹಾಲಯದಲ್ಲಿ ಏನೆಲ್ಲ ವಿಶೇಷತೆಗಳಿವೆ ನೋಡೋಣ ಬನ್ನಿ.

ಭಾರತದ ಇತಿಹಾಸ: ಭಾರತದ ಇತಿಹಾಸವನ್ನು ವಿವಿಧ ದೃಷ್ಟಿಕೋನದಲ್ಲಿ ನೋಡಬಹುದು. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಚಳವಳಿಗಳು, ಭಾಷಾ ವೈಭವ, ಹೀಗೆ…. ಇದೀಘ ಉದ್ಘಾಟನೆಯಾಗಿರುವ ಪಿಎಂ ಸಂಗ್ರಹಾಲಯದಲ್ಲಿ ಭಾರತದ ಇತಿಹಸವನ್ನು ಪ್ರಧಾನ ಮಂತ್ರಿಗಳ ಜೀವನ ಹಾಗೂ ಸಾಧನೆ ಮೂಲಕ ಪರಿಚಯಿಸಲಾಗಿದೆ. ಉದಾಹರಣೆಗೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಬಾಂಗ್ಲಾ ವಿಮೋಚನೆ ಯುದ್ಧ ನಡೆಯಿತು. ಭಾರತದ ಸೈನಿಕರು ವೀರಾವೇಶದಿಂದ ಹೋರಾಟ ನಡೆಸಿ ಪಾಕಿಸ್ತಾನವನ್ನು ಸೋಲಿಸಿ ಬಾಂಗ್ಲಾದೇಶ ಎಂಬ ಹೊಸ ದೇಶ ಉದಯಿಸುವಂತೆ ಮಾಡಿದರು. ಇದು ಇಂದಿರಾಗಾಂಧಿಯವರ ದಿಟ್ಟ ನಿರ್ಧಾರದಿಂದ ಸಾಧ್ಯವಾಯಿತು. ಇದೇ ರೀತಿ ಎಲ್ಲ ಪ್ರಧಾನಮಂತ್ರಿಯವರ ಸಮಯದಲ್ಲಿ ನಡೆದ ಕಾರ್ಯಗಳನ್ನು ವಿವರಿಸಲಾಗಿದೆ.

ಹೆಚ್ಚಿನ ಓದಿಗಾಗಿ: ಇದು ಮನುಷ್ಯರನ್ನು ಓದೋ ‌ಹ್ಯೂಮನ್‌ ಲೈಬ್ರರಿ!

ಧರ್ಮಚಕ್ರ: ಭಾರತದ ತ್ರಿವರ್ಣ ಧ್ವಜದ ಥೀಮ್‌ ಇಟ್ಟುಕೊಂಡೇ ಇಡೀ ಡಿಜಿಟಲ್‌ ಸಂಗ್ರಹಲಾಯವನ್ನು ರೂಪಿಸಲಾಗಿದೆ. ಸಂಗ್ರಹಾಲಯದ ಹೊರಾಂಗಣದಲ್ಲೂ ತ್ರಿವರ್ಣ ಲೈಟಿಂಗ್‌ ಗಮನ ಸೆಳೆಯುತ್ತದೆ. ಜತೆಗೆ ಒಳಭಾಗದಲ್ಲೂ ತ್ರಿವರ್ಣದ ಥೀಮ್‌ ಬಳಸಲಾಗಿದೆ. ಅರಳುತ್ತಿರುವ ಹೂವಿನ ಆಕಾರದ ಕೈಗಳ ಮೇಲ್ಛಾವಣಿಯನ್ನು ಅಶೋಕ ಚಕ್ರದಿಂದ ಅಲಂಕರಿಸಲಾಗಿದೆ. ದೇಶದ ಪ್ರಧಾನಿಗಳಷ್ಟೆ ಅಲ್ಲದೆ ದೇಶದ ಜನರ ಕೈಯಲ್ಲಿ ಧರ್ಮಚಕ್ರವಿದೆ. ಈ ದೇಶವನ್ನು ಎಲ್ಲರೂ ಸೇರಿ ಮುನ್ನಡೆಸುತ್ತಿದ್ದಾರೆ ಎನ್ನುವುದನ್ನು ಇದು ಸೂಚಿಸುತ್ತದೆ.

ಡಿಜಿಟಲ್‌ ಟಿಕೆಟ್‌ ಖರೀದಿಸಿ ಮ್ಯೂಸಿಯಂ ಪ್ರವೇಶಿಸಿದ ಪ್ರಧಾನಿ ಮೋದಿ

ಉಜ್ವಲ ಭಾರತ: ಭಾರತದ ಇತಿಹಾಸವನ್ನು ಎಲ್ಲ ಪ್ರಧಾನಿಗಳ ಕೈಯಿಂದಲೂ ನಿರ್ಮಿಸಲಾಗಿದೆ. ಪ್ರತಿ ಪ್ರಧಾನಿಯೂ ತಮ್ಮ ಅವಧಿಯಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಒಂದು ಹೆಜ್ಜೆ ಮುಂದೆ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ. ಈ ಅಂಶವನ್ನು ಸಾಂಕೇತಿಕವಾಗಿ ಹಾಗೂ ಪ್ರಬಲವಾಗಿ ರೂಪಿಸಲಾಗಿದೆ. ಸಂಗ್ರಹಾಲಯದ ನಡುವಿನ ಅಂಗಳದಲ್ಲಿ ಎರಡು ಕೈಗಳನ್ನು ನಿರ್ಮಿಸಲಾಗಿದೆ. ಎರಡೂ ಕೈಗಳು ಅರಳುತ್ತಿರುವ ಹೂವಿನಂತೆ ಬೆರಳನ್ನು ಚಾಚಿವೆ. ಈ ಮೂಲಕ, ಪ್ರತಿ ಪ್ರಧಾನಿಯೂ ದೇಶವು ಅರಳುವಲ್ಲಿ ಸಹಕಾರ ನೀಡಿದ್ದಾರೆ ಎಂದು ಸೂಚಿಸಲಾಗಿದೆ.

ಲೀಡರ್‌ ಕಾರಿಡಾರ್‌: ಸಂಗ್ರಹಾಲಯದ ಒಳಪ್ರವೇಶಿಸುವ ಮಾರ್ಗದ ಎರಡೂ ಬದಿಯ ಗೋಡೆಗಳಲ್ಲಿ ಎಲ್ಲ ಪ್ರಧಾನಿಗಳ ಬೃಹತ್‌ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಪ್ರತಿ ಪ್ರಧಾನಿ ಬಳಿ ತೆರಳುತ್ತಿದ್ದಂತೆಯೇ ಅದರ ಆಕಾರ ಹಾಗೂ ವೈಭವಯುತ ಡಿಸ್‌ಪ್ಲೇ ಕಾರಣಕ್ಕೆ ಗಮನ ಸೆಳೆಯುತ್ತದೆ ಹಾಗೂ ದೇಶದ ಇತಿಹಾಸದ ಕುರಿತು ಗೌರವ ಮೂಡುವಂತೆ ಮಾಡಲಾಗಿದೆ.

ಕನ್ನಡದಲ್ಲೂ ಇದೆ ನಮಸ್ತೆ: ಸಂಗ್ರಹಾಲಯವನ್ನು ಭಾರತದ ಸನ್ನಿವೇಶದಲ್ಲಿ ನಿರ್ಮಿಸಲಾಗಿದೆಯಾದರೂ ವಸುಧೈವ ಕುಟುಂಬಕಂ ಎಂಬ ತತ್ವವನ್ನೂ ಅಳವಡಿಸಲಾಗಿದೆ. ಸಂಗ್ರಹಾಲಯದ ಪ್ರಾರಂಭದಲ್ಲೇ ಸ್ವಾಗತಕಾರರ ಕಕ್ಷೆ ರೂಪದಲ್ಲಿ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಇಂಗ್ಲಿಷ್‌ನಲ್ಲಿ Hello ಎನ್ನುವುದೂ ಸೇರಿ ಭಾರತದ ಎಲ್ಲ ಭಾಷೆಗಳಲ್ಲೂ ಸ್ವಾಗತ ಕೋರಲಾಗಿದೆ. ಕನ್ನಡದಲ್ಲಿ “ನಮಸ್ತೆ” ಎಂದು ಮೇಲ್ಭಾಗದಲ್ಲೆ ಮುದ್ರಣ ಮಾಡಲಾಗಿದೆ. ಒಂದು ಅಂಗಳದ ಮೇಲ್ಛಾವಣಿಯಲ್ಲಿ ವಿಶ್ವದ ಗೋಳವನ್ನೆ ಅಳವಡಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಕೂಡ, ಆ ನೋ ಭದ್ರಾಃ ಕೃತವೋ ಯಂತು ವಿಶ್ವತಃ (ಒಳ್ಳೆಯ ಆಲೋಚನೆಗಳು ಎಲ್ಲೆಡೆಯಿಂದ ಬರಲಿ) ಎಂಬ ಘೋಷವಾಕ್ಯವನ್ನು ನಾವು ನಂಬುತ್ತೇವೆ ಎಂದಿದ್ದಾರೆ.

ಉಪಯೋಗಿಸಿದ ವಸ್ತುಗಳು: ಸಂಗ್ರಹಾಲಯದಲ್ಲಿ ಎಲ್ಲ ಪ್ರಧಾನಮಂತ್ರಿಗಳ ಜೀವನ ಸಾಧನೆ ಜತೆಗೆ ಅವರು ಬಳಸಿದ ಕೆಲ ವಸ್ತುಗಳನ್ನೂ ಇರಿಸಲಾಗಿದೆ. ಉದಾಹರಣೆಗೆ ಈ ನಾಯಕರು ಅತ್ಯಂತ ಇಷ್ಟಪಟ್ಟು ಓದುತ್ತಿದ್ದ ಪುಸ್ತಕಗಳು, ಪೆನ್ನುಗಳನ್ನು ಸುರಕ್ಷಿತವಾದ ಗಾಜಿನ ಪೆಟ್ಟಿಗೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಜತೆಗೆ ಆ ಪ್ರಧಾನಿಗಳ ಕುರಿತು ಪ್ರಕಟವಾಗಿರುವ ಕೆಲ ಪುಸ್ತಕಗಳು, ಅವರು ರಚಿಸಿದ ಕೃತಿಗಳನ್ನೂ ಪ್ರದರ್ಶಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Exit Poll 2024: Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿಯ ಲೈವ್‌ಅನ್ನು ಇಲ್ಲಿ ವೀಕ್ಷಿಸಿ.

VISTARANEWS.COM


on

Exit Poll 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿಯ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ: Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Continue Reading

ಪ್ರಮುಖ ಸುದ್ದಿ

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

Arvind Kejriwal : ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

VISTARANEWS.COM


on

Arvind Kejriwal
Koo

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದ ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಖಾತರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಸ್ಥಳೀಯ ನ್ಯಾಯಾಲಯವು ಜೂನ್ 5 ಕ್ಕೆ ಕಾಯ್ದಿರಿಸಿದ್ದರಿಂದ ನಾಳೆ (ಜೂನ್ 2) ತಿಹಾರ್ ಜೈಲಿಗೆ ಮರಳಬೇಕಾಗುತ್ತದೆ. ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರ ಮಧ್ಯಂತರ ಜಾಮೀನು ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ, ಅವರ ಅರ್ಜಿಯನ್ನು ಜಾರಿ ನಿರ್ದೇಶನಾಲಯವು ತೀವ್ರವಾಗಿ ವಿರೋಧಿಸಿತ್ತು. ಎಎಪಿ ಮುಖ್ಯಸ್ಥರು ಸತ್ಯಗಳನ್ನು ಮರೆಮಾಚಿದ್ದಾರೆ ಮತ್ತು ಅವರ ಆರೋಗ್ಯದ ಬಗ್ಗೆ ಸೇರಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅದು ಹೇಳಿದೆ.

ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

ಮಧ್ಯಂತರ ಜಾಮೀನು ಸಿಕ್ಕಿತ್ತು

ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಮಧ್ಯಂತರ ಜಾಮೀನು ನೀಡಿತ್ತು. ಅದು ಜೂನ್ 1 ರಂದು ಕೊನೆಗೊಳ್ಳುತ್ತದೆ. ಅವರು ಜೂನ್ 2 ರಂದು (ಭಾನುವಾರ) ತಿಹಾರ್ ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕಾಗಿತ್ತು. ಅವರ ಜಾಮೀನು ಅರ್ಜಿ ಮಾನ್ಯವಾಗದ ಕಾರಣ ಜೈಲಿಗೆ ಹೋಗಲೇಬೇಕಾಗಿದೆ.

ಇದನ್ನೂ ಓದಿ: Narendra Modi : 45 ಗಂಟೆಗಳaಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

ವೈದ್ಯಕೀಯ ಪರೀಕ್ಷೆಗಳಿಗಾಗಿ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಎಎಪಿ ಮುಖ್ಯಸ್ಥರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟ ದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್​, ಜೂನ್ 2 ರಂದು ಶರಣಾಗುವುದಾಗಿ ಹೇಳಿದ್ದರು. ನಂತರ ತಮ್ಮ ವಯಸ್ಸಾದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಪೋಷಕರನ್ನು ನೋಡಿಕೊಳ್ಳುವಂತೆ ಜನರನ್ನು ಕೇಳಿಕೊಂಡಿದ್ದರು.

ನಾನು ಶರಣಾಗಲು ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದರು. ದೆಹಲಿಯ ಜನರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆ ಎಂದು ಭರವಸೆ ನೀಡಿದರು.

ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲಾ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Narendra Modi :2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

VISTARANEWS.COM


on

Narendra Modi
Koo

ಚೆನ್ನೈ: ಹಲವಾರು ತಿಂಗಳ ಲೋಕ ಸಭಾ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಕೈಗೊಂಡಿದ್ದ 45 ಗಂಟೆಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾಗಿರುವ ಧ್ಯಾನ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಧ್ಯಾತ್ಮಿಕ ಕೈಂಕರ್ಯ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

ಇದು ಭಾರತದ ದಕ್ಷಿಣ ತುದಿಯಾಗಿದೆ. ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಪ್ರದೇಶ ಸಂಗಮವಾಗುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳ. ಕನ್ಯಾಕುಮಾರಿಗೆ ಹೋಗುವ ಮೂಲಕ ಮೋದಿ ರಾಷ್ಟ್ರೀಯ ಏಕತೆಯ ಸಂಕೇತವನ್ನು ಸಾರಿದ್ದರು ಎನ್ನಲಾಗಿದೆ.

ಜೂನ್ 1 ರಂದು ನಡೆಯಲಿರುವ 2024 ರ ಲೋಕಸಭಾ ಚುನಾವಣೆಯ ಅಂತಿಮ ಮತ್ತು ಏಳನೇ ಹಂತದ ಹಿನ್ನೆಲೆಯಲ್ಲಿ ಮೋದಿ ಗುರುವಾರ ಪಂಜಾಬ್​​ ಹೋಶಿಯಾರ್​ಪುರದಲ್ಲಿ ತಮ್ಮ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದರು.

ಸುದೀರ್ಘ ಪ್ರಚಾರ ರ್ಯಾಲಿ

ಮೋದಿ 75 ದಿನಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳು ಸೇರಿದಂತೆ ಸುಮಾರು 206 ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರು ವಿವಿಧ ಸುದ್ದಿ ಮತ್ತು ಮಾಧ್ಯಮ ವೇದಿಕೆಗಳೊಂದಿಗೆ ಸುಮಾರು 80 ಸಂದರ್ಶನಗಳನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಆಧ್ಯಾತ್ಮಿಕ ಪ್ರವಾಸಗಳನ್ನು ಕೈಗೊಂಡಿದ್ದರು. 2019ರಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ್ದ ಅವರು, 2014ರಲ್ಲಿ ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮುಖಂಡ ತೇಜಸ್ವಿ ಯಾದವ್ ಅವರು ಶನಿವಾರ ಕನ್ಯಾಕುಮಾರಿಯಲ್ಲಿ ಮೋದಿಯವರ ನಡೆಸುತ್ತಿರುವ ಆಧ್ಯಾತ್ಮಿಕ ಚಟುವಟಿಕೆಯನ್ನು ಫೋಟೋ ಶೂಟ್” ಎಂದು ಲೇವಡಿ ಮಾಡಿದ್ದರು. ಮೋದಿ ಅವರು ಯಾವುದೇ ಧ್ಯಾನ ಮಾಡುತ್ತಿಲ್ಲ, ಫೋಟೋ ಶೂಟ್ ಮಾತ್ರ ನಡೆಯುತ್ತಿದೆ. ಫೋಟೋ ಶೂಟ್ ಮುಗಿದ ನಂತರ, ಅವರು ಹಿಂತಿರುಗುತ್ತಾರೆ” ಎಂದು ತೇಜಸ್ವಿ ಯಾದವ್ ಹೇಳಿದರು.

Continue Reading

Live News

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿ ಲಭ್ಯವಿದೆ.

VISTARANEWS.COM


on

Exit Poll Live 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Continue Reading
Advertisement
Exit Poll 2024
ದೇಶ15 seconds ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ11 mins ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ21 mins ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್25 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ36 mins ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ53 mins ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ1 hour ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ1 hour ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News1 hour ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್1 hour ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌