Siddheshwar swamiji | ಸಿದ್ದೇಶ್ವರ ಸ್ವಾಮಿಗಳಿಗೆ ಸರ್ಕಾರಿ ಗೌರವ, ತ್ರಿವರ್ಣ ಧ್ವಜ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Siddheshwar swamiji | ಸಿದ್ದೇಶ್ವರ ಸ್ವಾಮಿಗಳಿಗೆ ಸರ್ಕಾರಿ ಗೌರವ, ತ್ರಿವರ್ಣ ಧ್ವಜ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವವನ್ನು ನೀಡಲಾಯಿತು.

VISTARANEWS.COM


on

CM bommai anitima namana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ತಮ್ಮ ಪ್ರವಚನಗಳ ಮೂಲಕ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸಿದ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಸರ್ಕಾರಿ ಗೌರವದ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು. ಧ್ಯಾನಸ್ಥ ಭಂಗಿಯಲ್ಲಿರುವಂತೆ ಕುಳಿತ ಶ್ರೀಗಳು ಎಲ್ಲವನ್ನೂ ಸ್ವೀಕರಿಸುವಂತೆ ಮುಗುಳ್ನಗುತ್ತಿರುವಂತೆ ಕಂಡಿತು.

ನಡೆದಾಡುವ ದೇವರು, ಶತಮಾನದ ಸಂತ ಎಂದೇ ಹೆಸರಾದ ಸಿದ್ದೇಶ್ವರ ಸ್ವಾಮೀಜಿ ಅವರು ಸೋಮವಾರ ರಾತ್ರಿ ದೇಹ ತ್ಯಾಗ ಮಾಡಿದ್ದರು. ಅವರ ಪಾರ್ಥಿವ ಶರೀರವನ್ನು ರಾತ್ರಿ ಇಡೀ ಯೋಗಾಶ್ರಮದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅದಾದ ಬಳಿಕ ಮಂಗಳವಾರ ಬೆಳಗ್ಗೆ ಆರು ಗಂಟೆ ಹೊತ್ತಿಗೆ ಪಾರ್ಥಿವ ಶರೀರವನ್ನು ಸೈನಿಕ ಶಾಲೆಯ ಆವರಣಕ್ಕೆ ತರಲಾಗಿತ್ತು. ದಿನವಿಡೀ ಲಕ್ಷಾಂತರ ಭಕ್ತರು ಗುರುಗಳ ಅಂತಿಮ ದರ್ಶನವನ್ನು ಪಡೆದರು.

ಈ ನಡುವೆ, ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ನೂರಾರು ರಾಜಕಾರಣಿಗಳು, ನೂರಾರು ಸಾಧುಸಂತರು, ಗಣ್ಯರು, ಲಕ್ಷಾಂತರ ಭಕ್ತರು ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನವನ್ನು ಪಡೆದರು.

ಸರ್ಕಾರಿ ಗೌರವ
ಸಂಜೆ ಐದು ಗಂಟೆಯ ಹೊತ್ತಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಶ್ರೀಗಳಿಗೆ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರ ಗೀತೆಯನ್ನು ನುಡಿಸಿ ಮೂರು ಸುತ್ತು ಕುಶಾಲು ತೋಪುಗಳನ್ನು ಗಗನ ಮುಖಿಯಾಗಿ ಹಾರಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ನಿಮಿಷದ ಮೌನಾಚರಣೆಯನ್ನು ಮಾಡಲಾಯಿತು. ಬಳಿಕ ಮುಖ್ಯಮಂತ್ರಿಗಳು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿದರು. ಈ ಮೂಲಕ ಸರಕಾರಿ ಗೌರವವನ್ನು ಪರಿಪೂರ್ಣಗೊಳಿಸಲಾಯಿತು.

ರಾತ್ರಿಯ ಹೊತ್ತಿಗೆ ಅಂತ್ಯ ವಿಧಿ
ಸರ್ಕಾರಿ ಗೌರವದ ಬಳಿಕ ಭಕ್ತರ ಅಂತಿಮ ದರ್ಶನ ಮುಂದುವರಿದಿದ್ದು, ರಾತ್ರಿಯ ಹೊತ್ತಿಗೆ ಜ್ಞಾನ ಯೋಗಾಶ್ರಮದವರೆಗೆ ಅಂತಿಮ ಯಾತ್ರೆ ಆರಂಭವಾಗಬಹುದು ಎಂದು ಹೇಳಲಾಗಿದೆ. ಶ್ರೀಗಳ ದರ್ಶನಕ್ಕೆ ಬರುವ ಪ್ರತಿಯೊಬ್ಬರಿಗೂ ದರ್ಶನ ನೀಡಿದ ಬಳಿಕವೇ ಅಂತ್ಯ ವಿಧಿ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Siddheshwar Swamiji | ಇಲ್ಲಿವೆ ಸಿದ್ದೇಶ್ವರ ಸ್ವಾಮೀಜಿ ಅವರ ಸರಳ ಜೀವನದಿಂದ ಹಿಡಿದು ಕಾಯಕ ಯೋಗಿವರೆಗಿನ ಫೋಟೊಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

HD Revanna: ಹಾಸನದ ಅಶ್ಲೀಲ ವಿಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ದೂರು ನೀಡಲು ಮೂವರು ಸಂತ್ರಸ್ತೆಯರು ಮುಂದೆ ಬಂದಿದ್ದಾರೆ. ಇದರಿಂದ ರೇವಣ್ಣ ಜತೆಗೆ ಸದ್ಯ ತಲೆ ಮರೆಸಿಕೊಂಡಿರುವ ಅವರ ಪುತ್ರ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎನ್ನಲಾಗಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ದೂರು ನೀಡಲು ಮೂವರು ಸಂತ್ರಸ್ತೆಯರು ಮುಂದೆ ಬಂದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿರುವ ಮೂವರು ಸಂತ್ರಸ್ತೆಯರು ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಬಗ್ಗೆ ಎಸ್‌ಐಟಿ ಪರಿಶೀಲನೆ ನಡೆಸುತ್ತಿದೆ. ಮತ್ತೆ ಮೂರು ಪ್ರತ್ಯೇಕ ದೂರು ದಾಖಲಾಗಲಿದ್ದು, ತಂದೆ-ಮಗನಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು ಸಾಧ್ಯತೆ

ಈ ಮಧ್ಯೆ ಇಂದು (ಭಾನುವಾರ) ಅಪಹರಣಕ್ಕೊಳಗಾದ ಮಹಿಳೆಯೊಂದಿಗೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಮಹಿಳೆಯನ್ನ ಕರೆದುಕೊಂಡು ಹೋದ ಸ್ಥಳದಿಂದ, ಮಹಿಳೆ ಪತ್ತೆಯಾಗಿರುವ ಸ್ಥಳದವರೆಗೂ ಅಧಿಕಾರಿಗಳು ಮಹಜರು ನಡೆಸಲಿದ್ದಾರೆ. ಎಸ್‌ಐಟಿ ಈಗಾಗಲೇ ಸಂತ್ರಸ್ತ ಮಹಿಳೆಯ ಮೆಡಿಕಲ್ ಟೆಸ್ಟ್ ಮಾಡಿಸಿದೆ.

ಮಹಿಳೆಯ ಕೈಗಳ ಮೇಲೆ ಒಂದಷ್ಟು ಗಾಯಗಳು ಕೂಡ ಕಂಡು ಬಂದಿರುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪ್ರಾಥಮಿಕವಾಗಿ ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡಿರುವ ಎಸ್ಐಟಿ, ಅವರ ಹೇಳಿಕೆ ಆಧರಿಸಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಿ ಒಂದಷ್ಟು ಸಾಕ್ಷಿಗಳನ್ನು ಕಲೆ ಹಾಕಲಿದೆ. ಒಂದು ವೇಳೆ ಸಾಕ್ಷಿ ಸಿಕ್ಕರೆ ಈ ಕೇಸ್ ಮತ್ತಷ್ಟು ಬಿಗಿಯಾಗಲಿದೆ. ಇದರಿಂದ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಮಹಜರು ವೇಳೆ ಬಲವಾದ ಸಾಕ್ಷಿ ಸಿಕ್ಕಿದ್ದೇ ಆದಲ್ಲಿ ರೇವಣ್ಣ ಜತೆಗೆ ಪತ್ನಿ ಭವಾನಿ ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ಅವರಿಗೂ ಕಾನೂನು ಕುಣಿಕೆ ಬಿಗಿಯಲಿದೆ. ಯಾಕೆಂದರೆ ಈಗಾಗಲೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಹೆಸರು ಕೂಡ ಉಲ್ಲೇಖವಾಗಿದೆ. ಅವರ ವಿರುದ್ಧವೂ ಸಾಕ್ಷಿ ಸಿಗುತ್ತಾ ಎಂದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಸದ್ಯ ರೇವಣ್ಣ ಮತ್ತು ಅವರು ಕುಟುಂಬ ಕಾನೂನಿನ ತೊಡಕಿಗೆ ಸಿಲುಕಿಕೊಂಡಿರುವುದು ಸ್ಪಷ್ಟ. ಚುನಾವಣೆ ವೇಳೆಯಲ್ಲಿಯೇ ರೇವಣ್ಣ ಬಂಧನವಾಗಿರುವುದು ಪಕ್ಷಕ್ಕೆ ಮತ್ತಷ್ಟು ಮಜುಗರ ತಂದಿದೆ.

ಇದನ್ನೂ ಓದಿ: Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಇಂದು (ಭಾನುವಾರ) ರೇವಣ್ಣ ಅವರನ್ನು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

Continue Reading

ಕರ್ನಾಟಕ

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ. ಶನಿವಾರ ತಡರಾತ್ರಿವೆರೆಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಶನಿವಾರ ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ ಎಚ್‌.ಡಿ.ರೇವಣ್ಣ ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು. ಶನಿವಾರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿತ್ತು. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ರೇವಣ್ಣ ಅರೆಸ್ಟ್ ಆದ ಬೆನ್ನಲ್ಲೆ ನಿರೀಕ್ಷಣಾ ಜಾಮೀನು ಅರ್ಜಿ ತನ್ನಿಂದ ತಾನೆ ವಜಾ ಆಗಿದೆ. ಹೀಗಾಗಿ ನಾಳೆ (ಜನವರಿ 6) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಸಂತ್ರಸ್ತೆ ಪತ್ತೆಯಾಗಿದ್ದು, ರೇವಣ್ಣ ಅವರಿಗೂ ಅಪಹರಣ ಕೇಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ವಾದ ಮಂಡಿಸುವ ಸಾಧ್ಯತೆ ಇದೆ.

ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ?

ಇನ್ನು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ ರೇವಣ್ಣ ಅವರು ಹೈಕೋರ್ಟ್‌ನ ಕದ ತಟ್ಟಲಿದ್ದಾರೆ. ಹೈಕೋರ್ಟ್‌ನ ಜನಪ್ರತಿನಿಧಿಗಳ ಪೀಠದಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಇದೆ. ಇದೆಲ್ಲವೂ ಅಪಹರಣಕ್ಕೊಳಗಾದ ಸಂತ್ರಸ್ತೆ ನೀಡುವ ಹೇಳಿಕೆಗಳ ಮೇಲೆ ನಿರ್ಧಾರವಾಗುತ್ತದೆ. ಒಂದು ವೇಳೆ ಸಂತ್ರಸ್ತೆ ರೇವಣ್ಣ ಪರ ಗುರುತರ ಆರೋಪಗಳನ್ನ ಮಾಡದಿದ್ದರೆ ಸುಲಭವಾಗಿ ಜಾಮೀನು ಸಿಗಬಹುದು. ಬದಲಾಗಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ, ಕಿರುಕುಳದ ಆರೋಪ ಮಾಡಿ ಅದು ಸಾಬೀತಾದರೆ ಜಾಮೀನು ಲಭಿಸುವುದು ಕಷ್ಟ ಎಂದು ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ ರೇವಣ್ಣ ಏನಂದ್ರು?

ಇನ್ನು ಶನಿವಾರ ತಡರಾತ್ರಿವರೆಗೂ ರೇವಣ್ಣ ಅವರ ವಿಚಾರಣೆ ನಡೆಸಲಾಯಿತು. ಎಸ್ಐಟಿ ಹಿರಿಯ ಅಧಿಕಾರಿಗಳು ಅಪಹರಣ ಪ್ರಕರಣದ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದರು. ಎಸ್ಐಟಿ ಎಡಿಜಿಪಿ ಬಿ.ಕೆ.ಸಿಂಗ್ ಹಾಗೂ ತಂಡ ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆ ವೇಳೆ ತಮ್ಮ ಮೇಲಿನ ಆರೋಪಗಳನ್ನು ರೇವಣ್ಣ ನಿರಾಕರಿಸಿದ್ದಾರೆ.

ʼʼನಾವು ಆಕೆಯನ್ನ ಅಪಹರಣ ಮಾಡಿಲ್ಲ. ಚುನಾವಣೆ ಇರುವ ಇರುವ ಕಾರಣ ಆಕೆ ನಮ್ಮ ಮನೆಗೆ ಬಂದಿದ್ದರು. ಅವರು ಕೆಲವು ವರ್ಷಗಳಿಂದ ನಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅದಷ್ಟೆ ಗೊತ್ತು‌. ಅದನ್ನ ಹೊರತುಪಡಿಸಿ ಆಕೆಯ ಬಗ್ಗೆಯಾಗಲಿ, ಅಪರಹರಣದ ಬಗ್ಗೆಯಾಗಲೀ ಯಾವುದೂ ಗೊತ್ತಿಲ್ಲʼʼ ಎಂದು ರೇವಣ್ಣ ತಿಳಿಸಿದ್ದಾರೆ. ಇಂದು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರು ಪಡಿಸಿ ಬಳಿಕ ಎಸ್‌ಐಟಿ ತಮ್ಮ ಕಷ್ಟಡಿಗೆ ಕೇಳಲಿದೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Prajwal Revanna Case:ಇಂದು ಬೆಳಗ್ಗೆ 7.55ಕ್ಕೆ ದುಬೈನಿಂದ ಮಂಗಳೂರಿಗೆ ಮೊದಲ ವಿಮಾನ ಆಗಮಿಸಿದೆ. ಈ ವಿಮಾನದಲ್ಲೇ ಪ್ರಜ್ವಲ್‌ ಆಗಮಿಸುತ್ತಾರೆ ಎಂಬುದು ಬಹುತೇಕ ಖಚಿತವಾಗಿತ್ತು. ಆದರೆ ಈ ವಿಮಾನದಲ್ಲಿ ಅವರು ಬಂದಿಲ್ಲ ಎಂಬ ಮಾಹಿತಿ ದೊರೆತಿದೆ. ಇನ್ನು ಇಂದು ಸಂಜೆ 4.35ಕ್ಕೆ ದುಬೈನಿಂದ ಮತ್ತೊಂದು ವಿಮಾನ ಆಗಮಿಸಲಿದ್ದು, ಅದರಲ್ಲಿ ಪ್ರಜ್ವಲ್‌ ರಾಜ್ಯಕ್ಕೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case
Koo

ಮಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಬಂಧನದ ಬೆನ್ನಲ್ಲೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ದುಬೈನಿಂದ ಮಂಗಳೂರಿಗೆ ಬಂದ ಮೊದಲ ಏರ್‌ ಇಂಡಿಯಾ ವಿಮಾನದಲ್ಲೂ ಪ್ರಜ್ವಲ್‌ ಬಂದಿಲ್ಲ ಎಂಬುದು ಖಚಿತವಾಗಿದೆ.

ಇಂದು ಬೆಳಗ್ಗೆ 7.55ಕ್ಕೆ ದುಬೈನಿಂದ ಮಂಗಳೂರಿಗೆ ಮೊದಲ ವಿಮಾನ ಆಗಮಿಸಿದೆ. ಈ ವಿಮಾನದಲ್ಲೇ ಪ್ರಜ್ವಲ್‌ ಆಗಮಿಸುತ್ತಾರೆ ಎಂಬುದು ಬಹುತೇಕ ಖಚಿತವಾಗಿತ್ತು. ಆದರೆ ಈ ವಿಮಾನದಲ್ಲಿ ಅವರು ಬಂದಿಲ್ಲ ಎಂಬ ಮಾಹಿತಿ ದೊರೆತಿದೆ. ಇನ್ನು ಇಂದು ಸಂಜೆ 4.35ಕ್ಕೆ ದುಬೈನಿಂದ ಮತ್ತೊಂದು ವಿಮಾನ ಆಗಮಿಸಲಿದ್ದು, ಅದರಲ್ಲಿ ಪ್ರಜ್ವಲ್‌ ರಾಜ್ಯಕ್ಕೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೊ, ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್‌ ರೇವಣ್ಣ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ ಎಂದು ಅಧಿಕೃತ ಮಾಹಿತಿ ಲಭಿಸಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿವರೆಗೂ ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೇವಣ್ಣ ಅವರು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು (ಭಾನುವಾರ) ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

Continue Reading

ಕರ್ನಾಟಕ

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿವರೆಗೂ ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೇವಣ್ಣ ಅವರು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು (ಭಾನುವಾರ) ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿವರೆಗೂ ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೇವಣ್ಣ ಅವರು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆತಂಕದಲ್ಲಿ ರೇವಣ್ಣ

ಎಸ್‌ಐಟಿ ವಶದಲ್ಲಿರುವ ರೇವಣ್ಣ ಒತ್ತಡದಲ್ಲಿರುವಂತೆ ಕಂಡು ಬಂತು. ಮುಂದೇನಾಗುತ್ತೋ ಎನ್ನುವ ಆತಂಕದಲ್ಲಿ ಅವರು ತಡರಾತ್ರಿಯವರೆಗೂ ನಿದ್ದೆ ಮಾಡಲಿಲ್ಲ ಎಂದು ಮೂಲಗಳು ತಿಳಿಸಿವೆ. ಇಂದು (ಭಾನುವಾರ) ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ಈ ರೀತಿ ಹಾಜರುಪಡಿಸಿದಾಗ ನ್ಯಾಯಾಧೀಶರಿಗೆ ಪಿಸಿ ಕಸ್ಟಡಿಗೆ ನೀಡಲು ಅವಕಾಶವಿಲ್ಲ. ಹೀಗಾಗಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತ ರೆಗ್ಯುಲರ್ ಬೇಲ್‌ಗೆ ಅರ್ಜಿ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಬೇಲ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ಎಸ್‌ಐಟಿ ಪರ ವಕೀಲರೂ ಕಸ್ಟಡಿಗೆ ಕೇಳಲಿದ್ದಾರೆ ಎನ್ನಲಾಗಿದೆ.

ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ರೇವಣ್ಣ

ಶಿನಿವಾರ ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆದಿದ್ದಾರೆ. ಇನ್ನು, ಎಸ್‌ಐಟಿ ಸೆಲ್‌ನಲ್ಲಿ ಎಚ್‌.ಡಿ.ರೇವಣ್ಣ ಅವರು ಗಳಗಳನೆ ಅತ್ತಿದ್ದಾರೆ ಎನ್ನಲಾಗಿದೆ. ಮಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಈಗ ನಾನು ಸೆಲ್‌ನಲ್ಲಿ ಇರಬೇಕಾಯಿತಲ್ಲ ಎಂಬುದನ್ನು ನೆನೆದು ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

ಈ ಮಧ್ಯೆ ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ ಎನ್ನಲಾಗಿದೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Continue Reading
Advertisement
Kangana Ranaut
ರಾಜಕೀಯ23 mins ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ27 mins ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

HD Revanna
ಕರ್ನಾಟಕ33 mins ago

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್51 mins ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ1 hour ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ1 hour ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್1 hour ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್2 hours ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ2 hours ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ2 hours ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌