Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಟ್ರೈಲರ್‌ ರಿಲೀಸ್‌! - Vistara News

ಸಿನಿಮಾ

Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಟ್ರೈಲರ್‌ ರಿಲೀಸ್‌!

ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ರೂಪೇಶ್‌ ಶೆಟ್ಟಿ (Roopesh Shetty) ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಟ್ರೈಲರ್‌ ರಿಲೀಸ್‌ ಆಗಿದೆ.

VISTARANEWS.COM


on

Roopesh Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಜನವರಿ 13ಕ್ಕೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಬಿಗ್ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty), ಹಾಗೂ ʻಬ್ರಹ್ಮಗಂಟುʼ ಧಾರಾವಾಹಿ ಖ್ಯಾತಿಯ ಗೀತಾ ಭಾರತಿ, ಪಂಚಮಿ ರಾವ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಈ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ.

ನಿರ್ದೇಶಕ ಗಗನ್. ಎಂ ಮಾತನಾಡಿ ʻʻಕಿರುಚಿತ್ರ, ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದೇನೆ. ತುಳು ಸಿನಿಮಾವೊಂದಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಮಂಕು ಭಾಯ್ ಫಾಕ್ಸಿ ರಾಣಿ ನನ್ನ ನಿರ್ದೇಶನದ ಮೊದಲ ಸಿನಿಮಾ. ಮೊದಲು ಇದನ್ನು ಶಾರ್ಟ್ ಮೂವಿ ಮಾಡೋಣ ಎಂದು ಪ್ಲ್ಯಾನ್ ಮಾಡಿಕೊಂಡಿದ್ದೆ. ರೂಪೇಶ್ ಶೆಟ್ಟಿ ಈ ಸಿನಿಮಾ ಮಾಡಲು ಒಪ್ಪಿಕೊಂಡ ಮೇಲೆ ಇದರ ಕಥೆಯನ್ನು ಸಿನಿಮಾಗೆ ಹೇಗೆ ಬೇಕೋ ಹಾಗೆ ಸಿದ್ಧಮಾಡಿಕೊಂಡೆವು. 2019ರಲ್ಲಿ ಆರಂಭವಾದ ಸಿನಿಮಾವಿದು. ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಪೂರ್ತಿ ಕಥೆ ಮಂಗಳೂರು ಕನ್ನಡ ಭಾಷೆಯಲ್ಲಿ ಸಾಗಲಿದೆ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಜೀವನದಲ್ಲಿ ನಡೆಯುವ ಪ್ರೇಮಕಥೆ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾ ಜನವರಿ 13ಕ್ಕೆ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ | Roopesh Shetty | ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಮಂಕು ಭಾಯ್ ಫಾಕ್ಸಿ ರಾಣಿ ಬಿಡುಗಡೆಗೆ ಸಜ್ಜು

ನಾಯಕಿ ಪಂಚಮಿ ರಾವ್ ಮಾತನಾಡಿ ʻʻಇದು ನನ್ನ ಮೊದಲ ಸಿನಿಮಾ. ನಾನು ಕ್ಲಾಸಿಕಲ್ ಡಾನ್ಸರ್ ಕೂಡ ಹೌದು. ಸಿನಿಮಾ ರಂಗದ ಮೇಲೆ ಮೊದಲಿನಿಂದ ಆಸಕ್ತಿ ಇತ್ತು. ಒಂದೊಳ್ಳೆ ಕಂಟೆಂಟ್ ಇರುವ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ನಿರ್ದೇಶಕರು ಕಥೆ ಹೇಳಿದಾಗ ಕಥೆ ತುಂಬಾ ವಿಭಿನ್ನ ಎನಿಸಿತು ಆದ್ದರಿಂದ ಒಪ್ಪಿಕೊಂಡೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದರು.

ಗೀತಾ ಭಾರತಿ ಭಟ್ ಮಾತನಾಡಿ ʻʻನನಗೆ ಈ ಪ್ರಾಜೆಕ್ಟ್ ವೈಯಕ್ತಿಕವಾಗಿ ತುಂಬ ಸ್ಪೆಷಲ್. ಹಲವು ಸಿನಿಮಾಗಳಲ್ಲಿ ಸಪೋರ್ಟಿಂಗ್ ಕ್ಯಾರೆಕ್ಟರ್ ಮಾಡಿದ್ದೇನೆ. ಆದರೆ ಲೀಡ್ ರೋಲ್‌ನಲ್ಲಿ ಮಾಡಿರೋದು ಇದೇ ಮೊದಲು. ಶೂಟಿಂಗ್ ಅನುಭವ ತುಂಬಾ ಚೆನ್ನಾಗಿತ್ತು. ಆರಂಭದಲ್ಲಿ ಮಂಗಳೂರು ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಆದರೆ ಶೂಟಿಂಗ್ ಮುಗಿಯುವ ಹೊತ್ತಿಗೆ ಪೂರ್ತಿ ಮಂಗಳೂರು ಕನ್ನಡ ಕಲಿತಿದ್ದೆ. ಸಿನಿಮಾ ಎರಡೂವರೆ ವರ್ಷದ ನಂತರ ತೆರೆ ಮೇಲೆ ಬರುತ್ತಿದೆ. ನನ್ನನ್ನು ನಾನು ತೆರೆ ಮೇಲೆ ನೋಡಿಕೊಂಡಾಗ ಇನ್ನಷ್ಟು ಮುಂದೆ ಹೋಗಲು ಆತ್ಮ ವಿಶ್ವಾಸ ಬಂದಿದೆʼʼಎಂದರು.

Roopesh Shetty

ನಾಯಕ ನಟ ರೂಪೇಶ್ ಶೆಟ್ಟಿ ಮಾತನಾಡಿ ʻʻಈ ಸಿನಿಮಾ ಶೂಟ್ ಆಗಿ ಮೂರು ವರ್ಷ ಆಯ್ತು. ಚಿತ್ರದಲ್ಲಿ ಕಂಟೆಂಟ್ ಹೀರೊ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಕಥೆ ಚಿತ್ರದಲ್ಲಿದೆ. ಸ್ನೇಹಿತರೇ ಆತನಿಗೆ ಪ್ರಪಂಚ. ಇದರೊಂದಿಗೆ ಒಂದು ಮುಗ್ಧ ಲವ್ ಸ್ಟೋರಿ ಇರುವ ಸಿನಿಮಾ. ನಿರ್ದೇಶಕ ಗಗನ್ ಒಂದು ಕನ್ನಡ ಸಿನಿಮಾ ಮಾಡೋಣ ಎಂದಾಗ ಒಪ್ಪಿಕೊಂಡೆ. ಚಿತ್ರಕ್ಕಾಗಿ ಎಂಟು ಕೆಜಿ ದಪ್ಪ ಆಗಿದ್ದೆ. ಕನ್ನಡದಲ್ಲಿ ಲೀಡ್ ಆಗಿ ನಟಿಸುತ್ತಿರುವ ಐದನೇ ಸಿನಿಮಾವಿದು. ‘ಡೇಂಜರ್ ಝೋನ್’, ‘ಅನುಷ್ಕಾ’, ‘ನಿಶಬ್ದ 2’, ‘ಗೋವಿಂದ ಗೋವಿಂದ’ ಸಿನಿಮಾ ಮಾಡಿದ್ದೇನೆ. ಆಗೆಲ್ಲ ಆ ಸಿನಿಮಾದಲ್ಲಿ ನಾನಿದ್ದೇನೆ ಎಂದು ಹೇಳುತ್ತಿದ್ದೆ. ಆದ್ರೆ ಫಸ್ಟ್ ಟೈಂ ರೂಪೇಶ್ ಶೆಟ್ಟಿ ಸಿನಿಮಾ ಬರುತ್ತಿದೆ ಎಂದು ಎಲ್ಲರುರೂ ಹೇಳುತ್ತಿದ್ದಾರೆ ಇದು ತುಂಬಾ ಖುಷಿ ಕೊಡುತ್ತಿದೆ. ಇದಕ್ಕೆಲ್ಲ ಬಿಗ್ ಬಾಸ್ ಕಾರಣ. ಜನವರಿ 13ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿʼʼ ಎಂದರು.

ಪ್ರಕಾಶ್ ತೂಮಿನಾಡು, ಅರ್ಜುನ ಕಜೆ, ಪ್ರಶಾಂತ್ ಅಂಚನ್, ವಿವೇಕ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸೆನ್ಸಾರ್ ನಲ್ಲಿ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರ ಜನವರಿ 13ರಂದು ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ | Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್‌ ಶೆಟ್ಟಿ ಸಿನಿಮಾ ಫ್ಯಾಥೋ ಸಾಂಗ್‌ ಔಟ್‌: ಜನವರಿಯಲ್ಲಿ ಚಿತ್ರ ಬಿಡುಗಡೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Actor Darshan: ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Actor Darshan old interview goes viral Explain About Murder And His Mindset
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅರೆಸ್ಟ್‌ ಆಗಿದ್ದಾರೆ. ಈ ಪ್ರಕರಣಕ್ಕೂ ಮುಂಚೆ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. ಆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನದಲ್ಲಿದ್ದರು ದರ್ಶನ್‌. ಆ ಸಮಯದಲ್ಲಿ ದರ್ಶನ್‌ ಅವರು ಜೈಲಿನ ಅನುಭವವನ್ನು ಹೇಳಿಕೊಂಡಿದ್ದರು. ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ದರ್ಶನ್‌ ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ಈ ಹಿಂದೆ 14 ದಿನ ಜೈಲಿನಲ್ಲಿ ಇದ್ದು ಬಂದ ದರ್ಶನ್‌ ವಿಡಿಯೊದಲ್ಲಿ ಈ ರೀತಿ ಹೇಳಿಕೊಂಡಿದ್ದಾರೆ. ʻನಾನು 14 ದಿನ ಜೈಲಿನಲ್ಲಿ ಇದ್ದವನು. ಸುಮಾರು ಜನರನ್ನ ನಾನು ಮೀಟ್‌ ಮಾಡ್ದೆ ಅಲ್ಲಿ. ಕೆಲವರು ಮಾಡದೇ ಇರುವ ತಪ್ಪಿಗೆ ಅಲ್ಲಿ ಇದ್ದಾರೆ. ಇನ್ನು ಕೆಲವರಿಗೆ ಕೋಪ ಆ ಟೈಮಿಗೆ ಕೈ ಕೊಟ್ಟು ಜೈಲು ಪಾಲಾಗಿದ್ದರು. ಆ ಬಗ್ಗೆ ಅವತ್ತು ನಾನು ಯೋಚನೆ ಮಾಡಿದಾಗ, ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಬಳಿಕ ಕೊರಗುತ್ತಿರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು. ಏನೋ ಪರಿಹಾರ ಕಂಡು ಹಿಡಿಯಬಹುದಾಗಿತ್ತು ಎಂದು ಅವನಿಗೆ ಆಮೇಲೆ ಅನ್ನಿಸಿರುತ್ತದೆ. ಇದೆಲ್ಲ ನಾನು ಜೈಲಿನಲ್ಲಿ ಇದ್ದಾಗ ಕಲಿತ ಪಾಠʼʼಎಂದಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈ ಪಾಠ ಮರೆತು ಬಿಟ್ರಾ ಎಂದು ಕಮೆಂಟ್‌ ಮಾಡುತ್ತಿದ್ದಾರೆ ನೆಟ್ಟಿಗರು. ಇದೀಗ ಟ್ರೋಲಿಗರಿಗೂ ಈ ವಿಡಿಯೊ ಆಹಾರವಾಗಿದೆ.

ಇದನ್ನೂ ಓದಿ: Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

ಹೊಸ ಆರೋಪಗಳು ಬೆಳಕಿಗೆ

10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿತ್ತು. ಆ ಬಳಿಕ ದರ್ಶನ್‌ ಕಡೆಯವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದರು. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ. ಬಳಿಕ ಕಾರ್ಮಿಕ ತನ್ನ ಸಂಬಂಧಿಕರ ಜತೆ ಪರಿಹಾರ ಕೇಳಲು ಫಾರ್ಮ್ ಹೌಸ್​ಗೆ ಹೋದರೆ ದರ್ಶನ್‌ ಗ್ಯಾಂಗ್‌ ಅವರ ಮೇಲೆ ಸಾಕುನಾಯಿ ಛೂ ಬಿಟ್ಟಿದ್ದರಂತೆ. ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಹೊಂ ಸ್ಟೇ ಯಲ್ಲಿ ಕೆಲವು ವರ್ಷಗಳ ಹಿಂದೆ ಘಟನೆ ನಡೆದಿತ್ತು. ನಟ ದರ್ಶನ್ ಸ್ನೇಹಿತರ ಜತೆ ಹೋಂ ಸ್ಟೇ ಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.

Continue Reading

ಕ್ರೀಡೆ

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

Paris Olympics 2024: ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ

VISTARANEWS.COM


on

Paris Olympics 2024
Koo

ಮುಂಬಯಿ: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್​(Paris Olympics 2024) ಕ್ರೀಡಾಕೂಟ ಆರಂಭದಕ್ಕೆ ದಿನಗಣನೆ ಶುರುವಾಗಿದೆ. ಜುಲೈ 26ರಂದು ಟೂರ್ನಿಗೆ ವಿದ್ಯುಕ್ತ ಚಾಲನೆ ಸಿಗಲಿದೆ. ಈ ಮಹೋನ್ನತ ಕ್ರೀಡಾಕೂಟವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಇಡೀ ಪ್ಯಾರಿಸ್​ ಸರ್ವ ಸನ್ನದ್ದವಾಗಿದೆ. ಆಯೋಜಕರು ಸಿದ್ಧತೆಯ ಹಲವು ವಿಡಿಯೊವನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸಿದ್ಧತೆಯ ವಿಡಿಯೊವೊಂದಕ್ಕೆ ನಟ ವಿಜಯ್ ದೇವರಕೊಂಡ(Vijay Deverakonda) ಮತ್ತು ರಶ್ಮಿಕಾ ಮಂದಣ್ಣ ನಟಿಸಿದ ತೆಲುಗಿನ ಗೀತ ಗೋವಿಂದಂ(Geetha Govindam song) ಚಿತ್ರದ ಹಾಡನ್ನು ಕೂಡ ಬಳಸಲಾಗಿದೆ. ಇದಕ್ಕೆ ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ವಿಜಯ್ ದೇವರಕೊಂಡ ಹರ್ಷ ವ್ಯಕ್ತಪಡಿಸಿದ್ದು ಈ ವಿಡಿಯೊ ತುಣುಕನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿದ್ದಾರೆ.

ಒಲಿಂಪಿಕ್ಸ್​ ಉಂಗುರಗಳಿಂದ ಅಲಂಕರಿಸಲ್ಪಟ್ಟ ಐಫೆಲ್‌ ಟವರ್‌ ವಿಡಿಯೊಗೆ ಗೀತ ಗೋವಿಂದಂ ಸಿನೆಮಾದ ‘ಇಂಕೇಮ್ ಇಂಕೇಮ್’ ಹಾಡನ್ನು ಒಲಿಂಪಿಕ್ಸ್​ ಅಧಿಕೃತ ಇನ್​ಸ್ಟಾಗ್ರಾಮ್​ ಬಳಿಸಿಕೊಂಡಿದೆ. “ಐಫೆಲ್ ಟವರ್‌ನ ಹೊಸ ನೋಟವನ್ನು ಯಾರು ಇಷ್ಟಪಡುತ್ತಾರೆ? ಪ್ಯಾರಿಸ್ ಮುಂದಿನ ತಿಂಗಳ ಒಲಿಂಪಿಕ್ ಕ್ರೀಡಾಕೂಟಕ್ಕೆ ಸಿದ್ಧವಾಗುತ್ತಿದೆ” ಎಂಬ ಶೀರ್ಷಿಕೆಯೊಂದಿಗಿನ ವೀಡಿಯೊಗೆ ಈ ಹಾಡನ್ನು ಬಳಿಸಿಕೊಂಡಿದೆ. ಪ್ಯಾರಿಸ್​ನಲ್ಲಿಯೂ ಈ ಹಾಡು ಜನಪ್ರಿಯತೆಗಳಿಸಿದ ಖುಷಿಯಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಹರ್ಷ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಅವರು ಕ್ರೇಜಿ…ಸಾಂಗ್​ ಎಂದು ಬರೆದುಕೊಂಡರೆ, ದೇವರಕೊಂಡ ಕೆಲವು ಹಾಡುಗಳು ಯಾವಾಗಲೂ ವಿಶೇಷ ಮತ್ತು ಮರೆಯಲು ಅಸಾಧ್ಯ ಎಂದು ಬರೆದುಕೊಂಡಿದ್ದಾರೆ.

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.


ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

ಸಾರ್ವಜನಿಕ ನಿಧಿಯಿಂದ ಸ್ವಚ್ಛಗೊಂಡ ನದಿ

ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ. ಕಳೆದ ವಾರ ಕ್ರೀಡಾಪಟುಗಳು ಉಳಿದುಕೊಳ್ಳಲು ನಿರ್ಮಿಸಲಾಗಿರುವ ಕ್ರೀಡಾಗ್ರಾಮವನ್ನು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮಾಕ್ರನ್‌ ಅವರು ಪರಿಶೀಲಿಸಿದ್ದರು. ಈ ವೇಳೆ ಅವರು ಸೀನ್​ ನದಿ ಸ್ವಚ್ಛಗೊಂಡಿದ್ದು, ತಾನು ಕೂಡ ಈ ನದಿಯಲ್ಲಿ ಈಜುವುದಾಗಿ ಭರವಸೆ ನೀಡಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

Actor Darshan: ʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case real star upendra react about case
Koo

ಬೆಂಗಳೂರು: ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ʻʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

ಉಪೇಂದ್ರ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

(ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ
ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

Continue Reading

ಬಾಲಿವುಡ್

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Shah Rukh Khan: ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

VISTARANEWS.COM


on

Shah Rukh Khan Took ₹1 As Signing Amount For 'Nayak'
Koo

ಬೆಂಗಳೂರು: ಶಂಕರ್ ನಿರ್ದೇಶನದ 2001ರಲ್ಲಿ ಬಿಡುಗಡೆಯಾದ ʻನಾಯಕ್‌ʼ ಸಿನಿಮಾದಲ್ಲಿ (Shah Rukh Khan) ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗೆ (Shah Rukh Khan) ಮೊದಲು ಸಹಿ ಹಾಕಿದ್ದು ಶಾರುಖ್‌. ಜತೆಗೆ ಶಾರುಖ್ ಖಾನ್ ಅವರು ʻನಾಯಕ್ʼ ಚಿತ್ರಕ್ಕೆ ಸಹಿ ಹಾಕುವಾಗ ಮುಂಗಡ ಪಡೆದಿದ್ದು ಕೇವಲ ಒಂದು ರೂ. ಅಂತೆ. ಈ ಘಟನೆ ಬಗ್ಗೆ ಸಂದರ್ಶನವೊಂದರಲ್ಲಿ ಶಾರುಖ್‌ ಹೇಳಿಕೊಂಡಿದ್ದಾರೆ. ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

ಸಂದರ್ಶನದಲ್ಲಿ, ಶಾರುಖ್ ಖಾನ್ ಸಿನಿಮಾ ಬಗ್ಗೆ ಮಾತನಾಡಿ ʻʻಈ ಸಿನಿಮಾಗೆ ನಾನು ಒಪ್ಪಿಗೆ ನೀಡಿ ಸಹಿ ಹಾಕುವಾಗ ಮುಂಗಡ ಸಂಭಾವನೆ ಪಡೆದಿದ್ದು ಕೇವಲ ಒಂದು ರೂ. ಜತೆಗೆ ಡೇಟ್‌ ನೀಡಲು ಸದಾ ಸಿದ್ದ ಎಂದು ಭರವಸೆ ಕೊಟ್ಟೆ. ಆದರೆ ನನಗೆ ನಾಯಕ್‌ ಮೂಲ ಆವೃತ್ತಿ ಇಷ್ಟ ಆಗಿತ್ತು. ಹಿಂದಿ ರಿಮೇಕ್‌ ಮಾಡುವುದು ಸರಿಯೆನಿಸಲಿಲ್ಲʼʼ ಎಂದರು. ಶಾರುಖ್‌ ಮಾತು ಮುಂದುವರಿಸಿ ʻʻನಾನು ಸಹಿ ಮಾಡಿದ್ದು, ದಿನಾಂಕ ನೀಡಿರುವ ಸಾಕ್ಷಿ ಇನ್ನೂ ನನ್ನ ಬಳಿ ಇದೆ. ಶಂಕರ್‌ ಜತೆ ಇನ್ನೂ ಕೂಡ ನನಗೆ ಕೆಲಸ ಮಾಡುವ ಬಯಕೆ ಇದೆ. ಅವರು ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಂತೆ. ಅವರ ಜತೆ ಸಿನಿಮಾ ಮಾಡುವುದು ಅದೃಷ್ಟʼʼ ಎಂದರು.

ಇದನ್ನೂ ಓದಿ: Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

ಸಿನಿಮಾ ವಿಚಾರಕ್ಕೆ ಬಂದರೆ ಶಾರುಖ್ ಅವರ ಮಗಳು ಸುಹಾನಾ ಖಾನ್ ಅವರ ಜತೆ ʻದಿ ಕಿಂಗ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸುಜೋಯ್ ಘೋಷ್ ನಿರ್ದೇಶಿಸಲಿದ್ದಾರೆ. ವರದಿಗಳ ಪ್ರಕಾರ ಚಿತ್ರದ ಬಜೆಟ್ 200 ಕೋಟಿ ರೂ. ಮತ್ತೊಂದೆಡೆ, ಅನಿಲ್ ಕಪೂರ್ ಬಿಗ್ ಬಾಸ್ OTT ಸೀಸನ್ 3 ಅನ್ನು ಹೋಸ್ಟ್‌ ಮಾಡುತ್ತಿದ್ದಾರೆ.

2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ.ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading
Advertisement
Train Accident
ದೇಶ9 mins ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್10 mins ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Paris Olympics 2024
ಕ್ರೀಡೆ10 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

Actor Darshan case real star upendra react about case
ಸ್ಯಾಂಡಲ್ ವುಡ್17 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು21 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ37 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ45 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್54 mins ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ1 hour ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ1 hour ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ23 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌