KGF Babu | ಕಾಂಗ್ರೆಸ್‌ಗೆ 80 ಸೀಟೂ ಸಿಗೋದಿಲ್ಲ ಎಂದ ಕೆಜಿಎಫ್‌ ಬಾಬು; ಕೈ ನಾಯಕರು, ಕಾರ್ಯಕರ್ತರ ಆಕ್ರೋಶ - Vistara News

ಕರ್ನಾಟಕ

KGF Babu | ಕಾಂಗ್ರೆಸ್‌ಗೆ 80 ಸೀಟೂ ಸಿಗೋದಿಲ್ಲ ಎಂದ ಕೆಜಿಎಫ್‌ ಬಾಬು; ಕೈ ನಾಯಕರು, ಕಾರ್ಯಕರ್ತರ ಆಕ್ರೋಶ

KGF Babu | ಕೆಪಿಸಿಸಿಯಲ್ಲಿ ಕಾರ್ಯಕರ್ತರು,‌ ಮಹಿಳೆಯರು, ಯುವಕರು ಬಂದರೆ ಅವರಿಗೆ ಮರ್ಯಾದೆ ಇಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಸಲೀಂ ಅಹ್ಮದ್‌ ಅವರನ್ನು ತೆಗೆಯಬೇಕು ಎಂದು ಕೆಜಿಎಫ್‌ ಬಾಬು ಒತ್ತಾಯಿಸಿದ್ದಾರೆ.

VISTARANEWS.COM


on

KGF Babu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೌಡಿ, ಜಾತಿ ಆಧಾರಿತವಾಗಿ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ಗೆ 80 ಸ್ಥಾನ ಕೂಡ ಸಿಗುವುದಿಲ್ಲ. ಕಾಂಗ್ರೆಸ್‌ನಿಂದ ನನ್ನನ್ನು ತೆಗೆದರೆ ಪಕ್ಷಕ್ಕೆ 10ರಿಂದ 15 ಸೀಟ್‌ ಕೈ ತಪ್ಪುತ್ತದೆ ಎಂಬ ಕೆಜಿಎಫ್‌ ಬಾಬು (KGF Babu) ಹೇಳಿಕೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಕೆಪಿಸಿಸಿ ಕಚೇರಿಗೆ ಶುಕ್ರವಾರ ಕೆಜಿಎಫ್‌ ಬಾಬು ಆಗಮಿಸಿ, ಕಾಂಗ್ರೆಸ್‌ ಪಕ್ಷದಲ್ಲಿ ತಮಗೆ ಗೌರವ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಕೆಲ ಕಾಂಗ್ರೆಸ್‌ ನಾಯಕರು ಹಾಗೂ ಕೆಜಿಎಫ್‌ ಬಾಬು ನಡುವೆ ಮಾತಿನ ಚಕಮಕಿ ನಡೆದಿದೆ.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿಕ್ಕಪೇಟೆ ಟಿಕೆಟ್‌ ಆಕಾಂಕ್ಷಿ ಕೆಜಿಎಫ್‌ ಬಾಬು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಪಕ್ಷಕ್ಕಾಗಿ ಹಗಲು ರಾತ್ರಿ ಕಷ್ಟ ಪಡುತ್ತಿದ್ದಾರೆ. ಅವರಿಗೆ ಸಹಕಾರ ನೀಡಬೇಕು, ಇದಕ್ಕಾಗಿ ಪಕ್ಷದಲ್ಲಿರುವವರ ಜವಾಬ್ದಾರಿ ಹೆಚ್ಚಾಗಬೇಕು. ಇಲ್ಲದಿದ್ದರೇ ನಾವು ಹೆಚ್ಚು ಸೀಟ್‌ ಗೆಲ್ಲಲು ಕಷ್ಟವಾಗುತ್ತದೆ ಎಂದು ಹೇಳಿದೆ. ಅದನ್ನು ಪೂರ್ಣ ಮಾಡುವಷ್ಟರಲ್ಲಿ ಕೆಲ ಕಾಂಗ್ರೆಸ್‌ ನಾಯಕರು ಜಗಳ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Karnataka Elections | ಮೀಸಲಾತಿ, ನಿಗಮ ಅಧ್ಯಕ್ಷರ ನೇಮಕಕ್ಕೆ ಮೀನಮೇಷ: ಬಿಜೆಪಿ ವಿರುದ್ಧ ಸಿಡಿದು ನಿಂತ್ರಾ ಕಾಡುಗೊಲ್ಲರು?

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಅವರಿಂದ ತಪ್ಪಾಗುತ್ತಿದೆ. ಪಕ್ಷಕ್ಕಾಗಿ ದುಡಿದು ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದೇನೆ. ನಮ್ಮ ಪಕ್ಷಕ್ಕೆ 150 ಸೀಟ್ ಬರಬೇಕು‌ ಎಂದು ಮೊದಲಿನಿಂದ ಹೇಳುತ್ತಿದ್ದೇನೆ. ಕೆಪಿಸಿಸಿಯಲ್ಲಿ ಕಾರ್ಯಕರ್ತರು,‌ ಮಹಿಳೆಯರು, ಯುವಕರು ಬಂದರೆ ಅವರಿಗೆ ಮರ್ಯಾದೆ ಇಲ್ಲ. ನನಗೂ ಇದೇ ರೀತಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯೊಳಗೆ ನನ್ನನ್ನು ಬಿಡದಂತೆ ಪೊಲೀಸರಿಗೆ ಸಲೀಂ ಅಹ್ಮದ್ ಹೇಳಿದ್ದಾರೆ. ಹೀಗಾಗಿ ಪಕ್ಷಕ್ಕೆ ಬರುವವರನ್ನೆಲ್ಲ ಓಡಿಸಿದರೆ ಪಕ್ಷದ ಕಚೇರಿ‌ ಖಾಲಿ ಹೊಡೆಯುತ್ತದೆ, ಹೀಗಾಗಿ ಒಳ್ಳೇ ಇಂಚಾರ್ಜ್ ಬರಬೇಕು ಎಂದು ಸಲೀಂ ಅಹ್ಮದ್‌ರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಿ ಎಂದು ಹೇಳುವುದು ತಪ್ಪೇ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷ ಓವರ್‌ ಕಾನ್ಫಿಡೆನ್ಸ್‌ನಿಂದ ಮುಂದೆ ಹೋಗುತ್ತಿದೆ. ಕೆಪಿಸಿಸಿಯ ಸಲೀಂ ಅಹ್ಮದ್ ಯಾರಿಗೂ ಗೌರವ ಕೊಡುವುದಿಲ್ಲ, ನ್ಯಾಯ ಒದಗಿಸುವುದಿಲ್ಲ. ಇದನ್ನು ಸರಿಪಡಿಸಬೇಕು ಎಂದು ಕೇಳಲು ಹೋಗಿದ್ದೆ, ಇದನ್ನು ಹೇಳೋ‌ ಮೊದಲೇ ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಟಿಕೆಟ್‌ ಆಕಾಂಕ್ಷಿ ಆರ್‌.ವಿ.ದೇವರಾಜ್ ಶಿಷ್ಯ ಮನೋಹರ್ ಹಾಗೂ ಇನ್ನಿಬ್ಬರು ಗಲಾಟೆ ಮಾಡಿದ್ದಾರೆ. ಇವರು ಬೇಕಂತಲೇ ಜಗಳ ಮಾಡಿ, ನನ್ನ ಮಾನ ಮರ್ಯಾದೆ ತೆಗೆದಿದ್ದಾರೆ. ನನ್ನ ಪಕ್ಷಕ್ಕೆ ನಾನು ಬೇಡವಾದರೆ ನಾನೇ ಪಕ್ಷ ಬಿಡುತ್ತೇನೆ ಎಂದು ಹೇಳಿದರು.

ಆರ್.ವಿ.ದೇವರಾಜ್ ಪ್ಲ್ಯಾನ್ ಮಾಡಿ ಇದನ್ನೆಲ್ಲ ಮಾಡಿಸುತ್ತಿದ್ದಾರೆ. ಸಿಸಿಬಿ, ಇಡಿ ರೈಡ್ ಮಾಡಿಸಿದ್ದರು. ರೌಡಿಗಳನ್ನು ನನ್ನ ಹಿಂದೆ ಬಿಟ್ಟಿದ್ದರು. ಈಗ ಅವರ ಆಸೆ ಈಡೇರುತ್ತಿದೆ ಎಂದು ಕಿಡಿಕಾರಿದ ಅವರು, ಮತ್ತೊಮ್ಮೆ ಧೈರ್ಯವಾಗಿ ಹೇಳುತ್ತೇನೆ. ಸಮೀಕ್ಷೆ ಆಧರಿಸಿ ಗೆಲ್ಲುವವರಿಗೆ ಟಿಕೆಟ್‌ ಕೊಟ್ಟರೆ ಮಾತ್ರ ಕಾಂಗ್ರೆಸ್‌ಗೆ 140 ಸೀಟ್‌ ಬರುತ್ತದೆ. ಇಲ್ಲವೆಂದರೆ 80 ಸ್ಥಾನ ಕೂಡ ಬರುವುದಿಲ್ಲ. ಬೇಕಾದರೆ ನನ್ನನ್ನು ಪಾರ್ಟಿಯಿಂದ ಕಿತ್ತು ಹಾಕಲಿ, ನೋವಿನಿಂದ ಪಕ್ಷ ಬಿಡುತ್ತೇನೆ. ಆರ್.ವಿ.ದೇವರಾಜ್‌ಗೆ 7 ಬಾರಿ ಟಿಕೆಟ್‌ ಕೊಟ್ಟಿದ್ದಾರೆ. ಅವರಿಗೆ ಮತ್ತೆ ಟಿಕೆಟ್ ಬೇಕು ಎಂದು ಈ ರೀತಿ ಮಾಡಿಸಿದ್ದಾರೆ. ನಾನು ಪಾರ್ಟಿ ವಿರುದ್ಧ ಮಾತಾಡಿದರೆ ನನಗೆ ಶಿಕ್ಷೆಯಾಗಲಿ, ನನ್ನ ತಪ್ಪಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ ಗೌರವದಿಂದ ನನ್ನನ್ನು ಪಕ್ಷದಿಂದ ತೆಗೆಯಬೇಕು. ಸರಿಯಾಗಿ ನಡೆಸಿಕೊಳ್ಳದಿದ್ದರೆ ನಾನೇನು ಎಂಬುದನ್ನು ತೋರಿಸುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನಾನು ರಾಜಕಾರಣಿ ಅಲ್ಲ, ವ್ಯಾಪಾರಿ. ನಾನು ಸತ್ಯವನ್ನೇ ಹೇಳುತ್ತೇನೆ. ಹಿಂದೊಂದು ಮುಂದೊಂದು ಮಾತನಾಡಲ್ಲ, ನಾನು ನಾಟಕ ಮಾಡಲ್ಲ. ನನ್ನಂತಹ ನೇರ ಮಾತಿನವನಿಗೆ ಪಕ್ಷ ಗೌರವ ಕೊಡಬೇಕು. ಪಾರ್ಟಿಯಿಂದಾಗಿ ನಾನು ಬದುಕುತ್ತಿಲ್ಲ. ನಮ್ಮಂತಹವರಿಂದ ಪಾರ್ಟಿ ಇರುವುದು. ಸಲೀಂ ಅಹ್ಮದ್‌ನ ನೋಡಿ ಯಾರೂ ಮತ ಹಾಕಲ್ಲ. ಜಮೀರ್, ಯು.ಟಿ. ಖಾದರ್ ನಿಜವಾದ ಅಲ್ಪಸಂಖ್ಯಾತ ಸಮುದಾಯದ ನಾಯಕರು. ಸಲೀಂ ಅಹ್ಮದ್ ನಮ್ಮ ಮುಸ್ಲಿಂ ಅಲ್ಲ. ಅವಮಾನ ಮಾಡಿ ಪಕ್ಷದಿಂದ ತೆಗೆದರೆ ಕಾಂಗ್ರೆಸ್‌ಗೆ 10 ಸೀಟ್ ನಷ್ಟ ಮಾಡುತ್ತೇನೆ ಎಂದು ಹೇಳಿದರು.

ಸಿಎಂ ಇಬ್ರಾಹಿಂ ನಮ್ಮ ಮನೆಗೆ ಬರುವವರೆಗೂ ನನ್ನ ಶಕ್ತಿ ನನಗೆ ಗೊತ್ತಿರಲಿಲ್ಲ. ಕಾಂಗ್ರೆಸ್ ಮೈನಾರಿಟಿ ಜನರನ್ನು ಉಪಯೋಗಿಸಿಕೊಳ್ಳುತ್ತಾರೆ. ಅವರಿಗೆ ಮತಗಳು ಮಾತ್ರ ಬೇಕು, ಮತ ಸಿಕ್ಕ ನಂತರ ಯಾರೂ ತಿರುಗಿಯೂ ನೋಡುವುದಿಲ್ಲ. ಅದಕ್ಕಾಗಿ ನಾನು ನಾನು ಪಕ್ಷದಿಂದ ಹೊರಬಂದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದರು. ಅವರು ಈಗಲೂ ಜೆಡಿಎಸ್‌ಗೆ ಆಹ್ವಾನ ನೀಡುತ್ತಿದ್ದಾರೆ. ನಾನು ಪಕ್ಷಕ್ಕೆ ದ್ರೋಹ ಮಾಡಲು ಇಷ್ಟವಿಲ್ಲದೆ ಬರುವುದಿಲ್ಲ ಎಂದು ಹೇಳಿದ್ದೇನೆ ಎಂದರು.

ನನಗೂ ಮತ್ತು ಡಿಕೆಶಿ ಸಾಹೇಬರಿಗೆ ಒಪ್ಪಂದ ಇದೆ. ವ್ಯಾಪಾರದಲ್ಲಿ ನಾವು ಸಂಗಡಿಗರು, ಆದರೆ, ರಾಜಕೀಯದಲ್ಲಿ ಒಪ್ಪಂದ ಮಾಡಿಕೊಂಡಿಲ್ಲ. ಡಿಕೆಶಿ ನನ್ನ ಬ್ಯುಸಿನೆಸ್ ಗುರು. ಆದರೆ, ರಾಜಕೀಯಕ್ಕೆ ನನಗೆ ನಾನೇ ಗುರು. ಡಿಕೆಶಿ‌ ಹಾಕುವ ಭಿಕ್ಷೆ ತಿನ್ನುತ್ತಿದ್ದೇನೆ. ನಾನು ಶಾಸಕನಾಗಲೇಬೇಕು, ಇದೇ ನನ್ನ ಆಸೆ. ಸೊನ್ನೆಯಿಂದ 1700‌ ಕೋಟಿ ರೂಪಾಯಿ ಗಳಿಸಿದ್ದೇನೆ. ನಾನು ದುಡ್ಡಿನ ಅಹಂನಲ್ಲಿ ಮಾತನಾಡುತ್ತಿಲ್ಲ, ನನ್ನಂತಹವನು ಹುಡುಕಿದರೂ ಇಡೀ ಇಂಡಿಯಾದಲ್ಲೇ ಸಿಗುವುದಿಲ್ಲ ಎಂದು ಹೇಳಿದರು.

ನಾನು ವೈಟ್‌ ಮನಿಯಲ್ಲೇ 350 ಕೋಟಿ ಖರ್ಚು ಮಾಡುತ್ತಿದ್ದೇನೆ ಎಂದು ಚಿಟಿಕೆ ಹೊಡೆದು ಆರ್‌.ವಿ. ದೇವರಾಜ್‌ಗೆ ಎಚ್ಚರಿಕೆ ಕೊಟ್ಟ ಕೆಜಿಎಫ್ ಬಾಬು, ಆತ 24 ಗಂಟೆ ಎಣ್ಣೆಯಲ್ಲೇ ಇರ್ತಾರೆ. ಅವರಿಗೆ ಪಾಠ ಕಲಿಸುತ್ತೇನೆ. ಡೆಪಾಸಿಟ್ ಕಳೆದುಕೊಳ್ಳುವಂತೆ ಮಾಡುತ್ತೇನೆ. ನನ್ನ ತಾಯಿ ಕೊನೆಯ ಆಸೆಯಂತೆ ಚಿಕ್ಕಪೇಟೆಯಲ್ಲಿ ಬಡವರಿಗೆ ಮನೆಗಳನ್ನು ಕಟ್ಚಬೇಕು ಎಂಬ ಆಸೆ ಇತ್ತು. ಆದರೆ ಇದಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಗೆ ರಾಹುಕಾಲ ಶುರುವಾಗಿದೆ. ಆದರೆ, ನನಗೆ ಒಳ್ಳೆಯ ಕಾಲವೇ ಇದೆ ಎಂದು ಕಿಡಿಕಾರಿದ್ದಾರೆ.

ಕೆಜಿಎಫ್ ಬಾಬು ವಜಾಗೊಳಿಸುವಂತೆ ಪತ್ರ
ಕಾಂಗ್ರೆಸ್‌ ಕಚೇರಿಗೆ ಬಂದು ಪಕ್ಷಕ್ಕೆ ಚ್ಯುತಿ ಬರುವಂತೆ ವರ್ತಿಸಿದ್ದಾರೆ. ಹಾಗಾಗಿ ಕೆಜಿಎಫ್‌ ಬಾಬು ಅವರನ್ನು ಕೂಡಲೇ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಬೇಕು ಎಂದು ಎಸ್. ಮನೋಹರ್‌ ಹಾಗೂ ಕಾಂಗ್ರೆಸ್ ಕಾರ್ಯಕರ್ತರು,
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | Karnataka Election : ಈ ಸಂಕ್ರಾಂತಿ ನಂತರ ಜೆಡಿಎಸ್‌ ಮೇಲೆ ಆಪರೇಷನ್‌ ಕಾಂಗ್ರೆಸ್‌; ಯಾರು ಎಂದೂ ಗೊತ್ತು: ಎಚ್‌ಡಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Liquor Ban : ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಡ್ರೈ ಡೇ ಹಿನ್ನೆಲೆಯಲ್ಲಿ ಜೂನ್‌ 1ರ ಸಂಜೆ 4 ಗಂಟೆಯಿಂದಲೇ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

VISTARANEWS.COM


on

By

Liquor ban
Koo

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ (MLC Election) ಮತ್ತು ಲೋಕಸಭಾ ಚುನಾವಣೆಯ (lok sabha election 2024) ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲ ವಾರದಲ್ಲಿ ಮದ್ಯ ಮಾರಾಟವನ್ನು (Liquor Ban) ನಿಷೇಧಿಸಿದೆ. ಅದರಂತೆ ಜೂನ್‌ 1ರ ಸಂಜೆ 4ಕ್ಕೆ ಎಲ್ಲ ಲಿಕ್ಕರ್‌ ಶಾಪ್‌, ವೈನ್‌ ಶಾಪ್‌, ಬಾರ್‌ಗಳು ಬಂದ್‌ ಆಗಿರಲಿದೆ. ಇನ್ನೂ ಹೋಟೆಲ್‌ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವನೆಗೆ ಮಾತ್ರ ವಿನಾಯಿತಿ ನೀಡಲಾಗಿದ್ದು, ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಬಾರ್‌ಗಳು ಒಂದು ವಾರ ಪೂರ್ತಿ ಕ್ಲೋಸ್‌ ಆಗುವುದಿಲ್ಲ. ಒಟ್ಟು ನಾಲ್ಕುವರೆ ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. 5 ದಿನಗಳ ಕಾಲ ಲಿಕ್ಕರ್ ಬ್ಯಾನ್ ಎಂಬ ವಿಚಾರ ಮುಂದಿಟ್ಟುಕೊಂಡು ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಉಚ್ಚ ನ್ಯಾಯಾಲಯವು ನಮ್ಮ ಆದೇಶವನ್ನು ಎತ್ತಿ‌ಹಿಡಿದೆ. ಎಂಎಲ್‌ಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ಮತ ಎಣಿಕೆ ಎರಡು ಒಟ್ಟಿಗೆ ಬಂದಿದೆ.

ಜೂನ್ 3ರ ಸಂಜೆ 4 ಗಂಟೆ ವರೆಗೂ ಪರಿಷತ್ ಚುನಾವಣೆ ನಡೆಯುತ್ತದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿ 48 ಗಂಟೆಗಳ ಮದ್ಯ ಮಾರಾಟ ನಿಷೇಧ ಆಗುತ್ತದೆ. ಹೀಗಾಗಿ ಶನಿವಾರ ಸಂಜೆಯಿಂದಲೇ (ಜೂನ್‌ 1) ಮದ್ಯ ಮಾರಾಟ ನಿಷೇಧಸಲಾಗಿದೆ. ಆದರೆ ಜೂನ್ 3ರಂದು ಸಂಜೆ 4 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಬಾರ್‌ ಮತ್ತು ರೆಸ್ಟೋರಂಟ್‌ಗಳಲ್ಲಿ ಲಿಕ್ಕರ್ ಸೇಲ್ ಬ್ಯಾನ್ ಇದೆ ಹೊರತು, ಆಹಾರಕ್ಕೆ ಯಾವುದೇ ನಿಷೇಧ ಇಲ್ಲ ಎಂದರು.

Liquor ban

ಇನ್ನೂ ಲೋಕಸಭಾ ಮತ ಎಣಿಕೆ ಕಾರ್ಯ ಇರುವುದರಿಂದ ಜೂನ್ 3ರ ಮಧ್ಯರಾತ್ರಿ 12ರಿಂದ ಜೂನ್ 4ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್ 5 ರಂದು ಲಿಕ್ಕರ್ ಬ್ಯಾನ್ ಇರುವುದಿಲ್ಲ. ನಂತರ ಜೂನ್‌ 6 ರಂದು ಮತ ಎಣಿಕೆ ಕಾರ್ಯ ಇದೆ. ಹೀಗಾಗಿ ಒಟ್ಟಾರೆ ನಾಲ್ಕುವರೆ ದಿನಗಳು ಮಾತ್ರ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ದಯಾನಂದ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Prajwal Revanna Case: ಎಸ್‌ಐಟಿ ವಿಚಾರಣೆ ವೇಳೆ ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆ ತೀವ್ರಗೊಂಡಿದೆ. ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌, ಯಾವುದೇ ಪ್ರಶ್ನೆಗೂ ಉತ್ತರಿಸದೇ ಸುಮ್ಮನಿರುವುದರಿಂದ ಬಾಯಿಬಿಡಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಸಿದ್ಧತೆ ನಡೆಯುತ್ತಿದೆ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇಂದು ಪ್ರಜ್ವಲ್‌ನ ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಹೊಳೆನರಸೀಪುರ ಪೊಲೀಸರಿಗೆ ಬಂದೋಬಸ್ತ್ ಏರ್ಪಡಿಸಲು ಸೂಚನೆ ನೀಡಲಾಗಿದೆ. ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಸ್ಥಳ ಮಹಜರು ನಡೆಯಲಿದೆ.

ಏನೇ ಕೇಳಿದ್ರೂ ಲಾಯರ್‌ ಬಳಿ ಕೇಳಿ ಹೇಳುವೆ ಎನ್ನುವ ಸಂಸದ

ನೆನ್ನೆ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎನ್ನಲಾಗಿದೆ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದು ಪ್ರಜ್ವಲ್ ಹೇಳಿದ್ದಾರೆ, ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ, ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಹತ್ತಿರ ಮಾತನಾಡಿ ಹೇಳುವೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ.

ಮೊಬೈಲ್ ಪತ್ತೆ ಮಾಡೋದೆ ಸವಾಲು

ವಿಚಾರಣೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಸವಾಲಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಆದರೆ, ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದಿರುವ ಪ್ರಜ್ವಲ್, ಮೊಬೈಲ್ ಕಳೆದುಹೋಗಿದ್ದಕ್ಕೆ ನಾನು ಸ್ಥಳೀಯ ಠಾಣೆಯಲ್ಲೂ ದೂರು ನೀಡಿದ್ದೆ. ಕೆಎಸ್‌ಪಿ ಆ್ಯಪ್‌ ಮೂಲಕವೂ ದೂರು ದಾಖಲಿಸಿದ್ದೆ. ಕಳೆದ ವರ್ಷ ಮಾರ್ಚ್ 29 ರಂದು ಪಿಎ ಭರತ್ ರಾಜ್ ಮೂಲಕ ದೂರು ನೀಡಲಾಗಿದೆ. ಪೊಲೀಸರು ಕೂಡ ಕೇಸ್ ದಾಖಲಿಸಿಕೊಂಡು, ಮೊಬೈಲ್ ಪತ್ತೆಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

ಪ್ರಜ್ವಲ್ ಹೇಳಿಕೆ ಬೆನ್ನಲ್ಲೇ ಹೊಳೆನರಸೀಪುರ ಪೊಲೀಸರನ್ನು ಎಸ್‌ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ಈ ವೇಳೆ ಮೊಬೈಲ್ ಕಳೆದುಹೋದ ಬಗ್ಗೆ ಎನ್‌ಸಿಆರ್ ದಾಖಲಾಗಿರುವ ಮಾಹಿತಿ ಸಿಕ್ಕಿದೆ. ಆದರೆ ಎಷ್ಟೇ ಹುಡುಕಿದರೂ ಮೊಬೈಲ್ ಸಿಕ್ಕಿಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಹೀಗಾಗಿ‌ ಮೊಬೈಲ್ IMEI ನಂಬರ್ ಪಡೆದು ಮೊಬೈಲ್ ಪತ್ತೆ ಮುಂದಾದ ಎಸ್‌ಐಟಿ ಮುಂದಾಗಿದೆ.

ನೆನ್ನೆ ರಾತ್ರಿ 9 ಗಂಟೆಯವರೆಗೆ ಪ್ರಜ್ವಲ್ ವಿಚಾರಣೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ನಂತರ ಪ್ರಜ್ವಲ್‌ಗೆ ಊಟದ ವ್ಯವಸ್ಥೆ ಮಾಡಿದ್ದರು. ರಾತ್ರಿ 11.30ರ ತನಕ ನಿದ್ದೆ ಬರದೇ ಕೂತಿದ್ದ ಪ್ರಜ್ವಲ್‌, ನಂತರ ನಿದ್ದೆಗೆ ಜಾರಿದ್ದರು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ‌ ಅಸಮರ್ಪಕ ಉತ್ತರಗಳನ್ನು ನೀಡಿದ ಹಿನ್ನೆಲೆಯಲ್ಲಿ ಇಂದು ಕೂಡ ವಿಚಾರಣೆ ನಡೆಸಿ ಲೈಂಗಿಕ ದೌರ್ಜನ್ಯ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

6 ದಿನಕ್ಕೆ ಮುಗಿಯಲ್ವಾ ಪ್ರಜ್ವಲ್ ಪೊಲೀಸ್ ಕಸ್ಟಡಿ?

ಸದ್ಯ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಕ್ತೈಂ ನಂಬರ್ 107 ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೂರು ಎಫ್‌ಐಆರ್‌ಗಳಿಗೆ ಪ್ರತ್ಯೇಕ ತನಿಖಾಧಿಕಾರಿ ನೇಮಕ ಮಾಡಲಾಗಿದೆ. ಹೀಗಾಗಿ ಹೊಳೆ ನರಸೀಪುರ ಕೇಸ್ ಕಸ್ಟಡಿ ಮುಗಿದ ಬಳಿಕ ಸಿಐಡಿ ಸೈಬರ್ ಠಾಣೆಯ ಎಫ್‌ಐಆರ್ ಮೇರೆಗೆ ಅರೆಸ್ಟ್ ಮಾಡಲಾಗುತ್ತದೆ. ಸಿಐಡಿಯ ಎರಡೂ ಎಫ್‌ಐಆರ್‌ಗಳಲ್ಲಿ ಪ್ರತ್ಯೇಕವಾಗಿ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲು ಎಸ್‌ಐಟಿ ನಿರ್ಧಾರ ಮಾಡಿದೆ. ಹೀಗಾಗಿ 10 ರಿಂದ 15 ದಿನ ಪ್ರಜ್ವಲ್ ಪೊಲೀಸ್ ಕಸ್ಟಡಿಯಲ್ಲೇ ಇರುವ ಸಾಧ್ಯತೆ ಇದೆ. ಹೀಗಾಗಿ 6 ದಿನಕ್ಕೇ ಪ್ರಜ್ವಲ್‌ ವಿಚಾರಣೆ ಮುಗಿಯುವುದಿಲ್ಲ ಎನ್ನಲಾಗಿದೆ.

Continue Reading

ಕ್ರೈಂ

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Cow Smuggling: ಕಾರವಾರದಲ್ಲಿ ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೇನರ್‌ವೊಂದರಲ್ಲೇ ಜಾನುವಾರಗಳನ್ನು ತುರುಕಿ ಹಿಂಸಾತ್ಮಕವಾಗಿ ರವಾನೆ ಮಾಡಲಾಗುತ್ತಿತ್ತು. ಇತ್ತ ಮೈಸೂರಿನಲ್ಲೂ ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Cow Smuggling
Koo

ಕಾರವಾರ/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ (Cow Smuggling) ವಾಹನಗಳ ಮೇಲೆ ಪೊಲೀಸರು ದಾಳಿ, ರಾಸುಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಾಸ್ತಿಕಟ್ಟಾ ಸರ್ಕಲ್ ಬಳಿ ಕಂಟೇನರ್‌ನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟಕ್ಕೆ ಯತ್ನಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಭಟ್ಕಳಕ್ಕೆ ಕಂಟೇನರ್‌ ಮೂಲಕ ಜಾನುವಾರಗಳನ್ನು ಸಾಗಾಟಕ್ಕೆ ತೆರಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 23 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮಂಡ್ಯ ಮೂಲದ ಚಾಲಕ ಸೈಯ್ಯದ್ ಇಸ್ಮಾಯಿಲ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮಹಮ್ಮದ್ ಅತೀಕ್, ಇರ್ಫಾನ್ ಬಂಧಿತರು. ಜಾನುವಾರು ಸಾಗಾಟ ಸಂಬಂಧ ಭಟ್ಕಳದ ಮದೀನಾ ಕಾಲೋನಿಯ ಶಾಯ್ ನೂರ್, ಅವುಫ್ ಅಬು ಅಹ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಿಲ್ಕ್‌ ಟ್ಯಾಂಕ್‌ನಲ್ಲಿದ್ದ ಗೋವು!

ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮಧ್ಯರಾತ್ರಿ ವೇಳೆ ದಾಳಿ ಮಾಡಿದಾಗ ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ. ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Family Fighting : ಜಮೀನಿನ ವಿಚಾರದಲ್ಲಿ (Family Dispute) ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಕುಡುಗೋಲು, ದೊಣ್ಣೆ ಹಿಡಿದು ಬಡಿದಾಡಿಕೊಂಡಿದ್ದಾರೆ. ಗುಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

VISTARANEWS.COM


on

By

Family Fighting in Belgavi
Koo

ಬೆಳಗಾವಿ: ವಿವಾದಾತ್ಮಕ ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Family Fighting) ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲೇ ಎರಡು ಗುಂಪುಗಳು ಕುಡುಗೋಲು, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ 7 ಜನರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿ 7 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಕೃಷಿಯಲ್ಲಿ ತೊಡಗಿದ್ದ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಕಾಕತಿ ನಿವಾಸಿ ಸಿದ್ದರಾಯಿ ತುಂಬರಿ ಎಂಬಾತ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಲಪಟಾಯಿಸಲು ಸಿದ್ದರಾಯಿ ತುಂಬರಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

ಕೋರ್ಟ್‌ ವಿಚಾರಣೆಯಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾನೆ. ಸದ್ಯ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Assault Case) ನಡೆದಿತ್ತು. ಘಟನೆಯಲ್ಲಿ ಗಾಯಗೊಂಡ ತಂದೆಯನ್ನು ಕಾಪಾಡಲು ಸದಲಗಾ ಸರ್ಕಾರಿ ಆಸ್ಪತ್ರೆಯಿಂದ ಚಿಕ್ಕೋಡಿವರೆಗೂ ಮಗನೇ ಸರ್ಕಾರಿ ಆಂಬ್ಯುಲೆನ್ಸ್‌ ಓಡಿಸಿಕೊಂಡು ಬಂದಿದ್ದಾನೆ.

ಸದಲಗಾ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್‌ನಲ್ಲಿ ಚಾಲಕ ಇಲ್ಲದ ಹಿನ್ನೆಲೆಯಲ್ಲಿ ಯುವಕನೇ ಆಂಬ್ಯುಲೆನ್ಸ್‌ ಚಲಾಯಿಸಿಕೊಂಡು ಬಂದು ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದು ಹಾಳಾದ ಆರೋಗ್ಯ ಇಲಾಖೆ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ಕಟ್ ಆಗಿತ್ತು, ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದ.

ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಆಂಬ್ಯುಲೆನ್ಸ್‌ ಕೊಡಿ ಎಂದಿದ್ದಕ್ಕೆ ಆಸ್ಪತ್ರೆ ವೈದ್ಯರು ಚಾಲಕ ಇಲ್ಲ, ನೀವೇ ಆಂಬ್ಯುಲೆನ್ಸ್‌ ತೆದುಕೊಂಡು ಹೋಗಿ ಎಂದಿದ್ದಾರೆ. ಹೀಗಾಗಿ ಮಾಳು ಪೂಜಾರಿ ಗಾಯಾಳು ತಂದೆಯನ್ನು ಸರ್ಕಾರಿ ಆಂಬ್ಯುಲೆನ್ಸ್‌ ವಾಹನವನ್ನು ತಾನೇ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Liquor ban
ಬೆಂಗಳೂರು3 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ6 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ10 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ22 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ22 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Kichcha Sudeep joined hands with Sandesh
ಸ್ಯಾಂಡಲ್ ವುಡ್30 mins ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ45 mins ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ1 hour ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ2 hours ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ2 hours ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು3 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌