Vistara Explainer: ಇಸ್ಲಾಮಿಕ್ ದೇಶಗಳ ಅಧಿಕ ಪ್ರಸಂಗ! - Vistara News

EXPLAINER

Vistara Explainer: ಇಸ್ಲಾಮಿಕ್ ದೇಶಗಳ ಅಧಿಕ ಪ್ರಸಂಗ!

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ವಕ್ತಾರೆ Nupur sharma ನೀಡಿದ ಹೇಳಿಕೆ ಇಡೀ ಭಾರತದ ಹೇಳಿಕೆ ಎಂಬಂತೆ ಇಸ್ಲಾಮಿಕ್ ದೇಶಗಳು ಗುಟುರು ಹಾಕುತ್ತಿವೆ. ಏನಿದು ವಿವಾದ? ಇಲ್ಲಿದೆ ಸಮಗ್ರ ನೋಟ.

VISTARANEWS.COM


on

nupur sharma protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಹರೀಶ್ ಕೇರ, ಬೆಂಗಳೂರು

ಇಸ್ಲಾಮಿಕ್‌ ದೇಶಗಳ ಒಕ್ಕೂಟಕ್ಕೆ ಏನಾಗಿದೆ? ಬಿಜೆಪಿಯ ವಕ್ತಾರೆ Nupur sharma ಎಂಬೊಬ್ಬಳ ಹೇಳಿಕೆಯನ್ನು ಇಡೀ ದೇಶದ ಹೇಳಿಕೆ ಎಂಬಂತೆ ನೋಡ್ತಾ ಇದೆ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ)!

ಭಾರತದ ವಿರುದ್ಧ ಕಿಡಿ ಕಾರೋದಕ್ಕೆ ಈ ಸಂಘಟನೆಗೆ ಕಾರಣವಾಗಿದ್ದು ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರ ಹೇಳಿಕೆ. ಆಕೆಯನ್ನು ಈಗಾಗಲೇ ಆ ಹುದ್ದೆಯಿಂದ ಪಕ್ಷ ವಜಾ ಮಾಡಿದೆ. ಆಕೆಯ ಹೇಳಿಕೆಗೂ ತಮಗೂ ಸಂಬಂಧ ಇಲ್ಲ ಎಂದು ಬಿಜೆಪಿ ಹೇಳಿದೆ. ಹಾಗಿದ್ದರೂ ಬಿಜೆಪಿಯನ್ನು ಮತ್ತು ಭಾರತ ಸರಕಾರವನ್ನು ಈ ಹೇಳಿಕೆಯ ಜೊತೆಗೆ ತಳುಕು ಹಾಕಲು ಪ್ರಯತ್ನ ಮಾಡ್ತಾ ಇರುವುದೇಕೆ ಒಐಸಿ? ಏನು ನಡೆಯುತ್ತಿದೆ ಇದರ ಹಿನ್ನೆಲೆಯಲ್ಲಿ? ಭಾರತದ ಬಗ್ಗೆ, ಹಿಂದೂಗಳ ಬಗ್ಗೆ ಈ ಸಂಘಟನೆ ಈ ಹಿಂದೆಯೂ ಹೀಗೆಯೇ ನಡೆದುಕೊಂಡಿದೆಯಾ? ಒಐಸಿ ಡಬಲ್‌ ಸ್ಟಾಂಡರ್ಡ್‌ ಮತ್ತು ಈಗ ನಡೆಯುತ್ತಿರುವ ವಿವಾದದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಬಿಜೆಪಿ ವಕ್ತಾರೆ ಹೇಳಿದ್ದೇನು?

ನೂಪುರ್‌ ಶರ್ಮ
ನೂಪುರ್‌ ಶರ್ಮಾ

ಈ ಎಲ್ಲ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆ ಆಗಿದ್ದ ನೂಪುರ್‌ ಶರ್ಮಾ ಎಂಬಾಕೆ ನೀಡಿದ ಒಂದು ಹೇಳಿಕೆ ಇದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ನಡೆದ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ್ದ ನೂಪುರ್‌ ಶರ್ಮಾ, ಪ್ರವಾದಿ ಮೊಹಮ್ಮದ್‌ರನ್ನು ಟೀಕಿಸಿ ಮಾತುಗಳನ್ನಾಡಿದ್ದರು. ಆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೂಪುರ್‌ ಶರ್ಮಾರಿಗೆ ಜೀವ ಬೆದರಿಕೆಯೂ ಬಂದಿತ್ತು. ನಮ್ಮ ದೇಶದ ಮುಸ್ಲಿಂ ಸಂಘಟನೆಗಳಷ್ಟೇ ಅಲ್ಲ, ಪಾಕಿಸ್ತಾನದ ಮುಸ್ಲಿಂ ಮುಖಂಡರೂ ನೂಪುರ್‌ ಶರ್ಮಾ ಶಿರಚ್ಛೇದ ಮಾಡಲು ಕರೆಕೊಟ್ಟಿದ್ದರು. ಆಕೆಯನ್ನು ಯಾರು ಕೊಲ್ಲುತ್ತಾರೋ ಅವರಿಗೆ ಬಹುಮಾನ ಕೊಡುವುದಾಗಿಯೂ ಘೋಷಿಸಿದ್ದರು. ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬರುತ್ತಿರುವುದಾಗಿ ನೂಪುರ್‌ ಶರ್ಮಾ ಅವರೇ ಹೇಳಿಕೊಂಡಿದ್ದರು. ನೂಪುರ್‌ ಶರ್ಮಾ ಹೇಳಿಕೆಯಿಂದ ಕಾನ್ಪುರದಲ್ಲಿ ದೊಡ್ಡಮಟ್ಟದ ಗಲಾಟೆ, ಹಿಂಸಾಚಾರ ನಡೆದಿತ್ತು. ನೂಪುರ್‌ ಶರ್ಮಾ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಯೊಂದು ಕಾನ್ಪುರ ಬಂದ್‌ಗೆ ಕರೆ ನೀಡಿತ್ತು. ಆಗ ಎರಡೂ ಗುಂಪುಗಳ ಮಧ್ಯೆ ಘರ್ಷಣೆ- ಕಲ್ಲುತೂರಾಟ ನಡೆದಿದ್ದು, ಗಲಾಟೆ ತಾರಕಕ್ಕೇರಿತ್ತು.

ಅಂತರ ಕಾಯ್ದುಕೊಂಡ ಬಿಜೆಪಿ

naveen kumar jindal
ನವೀನ್‌ ಕುಮಾರ್‌ ಜಿಂದಾಲ್

ಇದೆಲ್ಲದರ ಮಧ್ಯೆ ನೂಪುರ್‌ ಶರ್ಮಾರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು. ಯಾವುದೇ ಧರ್ಮ, ಪಂಥ, ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ-ಅವಹೇಳನ ಮಾಡುವ ಸಿದ್ಧಾಂತ ಬಿಜೆಪಿಯದ್ದಲ್ಲ. ಅದನ್ನು ಬಿಜೆಪಿ ವಿರೋಧಿಸುತ್ತದೆ. ಪ್ರತಿಯೊಬ್ಬರಿಗೂ ಅವರು ನಂಬಿದ ಧರ್ಮವನ್ನು ಅನುಸರಿಸುವ ಹಕ್ಕಿದೆ ಎಂದು ನಮ್ಮ ಸಂವಿಧಾನವೇ ಹೇಳಿದೆ ಎಂದು ಪ್ರಕಟಣೆ ಹೊರಡಿಸಿತ್ತು. ಬಿಜೆಪಿಯಿಂದ ಈ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ನೂಪುರ್‌ ಶರ್ಮಾ ಮತ್ತು ಅವರನ್ನು ಟಿವಿ ಡಿಬೇಟ್‌ಗೆ ಕಳಿಸಿದ ಮಾಧ್ಯಮ ಉಸ್ತುವಾರಿ ನವೀನ್‌ ಕುಮಾರ್‌ ಜಿಂದಾಲ್‌ ಇಬ್ಬರೂ ಅಮಾನತುಗೊಂಡಿದ್ದಾರೆ.

ಆದರೆ, ಭಾರತ ಸರಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿರುವುದು ಇಸ್ಲಾಮಿಕ್‌ ದೇಶಗಳ ಒಕ್ಕೂಟದ ನಡೆ. ಇಸ್ಲಾಮಿಕ್‌ ಸಹಕಾರ ಸಂಘಟನೆಯೆಂಬುದು 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟವಾಗಿದ್ದು, ವಿಶ್ವಸಂಸ್ಥೆಯ ನಂತರದ ದೊಡ್ಡ ಒಕ್ಕೂಟ. ಈ ಸಂಘಟನೆ ನೂಪುರ್‌ ಶರ್ಮಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿತ್ತು. ʼʼಪ್ರವಾದಿ ಮೊಹಮ್ಮದರ ಬಗ್ಗೆ ಕೇಳಿ ಬಂದ ಟೀಕೆಗಳು ದುರುದ್ದೇಶಪೂರಿತವಾಗಿದೆ. ಭಾರತದಲ್ಲಿ ಇಸ್ಲಾಂ ವಿರುದ್ಧ ದ್ವೇಷ ಬಿತ್ತುವ ಪ್ರವೃತ್ತಿ ಹೆಚ್ಚುತ್ತಿದೆ. ಮುಸ್ಲಿಮರನ್ನು ನಿಂದಿಸಲಾಗುತ್ತಿದೆ ಮತ್ತು ಅವರನ್ನು ಹತ್ತಿಕ್ಕಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗುತ್ತಿದೆ. ಆದಷ್ಟು ಬೇಗ ವಿಶ್ವ ಸಂಸ್ಥೆ ಹಸ್ತಕ್ಷೇಪ ಮಾಡಿ ಬಗೆಹರಿಸಬೇಕುʼʼ ಎಂದು ಹೇಳಿತ್ತು.

ಒಐಸಿ ಮಾಡಿದ್ದೇನು?

ಬಿಜೆಪಿ ವಕ್ತಾರೆಯ ಹೇಳಿಕೆ ಕುರಿತು ಕತಾರ್‌, ಕುವೈತ್‌, ಇರಾನ್‌, ಪಾಕಿಸ್ತಾನ ಮುಂತಾದ ಮುಸ್ಲಿಂ ದೇಶಗಳು ಗರಂ ಆಗಿವೆ. ಭಾರತೀಯ ರಾಯಭಾರ ಸಿಬ್ಬಂದಿಗೆ ಇವು ಸಮನ್ಸ್‌ ನೀಡಿ ವಿವರಣೆ ಕೇಳಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಭಾರತ ವಿದೇಶಾಂಗ ಅಧಿಕಾರಿಗಳು ʼʼಇದು ಭಾರತದ ನಿಲುವಲ್ಲ. ಈ ವ್ಯಕ್ತಿಗಳ ಟ್ವೀಟ್‌ಗಳು ಯಾವುದೇ ಕಾರಣಕ್ಕೂ ಭಾರತ ಸರಕಾರದ ಅಥವಾ ಆಡಳಿತ ಪಕ್ಷದ ನಿಲುವನ್ನು ವ್ಯಕ್ತಪಡಿಸುವುದಿಲ್ಲ. ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆʼʼ ಎಂದು ಭರವಸೆ ನೀಡಿದ್ದಾರೆ. ಆದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಕ್ಕಿರುವುದು ನಿಜ. ಕತಾರ್‌, ಇರಾನ್‌ ಮುಂತಾದ ಕೆಲವು ಕಡೆಗಳಲ್ಲಿ ʼಬಾಯ್ಕಾಟ್‌ ಇಂಡಿಯನ್‌ ಪ್ರಾಡಕ್ಟ್ಸ್‌ʼ ಅಥವಾ ʼಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿʼ ಅಭಿಯಾನ ಕೂಡಾ ಆರಂಭವಾಗಿದೆ. ಗಲ್ಫ್‌ ದೇಶಗಳ ದೊಡ್ಡ ಮಾಲ್‌ಗಳಲ್ಲಿ ಮುಸ್ಲಿಮ ಆಕ್ರೋಶದ ಆತಂಕದಿಂದಾಗಿ ಭಾರತೀಯ ಉತ್ಪನ್ನಗಳನ್ನು ಶೆಲ್ಫ್‌ನಿಂದ ತೆಗೆಯಲಾಗುತ್ತಿದೆ.

ಭಾರತದ ಖಡಕ್‌ ಪ್ರತ್ಯುತ್ತರ
ಅವರ ಹೇಳಿಕೆಯನ್ನು ನಾವು ಯಾವ ಅರ್ಥದಲ್ಲಿ ತಗೋಬೇಕು? ಭಾರತ ಸರಕಾರ ಈ ಸಂಸ್ಥೆಯ ಹೇಳಿಕೆಗೆ ಕಟುವಾಗಿಯೇ ತಿರುಗೇಟು ನೀಡಿದೆ. ʼʼಒಐಸಿಯಿಂದ ಭಾರತದ ಬಗ್ಗೆ ಬಂದ ಹೇಳಿಕೆ ತುಂಬ ಸಂಕುಚಿತ ಮನೋಭಾವದ್ದಾಗಿದೆ. ಅನಗತ್ಯವಾದ ಈ ಹೇಳಿಕೆಯನ್ನು ನಾವು ಯಾವ ಕಾರಣಕ್ಕೂ ಒಪ್ಪುವುದಿಲ್ಲ. ಭಾರತ ಸರ್ಕಾರ ಪ್ರತಿ ಧರ್ಮವನ್ನೂ ಗೌರವಿಸುತ್ತದೆʼʼ ಎಂದು ಕೇಂದ್ರ ವಿದೇಶಾಂಗ ಇಲಾಖೆ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ʼʼಯಾರೋ ಅವರ ವೈಯಕ್ತಿಕ ದೃಷ್ಟಿಕೋನದಲ್ಲಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದಾಕ್ಷಣ, ಅವರು ಇಡೀ ಕೇಂದ್ರ ಸರ್ಕಾರ, ಇಡೀ ಭಾರತವನ್ನೇ ಪ್ರತಿನಿಧಿಸುತ್ತಿದ್ದಾರೆ ಎಂದು ಭಾವಿಸಬಾರದು. ಅನುಚಿತ ಹೇಳಿಕೆ ನೀಡಿದವರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಾಗಿದೆʼʼ ಎಂದು ಹೇಳಿದೆ.

ʼʼಇಸ್ಲಾಮಿಕ್‌ ಸಹಕಾರ ಸಂಘಟನೆ ಮತ್ತೆ ತನ್ನ ವಿಭಜಕ ನೀತಿಯನ್ನು ಪ್ರದರ್ಶಿಸಿದೆ. ಪಟ್ಟಭದ್ರ ಹಿತಾಸಕ್ತಿಗಳ ಪ್ರಭಾವಕ್ಕೆ ಒಳಗಾಗಿ ಇಂಥ ದುರುದ್ದೇಶಪೂರಿತ ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಕಮೆಂಟ್‌ಗಳನ್ನು ಕೊಡುತ್ತಿದೆ. ಆದರೆ ಹಾಗೆ ಮಾಡಬೇಡಿ, ನಿಮ್ಮ ಕೋಮು ವಿಭಜಕ ಮನೋಭಾವನೆಯನ್ನು ಪ್ರದರ್ಶಿಸಬೇಡಿ. ಎಲ್ಲ ಧರ್ಮ ಮತ್ತು ಎಲ್ಲರ ಧಾರ್ಮಿಕ ನಂಬಿಕೆಗಳನ್ನೂ ಗೌರವಿಸಿ ಎಂದು ನಾವು ಒತ್ತಾಯಿಸುತ್ತೇವೆʼʼ ಎಂದು ಸಚಿವಾಲಯ ಖಡಕ್‌ ಪ್ರಕಟಣೆ ಹೊರಡಿಸಿದೆ.

ಮತ್ತಷ್ಟು ಓದಿಗಾಗಿ: ಪ್ರವಾದಿ ಮೊಹಮ್ಮದ್‌ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ವಕ್ತಾರೆ ನೂಪುರ್‌ ಶರ್ಮಾ ಬಿಜೆಪಿಯಿಂದ ಅಮಾನತು

ಇವರ ಉದ್ಧಟತನ ಇದೇ ಮೊದಲಲ್ಲ…
ಈ ಪ್ರಕರಣದ ವಿಷಯ ಹಾಗಿರಲಿ. ಇದೊಂದೇ ಬಾರಿ ಅಲ್ಲ ಇಸ್ಲಾಮಿಕ್‌ ದೇಶಗಳು ಭಾರತದ ವಿರುದ್ಧ ಹೀಗೆ ಮಾತಾಡ್ತಾ ಇರುವುದು. ಈ ಹಿಂದಿನ ಹಲವು ಘಟನೆಗಳನ್ನೂ ನಾವು ನೋಡಬಹುದು.

ಉದಾಹರಣೆಗೆ, ಕಾಶ್ಮೀರದಲ್ಲಿ ಸಂವಿಧಾನದ ಆರ್ಟಿಕಲ್‌ 370 ಅನ್ನು ರದ್ದುಪಡಿಸಿದ ಸಂದರ್ಭ. ಜಮ್ಮು- ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ಆರ್ಟಿಕಲ್‌ 370ನ್ನು 2019ರಲ್ಲಿ ಕೇಂದ್ರ ಸರಕಾರ ಸಂವಿಧಾನ ಬದ್ಧವಾಗಿಯೇ ರದ್ದುಗೊಳಿಸಿ, ಕಾಶ್ಮೀರವನ್ನು ಎರಡಾಗಿ ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಿತು. ಆದರೆ ಈ ವಿಚಾರ, ಪಕ್ಕದ ದೇಶ ಪಾಕಿಸ್ತಾನಕ್ಕೆ ಸಹಿಸೋಕೆ ಆಗಲಿಲ್ಲ. ಯಕೆಂದರೆ ಸದಾ ತನ್ನ ಬೇಳೆಯನ್ನು ಕಾಶ್ಮೀರದಲ್ಲಿ ಬೇಯಿಸಿಕೊಳ್ಳಲು ಪ್ರಯತ್ನಿಸುವ ದೇಶ ಪಾಕಿಸ್ತಾನ. ಅದು ವಿಶ್ವಸಂಸ್ಥೆಯಲ್ಲಿ ಗದ್ದಲ ಎಬ್ಬಿಸಲು ಯತ್ನಿಸಿತು. ತನ್ನ ಬೆಂಬಲಕ್ಕೆ ಇತರ ಗಲ್ಫ್‌ ದೇಶಗಳನ್ನೂ ಕರೆಯಿತು. ʼʼಕಾಶ್ಮೀರದ ಮುಸ್ಲಿಮರ ವಿಷಯದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳಬೇಕುʼʼ ಎಂದು ಭಾರತಕ್ಕೆ ಇರಾನ್ ಉಪದೇಶ ಮಾಡಿತು. ಕಾಶ್ಮೀರದ ಹಿಂದೂಗಳ ಬಗ್ಗೆ ನ್ಯಾಯಯುತವಾಗಿ ನಡೆದುಕೊಳ್ಳುವುದೇ ಬೇಡವೇ ಹಾಗಾದರೆ? ಈ ಪ್ರಶ್ನೆಯನ್ನು ಇರಾನ್‌ ಕೇಳಿಕೊಂಡಿದ್ದರೆ ಚೆನ್ನಾಗಿತ್ತು. ಈ ಸಂದರ್ಭದಲ್ಲಿ ಇದೇ ಇಸ್ಲಾಮಿಕ್‌ ಸಹಕಾರ ಒಕ್ಕೂಟ ಅಥವಾ ಒಐಸಿ, ತಾನು ನಡೆಸಿದ ಒಂದು ಸಮ್ಮೇಳನದಲ್ಲಿ, ಕಾಶ್ಮೀರದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಭಾರತ ಸರಕಾರ ತಡೆಗಟ್ಟಬೇಕು ಎಂದು ಉಪದೇಶ ನೀಡಿತು. ಕಾಶ್ಮೀರದಲ್ಲಿ ಏನು ಮಾಡಬೇಕು ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ, ನಿಮ್ಮ ಉಪದೇಶ ನಮಗೆ ಅಗತ್ಯವಿಲ್ಲ ಎಂದೇ ಭಾರತ ಆಗಲೂ ಹೇಳಿತ್ತು. ಆದರೂ ಹೀಗೆ ಆಗಾಗ ಉಪದೇಶ ನೀಡುವ, ಟೀಕಿಸುವ ತನ್ನ ಚಾಳಿಯನ್ನು ಒಐಸಿ ಬಿಟ್ಟಿಲ್ಲ.

ಹಾಗಾದರೆ ಯಾವುದು ಈ ಒಐಸಿ?

IOC ದೇಶಗಳ ಧ್ವಜಗಳು

ಇದು ಇಸ್ಲಾಮಿಕ್‌ ಆಡಳಿತ ಹೊಂದಿರುವ, ಅಥವಾ ಮುಸ್ಲಿಂ ಬಹುಸಂಖ್ಯಾತರು ಇರುವ ದೇಶಗಳ ಒಂದು ಸಹಕಾರ ಒಕ್ಕೂಟ> ಈ ಒಕ್ಕೂಟದಲ್ಲ ಸೌದಿ ಅರೇಬಿಯಾ, ಇರಾನ್‌, ಕತಾರ್‌, ಯುಎಇ, ಪಾಕಿಸ್ತಾನ, ಅಫಘಾನಿಸ್ತಾನ ಸೇರಿದಂತೆ ಒಟ್ಟಾರೆ 57 ದೇಶಗಳಿವೆ. ಒಟ್ಟಾರೆ ಜಗತ್ತಿನ ಮುಸ್ಲಿಮರ ಹಿತ ತನ್ನ ಗುರಿ ಎಂದು ಈ ಸಂಘಟನೆ ಹೇಳಿಕೊಳ್ಳುತ್ತದೆ. 1969ರಲ್ಲಿ ಈ ಸಂಘಟನೆ ಹುಟ್ಟಿಕೊಂಡಿತು. ವಿಶ್ವಸಂಸ್ಥೆಯ ಬಳಿಕ ಜಗತ್ತಿನ ಅತಿ ದೊಡ್ಡ ರಾಷ್ಟ್ರಗಳ ಒಕ್ಕೂಟವಿದು ಎಂಬ ಹೆಗ್ಗಳಿಕೆ ಇದಕ್ಕಿದೆ. ʼಜಗತ್ತಿನ ಎಲ್ಲೆಡೆಯೂ ಇರುವ ಮುಸ್ಲಿಮರ ಸಂಘಟಿತ ಧ್ವನಿ ತಾನುʼ ಎಂದು ಈ ಸಂಘಟನೆ ಹೇಳಿಕೊಳ್ಳುತ್ತದೆ.

ಹುಟ್ಟುವಾಗಲೇ ಭಾರತಕ್ಕೆ ಅವಮಾನ!

1969ರಲ್ಲಿ ಈ ಸಂಘಟನೆಯ ಉದ್ಘಾಟನೆ ನಡೆದಾಗಲೇ ಭಾರತಕ್ಕೆ ಕಹಿ ಅನುಭವವಾಗಿತ್ತು. ರಬಾತ್‌ನಲ್ಲಿ ಈ ಸಂಘಟನೆಯ ಉದ್ಘಾಟನೆಗೆ ಭಾರತವನ್ನೂ ಆಹ್ವಾನಿಸಲಾಗಿತ್ತು. ಆದರೆ ಪಾಕಿಸ್ತಾನದ ತೀವ್ರ ಒತ್ತಡದಿಂದಾಗಿ ಆಹ್ವಾನಿತರ ಪಟ್ಟಿಯಿಂದ ಭಾರತವನ್ನು ಕೊನೆಯ ಕ್ಷಣದಲ್ಲಿ ಕೈಬಿಡಲಾಗಿತ್ತು. ಕಾರ್ಯಕ್ರಮಕ್ಕಾಗಿ ಭಾರತದಿಂದ ಹೊರಟು ಮೊರೊಕ್ಕೋದ ವರೆಗೆ ಆಗಮಿಸಿದ ಭಾರತದ ಆಗಿನ ಕೃಷಿ ಸಚಿವ ಫಕ್ರುದ್ದೀಲ್‌ ಅಲಿ ಅಹ್ಮದ್‌ ಅವರನ್ನು ಮರಳಿ ಕಳಿಸಲಾಗಿತ್ತು. ಇದು ಇಸ್ಲಾಮಿಕ್‌ ಸಂಘಟನೆ ಭಾರತವನ್ನು ಅಂದು ನಡೆಸಿಕೊಂಡ ಅವಮಾನಕಾರಿ ರೀತಿ. ಭಾರತಕ್ಕೆ ಈ ಸಂಘಟನೆ ಮಾಡುತ್ತಿರುವ ಅವಮಾನ ಈಗಲೂ ಮುಂದುವರಿದಿದೆ ಎನ್ನಬಹುದು. ಇದಕ್ಕೆ ಕಾರಣ ಪಾಕಿಸ್ತಾನ. ಈ ಸಂಘಟನೆಯ ಸದಸ್ಯ ರಾಷ್ಟ್ರಗಳಲ್ಲೆಲ್ಲಾ ನ್ಯೂಕ್ಲಿಯರ್‌ ವೆಪನ್‌ ಹೊಂದಿರುವ ಏಕೈಕ ಮುಸ್ಲಿಂ ದೇಶ ಎಂದರೆ ಪಾಕಿಸ್ತಾನ ಮಾತ್ರ. ಹೀಗಾಗಿ ಪಾಕಿಸ್ತಾನ ದಿವಾಳಿಯ ಅಂಚಿನಲ್ಲಿದ್ದರೂ, ಇಂದೂ ಸಹ, ಒಐಸಿ ಸಂಘಟನೆಯನ್ನು ತನ್ನ ಪ್ರಭಾವವನ್ನು ಹೊಂದಿದೆ. ಹೀಗಾಗಿಯೇ ಭಾರತ ತನ್ನ ಪ್ರತ್ಯುತ್ತರದಲ್ಲಿ ʼʼಯಾವುದೋ ಹಿತಾಸಕ್ತಿಗಳ ಮಾತು ಕೇಳಿ ಒಐಸಿ ಇಂಥ ಹೇಳಿಕೆ ನೀಡಬಾರದುʼʼ ಎಂದಿದೆ.

ಒಐಸಿ ಮುಸ್ಲಿಮರ ರಕ್ಷಿಸುತ್ತಿದೆಯಾ?

ಅದಿರಲಿ, ಒಐಸಿ ಜಗತ್ತಿನ ಎಲ್ಲಾ ಕಡೆಯ ಮುಸ್ಲಿಮರಿಗೂ ಸರಿಯಾದ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆಯಾ ಅಂತ ನೋಡೋಣ. ಪರಿಶೀಲಿಸಿ ನೋಡಿದರೆ, ಖಂಡಿತಾ ಇಲ್ಲ ಎಂಬುದು ನಿಮಗೆ ಗೊತ್ತಾಗುತ್ತದೆ. ಉದಾಹರಣೆಗೆ, ಚೀನಾದಲ್ಲಿ ಉಯಿಗುರ್‌ ಮುಸ್ಲಿಮರ ಮೇಲೆ ತೀವ್ರ ದೌರ್ಜನ್ಯ ಅಲ್ಲಿನ ಕಮ್ಯುನಿಸ್ಟ್‌ ಪಕ್ಷದಿಂದ ನಡೆಯುತ್ತಿದೆ. ಆದರೆ ಒಐಸಿ ಇದುವರೆಗೂ ಒಂದು ಮಾತನ್ನೂ ಆಡಿಲ್ಲ. ಯಾಕೆಂದರೆ ಚೀನಾದ ಜೊತೆಗೆ ಈ ದೇಶಗಳಿಗೆ ಬಹಳಷ್ಟು ವಾಣಿಜ್ಯ ಹಿತಾಸಕ್ತಿಗಳಿವೆ. ಚೀನಾದ ಜೊತೆಗಿನ ವ್ಯಾಪಾರ ಕಳೆದುಕೊಳ್ಳೋಕೆ ಇವುಗಳಿಗೆ ಇಷ್ಟವಿಲ್ಲ. ಇನ್ನು ಮುಸ್ಲಿಮರೇ ನಡೆಸಿದ ನರಮೇಧಗಳ ಬಗ್ಗೆ ಈ ಸಂಘಟನೆ ಯಾವ ಮಾತನ್ನೂ ಆಡಿಲ್ಲ. ಉದಾಹರಣೆಗೆ, ಯುರೋಪಿನ ನಾನಾ ಕಡೆಗಳಲ್ಲಿ ನಡೆಯುತ್ತಿರುವ ಮುಸ್ಲಿಂ ಮತಾಂಧರ ದಾಳಿಗಳಾಗಲೀ, ಐಸಿಸ್‌ ಎಂಬ ನರಹಂತಕರ ಸಂಘಟನೆ ಸಿರಿಯಾ ಮುಂತಾದ ಕಡೆಗಳಲ್ಲಿ ನಡೆಸುತ್ತಿರುವ ವ್ಯವಸ್ಥಿತ ನರಮೇಧಗಳಾಗಲೀ- ಈ ಸಂಘಟನೆಯ ವಿವೇಚನೆಯ ರೇಡಾರ್‌ನ ಅಡಿಯಲ್ಲಿ ಬಂದೇ ಇಲ್ಲ. ಇನ್ನು ಶೆರಿಯಾ ಆಡಳಿತದ ಹೆಸರಿನಲ್ಲಿ ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಭಯೋತ್ಪಾದಕ ಸಂಘಟನೆ ನಡೆಸುತ್ತಿರುವ ದೌರ್ಜನ್ಯಪೂರಿತವಾದ ಆಡಳಿತ, ಮುಸ್ಲಿಂ ಹೆಣ್ಣುಮಕ್ಕಳ ಮೇಲೆ ಅವರು ತೋರುತ್ತಿರುವ ಕಠಿಣ ಕ್ರಮಗಳು, ಶಾಲೆಗಳ ಮುಚ್ಚುವಿಕೆ, ಮುಂತಾದವುಗಳ ಬಗ್ಗೆ ಒಐಸಿ ಕಿವಿ ಕಣ್ಣುಗಳೆರಡನ್ನೂ ಮುಚ್ಚಿಕೊಂಡು ಕೂತಿದೆ.

ಇದನ್ನೂ ಓದಿ: ಯಾರೀಕೆ ಇಸ್ಲಾಮಿಕ್‌ ದೇಶಗಳ ಕಣ್ಣು ಕೆಂಪಾಗಿಸಿದ ನೂಪುರ್ ಶರ್ಮಾ?

ಮುಸ್ಲಿಂ ದೇಶಗಳಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ

ಇನ್ನು ಇಸ್ಲಾಮಿಕ್‌ ದೇಶಗಳಲ್ಲಿ ಅಥವಾ ಮುಸ್ಲಿಂ ಬಾಹುಳ್ಯದ ದೇಶಗಳಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಮೇಲೆ ನಡೆಸಲಾಗುತ್ತಿರುವ ದೌರ್ಜನ್ಯ ಅಥವಾ ಅಲ್ಲಿನ ಸರಕಾರದ ನೆರವಿನಿಂದಲೇ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಈ ಸಂಘಟನೆ ಏನನ್ನೂ ಹೇಳುವುದಿಲ್ಲ. ಉದಾಹರಣೆಗೆ ಪಾಕಿಸ್ತಾನದಲ್ಲಿ ಮತ್ತು ಬಾಂಗ್ಲಾದಲ್ಲಿ ಬದುಕುತ್ತಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರ ಸ್ಥಿತಿಗತಿಯ ಬಗ್ಗೆ ನೋಡಬಹುದು. ಇವರೆಲ್ಲ ಅಲ್ಲಿ ಅಲ್ಪಸಂಖ್ಯಾತರು. ಇವರಿಗೆ ಅಲ್ಲಿ ಸೂಕ್ತ ಕಾನೂನಾತ್ಮಕ ರಕ್ಷಣೆಗಳಿಲ್ಲ. ಇತ್ತೀಚಿನವರೆಗೂ ಬಾಂಗ್ಲಾದಲ್ಲಿ, ಅಲ್ಲಿನ ಯಾವುದೇ ಹಿಂದೂವಿನ ಆಸ್ತಿಯನ್ನು ಬಲವಂತರಾದ ಮುಸ್ಲಿಂ ಒಳಹಾಕಿಕೊಳ್ಳಬಹುದಾಗಿತ್ತು. ಅದನ್ನು ಪ್ರಶ್ನಿಸಲು ಹಿಂದೂವಿಗೆ ಸಾಧ್ಯವಿರಲಿಲ್ಲ. ಆದರೆ ಇಂಥ ತಾರತಮ್ಯದ ಕಾನೂನಿನ ಬಗ್ಗೆ ಒಐಸಿ ಏನೂ ಮಾತನಾಡಿಲ್ಲ.

ಒಐಸಿಯ ಜಾಣ ಕುರುಡು!

ಹಾಗೇ ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಭಾರಿ ಪ್ರಮಾಣದ ತಾರತಮ್ಯ ನಡೆದಿದೆ. ಅಲ್ಲಿ ಹಿಂದೂಗಳನ್ನು ಮಟ್ಟಹಾಕಲು ಬ್ಲಾಸ್ಫೆಮಿ ಅಥವಾ ಧರ್ಮನಿಂದನೆ ಎಂಬ ಅಸ್ತ್ರವನ್ನು ಪ್ರಯೋಗಿಸಲಾಗುತ್ತದೆ. ಇದಕ್ಕೆ ಉದಾಹರಣೆಯಾಗಿ ಆಸಿಯಾ ಬಿಬಿ ಎಂಬ ಕ್ರೈಸ್ತ ಮಹಿಳೆಯ ಕತೆಯನ್ನು ನೋಡಬಹುದು. ಈಕೆ ಮುಸ್ಲಿಮರಿಗೆ ಮೀಸಲಾಗಿದ್ದ ಬಾವಿಯಿಂದ ನೀರು ಕುಡಿದಳು ಎಂಬ ಕಾರಣದಿಂದ ಈಕೆಯ ಮೇಲೆ ದ್ವೇಷ ಸಾಧಿಸುತ್ತಿದ್ದ ಪಕ್ಕದ ಮನೆಯಾಕೆ, ಈಕೆ ಪ್ರವಾದಿಗಳನ್ನು ನಿಂದಿಸಿದಳು ಎಂದು ಸುಳ್ಳು ದೂರು ಕೊಟ್ಟಳು. ಈ ದೂರಿನ ಮೇಲೆ ಕೋರ್ಟ್‌ ವಿಚಾರಣೆಯೂ ನಡೆದು, ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಆಸಿಯಾ ಬಿಬಿ ಹಾಗೂ ಆಕೆಯ ಗಂಡನನ್ನು ಮಾರಣಾಂತಿಕವಾಗಿ ಥಳಿಸಲಾಯಿತು. ಮುಂದೆ ಈಕೆಯ ಪರವಾಗಿ ನಿಂತ ಪಂಜಾಬ್‌ ಗವರ್ನರ್‌ ಸಲ್ಮಾನ್‌ ತಸೀರ್‌ ಹಾಗೂ ಪಾಕಿಸ್ತಾನ ಸಚಿವ ಸಂಪುಟದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಶಾಬಾಝ್‌ ಭಟ್ಟಿ ಅವರನ್ನು ಮತಾಂಧರು ಗುಂಡಿಕ್ಕಿ ಕೊಂದರು. ಆದರೆ ಈ ಯಾವ ಘಟನೆಗಳಿಗೂ ಒಐಸಿ ಸ್ಪಂದಿಸಿದ್ದಾಗಲೀ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಪ್ಪೆಂದು ಹೇಳಿದ್ದಾಗಲೀ ದಾಖಲೆ ಇಲ್ಲ. ಹಾಗೇ ಅಫಘಾನಿಸ್ತಾನದ ಬಾಮಿಯಾನ್‌ನಲ್ಲಿ ಇದ್ದ ಬೌದ್ಧ ಸಂಸ್ಕೃತಿಯ ಹೆಗ್ಗುರುತಾದ ಬೃಹತ್‌ ಬೌದ್ಧ ಪ್ರತಿಮೆಗಳನ್ನು ತಾಲಿಬಾನಿಗಳು ಧ್ವಂಸ ಮಾಡಿದ್ದನ್ನೂ ಒಐಸಿ ಖಂಡಿಸಿಲ್ಲ.‌

ಇದನ್ನೂ ಓದಿ: ನೂಪುರ್‌ ಶರ್ಮಾ ಅಮಾನತಿಗೆ ಬಿಜೆಪಿ ಬಳಸಿದ್ದು ನಿಯಮ 10 ಎ, ಹಾಗಿದ್ದರೆ ಏನಿದೆ ಅದರಲ್ಲಿ?

ಇಸ್ಲಾಮಿಕ್ ಒಕ್ಕೂಟದ ದ್ವಿಮುಖ ನೀತಿ
ಇಸ್ಲಾಮಿಕ್‌ ಸಹಕಾರ ಒಕ್ಕೂಟದ ಇಂಥ ಡಬಲ್‌ ಸ್ಟಾಂಡರ್ಡ್‌ ಅಥವಾ ದ್ವಿಮುಖ ನೀತಿಯಿಂದಾಗಿಯೇ ಅದು ತನ್ನ ಮಾತಿನ ಮೇಲಿನ ಗೌರವವನ್ನು ಕಳೆದುಕೊಂಡಿದೆ. ಇಂಥ ಒಕ್ಕೂಟದಿಂದ ಟೀಕೆಗೆ ಒಳಗಾದರೆ ಭಾರತವೇನೂ ಅಂಜಬೇಕಿಲ್ಲ. ಆದರೆ ಬಹುತೇಕ ಅರಬ್‌ ದೇಶಗಳ ಜೊತೆಗೆ ಭಾರತ ಸುಮಧುರವಾದ ವಾಣಿಜ್ಯ ವಹಿವಾಟುಗಳನ್ನು ಹೊಂದಿದೆ. ಪೆಟ್ರೋಲಿಯಂ ತೈಲಗಳನ್ನು ಈ ದೇಶಗಳಿಂದ ನಾವು ಆಮದು ಮಾಡಿಕೊಳ್ಳುತ್ತಿದ್ದೇವೆ. ಹಾಗೆಯೇ ಭಾರತದ ಬೃಹತ್‌ ಮಾರುಕಟ್ಟೆ ಕೂಡ ಈ ದೇಶಗಳಿಗೆ ಅಗತ್ಯವಾಗಿದೆ. ಆದರೆ ಈ ನೂಪುರ್‌ ಶರ್ಮಾ ಪ್ರಕರಣ ಈ ಸಂಬಂಧವನ್ನು ಎಲ್ಲಿಯವರೆಗೆ ಒಯ್ಯುತ್ತದೆ ಎಂಬ ಎಂದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದೆ. ಈಗ ಎಲ್ಲರ ದೃಷ್ಟಿ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಎಕ್ಸಿಟ್ ಪೋಲ್ ನುಡಿಯುವ ಭವಿಷ್ಯದ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಕಳೆದ ನಾಲ್ಕು ಲೋಕ ಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ (Exit Poll) ನುಡಿದಿರುವ ಭವಿಷ್ಯ ಎಷ್ಟು ನಿಜವಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Exit Polls
Koo

ಲೋಕಸಭೆ ಚುನಾವಣೆ-2024ರ (Loksabha election-2024) ಕೊನೆಯ ಹಂತದ ಮತದಾನ (voting) ಮುಗಿದ ಬಳಿಕ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ ಗಳ (Exit Poll) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜೂನ್ 1ರಂದು ಎಂಟು ರಾಜ್ಯಗಳ (states) 59 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಂಜೆ 6:30ಕ್ಕೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಅಭಿಪ್ರಾಯ ಸಂಗ್ರಹಕ್ಕಿಂತ (opinion polls) ಎಕ್ಸಿಟ್ ಪೋಲ್ ಭಿನ್ನವಾಗಿರುತ್ತದೆ. ಎಕ್ಸಿಟ್ ಪೋಲ್ ಮತದಾನ ಮುಗಿದ ಅನಂತರ ತೆಗೆದುಕೊಳ್ಳಲಾಗುವ ಮತದಾರರ ಸಮೀಕ್ಷೆಯಾಗಿದೆ. ಜನರು ಹೇಗೆ ಮತ ಚಲಾಯಿಸಿದ್ದಾರೆ ಎಂಬ ಟ್ರೆಂಡ್ ಇದು ನೀಡುತ್ತದೆ.

ನಿರ್ದಿಷ್ಟ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ತನ್ನ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಇದು ಒದಗಿಸುತ್ತದೆ. ಚುನಾವಣೆ ಆರಂಭಕ್ಕೂ ಮುನ್ನ ಅಭಿಪ್ರಾಯ ಸಂಗ್ರಹಣೆ ನಡೆಸಲಾಗುತ್ತದೆ. ಇದಕ್ಕಾಗಿ ಜನ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂದು ಮತಗಟ್ಟೆಯವರು ಕೇಳುತ್ತಾರೆ. ಆದರೆ ಎಕ್ಸಿಟ್ ಪೋಲ್‌ಗಳಲ್ಲಿ ಜನರು ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂಬುದನ್ನು ಕಂಡುಕೊಳ್ಳುತ್ತಾರೆ.

ಎಕ್ಸಿಟ್ ಪೋಲ್‌ಗಳು ಎಷ್ಟು ನಿಖರವಾಗಿರುತ್ತದೆ?

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.

ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳು ಏನು ಭವಿಷ್ಯ ನುಡಿದಿವೆ ಮತ್ತು ನಿಜವಾದ ಫಲಿತಾಂಶಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2019ರ ಎಕ್ಸಿಟ್ ಪೋಲ್‌ಗಳು

ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಎನ್ ಡಿ ಎ: 339-365, ಯುಪಿಎ: 77-108
ನ್ಯೂಸ್ 24-ಟುಡೇಸ್ ಚಾಣಕ್ಯ ಪ್ರಕಾರ ಎನ್ ಡಿ ಎ-350, ಯುಪಿಎ-95
ನ್ಯೂಸ್ 18-ಐಪಿಎಸ್ ಒಎಸ್ ಪ್ರಕಾರ ಎನ್ ಡಿ ಎ- 336, ಯುಪಿಎ- 124
ಟೈಮ್ಸ್ ನೌ- ವಿಎಂಆರ್ ಪ್ರಕಾರ ಎನ್ ಡಿ ಎ- 306, ಯುಪಿಎ-132
ಇಂಡಿಯಾ ಟಿವಿ-ಸಿಎನ್ ಎಕ್ಸ್ ಪ್ರಕಾರ ಎನ್ ಡಿಎ-300, ಯುಪಿಎ-120
ಎಬಿಪಿ-ಸಿಎಸ್ ಡಿಎಸ್ ಪ್ರಕಾರ ಎನ್ ಡಿಎ- 277, ಯುಪಿಎ- 130
ಇಂಡಿಯಾ ನ್ಯೂಸ್-ಪೋಲ್ ಸ್ಟಾರ್ಟ್ ಪ್ರಕಾರ ಎನ್ ಡಿಎ- 287, ಯುಪಿಎ- 130
2019ರ ಅಂತಿಮ ಫಲಿತಾಂಶ ಹೀಗಿತ್ತು: ಎನ್ ಡಿ ಎ-353, ಯುಪಿಎ-91

2014ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್– ಸಿಎಸ್ ಡಿಎಸ್–ಲೋಕ್ ನೀತಿ ಪ್ರಕಾರ ಎನ್ ಡಿ ಎ – 276, ಯುಪಿಎ -97, ಇತರೆ-148
ಇಂಡಿಯಾ ಟುಡೇ–ಸಿಸೆರೊ ಪ್ರಕಾರ ಎನ್ ಡಿ ಎ-272, ಯುಪಿಎ-115, ಇತರೆ- 156
ಸುದ್ದಿ 24–ಚಾಣಕ್ಯ ಪ್ರಕಾರ ಎನ್‌ಡಿಎ-340, ಯುಪಿಎ-70, ಇತರೆ-133
ಟೈಮ್ಸ್ ನೌ–ಒ ಆರ್ ಜಿ ಪ್ರಕಾರ ಎನ್‌ಡಿಎ- 249, ಯುಪಿಎ-148, ಇತರೆ- 146
ಎಬಿಪಿ ನ್ಯೂಸ್–ನೀಲ್ಸನ್ ಪ್ರಕಾರ ಎನ್‌ಡಿಎ-274, ಯುಪಿಎ-97, ಇತರೆ-165
ಎನ್ ಡಿ ಟಿವಿ –ಹಂಸ ಸಂಶೋಧನೆ ಪ್ರಕಾರ ಎನ್‌ಡಿಎ-279, ಯುಪಿಎ-103, ಇತರೆ-161
2014ರ ಫಲಿತಾಂಶ ಹೀಗಿತ್ತು: ಎನ್‌ಡಿಎ-336, ಯುಪಿಎ-66, ಇತರೆ-147 ಇದರಲ್ಲಿ ಬಿಜೆಪಿ 282, ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

2009ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್ – ದೈನಿಕ್ ಭಾಸ್ಕರ್ ಪ್ರಕಾರ ಯುಪಿಎ 185– 205, ಎನ್‌ಡಿಎ 165– 185, ತೃತೀಯ ರಂಗ 110– 130, ನಾಲ್ಕನೇ ರಂಗ 25–35
ಸ್ಟಾರ್-ನೀಲ್ಸನ್ ಪ್ರಕಾರ ಯುಪಿಎ 199, ಎನ್‌ಡಿಎ 196, ತೃತೀಯ ರಂಗ 100, ನಾಲ್ಕನೇ ರಂಗ 36
ಭಾರತ ಟಿವಿ – ಸಿ ವೋಟರ್ ಪ್ರಕಾರ ಯುಪಿಎ 189–201, ಎನ್‌ಡಿಎ 183–195, ತೃತೀಯ ರಂಗ 105–121
2009ರ ಫಲಿತಾಂಶ ಹೀಗಿತ್ತು: ಯುಪಿಎ-262, ಎನ್‌ಡಿಎ-159, ತೃತೀಯ ರಂಗ-79, ನಾಲ್ಕನೇ ರಂಗ-27. ಇದರಲ್ಲಿ ಕಾಂಗ್ರೆಸ್- 206, ಬಿಜೆಪಿ 116 ಸ್ಥಾನಗಳನ್ನು ಗೆದ್ದುಕೊಂಡಿತ್ತು.

2004ರ ಎಕ್ಸಿಟ್ ಪೋಲ್‌ಗಳು

ಎನ್ ಡಿ ಟಿವಿ- ಎಸಿ ನೀಲ್ಸನ್ ಪ್ರಕಾರ ಎನ್ ಡಿ ಎ 230-250, ಕಾಂಗ್ರೆಸ್ 190-205, ಇತರೆ 100-120
ಆಜ್ತಕ್ ಒಆರ್ ಜಿ-ಮಾರ್ಗ್ ಪ್ರಕಾರ ಎನ್ ಡಿ ಎ 248, ಕಾಂಗ್ರೆಸ್-190, ಇತರೆ-105
ಸ್ಟಾರ್‌ನ್ಯೂಸ್ ಸಿ-ವೋಟರ್ ಪ್ರಕಾರ ಎನ್ ಡಿ ಎ 263-275, ಕಾಂಗ್ರೆಸ್ 174-186, ಇತರೆ 86-98
2004ರ ಫಲಿತಾಂಶ ಹೀಗಿತ್ತು: ಯುಪಿಎ- 208, ಎನ್‌ಡಿಎ- 181, ಎಡರಂಗ- 59. ಇದರಲ್ಲಿ ಕಾಂಗ್ರೆಸ್ 145, ಬಿಜೆಪಿ 138 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಎಷ್ಟು ನಿಖರ?

ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳಲ್ಲಿ ಮೂರು ಬಾರಿ ಬಹುತೇಕ ನಿಖರವಾಗಿತ್ತು. ಆದರೆ 2004ರಲ್ಲಿ ಮಾತ್ರ ಸಮೀಕ್ಷೆ ಸುಳ್ಳಾಗಿತ್ತು. ಇದೀಗ 2024 ಸಮೀಕ್ಷೆ ಕುತೂಹಲ ಮೂಡಿಸಿದೆ.

Continue Reading

Lok Sabha Election 2024

Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವನ್ನು ಎದುರು ನೋಡುತ್ತಿರುವಾಗಲೇ ಎಲ್ಲರ ದೃಷ್ಟಿ ಈಗ ಎಕ್ಸಿಟ್ ಪೋಲ್ ನತ್ತ ನೆಟ್ಟಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ಸುಳಿವು ಜನರಿಗೆ ಲಭ್ಯವಾಗುತ್ತದೆ. ಬಹುತೇಕ ಬಾರಿ ಎಕ್ಸಿಟ್ ಪೋಲ್ (Exit Poll) ಸಮೀಕ್ಷೆ ನಿಜವಾಗಿದ್ದರೂ ಹಲವು ಬಾರಿ ಉಲ್ಟಾ ಆಗಿದೆ. ಅದು ಯಾವಾಗ, ಎಲ್ಲಿ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Exit Poll
Koo

ಲೋಕಸಭಾ ಚುನಾವಣೆಯ (Loksabha election-2024) ಅಂತಿಮ ಹಂತದ ಮತದಾನ (voting) ಜೂನ್ 1ರಂದು ನಡೆಯಲಿದ್ದು, ಜೂನ್ 4ರಂದು ಏಳು ಹಂತದ ಮತದಾನದ ಫಲಿತಾಂಶ ಹೊರಬೀಳಲಿದೆ. ರಾಜಕೀಯ ನಾಯಕರು (political leaders), ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ (Exit Poll) ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಸಮೀಕ್ಷೆಗಳು ಬಹುತೇಕ ಯಾವಾಗಲೂ ನಿಖರವಾಗಿವೆಯೇ ಇದ್ದರೂ ಕೆಲವು ಬಾರಿ ತಪ್ಪಾಗಿದ್ದೂ ಇದೆ. ತೀವ್ರವಾದ ಪರಿಶೀಲನೆ, ಚರ್ಚೆಯ ಬಳಿಕವೂ ಎಕ್ಸಿಟ್ ಪೋಲ್‌ಗಳು ಯಾವಾಗಲೂ ಅಂತಿಮ ಫಲಿತಾಂಶಗಳನ್ನು ನಿಖರವಾಗಿ ಹೇಳುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಒಟ್ಟು ಐದು ಬಾರಿ ಎಕ್ಸಿಟ್‌ ಪೋಲ್‌ ಭವಿಷ್ಯ ಸುಳ್ಳಾಗಿದೆ. ಈ ಕುರಿತ ಹಿನ್ನೋಟ ಇಲ್ಲಿದೆ.
2004ರ ಲೋಕಸಭಾ ಚುನಾವಣೆ

2004ರಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಜಯ ಗಳಿಸಿ, ಆಡಳಿತಾರೂಢ ಬಿಜೆಪಿಯು ‘ಇಂಡಿಯಾ ಶೈನಿಂಗ್’ ಬ್ಯಾನರ್ ಅಡಿಯಲ್ಲಿ ಅವಧಿಪೂರ್ವವೇ ಲೋಕಸಭೆ ಚುನಾವಣೆ ಎದುರಿಸಿತು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ನಾಯಕರು ಭಾರಿ ಆತ್ಮವಿಶ್ವಾಸದಿಂದಿದ್ದರು. ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ 240ರಿಂದ 250 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದ್ದವು. ಆದರೆ ನಿಜವಾದ ಫಲಿತಾಂಶಗಳು ಬಂದಾಗ ಸಂಖ್ಯೆಗಳು ಸಂಪೂರ್ಣವಾಗಿ ವಿರುದ್ಧವಾಗಿದ್ದವು. ಎನ್‌ಡಿಎ ಕೇವಲ 181 ಸೀಟುಗಳನ್ನು ಗೆಲ್ಲಲು ಸಾಧ್ಯವಾಯಿತು. 218 ಸ್ಥಾನಗಳನ್ನು ಗಳಿಸಿದ ಯುಪಿಎ ಮಿತ್ರ ಪಕ್ಷಗಳ ನೆರವಿನಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿತು.


2015ರ ದೆಹಲಿ ಅಸೆಂಬ್ಲಿ ಚುನಾವಣೆ

2015ರ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 70ರಲ್ಲಿ 67 ಸ್ಥಾನಗಳನ್ನು ಗಳಿಸಿ ಅಭೂತಪೂರ್ವ ಜಯ ಸಾಧಿಸಿತು. ಆದರೆ ಮತದಾನದ ದಿನದಂದು ನಡೆಸಿದ ಎಕ್ಸಿಟ್ ಪೋಲ್‌ಗಳು ಆಪ್‌ಗೆ ಸ್ಪಷ್ಟ ಬಹುಮತ ಎಂದು ಹೇಳಿತ್ತಾದರೂ, 50ರಷ್ಟು ಸೀಟು ಬರಬಹುದು ಎಂದಿತ್ತು. ಆದರೆ ಆಪ್‌ ಎಲ್ಲರ ನಿರೀಕ್ಷೆಗೂ ಮೀರಿದಷ್ಟು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಮೂಲಕ, ಜನರ ತೀರ್ಪನ್ನು ಸ್ಪಷ್ಟವಾಗಿ ಗುರುತಿಸಲು ಎಕ್ಸಿಟ್‌ ಪೋಲ್‌ಗಳು ವಿಫಲವಾಗಿದ್ದವು.

2015ರ ಬಿಹಾರ ವಿಧಾನಸಭಾ ಚುನಾವಣೆ

2015ರ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ತೀವ್ರ ಪೈಪೋಟಿಯಿಂದ ಕೂಡಿತ್ತು. ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯುವುದಿಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಈ ಮುನ್ಸೂಚನೆಯ ಹೊರತಾಗಿಯೂ ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಒಕ್ಕೂಟವು ಭರ್ಜರಿ ಜಯ ಸಾಧಿಸಿತು. ಲಾಲು ಪ್ರಸಾದ್ ಅವರ ಆರ್‌ಜೆಡಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2017

ನೋಟು ಅಮಾನ್ಯೀಕರಣದ ಅನಂತರ ನಡೆದ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯ ಸಮೀಕ್ಷೆಗಳು ಭಾರಿ ಕುತೂಹಲ ಮೂಡಿಸಿದ್ದವು. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಸರಳ ಬಹುಮತಕ್ಕೂ ಕೆಲವು ಸ್ಥಾನಗಳು ಕೊರತೆ ಆಗಲಿವೆ. ಬಿಜೆಪಿಗೆ ಹೆಚ್ಚೆಂದರೆ 185ರಿಂದ 200 ಸ್ಥಾನಗಳು ಬರಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಎಸ್‌ಪಿ-ಕಾಂಗ್ರೆಸ್‌ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಎಲ್ಲ ಮತಗಟ್ಟೆ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಒಟ್ಟು 403 ಸೀಟುಗಳಲ್ಲಿ 312 ಸೀಟುಗಳನ್ನು ಗೆದ್ದುಕೊಂಡಿತು. 2012ರ ಚುನಾವಣೆಯಲ್ಲಿ ಕೇವಲ 47 ಸ್ಥಾನ ಗಳಿಸಿದ್ದ ಬಿಜೆಪಿಗೆ 2017ರಲ್ಲಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನ ಗೆದ್ದಿತು. ಎಸ್ಪಿಗೆ ಕೇವಲ 47 ಸೀಟುಗಳು ಸಿಕ್ಕಿದವು. ಕಾಂಗ್ರೆಸ್‌ಗೆ ಕೇವಲ 7 ಸ್ಥಾನಗಳು ಲಭಿಸಿದವು. ಮತಗಟ್ಟೆ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಭಾರಿ ಅಲೆ ಇರುವುದನ್ನು ಗುರುತಿಸುವಲ್ಲಿ ವಿಫವಾದವು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

2014ರ ಲೋಕಸಭಾ ಚುನಾವಣೆ

2014ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಆದರೆ ಬಿಜೆಪಿಯೊಂದೇ ಸರಳ ಬಹುಮತಕ್ಕೆ ಅಗತ್ಯವಾದ 272 ಸಂಖ್ಯೆ ಪಡೆಯುವುದಿಲ್ಲ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದವು. ಟುಡೇಸ್‌ ಚಾಣಕ್ಯ ಸಮೀಕ್ಷೆಯೊಂದು ಮಾತ್ರ ಬಿಜೆಪಿಗೆ 291 ಸೀಟು ಬರಬಹುದು ಎಂದು ಹೇಳಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ ಬಿಜೆಪಿಗೆ ಭರ್ಜರಿ 282 ಸೀಟುಗಳು ಲಭಿಸಿದವು. ಎನ್‌ಡಿಎ ಸೀಟುಗಳ ಸಂಖ್ಯೆ 300 ದಾಟಿತು. ಕಾಂಗ್ರೆಸ್ ಕೇವಲ 44 ಸ್ಥಾನಗಳಿಗೆ ಸೀಮಿತವಾಯಿತು. ಬಿಜೆಪಿ ಮತ್ತು ಎನ್‌ಡಿಎಯ ಭಾರಿ ಗೆಲುವಿನ ಸುಳಿವು ಮತಗಟ್ಟೆ ಸಮೀಕ್ಷೆಗಳಿಗೆ ಸಿಕ್ಕಿರಲಿಲ್ಲ. ಹಾಗಾಗಿ ಮತಗಟ್ಟೆ ಸಮೀಕ್ಷೆಗಳು ಎಲ್ಲ ಕಾಲಕ್ಕೂ ಸರಿಯಾಗಿಯೇ ಇರುತ್ತವೆ ಎಂದು ಹೇಳಲಾಗುವುದಿಲ್ಲ.

Continue Reading

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading

ವಿದೇಶ

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

ವಿಮಾನಗಳಲ್ಲಿ ಪ್ರಕ್ಷುಬ್ಧತೆಯ (Flight Turbulence) ಸಮಯದಲ್ಲಿ ಸುರಕ್ಷಿತವಾಗಿರಲು ಪ್ರಯಾಣಿಕರಿಗೆ ಅಮೆರಿಕದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್‌, ವಿಮಾನ ಸಿಬ್ಬಂದಿ ಪಾಲಿಸಬಹುದಾದ ಮತ್ತು ಪ್ರಯಾಣಿಕರು ನಿರ್ವಹಿಸಬೇಕಾದ ಮಾರ್ಗಸೂಚಿಯನ್ನು ನೀಡಿದೆ. ಈ ಕುರಿತ ವಿವರಣೆ ಇಲ್ಲಿದೆ. ವಿಮಾನದೊಳಗಿನ ಪ್ರಕ್ಷುಬ್ಧತೆ (Flight Turbulence) ಎಂದರೇನು, ಇದರಿಂದ ಪಾರಾಗುವುದು ಹೇಗೆ ಎಂಬ ಮಾಹಿತಿಯೂ ಇಲ್ಲಿದೆ.

VISTARANEWS.COM


on

By

Flight Turbulence
Koo

ವಿಮಾನ (flight) ಹಾರುವಾಗ ವಾಯು ಒತ್ತಡದಿಂದ ಕೆಲವೊಮ್ಮೆ ಪ್ರಕ್ಷುಬ್ಧತೆ (Flight Turbulence) ಉಂಟಾಗುತ್ತದೆ. ವಿಮಾನ ನಡುಗುತ್ತದೆ. ಈ ಸಂದರ್ಭದಲ್ಲಿ ಹಠಾತ್ ಆಘಾತಗಳು ಸಂಭವಿಸಿ ಸಾವು ನೋವು ಉಂಟಾಗುವುದೂ ಇದೆ. ಇಂಥ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಪರಿಸ್ಥಿತಿಯನ್ನು ಶಾಂತವಾಗಿ ನಿಭಾಯಿಸಬೇಕಾಗುತ್ತದೆ. ಇತ್ತೀಚೆಗೆ ಸಿಂಗಾಪುರ ಏರ್‌ಲೈನ್ಸ್ (singapore airlines) ವಿಮಾನ ಇಂಥದ್ದೇ ಪರಿಸ್ಥಿತಿಗೆ ಒಳಗಾಗಿ ಪ್ರಯಾಣಿಕರೊಬ್ಬರು ಸಾವಿಗೀಡಾಗಿ, ಹಲವರು ಪ್ರಯಾಣಿಕರು ಗಾಯಗೊಂಡಿದ್ದರು. ಲಂಡನ್‌ನಿಂದ ಸಿಂಗಾಪುರಕ್ಕೆ ಹಾರುತ್ತಿದ್ದ ಬೋಯಿಂಗ್ 777-312ER ವಿಮಾನ 321ರಲ್ಲಿದ್ದ ಪ್ರಯಾಣಿಕರು ವಾಯು ಪ್ರಕ್ಷುಬ್ಧತೆಯ ಭಯಾನಕತೆಯನ್ನು ಅನುಭವಿಸಬೇಕಾಯಿತು.

ವಾಯು ಪ್ರಕ್ಷುಬ್ಧತೆ ಎಂದರೇನು?

ವಾಯು ಪ್ರಕ್ಷುಬ್ಧತೆಯು ಭೂಮಿಯ ವಾತಾವರಣದಲ್ಲಿ ಗಾಳಿಯ ಅನಿಯಮಿತ ಮತ್ತು ಅನಿರೀಕ್ಷಿತ ಚಲನೆಯಿಂದ ಉಂಟಾಗುತ್ತದೆ. ಇದು ವಿಮಾನ ಹಾರಾಟದ ಸಮಯದಲ್ಲಿ ಅಪಘಾತಕ್ಕೆ ಕಾರಣವಾಗುತ್ತದೆ. ವೇಗವಾಗಿ ವಾಹನ ಓಡಿಸುತ್ತಿದ್ದಾಗ ಯಾವ ಸೂಚನಾ ಫಲಕ ಇಲ್ಲದೆ ಹಠಾತ್‌ ಹಂಪ್‌ ಎದುರಾದಾಗ ಏನಾಗುತ್ತದೋ ವಿಮಾನದೊಳಗೆ ಹಾಗೆಯೇ ಆಗುತ್ತದೆ. ವಿಮಾನವು ಚಾಲಕನ ನಿಯಂತ್ರಣ ಕಳೆದುಕೊಂಡು ಪತನಗೊಳ್ಳುವಂತಾಗುತ್ತದೆ.

ಆಗ ಏನು ಮಾಡಬೇಕು?

ಯಾವಾಗಲೂ ಸೀಟ್ ಬೆಲ್ಟ್ ಧರಿಸಿ ಸುರಕ್ಷಿತವಾಗಿ ಕುಳಿತಿರಬೇಕು. ಸೈನ್ ಆಫ್ ಆಗಿದ್ದರೂ, ಅದನ್ನು ಬಿಗಿಯಾಗಿ ಇರಿಸಬೇಕು.
ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸಿ. ಅವರ ಮಾತನ್ನು ಕೇಳಿ. ಪ್ರಕ್ಷುಬ್ಧತೆಯನ್ನು ನಿಭಾಯಿಸಲು ಅವರಿಗೆ ತರಬೇತಿ ನೀಡಲಾಗಿರುತ್ತದೆ. ಪ್ರಕ್ಷುಬ್ಧತೆಯ ಸಮಯದಲ್ಲಿ ಕ್ಯಾಬಿನ್ ಸುತ್ತಲೂ ಚಲಿಸುವುದನ್ನು ತಪ್ಪಿಸಿ ಮತ್ತು ಆತಂಕದಿಂದ ಕಿರುಚದೇ ಮೌನವಾಗಿ ಕುಳಿತುಕೊಳ್ಳಿ.

ಕ್ಯಾಬಿನ್‌ನಲ್ಲಿ ಇಟ್ಟಿರುವ ವಸ್ತುಗಳು ಮೈಮೇಲೆ ಬೀಳದಂತೆ ಸುರಕ್ಷಿತವಾಗಿರಿಸಿ. ಸೋರಿಕೆ ಅಥವಾ ಬೀಳುವಿಕೆಯನ್ನು ತಪ್ಪಿಸಲು ವಸ್ತುಗಳನ್ನು ಓವರ್ ಹೆಡ್ ವಿಭಾಗಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ.
ಪ್ರಕ್ಷುಬ್ಧತೆ ಸಾಮಾನ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಂತವಾಗಿರಿ ಮತ್ತು ಭಯಭೀತರಾಗಬೇಡಿ. ರೆಸ್ಟ್ ರೂಮ್‌ ಅನ್ನು ಬಳಸಬೇಕಾದರೆ ಎದ್ದೇಳುವ ಮೊದಲು ಶಾಂತ ಕ್ಷಣಕ್ಕಾಗಿ ಕಾಯಿರಿ. ಸ್ಥಿರತೆಗಾಗಿ ಹ್ಯಾಂಡ್ರೈಲ್‌ಗಳನ್ನು ಬಳಸಿ.

ವಾಯು ಪ್ರಕ್ಷುಬ್ಧತೆಗೆ ಕಾರಣಗಳೇನು?

ಚಂಡಮಾರುತ, ಜೆಟ್ ಸ್ಟ್ರೀಮ್‌ ಅಥವಾ ಗಾಳಿಯ ಒತ್ತಡದಲ್ಲಿನ ಬದಲಾವಣೆಗಳಿಂದ ವಾಯು ಪ್ರಕ್ಷುಬ್ಧತೆ ಉಂಟಾಗಬಹುದು. ಹವಾಮಾನ ಬದಲಾವಣೆಗಳಿಂದಾಗಿ ಗಾಳಿಯ ಪ್ರಕ್ಷುಬ್ಧತೆಯು ಆಗಾಗ ಸಂಭವಿಸುತ್ತದೆ ಎನ್ನುತ್ತಾರೆ ತಜ್ಞರು. ತೀವ್ರವಾದ ಪ್ರಕ್ಷುಬ್ಧ ಘಟನೆಗಳು ಅಪರೂಪ. ಪೈಲಟ್‌ಗಳು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತರಬೇತಿ ಪಡೆದಿರುತ್ತಾರೆ.

ಇದನ್ನೂ ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ಮಾಜಿ ಪೈಲೆಟ್ ಹೇಳಿದ್ದೇನು?

43 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಪೈಲಟ್ ಕ್ಯಾಪ್ಟನ್ ಕ್ರಿಸ್ ಹ್ಯಾಮಂಡ್ ಅವರು ಈ ಪರಿಸ್ಥಿತಿಯನ್ನು ಹೀಗೆ ವಿವರಿಸುತ್ತಾರೆ: ಇಂಥ ಸಂದರ್ಭದಲ್ಲಿ ಪ್ರಯಾಣಿಕರನ್ನು ಹೆಚ್ಚು ಸಮಾಧಾನದಿಂದ ಇರಿಸುವಂತೆ ಮಾಡುವ ಜವಾಬ್ದಾರಿ ಪೈಲಟ್‌ನದ್ದಾಗಿದೆ. ಎಲ್ಲಕ್ಕಿಂತ ಪೈಲಟ್‌ ತಾನು ಸಮಾಧಾನದಿಂದ ಇದ್ದು, ವಿವೇಚನೆ ಮತ್ತು ಅನುಭವ ಬಳಸಿ ವಿಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಅನುಭವಿ ಚಾಲಕರು ಇಂಥ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡುತ್ತಾರೆ.

Continue Reading
Advertisement
Mysore lok sabha constituency
ಪ್ರಮುಖ ಸುದ್ದಿ10 mins ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ40 mins ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ44 mins ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 202451 mins ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ1 hour ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ2 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ2 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ2 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ2 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್2 hours ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌