Weekly Horoscope | ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Weekly Horoscope | ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಈ ವಾರ ಅಂದರೆ ಜನವರಿ 8 ರಿಂದ 14 ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಷ: ಮಾತು ಮನೆ ಕೆಡಿಸದಿರಲಿ

Weekly Horoscope

ಮತ್ಸೋದ್ಯಮ, ಶೈತ್ಯಾಗಾರ ಸಂಬಂಧಿ ವಹಿವಾಟಿನ ಜನ ತಾಂತ್ರಿಕ ವಿಜ್ಞಾನ ಅರಿತ ಎಂಜಿನಿಯರ್‌ಗಳು ಈ ವಾರ ಹೆಚ್ಚು ಎಚ್ಚರ ಹೊಂದಿರಬೇಕು. ನಿಮ್ಮ ಜಾತಕದ ಪ್ರಕಾರ ಕೇತು ದಶಾ ನಡೆಯುತ್ತಿದ್ದಲ್ಲಿ, ವಿವಾಹಿತರು ಮಾತಿನ ಮೇಲೆ ಹಿಡಿತ ಹೊಂದಿರಲಿ. ಪತಿ ಪತ್ನಿಯರ ನಡುವೆ ಅತಿಯಾದ ಚರ್ಚೆ, ವಾಗ್ವಾದಗಳು ನಡೆಯದಿರಲಿ. ಹಿರಿಯರ ಆಸ್ತಿ ವಿಚಾರಗಳು ಕೂಡ ವ್ಯಾಜ್ಯಕ್ಕೆ ಪರಿವರ್ತನೆ ಹೊಂದದಂತೆ ಕಾಳಜಿ ವಹಿಸಿ. ಮುಖ್ಯವಾಗಿ ತಾಳ್ಮೆ ಸಮಾಧಾನಗಳಿರಲಿ. ಉದ್ವೇಗಗಳಿಗೆ ಕಾರಣವಾಗುವ ವಿಷಯಗಳಿಂದ ದೂರವಿರಿ.
ಶುಭ ಸಂಖ್ಯೆ: 6 ಶುಭ ದಿಕ್ಕು: ನೈಋತ್ಯ

ವೃಷಭ: ನಷ್ಟದ ಲೆಕ್ಕಾಚಾರ ತಪ್ಪದಿರಲಿ

Weekly Horoscope

ಬುಧನ ಸಂಚಾರದ ತಾಪಕ್ಕೆ ನೀವು ಕಾರಣವಾಗುವ ಸಾಧ್ಯತೆ ಹೆಚ್ಚು. ಈ ವಾರ ರಾಹು ಪೀಡಾ ನಿವಾರಣಾ ಸ್ತೋತ್ರ ಪಠಿಸಿ, ಧನ ನಷ್ಟದ ಸಂದರ್ಭವನ್ನು ದೂರ ಮಾಡಿಕೊಳ್ಳಿ. ಸುಖಕ್ಕೆ ಆಧಾರವಾಗುವ ಶ್ರೀ ಲಲಿತಾಳನ್ನು ಆರಾಧಿಸಿ. ದೂರ ಪ್ರವಾಸಕ್ಕೆ ಹೋಗಬೇಕಾದ ತುರ್ತು ಅಗತ್ಯ ಎದುರಾಗಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದಿರಿ. ವಹಿವಾಟಿನ ಸಂಬಂಧವಾದ ತುರ್ತು ನಿರ್ಧಾರಗಳ ಬಗ್ಗೆ ಸಾಕಷ್ಟು ನಿಂಯಂತ್ರಣವಿರಲಿ. ಹಣ್ಣಿನ ವ್ಯಪಾರಿಗಳಿಗೆ ಲಾಭವಾಗುವ ಸಾಧ್ಯತೆ.
ಶುಭ ಸಂಖ್ಯೆ : 3 ಶುಭ ದಿಕ್ಕು: ಆಗ್ನೇಯ

ಮಿಥುನ: ತಣ್ಣೀರನ್ನು ತಣಿಸಿ ಕುಡಿಯಿರಿ

Weekly Horoscope

ಪಂಚಮ ಶನಿ ಕಳೆದ ದಿನಗಳಾಗಿರುವುದರಿಂದ ಅವಸರದ ಹೆಜ್ಜೆ ಇಡದಿರಿ. ತಣ್ಣೀರನ್ನು ತಣಿಸಿ ಕುಡಿಯಿರಿ. ಆಕಾಶಕ್ಕೆ ಏಣಿ ಇರಿಸಿ, ನಕ್ಷತ್ರ ಹೆಕ್ಕುವ ಕನಸುಗಳು ಇರಲಿ, ಆದರೆ ತಾರ್ಕಿಕವಾಗಿ ಯೋಚಿಸಿ, ಯೋಜನೆಗಳನ್ನು ರೂಪಿಸಿ. ಕೆಲಸದ ಸ್ಥಳದಲ್ಲಿ ಗುರ್‌ ಎನ್ನುವ ಸಹೋದ್ಯೋಗಿಗಳು ಮನಸ್ಸಿನ ಶಾಂತಿ ಕೆಡಿಸಬಹುದು. ಬಾಸ್‌ ಜತೆಗೆ ವಾದಕ್ಕೆ ಇಳಿಯದಿರಿ. ಪದೋನ್ನತಿಗೆ ಅವಕಾಶಗಳು ಇದ್ದೇ ಇವೆ. ಯಾವುದೇ ಕಾರ್ಯಗಳನ್ನು ನಡೆಸುವ ಮುನ್ನ ಕುಲ ದೇವರನ್ನು ನೆನೆದೇ ಹೆಜ್ಜೆ ಇಡಿ. ವೈದ್ಯರ ಬಳಿ ಹೋಗುವ ಅವಕಾಶ, ಅನಿವಾರ್ಯವಾದರೆ ಹೋಗಿ ಬಂದು ಬಿಡಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ಪೂರ್ವ

ಕಟಕ: ಗೆಳೆತನದ ಸವಿಯನ್ನು ಉಣ್ಣುವ ಕಾಲ

Weekly Horoscope

ನಿಮ್ಮದೇ ಆದ ಗುರಿಗಳನ್ನು ಸಲೀಸಾಗಿ ತಲುಪುವ ಅಪೂರ್ವ ಅವಕಾಶಗಳನ್ನು ಪಡೆಯುವ ಸುಸಂದರ್ಭವಾಗಿದೆ. ಅತಿಯಾಸೆಗೆ ಮಾತ್ರ ಬೀಳಬೇಡಿ. ಒಂದೊಂದೇ ಮೆಟ್ಟಿಲನ್ನು ಯಶಸ್ವಿನ ಏಣಿಯಲ್ಲಿ ಗುರುತಿಸಿ ಸರಿಯಾಗಿ ಹೆಜ್ಜೆ ಇಡಿ. ಹಲವು ಗೆಳೆಯರನ್ನು ಭೇಟಿಯಾಗುವ ಅವಕಾಶ ಹೇಳರವಾಗಿದೆ. ಎಷ್ಟೋ ದಿನಗಳಿಂದ ಕಂಡಿರದ ಗೆಳೆಯರು ಭೇಟಿಯಾಗುತ್ತಾರೆ. ಉತ್ತಮವಾದ ಸಹಾಯ ಕೂಡ ಗೆಳೆಯರಿಂದ ಸಿಗಲು ಅವಕಾಶ ಜಾಸ್ತಿ. ಹೊಸ ಕೆಲಸಗಳು ನಿಮಗೆ ದೊರಕುವ ಸಾಧ್ಯತೆಗಳಿವೆ. ಇರುವ ಕೆಲಸ ಬಿಟ್ಟು ಹೊಸ ಕೆಲಸ ಹುಡುಕದಿರಿ. ಶಿವನ ಆರಾಧನೆಯಿಂದ ಕ್ಷೇಮ.
ಶುಭ ಸಂಖ್ಯೆ : 5 ಶುಭ ದಿಕ್ಕು: ಉತ್ತಮ

ಸಿಂಹ: ಉತ್ಸಾಹವಿದ್ದರೆ ಆದಾಯವೂ ಜಾಸ್ತಿ

Weekly Horoscope

ಮಕ್ಕಳ ವಿಷಯದಲ್ಲಿ ಎಚ್ಚರ ಇರಲಿ. ಕೆಲ ಕಾರಣಗಳಿಗಾಗಿ ಬಿಸ್ನೆಸ್‌ ವಿಚಾರದಲ್ಲಿ ಪಾರ್ಟ್‌ನರ್ಸ್‌ ನಡುವೆ ವಿವಾದ ಉಂಟಾಗುವ ಸಾಧ್ಯತೆ ಇದೆಯಾದರೂ ಹಲವು ಬಿಕ್ಕಟ್ಟುಗಳನ್ನು ಮಾತುಕತೆಯಿಂದಲೇ ನಿವಾಸಿಕೊಳ್ಳಿ. ಕಿರಾಣಿ ಅಂಗಡಿ ನಡೆಸುವ ಮಂದಿಗೆ ಹೊಸ ಸಾಹಸಗಳಿಗೂ ಪ್ರವೇಶ ಮಾಡುವ ಸುಸಂದರ್ಭ ಲಭ್ಯವಾಗಬಹುದು. ಹಣಕಾಸಿನ ವಿಚಾರದಲ್ಲಿ ಲಾಭಗಳಿಸುತ್ತಿರಾದರೂ ಖರ್ಚುಗಳಿಗೂ ಒಂದಿಲ್ಲೊಂದು ಕಾರಣಗಳು ಸೃಷ್ಟಿಯಾಗುವ ಸಾಧ್ಯತೆ ಜಾಸ್ತಿ. ಆದರೂ ಉತ್ಸಾಹ, ಲವಲವಿಕೆಗಳಿಂದ ಆದಾಯವೇ ಜಾಸ್ತಿ. ಮಹಾಗಣಪತಿಯನ್ನು ಆರಾಧಿಸಿ.
ಶುಭ ಸಂಖ್ಯೆ :೧ ಶುಭ ದಿಕ್ಕು: ನೈಋತ್ಯ

ಕನ್ಯಾ: ಕಿರಿಕಿರಿ ತಪ್ಪದು, ಶುಭ ಕಾಲವೂ ನಿಮ್ಮದು!

Weekly Horoscope

ಆಸ್ತಿಯ ವಿಚಾರದಲ್ಲಿ ಬಂಧುಗಳು ಸಹಕರಿಸುವರು. ಮನೆಯ ಸದಸ್ಯರ ಕುರಿತಾದ ಒಳ್ಳೆಯ ವಾರ್ತೆಯೊಂದನ್ನು ಕೇಳಿಸಿಕೊಳ್ಳುವಿರಿ. ಸಿನಿಮಾ ರಂಗದ ಜನರಿಗೆ, ಕುಂಚ ಕಲಾವಿದರಿಗೆ, ಕಾಳುಕಡಿ ಧಾನ್ಯ ಮಾರಾಟಗಾರರಿಗೆ ಮಿಶ್ರ ಫಲ. ಎರಡು ವ್ಯಕ್ತಿಗಳಿಂದ ಸತತವಾಗಿ ಎದುರಿಸುತ್ತಿರುವ ಕಿರಿಕಿರಿಗಳಿಂದ ಹೊರ ಬರಲು ಚಂದ್ರನ ಕಾರಣ ಗಳಿಂದಾಗಿ ತುಸು ಕ್ಲಿಷ್ಟವೇ ಆಗಲಿದೆ. ಪಂಚಮ ಶನಿ ಕಾಟದಿಂದಾಗಿ ಕಿರಿಕಿರಿಯ ವಿಚಾರ ಒಂದ ಹಿಂದೆ ಇನ್ನೊಂದು ಬರಬಹುದು. ಹನುಮಾನ್‌ ಚಾಲೀಸಾ ಪಠಿಸಿ.
ಶುಭ ಸಂಖ್ಯೆ : 6 ಶುಭ ದಿಕ್ಕು: ಪಶ್ಚಿಮ

ತುಲಾ: ಸಾಮಾಜಿಕ ಮನ್ನಣೆ ದೊರೆಯುವ ಸಮಯ

Weekly Horoscope

ಅನೇಕ ರೀತಿಯ ಸವಾಲುಗಳನ್ನು ಎದುರಿಸುತ್ತೀರಿ. ಆದರೆ ಚತುರಮತಿಗಳಾದ ನೀವು ಸವಾಲುಗಳನ್ನು ಮೆಟ್ಟಿ ನಿಲ್ಲುವ ಧೈರ್ಯ ಮತ್ತು ಶಕ್ತಿ ತೋರಿಸುತ್ತೀರಿ. ಸಮಸ್ತ ಜಗದಾಧಾರ ಮೂರ್ತಿಗಳಾದ ಹರಿ ಮತ್ತು ಹರನನ್ನು ಆರಾಧಿಸಿ. ಇದರಿಂದಾಗಿ ವಿಶಿಷ್ಟವಾದ ಸಾಮಾಜಿಕ ಮನ್ನಣೆಗಳಿಗೆ ಪಾತ್ರರಾಗುತ್ತೀರಿ. ರಾಜಕಾರಣಿಗಳಿಗೆ ಜನರ ನಡುವೆ ಎದ್ದು ನಿಲ್ಲಲು ಬೇಕಾದ ಅಮಿತ ಉತ್ಸಾಹ ಹಾಗೂ ಸಂಪನ್ನವಾದ ಶಕ್ತಿ ಸಾಮರ್ಥ್ಯಗಳು ಬಲಗೊಳ್ಳಲಿವೆ. ನಿಮ್ಮ ಮಾತಿನ ಶಕ್ತಿಯಲ್ಲಿ ಅರ್ಥಪೂರ್ಣ ವೈಚಾರಿಕ ನೆಲೆಗಳನ್ನು ರೂಪಿಸಿಕೊಳ್ಳಿ. ವೈದ್ಯರುಗಳಿಗೂ ಉತ್ತಮವಾದ ವಾರ.
ಶುಭ ಸಂಖ್ಯೆ : 2 ಶುಭ ದಿಕ್ಕು: ದಕ್ಷಿಣ

ವೃಶ್ಚಿಕ: ಕಷ್ಟಪಟ್ಟರೆ ಫಲವುಂಟು

Weekly Horoscope

ಅವಿರತವಾದ ಶ್ರಮದಿಂದ ನಿಮಗೆ ಅನುಕೂಲಕರವಾದ ಸಂದರ್ಭಗಳು ಒದಗಿ ಬಂದು ಸಾಮಾಜಿಕ ಸ್ಥಾನಮಾನಕ್ಕೆ ಉತ್ತಮವಾದ ಸಾಧನೆಗಳಿಗೆ ಅವಕಾಶ ಸಕಾರಾತ್ಮಕವಾಗಿದೆ. ಯಾರಿಗೂ ಹಣ ಕೊಡಲು ಹೋಗಬೇಡಿ. ವಿದೇಶಿ ಪ್ರವಾಸವೂ ಕೂಡ ಕೈಗೂಡುವ ಸಂದರ್ಭ ಸ್ಪಷ್ಟವಾಗಿದೆ. ನಿಮ್ಮದು ಆಡಿಟ್‌, ಚಾರ್ಟರ್ಡ್‌ ಅಕೌಂಟೆಂಟ್‌ ಇಲ್ಲಾ ಬ್ಯಾಂಕಿಂಗ್‌ ಚಟುವಟಿಕೆಗಳ ಕಾರ್ಯಕ್ಷೇತ್ರವಾಗಿದ್ದರೆ ಅನುಕೂಲಕರವಾದ ಸಮಯ ಇದು. ಹೊಸ ವಾಣಿಜ್ಯ ಸಂಸ್ಥೆ ಯಾ ಬ್ಯಾಂಕಿಂಗ್‌ ಕ್ಷೇತ್ರ ಸೊಸೈಟಿ ಕನ್ಸೂಮರ್ಸ್‌ ಹಿತ ಸಂಬಂಧಿ ಕಾರ್ಯ ಚಟುವಟಿಕೆಗಳಿಗೆ ಯಶಸ್ಸಿದೆ. ದುರ್ಗಾದೇವಿಯನ್ನು ಸ್ತುತಿಸಿ.
ಶುಭ ಸಂಖ್ಯೆ : 8 ಶುಭ ದಿಕ್ಕು: ಪೂರ್ವ

ಧನಸ್ಸು: ಅವಸರವೇ ಅಪಘಾತಕ್ಕೆ ಕಾರಣ

Weekly Horoscope

ಸದ್ಯವೇ ನಿಮ್ಮ ಬೆನ್ನು ಹತ್ತಿದ ಸಾಡೇಸಾತಿ ಕಾಟದ ದಿನಗಳು ದೂರವಾಗಲಿವೆ. ಕರಿ ಮೋಡದಿಂದ ಹೊರ ಬಂದ ರವಿಯಂತೆ ಶೋಭಿಸಲು ಅವಕಾಶ ಧಾವಿಸಿ ಬರುತ್ತದೆ. ಆದರೆ ಸದ್ಯಕ್ಕೆ ಅವಸರಿಸಬೇಡಿ. ಘಾತಕ ತರುವ ಜನರು ಸುತ್ತುವರಿಯುವ ವಿಚಾರ ಇದ್ದೇ ಇದೆ. ಚತುರಮತಿಗಳಾದ ನೀವು ಈ ಜನರಿಂದ ಉಪಾಯವಾಗಿ ದೂರವಾಗಬೇಕು. ಲೋಹದ ವ್ಯಾಪಾರಿಗಳಾಗಿದ್ದರೆ ಸದ್ಯಕ್ಕೆ ಸಾಲ ಮಾಡಲು ಮಂದಾಗಬೇಡಿ. ಒಳ್ಳೆಯ ಲಾಭದ ನಿರೀಕ್ಷೆಯನ್ನಿಟ್ಟುಕೊಂಡು ಯಾವುದನ್ನೂ ಕ್ರೆಡಿಟ್‌ಗೆ ಕೊಡಬೇಡಿ, ಅಪಾಯವಿದೆ. ರಾಮ ರಕ್ಷಾ ಸ್ತ್ರೋತ್ರ ಓದಿ.
ಶುಭ ಸಂಖ್ಯೆ: ೧ ಶುಭ ದಿಕ್ಕು: ವಾಯವ್ಯ

ಮಕರ: ಹಗ್ಗ ಹಾವಾಗುವ ಕಾಲ!

Weekly Horoscope

ಹಗ್ಗ ಎಂದು ಭಾವಿಸಿದ್ದು ಹಾವಾಗುವ ಸಾಧ್ಯತೆಯ ದಿನಗಳು. ಹೀಗಾಗಿ ಯಾಮಾರಿಸುವ ಜನರಿಂದ ದೂರವಾಗಿರಿ. ನಿಮ್ಮ ಘನತೆಗೆ ಅಲ್ಪರು ಕುಂದು ತರುತ್ತಾರೆ. ಹೆಚ್ಚು ಮಾತು ಪ್ರಯೋಜನ ತಾರದು. ಆಡಬೇಕಾದ ಮಾತುಗಳಿಂದ ಪ್ರಯೋಜನವಿದೆ. ಆದರೆ ಚುಟುಕಾಗಿ ಪರಿಣಾಮಕಾರಿಯಾದ ಮೃದು ಮಾತುಗಳಿಂದ ಎದುರಿನವರನ್ನು ಗೆಲ್ಲುವ ಪ್ರಯತ್ನ ಮಾಡಿ. ನೀವು ಬುದ್ಧಿವಂತರೇ, ಅನುಮಾನವಿಲ್ಲ. ಆದರೆ ನಿಮಗಿಂತಲೂ ಬುದ್ಧಿವಂತರೇ ನಿಮಗೆ ಸಿಗುತ್ತಾರೆ. ಈ ಜನರಿಂದಾಗಿ ನಿಮಗೆ ತೀರಾ ಅವಶ್ಯವಾದ ಏಕಾಗ್ರತೆಗೆ ತೊಂದರೆ ಬಂದೀತು. ಹನುಮಾನ್‌ ಚಾಲೀಸ್‌ ಓದಿ.
ಶುಭ ಸಂಖ್ಯೆ : 4 ಶುಭ ದಿಕ್ಕು: ಆಗ್ನೇಯ

ಕುಂಭ: ತಳಮಳ ಬೇಡ, ತಾಳ್ಮೆ ಇರಲಿ

Weekly Horoscope

ಪರಿಸ್ಥಿತಿಯನ್ನು ಎಂಥದೇ ಕ್ಲಿಷ್ಟ ಸನ್ನಿವೇಶಗಳ ಸಂದರ್ಭದಲ್ಲೂ ಪರಿಣಾಮಕಾರಿಯಾದ ಹಂತಕ್ಕೆ ತಂದು ನಿಲ್ಲಿಸುವ ಅಪರೂಪದ ಪ್ರತಿಭೆಯೇನೋ ನಿಮ್ಮಲ್ಲಿ ವಿಪುಲವಾಗಿದೆ. ಆದರೆ ಸಮಯ ಸಾಧಕರೂ ನಿಮ್ಮ ನೆಮ್ಮದಿ ಹಾಳು ಮಾಡುತ್ತಾರೆ. ಯಾವುದೇ ವಿಷಯದ ಮೇಲೆ ನಿಯಂತ್ರಣ ಸಾಧಿಸಲು ನಿಮಗೆ ಬಿಡುವುದಿಲ್ಲ. ದಿವ್ಯಶಕ್ತಿಯೊಂದು ಸೂಕ್ತವಾದ ಸಜ್ಜನರಿಂದ ಬೆಂಬಲಸಿಗುವಂತೆ ನಿಮ್ಮನ್ನು ಅನುಗ್ರಹಿಸುತ್ತದೆ. ಆದರೂ ಏನೋ ಆತಂಕ, ಭಯ ತಳಮಳ ತರುತ್ತಿರುತ್ತವೆ. ದಶರಥ ಮಹಾರಾಜ ಶನೈಶ್ವರ ಸ್ತೋತ್ರವನ್ನು ಪಠಿಸಿ, ಗೆಲ್ಲುತ್ತೀರಿ.
ಶುಭ ಸಂಖ್ಯೆ : 8 ಶುಭ ದಿಕ್ಕು: ಈಶಾನ್ಯ

ಮೀನ: ಹಿತ ಶತ್ರುಗಳ ಬಗ್ಗೆ ಇರಲಿ ಎಚ್ಚರ

Weekly Horoscope

ಬಹು ಮಹತ್ವದ ಜವಾಬ್ದಾರಿಯೊಂದನ್ನು ಹೊಸತಾಗಿ ಹೊರಲಿದ್ದೀರಿ. ಚಿನ್ನಾಭರಣ ಖರೀದಿಗಳಿಗೂ ಸದಾವಕಾಶವಿದೆ. ರೆಸ್ಟೊರೆಂಟ್‌ ನಡೆಸುವವರಾಗಿದ್ದರೆ ಈ ವಾರ ಕಾರ್ಮಿಕರ ಸಮಸ್ಯೆಯಿಂದ ನೀವು ಹೆಣಗಾಡಬೇಕಾಗಿ ಬರಬಹುದು. ನಿಮ್ಮ ಸಮೀಪದಲ್ಲೇ ಶತ್ರುಗಳಿರುತ್ತಾರೆ. ಹೀಗಾಗಿ ಮಾತುಗಳ ಬಗ್ಗೆ ನಿಗಾವಹಿಸಿ. ಹರಕು ಬಾಯಿ ಬಿಚ್ಚುವ ದುಃಸ್ಸಾಹಸ ಮಾಡದಿರಿ. ಹೈನು ಸರಕುಗಳ ವಹಿವಾಟುದಾರರಿಗೆ ಅನಿರೀಕ್ಷಿತವಾದ ಲಾಭ ತೂರಿ ಬರುತ್ತಿದೆ. ಜೂಜಿನ ವಿಷಯದಲ್ಲಿ ಎಚ್ಚರ ತಪ್ಪದಿರಿ. ಶ್ರೀ ವಲ್ಲಭ ನಾದ ವಿಷ್ಣುವನ್ನು ಆರಾಧಿಸಿ.
ಶುಭ ಸಂಖ್ಯೆ : 5 ಶುಭ ದಿಕ್ಕು: ದಕ್ಷಿಣ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Robert Fico: ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

VISTARANEWS.COM


on

Slovakian PM Robert Fico critical after assassination attempt
Koo

ಹೊಸದಿಲ್ಲಿ: ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Slovakia Prime minister Robert Fico) ಹತ್ಯೆ ಯತ್ನ (Assassination attempt) ಬುಧವಾರ ನಡೆದಿದೆ. ದುಷ್ಕರ್ಮಿಯೊಬ್ಬ ಅವರತ್ತ ಗುಂಡು ಹಾರಿಸಿದ್ದು, ರಾಬರ್ಟ್‌ ಫಿಕೊ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುದ್ದಿ ದೂರದರ್ಶನ ಕೇಂದ್ರ TA3 ಪ್ರಕಾರ, ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

“ಇಂದು ಹ್ಯಾಂಡ್ಲೋವಾದಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಹತ್ಯೆ ಪ್ರಯತ್ನ ನಡೆದಿದೆ. ಗಾಯಗೊಂಡ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ” ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೊವಾಕಿಯಾ ಸಂಸತ್ತಿನ ಉಪ ಸ್ಪೀಕರ್ ಲುಬೊಸ್ ಬ್ಲಾಹಾ ಅವರು ಸಂಸತ್ತಿನ ಅಧಿವೇಶನದಲ್ಲಿ ರಾಬರ್ಟ್ ಫಿಕೊ ಮೇಲಿನ ದಾಳಿಯನ್ನು ದೃಢಪಡಿಸಿದರು. ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಕ್ಯಾಪುಟೋವಾ ಈ ದಾಳಿಯನ್ನು ಖಂಡಿಸಿದ್ದು, ಇದು ಪ್ರಧಾನ ಮಂತ್ರಿಯವರ ಮೇಲಿನ “ಕ್ರೂರ ಮತ್ತು ನಿರ್ದಯ” ದಾಳಿ ಎಂದು ಕರೆದರು. “ನಾನು ಆಘಾತಕ್ಕೊಳಗಾಗಿದ್ದೇನೆ. ಈ ನಿರ್ಣಾಯಕ ಕ್ಷಣದಲ್ಲಿ ರಾಬರ್ಟ್ ಫಿಕೊಗೆ ಹೆಚ್ಚಿನ ಶಕ್ತಿ ಮತ್ತು ಚೇತರಿಕೆ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು.

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿರುವ ರಾಬರ್ಟ್ ಫಿಕೊ ಮತ್ತು ಅವರ ಎಡಪಂಥೀಯ ಸ್ಮರ್ (ದಿಕ್ಕು) ಪಕ್ಷವು ಸ್ಲೋವಾಕಿಯಾದಲ್ಲಿ ಸೆಪ್ಟೆಂಬರ್ 30ರಂದು ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿತು. ಈ ಗೆಲುವು ಫಿಕೊ ಅವರ ರಾಜಕೀಯ ಪುನರಾಗಮನಕ್ಕೆ ದಾರಿಯಾಗಿದೆ. ಅವರು ರಷ್ಯಾದ ಪರ ಮತ್ತು ಅಮೇರಿಕನ್ ವಿರೋಧಿ ನಿಲುವನ್ನು ಹೊಂದಿದ್ದಾರೆ. ಫಿಕೊ ನೀತಿಗಳನ್ನು ಪ್ರತಿಭಟಿಸಲು ಸಾವಿರಾರು ಜನರು ರಾಜಧಾನಿಯಲ್ಲಿ ಮತ್ತು ಸ್ಲೋವಾಕಿಯಾದಾದ್ಯಂತ ಪದೇ ಪದೆ ರ್ಯಾಲಿ, ಪ್ರತಿಭಟನೆ ಮಾಡಿದ್ದಾರೆ.

ರಾಬರ್ಟ್ ಫಿಕೊ ಹತ್ಯೆಯ ಯತ್ನದ ಬಗ್ಗೆ ವಿಶ್ವದಾದ್ಯಂತ ಹಲವಾರು ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. Xನಲ್ಲಿನ ಪೋಸ್ಟ್‌ನಲ್ಲಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼ ಎಂದು ಹೇಳಿದರು.

ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Continue Reading

ಕರ್ನಾಟಕ

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather: ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

VISTARANEWS.COM


on

Koo

ಬೆಂಗಳೂರು: ಮೇ 16 ರಂದು ರಾಜ್ಯದ ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (50-60 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಭವಿಷ್ಯ

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 16 2024
Koo

ಚಂದ್ರನು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 06:22 ವಾರ: ಗುರುವಾರ
ನಕ್ಷತ್ರ: ಮಘಾ 18:12 ಯೋಗ: ಧ್ರುವ 08:21
ಕರಣ: ಧ್ರುವ 08:21 ಅಮೃತ ಕಾಲ: ಮಧ್ಯಾಹ್ನ 03:33ರಿಂದ ಸಂಜೆ 05:20

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕ್ಷೇತ್ರ ದರ್ಶನಕ್ಕೆ ತೆರಳಬಹುದಾಗಿದೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಉಂಟಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ಇದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಈ ದಿನವು ನಿಮಗೆ ಸಂತೋಷವನ್ನುಂಟು ಮಾಡಲಿದೆ. ಇದು ಇತರರಿಗೆ ಸಂತಸ ಕೊಡಲಿದ್ದು, ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವಾಗಾವುದು ಬೇಡ, ಈ ಬಗ್ಗೆ ತುಸು ಎಚ್ಚರ ವಹಿಸುವುದು ಒಳಿತು. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಇತರರಿಗೆ ನೋವಾಗುತ್ತದೆ. ಇದು ನಿಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಆಧ್ಯಾತ್ಮದ ಹಾದಿ ಬಗ್ಗೆ ಗಮನಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಪ್ರಾಪ್ತಿಯಾಗಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೂರದ ಕಡೆಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಉಂಟಾಗುವ ಸಾಧ್ಯತೆ ಇದೆ. ಕೆಲವು ವಿಷಯದಲ್ಲಿ ನಿಮಗೆ ಸ್ನೇಹಿತರ ಸಲಹೆ – ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯ ಮಾಡಿದಲ್ಲಿ ನಿಮ್ಮ ಕೆಲಸಕ್ಕೇ ತೊಂದರೆಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಬಹುದು. ಹೀಗಾಗಿ ಈ ಬಗ್ಗೆ ಗಮನಹರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading
Advertisement
IPL 2024 Points Table
ಕ್ರೀಡೆ15 mins ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ18 mins ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ25 mins ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ31 mins ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ32 mins ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Kangana Ranaut
Lok Sabha Election 20241 hour ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ1 hour ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್1 hour ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ2 hours ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ2 hours ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌