ತನ್ನ ಮೇಲೆ ಅತ್ಯಾಚಾರ ಮಾಡಿದ ಹುಡುಗನ ಅಮ್ಮನಿಗೆ ಗುಂಡು ಹಾರಿಸಿದ ಯುವತಿ; ಮಹಿಳೆ ಸ್ಥಿತಿ ಗಂಭೀರ - Vistara News

ಕ್ರೈಂ

ತನ್ನ ಮೇಲೆ ಅತ್ಯಾಚಾರ ಮಾಡಿದ ಹುಡುಗನ ಅಮ್ಮನಿಗೆ ಗುಂಡು ಹಾರಿಸಿದ ಯುವತಿ; ಮಹಿಳೆ ಸ್ಥಿತಿ ಗಂಭೀರ

ಮಹಿಳೆ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಎಂದಿನಂತೆ ಅಂಗಡಿಯಲ್ಲಿ ಕುಳಿತು ವಹಿವಾಟು ಮಾಡುತ್ತಿದ್ದಾಗ ಅಲ್ಲಿಗೆ ಧಾವಿಸಿದ ಯುವತಿ ಗುಂಡು ಹೊಡೆದಿದ್ದಾಳೆ. ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Man Shoots Employer In Noida
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿಯಲ್ಲೊಬ್ಬಳು 16 ವರ್ಷದ ಹುಡುಗಿ, 50 ವರ್ಷದ ಮಹಿಳೆಗೆ ಗುಂಡು ಹಾರಿಸಿದ್ದಾಳೆ. ಕಿರಾಣಿ ಅಂಗಡಿ ನಡೆಸುತ್ತಿದ್ದ ಮಹಿಳೆ, ಎಂದಿನಂತೆ ಅಂಗಡಿಯಲ್ಲಿ ಕುಳಿತಿದ್ದಳು. ಶನಿವಾರ ಸಂಜೆ 5.30ರ ಹೊತ್ತಿಗೆ ಪಿಸ್ತೂಲ್​ ಹಿಡಿದು ಅಲ್ಲಿಗೆ ಹೋದ ಹುಡುಗಿ, ಏಕಾಏಕಿ ಮಹಿಳೆ ಮೇಲೆ ಫೈರಿಂಗ್ ಮಾಡಿದ್ದಾಳೆ. ಸದ್ಯ ಮಹಿಳೆಯನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ಹುಡುಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮಹಿಳೆಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಗ ಮಾಡಿದ ತಪ್ಪಿಗೆ ಅವನಮ್ಮನಿಗೆ ಶಿಕ್ಷೆ ಕೊಟ್ಟಿದ್ದಾಳೆ ಈ ಹುಡುಗಿ. ಅದನ್ನೇ ಪೊಲೀಸರ ಎದುರು ಹೇಳಿಕೊಂಡಿದ್ದಾಳೆ. 2021ರಲ್ಲಿ ಈ ಮಹಿಳೆಯ ಮಗ ನನ್ನ ಮೇಲೆ ಅತ್ಯಾಚಾರ ಮಾಡಿದ್ದ. ಆತನ ವಿರುದ್ಧ ನಾನು ದೂರು ಕೊಟ್ಟಿದ್ದೇನೆ. ಅವನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆತ ನನ್ನ ಮೇಲೆ ರೇಪ್​ ಮಾಡಿದ್ದಕ್ಕೆ, ಅವನ ಅಮ್ಮನಿಗೆ ಶೂಟ್ ಮಾಡಿದೆ ಎಂದು ಹೇಳಿಕೊಂಡಿದ್ದಾಳೆ. ಆ ಹುಡುಗನೂ ಅಪ್ರಾಪ್ತ ವಯಸ್ಸಿನವನೇ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Santro Ravi case | 1995ರಲ್ಲೇ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಸ್ಯಾಂಟ್ರೋ ರವಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Drowns in Farm Pond: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ದುರ್ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ಹೋದಾಗ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿದ್ದಾರೆ.

VISTARANEWS.COM


on

Drown in pond
Koo

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ (Drowns in Farm Pond) ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ಹೋದಾಗ ಬಾಲಕರು ನೀರಿನಲ್ಲಿ ಮುಳುಗಿ ದುರ್ಘಟನೆ ಸಂಭವಿಸಿದೆ. ಅಮಿತ್ ರಾಠೋಡ (12), ಸುದೀಪ್ ಜಾಧವ್ (13) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

missing case davanagere

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದನ್ನೂ ಓದಿ | Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

Continue Reading

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Actress Murder: ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

VISTARANEWS.COM


on

Mysuru News actress Vidhya Nandish congress leader killed by her husband
Koo

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ (Actress Murder) ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು (Vidhya Nandish) ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

ಇದನ್ನೂ ಓದಿ: Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

VISTARANEWS.COM


on

NIA raid rameshwaram cafe blast
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA Raid) ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರಿನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತೀನ್‌, ಶಾಜಿಬ್‌ ಜೊತೆ ಶಾಮೀಲು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಜಿಬ್‌ಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Continue Reading
Advertisement
Money Guide
ಮನಿ-ಗೈಡ್9 mins ago

Money Guide: ಉಮಾಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಿ

Drown in pond
ಕರ್ನಾಟಕ23 mins ago

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Ebrahim Raisi
ವಿದೇಶ23 mins ago

Ebrahim Raisi: ಹೆಲಿಕಾಪ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ದುರಂತ ಸಾವು; ಇಸ್ರೇಲ್ ಫಸ್ಟ್‌ ರಿಯಾಕ್ಷನ್‌ ಏನು?

2nd Puc Exam
ಬೆಂಗಳೂರು24 mins ago

2nd PUC Exam : ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

RCB vs RR
ಕ್ರೀಡೆ36 mins ago

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

India Skills National Competition 2024 Grand Finale 58 Winners to Represent India at World Skills
ದೇಶ39 mins ago

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

Cm Siddaramaiah hits out at BJP for Gaurantee Scheme
ರಾಜಕೀಯ41 mins ago

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

Meghana Raj Mother Day Gift Shopping to mother
ಸ್ಯಾಂಡಲ್ ವುಡ್43 mins ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ51 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ51 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌