Oscar award | ಆಸ್ಕರ್‌ ಪ್ರಶಸ್ತಿ ಕಣದಲ್ಲಿ ಕನ್ನಡದ ಕಾಂತಾರ, ವಿಕ್ರಾಂತ್‌ ರೋಣ | ಇನ್ಯಾವ ಸಿನಿಮಾಗಳಿವೆ? - Vistara News

ದೇಶ

Oscar award | ಆಸ್ಕರ್‌ ಪ್ರಶಸ್ತಿ ಕಣದಲ್ಲಿ ಕನ್ನಡದ ಕಾಂತಾರ, ವಿಕ್ರಾಂತ್‌ ರೋಣ | ಇನ್ಯಾವ ಸಿನಿಮಾಗಳಿವೆ?

ಆಸ್ಕರ್‌ ಪ್ರಶಸ್ತಿಯ ನಾನಾ ವಿಭಾಗಗಳಲ್ಲಿ ಕನ್ನಡದ ಕಾಂತಾರ, ವಿಕ್ರಾಂತ್ ರೋಣದ ಜತೆಗೆ ಇನ್ನೂ ಹಲವು ಭಾರತೀಯ ಸಿನಿಮಾಗಳು ಸ್ಪರ್ಧಿಸಿವೆ.

VISTARANEWS.COM


on

Oscar award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವರ್ಷದ ಆಸ್ಕರ್‌ ಪ್ರಶಸ್ತಿ ಸ್ಪರ್ಧೆಯ ಕಣಕ್ಕೆ ಕನ್ನಡದ ಎರಡು ಚಿತ್ರಗಳು ಧುಮುಕಿವೆ. ಕಾಂತಾರ ಹಾಗೂ ವಿಕ್ರಾಂತ್‌ ರೋಣ ಸಿನಿಮಾಗಳು ಆಸ್ಕರ್‌ ಪ್ರಶಸ್ತಿಯ ಸ್ಪರ್ಧಾರ್ಹತೆ ಗಳಿಸಿಕೊಂಡಿವೆ. ಇದಲ್ಲದೆ ಇನ್ನೂ ಹಲವು ಭಾರತೀಯ ಸಿನಿಮಾಗಳು ಆಸ್ಕರ್‌ ಸ್ಪರ್ಧೆಗೆ ಮುಂದಾಗಿವೆ.

ದಕ್ಷಿಣ ಭಾರತದಿಂದ ಕಾಂತಾರ, ವಿಕ್ರಾಂತ್‌ ರೋಣ (ಕನ್ನಡ), ಆರ್‌ಆರ್‌ಆರ್‌ (ತೆಲುಗು), ರಾಕೆಟ್ರಿ: ದಿ ನಂಬಿ ಎಫೆಕ್ಟ್‌ (ತಮಿಳು), ಇರವಿನ್‌ ನಿಳಲ್‌ (ತಮಿಳು) ತುಜ್ಯಾ ಸಾಥಿ ಕಹೀ ಹೈ, ಮಿ ವಸಂತರಾವ್‌ (ಮರಾಠಿ) ಹಿಂದಿಯ ಗಂಗೂಬಾಯಿ ಕಾಠಿಯಾವಾಡಿ, ದಿ ಕಾಶ್ಮೀರ್‌ ಫೈಲ್ಸ್‌ ಸ್ಪರ್ಧೆಗೆ ಅಣಿಯಾಗಿವೆ. ಇವುಗಳು ಖಾಸಗಿಯಾಗಿ ಸ್ಪರ್ಧಿಸುತ್ತಿವೆ.

ಆಸ್ಕರ್‌ ಪ್ರಶಸ್ತಿಯಲ್ಲಿ ಒಟ್ಟಾರೆ 10 ವಿಭಾಗಗಳಿದ್ದು, ಪ್ರತಿಯೊಂದು ವಿಭಾಗಕ್ಕೂ ಪ್ರತಿ ದೇಶದಿಂದಲೂ ಒಂದು ಸಿನಿಮಾ ಮಾತ್ರ ಆಯ್ಕೆಯಾಗುತ್ತದೆ. ಭಾರತದಿಂದ ಹೀಗೆ ʼಅತ್ಯುತ್ತಮ ಅಂತಾರಾಷ್ಟ್ರೀಯ ಚಿತ್ರʼ ವಿಭಾಗಕ್ಕೆ ಈ ಬಾರಿ ಆಯ್ಕೆಯಾಗಿರುವ ಸಿನಿಮಾ ಗುಜರಾತಿಯ ʼದಿ ಚೆಲ್ಲೋ ಶೋʼ. ಆರ್‌ಆರ್‌ಆರ್‌ ಸಿನಿಮಾದ ʼನಾಟು ನಾಟುʼ ಹಾಡು ʼಬೆಸ್ಟ್ ಒರಿಜಿನಲ್‌ ಸಾಂಗ್‌ʼ ವಿಭಾಗದಲ್ಲಿ ಸ್ಪರ್ಧೆಗೆ ಕಳಿಸಲಾಗಿದೆ. ಅತ್ಯುತ್ತಮ ಡಾಕ್ಯುಮೆಂಟರಿ ಫೀಚರ್‌ ವಿಭಾಗದಲ್ಲಿ “ಆಲ್ ದೇಟ್‌ ಬ್ರೀದ್ಸ್‌ʼ ಹಾಗೂ ʼಬೆಸ್ಟ್‌ ಡಾಕ್ಯುಮೆಂಟರಿ ಶಾರ್ಟ್‌ ಫಿಲಂʼ ವಿಭಾಗದಲ್ಲಿ ʼದಿ ಎಲಿಫೆಂಟ್‌ ವ್ಹಿಸ್ಪರರ್‌ʼಗಳನ್ನು ಕಳಿಸಲಾಗಿದೆ. ‌

ಜೂನ್‌ 24ರಂದು ಆಸ್ಕರ್‌ ಪ್ರಶಸ್ತಿಗೆ ಅಂತಿಮಗೊಂಡಿರುವ 5 ಸಿನಿಮಾಗಳ ಶಾರ್ಟ್‌ಲಿಸ್ಟ್‌ ಘೋಷಣೆಯಾಗಲಿದೆ. ಅಲ್ಲಿಯವರೆಗೆ ಕುತೂಹಲ ಉಳಿಯಲಿದೆ.

ಇದನ್ನೂ ಓದಿ | kantara in Oscar | ಕಾಂತಾರ ಮುಕುಟಕ್ಕೆ ಮತ್ತೊಂದು ಗರಿ, ಆಸ್ಕರ್‌ ಪ್ರಶಸ್ತಿಯ 2 ವಿಭಾಗದಲ್ಲಿ ಸ್ಪರ್ಧಾರ್ಹತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

VVPAT Verification: ವಿದ್ಯುನ್ಮಾನ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳನ್ನು ತಾಳೆ ಮಾಡಬೇಕು ಎಂಬುದಾಗಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಚುನಾವಣೆ ಆಯೋಗದಲ್ಲಿ ಬದಲಾವಣೆಗಳನ್ನು ತರುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿತು. ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿತು.

VISTARANEWS.COM


on

VVPAT Verification
Koo

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳನ್ನು ತಾಳೆ ಮಾಡುವ ದಿಸೆಯಲ್ಲಿ ಇವಿಎಂ ಬಳಿ ಇರಿಸುವ ವಿವಿಪ್ಯಾಟ್‌ಗಳ ತಾಳೆಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ನಾವು ಚುನಾವಣೆ ಆಯೋಗವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಹಾಕಿ ನೋಡಬೇಕು ಹಾಗೂ ವಿವಿಪ್ಯಾಟ್‌ ಸ್ಲಿಪ್‌ಗಳನ್ನು (VVPAT Verification) ಬ್ಯಾಲೆಟ್‌ ಬಾಕ್ಸ್‌ನಲ್ಲಿ ಠೇವಣಿ ಮಾಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಗಳ ಸಂಬಂಧಿಸಿದಂತೆ ಚುನಾವಣೆ ಆಯೋಗದ (Election Commission) ಸ್ಪಷ್ಟನೆ ಪಡೆದ ಸರ್ವೋಚ್ಚ ನ್ಯಾಯಾಲಯವು (Supreme Court), ಶೇ.100ರಷ್ಟು ತಾಳೆಗೆ ನಿರ್ದೇಶನ ನೀಡಬೇಕು ಎಂಬ ಬಗೆಗಿನ ತೀರ್ಪನ್ನು ಕಾಯ್ದರಿಸಿತು.

“ನಾವು ಚುನಾವಣೆ ಆಯೋಗವನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಚುನಾವಣೆ ಆಯೋಗವು ದೇಶದ ಸಂವಿಧಾನದ ಅನ್ವಯ ರಚಿಸಲಾದ ಸಂಸ್ಥೆಯಾಗಿದೆ. ಹಾಗಾಗಿ, ಅದರ ಕಾರ್ಯಚಟುವಟಿಕೆಗಳನ್ನು ನಾವು ನಿಯಂತ್ರಿಸಲು ಆಗುವುದಿಲ್ಲ. ಅನುಮಾನದ ಆಧಾರದ ಮೇಲೆ ನಾವು ಆದೇಶ ಹೊರಡಿಸಲು ಬರುವುದಿಲ್ಲ. ನೀವು (ಅರ್ಜಿದಾರರು) ಅನುಮಾನ ವ್ಯಕ್ತಪಡಿಸಿದಿರಿ ಎಂಬ ಮಾತ್ರಕ್ಕೆ ನಾವು ಯಾವುದೇ ಆದೇಶ ಹೊರಡಿಸಲು ಆಗುವುದಿಲ್ಲ. ಹಾಗೆಯೇ, ನಾವು ನಿಮ್ಮ ಯೋಚನಾ ಲಹರಿಯನ್ನೂ ಬದಲಿಸಲ್ಲ” ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠ ತಿಳಿಸಿತು.

ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, “ಚುನಾವಣಾ ಪ್ರಕ್ರಿಯೆಯಲ್ಲಿ ಸುಧಾರಣೆಗಳು ಆಗಬೇಕು. ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ಶೇ.100ಕ್ಕೆ 100ರಷ್ಟು ತಾಳೆ ಮಾಡಬೇಕು” ಎಂಬುದಾಗಿ ತಿಳಿಸಿದರು. ಆಗ ನ್ಯಾಯಾಲಯವು, “ಚುನಾವಣೆ ಆಯೋಗದ ಪ್ರಕ್ರಿಯೆಗಳನ್ನು ಬದಲಿಸಲು, ಅದರ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ” ಎಂದು ತಿಳಿಸಿತು.

ಪಾರದರ್ಶಕವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗವು ಮತಯಂತ್ರಗಳ ಜತೆಗೆ ವಿವಿಪ್ಯಾಟ್‌ಗಳನ್ನೂ (ವೋಟರ್‌ ವೇರಿಫೈಡ್‌ ಪೇಪರ್‌ ಆಡಿಟ್‌ ಟ್ರಯಲ್)‌ ಇರಿಸುತ್ತದೆ. ಮತಎಣಿಕೆ ಮಾಡುವಾಗ ಇವಿಎಂನಲ್ಲಿ ದಾಖಲಾದ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ತಾಳೆ ಮಾಡುತ್ತದೆ. ಈಗ ಪ್ರತಿ ಕ್ಷೇತ್ರದಲ್ಲೂ ಐದು ಇವಿಎಂಗಳನ್ನು ಆಯ್ಕೆ ಮಾಡಿಕೊಂಡು, ನಂತರ ಇವಿಎಂಗಳ ಜತೆ ತಾಳೆ ಮಾಡುವ ವಿಧಾನ ಇದೆ. ಆದರೆ, ಎಲ್ಲ ಇವಿಎಂಗಳ ಜತೆ ತಾಳೆ ಹಾಕಬೇಕು ಎಂಬುದು ಅರ್ಜಿದಾರರ ವಾದವಾಗಿದೆ.

ಇದನ್ನು ಓದಿ: ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Continue Reading

ದೇಶ

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Sunita Williams: ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Sunita Williams
Koo

ನ್ಯೂಯಾರ್ಕ್‌: ಭಾರತೀಯ ಮೂಲದ ವಿಖ್ಯಾತ ಗಗನಯಾತ್ರಿ (Astronaut) ಸುನೀತಾ ಎಲ್. ವಿಲಿಯಮ್ಸ್ (Sunita Williams), ತಮ್ಮ ಮೂರನೇ ಬಾಹ್ಯಾಕಾಶ ಯಾತ್ರೆಯನ್ನು (Space mission) ನಡೆಸಲು ಸಜ್ಜಾಗಿದ್ದಾರೆ. ಅಮೆರಿಕದ ನಾಸಾ (NASA) ಸಂಸ್ಥೆಯ ಗಗನಯಾತ್ರಿಯಾದ ಸುನೀತಾ, ಪ್ರಸ್ತುತ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ. ಇದು ಆ ವಾಹನದ ಮೊದಲ ಸಿಬ್ಬಂದಿ ವಿಮಾನ. ಮತ್ತು ಸುನೀತಾಗೆ ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಮೂರನೇ ಕಾರ್ಯಾಚರಣೆಯಾಗಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏಜೆನ್ಸಿಯ ಬೋಯಿಂಗ್ ಕ್ರೂ ಫ್ಲೈಟ್ ಪರೀಕ್ಷೆಯ ತಯಾರಿಗಾಗಿ NASA ಎರಡು ಉಡಾವಣೆಗಳನ್ನು ಆಯೋಜಿಸಿದೆ. ಏಪ್ರಿಲ್ 25ರಂದು EDTನಲ್ಲಿ ಹಾಗೂ ಮೇ 6ರಂದು ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ಪಡೆ ನಿಲ್ದಾಣದಲ್ಲಿ ಬಾಹ್ಯಾಕಾಶ ಉಡಾವಣಾ ಸಂಕೀರ್ಣ-41ರಿಂದ.”

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬಾಹ್ಯಾಕಾಶ ಸಂಸ್ಥೆಯ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ಭಾಗವಾಗಿ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಸಿಬ್ಬಂದಿ ವಿಮಾನದ ಉಡಾವಣೆ, ಡಾಕಿಂಗ್ ಮತ್ತು ಭೂಮಿಗೆ ಹಿಂತಿರುಗುವುದು ಸೇರಿದಂತೆ ಸ್ಟಾರ್‌ಲೈನರ್ ಸಿಸ್ಟಮ್‌ನ ಸಾಮರ್ಥ್ಯಗಳನ್ನು ಪರೀಕ್ಷಿಸಲಾಗಿದೆ.

ಸುನಿತಾ ವಿಲಿಯಮ್ಸ್ ಅವರ ಪರಿಣತಿ

ಸುನಿತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ಹಾರಾಟದ ಮೊದಲ ಅನುಭವವು ಡಿಸೆಂಬರ್ 9, 2006ರಿಂದ ಜೂನ್ 22, 2007ರವರೆಗೆ ನಡೆಯಿತು. ʼಎಕ್ಸ್‌ಪೆಡಿಶನ್ 14/15ʼನೊಂದಿಗೆ ಪ್ರಾರಂಭವಾಯಿತು. ಅವರು STS-116ನ ಸಿಬ್ಬಂದಿಯೊಂದಿಗೆ ಸಾಗಿ ಫ್ಲೈಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದರು. ಅವರು ಒಟ್ಟು 29 ಗಂಟೆ 17 ನಿಮಿಷಗಳ ನಾಲ್ಕು ಬಾಹ್ಯಾಕಾಶ ನಡಿಗೆಯೊಂದಿಗೆ ಮಹಿಳೆಯರ ದಾಖಲೆಯನ್ನು ಸ್ಥಾಪಿಸಿದರು. ಜೂನ್ 2007ರಲ್ಲಿ ಯಾನ ಮುಗಿಸಿ STS-117 ಸಿಬ್ಬಂದಿಯೊಂದಿಗೆ ಭೂಮಿಗೆ ಮರಳಿದರು.

ಜುಲೈ 14ರಿಂದ ನವೆಂಬರ್ 18, 2012ರವರೆಗೆ ಅವರ ಎರಡನೇ ಬಾಹ್ಯಾಕಾಶ ಯಾನ, ಎಕ್ಸ್‌ಪೆಡಿಶನ್ 32/33. ಅವರು ರಷ್ಯಾದ ಸೋಯುಜ್ ಕಮಾಂಡರ್ ಯೂರಿ ಮಾಲೆನ್‌ಚೆಂಕೊ ಮತ್ತು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿಯ ಫ್ಲೈಟ್ ಇಂಜಿನಿಯರ್ ಅಕಿಹಿಕೊ ಹೊಶೈಡ್ ಅವರೊಂದಿಗೆ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಜುಲೈ 2012ರಂದು ಹೋದರು. ಕಕ್ಷೆಯ ಪ್ರಯೋಗಾಲಯದಲ್ಲಿ ಸಂಶೋಧನೆ ಮತ್ತು ಪರಿಶೋಧನೆ ನಡೆಸುತ್ತ ನಾಲ್ಕು ತಿಂಗಳು ಕಳೆದಳು.

ಈ ಕಾರ್ಯಾಚರಣೆಗಳ ಸಮಯದಲ್ಲಿ ಅವರು ಹಲವು ಸಂಶೋಧನೆ ನಡೆಸಿದರು. ಬಾಹ್ಯಾಕಾಶ ನಡಿಗೆಗಳನ್ನು ನಡೆಸಿದರು ಮತ್ತು ಬಾಹ್ಯಾಕಾಶದ ಪರಿಶೋಧನೆಗೆ ಗಮನಾರ್ಹವಾಗಿ ಕೊಡುಗೆ ನೀಡಿದರು. ಸುನೀತಾ ವಿಲಿಯಮ್ಸ್ 50 ಗಂಟೆಗಳು ಮತ್ತು 40 ನಿಮಿಷಗಳ ಸಮಯದೊಂದಿಗೆ ದಾಖಲೆ ಸಮಯದ ಬಾಹ್ಯಾಕಾಶ ನಡಿಗೆ ದಾಖಲೆ ಮಾಡಿದ್ದಾರೆ.

ಪ್ರಶಸ್ತಿಗಳು ಮತ್ತು ಗೌರವಗಳು

ಅವರಿಗೆ ಅನೇಕ ಪ್ರಶಸ್ತಿಗಳು ಮತ್ತು ಗೌರವ ಸಂದಿವೆ. ಅವರು US ನೌಕಾಪಡೆಯ ನಿವೃತ್ತ ಕ್ಯಾಪ್ಟನ್. ಅವರಿಗೆ ಎರಡು ಬಾರಿ ರಕ್ಷಣಾ ಉನ್ನತ ಸೇವಾ ಪದಕ, ಲೀಜನ್ ಆಫ್ ಮೆರಿಟ್, ನೌಕಾಪಡೆಯ ಪ್ರಶಂಸಾ ಪದಕ ಎರಡು ಬಾರಿ, ನೌಕಾಪಡೆ ಮತ್ತು ಮೆರೈನ್ ಕಾರ್ಪ್ಸ್ ಸಾಧನೆ ಪದಕ ಮತ್ತು ಮಾನವೀಯ ಸೇವಾ ಪದಕ ನೀಡಲಾಗಿದೆ. ಪ್ರಸ್ತುತ ವಿಲಿಯಮ್ಸ್ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

Continue Reading

ಪ್ರಮುಖ ಸುದ್ದಿ

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

“ನರೇಂದ್ರ ಮೋದಿ (PM Narendra Modi) 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಜೇಮಿ ಡೀಮನ್ ಹೇಳಿದ್ದಾರೆ.

VISTARANEWS.COM


on

pm narendra modi jp morgan jamie dimon
Koo

ಹೊಸದಿಲ್ಲಿ: ಅಮೆರಿಕಕ್ಕೆ (US) ನರೇಂದ್ರ ಮೋದಿ (PM Narendra Modi) ಅವರಂಥ ದೃಢ ನಾಯಕತ್ವದ (Leadership) ಅಗತ್ಯವಿದೆ. ಅವರು ಭಾರತದಲ್ಲಿ (India) ನಾವು ಊಹಿಸಲಸಾಧ್ಯವಾದಷ್ಟು ಕೆಲಸಗಳನ್ನು ಮಾಡಿದ್ದಾರೆ” ಎಂದು ಖ್ಯಾತ ಬಹುರಾಷ್ಟ್ರೀಯ ಸಂಸ್ಥೆ ಜೆಪಿ ಮೋರ್ಗನ್‌ನ ಸಿಇಒ ಜೇಮಿ ಡೀಮನ್‌ (JPMorgan CEO Jamie Dimon) ಹೇಳಿದ್ದಾರೆ.

ಐಜೆಪಿ ಮೋರ್ಗಾನ್ ಚೇಸ್ ಸಿಇಒ ಜೇಮಿ ಡಿಮೊನ್ ಅವರು ಮಂಗಳವಾರ ನ್ಯೂಯಾರ್ಕ್‌ನ ಎಕನಾಮಿಕ್ ಕ್ಲಬ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಮೋದಿ 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕಾರ್ಯಕ್ಷಮತೆಯನ್ನು ಜೇಮಿ ಶ್ಲಾಘಿಸಿದ್ದಾರೆ. “ಮೋದಿಯವರು ಭಾರತದಲ್ಲಿ ನಂಬಲಾಗದಂಥ ಶಿಕ್ಷಣ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ನೀಡುವ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ. “ಭಾರತದಲ್ಲಿ 70 ಕೋಟಿ ಜನರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಅವರಿಗೆ ಪಾವತಿ ವರ್ಗಾವಣೆಗಳು ನಡೆಯುತ್ತಿವೆ. ಅವರು ಭಾರತದಲ್ಲಿ ಊಹಾತೀತ ಶಿಕ್ಷಣ ವ್ಯವಸ್ಥೆ, ಮೂಲಸೌಕರ್ಯಗಳನ್ನು ಮಾಡಿದ್ದಾರೆ. ಪಿಎಂ ಮೋದಿ ಕಠಿಣ ವ್ಯಕ್ತಿತ್ವದರಾಗಿರುವುದರಿಂದ ಹಳೆಯ ಅಧಿಕಾರಶಾಹಿ ವ್ಯವಸ್ಥೆಯನ್ನು ಮುರಿದು ಅವರು ತಮ್ಮ ಇಡೀ ದೇಶವನ್ನು ಮೇಲೆತ್ತುತ್ತಿದ್ದಾರೆ. ಅಮೆರಿಕದಲ್ಲಿ ಅಂಥವರು ಸ್ವಲ್ಪ ಬೇಕಿದೆ,” ಎಂದಿದ್ದಾರೆ ಜೇಮಿ.

“ಅಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಬೆರಳಚ್ಚು ಅಥವಾ ಕಣ್ಣುಗುಡ್ಡೆಯಿಂದ ಗುರುತಿಸಲಾಗುತ್ತದೆ” ಎಂದು 18 ವರ್ಷಗಳಿಂದ ಯುಎಸ್‌ನ ಅತಿ ದೊಡ್ಡ ಸಾಲದಾತ ಸಂಸ್ಥೆಯ ಮುಖ್ಯಸ್ಥ ಡಿಮನ್ ಹೇಳಿದರು. ಯುಎಸ್‌ನಲ್ಲಿ ರಾಷ್ಟ್ರೀಯ ಸಾಲ, ಹಣದುಬ್ಬರ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಭೌಗೋಳಿಕ ರಾಜಕೀಯ ಸಂಘರ್ಷಗಳ ಬಗ್ಗೆ ಡಿಮನ್‌ ಎಚ್ಚರಿಕೆ ನೀಡಿದರು. ಹಣದುಬ್ಬರ ಮತ್ತು ಅದರ ಜೊತೆಗೆ ಹೆಚ್ಚಿನ ಬಡ್ಡಿದರಗಳು ನಿರೀಕ್ಷೆಗಿಂತ ಹೆಚ್ಚು ಕಾಲ ಉಳಿಯಬಹುದು ಎಂದು ತಿಳಿಸಿದರು.

ಸಾಲದಾತರು ಮತ್ತು ನಿಯಂತ್ರಕರ ನಡುವೆ ಹೆಚ್ಚು ಸಾಮರಸ್ಯದ ಸಂಬಂಧಕ್ಕೆ ಅವರು ಕರೆ ನೀಡಿದ್ದು, ಹೆಚ್ಚು ಅಂತರ್ಗತ ಆರ್ಥಿಕ ಬೆಳವಣಿಗೆಯ ಅವಶ್ಯಕತೆಯಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ US ಮಿಲಿಟರಿ ಶಕ್ತಿ, ರಾಜಕೀಯ ಧ್ರುವೀಕರಣ ಮತ್ತು ರಾಷ್ಟ್ರದ ಆರ್ಥಿಕ ಕಾರ್ಯಕ್ಷಮತೆ ಉತ್ತಮವಾಗಿವೆ ಎಂದಿದ್ದಾರೆ.

ಇದನ್ನೂ ಓದಿ: PM Narendra Modi: ಮಕ್ಕಳಾಗಿ ವಿಶ್ವನಾಯಕರು! ಎಐ ಮೋಡಿಯಲ್ಲಿ ನರೇಂದ್ರ ಮೋದಿ ನೋಡಿ

Continue Reading

ವಿದೇಶ

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Noida Scrap Mafia: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ ರವಿ ಕಾನಾ ಹಾಗೂ ಆತನ ಗೆಳತಿ ಕಾಜಲ್ ಝಾ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಲೆ ಮರೆಸಿಕೊಂಡಿದ್ದ ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಪ್ರಕರಣಗಳ ಆರೋಪಿಯಾದ ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದರು.

VISTARANEWS.COM


on

Noida Scrap Mafia
Koo

ನವದೆಹಲಿ: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ (Noida Scrap Mafia) ರವಿ ಕಾನಾ (Ravi Kana) ಹಾಗೂ ಆತನ ಗೆಳತಿ ಕಾಜಲ್ ಝಾ (Kajal Jha) ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ನೋಯ್ಡಾ ಪೊಲೀಸರು ಥೈಲ್ಯಾಂಡ್‌ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಕಾನಾಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಅವರಿಗೆ ನೀಡಿದ್ದರು. ಈ ಕಾರಣದಿಂದ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಜನವರಿ 2ರಂದು ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ರವಿ ಕಾನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಂತರ ಆತನ ವಿರುದ್ಧ ಕಠಿಣ ಉತ್ತರ ಪ್ರದೇಶ ಗ್ಯಾಂಗ್​ಸ್ಟರ್ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ ತಡೆಗಟ್ಟುವಿಕೆ (Uttar Pradesh Gangsters and Anti-Social Activities (Prevention) Act) ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು.

ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ. ಈ ಗ್ಯಾಂಗ್‌ ರೀಬಾರ್ ಮತ್ತು ಸ್ಕ್ರ್ಯಾಪ್ ವಸ್ತುಗಳ ಅಕ್ರಮ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿದೆ. ಸ್ಕ್ರ್ಯಾಪ್ ಡೀಲರ್ ಆಗಿದ್ದ ಕಾನಾ ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಸ್ಕ್ರ್ಯಾಪ್ ವಸ್ತುಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಮತ್ತು ಮಾರಾಟ ಮಾಡಲು ಪ್ರಾರಂಭಿಸಿದ ಬಳಿಕ ಕೋಟ್ಯಧಿಪತಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 2023ರ ಡಿಸೆಂಬರ್ 28ರಂದು ಕಾನಾ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣವೂ ದಾಖಲಾಗಿತ್ತು.

ಈ ಮೊದಲೇ ರವಿ ಮತ್ತು ಆತನ ಗುಂಪಿನ ವಿರುದ್ಧ ಸುಮಾರು 11 ಕೇಸ್‌ಗಳು ದಾಖಲಾಗಿದ್ದವು. ಇವರ ವಿರುದ್ಧ ಅಪಹರಣ, ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಿವೆ ಎಂದು ಗ್ರೇಟರ್‌ ನೋಯ್ಡಾದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಟರ್ ನೋಯ್ಡಾ ಮತ್ತು ನೋಯ್ಡಾದಾದ್ಯಂತ ಗ್ಯಾಂಗ್ ಬಳಸುತ್ತಿದ್ದ ಹಲವು ಸ್ಕ್ರ್ಯಾಪ್ ಗೋದಾಮುಗಳ ಮೇಲೆ ಈಗಾಗಲೇ ದಾಳಿ ನಡೆಸಿ ಬೀಗಮುದ್ರೆ ಜಡಿಯಲಾಗಿದೆ. 

ಕಾನಾ ಮತ್ತು ಆತನ ಸಹಚರರ 120 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ. ಕಾನಾ ತನ್ನ ಗೆಳತಿ ಕಾಜಲ್‌ ಝಾಗೆ ದಕ್ಷಿಣ ದೆಹಲಿಯ ಐಷರಾಮಿ ಏರಿಯಾ ನ್ಯೂ ಫ್ರೆಂಡ್ಸ್‌ ಕಾಲನಿಯಲ್ಲಿ ಮೂರು ಅಂತಸ್ತಿನ ಬಂಗಲೆಯನ್ನು ಉಡುಗೊರೆಯಾಗಿ ಕೊಡಿಸಿದ್ದ. ಅದರ ಬೆಲೆ ಬರೋಬ್ಬರಿ 100 ಕೋಟಿ ರೂ. ಜನವರಿಯಲ್ಲಿ ಪೊಲೀಸರು ಆ ಐಷಾರಾಮಿ ಬಂಗಲೆಯ ಮೇಲೆ ದಾಳಿ ಬೀಗ ಜಡಿದು ಸೀಲ್‌ ಹಾಕಿದ್ದರು.

ಇದನ್ನೂ ಓದಿ: Kajal Jha: ಕಾಜಲ್‌ಗೆ ಸೇರಿದ 100 ಕೋಟಿ ರೂ. ಮೌಲ್ಯದ ಬಂಗಲೆ ಮೇಲೆ ಪೊಲೀಸರ ದಾಳಿ

ಕಾಜಲ್‌ ಝಾ ಕೆಲಸ ಹುಡುಕಿಕೊಂಡು ಬಂದು ರವಿ ಕಾನಾ ಗುಂಪು ಸೇರಿದ್ದಳು. ಕೆಲವೇ ದಿನಗಳಲ್ಲಿ ಆ ಗ್ಯಾಂಗ್‌ನ ಮುಖ್ಯ ಅಂಗವಾಗಿ ಬದಲಾದ ರೀತಿಯೇ ರೋಚಕ. ರವಿಗೆ ಸೇರಿದ ಎಲ್ಲ ಬೇನಾಮಿ ಆಸ್ತಿಯ ಲೆಕ್ಕಪತ್ರಗಳನ್ನು ಕಾಜಲ್‌ ಝಾ ನೋಡಿಕೊಳ್ಳುತ್ತಿದ್ದಳು. ರವಿಯ ಗ್ಯಾಂಗ್‌ ಜತೆಗೆ ಮನಸ್ಸಿನೊಳಗೂ ಜಾಗ ಪಡೆದಿದ್ದ ಕಾಜಲ್‌ ಅಪಾರ ಪ್ರಮಾಣದ ಆಸ್ತಿಯ ಒಡತಿಯೂ ಆಗಿದ್ದಳು. 

Continue Reading
Advertisement
World Chess Championship
ಕ್ರೀಡೆ3 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ19 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sunita Williams
ದೇಶ20 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್30 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ32 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ34 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ49 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ1 hour ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ1 hour ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌