Tea time | ಜೀವನದಲ್ಲೊಮ್ಮೆ ಇಂತಹ ಚಹಾಗಳ ರುಚಿ ನೋಡದಿದ್ದರೆ ಬದುಕಿದ್ದೂ ವ್ಯರ್ಥ! - Vistara News

ಆರೋಗ್ಯ

Tea time | ಜೀವನದಲ್ಲೊಮ್ಮೆ ಇಂತಹ ಚಹಾಗಳ ರುಚಿ ನೋಡದಿದ್ದರೆ ಬದುಕಿದ್ದೂ ವ್ಯರ್ಥ!

ಚಳಿಯೂರುಗಳಲ್ಲಿ ಹಬೆಯಾಡುವ ಚಹಾ ಕುಡಿಯುತ್ತಿದ್ದರೆ ನಮಗೆ ಬೇರೆ ಜಗತ್ತೇ ಬೇಡ. ನಮ್ಮ ದೇಶದಲ್ಲಿರುವ ಕೆಲವು ವಿಚಿತ್ರ ನಮೂನೆಯ ಚಹಾಗಳನ್ನು ಜೀವನದಲ್ಲೊಮ್ಮೆಯಾದರೂ ಟ್ರೈ ಮಾಡದಿದ್ದರೆ ಬದುಕಿದ್ದೂ ವ್ಯರ್ಥ!

VISTARANEWS.COM


on

tea time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ ಚಹಾ ಎಂಬುದೇ ಒಂದು ಸಂಸ್ಕೃತಿ. ಪೂರ್ವ ದಿಕ್ಕಿನಲ್ಲಿ ಸೂರ್ಯ ಮೇಲೆ ಬಂದರೂ, ಒಂದು ಕಪ್‌ ಚಹಾ ಇಲ್ಲದೆ ನಮಗೆ ಬೆಳಗೇ ಆಗುವುದಿಲ್ಲ. ಚಹಾಕ್ಕೂ ಬೆಳಗಿಗೂ ಅಷ್ಟು ನಂಟು. ಅದರಲ್ಲೂ ಚಳಿಯೂರುಗಳಲ್ಲಿ ಹಬೆಯಾಡುವ ಚಹಾ ಕುಡಿಯುತ್ತಿದ್ದರೆ ನಮಗೆ ಬೇರೆ ಜಗತ್ತೇ ಬೇಡ. ಚಹಾ ಎಂಬುದೊಂದು ಜಗತ್ತಿನಲ್ಲಿ ಕಳೆದುಹೋಗಲು ಬಯಸದ ಜೀವಗಳೇ ಇಲ್ಲ. ಚಹಾ ಕೆಟ್ಟದ್ದೋ ಒಳ್ಳೆಯದೋ, ಅದಕ್ಕೆಲ್ಲ ತಲೆಕೆಡಿಸದೆ, ಚಹಾ ಕೊಡುವ ಬೆಚ್ಚಗಿನ ಅಪ್ಪುಗೆಯನ್ನು ಬಯಸದವರೇ ಇಲ್ಲ. ಹಾಗಾಗಿ ಇಂತಹ ಚಹಾ ಪ್ರೀತಿಯ ಮಂದಿ ನಮ್ಮ ದೇಶದಲ್ಲಿದ್ದುಕೊಂಡು ಕೆಲವು ವಿಚಿತ್ರ ನಮೂನೆಯ ಚಹಾಗಳನ್ನು ಜೀವನದಲ್ಲೊಮ್ಮೆಯಾದರೂ ಟ್ರೈ ಮಾಡದಿದ್ದರೆ ಬದುಕಿದ್ದೂ ವ್ಯರ್ಥ!

೧. ಕೇಸರ್‌ ಮಸಾಲಾ ಚಹಾ: ಮಸಾಲೆಗಳಲ್ಲೇ ದುಬಾರಿಯಾದ, ಶ್ರೀಮಂತವಾದ ಕೇಸರಿ ಹಾಕಿದ ಚಹಾ ಎಂದಾದರೂ ಸವಿದಿದ್ದೀರಾ? ಇಲ್ಲ ಎಂದಾದರೆ ಒಮ್ಮೆ ಕೇಸರ್‌ ಮಸಾಲಾ ಚಹಾ ಕುಡಿಯಬೇಕು. ನಮ್ಮ ನಿತ್ಯದ ಚಹಾಕ್ಕೆ ಕೇಸರಿ ಎಸಳುಗಳನ್ನೂ ಸೇರಿಸಿ ಮಾಡುವ ಚಹಾವಿದು. ಕೇಳಲು ಕೊಂಚ ವಿಚಿತ್ರ ಎನಿಸಿದರೂ ಇದರ ರುಚಿ ಒಮ್ಮೆ ಸವಿಯಬೇಕು. ಮನಸ್ಸಿಗೆ ಉಲ್ಲಾಸವನ್ನು ನೀಡುವ ಈ ಚಹಾ ಖಿನ್ನತೆ, ಒತ್ತಡವನ್ನು ದೂರ ಸರಿಸಿ ನಮ್ಮನ್ನು ರಿಲ್ಯಾಕ್ಸ್‌ ಮಾಡುತ್ತದೆ.

kesar tea

೨. ಕಾಶ್ಮೀರಿ ನೂನ್‌ ಚಹಾ:  ಇದು ಕಾಶ್ಮೀರದ ವಿಶೇಷ ಚಹಾ. ಕಾಶ್ಮೀರಕ್ಕೆ ಭೇಟಿಕೊಟ್ಟವರು ಅಲ್ಲಿವ ವಿಶೇಷತೆಗಳನ್ನು ನೋಡುವ ಜೊತೆಗೆ ಅಲ್ಲಿನ ಕೆಲವು ತಿನಿಸು ಹಾಗೂ ಪೇಯಗಳನ್ನೂ ಟ್ರೈ ಮಾಡಲೇಬೇಕು. ಅವುಗಳಲ್ಲಿ ಕಾಶ್ಮೀರಿ ನೂನ್‌ ಚಹಾ ಕೂಡಾ ಒಂದು. ಕೊಂಚ ಉಪ್ಪಿನ ರುಚಿಯಿರುವ ಈ ಚಹಾ ಪಿಂಕ್‌ ಬಣ್ಣದಿಂದಲೇ ನಮ್ಮನ್ನು ಕಟ್ಟಿಹಾಕುತ್ತದೆ. ಚಹಾಸೊಪ್ಪು, ಹಾಲು, ಬೇಕಿಂಗ್ ಸೋಡಾ, ಉಪ್ಪು, ಏಲಕ್ಕಿಯನ್ನು ಹಾಕಿ ಮಾಡುವ ಚಹಾವಿದು. ವಿಶೇಷವೆಂದರೆ ಈ ಚಹಾ ಎಲ್ಲರಿಗೂ ಇಷ್ಟವಾಗಬೇಕೆಂದೇನಿಲ್ಲ. ಆದರೂ, ಜೀವನದಲ್ಲೊಮ್ಮೆ ಕಾಶ್ಮೀರದಲ್ಲಿ ತಿರುಗಾಡಿ ನೂನ್‌ ಚಹಾ ಕುಡಿಯಬೇಕು.

kashmiri tea

೩. ಗೋಲ್ಡನ್‌ ಅರಿಶಿನ ಚಹಾ: ಅರಿಶಿನ ಪುಡಿ ಹಾಕಿ ಮಾಡುವ ಅನಾರೋಗ್ಯದ ಸಮಯದಲ್ಲಿ ದೇಹಕ್ಕೆ ಅತ್ಯಂತ ಒಳ್ಳೆಯದನ್ನು ಮಾಡುವ ಚಹಾವಿದು. ಚಳಿಗಾಲದಲ್ಲಿ, ಮಳೆಗಾಲದಲ್ಲಿ ಕಾಡುವ ಎಲ್ಲ ಬಗೆಯ ರೋಗಗಳನ್ನೂ ದೂರ ಮಾಡುವ, ರೋಗ ನಿರೋಧಕ ಶಕ್ತಿ ನೀಡುವ ಈ ಚಹಾ ನಿಜಕ್ಕೂ ಆಗಾಗ ಕುಡಿಯುತ್ತಿರಬೇಕು.

golden tea

೪. ಸುಲೈಮಾನಿ ಚಹಾ: ಇದೇನಿದು ಇಂಥ ಹೆಸರು ಎಂದು ಹುಬ್ಬೇರಿಸಬೇಡಿ. ಕೇರಳದಲ್ಲಿ ಅತ್ಯಂತ ಜನಪ್ರಿಯವಾಗಿರುವ ಸುಲೈಮಾನಿ ಚಹಾ ನಾಲಿಗೆ ಚಪ್ಪರಿಸಬಹುದಾದ ಚಹಾ. ಬಿಸಿಬಿಸಿ ಹಬೆಯಾಡುವ ಹಾಲು ಹಾಕದ ಈ ಚಹಾ ಚಳಿ, ಮಳೆಗೆ ಪರ್ಫೆಕ್ಟ್‌ ಕಾಂಬಿನೇಶನ್ನು. ಏಲಕ್ಕಿ ಪಟ್ಟೆ ಲವಂಗಗಳಂತಹ ಮಸಾಲೆಗಳನ್ನು ಹಾಕಿ ಮಾಡಿದ ಈ ಚಹಾಕ್ಕೆ ಮಲಬಾರ್‌ ಮಸಾಲೆ ಚಹಾ ಎಂಬ ಹೆಸರೂ ಇದೆ. ಮಸಾಲೆ ಪದಾರ್ಥಗಳನ್ನು ಬೆಳೆಯುವ ಕೇರಳದಲ್ಲೇ ಇದನ್ನು ಸವಿದರೆ ಬಹಳ ರುಚಿ.

sulaimani tea

೫. ಅದ್ರಕ್‌ವಾಲಿ ಚಹಾ: ಉತ್ತರ ಭಾರತದಲ್ಲಿ ತಿರುಗಾಡಿದವರಿಗೆ ಮಟ್ಕಾ ಚಹಾ ಕುಡಿದು ಖಂಡಿತ ಗೊತ್ತಿರುತ್ತದೆ. ರಸ್ತೆಬದಿಯಲ್ಲಿ ಚಹಾ ಮಾಡುವ, ಚೆನ್ನಾಗಿ ಶುಂಠಿ ಹಾಕಿ ಕುದಿಸಿ ಕುದಿಸಿ ಮಾಡಿದ ಈ ಚಹಾವನ್ನು ಹಾಕಿ ಕೊಡುವ ಮಣ್ಣಿನ ಪುಟ್ಟ ಲೋಟಗಳಲ್ಲಿ ಕುಡಿಯುವ ಸುಖವೇ ಬೇರೆ. ಶುಂಠಿಯ ಖಾರ, ಚಹಾದ ಸಿಹಿ ಎಲ್ಲವೂ ಕೊಡುವ ಅನಿವರ್ಚನೀಯ ಆನಂದವೇ ಬೇರೆ!

ಇದನ್ನೂ ಓದಿ | Healthy breakfast | ಬೆಳಗಿನ ತಿಂಡಿಗಳು: ನಮ್ಮಲ್ಲೇ ಇದೆ, ನಮ್ಮ ಆರೋಗ್ಯದ ಸೀಕ್ರೆಟ್‌!

೬. ಇರಾನಿ ಚಹಾ: ಇದು ಎಲ್ಲ ಚಹಾಗಳಂತಲ್ಲ. ಪರ್ಷಿಯಾ ಮೂಲದ ಈ ಚಹಾ ಮಾಡುವ ಸಂಪ್ರದಾಯ ಸುಮಾರು ೧೮೯ನೇ ಶತಮಾನದಲ್ಲಿ ಭಾರತಕ್ಕೆ ಬಂತು ಎಂದು ಹೇಳಲಾಗುತ್ತದೆ. ಖೋವಾ ಹಾಕಿ ಮಾಡುವ ಈ ಚಹಾಕ್ಕೊಂದು ವಿಶೇಷ ರುಚಿಯಿದೆ. ಚಕ್ಕೆ ಹಾಗೂ ಏಲಕ್ಕಿಯನ್ನೂ ಹಾಕಿ ಮಾಡಲಾಗುವ ಈ ಚಹಾವನ್ನು ಹೈದರಾಬಾದಿನಲ್ಲೇ ಕುಡಿಯಬೇಕು!

ಕೇವಲ ಇಷ್ಟೇ ಅಲ್ಲ. ಭಾರತದ ಪ್ರತಿಯೊಂದು ಊರಿನಲ್ಲೂ ಸಿಗು ಚಹಾಕ್ಕೊಂದು ತನ್ನದೇ ಆದ ವಿಶೇಷ ರುಚಿಯಿರುತ್ತದೆ. ಅದಕ್ಕೇ ಎಲ್ಲಿಗೇ ಹೋದರೂ ಆ ಊರಿನ ಗೂಡಂಗಡಿಯಲ್ಲಿಯೋ, ರಸ್ತೆ ಬದಿಯಲ್ಲೋ ಕೂತು ಒಮ್ಮೆ ಚಹಾ ಕುಡಿಯಬೇಕು. ಅದರ ಮಜಾವೇ ಬೇರೆ!

ಇದನ್ನೂ ಓದಿ | Dosa for breakfast | ದೋಸೆ ಎಂಬ ಆಪತ್ಬಾಂಧವ: ದೋಸೆ ತಿಂದರೆ ದೋಷವಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

ಲೈಂಗಿಕ ಸಂರ್ಪಕದ ವೇಳೆ ಸುರಕ್ಷತೆ ಪಾಲಿಸದಿದ್ದರೆ ಅಥವಾ ಲೈಂಗಿಕ ಕ್ರಿಯೆಯ ಬಳಿಕ ಸ್ವಚ್ಛತೆ ಕಾಪಾಡಿಕೊಳ್ಳದೇ ಹೋದರೇ ಕ್ರಮೇಣ ಈ ಸೋಂಕು ಗರ್ಭಕಂಠದಲ್ಲಿ ಕಾಣಿಸಿಕೊಳ್ಳಲಿದೆ. ಇದಕ್ಕೆ ಚಿಕಿತ್ಸೆ ನೀಡದೇ ಹೋದಲ್ಲಿ ಇದು ಕ್ಯಾನ್ಸರ್‌ ಆಗಿ ಪರಿವರ್ತನೆಗೊಳ್ಳಲಿದೆ. ಪುರುಷರಲ್ಲಿಯೂ ಕೂಡ ಎಚ್‌ಪಿವಿ ಸೋಂಕು ಅಭಿವೃದ್ಧಿ ಆಗುವ ಸಾಧ್ಯತೆ ಇದೆ. ಈ ಸೋಂಕು ಪುರುಷರಿಗೆ ಗುದ ಮತ್ತು ಶಿಶ್ನ ಕ್ಯಾನ್ಸರ್‌ಗೂ (Cervical cancer) ಕಾರಣವಾಗಬಹುದು.

VISTARANEWS.COM


on

Cervical Cancer
Koo

-ಡಾ ನಿತಿ ರೈಜಾಡಾ, ಹಿರಿಯ ನಿರ್ದೇಶಕರು – ವೈದ್ಯಕೀಯ ಆಂಕೊಲಾಜಿ ಮತ್ತು ಹೆಮಟೋ ಆಂಕೊಲಾಜಿ, ಫೋರ್ಟಿಸ್ ಆಸ್ಪತ್ರೆ
ಇತ್ತೀಚೆಗೆ ಮಹಿಳೆಯರನ್ನು ಅಗಾಧವಾಗಿ ಕಾಡುತ್ತಿರುವ ಕಾಯಿಲೆಗಳ ಪೈಕಿ ಗರ್ಭಕಂಠದ ಕ್ಯಾನ್ಸರ್‌ (Cervical cancer) ಅಥವಾ ಮಾನವ ಪ್ಯಾಪಿಲೋಮ ವೈರಸ್ (HPV) ಕೂಡ ಒಂದು. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಈ ಸೋಂಕು ಕಾಣಿಸಿಕೊಳ್ಳಲಿದೆ. ಮೊದಲೆಲ್ಲಾ ಕೇವಲ ಮಹಿಳೆಯರು ಮಾತ್ರ ಈ ಸೋಂಕಿಗೆ ತುತ್ತಾಗುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಪುರುಷರೂ ಕೂಡ ಪ್ಯಾಪಿಲೋಮ ವೈರಸ್‌ಗೆ ಒಳಗಾಗುತ್ತಿರುವುದು ಗಮನಾರ್ಹ ವಿಷಯ. ಹೀಗಾಗಿ ಪುರುಷರು ಸಹ ಈ ಕ್ಯಾನ್ಸರ್‌ನಿಂದ ಸಾಕಷ್ಟು ಜಾಗೃತರಾಗಿರಬೇಕು.

Cervical Cancer

ಏನಿದು ಗರ್ಭಕಂಠದ ಕ್ಯಾನ್ಸರ್‌ ಕ್ಯಾನ್ಸರ್‌

ಗರ್ಭಕಂಠದ ಕ್ಯಾನ್ಸರ್‌ ಮಾನವ ಪ್ಯಾಪಿಲೋಮ ವೈರಸ್ (HPV)ನಿಂದ ಹರಡಲಿದೆ. ಪ್ರಾಥಮಿಕವಾಗಿ HPV 16 ಮತ್ತು HPV 18 ಸೋಂಕಿನಿಂದ ಮಾರ್ಪಟ್ಟು ಎಚ್‌ಪಿವಿ ಸೋಂಕಾಗಿ ಗರ್ಭಕಂಠದಲ್ಲಿ ಬೆಳವಣಿಗೆ ಕಾಣಲಿದೆ. ಲೈಂಗಿಕ ಸಂರ್ಪಕದ ವೇಳೆ ಸುರಕ್ಷತೆ ಪಾಲಿಸದಿದ್ದರೆ ಅಥವಾ ಲೈಂಗಿಕ ಕ್ರಿಯೆಯ ಬಳಿಕ ಸ್ವಚ್ಛತೆ ಕಾಪಾಡಿಕೊಳ್ಳದೇ ಹೋದರೇ ಕ್ರಮೇಣ ಈ ಸೋಂಕು ಗರ್ಭಕಂಠದಲ್ಲಿ ಕಾಣಿಸಿಕೊಳ್ಳಲಿದೆ. ಇದಕ್ಕೆ ಚಿಕಿತ್ಸೆ ನೀಡದೇ ಹೋದಲ್ಲಿ ಇದು ಕ್ಯಾನ್ಸರ್‌ ಆಗಿ ಪರಿವರ್ತನೆಗೊಳ್ಳಲಿದೆ. ಪುರುಷರಲ್ಲಿಯೂ ಕೂಡ ಎಚ್‌ಪಿವಿ ಸೋಂಕು ಅಭಿವೃದ್ಧಿ ಆಗುವ ಸಾಧ್ಯತೆ ಇದೆ. ಈ ಸೋಂಕು ಪುರುಷರಿಗೆ ಗುದ ಮತ್ತು ಶಿಶ್ನ ಕ್ಯಾನ್ಸರ್‌ಗೂ ಕಾರಣವಾಗಬಹುದು.

ಗರ್ಭಕಂಠದ ಕ್ಯಾನ್ಸರ್‌ನ ಲಕ್ಷಣಗಳು

ಗರ್ಭಕಂಠದ ಕ್ಯಾನ್ಸರ್‌ಗೆ ತುತ್ತಾದವರಲ್ಲಿ ಯೋನಿಯಲ್ಲಿ ರಕ್ತಸ್ತ್ರಾವ, ಮೂತ್ರವಿಸರ್ಜನೆ ವೇಳೆ ನೋವು ಅಥವಾ ಉರಿಯೂತ, ಲೈಂಗಿಕ ಸಂಭೋಗ ವೇಳೆ ನೋವು ಇಂತಹ ಲಕ್ಷಣಗಳು ಕಂಡು ಬಂದರೆ, ಇದು ಗರ್ಭಕಂಠದ ಕ್ಯಾನ್ಸರ್‌ ಬೆಳವಣಿಗೆಯಾಗುತ್ತಿರುವ ಮುನ್ಸೂಚನೆಯಾಗಿರಲಿದೆ. ಇದನ್ನು ಆರಂಭದಲ್ಲಿಯೇ ಪತ್ತೆ ಹಚ್ಚುವುದು ಹೆಚ್ಚು ಸೂಕ್ತ. ಇದಕ್ಕಾಗಿ ಪ್ಯಾಪ್ ಸ್ಮೀಯರ್‌ಗಳು ಅಥವಾ HPV ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಆರಂಭದಲ್ಲಿಯೇ ಪತ್ತೆ ಹಚ್ಚುವುದರಿಂದ ಎಚ್‌ಪಿವಿ ಸೋಂಕು ಕ್ಯಾನ್ಸರ್‌ ಆಗಿ ಪರಿವರ್ತಿಸುವುದನ್ನು ತಡೆಯಬಹುದು.

ಇದನ್ನೂ ಓದಿ: Cervical Cancer: ಗರ್ಭಕೊರಳಿನ ಕ್ಯಾನ್ಸರ್‌ಗೆ ಮುನ್ನೆಚ್ಚರಿಕೆಯೇ ಮದ್ದು

ಎಚ್‌ಪಿವಿ ಲಸಿಕೆ ಅಗತ್ಯತೆ

ಗರ್ಭಕಂಠದ ಕ್ಯಾನ್ಸರ್‌ ಅಥವಾ ಎಚ್‌ಪಿವಿ ಸೋಂಕಿನಿಂದ ತಪ್ಪಿಸಿಕೊಳ್ಳಲು ಇದೀಗ ಲಸಿಕೆ ಲಭ್ಯವಿದೆ. ಇತ್ತೀಚೆಗೆ ಭಾರತ ಸರ್ಕಾರ ಕೂಡ ಗರ್ಭಕಂಠದ ಕ್ಯಾನ್ಸರ್‌ಗಾಗಿ ಲಸಿಕೆ ಹಾಕುವುದನ್ನು ಮಾನ್ಯ ಮಾಡಿದೆ.
ಈ ಲಸಿಕೆಯು ಹದಿಹರೆಯದಲ್ಲಿಯೇ ಮಹಿಳೆಯರಿಗೆ ಈ ಲಸಿಕೆ ಹಾಕುವುದರಿಂದ ಈ ಕ್ಯಾನ್ಸರ್ ಬರದಂತೆ ತಡೆಯಬಹುದು. 9 ರಿಂದ 26 ವರ್ಷ ವಯಸ್ಸಿನ ಎಲ್ಲಾ ಸ್ತ್ರೀ ಮತ್ತು ಪುರುಷರು ಲಸಿಕೆಯನ್ನು ಪಡೆದರೆ ಗರ್ಭಕಂಠದ ಕ್ಯಾನ್ಸರ್‌ನ ಭವಿಷ್ಯದ ಅಪಾಯ ಗಮನಾರ್ಹವಾಗಿ ಕಡಿಮೆಯಾಗುತ್ತವೆ. 11-13 ವರ್ಷ ವಯಸ್ಸಿನಲ್ಲಿ ಈ ಲಸಿಕೆ ಪಡೆಯಲು ಹೆಚ್ಚು ಶಿಫಾರಸು ಮಾಡಲಾಗುತ್ತದೆ. ಲೈಂಗಿಕ ಜೀವನ ಆರಂಭಿಸಿದ ಬಳಿಕ ಈ ಲಸಿಕೆ ಅಷ್ಟಾಗಿ ಪ್ರಯೋಜನ ಬರುವುದಿಲ್ಲ. ಹೀಗಾಗಿ ಮದುವೆಗೂ ಮುನ್ನವೇ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಈ ಲಸಿಕೆ ಹಾಕಲಾಗುವುದು.

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Bengaluru News: ಬೆಂಗಳೂರಿನ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

VISTARANEWS.COM


on

Inauguration of Pushpam Ayurveda Wellness Center in Bengaluru
Koo

ಬೆಂಗಳೂರು: ನಗರದ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ (Bengaluru News) ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿ ಡಾ. ಮೊಹಮ್ಮದ್ ರಫಿ ಹಕೀಂ, ಬೆಂಗಳೂರು ಡಿಎಒ ಡಾ. ಶಹಾಬುದ್ದಿನ್, ಪ್ರಸಿದ್ಧ ಆಯುರ್ವೇದ ವೈದ್ಯರಾದ ಡಾ. ಬಲ್ಲಾಳ ಕೆ.ಸಿ., ಡಾ. ಗಿರಿಧರ್ ಕಜೆ ಮತ್ತು ಇತರ ವೈದ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸ್ವಾಮಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್‌ನ ಘಟಕ ಇದಾಗಿದ್ದು, ಜೆಪಿ ನಗರದ 9ನೇ ಕ್ರಾಸ್ ರಸ್ತೆಯ ತಿರುಮಲಗಿರಿ ದೇವಸ್ಥಾನದ ಮುಂಭಾಗದಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್ ಅನ್ನು ಆರಂಭಿಸಲಾಗಿದೆ.

ಭಾರತೀಯ ಪಾರಂಪರಿಕ ವಿಧಾನಗಳು ಮತ್ತು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಡಾ. ರಾಜಶೇಖರ ಭೂಸನೂರಮಠ ಮತ್ತು ಡಾ. ಮಹತಿ ಸಾಹುಕರ್ ಅವರು, ಈ ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಈ ಆಯುರ್ವೇದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕರ್ನಾಟಕದಲ್ಲಿ ವಿಶೇಷವಾದ ಆಸ್ಪತ್ರೆಯಿದಾಗಿದ್ದು, ತ್ವಚೆ ಆರೈಕೆ, ಗಾಯದ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ, ಡಿಟಾಕ್ಸ್, ಮಾನಸಿಕ, ವಿಶೇಷ ಚಿಕಿತ್ಸೆಗಳು ಮತ್ತು ಸಾಮಾನ್ಯ ಚಿಕಿತ್ಸೆಗಳನ್ನು ನಡೆಸುವ ವಿವಿಧ ವಿಭಾಗಗಳನ್ನು ಹೊಂದಿದೆ. ಜನರು ಆರೋಗ್ಯದ ಉತ್ತಮ ಲಾಭಗಳನ್ನು ಪಡೆಯಲು ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಭೂಸನೂರಮಠ ತಿಳಿಸಿದ್ದಾರೆ.

Continue Reading

ಆರೋಗ್ಯ

Health Benefits of Mango Leaves: ಮಾವಿನೆಲೆಗಳು ತೋರಣ ಕಟ್ಟಲಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು!

ಮಾವಿನೆಲೆ ಎನ್ನುತ್ತಿದ್ದಂತೆ ತೋರಣಗಳೇ ನೆನಪಾಗುತ್ತವೆ ನಮಗೆ. ಮನೆಯಲ್ಲಿ ಯಾವುದೇ ಶುಭಕಾರ್ಯವಿದ್ದರೆ ಹಬ್ಬವಾಗಲೀ ಹರಿದಿನವಾಗಲಿ, ಮಾವಿನ ತೋರಣವಿದ್ದರೆ ಶೋಭೆ. ಕಳಶಗಳಿಗೆ ಮಾವಿನೆಲೆ ಬೇಕು. ಒಳ್ಳೆಯ ಕೆಲಸಗಳು ಏನೇ ಇದ್ದರೂ ಅದಕ್ಕೆ ಮಾವಿನೆಲೆ ಇಲ್ಲದಿದ್ದರಾಗದು. ಇದಕ್ಕಿಂತ ಹೆಚ್ಚಿನ ಉಪಯೋಗಗಳು (Health Benefits of Mango Leaves) ಮಾವಿನೆಲೆಗಳಿಗೆ ಏನಿವೆ?

VISTARANEWS.COM


on

Health Benefits of Mango Leaves
Koo

ಇದು ಮಾವಿನ ಕಾಲ. ಹಾಗೆನ್ನುತ್ತಿದ್ದಂತೆ ಮಾವಿನ ಹಣ್ಣಿನ ಘಮ್ಮೆನ್ನುವ ಪರಿಮಳ, ರುಚಿಯೆಲ್ಲ ನೆನಪಾಗಿ ಬಾಯಲ್ಲಿ ನೀರೂರುತ್ತದೆ. ಮಾವಿನ ಹಣ್ಣಿಗಾದರೆ ಇದೊಂದೇ ಋತುವಿಗೆ ಕಾಯಬೇಕು. ಆದರೆ ಮಾವಿನ ಎಲೆಗಳ ಉಪಯೋಗಕ್ಕೆ ವರ್ಷವಿಡೀ ಒಳ್ಳೆಯ ಕಾಲ. ಆದರೆ ಹಣ್ಣಿಗಿರುವ ಉಪಯೋಗ ಮಾವಿನ ಎಲೆಗಳಿಗೆ ಇಲ್ಲವಲ್ಲ. ಹಾಗಿರುವಾಗ ವರ್ಷವಿಡೀ ಎಲೆ ಇದ್ದರೆಷ್ಟು ಬಿಟ್ಟರೆಷ್ಟು ಎಂದು ಯೋಚಿಸಬೇಡಿ. ಮಾವಿನ ಎಲೆಗಳಲ್ಲಿ ಉಪ್ಪಿನಕಾಯಿ ಹಾಕುವುದೋ ಸೀಕರಣೆ ಮಾಡುವುದೋ ಆಗದಿದ್ದರೂ, ಅದಕ್ಕೂ ತನ್ನದೇ ಆದ ಉಪಯೋಗಗಳಿವೆ. ಏನವು Health (Benefits of Mango Leaves) ಎಂಬುದನ್ನು ಗಮನಿಸೋಣ. ಮಾವಿನೆಲೆ ಎನ್ನುತ್ತಿದ್ದಂತೆ ತೋರಣಗಳೇ ನೆನಪಾಗುತ್ತವೆ ನಮಗೆ. ಮನೆಯಲ್ಲಿ ಯಾವುದೇ ಶುಭಕಾರ್ಯವಿದ್ದರೂ ಒಂದು ಮಾವಿನ ತೋರಣ, ಹಸಿರು ಚಪ್ಪರ ಆಗಲೇ ಬೇಕು. ಹಬ್ಬವಾಗಲೀ ಹರಿದಿನವಾಗಲಿ, ಮಾವಿನ ತೋರಣವಿದ್ದರೆ ಶೋಭೆ. ಕಳಶಗಳಿಗೆ ಮಾವಿನೆಲೆ ಬೇಕು. ಯಾವುದೋ ದೇವರ ಪ್ರತಿಷ್ಠಾಪನೆ, ಪೂಜೆ ಇದ್ದರೆ ಅದಕ್ಕೂ ಮಾವಿನೆಲೆ ಅಗತ್ಯ. ಒಳ್ಳೆಯ ಕೆಲಸಗಳು ಏನೇ ಇದ್ದರೂ ಅದಕ್ಕೆ ಮಾವಿನೆಲೆ ಇಲ್ಲದಿದ್ದರಾಗದು. ಹೀಗೆ ಧರ್ಮ, ಸಂಪ್ರದಾಯ, ಸಂಸ್ಕೃತಿಯ ಉತ್ಸವಗಳಿಗೆ ಮಾವಿನೆಲೆ ಅಲಂಕಾರಕ್ಕೂ ಬೇಕು, ಅಗತ್ಯಕ್ಕೂ ಸೈ. ಇದಕ್ಕಿಂತ ಹೆಚ್ಚು ಇನ್ನೇನು?
ಕೆಲವು ಬಗೆಯ ಸಾಂಪ್ರದಾಯಿಕ ಔಷಧಿಗಳಿಗೆ ಮಾವಿನೆಲೆ ಅಗತ್ಯ. ಬೆಳಗ್ಗೆ ಏಳುತ್ತಿದ್ದಂತೆ, ಮಾವಿನೆಲೆಯನ್ನು ಹಲ್ಲುಜ್ಜುವುದಕ್ಕೆ ಹಿಂದಿನ ಕಾಲದಲ್ಲಿ ಬಳಸುತ್ತಿದ್ದರು. ಚಿಗುರೆಲೆಗಳನ್ನು ಕಷಾಯ ಮಾಡಿ, ಅದನ್ನು ಹಲವು ಸಮಸ್ಯೆಗಳಿಗೆ ಮದ್ದಾಗಿ ಉಪಯೋಗಿಸುತ್ತಿದ್ದರು. ಜೀರ್ಣಾಂಗಗಳ ಸಮಸ್ಯೆ ಇದ್ದರೆ, ಮಧುಮೇಹ ನಿಯಂತ್ರಣಕ್ಕೆ, ಕೆಲವು ಬಗೆಯ ಶ್ವಾಸಕೋಶದ ತೊಂದರೆಗಳಿಗೆಲ್ಲ ಮಾವಿನೆಲೆ ಕಷಾಯವನ್ನು ಔಷಧಿಯಾಗಿ ಬಳಸುತ್ತಿದ್ದರು. ವಿಟಮಿನ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಈ ಎಲೆಗಳು ಒಟ್ಟಾರೆ ದೇಹಸ್ವಾಸ್ಥ್ಯಕ್ಕೆ ಅನುಕೂಲ ಒದಗಿಸುತ್ತವೆ.

Obese male suffering from chest pain high blood pressure cholesterol level Sesame Benefits

ಕೊಲೆಸ್ಟ್ರಾಲ್‌ ಕಡಿತ

ಮಾವಿನೆಲೆಯನ್ನು ಗ್ರೀನ್‌ ಟೀ ರೀತಿಯಲ್ಲಿ ಅಥವಾ ಕಷಾಯದ ರೀತಿಯಲ್ಲಿ ಔಷಧಿಗಾಗಿ ಉಪಯೋಗಿಸುವ ವಾಡಿಕೆಯಿದೆ. ಇದನ್ನು ಕೊಲೆಸ್ಟ್ರಾಲ್‌ ಕಡಿಮೆ ಮಾಡುವುದಕ್ಕೆ ಬಳಸಲಾಗುತ್ತದೆ. ಇದರಲ್ಲಿರುವ ಮ್ಯಾಗ್ನಿಫೆರಿನ್‌ ಮತ್ತು ಕ್ವೆರ್ಸೆಟಿನ್‌ ಎಂಬ ಸಂಯುಕ್ತಗಳು ರಕ್ತದಲ್ಲಿರುವ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣವನ್ನು ಹೊಂದಿವೆ. ಜೀರ್ಣಾಂಗಗಳಲ್ಲಿ ಕೊಲೆಸ್ಟ್ರಾಲ್‌ ಹೀರಲ್ಪಡದೆ ಇರುವಂತೆ, ಈ ಕೊಬ್ಬು ದೇಹದಿಂದ ಹೊರ ಹೋಗುವಂತೆ ಮಾಡುತ್ತವೆ. ಈ ಮೂಲಕ ಹೃದಯದ ಆರೋಗ್ಯ ಚೆನ್ನಾಗಿರುವಂತೆ ಮಾಡುತ್ತವೆ.

Diabetes management Daruharidra Benefits

ಮಧುಮೇಹ ನಿಯಂತ್ರಣ

ಮಾವಿನೆಲೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ಇವು ರೋಗ ನಿಯಂತ್ರಣದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇದರಲ್ಲಿರುವ ಮ್ಯಾಗ್ನಿಫೆರಿನ್‌ ಅಂಶವು ಮಧುಮೇಹ ನಿಯಂತ್ರಣಕ್ಕೆ ನೆರವಾಗಬಲ್ಲವು. ಇದು ದೇಹದಲ್ಲಿ ನೈಸರ್ಗಿಕವಾಗಿ ಇನ್‌ಸುಲಿನ್‌ ಉತ್ಪಾದನೆಯನ್ನು ಹೆಚ್ಚಿಸಲು ಯತ್ನಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆಯಂಶ ಕಡಿಮೆಯಾಗುತ್ತದೆ.

healthy internal organs of human digestive system

ಜೀರ್ಣಾಂಗಗಳ ಕ್ಷಮತೆ ಹೆಚ್ಚಳ

ಪಚನಾಂಗಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಾಧ್ಯತೆ ಈ ಎಲೆಗಳಿಗಿದೆ. ಡಯರಿಯಾದಂಥ ತೊಂದರೆಗಳಿದ್ದಾಗ ಇದನ್ನು ಮದ್ದಾಗಿ ಬಳಸುವ ಅಭ್ಯಾಸ ಕೆಲವೆಡೆಗಳಲ್ಲಿದೆ. ಜೊತೆಗೆ ದೇಹದ ಚಯಾಪಚಯ ಹೆಚ್ಚು ಮಾಡುವ ಗುಣವಿದೆ ಇದಕ್ಕೆ. ಹಾಗಾಗಿ ಅಜೀರ್ಣದಂಥ ತೊಂದರೆಗಳು ಬಗೆಹರಿಯಬಹುದು. ಜೊತೆಗೆ, ತೂಕ ಇಳಿಕೆಗೆ ಸ್ವಲ್ಪ ನೆರವೂ ನೀಡಬಹುದು.

Doctor listens to the human lungs

ಶ್ವಾಸಕೋಶ ಸಬಲ

ಕಫ, ಕೆಮ್ಮು, ದಮ್ಮಿನಂಥ ತೊಂದರೆಗಳ ನಿವಾರಣೆಗೆ ಮಾವಿನೆಲೆ ಉಪಯುಕ್ತ. ಶ್ವಾಸನಾಳದಲ್ಲಿ ಬಿಗಿದಿರುವ ಕಫವನ್ನು ಸಡಿಲಿಸಿ, ಕೆಮ್ಮು ಕಡಿಮೆ ಮಾಡುವ ಗುಣಗಳು ಇದಕ್ಕಿವೆ. ಕಫ ಹೆಚ್ಚಾಗಿದ್ದರಿಂದ ಕಾಡುವ ದಮ್ಮು ಮತ್ತು ಉಸಿರಾಟದ ತೊಂದರೆಗಳನ್ನು ಈ ಮೂಲಕ ಮಾವಿನೆಲೆಗಳು ಕಡಿಮೆ ಮಾಡುತ್ತವೆ.

ಇದನ್ನೂ ಓದಿ: Shikakai For Hair: ತಲೆ ಕೂದಲಿಗೆ ಶ್ಯಾಂಪೂ ಒಳ್ಳೆಯದೋ ಸೀಗೆಕಾಯಿ ಸೂಕ್ತವೋ?

ಉತ್ಕರ್ಷಣ ನಿರೋಧಕಗಳು

ಇದರಲ್ಲಿ ಫ್ಲೆವನಾಯ್ಡ್‌ಗಳು, ಫೆನಾಲ್‌ಗಳು ಮತ್ತು ಆಸ್ಕಾರ್ಬಿಕ್‌ ಆಮ್ಲ (ವಿಟಮಿನ್‌ ಸಿ)ಯಂಥ ಉರಿಯೂತ ಶಾಮಕಗಳು ಹೇರಳವಾಗಿವೆ. ಇದರಿಂದ ಶರೀರದಲ್ಲಿ ಅಂಡಲೆಯುವ ಮುಕ್ತ ಕಣಗಳನ್ನು ಹಿಡಿತಕ್ಕೆ ತರಬಹುದು. ಜೊತೆಗೆ ಹೃದಯ ತೊಂದರೆಗಳು, ಮಧುಮೇಹ ಮತ್ತು ಕ್ಯಾನ್ಸರ್‌ನಂಥ ಮಾರಕ ರೋಗಗಳನ್ನು ದೂರ ಇರಿಸಬಹುದು.

Continue Reading

ಆರೋಗ್ಯ

Shikakai For Hair: ತಲೆ ಕೂದಲಿಗೆ ಶ್ಯಾಂಪೂ ಒಳ್ಳೆಯದೋ ಸೀಗೆಕಾಯಿ ಸೂಕ್ತವೋ?

ʻಎಣ್ಣೆ-ಸೀಗೆಕಾಯಿ ಸಂಬಂಧʼ ಎಂಬ ನುಡಿಗಟ್ಟೇ ಸಾಕು ಸ್ವಚ್ಛತೆಯಲ್ಲಿ ಸೀಗೆಕಾಯಿಯ ಸಾಮರ್ಥ್ಯ ಎಷ್ಟು ಎನ್ನುವುದನ್ನು ತಿಳಿಯುವುದಕ್ಕೆ. ಕೂದಲಿನ ಆರೈಕೆಯಲ್ಲಿ ಶತಮಾನಗಳಿಂದ ಇದು ಪ್ರಮಾಣೀಕೃತಗೊಂಡಿದೆ. ಆದರೆ ಕೂದಲಿಗೆ ಬೇಕಾದಂಥ ಒಳ್ಳೆಯ ಸತ್ವಗಳು ಏನಿವೆ ಸೀಗೆಕಾಯಿಯಲ್ಲಿ? ಈ ಕುರಿತ ಉಪಯುಕ್ತ (Shikakai For Hair) ಮಾಹಿತಿ ಇಲ್ಲಿದೆ.

VISTARANEWS.COM


on

Shikakai For Hair
Koo

ಹಳೆಯ ಕಾಲದಿಂದಲೂ ತಲೆಗೂದಲ ಆರೈಕೆಗೆ ಸೀಗೆಕಾಯಿ ಅಥವಾ ಶಿಕಾಕಾಯಿ ಬಳಕೆಯಲ್ಲಿದೆ. ಈಗಿನಂತೆ ಕಡಿಮೆ ಜಿಡ್ಡಿನ ಎಣ್ಣೆಗಳು ಇಲ್ಲದ ಕಾಲದಲ್ಲಿ, ದಿನವೂ ಎಣ್ಣೆಯನ್ನು ನಿಯಮಿತವಾಗಿ ಕೂದಲಿಗೆ ಲೇಪಿಸುತ್ತಿದ್ದ ಕಾಲದಲ್ಲಿ ತಲೆಯ ಸ್ವಚ್ಛತೆಯ ಹೊಣೆಯನ್ನು ಶತಮಾನಗಳ ಕಾಲ ನಿರ್ವಹಿಸಿದ್ದು ಸೀಗೆಕಾಯಿಯೆ. ಯಾವುದೇ ಜಾಹೀರಾತುಗಳ ಪ್ರಚಾರವಿಲ್ಲದೆ, ಬಣ್ಣದ ಪ್ಯಾಕಿಂಗ್‌ಗಳ ಅಬ್ಬರವಿಲ್ಲದೆ ಅಜ್ಜಿ-ಅಮ್ಮಂದಿರು ತುಂಬಿಡುತ್ತಿದ್ದ ಡಬ್ಬಿಗಳಿಂದ ನೇರವಾಗಿ ತರಳೆಯರ ಹೆರಳನ್ನು ಶುಚಿ ಮಾಡಿ, ಕೇಶರಾಶಿಯನ್ನು ಆರೋಗ್ಯವಾಗಿ ಇರಿಸುತ್ತಿತ್ತು. ಬ್ಯಾಕ್ಟೀರಿಯ ವಿರೋಧಿ, ಫಂಗಸ್‌ ನಿರೋಧಕ ಸಾಮರ್ಥ್ಯವಿರುವ ಇದು ಉರಿಯೂತ ಶಾಮಕ ಗುಣವನ್ನು ಸಹ ಹೊಂದಿಗೆ. ಹಾಗಾಗಿ ತಲೆಯ ಚರ್ಮವನ್ನು ತುರಿಕೆ, ಹೊಟ್ಟು, ಸೋಂಕುಗಳಿಂದ ಮುಕ್ತವಾಗಿರಿಸುವುದಕ್ಕೆ ಸೀಗೆಕಾಯಿಗೆ ಸಾಧ್ಯ. ಇನ್ನೂ ಏನೆಲ್ಲಾ ಗುಣಗಳಿವೆ ಇದರಲ್ಲಿ (Shikakai For Hair) ಕೇಶಗಳ ಆರೈಕೆಗೆ ಬೇಕಾಗುವಂಥದ್ದು.

Shikakai

ಸ್ವಚ್ಛತೆಯಲ್ಲಿ ಮುಂದೆ

ʻಎಣ್ಣೆ ಸೀಗೆಕಾಯಿ ಸಂಬಂಧʼ ಎಂಬ ನುಡಿಗಟ್ಟೇ ನಮಗೆ ಇದರ ಸ್ವಚ್ಛತೆಯ ಸಾಮರ್ಥ್ಯಕ್ಕೆ ನೀಡಿದ ಪ್ರಮಾಣಪತ್ರದಂತಿದೆ. ವಾತಾವರಣದ ಧೂಳು, ಮಣ್ಣು, ಹೊಗೆಯಂಥ ಕೊಳೆಗಳನ್ನು ನಾಜೂಕಾಗಿಯೇ ಸ್ವಚ್ಛಗೊಳಿಸುವ ಕ್ಷಮತೆ ಇದರದ್ದು. ತಲೆಯ ಚರ್ಮದ ನೈಸರ್ಗಿಕ ತೈಲದಂಶವನ್ನು ತೆಗೆಯದಂತೆ, ಕೊಳೆಯನ್ನಷ್ಟೇ ತೆಗೆದು ಕೂದಲಿಗೆ ಸ್ವಚ್ಛ ಮತ್ತು ತಾಜಾ ಅನುಭವ ನೀಡುತ್ತದೆ.

Hair Growth Tips

ಕೇಶವರ್ಧನೆ

ಕೂದಲಿನ ಬೆಳವಣಿಗೆಗೆ ಸೀಗೆಕಾಯಿ ನೆರವು ನೀಡುತ್ತದೆ. ವಿಟಮಿನ್‌ ಎ, ಸಿ ಮತ್ತು ಕೆ ಜೀವಸತ್ವದ ಅಂಶಗಳು ಇದರಲ್ಲಿವೆ. ಇವುಗಳು ಕೂದಲಿನ ಬುಡವನ್ನು ಬಿಗಿ ಮಾಡಿ, ಕೂದಲೆಳೆಗಳನ್ನು ಸುದೃಢಗೊಳಿಸುತ್ತವೆ. ಇದರಿಂದ ಕೂದಲು ಉದುರುವುದು ಕಡಿಮೆಯಾಗಿ, ಬೆಳವಣಿಗೆ ಹೆಚ್ಚುತ್ತದೆ. ಜಾಹೀರಾತುಗಳಲ್ಲಿ ತೋರಿಸಿದಷ್ಟು ಅಲ್ಲದಿದ್ದರೂ, ಆರೋಗ್ಯಕರವಾದ ಉದ್ದ ಕೂದಲನ್ನಂತೂ ಹೊಂದಬಹುದು.

dandruff

ಹೊಟ್ಟು ನಿವಾರಣೆ

ಒಮ್ಮೆ ತಲೆ ಹೊಟ್ಟಿನ ಸಮಸ್ಯೆ ಪ್ರಾರಂಭವಾದರೆ, ಅದರಿಂದ ಪಾರಾಗುವುದಕ್ಕೆ ಏನೇನೋ ಒದ್ದಾಟಗಳನ್ನು ಮಾಡಬೇಕಾಗುತ್ತದೆ. ಹೊಟ್ಟು ಹೋಗಿಸುವಂಥ ಹತ್ತಾರು ಶಾಂಪೂಗಳನ್ನು ಬಳಸುತ್ತೇವೆ. ಕೆಲವೊಮ್ಮೆ ವೈದ್ಯರ ಬಳಿ ಔಷಧಿಯನ್ನೂ ತೆಗೆದುಕೊಳ್ಳುವ ಪ್ರಮೇಯ ಬರುತ್ತದೆ. ಇಷ್ಟಾಗಿ ಹೊಟ್ಟು ದೂರ ಮಾಡಲು ಆಗದೇ ಇರಬಹುದು. ಆದರೆ ಫಂಗಸ್‌ ವಿರೋಧಿ ಗುಣವನ್ನು ಹೊಂದಿರುವ ಸೀಗೆಕಾಯಿಯ ನಿಯಮಿತವಾದ ಬಳಕೆಯಿಂದ ಹೊಟ್ಟು ಕ್ರಮೇಣ ಮಾಯವಾಗುತ್ತದೆ.

ಕಂಡೀಶನರ್

ಸೀಗೆಕಾಯಿಯಲ್ಲಿರುವ ಸಪೋನಿನ್‌ ಎಂಬ ಅಂಶವು ಕೂದಲಿನ ಕಂಡೀಶನರ್‌ ರೀತಿಯಲ್ಲಿ ಕೆಲಸ ಮಾಡುತ್ತದೆ. ಕೂದಲುಗಳ ಪಿಎಚ್‌ ಸಹ ಸಮತೋಲನದಲ್ಲಿ ಇರುವಂತೆ ನೋಡಿಕೊಳ್ಳುತ್ತದೆ. ಯಾವುದೇ ರಾಸಾಯನಿಕವಿಲ್ಲದ ಈ ನೈಸರ್ಗಿಕ ಕಂಡೀಶನರ್‌ ಬಳಕೆಯಿಂದ ಕೂದಲಿನ ಹೊಳಪು ಹೆಚ್ಚಿ, ಮೃದುವಾಗುತ್ತದೆ. ಇದರಿಂದ ಕೂದಲು ಒರಟಾಗಿ ಬಾಚುವಾಗ ತುಂಡಾಗುವುದನ್ನು ತಪ್ಪಿಸಬಹುದು.

Shikakai photo

ತುದಿ ಕವಲಿಲ್ಲ

ಕೂದಲಿಗೆ ಅಗತ್ಯ ಪೋಷಣೆ ದೊರೆಯದಿದ್ದರೆ, ಕೇಶಗಳ ತುದಿ ಕವಲಾಗಬಹುದು. ಇದರಿಂದ ಕೂದಲು ನಿರ್ಜೀವವಾದಂತಾಗಿ, ತುಂಡಾಗುತ್ತವೆ. ಸೀಗೆಕಾಯಿಯ ಬಳಕೆಯಿಂದ ಕೂದಲಿಗೆ ಸೂಕ್ತ ಆರೈಕೆ ದೊರೆತು, ತುದಿ ಸೀಳಿದಂತಾಗಿ ಕೂದಲು ತುಂಡಾಗುವುದು ಕಡಿಮೆಯಾಗುತ್ತದೆ. ಜೊತೆಗೆ ಕೂದಲೆಳೆಗಳು ದಪ್ಪವಾಗಿಯೂ ಬೆಳೆದು, ಕೂದಲಿನ ಒಟ್ಟಾರೆ ಗಾತ್ರ ಹೆಚ್ಚುತ್ತದೆ.

ಎಲ್ಲರಿಗೂ ಸೂಕ್ತ

ರಾಸಾಯನಿಕ ಭರಿತ ಶಾಂಪೂ ಮತ್ತು ಕಂಡೀಶನರ್‌ಗಳು ಎಲ್ಲ ರೀತಿಯ ಚರ್ಮ ಮತ್ತು ಕೂದಲುಗಳಿಗೆ ಹೊಂದುವಂಥವಲ್ಲ. ಸೂಕ್ಷ್ಮ ಕೂದಲಿನವರು ಯಾವ ಶಾಂಪೂ ತಮಗೆ ಹೊಂದುತ್ತದೆ ಎಂಬ ಪ್ರಯೋಗದಲ್ಲಿಯೇ ಕೂದಲು ಕಳೆದುಕೊಳ್ಳುವುದು ಸಾಮಾನ್ಯ. ಆದರೆ ಸೌಮ್ಯ ಮತ್ತು ನೈಸರ್ಗಿಕವಾದ ಸೀಗೇಕಾಯಿ ಬಳಕೆಯಿಂದ ಇಂಥ ಸಮಸ್ಯೆಗಳಿಗೆ ಅವಕಾಶವಿಲ್ಲ.

ಇದನ್ನೂ ಓದಿ: 5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

ಪರಿಸರ ಸ್ನೇಹಿ ಆಯ್ಕೆ

ಯಾವುದೇ ರಾಸಾಯನಿಕ, ಪ್ಲಾಸ್ಟಿಕ್‌ಗಳ ಹಾವಳಿಯಿಲ್ಲ ಸೀಗೆಕಾಯಿಯ ಬಳಕೆಯಲ್ಲಿ. ಪರಿಸರಕ್ಕೆ ಮಾರುಕವಾಗುವಂಥ ಯಾವುದೇ ಅಂಶ ಇದರಲ್ಲಿ ಇಲ್ಲ. ಇದನ್ನು ಬಳಸಿನ ನಂತರ ಉಳಿವಂಥ ಶೇಷವೆಲ್ಲ ವಾತಾವರಣದಲ್ಲಿ ಕರಗುವಂಥವು. ಹಾಗಾಗಿ ಕೂದಲಿನ ಸ್ವಚ್ಛತೆಗೆ ಅತ್ಯಂತ ಸೂಕ್ತವಾದ ಆಯ್ಕೆಯೆಂದರೆ ಸೀಗೆಕಾಯಿ.

Continue Reading
Advertisement
Cervical Cancer
ಆರೋಗ್ಯ28 mins ago

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

Dina Bhavishya
ಭವಿಷ್ಯ58 mins ago

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Yuva Rajkumar
ಕರ್ನಾಟಕ6 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ7 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ7 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು7 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ8 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ8 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ9 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ9 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌